Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ಬೆಸ್ಕಾಂ ವ್ಯಾಪ್ತಿಯಲ್ಲಿನ ಹೊಸ ವಿದ್ಯುತ್ ಸ್ಥಾಪನಗಳಲ್ಲಿ ಅಳವಡಿಸಲಾಗುತ್ತಿರುವ ಸ್ಮಾರ್ಟ್ ಮೀಟರ್ ದರ ವೈಜ್ಞಾನಿಕವಾಗಿದ್ದು, ಅದರ ಪೂರೈಕೆದಾರರ ಜತೆಗಿನ ಟೆಂಡರ್ ಪ್ರಕ್ರಿಯೆಯೂ ಪಾರದರ್ಶಕವಾಗಿ ನಡೆದಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ. ಎನ್.ಶಿವಶಂಕರ್ ಹೇಳಿದ್ದಾರೆ. ರಾಜ್ಯದ ವಿದ್ಯುತ್ ಪರಿಸ್ಥಿತಿ ಹಾಗೂ ವಿದ್ಯುತ್ ಪೂರೈಕೆಗೆ ಇಂಧನ ಇಲಾಖೆ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಲು ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಹಾಗೂ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ ಅವರ ನೇತೃತ್ವದಲ್ಲಿ ಸೋಮವಾರ ಬೆಸ್ಕಾಂ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. “ಸ್ಮಾರ್ಟ್ ಮೀಟರ್ ಅಳವಡಿಕೆ ಕುರಿತು 2024ರ ಮಾರ್ಚ್ 06 ರಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಮಾರ್ಗಸೂಚಿ ಹೊರಡಿಸಿತ್ತು. ಅದರಂತೆ, ಹಂತ ಹಂತವಾಗಿ ಸ್ಮಾರ್ಟ್ ಮೀಟರ್ ಅಳವಡಿಕೆ ಹಾಗೂ ಬದಲಾವಣೆ ಕಾರ್ಯ ಕೈಗೊಳ್ಳಲಾಗುವುದು. ಹಾಲಿ ಗ್ರಾಹಕರಿಗೆ ಸ್ಮಾರ್ಟ್ ಮೀಟರ್ ಅಳವಡಿಕೆ ಐಚ್ಛಿಕ. ಹೊಸ ಹಾಗೂ ತಾತ್ಕಾಲಿಕ ಸಂಪರ್ಕಗಳಿಗೆ ಮಾತ್ರ ಸ್ಮಾರ್ಟ್ ಮೀಟರ್…
GOOD NEWS: ಮಾರ್ಚ್.31ರ ನಂತ್ರ ಎರಡು ಕಂತುಗಳಲ್ಲಿ ‘ಗೃಹಲಕ್ಷ್ಮೀ ಯೋಜನೆ’ ಹಣ ಬಿಡುಗಡೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು: ರಾಜ್ಯದ ಗೃಹ ಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಮಾರ್ಚ್.31ರ ನಂತ್ರ ಎರಡು ಕಂತುಗಳ ಹಣವನ್ನು ಬಿಡುಗಡೆ ಮಾಡಲಾಗುತ್ತಿದೆ. ಈ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ಹಂಚಿಕೊಂಡಿದ್ದು, ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣವನ್ನು ಮಾರ್ಚ್ 31ರ ನಂತರ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1904074526725714277 ಎಲ್ಲರಿಗೂ ಅನ್ನ, ಅಕ್ಷರ, ವಿದ್ಯೆಯನ್ನು ಕೊಟ್ಟಿದ್ದು ಕಾಂಗ್ರೆಸ್ ಪಕ್ಷ. ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಈಗ ಹಿನ್ನಡೆಯಾಗಿರಬಹುದು. ಯಾರೂ ಧೈರ್ಯಗೇಡಬೇಕಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯ ದಿನಗಳು ಬರಲಿವೆ. ದೇಶದಲ್ಲಿ ಕಾಂಗ್ರೆಸ್ ಪಕ್ಷ ಸದೃಢವಾಗಲಿದೆ ಎಂದು ಸಚಿವರು ಹೇಳಿದರು. ಮಹಿಳೆಯರು ಇವತ್ತು ಯಾವುದರಲ್ಲೂ ಹಿಂದೆ ಇಲ್ಲ. ಸಮಾಜದಲ್ಲಿ ಮಹಿಳೆಯರನ್ನು ಬಿಟ್ಟು ಇರುವುದಕ್ಕೂ ಸಾಧ್ಯವಿಲ್ಲ. ಮಹಿಳಾ ಮೀಸಲಾತಿ ಜಾರಿಗೆ ಬಂದರೆ, ಕರ್ನಾಟಕ ವಿಧಾನಸಭೆಯಲ್ಲಿ 70 ರಿಂದ 78 ರವರೆಗೆ ಶಾಸಕಿಯರು ಇರಲಿದ್ದಾರೆ. ಮಹಿಳೆಯರು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದರು. ಕಾಂಗ್ರೆಸ್ ಪಕ್ಷ ಬದ್ಧತೆಗೆ ಹೆಸರಾಗಿರುವ ಪಕ್ಷ. ಪಂಚ ಗ್ಯಾರಂಟಿಗಳಲ್ಲಿ…
ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ 35 ಸದಸ್ಯರ ಸದಸ್ಯತ್ವವನ್ನು ಅನರ್ಹಗೊಳಿಸಿ ಪ್ರಾದೇಶಿಕ ಆಯುಕ್ತರು ಆದೇಶಿಸಿದ್ದಾರೆ. ಈ ಮೂಲಕ ವಿವಿಧ ಪಕ್ಷದ ಸದಸ್ಯರಿಗೆ ಬಿಗ್ ಶಾಕ್ ನೀಡಿದ್ದಾರೆ. ಈ ಸಂಬಂಧ ಆದೇಶ ಹೊರಡಿಸಿರುವಂತ ಬೆಳಗಾವಿಯ ಪ್ರಾದೇಶಿಕ ಆಯುಕ್ತ ಸಂಜಯ ಶೆಟ್ಟಣನವರು, ವಿಜಯಪುರ ಮಹಾನಗರ ಪಾಲಿಕೆಯ 35 ಸದಸ್ಯರ ಸದಸ್ಯತ್ವವನ್ನು ಅನರ್ಹಗೊಳಿಸಿ ಆದೇಶಿಸಿದ್ದಾರೆ. ಬಿಜೆಪಿಯ 17 ಸದಸ್ಯರು, ಕಾಂಗ್ರೆಸ್ ಪಕ್ಷದ 10 ಸದಸ್ಯರು, ಜೆಡಿಎಸ್ ನ ಓರ್ವ ಸದಸ್ಯ, ಎಂಐಎಂ ಇಬ್ಬರು, ಐವರು ಪಕ್ಷೇತರ ಸದಸ್ಯರು ಸೇರಿದಂತೆ ಒಟ್ಟು 35 ಸದಸ್ಯರನ್ನು ಅನರ್ಹಗೊಳಿಸಿ ಆದೇಶ ಮಾಡಿದ್ದಾರೆ. ಅಂದಹಾಗೇ 2022ರ ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಇವರೆಲ್ಲರೂ ಆಯ್ಕೆಯಾಗಿದ್ದರು. ಜನವರಿ 9, 2024ರಲ್ಲಿ ಮೇಯರ್ ಚುನಾವಣೆ ನಡೆದಿತ್ತು. ಕಾಂಗ್ರೆಸ್ ಪಕ್ಷದ ಮೆಹಜಬೀನ್ ಹೊರ್ತಿ ಮೇಯರ್ ಆಗಿದ್ದರೇ, ದಿನೇಶ್ ಹಳ್ಳಿ ಉಪಮೇಯರ್ ಆಗಿ ಆಯ್ಕೆಯಾಗಿದ್ದರು. ವಿಜಯಪುರ ಮಹಾನಗರ ಪಾಲಿಕೆಯ ಯಾವ ಸದಸ್ಯರೂ ಕಾನೂನು ಪ್ರಕಾರ ಆಸ್ತಿ ಘೋಷಿಸಿರಲಿಲ್ಲ. ಇದನ್ನು ಪ್ರಶ್ನಿಸಿ ಕಲಬುರ್ಗಿ ಹೈಕೋರ್ಟ್ ಮೊರೆಯನ್ನು ಮಾಜಿ ಸದಸ್ಯ…
ಬೆಂಗಳೂರು: ಬಿಬಿಎಂಪಿ ಚುನಾವಣೆಯನ್ನು ಆದಷ್ಟು ಶೀಘ್ರದಲ್ಲಿಯೇ ನಡೆಸಲು ಸರ್ಕಾರ ತಯಾರಿ ಮಾಡಿಕೊಂಡಿದೆ. ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಈಗಾಗಲೇ ಒಪ್ಪಿಗೆ ಸಿಕ್ಕಿದೆ. ಇದರ ಬಗ್ಗೆ ವಿಪಕ್ಷಗಳು ಜಂಟಿ ಸದನ ಸಮಿತಿ ರಚಿಸುವಂತೆ ಮನವಿ ಮಾಡಿದ್ದೆವು. ಈಗಾಗಲೇ ಅನೇಕರು ತಮ್ಮ ಸಲಹೆಗಳನ್ನು ನೀಡಿದ್ದಾರೆ. ರಾಜ್ಯಪಾಲರು ಎಷ್ಟು ಬೇಗ ಸಹಿ ಹಾಕಿ ಕಳುಹಿಸುತ್ತಾರೋ ಅಷ್ಟು ಬೇಗ ಪ್ರದೇಶಗಳನ್ನು ಗುರುತಿಸಿ, ಶಾಸಕರ ಬಳಿ ಮತ್ತೊಮ್ಮೆ ಚರ್ಚೆಮಾಡಿ ಚುನಾವಣೆಗೆ ತೆರಳುತ್ತೇವೆ. 73, 74ನೇ ತಿದ್ದುಪಡಿ ಬಗ್ಗೆ ನಮಗೆ ಬದ್ಧತೆಯಿದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರು ನಗರದ ಚುನಾಯಿತ ಪ್ರತಿನಿಧಿಗಳು ಬಿಬಿಎಂಪಿ ಬಜೆಟ್ ಬಗ್ಗೆ ಚರ್ಚೆ, ಸಲಹೆ ಸೂಚನೆ ವೇಳೆ ತಮ್ಮ ಕ್ಷೇತ್ರದ ಬೇಡಿಕೆಗಳು, ಸಮಸ್ಯೆಗಳು ಸೇರಿದಂತೆ ಹಲವಾರು ವಿಚಾರಗಳನ್ನು ಗಮನಕ್ಕೆ ತಂದಿದ್ದಾರೆ. ಇವುಗಳನ್ನು ಗಮನದಲ್ಲಿಟ್ಟುಕೊಂಡು ಈ ಬಾರಿ ಬಜೆಟ್ ಮಂಡಿಸಲಾಗುವುದು ಎಂದರು. https://kannadanewsnow.com/kannada/state-govt-to-take-major-steps-to-curb-illegal-construction-use-of-ai-technology/ https://kannadanewsnow.com/kannada/phone-tapping-of-all-opposition-leaders-including-me-is-taking-place-r-ashoka/
