Subscribe to Updates
Get the latest creative news from FooBar about art, design and business.
Author: kannadanewsnow09
ಹೊನ್ನಾವರ: ಇಲ್ಲಿನ ಗೇರುಸೊಪ್ಪ ಸಮೀಪದ ಸುಳಿಮುರ್ಕಿ ಕ್ರಾಸ್ ನಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಪಲ್ಟಿಯಾಗಿದ್ದು, ಓರ್ವ ಯುವಕ ಸಾವನ್ನಪ್ಪಿದ್ದಾನೆ ಎಂಬುದಾಗಿ ತಿಳಿದು ಬಂದಿದೆ. ಅಲ್ಲದೇ ಈ ಅಪಘಾತದಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿರುವುದಾಗಿ ಹೇಳಲಾಗುತ್ತಿದೆ. ಬೆಂಗಳೂರಿನಿಂದ ಭಟ್ಕಳಕ್ಕೆ ತೆರಳುತ್ತಿದ್ದಂತ ಕೆ ಎಸ್ ಆರ್ ಟಿ ಸಿ ಬಸ್ ಹೊನ್ನಾವರದ ಗೇರುಸೊಪ್ಪ ಬಳಿಯಲ್ಲಿ ಪಲ್ಟಿಯಾಗಿದೆ. ಈ ಬಸ್ಸಿನಲ್ಲಿ 40 ಪ್ರಯಾಣಿಕರಿದ್ದರು ಎನ್ನಲಾಗುತ್ತಿದೆ. ಬಸ್ ಪಲ್ಟಿಯಾಗಿದ್ದರಿಂದ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ಹೇಳಲಾಗುತ್ತಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಪ್ರಯಾಣಿಕರ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಇನ್ನೂ ಬಸ್ ಪಲ್ಟಿಯಿಂದಾಗಿ 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದ್ದು, ಅವರಿಗೆ ಹೊನ್ನಾವರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದು ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ್ ವೈದ್ಯ ಭೇಟಿ ನೀಡಿ ಆರೋಗ್ಯ ವಿಚಾರಿಸುತ್ತಿದ್ದಾರೆ. https://kannadanewsnow.com/kannada/should-you-complain-to-chief-minister-siddaramaiah-just-do-this-your-problem-will-be-cleared/ https://kannadanewsnow.com/kannada/haveri-26th-annual-festival-of-goddess-tulja-bhavani-to-be-held-on-november-3/
