Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಭುವನೇಶ್ವರ್: ಒಡಿಶಾದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಮುಖಂಡ ಮೋಹನ್ ಚರಣ್ ಮಾಝಿ ಬುಧವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದ ಭವ್ಯ ಸಮಾರಂಭದಲ್ಲಿ ಒಡಿಶಾ ರಾಜ್ಯಪಾಲ ರಘುಬರ್ ದಾಸ್ ಅವರು ಅಧಿಕಾರಿಗೆ ಪ್ರಮಾಣ ವಚನ ಬೋಧಿಸಿದರು. ಇದರೊಂದಿಗೆ, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭಾರಿ ಸೋಲಿನ ನಂತರ ಬಿಜು ಜನತಾ ದಳ (ಬಿಜೆಡಿ) ಮುಖ್ಯಸ್ಥ ನವೀನ್ ಪಟ್ನಾಯಕ್ ಅವರ 24 ವರ್ಷಗಳ ಅಧಿಕಾರಾವಧಿ ಕೊನೆಗೊಂಡಿದ್ದರಿಂದ ಮಾಝಿ ಕೇಸರಿ ಪಕ್ಷದಿಂದ ಮೊದಲ ಮುಖ್ಯಮಂತ್ರಿಯಾದರು. https://twitter.com/ANI/status/1800856657536409650 ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ, ಮಾಝಿ ಕಿಯೋಂಜಾರ್ ಸ್ಥಾನವನ್ನು ಸುಮಾರು 87,815 ಮತಗಳ ಅಂತರದಿಂದ ಗೆದ್ದರು. ಅವರು ಕ್ಷೇತ್ರದಿಂದ ಬಿಜೆಡಿಯ ಮಿನಾ ಮಾಝಿ ಅವರನ್ನು ಸೋಲಿಸಿದರು. ನಾಲ್ಕು ಬಾರಿ ಶಾಸಕರಾಗಿರುವ ಮಾಝಿ, ಬಿಜೆಪಿಯ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಲು ಹೊಸ ಸರ್ಕಾರ ರಚನೆಯಾದ 100 ದಿನಗಳಲ್ಲಿ ಕೆಲಸ ಪ್ರಾರಂಭವಾಗಲಿದೆ ಎಂದು ಹೇಳಿದರು. ಮಂಗಳವಾರ ನಡೆದ ಸಭೆಯಲ್ಲಿ ಅವರನ್ನು…

Read More

ನವದೆಹಲಿ: ಸುಮಾರು 24 ವರ್ಷಗಳಷ್ಟು ಹಳೆಯದಾದ ಕೆಂಪು ಕೋಟೆ ದಾಳಿ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಪಾಕಿಸ್ತಾನಿ ಭಯೋತ್ಪಾದಕ ಮೊಹಮ್ಮದ್ ಆರಿಫ್ ಅಲಿಯಾಸ್ ಅಶ್ಫಾಕ್ ಅವರ ಕ್ಷಮಾದಾನ ಅರ್ಜಿಯನ್ನು ಅಧ್ಯಕ್ಷ ದ್ರೌಪದಿ ಮುರ್ಮು ತಿರಸ್ಕರಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಜುಲೈ 25, 2022 ರಂದು ಅಧಿಕಾರ ವಹಿಸಿಕೊಂಡ ನಂತರ ರಾಷ್ಟ್ರಪತಿಗಳು ತಿರಸ್ಕರಿಸಿದ ಎರಡನೇ ಕ್ಷಮಾದಾನ ಅರ್ಜಿ ಇದಾಗಿದೆ. ಈ ಪ್ರಕರಣದಲ್ಲಿ ತನಗೆ ವಿಧಿಸಲಾದ ಮರಣದಂಡನೆಯನ್ನು ದೃಢೀಕರಿಸಿ ಆರಿಫ್ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ 2022 ರ ನವೆಂಬರ್ 3 ರಂದು ವಜಾಗೊಳಿಸಿತ್ತು. ಆದಾಗ್ಯೂ, ಸಂವಿಧಾನದ 32 ನೇ ವಿಧಿಯ ಅಡಿಯಲ್ಲಿ ದೀರ್ಘಕಾಲದ ವಿಳಂಬದ ಆಧಾರದ ಮೇಲೆ ಮರಣದಂಡನೆ ಶಿಕ್ಷೆಗೊಳಗಾದ ಅಪರಾಧಿ ತನ್ನ ಶಿಕ್ಷೆಯನ್ನು ಕಡಿಮೆ ಮಾಡಲು ಕೋರಿ ಉನ್ನತ ನ್ಯಾಯಾಲಯದ ಬಾಗಿಲು ತಟ್ಟಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಮೇ 15 ರಂದು ಸ್ವೀಕರಿಸಿದ ಆರಿಫ್ನಿಂದ ಬಂದ ಕ್ಷಮಾದಾನ ಅರ್ಜಿಯನ್ನು ಮೇ 27 ರಂದು ತಿರಸ್ಕರಿಸಲಾಗಿದೆ ಎಂದು ಮೇ 29 ರ ರಾಷ್ಟ್ರಪತಿಗಳ…