ಗಾಜಾ: ಗಾಜಾದಲ್ಲಿ ಇಸ್ರೇಲ್ ನಡೆಸಿದ ನಿಖರವಾದ ವಾಯುದಾಳಿಯಲ್ಲಿ ಹಮಾಸ್ ನಾಯಕನೊಬ್ಬ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಅವರನ್ನು ಹೊಸದಾಗಿ ನೇಮಕಗೊಂಡ ಹಮಾಸ್ ಪ್ರಧಾನಿ ಎಂದೂ ಕರೆಯುತ್ತಾರೆ. ವರದಿಗಳ ಪ್ರಕಾರ, ಇಸ್ರೇಲ್ ತನ್ನ ವಾಯುದಾಳಿಯ ಮೂಲಕ ದಕ್ಷಿಣ ಗಾಜಾದ ಅತಿದೊಡ್ಡ ಆಸ್ಪತ್ರೆಯಾದ ನಾಸರ್ ಆಸ್ಪತ್ರೆಯನ್ನು ಗುರಿಯಾಗಿಸಿಕೊಂಡಿದೆ. ಹಮಾಸ್ ನಾಯಕ ಇಸ್ಮಾಯಿಲ್ ಬರ್ಹೌಮ್ ಮತ್ತು 16 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಆದರೆ ಇತರ ಹಲವರು ಗಾಯಗೊಂಡಿದ್ದಾರೆ. ಭಾನುವಾರ ರಾತ್ರಿ ನಡೆದ ಈ ದಾಳಿಯು ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಕಟ್ಟಡದ ಮೇಲೆ ಅಪ್ಪಳಿಸಿತು. ಇದು ವ್ಯಾಪಕ ಖಂಡನೆಗೆ ಕಾರಣವಾಯಿತು. ವರದಿಗಳ ಪ್ರಕಾರ, ಹಮಾಸ್ನ ರಾಜಕೀಯ ಬ್ಯೂರೋದ ಸದಸ್ಯ ಇಸ್ಮಾಯಿಲ್ ಬರ್ಹೌಮ್ ಕೆಲವೇ ದಿನಗಳ ಹಿಂದೆ ಅಧಿಕಾರ ವಹಿಸಿಕೊಂಡಿದ್ದರು. ಸ್ಫೋಟದ ಸಮಯದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಹಮಾಸ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಆಸ್ಪತ್ರೆಯ ಮುಷ್ಕರದಲ್ಲಿ ಎರಡು ದಿನಗಳ ಹಿಂದೆ ಶಸ್ತ್ರಚಿಕಿತ್ಸೆಗೆ ಒಳಗಾದ 16 ವರ್ಷದ ಬಾಲಕ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪ್ರದೇಶದ ಹಮಾಸ್ ನಡೆಸುವ ಆರೋಗ್ಯ ಸಚಿವಾಲಯ…
ಬೆಂಗಳೂರು: ಹಾಲು ಒಕ್ಕೂಟಗಳು ಇರುವುದು ರೈತರಿಗೆ ಅನುಕೂಲ ಮಾಡುವುದಕ್ಕೆ ಮಾತ್ರ, ಲಾಭ ಮಾಡುವುದಕ್ಕಲ್ಲ. ಒಕ್ಕೂಟಗಳ ನಂದಿನಿ ದರ ಏರಿಕೆಯ ಒತ್ತಡಕ್ಕೆ ಮಣಿಯದ ಸಿಎಂ ಸಿದ್ಧರಾಮಯ್ಯ ಅವರು, ಸಚಿವ ಸಂಪುಟಕ್ಕೆ ವಿಷಯ ರವಾನೆ ಮಾಡಿ, ಸಂಪುಟ ಸಭೆಯಲ್ಲಿ ಚರ್ಚಿಸಿ ಆ ಬಳಿಕ ದರ ಹೆಚ್ಚಳದ ಬಗ್ಗೆ ತೀರ್ಮಾನ ಕೈಗೊಳ್ಳುವಂತ ನಿರ್ಣಯವನ್ನು ಕೈಗೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತದ ಅಧ್ಯಕ್ಷರು ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರ ಹಾಗೂ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಕಾವೇರಿಯಲ್ಲಿ ಇಂದು ನಡೆಸಿದ ಸಭೆಯ ಮುಖ್ಯಾಂಶಗಳು: • ಹಾಲಿನ ದರ ಹೆಚ್ಚಳ ಕುರಿತು ಒಕ್ಕೂಟಗಳ ಅಭಿಪ್ರಾಯ ಸಂಗ್ರಹ ಮಾಡಲಾಯಿತು. ಹಾಲಿನದರ ಹೆಚ್ಚಳ ಮಾಡಿದರೆ ಮೊತ್ತವನ್ನು ಸಂಪೂರ್ಣವಾಗಿ ರೈತರಿಗೆ ವರ್ಗಾವಣೆಯಾಗಬೇಕು ಎಂಬುವುದು ಸರ್ಕಾರದ ದೃಢ ನಿಲುವು ಮುಖ್ಯಮಂತ್ರಿ ಅವರು ಸ್ಪಷ್ಟಪಡಿಸಿದರು. • ಹಾಲು ಒಕ್ಕೂಟಗಳು ಖರ್ಚು ವೆಚ್ಚ ಕಡಿಮೆ ಮಾಡಬೇಕು. ಪಾರದರ್ಶಕತೆಯನ್ನು ಪಾಲಿಸಬೇಕು. ಒಕ್ಕೂಟಗಳು ಅಗತ್ಯಕ್ಕಿಂತ ಹೆಚ್ಚು ಜನರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಬಾರದು. ಇದರಿಂದಾಗಿಯೇ…
ನವದೆಹಲಿ: ದೀರ್ಘ ಲೆಕ್ಕಾಚಾರಗಳಿಗೆ ಸಂಬಂಧಿಸಿದ ಅರಿವಿನ ಹೊರೆಯನ್ನು ಕಡಿಮೆ ಮಾಡಲು 12 ನೇ ತರಗತಿ ಅಕೌಂಟೆನ್ಸಿ ಪರೀಕ್ಷೆಗಳಲ್ಲಿ ಮೂಲ ಪ್ರೋಗ್ರಾಮಬಲ್ ಅಲ್ಲದ ಕ್ಯಾಲ್ಕುಲೇಟರ್ಗಳನ್ನು ಬಳಸಲು ಅನುಮತಿಸುವ ಪ್ರಸ್ತಾಪವನ್ನು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) ಪರಿಶೀಲಿಸುತ್ತಿದೆ ಎಂದು ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ. ಏಕರೂಪತೆಯನ್ನು ಖಚಿತಪಡಿಸಿಕೊಳ್ಳಲು ಅವುಗಳ ಬಳಕೆಯ ಬಗ್ಗೆ ಮಾರ್ಗಸೂಚಿಗಳನ್ನು ರೂಪಿಸಲು ಸಮಿತಿಯನ್ನು ರಚಿಸಲಾಗುವುದು ಎಂದು ಅವರು ಹೇಳಿದರು. ಸಿಬಿಎಸ್ಇ 10 ಮತ್ತು 12 ನೇ ತರಗತಿಗಳಲ್ಲಿ ವಿಶೇಷ ಅಗತ್ಯವಿರುವ ವಿದ್ಯಾರ್ಥಿಗಳಿಗೆ ಕ್ಯಾಲ್ಕುಲೇಟರ್ಗಳನ್ನು ಬಳಸಲು ಅನುಮತಿಸಿದರೆ, ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (ಸಿಐಎಸ್ಇಸಿ) 2021 ರಲ್ಲಿ 12 ನೇ ತರಗತಿ ವಿದ್ಯಾರ್ಥಿಗಳಿಗೆ ಕ್ಯಾಲ್ಕುಲೇಟರ್ಗಳನ್ನು ಬಳಸಲು ಅವಕಾಶ ನೀಡಿತು. ಮಂಡಳಿಯ ಪಠ್ಯಕ್ರಮ ಸಮಿತಿಯು 12 ನೇ ತರಗತಿಯ ಅಕೌಂಟೆನ್ಸಿ ಪರೀಕ್ಷೆಯಲ್ಲಿ ಮೂಲಭೂತ, ಪ್ರೋಗ್ರಾಮಬಲ್ ಅಲ್ಲದ ಕ್ಯಾಲ್ಕುಲೇಟರ್ಗಳನ್ನು ಅನುಮತಿಸಬೇಕೆಂದು ಪ್ರಸ್ತಾಪಿಸಿತ್ತು, ಇದು ಸಾಮಾನ್ಯ ಹಣಕಾಸು ಲೆಕ್ಕಾಚಾರಗಳಿಗೆ ಅಗತ್ಯವಾದ ಕಾರ್ಯಗಳಿಗೆ ಸೀಮಿತವಾಗಿದೆ. ಉದಾಹರಣೆಗೆ ಸೇರ್ಪಡೆ, ಕಳೆಯುವಿಕೆ, ಗುಣೀಕರಣ, ವಿಭಜನೆ ಮತ್ತು…
