Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿ ಕೂಡಲೇ ಸ್ವದೇಶಕ್ಕೆ ವಾಪಸ್ ಬಂದು ವಿಶೇಷ ತನಿಖಾ ತಂಡದ ಎದುರು ಹಾಜರಾಗುವಂತೆ ಸಂಸದ ಪ್ರಜ್ವಲ್ ರೇವಣ್ಣಗೆ ಮಾಜಿ ಪ್ರಧಾನಿಗಳು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ತಾಕೀತು ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು; ನನ್ನ ಮೇಲೆ ಗೌರವ ಇದ್ದರೆ ತಕ್ಷಣವೇ ವಾಪಸ್ ಮರಳಿ ಬಾ ಎಂದು ಪ್ರಜ್ವಲ್ ಗೆ ತಾಕೀತು ಮಾಡಿದ್ದಾರಲ್ಲದೆ, ಪ್ರಜ್ವಲ್ ರೇವಣ್ಣನಿಗೆ ನನ್ನ ಎಚ್ಚರಿಕೆ ಎಂದು ತಿಳಿಸಿದ್ದಾರೆ. ಅವರ ಹೇಳಿಕೆಯ ಪೂರ್ಣ ಪಾಠ ಈ ಕೆಳಕಂಡಂತಿದೆ; ನಾನು ಮೇ 18ನೇ ತಾರೀಖಿನಂದು ದೇವಸ್ಥಾನಕ್ಕೆ ಹೊರಟಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣನ ಕುರಿತಾಗಿ ಮಾತನಾಡಿದ್ದೆ. ಆತ ನನಗೆ, ನನ್ನ ಕುಟುಂಬಕ್ಕೆ, ನನ್ನ ಸಹೋದ್ಯೋಗಿಗಳಿಗೆ, ಸ್ನೇಹಿತರಿಗೆ ಮತ್ತು ನನ್ನ ಪಕ್ಷದ ಕಾರ್ಯಕರ್ತರಿಗೆ ತಂದೊಡ್ದಿರುವ ಆಘಾತ ಮತ್ತು ನೋವಿನಿಂದ ಹೊರಬಂದು ಮಾತನಾಡಲು ಕೊಂಚ ಸಮಯ ಹಿಡಿಯಿತು. ನಾನು ಈಗಾಗಲೇ ಸ್ಪಷ್ಟಪಡಿಸಿರುವ ಹಾಗೆ ಕಾನೂನಿನ ಪ್ರಕಾರ ಅವನು ತಪ್ಪಿತಸ್ಥನೆಂದಾದರೆ, ಅವನಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು.…

Read More

ಶಿವಮೊಗ್ಗ: ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ರ ವಿರುದ್ಧ ಸಾಮಾಜಿಕ ಜಾಲ ತಾಣದಲ್ಲಿ ತೆಜೋವಧೆ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಲಾಗಿದೆ. ಇಂದು ಸಾಮಾಜಿಕ ಜಾಲತಾಣದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ತೇಜೋವಧೆ ಮಾಡಿದ ಆರೋಪಿಯ ವಿರುದ್ಧ ಕಾನೂನು ಕ್ರಮಕ್ಕೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ C M. ಚಿನ್ಮಯ್  ಸಾಗರ ಪೇಟೆ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ. ಇಂದು ಸಾಗರ ಪೇಟೆ ಪೊಲೀಸ್ ಠಾಣೆಗೆ ತೆರಳಿದಂತ ಸಿಎಂ ಚಿನ್ಮಯ್ ಅವರು, ಕರ್ನಾಟಕ ರಾಜ್ಯ ಅರಣ್ಯ ಮತ್ತು ಕೈಗಾರಿಕೆ ನಿಗಮದ ಅಧ್ಯಕ್ಷರೂ ಹಾಗೂ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ರವರು ಶಾಸಕರು ಇತ್ತೀಚೆಗೆ ಸಾಗರದ ಶಿವಮೊಗ್ಗ ರಸ್ತೆಯಲ್ಲಿರುವ ಪ್ರಥಮ ದರ್ಜೆ ಕಾಲೇಜು ಮುಂಭಾಗದ ಅಂಗಡಿಯಲ್ಲಿ ಗುಟ್ಕಾ ಹಾಗೂ ಸಿಗರೇಟು, ಮೊದಲಾದ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿರುವ ವೀಡಿಯೋವೊಂದು ಸಾಮಾಜಿಕ ಜಾಲ ತಾಣಗಳಲ್ಲಿ ಸಕ್ಕತ್ತಾಗಿ ವೈರಲ್…