Read More

ಉಡುಪಿ: ದೇಶದ ಕಾನೂನು ಎಲ್ಲರಿಗೂ ಒಂದೇ, ಕಾನೂನಿನ ಮುಂದೆ ಎಲ್ಲರೂ ಸಮಾನರು, ರಾಷ್ಟ್ರಪತಿಯಾಗಲಿ, ಸ್ಟಾರ್ ಆಗಲಿ, ಕೂಲಿ ಕಾರ್ಮಿಕನೇ ಆಗಲಿ. ಸರಕಾರ ಯಾರ ಒತ್ತಡಕ್ಕೂ ಮಣಿಯುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಉಡುಪಿ ಜಿಲ್ಲಾ ಪಂಚಾಯತ್ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ನಟ ದರ್ಶನ್ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಸಚಿವರು, ಕಾನೂನಿನ ಎಲ್ಲರೂ ಒಂದೇ. ಯಾರನ್ನು ರಕ್ಷಿಸುವ ಪ್ರಶ್ನೆ ಇಲ್ಲ. ರಾಜ್ಯ ಸರ್ಕಾರ ಕೂಡ ಯಾರ ಪರ ನಿಲ್ಲುವುದಿಲ್ಲ ಎಂದರು. ಕಡಲ ಕೊರತಕ್ಕೆ ಮೂರು ಜಿಲ್ಲೆಗಳಿಗೆ ತಲಾ 5 ಕೋಟಿ ಕಡಲ ಕೊರೆತ ತಡೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ತಲಾ 5 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ. ಕಡಲ ಕೊರೆತದ ಶಾಶ್ವತ ಪರಿಹಾರಕ್ಕಾಗಿ ಡಿಪಿಆರ್ ಸಿದ್ಧಪಡಿಸಲಾಗಿದ್ದು, ಇದಕ್ಕೆ ರಾಜ್ಯ ಸರ್ಕಾರದಿಂದ ಮಾತ್ರ ಪರಿಹಾರ ನೀಡಲು ಸಾಧ್ಯವಿಲ್ಲ.ಕೇಂದ್ರ ಮತ್ತು…

Read More

ಕುವೈತ್: ಕುವೈತ್ನ ಕಟ್ಟಡವೊಂದರಲ್ಲಿ ಬುಧವಾರ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 40 ಭಾರತೀಯರು ಸೇರಿದಂತೆ 41 ಮಂದಿ ಸಾವನ್ನಪ್ಪಿದ್ದಾರೆ. ಕುವೈತ್ನ ದಕ್ಷಿಣ ಅಹ್ಮದಿ ಗವರ್ನರೇಟ್ನ ಮಂಗಾಫ್ ಪ್ರದೇಶದಲ್ಲಿರುವ ಈ ಕಟ್ಟಡದಲ್ಲಿ 160 ಕ್ಕೂ ಹೆಚ್ಚು ಕಾರ್ಮಿಕರು ವಾಸಿಸುತ್ತಿದ್ದರು. ಆರು ಅಂತಸ್ತಿನ ಕಟ್ಟಡದ ಅಡುಗೆಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ದೇಶದ ಉಪ ಪ್ರಧಾನಿ ಶೇಖ್ ಫಹಾದ್ ಯೂಸುಫ್ ಸೌದ್ ಅಲ್-ಸಬಾಹ್ ಸ್ಥಳಕ್ಕೆ ಭೇಟಿ ನೀಡಿ ಕನಿಷ್ಠ 41 ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದರು. ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಪೀಡಿತ ಕಾರ್ಮಿಕರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಬೆಂಕಿಯಿಂದ ಬಾಧಿತರಾದವರಿಗೆ ರಾಯಭಾರ ಕಚೇರಿ ಅಗತ್ಯವಿರುವ ಎಲ್ಲಾ ಬೆಂಬಲ ಮತ್ತು ಸಹಾಯವನ್ನು ನೀಡುತ್ತದೆ ಎಂದು ಹೇಳಿದರು. ಕುವೈತ್ನ ಭಾರತೀಯ ರಾಯಭಾರಿ ಆದರ್ಶ್ ಸ್ವೈಕಾ ಅವರು ಅಲ್-ಅದಾನ್ ಆಸ್ಪತ್ರೆಯಲ್ಲಿ ಗಾಯಗೊಂಡ ಭಾರತೀಯ ಕಾರ್ಮಿಕರನ್ನು ಭೇಟಿ ಮಾಡಿ ಎಲ್ಲಾ ಸಹಾಯದ ಭರವಸೆ ನೀಡಿದರು. ದಕ್ಷಿಣ ಕುವೈತ್ನ ಮಂಗಾಫ್ ನಗರದ ಕಾರ್ಮಿಕರ ವಸತಿ ಕಟ್ಟಡದಲ್ಲಿ ಸಂಭವಿಸಿದ ಬೆಂಕಿಯಲ್ಲಿ…