ಹಾವೇರಿ: ಜಿಲ್ಲೆಯಲ್ಲಿ ಪ್ರಸಿದ್ಧ ಜಾತ್ರೆಗಳಲ್ಲಿ ಒಂದು ಅಕ್ಕಿ ಆಲೂರಿನ ಶ್ರೀ ತುಳಜಾಭವಾನಿ ದೇವಿಯದ್ದು. ನವೆಂಬರ್.3, 2025ರಂದು 26ನೇ ವರ್ಷದ ಜಾತ್ರಾ ಮಹೋತ್ಸವವನ್ನು ನಡೆಸಲು ನಿಗದಿ ಪಡಿಸಲಾಗಿದೆ. ಈ ಕುರಿತಂತೆ ಶ್ರೀ ತುಳಜಾಭವನಾನಿ ದೇವಸ್ಥಾನದ ಆಡಳಿತ ಮಂಡಳಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಅಕ್ಕಿಆಲೂರು ಗ್ರಾಮದ ಡೊಳ್ಳೇಶ್ವರ ಕ್ರಾಸ್ ಹತ್ತಿರದಲ್ಲಿರುವಂತ ಶ್ರೀ ತುಳಜಾಭವಾನಿ ದೇವಿಯ 26ನೇ ಜಾತ್ರಾ ಮಹೋತ್ಸವವನ್ನು ನವೆಂಬರ್.3ರಂದು ನಡೆಸಲಾಗುತ್ತಿದೆ ಎಂಬುದಾಗಿ ತಿಳಿಸಿದೆ. ನವೆಂಬರ್.3ರ ಸೋಮವಾರದಂದು ಬೆಳಗ್ಗೆ 5 ಗಂಟೆಗೆ ಶ್ರೀ ತುಳಜಾಭವಾನಿ ದೇವಿಗೆ ಸಕಲ ಮಂಗಲ ದ್ರವ್ಯಗಳ ಅಭಿಷೇಕದೊಂದಿಗೆ ಪೂಜೆ ಪ್ರಾರಂಭವಾಗಲಿದೆ. ಬೆಳಗ್ಗೆ 6 ಗಂಟೆಗೆ ಕುಂಭಗಳೊಂದಿಗೆ ದೇವಿಯ ಉತ್ಸವ ಮೂರ್ತಿಯ ಭವ್ಯ ಮೆರವಣಿಗೆ ಸಕಲ ವಾದ್ಯ ವೃಂದಗಳೊಂದಿಗೆ ಅಕ್ಕಿ ಆಲೂರು ನಗರ ಪ್ರದಕ್ಷಿಣೆ ಬಳಿಕ ದೇವಸ್ಥಾನಕ್ಕೆ ಆಗಮಿಸಲಿದೆ ಎಂದಿದೆ. ಇನ್ನೂ ಮಧ್ಯಾಹ್ನ 1 ಗಂಟೆಗೆ ಶ್ರೀ ತುಳಜಾಭವಾನಿ ದೇವಿಯ ಮಹಾಮಂಗಳಾರತಿಯು ಜರುಗಲಿದೆ. ಹಾನಗಲ್ ತಾಲ್ಲೂಕಿನ ಅಕ್ಕಿ-ಆಲೂರು ಡೊಳ್ಳೇಶ್ವರ ಕ್ರಾಸ್ ಹತ್ತಿರ ಪ್ರತಿಷ್ಠಾಪಿಸಿರುವಂತ ಶ್ರೀ…
ಬೆಂಗಳೂರು: ಬೆಳಗಾವಿ ವಿಚಾರದಲ್ಲಿ ರಾಜಿ ಇಲ್ಲ. ಮಹಾಜನ್ ವರದಿಯೇ ಅಂತಿಮ. ಬೆಳಗಾವಿ ಕನ್ನಡದ ನೆಲ, ಕರ್ನಾಟಕದ ಭಾಗ. ಇದನ್ನು ಅಲ್ಲಗಳೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸಿಎಂ ಸಿದ್ಧರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಆ ಮೂಲಕ ಬೆಳಗಾವಿ ಕರ್ನಾಟಕ ಒಂದು ಭಾಗ, ಯಾವುದೇ ಕಾರಣಕ್ಕೂ ಮಹಾರಾಷ್ಟ್ರಕ್ಕೆ ಸೇರಲು ಬಿಡುವುದಿಲ್ಲ ಎಂಬುದಾಗಿ ತಿಳಿಸಿದ್ದಾರೆ. ಮೈಸೂರು ಬ್ಯಾಂಕ್ ವೃತ್ತದ ನೃಪತುಂಗ ಮಂಟಪದಲ್ಲಿ ಭುವನೇಶ್ವರಿ ಹಾಗೂ ಅಣ್ಣಮ್ಮ ದೇವತೆಯ ವೈಭವದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು. ನಾವೆಲ್ಲರೂ ಕನ್ನಡ ನೆಲ, ಜಲ, ಭಾಷೆ, ಸಂಸ್ಕೃತಿ ಬಗ್ಗೆ ಅಭಿಮಾನ, ಪ್ರೀತಿ ಬೆಳೆಸಿಕೊಳ್ಳಬೇಕು. ನಮ್ಮ ನೆಲದಲ್ಲಿ ಕನ್ನಡದ ವಾತಾವರಣ ಬೆಳೆಸಬೇಕು. ಇದಕ್ಕಾಗಿ ಯಾರು ಯಾವುದೇ ಭಾಷೆಯಲ್ಲಿ ಮಾತನಾಡಿದರೂ ನೀವು ಕನ್ನಡದಲ್ಲೇ ಉತ್ತರ ಕೊಡಬೇಕು ಎಂದು ಕರೆ ನೀಡಿದರು. ಕನ್ನಡ ನೆಲದಲ್ಲಿ ಬದುಕು ಕಟ್ಟಿಕೊಂಡ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಗೌರವಿಸುತ್ತಾರೆ. ಕನ್ನಡ ನೆಲದಲ್ಲಿ ನಾವು ಕನ್ನಡದಲ್ಲೇ ಮಾತಾಡುತ್ತೇವೆ ಎನ್ನುವ ಶಪಥ ಮಾಡೋಣ ಎಂದು ಕರೆ ನೀಡಿದರು. ನಮ್ಮ ಭೂಮಿ, ನಮ್ಮ ನೆಲ, ನಮ್ಮ ಜಲ,…
ಬೆಂಗಳೂರು : ರಾಜ್ಯದ ಮುಖ್ಯಮಂತ್ರಿಯಾಗಿ ಯಾರ ಹೆಸರನ್ನೂ ನಾನು ಪ್ರಶಸ್ತಿಗೆ ಶಿಫಾರಸ್ಸು ಮಾಡಿಲ್ಲ. ಆಯ್ಕೆ ಸಮಿತಿ ತೀರ್ಮಾನವೇ ಅಂತಿಮವಾಗಿ ಆಯ್ಕೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ “70ನೇ ಕರ್ನಾಟಕ ರಾಜ್ಯೋತ್ಸವವನ್ನು ಉದ್ಘಾಟಿಸಿ 70 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿ ಮಾತನಾಡಿದರು. ಕರ್ನಾಟಕ ಉದಯವಾಗಿ 70 ವರ್ಷಗಳಾಗಿರುವುದನ್ನು ಪರಿಗಣಿಸಿ 70 ಮಂದಿ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದರು. ಅರ್ಜಿ ಹಾಕಿದವರನ್ನು ಪರಿಗಣಿಸದೇ ಆಯಾ ಕ್ಷೇತ್ರದ ಪರಿಣಿತರನ್ನೇ ಗುರುತಿಸಿ ಆಯ್ಕೆ ಮಾಡಬೇಕು ಎನ್ನುವುದು ನಮ್ಮ ತೀರ್ಮಾನವಾಗಿತ್ತು. ಪುರಸ್ಕೃತರೆಲ್ಲರೂ ಶತಾಯುಶಿಗಳಾಗಿ ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಇನ್ನಷ್ಟು ಸಾಧನೆ ಮಾಡಿ ನಿಮ್ಮದೆಲ್ಲಾ ಸಾರ್ಥಕ ಬದುಕು ಆಗಲಿ ಎಂದು ಹಾರೈಸಿದರು. ಒಂದೇ ವಿಭಾಗದಲ್ಲಿ ಒಬ್ಬರಿಗಿಂತ ಹೆಚ್ಚು ಸಾಧಕರ ಹೆಸರು ಇದ್ದ ಸಂದರ್ಭದಲ್ಲಿ ಮಾತ್ರ ಪ್ರಾದೇಶಿಕ ನ್ಯಾಯ, ಸಾಮಾಜಿಕ ನ್ಯಾಯದ ಕಾರಣಕ್ಕಾಗಿ ಆ ಅರ್ಹರಲ್ಲೇ ಒಬ್ಬರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದರು. ಮಾಧ್ಯಮಗಳು ಯಾರ…