Read More

ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣದ ನಂತ್ರ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದಾರೆ. ಅವರ ಬಂಧನಕ್ಕಾಗಿ ಎಸ್ಐಟಿ ಅಧಿಕಾರಿಗಳು ಕಾದು ಕುಳಿತಿದ್ದಾರೆ. ಇದರ ನಡುವೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಪ್ರಜ್ವಲ್ ರೇವಣ್ಣಗೆ ಎಚ್ಚರಿಕೆ ನೀಡಿ, ಪತ್ರ ಬರೆದಿದ್ದಾರೆ. ಅದರಲ್ಲಿ ಏನಿದೆ ಅಂತ ಮುಂದೆ ಓದಿ. ಈ ಸಂಬಂಧ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಪ್ರಜ್ವಲ್ ರೇವಣ್ಣನಿಗೆ ನನ್ನ ಎಚ್ಚರಿಕೆ ಅಂತ ಪತ್ರ ಬರೆದಿದ್ದಾರೆ. ಅದರಲ್ಲಿ ನಾನು ಮೇ 18ನೇ ತಾರೀಖಿನಂದು ದೇವಸ್ಥಾನಕ್ಕೆ ಹೊರಟಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣನ ಕುರಿತಾಗಿ ಮಾತನಾಡಿದ್ದೆ. ಆತ ನನಗೆ, ನನ್ನ ಕುಟುಂಬಕ್ಕೆ, ನನ್ನ ಸಹೋದ್ಯೋಗಿಗಳಿಗೆ, ಸ್ನೇಹಿತರಿಗೆ ಮತ್ತು ನನ್ನ ಪಕ್ಷದ ಕಾರ್ಯಕರ್ತರಿಗೆ ತಂದೊಡ್ಡಿರುವ ಆಘಾತ ಮತ್ತು ನೋವಿನಿಂದ ಹೊರಬಂದು ಮಾತನಾಡಲು ಕೊಂಚ ಸಮಯ ಹಿಡಿಯಿತು. ನಾನು ಈಗಾಗಲೇ ಸ್ಪಷ್ಟಪಡಿಸಿರುವ ಹಾಗೆ ಕಾನೂನಿನ ಪ್ರಕಾರ ಅವನು ತಪ್ಪಿತಸ್ಥನೆಂದಾದರೆ, ಅವನಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು. ನನ್ನ ಈ ನಿಲುವನ್ನು ನನ್ನ ಮಗ…

Read More

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಬಂಡಾಯದ ಭಾವುಟ ಹಾರಿಸಿ, ಕಣಕ್ಕೆ ಇಳಿದಿದ್ದಂತ ನೈರುತ್ಯ ಪದವೀಧರರ ಕ್ಷೇತ್ರದ ಬಂಡಾಯ ಅಭ್ಯರ್ಥಿ ಶಿವಮೊಗ್ಗದ ಎಸ್.ಪಿ ದಿನೇಶ್ ಸೇರಿದಂತೆ ಐವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ. ಈ ಕುರಿತಂತೆ ಕಾಂಗ್ರೆಸ್ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್ ಅವರು ಆದೇಶಿಸಿದ್ದು, ನೈರುತ್ಯ ಪದವೀಧರ ಕ್ಷೇತ್ರದ ಬಂಡಾಯ ಅಭ್ಯರ್ಥಿ ಎಸ್.ಪಿ ದಿನೇಶ್ ಕುಮಾರ್, ಬೆಂಗಳೂರು ಪದವೀಧರರ ಕ್ಷೇತ್ರದ ಫರ್ನಾಂಡಿಸ್ ಲಾರೆನ್ಸ್, ನೈರುತ್ಯ ಶಿಕ್ಷಕರ ಕ್ಷೇತ್ರದ ಚಿಕ್ಕಮಗಳೂರಿನ ಬಿಆರ್ ನಂಜೇಶ್, ಆಗ್ನೇಯ ಶಿಕ್ಷಕರ ಕ್ಷೇತ್ರದ ಚಿತ್ರದುರ್ಗದ ಲೋಕೇಶ್ ತಾಳಿಕಟ್ಟೆ, ಬೆಂಗಳೂರಿನ ವಿನೋದ್ ಶಿವರಾಜ್ ಅವರನ್ನು ಉಚ್ಛಾಟಿಸಿ ಆದೇಶಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಿ ಪಕ್ಷದ ಶಿಸ್ತು ಉಲ್ಲಂಘಿಸಿದ್ದರಿಂದ ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷರ ಆದೇಶದ ಮೇರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಈ ಆದೇಶ ಹೊರಡಿಸಿರೋದಾಗಿ ತಿಳಿಸಿದ್ದಾರೆ. https://kannadanewsnow.com/kannada/shimoga-power-outage-in-these-areas-of-the-district-on-may-25/ https://kannadanewsnow.com/kannada/good-news-for-the-farmers-of-the-state-cm-instructs-not-to-discharge-drought-relief-amount-for-loan/