Read More

ನವದೆಹಲಿ: 24 ವರ್ಷಗಳ ಹಿಂದೆ ದೆಹಲಿಯ ಕೆಂಪು ಕೋಟೆಯ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದಕ್ಕಾಗಿ ಶಿಕ್ಷೆಗೊಳಗಾದ ಪಾಕಿಸ್ತಾನಿ ಭಯೋತ್ಪಾದಕ ಮೊಹಮ್ಮದ್ ಆರಿಫ್ ಅಲಿಯಾಸ್ ಅಶ್ಫಾಕ್ ಅವರ ಕ್ಷಮಾದಾನ ಅರ್ಜಿಯನ್ನು ಅಧ್ಯಕ್ಷ ದ್ರೌಪದಿ ಮುರ್ಮು ತಿರಸ್ಕರಿಸಿದ್ದಾರೆ. ನವೆಂಬರ್ 2022 ರಲ್ಲಿ, ಸುಪ್ರೀಂ ಕೋರ್ಟ್ ಅವರ ಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿ, ಅವರ ಮರಣದಂಡನೆಯನ್ನು ಎತ್ತಿಹಿಡಿದಿತ್ತು. ಮೇ 15 ರಂದು ಸ್ವೀಕರಿಸಿದ ಆರಿಫ್ನಿಂದ ಬಂದ ಕ್ಷಮಾದಾನ ಅರ್ಜಿಯನ್ನು ಮೇ 27 ರಂದು ತಿರಸ್ಕರಿಸಲಾಗಿದೆ ಎಂದು ಮೇ 29 ರ ರಾಷ್ಟ್ರಪತಿಗಳ ಸಚಿವಾಲಯದ ಆದೇಶವನ್ನು ಉಲ್ಲೇಖಿಸಿ ಅಧಿಕಾರಿಗಳು ತಿಳಿಸಿದ್ದಾರೆ. ಕೆಂಪು ಕೋಟೆ ದಾಳಿಯು ಭಾರತದ ಏಕತೆ, ಸಮಗ್ರತೆ ಮತ್ತು ಸಾರ್ವಭೌಮತ್ವದ ವಿರುದ್ಧದ ಬೆದರಿಕೆಯಾಗಿದೆ ಎಂದು 2022 ರಲ್ಲಿ ಸುಪ್ರೀಂ ಕೋರ್ಟ್ ಗಮನಿಸಿತ್ತು. ಅಪರಾಧಿಯ ಪರವಾಗಿ ಯಾವುದೇ ತಗ್ಗಿಸುವ ಸಂದರ್ಭಗಳಿಲ್ಲ ಎಂದು ಅದು ಹೇಳಿದೆ. 2000ನೇ ಇಸವಿಯ ಡಿಸೆಂಬರ್ 22ರಂದು ಈ ದಾಳಿ ನಡೆದಿತ್ತು. ಕೆಂಪು ಕೋಟೆಯೊಳಗೆ ಬೀಡುಬಿಟ್ಟಿದ್ದ 7 ರಜಪೂತಾನಾ ರೈಫಲ್ಸ್ ಘಟಕದ ಮೂವರು ಸೇನಾ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ಜಮೀನು ರಕ್ಷಣೆಗೆ, ಭೂ ಗಳ್ಳರ ನಿಯಂತ್ರಣಕ್ಕೆ ಮಹತ್ವದ ಕ್ರಮ, ದಿಟ್ಟ ಹೆಜ್ಜೆ ಇರಿಸಲಾಗಿದೆ. ಅದೇ ಲ್ಯಾಂಡ್ ಬೀಟ್ ಅಪ್ಲಿಕೇಷನ್ ಅಭಿವೃದ್ಧಿ ಪಡಿಸಿದೆ. ಈ ಅಪ್ಲಿಕೇಷನ್ ಮೂಲಕ ಆನ್ ಲೈನ್ ಗಸ್ತು ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಹೌದು ರಾಜ್ಯದ ಸರ್ಕಾರಿ ಜಮೀನು ರಕ್ಷಣೆಗೆ ಸರ್ಕಾರ ದಿಟ್ಟ ಕ್ರಮ ತೆಗೆದುಕೊಂಡಿದ್ದು, ಲ್ಯಾಂಡ್‌ ಬೀಟ್‌ ಅಪ್ಲಿಕೇಶನ್‌ ಮೂಲಕ ಅಕ್ರಮವಾಗಿ ಭೂ ಒತ್ತುವರಿಗೆ ಕಡಿವಾಣ ಹಾಕುವಲ್ಲಿ ಪ್ರಮುಖ ಹೆಜ್ಜೆ ಇಟ್ಟಿದೆ. ಈ ಅಪ್ಲಿಕೇಶನ್‌ ಮೂಲಕ ಬೆರಳ ತುದಿಯಲ್ಲೇ ಸುಮಾರು 14 ಲಕ್ಷ ಸರ್ಕಾರಿ ಆಸ್ತಿಗಳ ಸಂಕ್ಷಿಪ್ತ ವಿವರಗಳು ಲಭ್ಯವಿದೆ. ಪಹಣಿದಾರರ ಜಮೀನುಗಳ ರಕ್ಷಣೆಗೂ ಅತ್ಯಪಯುಕ್ತ ಮಾಹಿತಿ ಸಿಗುತ್ತದೆ. https://twitter.com/KarnatakaVarthe/status/1800845271049400455 https://kannadanewsnow.com/kannada/renukaswamy-murder-case-darshan-offers-rs-5-lakh-to-surrendered-actor-darshan/ https://kannadanewsnow.com/kannada/kmdc-advances-rs-72-78-crore-to-7616-students-for-higher-education/