ಬೆಂಗಳೂರು: ನಗರದಲ್ಲಿ ಕೊಳೆತ ಸ್ಥಿತಿಯಲ್ಲಿ ಎಂಬಿಎ ವಿದ್ಯಾರ್ಥಿನಿಯೊಬ್ಬಳ ಶವ ಪತ್ತೆಯಾಗಿದೆ. ಆ ಮೂಲಕ ಹಲವು ಅನುಮಾನಗಳಿಗೆ ಕಾರಣವಾಗಿದೆ. ಬೆಂಗಳೂರಿನ ಗಾಯತ್ರಿನಗರದ ರೈಲ್ವೆ ಪ್ಯಾರಲರ್ ರಸ್ತೆಯ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಎಂಬಿಎ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ. ದಾವಣಗೆರೆ ಮೂಲದ ಸುಪ್ರಿಯಾ(25) ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದಂತ ಎಂಬಿಎ ವಿದ್ಯಾರ್ಥಿನಿಯಾಗಿದ್ದಾಳೆ. ಬೈಕ್ ರೈಡಿಂಗ್ ತರಬೇತಿ ಪಡೆಯುತ್ತಿದ್ದಂತ ಸುಪ್ರಿಯಾ ಈಗ ಶವವಾಗಿ ಪತ್ತೆಯಾಗಿದ್ದಾಳೆ. ಸುಪ್ರಿಯಾ ವಾಸವಾಗಿದ್ದ ಕೊಠಡಿ 2 ದಿನದಿಂದ ಲಾಕ್ ಆಗಿತ್ತು. ಪೋಷಕರು ಕರೆ ಮಾಡಿದರೂ ಸ್ವೀಕರಿಸುತ್ತಿರಲಿಲ್ಲ. ಈ ಹಿನ್ನಲೆಯಲ್ಲಿ ಮನೆ ಮಾಲೀಕರಿಗೆ ಕರೆ ಮಾಡಿ ಪೋಷಕರು ವಿಷಯ ತಿಳಿಸಿದ್ದಾರೆ. ಕೊಠಡಿಗೆ ಭೇಟಿ ನೀಡಿ, ಭಾಗಿಲು ಹೊಡೆದು ನೋಡಿದಾಗ ಸುಪ್ರಿಯಾ ಶವ ಪತ್ತೆಯಾಗಿದೆ. ಸ್ಥಳಕ್ಕೆ ಸುಬ್ರಹ್ಮಣ್ಯನಗರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. https://kannadanewsnow.com/kannada/there-is-no-question-of-giving-up-even-an-inch-of-land-in-kannada-nadu-to-other-states-mla-gopalakrishna-belur/ https://kannadanewsnow.com/kannada/withdrawal-of-cases-against-kannada-activists-cm-siddaramaiah-announces/
ಮಂಗಳೂರು: ಮಂಗಳೂರಿನ ಬಿಜೈಯ ಹಿರಿಯ ನಾಗರಿಕ ಮಹಿಳೆಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ, ಸುಮಾರು 17 ಲಕ್ಷ ರೂಪಾಯಿ ವರ್ಗಾಯಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಹಣ ವಂಚಕರ ಪಾಲಾಗದಂತೆ ತಡೆದ ಪೊಲೀಸರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಅಭಿನಂದಿಸಿದರು. ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಡಿಸಿಪಿಗಳಾದ ಮಿಥುನ್ ಹಾಗೂ ರವಿಶಂಕರ್ ಅವರನ್ನು ಸಚಿವರು ಅಭಿನಂದಿಸಿದರು. ಬಳಿಕ ಪ್ರಕರಣದ ಬಗ್ಗೆ ಮಾಹಿತಿ ಪಡೆದ ಸಚಿವರು, ಹಿರಿಯ ನಾಗರಿಕರಿಗೆ ವಂಚನೆ ಆಗುವುದು ತಪ್ಪಿತು. ಉತ್ತಮ ಕೆಲಸ ಮಾಡಿದ ನಿಮ್ಮ ಸೇವೆ ಹೀಗೆ ಮುಂದುವರಿಯಲಿ ಎಂದು ಹೇಳಿದರು. ಈ ವೇಳೆ ಯುವ ಕಾಂಗ್ರೆಸ್ ಮುಖಂಡರಾದ ಮಿಥುನ್ ರೈ ಉಪಸ್ಥಿತರಿದ್ದರು. https://kannadanewsnow.com/kannada/big-news-priority-given-to-teaching-kannada-in-karnatakas-madrasas-cms-announcement/ https://kannadanewsnow.com/kannada/there-is-no-question-of-giving-up-even-an-inch-of-land-in-kannada-nadu-to-other-states-mla-gopalakrishna-belur/
ಬೆಂಗಳೂರು: ಸಾರ್ವಜನಿಕ ಗ್ರಂಥಾಲಯಗಳಿಗೆ ಕನ್ನಡ ಪುಸ್ತಕಗಳನ್ನು ಸಗಟು ಖರೀದಿ ಮಾಡುವ ಬಗ್ಗೆ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಕಳೆದ 4-5 ವರ್ಷಗಳಿಂದ ಸಾರ್ವಜನಿಕ ಗ್ರಂಥಾಲಯಗಳಿಗೆ ಕನ್ನಡ ಪುಸ್ತಕಗಳ ಸಗಟು ಖರೀದಿ ಆಗಿಲ್ಲ ಎಂಬ ಬಗ್ಗೆ ನನಗೆ ಮಾಧ್ಯಮಗಳ ಮೂಲಕ ತಿಳಿಯಿತು ಹಾಗೂ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಪ್ನ ಪುಸ್ತಕ ಮಳಿಗೆಯಲ್ಲಿ ನಡೆದ ಪುಸ್ತಕ ಜಾತ್ರೆಯಲ್ಲಿ ಪಾಲ್ಗೊಂಡಿದ್ದ ಅನೇಕ ಪ್ರಕಾಶಕರು ಈ ವಿಷಯದ ಬಗ್ಗೆ ನನ್ನ ಗಮನ ಸೆಳೆದಿದ್ದಾರೆ ಎಂಬ ಅಂಶವನ್ನು ಕೇಂದ್ರ ಸಚಿವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ನಾಡಿನಲ್ಲಿ ಓದುವ ಸಂಸ್ಕೃತಿ ಬೆಳೆಯಬೇಕು. ಯುವ ಜನರು ಮೊಬೈಲ್ ನಲ್ಲಿ ಕಳೆದುಹೋಗುವ ಬದಲು ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಓದಿನ ಸಂಸ್ಕೃತಿಯನ್ನು ಉತ್ತೇಜಿಸುವ ಕೆಲಸವನ್ನು ನಾವು ನೀವೆಲ್ಲರೂ ಸೇರಿ ಮಾಡಬೇಕಿದೆ. ವಿಪುಲವಾಗಿ ಬೆಳೆದಿರುವ ಕನ್ನಡ ಸಾಹಿತ್ಯವನ್ನು ಮಾತೃಪ್ರೀತಿಯಿಂದ ನೋಡಬೇಕಾದದ್ದು ನಮ್ಮೆಲ್ಲರ ಕರ್ತವ್ಯ ಎಂದು ಕುಮಾರಸ್ವಾಮಿ ಸಿಎಂ ಅವರನ್ನು ಕೋರಿದ್ದಾರೆ. ಸಾಮಾನ್ಯರು ಓದುವ ಸಾರ್ವಜನಿಕ ಗ್ರಂಥಾಲಯಗಳಲ್ಲಿ ಭಾಷಾಭಿಮಾನ…