Read More

ಬೆಂಗಳೂರು: ರಾಜ್ಯಾಧ್ಯಂತ ಕುಡಿಯುವ ನೀರು ಟೆಸ್ಟ್ ಮಾಡಿ ಪೂರೈಕೆ ಮಾಡಿ. ಯಾವುದೇ ಕಾರಣಕ್ಕೂ ಕಾಲರಾ ಹೆಚ್ಚಾಗದಂತೆ, ಅಸ್ವಸ್ಥತೆಯ ಪ್ರಕರಣಗಳು ವರದಿಯಾಗದಂತೆ ಎಚ್ಚರಿಕೆ ವಹಿಸುವಂತೆ ಸಿಎಂ ಸಿದ್ಧರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರ ಹಾಗೂ ಮುಂಗಾರು ಕೃಷಿ ಚಟುವಟಿಕೆ ಕುರಿತು ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಪೂರ್ವ ಮುಂಗಾರು ಮಳೆ ಪ್ರಾರಂಭವಾಗಿದೆ. ಈಬಾರಿ ನೀತಿ ಸಂಹಿತೆ ಅನುಷ್ಠಾನದ ಅವಧಿ ಸುದೀರ್ಘವಾಗಿತ್ತು. ಸರ್ಕಾರದ ಆಡಳಿತಕ್ಕೆ ಲಕ್ವ ಹೊಡೆದಂತಾಗಿತ್ತು. ಎಲ್ಲ ಜಿಲ್ಲಾಧಿಕಾರಿಗಳು ಚುನಾವಣಾಧಿಕಾರಿಗಳಾಗಿದ್ದರು. ಚುನಾವಣಾ ಕೆಲಸದಲ್ಲಿ ನಿರತರಾಗಿದ್ದರಿಂದ ಅಭಿವೃದ್ಧಿ ಕೆಲಸಗಳಿಗೆ ಆದ್ಯತೆ ನೀಡಲು ಸಾಧ್ಯವಾಗಿರಲಿಲ್ಲ. ವಾಡಿಕೆಗಿಂತ ಹೆಚ್ಚು ಮಳೆ ಮೇ ತಿಂಗಳಲ್ಲಿ ಆಗಿದೆ. ಬಿತ್ತನೆ ಕೆಲಸವೂ ಪ್ರಾರಂಭವಾಗಿದೆ ಎಂದರು. ಮೇ ತಿಂಗಳಲ್ಲಿ ಗುರಿ 2.95 ಲಕ್ಷ ಹೆಕ್ಟೇರ್‌ ಪ್ರದೇಶ. ಸಾಧನೆಯಾಗಿರುವುದು 68,000 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಇನ್ನೂ 13 ದಿನ ಬಾಕಿದೆ. ಪೂರ್ವ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚಾಗಿದೆ ಎಂದು ಹೇಳಿದರು. ಜೂನ್‌ 6…

