Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಮಡಿಕೇರಿ: ಲೋಕಸಭಾ ಚುನಾವಣೋತ್ತರ ಸಮೀಕ್ಷೆಗಳು ಯಾವತ್ತಿಗೂ ತಪ್ಪಾಗೋದಿಲ್ಲ. ಎನ್ ಡಿಎ ಪಕ್ಷ ಹೆಚ್ಚು ಸ್ಥಾನ ಗಳಿಸಲಿದೆ. ಮೋದಿ ಮತ್ತೆ ಪ್ರಧಾನಿಯಾಗಲಿದ್ದಾರೆ ಅಂತ ನಟ ಚೇತನ್ ಹೇಳಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಅವರು 2014-2019ರಲ್ಲಿ ಇದ್ದ ಮೋದಿ ಅಲೆ ಈಗ ಇಲ್ಲ. ಮೋದಿ ಬ್ರ್ಯಾಂಡ್ ಕಡಿಮೆ ಆಗಿರಬಹುದು. ಆದ್ರೇ ಬಿಜೆಪಿಗೆ ದೊಡ್ಡ ಮಟ್ಟದ ಫಲಿತಾಂಶ ಬರಲಿದೆ ಎಂಬುದಾಗಿ ಭವಿಷ್ಯ ನುಡಿದಿದ್ದಾರೆ. ಲೋಕಸಭಾ ಚುನಾವಣೆಯ ಮತದಾನ ಮುಕ್ತಾಯದ ನಂತ್ರ ಚುನಾವಣೋತ್ತರ ಸಮೀಕ್ಷೆಗಳ ವರದಿಯನ್ನು ನೋಡಿದ್ರೇ, ಎಲ್ಲಾ ಸಮೀಕ್ಷೆ ಒಂದೇ ರೀತಿಯಲ್ಲಿ ಇದೆ. ಅದರಲ್ಲಿ ಯಾವುದೇ ಗೊಂದಲಗಳಿಲ್ಲ. ಈ ಸಮೀಕ್ಷೆಗಳು ಯಾವತ್ತಿಗೂ ತಪ್ಪಾಗುವುದಿಲ್ಲ ಎಂದರು. 2004ರ ಸಮೀಕ್ಷೆಯಲ್ಲಿ ದೊಡ್ಡ ಮಟ್ಟದಲ್ಲಿ ಬಿಜೆಪಿಗೆ ಸ್ಥಾನ ಬರಲಿದೆ ಎಂಬುದಾಗಿ ಹೇಳಲಾಗಿತ್ತು. ಅದರಂತೆಯೇ ಆಯ್ತು. ಈಗ ಚುನಾವಣೋತ್ತರ ಸಮೀಕ್ಷೆಯಲ್ಲಿ 2019ರ ಚುನಾವಣೆಗಿಂತ ಹೆಚ್ಚು ಸ್ಥಾನ ಬರಲಿದೆ ಅಂತ ಸಮೀಕ್ಷೆಗಳು ಹೇಳಿದ್ದಾವೆ. ಅದೇ ರೀತಿ ಫಲಿತಾಂಶ ಬರಲಿದೆ ಎಂದರು. ಲೋಕಸಭಾ ಚುನಾವಣೋತ್ತರ ಸಮೀಕ್ಷಾ ವರದಿ ಪ್ರಕಾರ 370ಕ್ಕೂ ಹೆಚ್ಚು ಸ್ಥಾನ ಎನ್ ಡಿಎ…
ಬೆಂಗಳೂರು: ಕೇರಳದಲ್ಲಿ ಕೇರಳ ಕುರಿ, ಕೋಳಿ, ಮೇಕೆ, ಎಮ್ಮೆ ಬಲಿಯ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಇನ್ನೊಂದು ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದರು. ವಿಧಾನಸೌಧದಲ್ಲಿ ಇಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಇವರು ಪ್ರತಿಯೊಂದಕ್ಕೂ ಎಸ್ ಐಟಿ ರಚನೆ ಮಾಡಿ ತನಿಖೆ ಮಾಡಿಸುತ್ತಾರೆ, ಅಲ್ಲವೇ? ಬಲಿ ವಿಷಯಕ್ಕೂ ತನಿಖೆ ಮಾಡಿಸಲಿ ಎಂದು ಸವಾಲು ಹಾಕಿದರು. ಇದು ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ನೀಡಿಕೆ ಅಲ್ಲವೇ? ನಾನು ಮಾಧ್ಯಮಗಳ ಮೂಲಕವೇ ಗಮನಿಸಿದೆ. ಸಿಎಂ ಮತ್ತು ನನ್ನ ವಿರುದ್ಧ ಮಾಡಿಸುತ್ತಿರುವ ಶತ್ರು ಭೈರವಿ ಯಾಗ ಎಂದು ಹೇಳಿದ್ದಾರೆ. ಸಿಎಂ, ಡಿಸಿಎಂ ವಿರುದ್ಧ ವಾಮಾಚಾರ ಎಂದರೆ ಸಾಮಾನ್ಯವೇ? ಹಾಗಾಗಿ ಅದರ ತನಿಖೆಗೂ ಒಂದು ಎಸ್ಐಟಿ ರಚನೆ ಮಾಡಲಿ ಎಂದು ಅವರು ಹೇಳಿದರು. ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು ಡಿಸಿಎಂ ಅವರು ಹೇಳಿದ್ದಾರೆ. ಇದು ಮಾಟ ಮಂತ್ರ ಎಂದು ಕಥೆ…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಗೆ ಮುನ್ನವೇ ಕರಡು ಮತದಾರರ ಪಟ್ಟಿಯನ್ನು ಸಿದ್ಧಪಡಿಸೋ ಸಂಬಂಧ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಮತದಾರರ ಪಟ್ಟಿ ನೋಟಿಸು ಪ್ರಕಟಿಸಲಾಗಿದೆ. ಅದರಲ್ಲಿ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕೈಗೊಂಡ ಸರ್ವಾನುಮತದ ನಿರ್ಣಯದಂತೆ 2024-29ನೇ ಸಾಲಿನ ಅವಧಿಗೆ ಎಲ್ಲಾ ಹಂತದ ಪ್ರಕ್ರಿಯೆಗಳನ್ನು ಕಗೊಳ್ಳಲು ಸಂಘದ ಬೈಲಾ ನಿಯಮದಂತೆ ಕರಡು ಮತದಾರರ ಪಟ್ಟಿಯನ್ನು ಹೊರಡಿಸಿ, ಈ ಸಂಬಂದ ಸಂಘದ ಸದಸ್ಯರಿಂದ ಸ್ವೀಕೃತವಾಗಬಹುದಾದ ಮನವಿ, ಆಕ್ಷೇಪಣೆಗಳಿಗೆ ಮುಕ್ತ ಅವಕಾಶ ಕಲ್ಪಿಸಿದೆ ಎಂದಿದೆ. ಈ ಹಿನ್ನಲೆಯಲ್ಲಿ ಕರಡು ಮತದಾರರ ಪಟ್ಟಿ ಸಿದ್ಧಪಡಿಸೋದಕ್ಕೆ ದಿನಾಂಕ ನಿಗದಿ ಗೊಳಿಸಲಾಗಿದೆ. ತಾಲೂಕು ಶಾಖೆಗಳ ಮತಕ್ಷೇತ್ರಗಳು, ಯೋಜನಾ ಶಾಖೆಗಳ ಮತಕ್ಷೇತ್ರಗಳು, ಜಿಲ್ಲಾ ಶಾಖೆಗಳ ಮತ ಕ್ಷೇತ್ರಗಳು, ಬೆಂಗಳೂರು ನಗರ ರಾಜ್ಯ ಪರಿಷತ್ ಮತಕ್ಷೇತ್ರಗಳು ಕರಡು ಮತದಾರರ ಪಟ್ಟಿ ಸಿದ್ಧಪಡಿಸಲು ದಿನಾಂಕ 08-06-2024ರಿಂದ 30-06-2024ರವರೆಗೆ ಅವಕಾಶ ನೀಡಲಾಗಿದೆ. ಕರಡು ಮತದಾರರ ಪಟ್ಟಿಯನ್ನು ದಿನಾಂಕ 01-07-2024ರಂದು ಪ್ರಕಟಿಸಲಾಗುತ್ತದೆ. ಆಕ್ಷೇಪಣೆಗಳನ್ನು ದಿನಾಂಕ 02-07-2024ರಿಂದ 10-07-2024ರ…