Read More

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈವರೆಗೆ 13 ಆರೋಪಿಗಳ ವಿರುದ್ಧ ಕೇಸ್ ದಾಖಲಾಗಿದೆ ಎನ್ನಲಾಗಿತ್ತು. ಆದ್ರೇ 13 ಮಂದಿ ಅಲ್ಲ. ನಟ ದರ್ಶನ್ ಸೇರಿದಂತೆ 17 ಆರೋಪಿಗಳ ವಿರುದ್ಧ ಕಾಮಾಕ್ಷಿ ಠಾಣೆಯ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ನಿನ್ನೆ ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 13 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಅಲ್ಲದೇ ನ್ಯಾಯಾಲಯಕ್ಕೆ ಹಾಜರುಪಡಿಸಿ ತಮ್ಮ ಕಸ್ಟಡಿಗೆ ಪಡೆದು, ಸ್ಥಳ ಮಹಜರು ನಡೆಸುತ್ತಿದ್ದಾರೆ. ಆದ್ರೇ ಈ ಪ್ರಕರಣದಲ್ಲಿ 13 ಮಂದಿಯಲ್ಲಿ 17 ಆರೋಪಿಗಳು ಭಾಗಿಯಾಗಿರೋದಾಗಿ ಪೊಲೀಸರ ಎಫ್ಐಆರ್ ನಿಂದ ತಿಳಿದು ಬಂದಿದೆ. ಕಾಮಾಕ್ಷಿ ಠಾಣೆಯ ಪೊಲೀಸರು ದಾಖಲಿಸಿರುವಂತ ಎಫ್ಐಆರ್ ನಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಆರೋಪಿಯಾಗಿದ್ರೇ, ನಟ ದರ್ಶನ್ ಎ2 ಆರೋಪಿಯಾಗಿದ್ದಾರೆ. ಇನ್ನೂ ಪವನ್ ಎ3, ರಾಘವೇಂದ್ರ ಎ4, ನಂದೀಶ್ ಎ5, ಜಗದೀಶ್ ಆಲಿಯಾಸ್ ಜಗ್ಗು ಎ6, ಅನು ಎ7, ರವಿ ಎ8, ರಾಜು ಎ9, ವಿನಯ್ ಎ10, ನಾಗರಾಜು ಎ11,…

