Author: kannadanewsnow09

ತಾಯಿ ಮಹಾಲಕ್ಷ್ಮಿ ಹಣದ ಅಧಿಪತಿ. ಮಾತೆ ಮಹಾಲಕ್ಷ್ಮೀ ಯ ಕೃಪೆಗೆ ಪಾತ್ರರಾದರೆ ಹಣಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆ ಎದುರಾಗುವುದಿಲ್ಲ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ಹಣದ ವಿಚಾರದಲ್ಲಿ ಸಾಲವು ಒಂದು ದೊಡ್ಡ ಸಮಸ್ಯೆಯಾಗಿದೆ. ಆದಾಯದಲ್ಲಿ ಕೊರತೆಯಾದರೆ ಅದನ್ನು ಸರಿಪಡಿಸಿಕೊಳ್ಳಲು ಬೇರೆಯವರಿಂದ ಸಾಲ ಮಾಡಬೇಕಾದ ಪರಿಸ್ಥಿತಿ ಬರುತ್ತದೆ. ಅಂತಹ ಸಾಲಗಳನ್ನು ಮರುಪಾವತಿಸಲು ನಗದು ಒಳಹರಿವು ಹೆಚ್ಚಾಗಬೇಕು. ಈ ಹಣದ ಹರಿವನ್ನು ಹೆಚ್ಚಿಸುವ ದೇವತೆ ತಾಯಿ ಮಹಾಲಕ್ಷ್ಮಿ. ನಾವು ಹೇಗೆ ನೋಡಿದರೂ, ಆರ್ಥಿಕವಾಗಿ ಏನೇ ಸಮಸ್ಯೆ ಇದ್ದರೂ ಜೀವನದಲ್ಲಿ ಒಳ್ಳೆಯ ಸ್ಥಾನಮಾನಕ್ಕೆ ಬರಬೇಕೆಂದು ಆಶೀರ್ವದಿಸುವ ದೇವತೆ ಮಾತೆ ಮಹಾಲಕ್ಷ್ಮೀ. ಅಂತಹ ಮಾತೆ ಮಹಾಲಕ್ಷ್ಮಿಯನ್ನು ಆಲೋಚಿಸಿ ಮಾಡಬಹುದಾದ ತಾಂತ್ರಿಕ ಪರಿಹಾರದ ಬಗ್ಗೆ ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ ನಾವು ನೋಡಲಿದ್ದೇವೆ . ಅತ್ಯಂತ ಸರಳವಾಗಿ ಮತ್ತು ಯಾವುದೇ ತೊಂದರೆಯಿಲ್ಲದೆ ಮಾಡಬಹುದಾದ ಪರಿಹಾರವನ್ನು ತಾಂತ್ರಿಕ ಪರಿಹಾರ ಎಂದು ಕರೆಯಲಾಗುತ್ತದೆ. ಆ…

Read More

ಶಿವಮೊಗ್ಗ: ನಾಳೆ ಸೊರಬ ತಾಲ್ಲೂಕಿನ ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ರಕ್ತದಾನ ಮಾಡುವಂತೆ ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪೃಥ್ವಿ.ಆರ್ ವಿನಂತಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ನಾಳೆ ಶಿವಮೊಗ್ಗ ಜಿಲ್ಲಾ ಆರೋಗ್ಯ ಕಲ್ಯಾಣಾಧಿಕಾರಿಗಳು, ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಯ ರಕ್ತನಿಧಿ ಘಟಕ, ಸೊರಬ ತಾಲ್ಲೂಕು ಆರೋಗ್ಯಾಧಿಕಾರಿಗಳು, ದೂಗೂರು, ಉಳವಿ, ನಿಸರಾಣಿ, ಹೆಗ್ಗೋಡು ಗ್ರಾಮ ಪಂಚಾಯ್ತಿ, ಧರ್ಮಸ್ಥಳ ಸ್ವ ಸಹಾಯ ಸಂಘ, ಸ್ತ್ರೀಶಕ್ತಿ ಸಂಘ ಹಾಗೂ ಉಳವಿ ಲಯನ್ಸ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ. ಕನಿಷ್ಠ 45 ಕೆಜಿ ತೂಕವಿರುವಂತ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಬಹುದು 18 ರಿಂದ 60 ವರ್ಷದ ಒಳಗಿನ ಎಲ್ಲಾ ಆರೋಗ್ಯವಂತರು ರಕ್ತವನ್ನು ನೀಡಬಹುದು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ರಕ್ತದಾನ ಮಾಡುವಂತೆ…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯದ ವಿವಿಧ ಸರ್ಕಾರಿ ಇಲಾಖೆಯಲ್ಲಿ ಗುತ್ತಿಗೆ, ಹೊರಗುತ್ತಿಗೆ ನೌಕರರಾಗಿ ಕಾರ್ಯನಿರ್ವಹಿಸುತ್ತಿರುವಂತ ನೌಕರರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಅದೇ ಸರ್ಕಾರಿ ಇಲಾಖೆಯ ಗುತ್ತಿಗೆ ಹೊರಗುತ್ತಿಗೆ ನೌಕರರಿಗೆ, ಅವರ ಅವಲಂಬಿತರಿಗೆ 5 ಲಕ್ಷ ರೂಪಾಯಿಯವರೆಗೆ ಉಚಿತ ಆರೋಗ್ಯ ವಿಮೆ ಜಾರಿಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಮತ್ತು ಗೌರವಧನದ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸುಮಾರು 3 ಲಕ್ಷ ಸಿಬ್ಬಂದಿಗಳು ಮತ್ತು ಅವರ ಅವಲಂಬಿತರಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ವಾರ್ಷಿಕವಾಗಿ 5.00 ಲಕ್ಷಗಳವರೆಗೆ ನಗದು ರಹಿತ ಆರೋಗ್ಯ ಯೋಜನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸಿಬ್ಬಂದಿಗಳಿಂದ ಮಾಸಿಕ 100 ರೂ.ಗಳ ವಂತಿಗೆ ಮತ್ತು ಸರ್ಕಾರದಿಂದ ಉಳಿಕೆ ಹಣವನ್ನು ಭರಿಸಲು ನಿರ್ಧರಿಸಲಾಗಿದೆ. ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆಯಡಿ ರಾಜ್ಯದ ದುರ್ಗಮ ಪ್ರದೇಶದ ಸಂಪರ್ಕ ರಹಿತ ಪ್ರದೇಶಗಳಿಗೆ ಪ್ರಾಥಮಿಕ…

Read More

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ ಸಂತೋಷ್ ಸದ್ಗುರು ( Santhosh Sadguru ) ಸದಾ ಒಂದಿಲ್ಲೊಂದು ಹೊಸತಿನ ಪ್ರಯೋಗಕ್ಕಿಳಿಯುವ ಸೃಜನಶೀಲ ಕಲೆಗಾರ. ಆರ್ ಸಿ ಬಿ ತಂಡದ ಅಪ್ಪಟ ಅಭಿಮಾನಿ. ಅವರೀಗ ಮಲೆನಾಡಿನ ಹಸಿರ ಸೊಬಗನ್ನು ಪ್ರೇಕ್ಷಕರ ಮುಂದಿಡುವಂತ ಪ್ರಯತ್ನ ಮಾಡಿದ್ದಾರೆ. ಇದರ ಭಾಗವಾಗಿ ನಾಳೆ ಸಂಜೆ 7 ಗಂಟೆಗೆ ಅವರ ಮಲ್ನಾಡ್ ಯಾನ ಆಲ್ಬಂ ಸಾಂಗ್ ( Malnad Yana Alubum Song ) ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಲಿದೆ. ಈ ಬಗ್ಗೆ ಕನ್ನಡ ನ್ಯೂಸ್ ನೌ ಜೊತೆಗೆ ಮಾಹಿತಿ ಹಂಚಿಕೊಂಡಿರುವಂತ ಅವರು, ಮಲೆನಾಡಿಗೆ ತನ್ನದೇ ಆದಂತ ಭಾಷಣೆ, ಸಂಸ್ಕೃತಿ ಇದೆ. ಆ ಕಲ್ಚರ್ ಅನ್ನು ನೋಡುಗರಿಗೆ ಮಲ್ನಾಡ್ ಯಾನದ ಮೂಲಕ ತೋರಿಸುವಂತ ಪ್ರಯತ್ನವನ್ನು ಮಾಡಿದ್ದೇನೆ ಎಂದು ತಿಳಿಸಿದರು. ಮಲ್ನಾಡ್ ಯಾನ ಆಲ್ಬಂ ಸಾಂಗ್ ಅನ್ನು ತೀರ್ಥಹಳ್ಳಿ, ಹೊಸನಗರ, ಸಾಗರ ಹಾಗೂ ಶರಾವತಿ ಮುಳುಗಡೆ ಪ್ರದೇಶಗಳಲ್ಲಿ ಚಿತ್ರೀಕರಿಸಲಾಗಿದೆ. ಕಳೆದ ವರ್ಷ 2500 ಮಿಮೀ ಮಳೆಯಾಗಿತ್ತು. ಇದರ ನಡುವೆಯೂ ಚಿತ್ರೀಕರಿಸಿ, ಹಸಿರ ದೃಶ್ಯ…