ಬೆಂಗಳೂರು: ನಾಳೆ ಲೋಕಸಭಾ ಚುನಾವಣೆಗೆ ಮತ ಏಣಿಕೆ ಕಾರ್ಯ ನಡೆಯಲಿದೆ. ಬೆಂಗಳೂರಿನ ಮೂರು ಕೇಂದ್ರಗಳಲ್ಲಿ ಮತಎಣಿಕೆ ಕಾರ್ಯ ನಡೆಯಲಿದ್ದು, ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಈ ಕುರಿತು ಮಾಹಿತಿ ನೀಡಿರುವಂತ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ ಅವರು, ಬೆಂಗಳೂರಿನ ಮೂರು ಕೇಂದ್ರಗಳಲ್ಲಿ ನಾಳೆ ಲೋಕಸಭಾ ಚುನಾವಣೆಯ ಮತಏಣಿಕೆ ಕಾರ್ಯ ನಡೆಯಲಿದೆ. ಎಲ್ಲಾ ಕೇಂದ್ರಗಳ ಬಳಿಯಲ್ಲೂ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದರು. ಬೆಂಗಳೂರಿನಲ್ಲಿ 1524 ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. 13 ಕೆ ಎಸ್ ಆರ್ ಪಿ ತುಕಡಿ ನಿಯೋಜಿಸಲಾಗಿದೆ. ಈಗಾಗಲೇ 512 ಪೊಲೀಸ್ ಸಿಬ್ಬಂದಿ ಸ್ಟ್ರಾಂಗ್ ರೂಂ ಬಳಿಯಲ್ಲಿ ಭದ್ರತಾ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು. 3 ಶಿಫ್ಟ್ ಗಳಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಮತ ಏಣಿಕೆ ಕೇಂದ್ರದ ಸುತ್ತ 400 ಸಂಚಾರ ಪೊಲೀಸರನ್ನು ಸುಗಮ ಸಂಚಾರಕ್ಕಾಗಿ ನಿಯೋಜಿಸಲಾಗಿದೆ. ಯಾವುದೇ ಕಾನೂನು ಮತ್ತು ಸುವ್ಯವಸ್ಥತೆಯಲ್ಲಿ ಲೋಪವಾಗದಂತೆ ಭದ್ರತಾ ಕಾರ್ಯವನ್ನು ಕೈಗೊಳ್ಳಲಾಗಿದೆ ಎಂದರು. ಮತಏಣಿಕೆ ಕೇಂದ್ರದ ಒಳಗೆ ಗುರುತಿನ ಚೀಟಿ…
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಡಿ ಸಚಿವ ನಾಗೇಂದ್ರರ ರಾಜೀನಾಮೆ ಪಡೆಯುವವರೆಗೆ ಬಿಜೆಪಿ ಹೋರಾಟ ಮುಂದುವರೆಸಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತಿಳಿಸಿದರು. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರ ದಲಿತರ 187 ಕೋಟಿ ಹಣವನ್ನು ನುಂಗಿ ನೀರು ಕುಡಿದಿದೆ ಎಂದು ಆಕ್ಷೇಪಿಸಿದರು. ಸಿದ್ದರಾಮಯ್ಯನವರು ಸಚಿವರ ರಾಜೀನಾಮೆ ಪಡೆಯದೆ ಭಂಡತನ ಮೆರೆಯುತ್ತಿದ್ದಾರೆ ಎಂದು ಟೀಕಿಸಿದರು. ಮತ್ತೆ ಮೋದಿಯವರು ಪ್ರಧಾನಿ ಆಗಲಿದ್ದು, ಆಮೇಲೆ ತೀರ್ಮಾನ ಮಾಡೋಣ ಎಂದು ಕಾಂಗ್ರೆಸ್ಸಿಗರು ಕಾಯುತ್ತಿದ್ದಾರೆ ಎಂದರು. ಕಳ್ಳ- ಖದೀಮರಾದ ಕಾಂಗ್ರೆಸ್ಸಿಗರು ಒಂದು ದಿನದ ಹೋರಾಟಕ್ಕೆ ಬಗ್ಗುವುದಿಲ್ಲ. ಆದ್ದರಿಂದ ರಾಜ್ಯಪಾಲರ ಭೇಟಿ, ಶಾಸಕರಿಂದ ಗಾಂಧಿ ಪ್ರತಿಮೆ ಎದುರು ಹೋರಾಟ, ಜಿಲ್ಲೆ, ಜಿಲ್ಲೆಗಳಲ್ಲಿ ಹೋರಾಟ ಮಾಡುವ ಕುರಿತು ಚರ್ಚೆ ಮಾಡಿದ್ದೇವೆ ಎಂದು ವಿವರಿಸಿದರು. ಸಿ.ಟಿ.ರವಿ, ಎನ್.ರವಿಕುಮಾರ್, ಎಂ.ಜಿ.ಮುಳೆ ಅವರ ಆಯ್ಕೆ ಕುರಿತು ಮಾತನಾಡಿ, ಪಕ್ಷಕ್ಕಾಗಿ ದುಡಿದವರಿಗೆ ಆದ್ಯತೆ ಕೊಟ್ಟಿದ್ದಾಗಿ ತಿಳಿಸಿದರು. ವಿಧಾನಪರಿಷತ್ತಿನಲ್ಲಿ ನಮ್ಮ ಧ್ವನಿ ಹೆಚ್ಚಾಗಲು ಇವರನ್ನು ಆಯ್ಕೆ ಮಾಡಿದ್ದಾಗಿ…
ನವದೆಹಲಿ: ಟೀಂ ಇಂಡಿಯಾದ ಆಲ್ರೌಂಡರ್ ಕೇದಾರ್ ಜಾಧವ್ ( Indian all-rounder Kedar Jadhav ) ಎಲ್ಲಾ ಮಾದರಿಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ ಟೀಂ ಇಂಡಿಯಾ ಅಲ್ ರೌಂಡರ್ ಕೇದಾರ್ ಜಾಧವ್ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. 39 ವರ್ಷದ ಧೋನಿ ಜೂನ್ 3 ರ ಸೋಮವಾರ ತಮ್ಮ ಅಧಿಕೃತ ‘ಎಕ್ಸ್’ ಖಾತೆಯಿಂದ ಟ್ವೀಟ್ ಮೂಲಕ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಕೇದಾರ್ ಜಾಧವ್ ಏಕದಿನ ಪಂದ್ಯಗಳಲ್ಲಿ 73 ಬಾರಿ ಮತ್ತು ಟಿ 20 ಐನಲ್ಲಿ 9 ಬಾರಿ ಭಾರತವನ್ನು ಪ್ರತಿನಿಧಿಸಿದ್ದಾರೆ. https://twitter.com/JadhavKedar/status/1797561520609780069 https://twitter.com/mufaddal_vohra/status/1797562469306732823 https://kannadanewsnow.com/kannada/ex-brahmos-aerospace-engineer-nishant-agarwal-sentenced-to-life-imprisonment/ https://kannadanewsnow.com/kannada/workers-you-will-get-all-these-facilities-from-the-state-government/