Read More

ಬೆಂಗಳೂರು: ಕೆಪಿಸಿಎಲ್ ನ ಸಹಾಯಕ ಎಂಜಿನಿಯರ್, ಕಿರಿಯ ಎಂಜಿನಿಯರ್ ನೇಮಕಾತಿ ಸಂಬಂಧ 622 ಹುದ್ದೆಗಳ ನೇಮಕಕ್ಕೆ ನಡೆಸಲಾಗಿದ್ದಂತ ಸ್ಪರ್ಧಾತ್ಮಕ ಪರೀಕ್ಷೆಯ ಅಂಕಪಟ್ಟಿಯನ್ನು ಕೆಇಎ ಪ್ರಕಟಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ( Karnataka Examinations Authority-KEA) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ (ಕೆಪಿಸಿಎಲ್) ಖಾಲಿ ಇರುವ ಎಇ, ಜೆಇ (ವಿವಿಧ ವಿಭಾಗಗಳಲ್ಲಿನ), ಕೆಮಿಸ್ಟ್ ಮತ್ತು ಕೆಮಿಕಲ್ ಸೂಪರ್‌ವೈಸರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪ್ರಾಧಿಕಾರದಿಂದ ಸ್ಪರ್ಧಾತ್ಮಕ ಪರೀಕ್ಷೆಯನ್ನು ಎರಡು ಅವಧಿಗಳಲ್ಲಿ ದಿನಾಂಕ 18-02-2024 ರಂದು ನಡೆಸಲಾಗಿದೆ ಎಂದು ತಿಳಿಸಿದೆ. ಸದರಿ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು 17-04-2024 ರಂದು ಪ್ರಕಟಿಸಲಾಗಿದೆ. ಹುದ್ದೆವಾರು ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ದಿನಾಂಕ 03-05-2024 ರಂದು ಪ್ರಕಟಿಸಿ ಆಕ್ಷೇಪಣೆಗಳನ್ನು ಅಹ್ವಾನಿಸಲಾಗಿತ್ತು. ಅದರಂತೆ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ. ಕಳೆದ ಬಾರಿ ನಡೆಸಿದ ಪರೀಕ್ಷೆಯಂತೆ ಈ ಬಾರಿಯೂ, ಪ್ರತಿ ತಪ್ಪು ಉತ್ತರಕ್ಕೆ 1/3 ರಷ್ಟು ನಕಾರಾತ್ಮಕ ಅಂಕವನ್ನು ಕಡಿತಗೊಳಿಸಿ ಅಂತಿಮ ಅಂಕ ಪಟ್ಟಿಯನ್ನು ಸಿದ್ಧಪಡಿಸುವಂತೆ ಕೆಪಿಸಿಎಲ್…

Read More

ಬೆಂಗಳೂರು : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವೃತ್ತಿಪರ ಶಿಕ್ಷಣದ ವ್ಯಾಸಂಗಕ್ಕಾಗಿ 72.78 ಕೋಟಿ ರೂ.ಶಿಕ್ಷಣ ಸಾಲ ನೀಡಲಾಗಿದೆ. ಕೆಎಂಡಿಸಿ ಕಚೇರಿಯಲ್ಲಿ ಮಂಗಳವಾರ ಪ್ರಗತಿ ಪರಿಶೀಲನೆ ನಡೆಸಿ ಸುದ್ಧಿಗಾರರ ಜತೆ ಮಾತನಾಡಿದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್, ವೈದ್ಯಕೀಯ, ದಂತ ವೈದ್ಯಕೀಯ,ಆಯುಷ್, ಫಾರ್ಮಸಿ ಎಂಜಿನಿಯರಿಂಗ್ ಕೋರ್ಸ್ ವ್ಯಾಸಂಗ ಮಾಡಲು ಬಯಸಿದ ಬಡ ಕುಟುಂಬಗಳ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಗರಿಷ್ಠ ಐದು ಲಕ್ಷ ರೂ. ವರೆಗೆ ಸಾಲದ ಸೌಲಭ್ಯ ಒದಗಿಸಲಾಗಿದೆ. ಇದರ ಜತೆಗೆ ವಿದೇಶದಲ್ಲಿ ವ್ಯಾಸಂಗ ಮಾಡಲು 88 ವಿದ್ಯಾರ್ಥಿಗಳಿಗೆ ಗರಿಷ್ಠ 10 ಲಕ್ಷ ರೂ. ವರೆಗೆ 7.5 ಕೋಟಿ ರೂ. ಸಾಲ ನೀಡಲಾಗಿದೆ ಎಂದು ವಿವರಿಸಿದರು. ಅಲ್ಪಸಂಖ್ಯಾತರ ಸಮುದಾಯದ ಮಕ್ಕಳು ವೃತ್ತಿಪರ ಶಿಕ್ಷಣ ಪಡೆಯಲು ಇದರಿಂದ ಸಹಕಾರಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಲಹೆ ಮೇರೆಗೆ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದರು. ಇದೇ ಮೊದಲ ಬಾರಿಗೆ ಸಣ್ಣ ವ್ಯಾಪಾರ ಮಾಡುವ ಮಹಿಳೆಯರಿಗೆ ವಿಶೇಷ…

Read More

ಬೆಂಗಳೂರು: ನಟ ದರ್ಶನ್ ಪದೇ ಪದೇ ಸುದ್ದಿಯಾಗುತ್ತಿದ್ದಾರೆ. ಅದೂ ವಿವಿಧ ಕ್ರೈಂಗಳಿಂದ ಆಗಿದೆ. ಈಗ ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾರೆ. ಈ ಪ್ರಕರಣದಲ್ಲಿ ಆರೋಪ ಸಾಭೀತಾದ್ರೆ ಕನ್ನಡ ಚಿತ್ರರಂಗದಿಂದ ನಟ ದರ್ಶನ್ ಬ್ಯಾನ್ ಆಗಲಿದ್ದಾರೆ ಎನ್ನಲಾಗುತ್ತಿದೆ. ನಟ ದರ್ಶನ್ ಗೆಳತಿ ಪವಿತ್ರಾ ಗೌಡಗೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತ ಅಸಭ್ಯ ಮೆಸೇಜ್ ಹಾಗೂ ಪೋಟೋಗಳನ್ನು ಕಳುಹಿಸುತ್ತಿದ್ದ ಎಂಬ ಕಾರಣಕ್ಕೆ ದರ್ಶನ್ ಅಂಡ್ ಗ್ಯಾಂಗ್ ಬರ್ಬರವಾಗಿ ರೇಣುಕಾಸ್ವಾಮಿ ಹತ್ಯೆಗೈದಿದ್ದಾರೆ. ಇದು ಕನ್ನಡ ಚಿತ್ರರಂಗಕ್ಕೆ ದೊಡ್ಡ ಶಾಕ್ ನೀಡಿದಂತೆ ಆಗಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪವಿತ್ರಾ ಗೌಡ ಎ.1 ಆರೋಪಿಯಾದ್ರೇ, ನಟ ದರ್ಶನ್ ಎ.2 ಆರೋಪಿಯಾಗಿದ್ದಾರೆ. ಈಗ 6 ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿರುವಂತ ನಟ ದರ್ಶನ್ ಅಂಡ್ ಟೀಂಗೆ ಆರೋಪ ಸಾಭೀತಾದ್ರೆ ಸಂಕಷ್ಟ ಎದುರಾಗಲಿದೆ ಎನ್ನಲಾಗುತ್ತಿದೆ. ಅದರಲ್ಲೂ ನಟ ದರ್ಶನ್ ಗೆ ದೊಡ್ಡ ಸಂಕಷ್ಟವೇ ಎದುರಾಗಲಿದೆ. ಕನ್ನಡ ಚಿತ್ರರಂಗದಿಂದ ನಟ ದರ್ಶನ್ ಬ್ಯಾನ್ ಮಾಡ್ತಾರಾ ಎಂಬ ಪ್ರಶ್ನೆ…

Read More