Read More

ಬೆಂಗಳೂರು: ಬೈಕಿನಲ್ಲಿ ತೆರಳುತ್ತಿದ್ದಂತ ಅಕ್ಷಯ್ ಮೇಲೆ ಮರದ ಕೊಂಬೆ ಬಿದ್ದು ತಲೆಗೆ ಗಂಭೀರ ಪೆಟ್ಟಾಗಿತ್ತು. ಕೋಮಾಕ್ಕೆ ಜಾರಿದ್ದಂತ ಅವರಿಗೆ ಚಿಕಿತ್ಸೆ ಫಲಕಾರಿಯಾಗಲೇ ಮೃತಪಟ್ಟಿದ್ದರು. ಇಂತಹ ಅಕ್ಷಯ್ ಸಾವಿನಲ್ಲೂ ಕುಟುಂಬಸ್ಥರು ಆತನ ಕಣ್ಣು ದಾನಕ್ಕೆ ತೀರ್ಮಾನಿಸಿದ್ದಾರೆ. ಗಾಳಿ ಮಳೆಯಿಂದ ಬೆಂಗಳೂರಿನ ಬನಶಂಕರಿ 2ನೇ ಹಂತದ ಶ್ರೀನಿವಾಸ ನಗರದಲ್ಲಿ ಮರದ ಕೊಂಬೆ ಬೈಕ್ ಸವಾರನ ಮೇಲೆ ಮುರಿದು ಬಿದ್ದ ಪರಿಣಾಮ ಅಕ್ಷಯ್ ತಲೆಗೆ ಗಂಭೀರವಾದ ಗಾಯವಾಗಿದ್ದು, ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ ಇಂದು ಹೃದಯಸ್ಥಂಬನದಿಂದ ಅಕ್ಷಯ್ ಸಾವನಪ್ಪಿದ್ದಾರೆ. ಹೌದು ಸಾವು ಬದುಕಿನ ನಡುವೆ ಹೋರಾಡುತ್ತಿರುವ ಬೈಕ್ ಸವಾರ ಅಕ್ಷಯ್​​ ಸದ್ಯ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ದಾಖಲಲಾಗಿದ್ದು, ತಲೆಗೆ ಶಸ್ತ್ರ ಸಹ ಮಾಡಲಾಗಿದೆ. ಆದ್ರೆ, ಅಕ್ಷಯ್ ಬ್ರೈನ್ ಡೆಡ್ ಆಗಿದೆ ಎನ್ನುವ ಮಾಹಿತಿ ತಿಳಿದುಬಂದಿದ್ದು, ದೇವರ ಮೇಲೆ ಭಾರ ಹಾಕಿ ಎಂದು ವೈದ್ಯರು ಹೇಳಿದ್ದರು. ಹೀಗಾಗಿ ನಿನ್ನೆ ಅಕ್ಷಯ್ ಅವರ ತಾತ ಅಜ್ಜಿ ಮೊಮ್ಮಗ ಉಳಿಯಲಿ, ಆಯಸ್ಸು ಗಟ್ಟಿಯಾಗಲಿ ಕಣ್ಣು ಬಿಟ್ಟು ನಮ್ಮನ್ನ…