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ಪಾಕಿಸ್ತಾನದ ಐಎಸ್ಐ ಪರವಾಗಿ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಮಾಜಿ ಬ್ರಹ್ಮೋಸ್ ಏರೋಸ್ಪೇಸ್ ಎಂಜಿನಿಯರ್ ನಿಶಾಂತ್ ಅಗರ್ವಾಲ್ಗೆ ನಾಗ್ಪುರ ನ್ಯಾಯಾಲಯ ಸೋಮವಾರ ಜೀವಾವಧಿ ಶಿಕ್ಷೆ ವಿಧಿಸಿದೆ. 2018 ರಲ್ಲಿ ಬಂಧಿಸಲ್ಪಟ್ಟ ಅಗರ್ವಾಲ್, ಬ್ರಹ್ಮೋಸ್ ಕ್ಷಿಪಣಿಯ ಬಗ್ಗೆ ರಹಸ್ಯ ಮಾಹಿತಿಯನ್ನು ಪಾಕಿಸ್ತಾನದ ಗುಪ್ತಚರ ಸಂಸ್ಥೆಗೆ ಬಹಿರಂಗಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ. ಭೂಮಿ, ವಾಯು, ಸಮುದ್ರ ಮತ್ತು ನೀರೊಳಗಿನ ವೇದಿಕೆಗಳ ಮೂಲಕ ನಿಯೋಜಿಸಬಹುದಾದ ಭಾರತದ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿ ತಂತ್ರಜ್ಞಾನದ ಮೇಲೆ ಕೇಂದ್ರೀಕರಿಸಿದ ಡಿಆರ್ಡಿಒ ಮತ್ತು ರಷ್ಯಾದ ಎನ್ಪಿಒ ಮಶಿನೋಸ್ಟ್ರೋಯೆನಿಯಾ ನಡುವಿನ ಸಹಯೋಗದ ಪ್ರಯತ್ನವಾದ ಬ್ರಹ್ಮೋಸ್ ಏರೋಸ್ಪೇಸ್ನಲ್ಲಿ ಸಿಸ್ಟಮ್ ಎಂಜಿನಿಯರ್ ಆಗಿ ಅವರು ಹಿರಿಯ ಸ್ಥಾನವನ್ನು ಹೊಂದಿದ್ದರು. 2018 ರ ಪ್ರಕರಣವು ಬ್ರಹ್ಮೋಸ್ ಏರೋಸ್ಪೇಸ್ ಮೇಲೆ ಪರಿಣಾಮ ಬೀರಿದ ಮೊದಲ ಗೂಢಚರ್ಯೆ ಹಗರಣವಾಗಿದೆ. ಪಾಕಿಸ್ತಾನದ ಗುಪ್ತಚರ ಏಜೆಂಟರು ಇಸ್ಲಾಮಾಬಾದ್ನಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ನಂಬಲಾದ ನೇಹಾ ಶರ್ಮಾ ಮತ್ತು ಪೂಜಾ ರಂಜನ್ ಎಂಬ ಎರಡು ಫೇಸ್ಬುಕ್ ಪ್ರೊಫೈಲ್ಗಳ ಮೂಲಕ ಅಗರ್ವಾಲ್ ಶಂಕಿತ ಪಾಕಿಸ್ತಾನಿ…