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಮನವಿಯ ಮೇರೆಗೆ ಕೇಂದ್ರ ಸರ್ಕಾರವು ಮಾವು ಬೆಳೆಗಾರರಿಗೆ ಒಳ್ಳೆಯ ಸುದ್ದಿ ನೀಡಿದೆ. ಕರ್ನಾಟಕದಲ್ಲಿ ಮಾವಿನ ಬೆಳೆಗಾರರಿಗೆ ಕೊರತೆ ಬೆಲೆ ಪಾವತಿ ಮಾಡುವುದು ಹಾಗೂ ಮಾರುಕಟ್ಟೆ ಮಧ್ಯಸ್ಥಿಕೆಗೆ ಕೇಂದ್ರದ ಅನುಮೋದನೆ ನೀಡಿದ್ದು, ಇದರಿಂದ ಬೆಲೆ ಕುಸಿತದಿಂದ ಕಂಗಾಲಾಗಿದ್ದ ಮಾವು ಬೆಳೆಗಾರರಿಗೆ ಅನುಕೂಲ ಆಗಲಿದೆ. ಈ ಬಗ್ಗೆ ಮಾಜಿ ಪ್ರಧಾನಿಗಳು 22 ಜೂನ್ 2025 ರಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಮಾಜಿ ಪ್ರಧಾನಿಗಳ ಮನವಿಗೆ ಸ್ಪಂದಿಸಿರುವ ಕೇಂದ್ರ ಸಚಿವರು ಮಾವು ಬೆಳೆಗಾರರಿಗೆ ನೆರವಿನ ಹಸ್ತ ಚಾಚಿದ್ದಾರೆ. ಕರ್ನಾಟಕದ ಮಾವು ಬೆಳೆಗಾರರನ್ನು ಬೆಂಬಲಿಸಲು ಕೇಂದ್ರ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಬೇಕು. ಕಡಿಮೆ ಇಳುವರಿ, ಹವಾಮಾನ ವೈಪರಿತ್ಯ ಮತ್ತು ಮಾವಿನಹಣ್ಣಿನ ಅಂತರಾಜ್ಯ ಸಾಗಣೆಯ ಮೇಲಿನ ನಿರ್ಬಂಧಗಳಿಂದ ಉಂಟಾದ ತೀವ್ರ ಬೆಲೆ ಕುಸಿತದ ಬಗ್ಗೆ ಮಾಜಿ ಪ್ರಧಾನಿಗಳು ಪತ್ರದಲ್ಲಿ ಉಲ್ಲೇಖಿಸಿದ್ದರು. ಈ ಸಮಸ್ಯೆಗಳಿಂದ ವಿಶೇಷವಾಗಿ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಮತ್ತು…
ಬೆಂಗಳೂರು: 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೈಗೊಂಡ ನಿರ್ಣಯ ಕಾರ್ಯಗತಕ್ಕೆ ಸಭೆ ಕರೆಯಲು ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಇವರಾಜ್ ತಂಗಡಗಿಗೆ MLC ದಿನೇಶ್ ಗೂಳಿಗೌಡ ಪತ್ರ ಬರೆದು ಮನವಿ ಮಾಡಿದ್ದಾರೆ. ಈ ಕುರಿತಂತೆ ಪತ್ರ ಬರೆದಿರುವಂತ ಅವರು, ಹಿರಿಯ ಸಾಹಿತಿ ಗೊ.ರು.ಚನ್ನಬಸಪ್ಪ ಅವರ ಅಧ್ಯಕ್ಷತೆಯಲ್ಲಿ ಮಂಡ್ಯದಲ್ಲಿ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ಭಾಷೆ, ಸಂಸ್ಕೃತಿ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದಂತೆ ಆರು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿತ್ತು. ಈ ಎಲ್ಲ ವಿಷಯಗಳನ್ನು ಅನುಮೋದಿಸಿ, ಅವುಗಳನ್ನು ಶೀಘ್ರವಾಗಿ ಅನುಷ್ಠಾನಗೊಳಿಸಬೇಕಿದ್ದು, ಈ ನಿಟ್ಟಿನಲ್ಲಿ ಸಭೆ ಕರೆದು