Read More

ಬೆಂಗಳೂರು: ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅವರ ವಿರುದ್ಧದ ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಈ ಕುರಿತಂತೆ ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಿತು. ಎಸ್ ಐಟಿ ರಚನೆ ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಸಿದ್ದಂತ ಅರ್ಜಿಯನ್ನು ನ್ಯಾಯಪೀಠವು ವಿಚಾರಣೆ ನಡೆಸಿತು. ಕುಮಾರಸ್ವಾಮಿ ಪರವಾಗಿ ವಕೀಲ ಉದಯ್ ಹೊಳ್ಳ ಅವರು ವಾದಿಸಿದರು. ರಾಜ್ಯ ಸರ್ಕಾರ ಎಸ್ ಐ ಟಿ ರಚನೆ ಸಂದರ್ಭದಲ್ಲಿ ಔಪಚಾರಿಕವಾಗಿ ಯಾವುದೇ ತೆರವಾದಂತ ಅಧಿಸೂಚನೆ ಪ್ರಕಟಿಸಿಲ್ಲ ಎಂಬುದಾಗಿ ನ್ಯಾಯಪೀಠದ ಗಮನಕ್ಕೆ ತಂದರು. ವಾದ ಪ್ರತಿವಾದವನ್ನು ಆಲಿಸಿದಂತ ಹೈಕೋರ್ಟ್ ಕೇತಗಾನಹಳ್ಳಿ ಭೂ ಒತ್ತಿವರಿ ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಅಲ್ಲದೇ ಎಸ್ಐಟಿ ರಚನೆಯ ಬಳಿಕ ಕುಮಾರಸ್ವಾಮಿ ನೀಡಿದ್ದಂತ ಸಮನ್ಸ್ ಅನ್ನು ತಡೆ ಹಿಡಿದಿದೆ. ಜೊತೆಗೆ ರಾಮನಗರ ಡಿಸಿ, ತಹಶೀಲ್ದಾರರಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆ ಮುಂದೂಡಿದೆ. https://kannadanewsnow.com/kannada/there-will-be-no-current-in-these-areas-of-bangalore-on-june-21/ https://kannadanewsnow.com/kannada/breaking-the-state-government-has-moved-to-increase-the-reservation-for-muslims-in-the-housing-scheme-by-15/ https://kannadanewsnow.com/kannada/breaking-grihalakshmi-money-released-for-the-month-of-may-minister-lakshmi-hebbalkar-gives-important-information/

Read More

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 220/66/11 ಕೆವಿ ಎಸ್ ಆರ್ ಎಸ್ ಪೀಣ್ಯ ಮತ್ತು 66/11 ಸೊಲ್ಲದೇವನಹಳ್ಳಿ ಉಪಕೇಂದ್ರ ವ್ಯಾಪ್ತಿಯಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 21.06.2025 (ಶನಿವಾರ) ರಂದು ಬೆಳಗ್ಗೆ 10:00 ಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಜೂನ್.21ರಂದು ಈ ಕೆಳಕಂಡ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ. HMT ರಸ್ತೆ, RNS ಅಪಾರ್ಟ್ ಮೆಂಟ್, CMTI, ಬೋರ್ಲಿಂಗಪ್ಪ ಗಾರ್ಡನ್, ಪೀಣ್ಯ ಪೊಲೀಸ್ ಠಾಣೆ ರಸ್ತೆ, ಟೆಲಿಫೋನ್ ಎಕ್ಸ್ ಚೆಂಜ್, 6ನೇ ಕ್ರಾಸ್, ರಿಲಯನ್ಸ್ ಕಮ್ಯೂನಿಕೇಶನ್, ಗಣಪತಿನಗರ ಮುಖ್ಯ ರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮೂಂಡಿಪುರ, ಮುನೇಶ್ವರ ದೇವಸ್ಥಾನ ರಸ್ತೆ, MEC ಲೇಔಟ್, ಮಲಯಾಳ ಅತಿಥಿ ಗೃಹ ರಸ್ತೆ, KHB ಲೇಔಟ್, ರಾಜರಾಜೇಶ್ವರಿನಗರ, ಆಕಾಶ್ ಥೀಟರ್ ರಸ್ತೆ, ಫ್ರಂಡ್ಸ್ ಸರ್ಕಲ್, ವಿಜ್ಞಾನ ಪಬ್ಲಿಕ್ ಸ್ಕೂಲ್ ರಸ್ತೆ, ಬೀಮೇಶ್ವರ ನಗರ, ಬ್ಯಾಂಕ್ ಕಾಲೋನಿ, 6ನೇ ಮುಖ್ಯ ರಸ್ತೆ, ವಿಭಾಗ ರಸ್ತೆ, 5ನೇ ಮುಖ್ಯ…