Read More

ಶಿವಮೊಗ್ಗ : ಸಂತೇಕಡೂರು ಗ್ರಾಮದ 66/11 ಕೆವಿ ವಿ.ವಿ.ಕೇಂದ್ರದ ಎಫ್-2 ಮತ್ತು ಎಫ್-4ರ ಮಾರ್ಗಗಳ ವ್ಯಾಪ್ತಿಯಲ್ಲಿ ಮಧ್ಯಂತರ ಕಂಬಗಳನ್ನು ಅಳವಡಿಸುವ ಮತ್ತು ವಾಹಕ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ -25 ರಂದು ಬೆಳಗ್ಗೆ 9.00 ರಿಂದ ಸಂಜೆ 6.00ರ ವರಗೆ ಸಂತೇಕಡೂರು, ಶ್ರೀರಾಮನಗರ, ರಾಂಪುರ, ಮಳಲಿಕೊಪ್ಪ, ಭಂಡಾರಿಕ್ಯಾಂಪ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಮಾಜಿ ಸೈನಿಕರ ವಿವರಗಳ ತಿದ್ದುಪಡಿಗೆ ಅವಕಾಶ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪನರ್ವಸತಿ ಇಲಾಖೆಯು ಮಾಜಿ ಸೈನಿಕರು ಮತ್ತು ಮಾಜಿ ಸೈನಿಕರ ಅವಲಂಬಿತರು ಕುಟುಂಬ ಪಿಂಚಣಿ ಪಡೆಯುವಲ್ಲಿ, ಇತರೆ ದೃಢೀಕರಣ ಪತ್ರಗಳು, ಇನ್ನಿತರೆ ಸೌಲಭ್ಯಗಳನ್ನು ಪಡೆಯುವಲ್ಲಿ ಅಡಚಣೆ ಹಾಗೂ ವಿಳಂಬತೆಯಾಗುತ್ತಿರುವುದರಿಂದ ಸೇನಾ ಸೇವಾ ಪುಸ್ತಕದಲ್ಲಿ ತಮ್ಮ ವೈಯಕ್ತಿಕ ವಿವರಗಳನ್ನು ಸರಿಪಡಿಸಿಕೊಳ್ಳಲು ಅವಕಾಶ ನೀಡಿದೆ. ಮಾಜಿ ಸೈನಿಕರು ಮತ್ತು ಮಾಜಿ ಸೈನಿಕರ ಅವಲಂಬಿತರು ಸೇನಾ ಸೇವಾ ಪುಸ್ತಕದಲ್ಲಿ ಪತಿ, ಪತ್ನಿ ಹಾಗೂ ಮಕ್ಕಳ ಹೆಸರುಗಳನ್ನು ಆಧಾರ್ ಎಸ್.ಎಸ್.ಎಲ್.ಸಿ ಪಟ್ಟಿಯೊಂದಿಗೆ ಹೊಂದಾಣಿಕೆಯಾಗುವಂತೆ…

Read More

ಶಿವಮೊಗ್ಗ : 2024-25 ನೇ ಸಾಲಿನಲ್ಲಿ ಸೊರಬದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಖಾಲಿ ಇರುವ ವೃತ್ತಿಗಳಿಗೆ ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿದ ಆಭ್ಯರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಎಲೆಕ್ಟ್ರೀಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಫಿಟ್ಟರ್, ಇನ್ಪಾರ್ಮೆಷನ್ ಮತ್ತು ಕಮ್ಯೂನಿಕೇಷನ್ ಟೆಕ್ನಾಲಜಿ ಸಿಸ್ಟಮ್ ಮೇಂಟೆನೆನ್ಸ್, ಮೆಕ್ಯಾನಿಕ್ ಮೋಟಾರ್ ವೆಹಿಕಲ್ ಹುದ್ದೆಗಳಿಗೆ ತರಬೇತಿ ನೀಡಲಾಗುವುದು. ಆಸಕ್ತ ಆಭ್ಯರ್ಥಿಗಳು www.cite.karnataka.gov.in ಆನ್‍ಲೈನ್‍ನಲ್ಲಿ ಜೂ. 03 ರೊಳಗಾಗಿ ಸಲ್ಲಿಸುವುದು ಹಾಗೂ ಆಯ್ಕೆ ಮಾಡಿಕೊಂಡ ಸರ್ಕಾರಿ ಐಟಿಐ ಗಳಲ್ಲಿ ಮೂಲ ದಾಖಲಾತಿ ಹಾಗೂ ದೃಢೀಕೃತ ದಾಖಲೆಗಳ ಪ್ರತಿಗಳೊಂದಿಗೆ ತೆರಳಿ ನಿಗದಿತ ದಿನಾಂಕದೂಳಗೆ ದಾಖಲಾತಿ ಪರಿಶೀಲನೆ ಮಾಡಿಸಿಕೊಳ್ಳುವುದು ಹಾಗೂ ಪಿಪಿಪಿ ಸೀಟುಗಳ ಪ್ರವೇಶಕ್ಕಾಗಿ ಖುದ್ದಾಗಿ/ಕಚೇರಿ ದೂ.ಸಂ. ಮೂಲಕ ಸಂಪರ್ಕಿಸುವಂತೆ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08184-290005ಗಳನ್ನು ಸಂಪರ್ಕಿಸುವುದು https://kannadanewsnow.com/kannada/drought-relief-amount-cannot-be-waived-for-farmers-loans-cm-siddaramaiah-khadak-instructs-banks/ https://kannadanewsnow.com/kannada/good-news-for-the-farmers-of-the-state-cm-instructs-not-to-discharge-drought-relief-amount-for-loan/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ನೀಡಲಾಗುತ್ತಿರುವಂತ ಬರ ಪರಿಹಾರದ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳುವಂತಿಲ್ಲ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಅವರು, ಬ್ಯಾಂಕ್ ಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಕಾಲದಲ್ಲಿ ರೈತರಿಗೆ ಸಾಲ ಸಿಗುವುದನ್ನು ಖಾತರಿಪಡಿಸಬೇಕು. ಈ ವರ್ಷದ ಸಾಲ ಯೋಜನೆ ಕಳುಹಿಸಲಾಗಿದೆ. ಜಿಲ್ಲಾ ಬ್ಯಾಂಕರುಗಳೊಂದಿಗೆ ಸಮನ್ವಯ ವಹಿಸಿ, ಕ್ರಮ ಕೈಗೊಳ್ಳಲು ಸೂಚಿಸಲಾಯಿತು ಎಂದರು. ಬರ ಪರಿಹಾರ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಬ್ಯಾಂಕರುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಬೆಳೆ ವಿಮೆ ಕ್ಲೇಮ್‌ ಮಾಡುವ ಸಂದರ್ಭದಲ್ಲಿ ಕಂಪೆನಿಗಳ ಸ್ಯಾಂಪಲ್‌ ಪರಿಶೀಲನೆಯ ಕುರಿತು ರೈತರು ಹಲವು ಸಂದೇಹಗಳನ್ನು ಹೊಂದಿದ್ದಾರೆ. ಕಂಪನಿಗಳು ಆಡುವ ಆಟದಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುವ ಅಪಾಯವಿದೆ ಎನ್ನುವ ಸಲಹೆ ಸಚಿವ ಲಾಡ್ ಅವರಿಂದ ಬಂತು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಈ ಕುರಿತು ಮುಂಚಿತವಾಗಿಯೇ ವಿಮಾ ಕಂಪೆನಿಗಳೊಂದಿಗೆ ಚರ್ಚಿಸಿ, ರೈತರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲು ಸೂಚಿಸಿದರು. https://kannadanewsnow.com/kannada/the-numbers-of-some-congress-mlas-are-also-being-tapped-ex-bjp-mla-p-rajivs-explosive-statement/ https://kannadanewsnow.com/kannada/big-shock-for-prajwal-revanna-passport-cancellation-process-started-arrest-soon/