ಸೂಕ್ತ ತೀರ್ಮಾನವನ್ನು ತೆಗೆದುಕೊಳ್ಳಬೇಕಿದೆ ಎಂದಿದ್ದಾರೆ. ಕನ್ನಡ ರಾಜ್ಯೋತ್ಸವದ ಈ ಶುಭ ಸಂದರ್ಭದಲ್ಲಿ ಕನ್ನಡದ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕೆಳಕಂಡ ಪ್ರಮುಖ ನಿರ್ಣಯಗಳನ್ನು ತಕ್ಷಣ ಕಾರ್ಯಗತಗೊಳಿಸುವ ಸಂಬಂಧ ತಕ್ಷಣ ತಮ್ಮ ಅಧ್ಯಕ್ಷತೆಯಲ್ಲಿ ಸಂಬಂಧಪಟ್ಟ ಎಲ್ಲರನ್ನು ಆಹ್ವಾನಿಸಲು ಮನವಿ ಮಾಡಿದ್ದಾರೆ. ಸಮ್ಮೇಳನಾಧ್ಯಕ್ಷರಾದ ಗೊ.ರು.ಚನ್ನಬಸಪ್ಪ ಅವರ…
ಹಾಸನ: ಜಿಲ್ಲೆಯಲ್ಲಿ ಹಿರಿಯ ಅಧಿಕಾರಿಯೊಬ್ಬರು ಸಾರ್ವಜನಿಕವಾಗಿ ಶಿರಸ್ತೇದಾರ್ ಒಬ್ಬರನ್ನು ನಿಂದಿಸಿರುವಂತ ಘಟನೆ ಬೆಳಕಿಗೆ ಬಂದಿದೆ. ದಲಿತ ಎನ್ನುವ ಕಾರಣಕ್ಕಾಗಿ ಉಪ ವಿಭಾಗಾಧಿಕಾರಿಯಿಂದ ನಿಂದನೆಗೆ ಒಳಗಾದಂತ ಶಿರಸ್ತೇದಾರ್ ಛೇ ದಲಿತನಾಗಿ ಹುಟ್ಟಿದ್ದೇ ತಪ್ಪಾ ಎನ್ನುವ ಅವಮಾನದಿಂದ ಸ್ವಯಂ ನಿವೃತ್ತಿಗೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ರಾಜ್ಯದಲ್ಲಿ ನಡೆಯುತ್ತಿದ್ದಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ಕೆ ಸಕಲೇಶಪುರ ಉಪವಿಭಾಗಾಧಿಕಾರಿ ರಾಜೇಶ್ ಅವರು, ಅರಕಲಗೂಡು ತಹಶೀಲ್ದಾರ್ ಹಾಗೂ ತಹಶೀಲ್ದಾರ್ ಗ್ರೇಡ್-2 ಪ್ರಭಾರ ಆಗಿದ್ದಂತ ಸ್ವಾಮಿ.ಸಿ ಅವರನ್ನು ನೇಮಿಸಲಾಗಿತ್ತು. ಸಮೀಕ್ಷೆಯ ಕಾರ್ಯದಿಂದಾಗಿ ತಹಶೀಲ್ದಾರ್ ಹಾಗೂ ತಹಶೀಲ್ದಾರ್ ಗ್ರೇಡ್-2 ಪ್ರಭಾರ ಸ್ವಾಮಿ.ಸಿ ಒಂದೇ ಕಾರಿನಲ್ಲಿ ತೆರಳುತ್ತಿದ್ದದ್ದನ್ನು ಎಸಿ ರಾಜೇಶ್ ಗಮನಿಸಿದ್ದಾರೆ. ಅಲ್ಲದೇ ತಹಶೀಲ್ದಾರ್ ಕಾರಿನ ಮುಂದಿನ ಸೀಟಿನಲ್ಲಿ ಕುಳಿತಿದ್ದರಿಂದ ಕೆಂಡಾಮಂಡಲವಾಗಿರುವಂತ ಎಸಿ ರಾಜೇಶ್, ಕಾರು ನಿಲ್ಲಿಸಿ ನಡು ರಸ್ತೆಯಲ್ಲೇ ಪ್ರಭಾರ ತಹಶೀಲ್ದಾರ್ ಗ್ರೇಡ್-2 ಆಗಿದ್ದಂತ ಸ್ವಾಮಿ.ಸಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ತಹಶೀಲ್ದಾರ್ ವಾಹನದಲ್ಲಿ ತಹಶೀಲ್ದಾರ್ ಸೀಟಿನಲ್ಲಿ ಕುಳಿತುಕೊಳ್ಳಲು ಯಾರು ನಿನಗೆ ಅನುಮತಿ ನೀಡಿದ್ದು? ಕಾರಿನಿಂದ ಇಳಿ ಎಂಬುದಾಗಿ ಇಳಿಸಿ ಅವಮಾನಿಸಿದ್ದಾರೆ ಎಂಬುದಾಗಿ…