Read More

ಬೆಂಗಳೂರು: “ವಸತಿ ಇಲಾಖೆಯಿಂದ ನಗರ ಪ್ರದೇಶಗಳಲ್ಲಿ ನಿರ್ಮಿಸಲಾಗಿರುವ ವಸತಿಗಳು ಹೆಚ್ಚಾಗಿ ಖಾಲಿ ಇದ್ದು, ಅಲ್ಪಸಂಖ್ಯಾತರು ಈ ಮನೆಗಳಿಗೆ ಹೋಗಲು ಮುಂದಾಗಿದ್ದಾರೆ. ಹೀಗಾಗಿ ಅವರಿಗೆ ನೀಡಲಾಗಿದ್ದ ವಸತಿ ಹಂಚಿಕೆ ಮೀಸಲಾತಿಯನ್ನು ಶೇ. 10 ರಿಂದ 15 ಕ್ಕೆ ಏರಿಕೆ ಮಾಡುತ್ತಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು. ಕೆಲವು ನಗರ ಪ್ರದೇಶಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ಶೇ. 20-30 ರಷ್ಟು ಬಡವರು ಇದ್ದಾರೆ. ಹೀಗಾಗಿ ಅವರಿಗೆ ಮೀಸಲಾತಿ ಹೆಚ್ಚಳ ಮಾಡಲು ಪ್ರಸ್ತಾವನೆ ಬಂದಿದೆ. ಈ ಮನೆಗಳಿಗೆ ಹಣ ಪಾವತಿ ಮಾಡಬೇಕು. ಇತರರು ಇದಕ್ಕೆ ಹೆಚ್ಚಿನ ಆಸಕ್ತಿ ತೋರಿಲ್ಲ. ಬೆಂಗಳೂರಿನಲ್ಲೂ ಅನೇಕ ವಸತಿ ಕಟ್ಟಡಗಳಲ್ಲಿ ಮನೆಗಳು ಖಾಲಿ ಇವೆ. ಮನೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ಸಹಾಯಧನ ತೀರಾ ಕಡಿಮೆ ಇದೆ. ಈ ಮನೆಗಳನ್ನು ಕಟ್ಟಿದ ನಂತರ ಖಾಲಿ ಬಿದ್ದಿವೆ. ಇವುಗಳನ್ನು ಯಾರಿಗೆ ನೀಡಬೇಕು? ಎಂದು ಪ್ರಶ್ನಿಸಿದರು. ಮಂಡ್ಯದಲ್ಲಿಯೂ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಆದರೆ ಅಲ್ಲಿಗೆ ಯಾರು…

Read More

ಬೆಂಗಳೂರು: ಗಣಿಗಾರಿಕೆಯಲ್ಲಿ ನಡೆದ ಅಕ್ರಮದ ತನಿಖೆಗೆ ಸೃಜಿಸಲಾಗಿರುವ ತನಿಖಾ ಸಮಿತಿಯ ಅವಧಿ ವಿಸ್ತರಣೆ ಮಾಡಲಾಗುತ್ತಿದೆ. ವಿವರವಾದ ತಾಂತ್ರಿಕ ಮಾಹಿತಿ ಕಲೆ ಹಾಕಲು ಅವಕಾಶ ಆಗುವ ಹಿನ್ನೆಲೆಯಲ್ಲಿ ಒಂದು ವರ್ಷದ ಅವಧಿಗೆ ವಿಸ್ತರಣೆ ಆಗಿದೆ. ಅಪ್ಸರಕೊಂಡ ಕಡಲ ಜೀವಧಾಮ ಘೋಷಣೆ ಮಾಡಲಾಗುತ್ತಿದೆ. ಹೊನ್ನಾವರದ ಸಮುದ್ರ ಪ್ರದೇಶದ ಆರು ಕಿ ಮೀ ದೂರದ ಪ್ರದೇಶವನ್ನ ವನ್ಯಧಾನಮವಾಗಿ ಘೋಷಣೆ ಮಾಡಲಾಗಿದೆ ಎಂಬುದಾಗಿ ಕಾನೂನು ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ. ಇಂದು ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಆರೋಗ್ಯ ಇಲಾಖೆಯ ಮೂರು ಲಕ್ಷ ಸಿಬ್ಬಂದಿ ಮತ್ತು ಅವರ ಅವಲಂಬಿತರಿಗೆ 5 ಲಕ್ಷದ ವರೆಗೆ ನಗದು ರಹಿತ ಆರೋಗ್ಯ ಯೋಜನೆ ಜಾರಿಗೊಳಿಸಲಾಗುತ್ತಿದೆ. ಮಾಸಿಕ ಕಂತುಗಳಲ್ಲಿ ಯೋಜನೆಗೆ ಸಿಬ್ಬಂದಿಗಳಿಂದ 100 ರೂ ಸಂಗ್ರಹಕ್ಕೆ ತೀರ್ಮಾನಿಸಲಾಗಿದೆ. ಈ ಸೌಲಭ್ಯವು ಖಾಯಂ ಹಾಗೂ ಗುತ್ತಿಗೆ ನೌಕರರಿಗೂ ಸಿಗಲಿದೆ ಎಂದರು. ಹಾವೇರಿಯ ಬಸಾಪುರವನ್ನ ಗೇಲುಗುಡ್ಡ ಬಸಾಪುರ ಎಂದು ಮರು ನಾಮಕರಣ ಮಾಡಲು ಕಂದಾಯ ಇಲಾಖೆ ನಿರ್ಧಾರಿಸಿದೆ. ಅನುಭವ ಮಂಟಪ ಕಾಮಗಾರಿ ಹಣ…

