Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಈ ಸುಸಂದರ್ಭದಲ್ಲಿ ಕರ್ನಾಟಕದ ಜನತೆಗೆ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ(ರಿ)ದಿಂದ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಕೋರಲಾಗಿದೆ. ಭಾರತೀಯ ಮಜ್ದೂರ್ ಸಂಘದೊಂದಿಗೆ ಸಂಯೋಜಿತ(ಬಿಎಂಎಸ್) ನಿಂದ ರಾಜ್ಯದ ಜನತೆಗೆ 70ನೇ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘ (KSHCOEA BMS) ಸಂಘದ ಅಧ್ಯಕ್ಷರು ಹಾಗೂ ಎಲ್ಲಾ ಪದಾಧಿಕಾರಿಗಳು ಕೋರಿದ್ದಾರೆ. ಅಂದಹಾಗೇ ರಾಜ್ಯದ ಆರೋಗ್ಯ, ವೈದ್ಯಕೀಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ಕಷ್ಟಗಳಿಗೆ, ಸಮಸ್ಯೆಗಳಿಗೆ ಪರಿಹರಿಸುವ ಕೆಲಸ ಮಾಡುತ್ತಿರುವಂತ ಮುಂಚೂಣಿಯ ಸಂಘಟನೆ KSHCOEA BMS ಆಗಿದೆ. ಈ ಸಂಘದಿಂದಾಗಿ ಆರೋಗ್ಯ, ವೈದ್ಯಕೀಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ವೇತನ ಹೆಚ್ಚಳ, ಆರೋಗ್ಯ ವಿಮಾ ಸೌಲಭ್ಯ ಸೇರಿದಂತೆ ವಿವಿಧ ಸೇವಾ ಭದ್ರತೆಯನ್ನು ನೌಕರರಿಗೆ ಒದಗಿಸಿಕೊಡುವಂತ ಕೆಲಸವನ್ನು ಹಗಲಿರುಳೆನ್ನದೆ ಮಾಡುತ್ತಿದೆ. https://kannadanewsnow.com/kannada/kannada-nadu-is-the-birthplace-of-literature-and-culture-kannadigas-have-made-unique-achievements-in-all-fields-sagar-ac/ https://kannadanewsnow.com/kannada/withdrawal-of-cases-against-kannada-activists-cm-siddaramaiah-announces/
ಮಂಡ್ಯ : ಕನ್ನಡ ರಾಜ್ಯೋತ್ಸವ ನಮ್ಮ ಇತಿಹಾಸವನ್ನು ನೆನಪಿಸುವ ದಿನ ಮಾತ್ರವಲ್ಲ, ಅದು ನಮ್ಮ ಜವಾಬ್ದಾರಿಯನ್ನು ನೆನಪಿಸುವ ದಿನವೂ ಆಗಿದೆ. ನಮ್ಮ ರಾಜ್ಯವನ್ನು ಇನ್ನಷ್ಟು ಸುಂದರ, ಸಶಕ್ತ ಮತ್ತು ಸಮಾನತೆಯ ರಾಜ್ಯವನ್ನಾಗಿಹಿಸಲು ಪ್ರತಿಯೊಬ್ಬರೂ ಕಾರ್ಯಪ್ರವೃತ್ತರಾಗಬೇಕೆಂದು ಶಾಸಕ ಕೆ.ಎಂ.ಉದಯ್ ಹೇಳಿದರು. ಮದ್ದೂರು ನಗರದ ತಾಲೂಕು ಕ್ರೀಡಾಂಗಣದಲ್ಲಿ ಶನಿವಾರ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವ ಸಂದೇಶ ನೀಡಿ ಮಾತನಾಡಿ, ಬೇರೆ ಭಾಷೆಗಳನ್ನು ಕಲಿಯಿರಿ ಅವಶ್ಯಕತೆ ಇದ್ದಾಗ ಮಾತ್ರ ಮಾತನಾಡಿ ಆದರೆ, ನಾವು ನಮ್ಮ ಭಾಷೆಯನ್ನು ಯಾವುದೇ ಕಾರಣಕ್ಕೂ ಬಲಿ ಕೊಟ್ಟು ಉದಾರಿಗಳಾಗಬಾರದು. ಭಾಷೆಯ ವ್ಯಾಮೋಹವೂ ಅತಿಯಾಗಿರಬಾರದು, ಆದರೆ ಕನ್ನಡ ಅಭಿಮಾನ ಇರಲೇ ಬೇಕು, ಅಭಿಮಾನವಿದ್ದರೆ ಮಾತ್ರ ಕನ್ನಡ ಉಳಿಸಲು ಬೆಳೆಸಲು ಸಾಧ್ಯ. ಕನ್ನಡ ಭಾಷೆ ತಿಳಿಯದವರಿಗೆ ಕನ್ನಡ ಕಲಿಸುವ ಕೆಲಸವಾಗಬೇಕೆಂದರು. ಕನ್ನಡ ಭಾಷೆ ಸಮೃದ್ಧವಾಗಿದೆ ಎಂದು ನಾವು ಕೈಕಟ್ಟಿ ಕುಳಿತುಕೊಳ್ಳಬಾರದು. ಆಧುನಿಕ ಶಿಕ್ಷಣ ಕ್ರಮದಿಂದ ಕನ್ನಡ ಕಲಿಕೆಯ ಬಗ್ಗೆ ಯುವಜನಾಂಗದಲ್ಲಿ ಮತ್ತು ಮಕ್ಕಳಲ್ಲಿ ಇನ್ನಷ್ಟು ಪ್ರೀತಿ ಮತ್ತು ಕಾಳಜಿ ಮೂಡುವಂತೆ ಪಾಲಕರು…
ಧನುಸ್ಸು ರಾಶಿಯವರಿಗೆ ಈ ಒಂದು ತಾಂತ್ರಿಕ ಅನುಷ್ಠಾನ ಮಾಡಿ ನೋಡಿ ಅದೃಷ್ಟದ ಬದಲಾವಣೆಯಾಗುತ್ತದೆ.. ಮೂಲ ನಕ್ಷತ್ರದವರಿಗೆ ಯೆ,ಯೊ,ಬ,ಬಿ ಇವರಿಗೆ ನೀಮ್ಮಗೆ ಎಷ್ಟೇ ಸಮಸ್ಯೆಗಳು ಇದರು ಬಗ್ಗೆ ಆರಿಯುತ್ತದೆ. ಇದು ಹರಿ ವಾಕ್ ಸತ್ಯ ನೀವು ತಾಮ್ರದ ರ್ಸಪಗಳನು ತೆಗೆದುಕೊಂಡು ಪ್ರತಿ ಮಂಗಳವಾರ ಒಂದು ಶುಕ್ರವಾರ ಒಂದು ಹೀಗೆ 5 ಮಂಗಳವಾರ 5 ಶುಕ್ರವಾರ ಒಂದು ಕೆಂಪು ವಸ್ತ್ರದಲ್ಲಿ ಪೂಜೆ ಮಾಡಿ ಗಂಟು ಕಟ್ಟಿ ಇಡಿ5 ಮಂಗಳವಾರ 5 ಶುಕ್ರವಾರವಾದ ಮೇಲೆ ಯಾವುದಾದರೂ ಪುಣೆಯ ಕ್ಷೇತ್ರ ಶಿವನ ದೇವಾಲಯವೆ ಆಗಬೇಕು ಅಲ್ಲಿ ಹುಂಡಿಗೆ ಹಾಕಿ ಇಲ್ಲವೆಂದರೆ ಎಲ್ಲಾದರೂ ಹೋಮ ಮಾಡುತ್ತಿದರೆ ಹೋಮಕ್ಕೆ ಹಾಕಿ ಮನೆಗೆ ಬಂದು ಬಿಡಿ ನಂತರ ನೋಡಿ ಬದಲಾವಣೆ ನಂತರ ನನಗೆ ತಿಳಿಸಿ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು…
ಉಡುಪಿ: ನಾನು ಕಾಂಗ್ರೆಸ್ ಸಾಮಾನ್ಯ ಕಾರ್ಯಕರ್ತೆ, ನವೆಂಬರ್ ತಿಂಗಳ ಕ್ರಾಂತಿ, ಶಾಂತಿ ಎಲ್ಲವೂ ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕನ್ನಡ ರಾಜ್ಯೋತ್ಸವದ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮುಖ್ಯಮಂತ್ರಿ ಬದಲಾವಣೆ ಎಐಸಿಸಿ ಅಧ್ಯಕ್ಷರಿಗೆ ಬಿಟ್ಟ ವಿಚಾರ. ನಾನು ಸೇರಿದಂತೆ ಎಲ್ಲರೂ ಪಕ್ಷ ಹೇಳಿದಂತೆ ಕೇಳುತ್ತೇವೆ. ಪಕ್ಷ ನನ್ನನ್ನು ಗುರುತಿಸಿ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿದೆ. ನಿಮ್ಮ ಕೆಲಸ ಬೇರೆ ಇದೆ ಎಂದು ಪಕ್ಷ ಸೂಚಿಸಿದರೂ ಸಂತೋಷದಿಂದ ಕೇಳುತ್ತೇವೆ ಎಂದರು. ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೈಕಮಾಂಡ್ ಮಾತಿನಂತೆ ನಡೆದುಕೊಳ್ಳುವ ವ್ಯಕ್ತಿ. ಸೋನಿಯಾ ಗಾಂಧಿ ಅವರ ತ್ಯಾಗದ ಮಾತನ್ನು ಬಹಳಷ್ಟು ಸಾರಿ ಹೇಳಿದ್ದಾರೆ. ಇದಕ್ಕೆ ವಿಶೇಷ ಅರ್ಥವನ್ನು ಕಲ್ಪಿಸುವುದು ಬೇಡ. ಗಾಂಧಿ ಪರಿವಾರದ ಇಂದಿರಾಗಾಂಧಿ, ರಾಜೀವ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರ ಇತಿಹಾಸದ ಬಗ್ಗೆ ನಮಗೆಲ್ಲ ಗೊತ್ತಿದೆ…
ಶಿವಮೊಗ್ಗ : ಕೆಳದಿ ರಾಣಿ ಚೆನ್ನಮ್ಮಾಜಿ ಕನ್ನಡ ನಾಡು ಕಂಡ ಅತ್ಯಂತ ಶ್ರೇಷ್ಟ ರಾಣಿ. ರಾಣಿ ಚೆನ್ನಮ್ಮಾಜಿ ವೃತ್ತದಲ್ಲಿ ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ರಾಣಿ ಚೆನ್ನಮ್ಮಾಜಿ ಕಂಚಿನ ಪುತ್ಥಳಿ ಸ್ಥಾಪಿಸಲಾಗುತ್ತಿದೆ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ರಾಣಿ ಚೆನ್ನಮ್ಮಾಜಿ ವೃತ್ತದಲ್ಲಿ ಶನಿವಾರ ನಗರಸಭೆ ವತಿಯಿಂದ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ಬಸ್ ನಿಲ್ದಾಣ ಸೇರಿ ವಿವಿಧ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದಂತ ಅವರು, ರಾಣಿ ಚೆನ್ನಮ್ಮಾಜಿ ವೃತ್ತದಲ್ಲಿ ಪುತ್ಥಳಿ ನಿರ್ಮಿಸಬೇಕು ಎಂದು ಈ ಭಾಗದ ಜನರ ಬಹುಕಾಲದ ಬೇಡಿಕೆಯಾಗಿದ್ದು, ಅದನ್ನು ನೆರವೇರಿಸಲಾಗುತ್ತಿದ್ದು, ಶಾಸಕರ ಅನುದಾನದಲ್ಲಿ ಪುತ್ಥಳಿಗೆ 10 ಲಕ್ಷ ರೂ. ಮೀಸಲಿಡಲಾಗಿದೆ. ಇದರ ಜೊತೆಗೆ ಬಸ್ ನಿಲ್ದಾಣ ಮತ್ತು ವೃತ್ತ ನಿರ್ಮಾಣಕ್ಕೆ 40 ಲಕ್ಷ ರೂ. ಶಾಸಕರ ವಿವೇಚನಾ ನಿಧಿಯಿಂಡ ಮೀಸಲಿಡಲಾಗಿದೆ. ಅತಿ ಶೀಘ್ರದಲ್ಲಿ ಕಾಮಗಾರಿ ಪ್ರಾರಂಭಿಸಲು ಸೂಚಿಸಲಾಗಿದೆ ಎಂದು…