Read More

ಬೆಂಗಳೂರು: ಬಿಜೆಪಿ, ಜೆಡಿಎಸ್ ಪಕ್ಷದ ನಾಯಕರ ಪೋನ್ ಟ್ಯಾಪ್ ಅಷ್ಟೇ ಆಗುತ್ತಿಲ್ಲ. ಕೆಲ ಕಾಂಗ್ರೆಸ್ ಶಾಸಕರ ನಂಬರ್ ಕೂಡ ಟ್ಯಾಪ್ ಆಗುತ್ತಿವೆ ಅಂತ ಬಿಜೆಪಿ ಮಾಜಿ ಶಾಸಕ ಪಿ.ರಾಜೀವ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾನ್ಯ ಗೃಹ ಸಚಿವರು ಈ ದೇಶ ಕಂಡ ಅಸಮರ್ಥ ಗೃಹ ಸಚಿವರಲ್ಲಿ ಮೊದಲಿಗರು. ಇವರ ಆಡಳಿತದಲ್ಲಿ ಇಷ್ಟೊಂದು ಕೊಲೆ ಪ್ರಕರಣ, ಅತ್ಯಾಚಾರ ಪ್ರಕರಣಗಳು ನಡೆದಿವೆ. ದರೋಡೆಗಳೂ ನಡೆಯುತ್ತಿದ್ದು, ಕಾನೂನು- ಸುವ್ಯವಸ್ಥೆ ಹದಗೆಟ್ಟಿದೆ. ಈ ಸರಕಾರ ಬಂದ ಬಳಿಕ ಪೊಲೀಸ್ ಇಲಾಖೆಯಿಂದ ಸಕ್ರ್ಯುಲರ್ ಅನ್ನುವುದೇ ಮರೆತುಹೋಗಿದೆ ಎಂದು ಟೀಕಿಸಿದರು. ಹಿಂದೆ ರಾಜ್ಯದಲ್ಲಿ ಒಂದು ಅಪರಾಧ ಪ್ರಕರಣ ನಡೆದರೂ, ಎಲ್ಲೋ ಒಂದು ದರೋಡೆ, ಅತ್ಯಾಚಾರ ನಡೆÀದರೆ ಎಲ್ಲ ಪೊಲೀಸ್ ಠಾಣೆಗೆ ಸುತ್ತೋಲೆ ಕಳುಹಿಸಲಾಗುತ್ತಿತ್ತು. ತಾವು ಗಸ್ತನ್ನು ತೀವ್ರಗೊಳಿಸಬೇಕು; ಸಂಶಯಿತರನ್ನು ತಪಾಸಣೆಗೆ ಒಳಪಡಿಸಿ; ರೌಡಿಗಳ ಪರೇಡ್ ಮಾಡಬೇಕು ಎಂದು ಸುತ್ತೋಲೆ ಕಳಿಸುತ್ತಿದ್ದರು. ಹೊಸ ಸರಕಾರ ಬಂದ ಬಳಿಕ…

Read More

ಬೆಂಗಳೂರು: ಅದಕ್ಷ, ಅಸಮರ್ಥ ಗೃಹ ಸಚಿವರನ್ನು ಕೂಡಲೇ ಸಚಿವಸಂಪುಟದಿಂದ ವಜಾ ಮಾಡಬೇಕೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾನ್ಯ ಗೃಹ ಸಚಿವರು ಈ ದೇಶ ಕಂಡ ಅಸಮರ್ಥ ಗೃಹ ಸಚಿವರಲ್ಲಿ ಮೊದಲಿಗರು. ಇವರ ಆಡಳಿತದಲ್ಲಿ ಇಷ್ಟೊಂದು ಕೊಲೆ ಪ್ರಕರಣ, ಅತ್ಯಾಚಾರ ಪ್ರಕರಣಗಳು ನಡೆದಿವೆ. ದರೋಡೆಗಳೂ ನಡೆಯುತ್ತಿದ್ದು, ಕಾನೂನು- ಸುವ್ಯವಸ್ಥೆ ಹದಗೆಟ್ಟಿದೆ. ಈ ಸರಕಾರ ಬಂದ ಬಳಿಕ ಪೊಲೀಸ್ ಇಲಾಖೆಯಿಂದ ಸಕ್ರ್ಯುಲರ್ ಅನ್ನುವುದೇ ಮರೆತುಹೋಗಿದೆ ಎಂದು ಟೀಕಿಸಿದರು. ಹಿಂದೆ ರಾಜ್ಯದಲ್ಲಿ ಒಂದು ಅಪರಾಧ ಪ್ರಕರಣ ನಡೆದರೂ, ಎಲ್ಲೋ ಒಂದು ದರೋಡೆ, ಅತ್ಯಾಚಾರ ನಡೆÀದರೆ ಎಲ್ಲ ಪೊಲೀಸ್ ಠಾಣೆಗೆ ಸುತ್ತೋಲೆ ಕಳುಹಿಸಲಾಗುತ್ತಿತ್ತು. ತಾವು ಗಸ್ತನ್ನು ತೀವ್ರಗೊಳಿಸಬೇಕು; ಸಂಶಯಿತರನ್ನು ತಪಾಸಣೆಗೆ ಒಳಪಡಿಸಿ; ರೌಡಿಗಳ ಪರೇಡ್ ಮಾಡಬೇಕು ಎಂದು ಸುತ್ತೋಲೆ ಕಳಿಸುತ್ತಿದ್ದರು. ಹೊಸ ಸರಕಾರ ಬಂದ ಬಳಿಕ ಪೊಲೀಸ್ ಇಲಾಖೆಗೆ ಕ್ರಿಯಾಶೀಲವಾಗಲು ಒಂದೇ ಒಂದು ಸುತ್ತೋಲೆ ಬಂದಿಲ್ಲ…

Read More