Read More

ಬೆಂಗಳೂರು: ಅಫೇಸಿಯಾ ಜಾಗೃತಿ ಮಾಸದ ಅಂಗವಾಗಿ, ಸಂವಾದ್ ಇನ್‌ಸ್ಟಿಟ್ಯೂಟ್ ಆಫ್ ಸ್ಪೀಚ್ ಅಂಡ್ ಹಿಯರಿಂಗ್, ಜೂನ್ 20, 2025 ರಂದು ಬೆಳಿಗ್ಗೆ 11:00ರಿಂದ ಮಧ್ಯಾಹ್ನ 12:00ರವರೆಗೆ ‘ಅಫೇಸಿಯಾ ಮೂಲಕ ಆರೈಕೆದಾರರ ಪ್ರಯಾಣದಲ್ಲಿ ಸಬಲೀಕರಣಗೊಳಿಸುವುದು’ ಎಂಬ ಉಚಿತ ವೆಬಿನಾರ್‌ನ್ನು ಆಯೋಜಿಸಿದೆ. ಅಫೇಸಿಯಾ ಎಂಬುದು ಮೆದುಳಿಗೆ ಸಂಭವಿಸುವ ಹಾನಿಯಿಂದ ಉಂಟಾಗುವ ಭಾಷಾ ಸಂಬಂಧಿತ ಅಸ್ವಸ್ಥತೆ. ಸಾಮಾನ್ಯವಾಗಿ ಪಾರ್ಶ್ವವಾಯು ಅಥವಾ ತೀವ್ರ ತಲೆ ಗಾಯದ ನಂತರ ಇದು ಉಂಟಾಗುತ್ತದೆ. ಇದರಿಂದ ವ್ಯಕ್ತಿಯ ಮಾತಾಡುವ, ಕೇಳುವ, ಓದುವ ಮತ್ತು ಬರೆಯುವ ಸಾಮರ್ಥ್ಯದಲ್ಲಿ ಅಡಚಣೆ ಉಂಟಾಗಬಹುದು — ಆದರೆ ಅವರ ಬುದ್ಧಿವಂತಿಕೆ ಹಾಗೆ ಉಳಿದಿರುತ್ತದೆ. ಈ ಸ್ಥಿತಿ, ರೋಗಿಯನ್ನು ಮಾತ್ರವಲ್ಲದೆ ಅವರ ಆರೈಕೆದಾರರ ಜೀವನದಲ್ಲಿಯೂ ಭಾರೀ ಭಾವನಾತ್ಮಕ ಹಾಗೂ ಕಾರ್ಯಚಟುವಟಿಕೆಯ ಭಾಗವಾಗಿರುತ್ತದೆ. ಈ ವೆಬಿನಾರ್‌ನ ಉದ್ದೇಶ ಅಫೇಸಿಯಾ ಬಗ್ಗೆ ಹೆಚ್ಚಿನ ತಿಳಿವು ನೀಡುವುದು, ಉಪಯುಕ್ತ ಆರೈಕೆ ತಂತ್ರಗಳನ್ನು ಪರಿಚಯಿಸುವುದು ಮತ್ತು ನಿಜ ಜೀವನದ ಯಶಸ್ಸಿನ ಕಥೆಗಳನ್ನು ಹಂಚಿಕೊಂಡು ಆರೈಕೆದಾರರು ಹಾಗೂ ಕುಟುಂಬ ಸದಸ್ಯರಿಗೆ ಸಹಾಯಕ ವಾತಾವರಣವನ್ನು ನಿರ್ಮಿಸುವುದು. ಅಫೇಸಿಯಾ…

Read More