ಬೆಂಗಳೂರು: ನಗರದಲ್ಲಿ ಬಹುದೊಡ್ಡ ಹಗರಣ ಎನ್ನುವಂತೆ ಇಪಿಎಫ್ಓ ಸ್ಟಾಫ್ ಕ್ರೆಡಿಟ್ ಕೋ-ಆಪರೇಟೀವ್ ಸೊಸೈಟಿಯಲ್ಲಿ ವಂಚನೆ ಪ್ರಕರಣ ಬೆಳಕಿಗೆ ಬಂದಿತ್ತು. ಈ ಪ್ರಕರಣ ಸಂಬಂಧ ಸಿಇಓ ಗೋಪಿ, ಅಕೌಟೆಂಟ್ ಜಗದೀಶ್ ಎಂಬುವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇಪಿಎಫ್ ಸ್ಟಾಫ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಮುರಳಿ ಎಂಬುವರು ದೂರು ನೀಡಿದ್ದಾರೆ. ಈ ದೂರು ಆಧರಿಸಿ ಸಿಇಒ ಗೋಪಿ ಮತ್ತು ಅಕೌಂಟೆಂಟ್ ಜಗದೀಶ್ ಎಂಬುವರ ವಿರುದ್ಧ ಕೇಸ್ ದಾಖಲಾಗಿದೆ. ಎಫ್ಐಆರ್ ದಾಖಲಾದ ಹಿನ್ನಲೆಯಲ್ಲಿ ಆರೋಪಿಗಳನ್ನು ಬಂಧಿಸಿ, ಹೆಚ್ಚಿನ ವಿಚಾರಣೆ ನಡೆಸಲು ಪೊಲೀಸರು ಸಿದ್ಧತೆ ಕೈಗೊಂಡಿದ್ದಾರೆ. ಮುರುಳಿ ಎಂಬುವರು ನೀಡಿರುವಂತ ದೂರಿನಲ್ಲಿ ಇಪಿಎಫ್ ಸ್ಟಾಫ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಸುಮಾರು 70 ಕೋಟಿ ಅವ್ಯವಹಾರ ಆಗಿದೆ ಎಂಬುದಾಗಿ ಉಲ್ಲೇಖಿಸಿದ್ದಾರೆ. https://kannadanewsnow.com/kannada/withdrawal-of-cases-against-kannada-activists-cm-siddaramaiah-announces/ https://kannadanewsnow.com/kannada/big-news-priority-given-to-teaching-kannada-in-karnatakas-madrasas-cms-announcement/
ಶಿವಮೊಗ್ಗ : ಕನ್ನಡ ನಾಡುನುಡಿ ವಿಷಯ ಬಂದಾಗ ನಾವೆಲ್ಲಾ ಒಗ್ಗಟ್ಟಿನ ಧ್ವನಿ ಮೊಳಗಿಸಬೇಕು. ಕನ್ನಡ ನಾಡಿನ ಒಂದಿಂಚು ಭೂಮಿ ಅನ್ಯರಾಜ್ಯಗಳಿಗೆ ಬಿಟ್ಟುಕೊಡುವ ಪ್ರಶ್ನೆಯೆ ಇಲ್ಲ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಕೆಳದಿ ರಾಣಿ ಚೆನ್ನಮ್ಮಾಜಿ ವೃತ್ತದಲ್ಲಿ ಶನಿವಾರ ನಗರಸಭೆ ಹಾಗೂ ವಿದ್ಯಾರಣ್ಯ ಯುವಕ ಸಂಘದ ವತಿಯಿಂದ ಕೆಳದಿಯಿಂದ ಬಂದ ವಿದ್ಯಾರಣ್ಯ ಜ್ಯೋತಿಯನ್ನು ಸ್ವಾಗತಿಸಿ, ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದಂತ ಅವರು, ಕೇರಳದ ಕಾಸರಗೋಡು, ಬೆಂಗಳೂರಿನ ಹೊಸೂರು, ಬೆಳಗಾವಿ ಭಾಗದಲ್ಲಿ ಕರ್ನಾಟಕ ಗಡಿಯಲ್ಲಿ ಸದಾ ತಕರಾರು ತೆಗೆದು ಕನ್ನಡಿಗರ ತಾಳ್ಮೆ ಪರೀಕ್ಷೆ ಮಾಡುವ ಕೆಲಸ ನಿರಂತರ ನಡೆಯುತ್ತಿದೆ. ಕನ್ನಡಪರ ಸಂಘಟನೆಗಳು ಕಟ್ಟೆಚ್ಚರದಿಂದ ಇದ್ದು ಇಂತಹ ಘಟನೆಗಳ ವಿರುದ್ದ ಹೋರಾಟ ನಡೆಸುತ್ತಿರುವುದು ಅಭಿನಂದಾರ್ಹ ಸಂಗತಿ. ಕನ್ನಡದ ವಿಷಯ ಬಂದಾಗ ನಾವೆಲ್ಲರೂ ಕಟ್ಟೆಚ್ಚರದಿಂದ ಇರೋಣ. ನಾವು ಎಲ್ಲೆ ಇದ್ದರೂ ಕನ್ನಡಿಗರಾಗಿರೋಣ. ವಿದೇಶದಲ್ಲಿದ್ದರೂ ನಮ್ಮ ಕನ್ನಡ ಪ್ರೇಮ ಸದಾ ಹಸಿರಾಗಿರಲಿ…
ಬೆಂಗಳೂರು ನ1: ವಾಟಾಳ್ ಕನ್ನಡದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ಹೋರಾಟಗಾರರು. ದೇವರಾಜ ಅರಸು ಅವರು ಮಂತ್ರಿ ಸ್ಥಾನ ಕೊಡ್ತೀನಿ ಎಂದು ಕರೆದರೂ ಕನ್ನಡ ಪಕ್ಷ ಮತ್ತು ಕನ್ನಡ ಹೋರಾಟ ಬಿಡಲು ವಾಟಾಳ್ ಅವರು ಒಪ್ಪಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ವುಗೆ ವ್ಯಕ್ತಪಡಿಸಿದರು. ಮೈಸೂರು ಬ್ಯಾಂಕ್ ವೃತ್ತದ ನೃಪತುಂಗ ಮಂಟಪದಲ್ಲಿ ಭುವನೇಶ್ವರಿ ಹಾಗೂ ಅಣ್ಣಮ್ಮ ದೇವತೆಯ ವೈಭವದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು. ನಾವೆಲ್ಲರೂ ಕನ್ನಡ ನೆಲ, ಜಲ, ಭಾಷೆ, ಸಂಸ್ಕೃತಿ ಬಗ್ಗೆ ಅಭಿಮಾನ, ಪ್ರೀತಿ ಬೆಳೆಸಿಕೊಳ್ಳಬೇಕು. ನಮ್ಮ ನೆಲದಲ್ಲಿ ಕನ್ನಡದ ವಾತಾವರಣ ಬೆಳೆಸಬೇಕು. ಇದಕ್ಕಾಗಿ ಯಾರು ಯಾವುದೇ ಭಾಷೆಯಲ್ಲಿ ಮಾತನಾಡಿದರೂ ನೀವು ಕನ್ನಡದಲ್ಲೇ ಉತ್ತರ ಕೊಡಬೇಕು ಎಂದು ಕರೆ ನೀಡಿದರು. ಕನ್ನಡ ನೆಲದಲ್ಲಿ ಬದುಕು ಕಟ್ಟಿಕೊಂಡ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಗೌರವಿಸುತ್ತಾರೆ. ಕನ್ನಡ ನೆಲದಲ್ಲಿ ನಾವು ಕನ್ನಡದಲ್ಲೇ ಮಾತಾಡುತ್ತೇವೆ ಎನ್ನುವ ಶಪಥ ಮಾಡೋಣ ಎಂದು ಕರೆ ನೀಡಿದರು. ನಮ್ಮ ಭೂಮಿ, ನಮ್ಮ ನೆಲ, ನಮ್ಮ ಜಲ, ನಮ್ಮ ಭಾಷೆ ಎನ್ನುವ…
ಬೆಂಗಳೂರು: ನಗರದಲ್ಲಿ ಗುಂಡಿ ಮುಚ್ಚಲು ವಿಧಿಸಿರುವ ಡೆಡ್ ಲೈನ್ ಮುಗಿದಿದ್ದರೂ ಇನ್ನು ಗುಂಡಿಗಳು ಹಾಗೆಯೇ ಇವೆ. ಆ ಬಗ್ಗೆ ಮಾಧ್ಯಮಗಳು ಕೇಳಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಕೇಳಿ ಎಂದಿರುವುದು ಬೇಜವಾಬ್ದಾರಿಯ ಪರಮಾವಧಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು. ಸಪ್ನ ಪುಸ್ತಕ ಮಳಿಗೆ ಪುಸ್ತಕ ಜಾತ್ರೆಯಲ್ಲಿ ಪಾಲ್ಗೊಂಡ ನಂತರ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು. ಶುಕ್ರವಾರದ ದಿನ ಮುಖ್ಯಮಂತ್ರಿಗಳ ಹೇಳಿಕೆ ಗಮನಿಸಿದ್ದೇನೆ. ಅವರ ಹೇಳಿಕೆ ಬೇಜವಾಬ್ದಾರಿತನದ್ದು ಎಂಬುದು ನನ್ನ ಅಭಿಪ್ರಾಯ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಾ? ಅಥವಾ ಡಿ.ಕೆ. ಶಿವಕುಮಾರ್ ಅವರಾ? ಎನ್ನುವ ಪ್ರಶ್ನೆ ಬರುತ್ತೆ. ಮುಖ್ಯಮಂತ್ರಿಗಳೇ ಸಭೆ ಮಾಡಿ ಗುಂಡಿ ಮುಚ್ಚಲು ಡೆಡ್ ಲೈನ್ ಕೊಟ್ಟಿದ್ದರು. ಆದರೆ ರಸ್ತೆಗಳಲ್ಲಿ ಗುಂಡಿಗಳು ಹಾಗೆಯೇ ಇವೆ. ಮುಖ್ಯಮಂತ್ರಿಗಳ ಮಾತಿಗೂ ಸಹ ಎಷ್ಟು ಬೆಲೆ ಅಧಿಕಾರಿಗಳು ಕೊಡುತ್ತಿದ್ದಾರೆ ಎನ್ನುವುದು ಇದರಿಂದ ಗೊತ್ತಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು. ಮುಖ್ಯಮಂತ್ರಿಗಳ ಹೇಳಿಕೆ ನೋಡಿದಾಗ ಅವರು ಈ ರಾಜ್ಯದ ಸಿಎಂ ಆಗಿ…
ಕೇರಳ: ಕೇರಳದಲ್ಲಿ ಮಂಗಳೂರಿನ ಕುಖ್ಯಾತ ರೌಡಿಶೀಟರ್ ಬರ್ಬರ ಹತ್ಯೆ ಮಾಡಲಾಗಿದೆ. ನಟೋರಿಯಸ್ ರೌಡಿಶೀಟರ್ ಟೋಪಿ ನೌಫಾಲ್ ಎಂಬಾತನನ್ನು ಬರ್ಬರ ಹತ್ಯೆ ಮಾಡಲಾಗಿದೆ. ಕೇರಳದ ಕಾಸರಗೋಡು ಜಿಲ್ಲೆಯ ಉಪ್ಪಳದ ರೈಲ್ವೆ ಗೇಟ್ ಬಳಿಯಲ್ಲಿ ಕೊಟ್ಟಿ ನೌಫಾಲ್ ಕೊಲೆ ಮಾಡಲಾಗಿದೆ. ನೌಫಾಲ್, ಫರಂಗಿಪೇಟೆ ಜೋಡಿ ಕೊಲೆ ಕೇಸ್ ನಲ್ಲಿ ಪ್ರಮುಖ ಆರೋಪಿಯಾಗಿದ್ದನು. ಮಾರಕಾಸ್ತ್ರಗಳಿಂದ ಕೊಚ್ಚಿ ನೌಫಾಲ್ ಅನ್ನು ದುಷ್ಕರ್ಮಿಗಳು ಕೊಂದಿದ್ದಾರೆ. ಮಂಗಳಿನ ಫೈಸಲ್ ನಗರದ ನಿವಾಸಿ ಟೋಪಿ ನೌಫಾಲ್ ಆಗಿದ್ದನು. ಉಪ್ಪಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/big-news-priority-given-to-teaching-kannada-in-karnatakas-madrasas-cms-announcement/ https://kannadanewsnow.com/kannada/kannada-nadu-is-the-birthplace-of-literature-and-culture-kannadigas-have-made-unique-achievements-in-all-fields-sagar-ac/