ಬೆಂಗಳೂರು: ಈಗಾಗಲೇ ಸಿಬಿಐ ಮುಂದೆ ರಾಜ್ಯದ 74 ಪ್ರಕರಣಗಳು ತನಿಖೆಗೆ ಬಾಕಿ ಇರುವಾಗ ಬಿಜೆಪಿಯವರು ಹನಿಟ್ರಾಪ್ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಬೇಕು ಎಂದು ಹೇಳುವ ಮೂಲಕ ತಮ್ಮ ತಿಳುವಳಿಕೆಯ ಕೊರತೆಯನ್ನು ಮತ್ತೊಮ್ಮೆ ಸಾಬೀತು ಮಾಡಿಕೊಂಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಸಚಿವರು ಏನೇ ನಡೆದರೂ ಅದನ್ನು ಸಿಬಿಐಗೆ ಕೊಡಿ ಎನ್ನುವುದು ಬಿಜೆಪಿಯವರಿಗೆ ಅಭ್ಯಾಸವಾಗಿದೆ, ತಮ್ಮ ಸರ್ಕಾರದ ಅವಧಿಯಲ್ಲಿ ಸಿಡಿ ಪ್ರಕರಣ ನಡೆದಾಗ ಬಿಜೆಪಿಯವರೆಲ್ಲ ತಡೆಯಾಜ್ಞೆ ತಂದಿದ್ದರು, ಅದರ ಬದಲು ಸಿಬಿಐ ತನಿಖೆಗೆ ವಹಿಸಲಿಲ್ಲ ಏಕೆ? ಎಂದು ಪ್ರಶ್ನಿಸಿದ್ದಾರೆ. ಹನಿಟ್ರಾಪ್ ಕುರಿತು ಚರ್ಚೆಯಾಗುತ್ತಿದೆಯೇ ಹೊರತು ಈವರೆಗೆ ಯಾವುದೇ ದೂರು ದಾಖಲಾಗಿಲ್ಲ, ದೂರು ದಾಖಲಾದರೆ ಸಮರ್ಥವಾಗಿ ತನಿಖೆ ನಡೆಸುವುದಕ್ಕೆ ರಾಜ್ಯದಲ್ಲಿ ಸಮರ್ಥರಾಗಿರುವ ಅಧಿಕಾರಿಗಳಿದ್ದಾರೆ, ಇಷ್ಟಕ್ಕೂ ಹನಿಟ್ರಾಪ್ ವಿಷಯ ಬಗ್ಗೆ ಬಿಜೆಪಿಯವರು ಇಷ್ಟು ಆಸಕ್ತಿ ವಹಿಸುವುದಕ್ಕೆ ಕಾರಣವೇನು, ಭಯವೋ, ಕಾಳಜಿಯೋ? ಎಂದು ಕೇಳಿದ್ದಾರೆ. ಮಾನವಸಂಪನ್ಮೂಲದ ಕೊರತೆ ಇರುವುದರಿಂದ ಅನಗತ್ಯವಾಗಿ…
ನವದೆಹಲಿ: ಕಾಯ್ದಿರಿಸಿದ ಟಿಕೆಟ್ನೊಂದಿಗೆ ವಾಟ್ಸಾಪ್ ಮೂಲಕ ಫ್ಲೈಯರ್ ಹಕ್ಕುಗಳನ್ನು ಕಳುಹಿಸಲು ಡಿಜಿಸಿಎ ವಿಮಾನಯಾನ ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ. ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ಎಲ್ಲಾ ವಿಮಾನಯಾನ ಸಂಸ್ಥೆಗಳು ಪ್ರಯಾಣಿಕ ಕೇಂದ್ರಿತ ನಿಯಮಗಳು ಮತ್ತು ಪ್ರಯಾಣಿಕರ ಹಕ್ಕುಗಳ ನಿಬಂಧನೆಗಳನ್ನು ಪ್ರಸಾರ ಮಾಡಲು ಮತ್ತು ಒತ್ತಿಹೇಳಲು ನಿರ್ದೇಶಿಸಿದೆ. DGCA ಪ್ರಕಾರ, ಎಲ್ಲಾ ವಿಮಾನಯಾನ ಸಂಸ್ಥೆಗಳು ನಾಗರಿಕ ವಿಮಾನಯಾನ ಸಚಿವಾಲಯದಲ್ಲಿ ಲಭ್ಯವಿರುವ ಪ್ರಯಾಣಿಕರ ಚಾರ್ಟರ್ನ ಆನ್ಲೈನ್ ಲಿಂಕ್ ಅನ್ನು ಪ್ರಯಾಣಿಕರಿಗೆ ಸಂದೇಶದ ಮೂಲಕ (SMS / WhatsApp) ಕಳುಹಿಸಲು ನಿರ್ದೇಶಿಸಲಾಗಿದೆ. ಜೊತೆಗೆ ವಿಮಾನ ಟಿಕೆಟ್ಗಳು ಮತ್ತು ಏರ್ಲೈನ್ಸ್ ವೆಬ್ಸೈಟ್ನಲ್ಲಿ ಪ್ರಯಾಣಿಕರಿಗೆ ಅವರ ಹಕ್ಕುಗಳನ್ನು ತಿಳಿಸುವಂತೆ ಕಳುಹಿಸಬೇಕು. DGCA ಮಾರ್ಚ್ 7 ರಂದು ಟಿಕೆಟ್ ಮತ್ತು ಏರ್ಲೈನ್ಸ್ ವೆಬ್ಸೈಟ್ನಲ್ಲಿ ಬುಕಿಂಗ್ ಮಾಡುವಾಗ ಪ್ರಯಾಣಿಕರ ಚಾರ್ಟರ್ ಅನ್ನು ಪ್ರಸಾರ ಮಾಡಲು ಎಲ್ಲಾ ವಿಮಾನಯಾನ ಸಂಸ್ಥೆಗಳಿಗೆ ನಿರ್ದೇಶಿಸಿತ್ತು. ಅದನ್ನು ಮಾರ್ಚ್ 27, 2025 ರೊಳಗೆ ಅನ್ವಯಿಸಲು ಉಲ್ಲೇಖಿಸಲಾಗಿದೆ. ಸ್ಪೈಸ್ ಜೆಟ್ ಈಗಾಗಲೇ ಬದಲಾವಣೆಯನ್ನು ಅಳವಡಿಸಿಕೊಂಡಿದೆ. ಇತರ ವಿಮಾನಯಾನ ಸಂಸ್ಥೆಗಳು ವಿಮಾನ…
ಬೆಂಗಳೂರು: ದೇಶದ ಸಾಮಾಜಿಕ ವಾಹಿನಿಯಿಂದ ಮುಸಲ್ಮಾನರನ್ನು ಆಚೆ ಇಡಬೇಕೆಂಬ ಬಿಜೆಪಿಯ ರಾಜಕೀಯ ಹೇಳಿಕೆಯು ಅವರ ಹತಾಶೆಯ ಹೇಳಿಕೆಯಾಗಿದ್ದು, ದುರುದ್ದೇಶದಿಂದ ಕೂಡಿರುತ್ತದೆ ಎಂಬುದಾಗಿ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ವಾಗ್ಧಾಳಿ ನಡೆಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕಾಂಗ್ರೆಸ್ ಪಕ್ಷವು ಸಾಮಾಜಿಕ ನ್ಯಾಯದ ಪರಿಪಾಲನೆಯ ಹಿನ್ನೆಲೆಯಲ್ಲಿ ಕರ್ನಾಟಕದ 2025-26ರ ಆಯವ್ಯಯದಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಕಾಯಿದೆಗೆ ಅನುಗುಣವಾಗಿ ಸರ್ಕಾರಿ ಕಾಮಗಾರಿಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಪ್ರವರ್ಗ-2A ಮತ್ತು ಪ್ರವರ್ಗ-2B ಗುತ್ತಿಗೆದಾರರಿಗೆ ಎರಡು ಕೋಟಿ ರೂಪಾಯಿಗಳ ವರೆಗಿನ ಕಾಮಗಾರಿಗಳನ್ನು ನೀಡಲು ಘೋಷಣೆಯನ್ನು ಮಾಡಿರುತ್ತದೆ ಎಂದಿದ್ದಾರೆ. ಆರ್ಥಿಕವಾಗಿ ಈ ಸಮುದಾಯಗಳನ್ನು ಸಬಲೀಕರಣ ಮಾಡುವ ಉದ್ದೇಶದಿಂದ ಅಲ್ಪಸಂಖ್ಯಾತರನ್ನು ಒಳಗೊಂಡಂತೆ ಆಯವ್ಯಯದಲ್ಲಿ ಘೋಷಣೆಯನ್ನು ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಮಾಡಲಾಗಿರುತ್ತದೆ. ರಾಜಕೀಯ ವೈಷಮ್ಯಕ್ಕಾಗಿ ಅಲ್ಪಸಂಖ್ಯಾತ ಮುಸಲ್ಮಾನರನ್ನು ದ್ವೇಷ ಮಾಡುವ ಬಡಾಯಿ ಜನತಾ ಪಾರ್ಟಿ (ಬಿಜೆಪಿ), ಸತ್ಯವನ್ನು ತಿರುಚಿ ಸುಳ್ಳು ಸುದ್ದಿಗಳ ಮೂಲಕ ಜನರನ್ನು ಧಾರ್ಮಿಕವಾಗಿ ಕೆರಳಿಸುವ ಸಂಚನ್ನು…