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧದ ಆರೋಪವನ್ನು ವಿವರಿಸಲು ಒಂದು ವಾರ ಕಾಲಾವಕಾಶ ಕೋರಿ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಸಲ್ಲಿಸಿದ್ದ ಮನವಿಯನ್ನು ಚುನಾವಣಾ ಆಯೋಗ ಸೋಮವಾರ ತಿರಸ್ಕರಿಸಿದೆ. ಲೋಕಸಭಾ ಚುನಾವಣೆಯ ಮತದಾನ ಮುಗಿದ ನಂತರ ಅಮಿತ್ ಶಾ ದೇಶಾದ್ಯಂತ 150 ಜಿಲ್ಲಾ ಮ್ಯಾಜಿಸ್ಟ್ರೇಟ್ಗಳಿಗೆ ಕರೆ ಮಾಡಿದ್ದಾರೆ ಎಂದು ರಮೇಶ್ ಆರೋಪಿಸಿದ್ದರು. “ಇಲ್ಲಿಯವರೆಗೆ, ಅವರು ಅವರಲ್ಲಿ 150 ಜನರೊಂದಿಗೆ ಮಾತನಾಡಿದ್ದಾರೆ. ಇದು ಬಿಜೆಪಿ ಎಷ್ಟು ಹತಾಶವಾಗಿದೆ ಎಂಬುದನ್ನು ತೋರಿಸುತ್ತದೆ. ಇದು ಸ್ಪಷ್ಟವಾಗಿ ಹೇಳಲಿ. ಜನರ ಇಚ್ಛೆ ಮೇಲುಗೈ ಸಾಧಿಸುತ್ತದೆ. ಜೂನ್ 4 ರಂದು ಶ್ರೀ ಮೋದಿ, ಶ್ರೀ ಶಾ ಮತ್ತು ಬಿಜೆಪಿ ನಿರ್ಗಮಿಸುತ್ತದೆ ಮತ್ತು ಭಾರತ ಜನಬಂಧನ್ ವಿಜಯಶಾಲಿಯಾಗಲಿದೆ. ಅಧಿಕಾರಿಗಳು ಯಾವುದೇ ಒತ್ತಡಕ್ಕೆ ಒಳಗಾಗಬಾರದು ಮತ್ತು ಸಂವಿಧಾನವನ್ನು ಎತ್ತಿಹಿಡಿಯಬೇಕು. ಅವರ ಮೇಲೆ ನಿಗಾ ಇಡಲಾಗಿದೆ ಎಂದು ರಮೇಶ್ ಹೇಳಿದ್ದಾರೆ. ಸೋಮವಾರ ಸಂಜೆ 7 ಗಂಟೆಯೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಚುನಾವಣಾ ಆಯೋಗ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಗೆ ನಿರ್ದೇಶನ…
ಮುಂಬೈ: ಇಲ್ಲಿನ ಮೀರಾ ರಸ್ತೆಯ ಬಳಿ ಆಘಾತಕಾರಿ ಘಟನೆ ನಡೆದಿದ್ದು, ಟರ್ಫ್ ಕ್ರಿಕೆಟ್ ಆಡುವಾಗ ಯುವಕನೊಬ್ಬ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಸಿಕ್ಸರ್ ಬಾರಿಸಿದ 7 ಸೆಕೆಂಡುಗಳ್ಲಲಿ ಹೃದಯಾಘಾತಕ್ಕೆ ಒಳಗಾದಂತ ಕ್ರಿಕೆಟಿಗ, ಮೈದಾನದಲ್ಲೇ ಜೀವ ಬಿಟ್ಟಿದ್ದಾನೆ. ಈಗ ಈ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿದೆ. ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ದಿನಾಂಕವಿಲ್ಲದ ವೀಡಿಯೊದಲ್ಲಿ, ಗುಲಾಬಿ ಜರ್ಸಿ ಧರಿಸಿದ ಯುವಕ ಟರ್ಫ್ ಕ್ರಿಕೆಟ್ನಲ್ಲಿ ತ್ವರಿತ ಶಾಟ್ ಆಡುತ್ತಿರುವುದು ಕಂಡುಬಂದಿದೆ. ಅವರು ಮತ್ತೆ ಬ್ಯಾಟಿಂಗ್ ಮಾಡಲು ಹೊರಟಾಗ, ಯುವಕ ಇದ್ದಕ್ಕಿದ್ದಂತೆ ನೆಲದ ಮೇಲೆ ಕುಸಿದುಬಿದ್ದನು ಮತ್ತು ಆಟಗಾರರು ಸಹಾಯ ನೀಡಲು ಅವನ ಬಳಿಗೆ ಧಾವಿಸಿದರು. ಆಟಗಾರರು ಅವನನ್ನು ಪುನರುಜ್ಜೀವನಗೊಳಿಸಲು ಪ್ರಯತ್ನಿಸುತ್ತಿರುವುದು ಕಂಡುಬಂದಿತು ಆದರೆ ಯುವಕ ನೆಲದ ಮೇಲೆ ಕುಸಿದುಬಿದ್ದ ನಂತರ ಪ್ರತಿಕ್ರಿಯಿಸಲಿಲ್ಲ. ಇಡೀ ಘಟನೆಯನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ. https://twitter.com/anwar0262/status/1797512310061437318 ವರದಿಯ ಪ್ರಕಾರ, ಮೀರಾ ರಸ್ತೆಯ ಕಾಶಿಮೀರಾ ಪ್ರದೇಶದಲ್ಲಿ ಟರ್ಫ್ ಕ್ರಿಕೆಟ್ ಆಡುತ್ತಿದ್ದಾಗ ಯುವಕನಿಗೆ ಹೃದಯಾಘಾತವಾಗಿದೆ. ಪ್ರಬಲ ಸಿಕ್ಸರ್ ಬಾರಿಸಿದ ನಂತರ, ಯುವ…
ಬೆಂಗಳೂರು: ಡಿಕೆ ಶಿವಕುಮಾರ್ ಗೆ ಮಾತ್ರವಲ್ಲ ನಮಗೂ ರಕ್ಷಣೆ ಮಾಡೋದಕ್ಕೆ ದೇವರು ಇದ್ದಾನೆ. ನಾನು ರಾಜರಾಜೇಶ್ವರಿ ದೇವಾಲಯಕ್ಕೆ ಹೋಗಿದ್ದು, ರಾಜರಾಜೇಶ್ವರಿ ದೇವರಿಗೇ ಇದನ್ನು ಬಿಡುತ್ತೇನೆ. ಆ ದೇವರೇ ಅವರಿಗೆ ಶಿಕ್ಷೆ ಕೊಡಲಿ ಎಂಬುದಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಇಂದು ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ನಮ್ಮ ಸರ್ಕಾರದ ನಾಶಕ್ಕೆ ನನ್ನ ಹಾಗೂ ಸಿಎಂ ವಿರುದ್ಧ ಶತ್ರು ಭೈರವಿ ಯಾಗ ಮಾಡಿಸಿದ್ದಾರೆ ಎನ್ನುವ ಕುರಿತಂತೆ ಮಾತನಾಡಿದರು. ಪುರಂದರ ದಾಸರು ಆಚಾರವಿಲ್ಲದ ನಾಲಿಗೆ, ನಿನ್ನ ನೀಚ ಬುದ್ದಿ ಬಿಡು ನಾಲಿಗೆ ಎಂದಿದ್ದಾರೆ. ಅದೇ ರೀತಿಯಲ್ಲಿ ಡಿಕೆ ಶಿವಕುಮಾರ್ ನಡೆಯಾಗಿದೆ ಎಂಬುದಾಗಿ ತಿರುಗೇಟು ನೀಡಿದರು. ಡಿಕೆ ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿದ್ದರೂ ಆ ಸ್ಥಾನದ ಗೌರವ, ಮೌಲ್ಯ ಏನು ಎಂಬುದೇ ಅವರಿಗೆ ಇನ್ನೂ ಅರ್ಥವಾಗಿಲ್ಲ. ಅವರು ನಮ್ಮ ಕುಟುಂಬವನ್ನು ಮುಗಿಸಲೇ ಬೇಕು ಅಂತ ಶ್ರಮ ಪಡುತ್ತಿದ್ದಾರೆ. ಅದರ ಮುಂದುವರೆದ ಭಾಗವೇ ಯಾಗದ ಮಾತಾಗಿದೆ. ಆದ್ರೇ ನಮ್ಮ ಕುಟುಂಬದಲ್ಲಿ ನನಗೆ ತಿಳುವಳಿಕೆ ಬಂದಾಗಿನಿಂದ ಕುರಿ,…














