Subscribe to Updates
Get the latest creative news from FooBar about art, design and business.
Author: kannadanewsnow09
ರಷ್ಯಾ: ರಾತ್ರಿಯಿಡೀ ನಡೆದ ವಿನಾಶಕಾರಿ ದಾಳಿಯಲ್ಲಿ, ರಷ್ಯಾದ ಪಡೆಗಳು ಉಕ್ರೇನಿಯನ್ ನಗರಗಳಾದ್ಯಂತ 367 ಡ್ರೋನ್ಗಳು ಮತ್ತು ಕ್ಷಿಪಣಿಗಳನ್ನು ಹಾರಿಸಿವೆ, ಇದು ಯುದ್ಧದ ಇದುವರೆಗಿನ ಅತಿದೊಡ್ಡ ವೈಮಾನಿಕ ದಾಳಿಯಾಗಿದೆ. ಈ ದಾಳಿಯಲ್ಲಿ 13 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಜೈಟೊಮಿರ್ನಲ್ಲಿ ಮೂವರು ಮಕ್ಕಳು ಸೇರಿದಂತೆ 13 ಜನರು ಸಾವನ್ನಪ್ಪಿದರು ಮತ್ತು ಡಜನ್ಗಟ್ಟಲೆ ಜನರು ಗಾಯಗೊಂಡರು. ಕೈವ್, ಖಾರ್ಕಿವ್, ಮೈಕೊಲೈವ್, ಟೆರ್ನೊಪಿಲ್ ಮತ್ತು ಖ್ಮೆಲ್ನಿಟ್ಸ್ಕಿ ಮೇಲೆ ದಾಳಿಗಳು ನಡೆದವು. ಉಕ್ರೇನ್ನ ವಾಯುಪಡೆಯು 266 ಡ್ರೋನ್ಗಳು ಮತ್ತು 45 ಕ್ಷಿಪಣಿಗಳನ್ನು ಹೊಡೆದುರುಳಿಸಿತು. ಆದರೆ ಅಪಾರ್ಟ್ಮೆಂಟ್ ಬ್ಲಾಕ್ಗಳು ಮತ್ತು ಮೂಲಸೌಕರ್ಯಗಳು ತೀವ್ರವಾಗಿ ಪರಿಣಾಮ ಬೀರಿದವು, ಹಾನಿ ವ್ಯಾಪಕವಾಗಿತ್ತು. ಕೈವ್ನಲ್ಲಿ, 11 ಜನರು ಗಾಯಗೊಂಡರು. ಆದರೆ ಖ್ಮೆಲ್ನಿಟ್ಸ್ಕಿ ನಾಲ್ಕು ಸಾವುಗಳನ್ನು ವರದಿ ಮಾಡಿದೆ. ಇದು ಶುಕ್ರವಾರ ಕೈವ್ ಅನ್ನು ಗುರಿಯಾಗಿಸಿಕೊಂಡು ಡ್ರೋನ್ಗಳು ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿಗಳೊಂದಿಗೆ ಮತ್ತೊಂದು ಪ್ರಮುಖ ದಾಳಿಯ ನಂತರ ನಡೆಯಿತು. ಪ್ರಾದೇಶಿಕ ಗವರ್ನರ್ ಪ್ರಕಾರ, ರಷ್ಯಾದ ಡ್ರೋನ್ ದಾಳಿಯಲ್ಲಿ 77 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದರು ಮತ್ತು…
ಕಲಬುರಗಿ : ಈ ಹಿಂದೆ ಬಳ್ಳಾರಿಯಲ್ಲಿ ಅಪಾರ ಗಣಿ ಹಣದಿಂದ ಇಡೀ ಬಳ್ಳಾರಿಯನ್ನು ರಿಪಬ್ಲಿಕ್ ಮಾಡಿ ಜನರ ನೆಮ್ಮದಿ ಹಾಳು ಮಾಡಿದ್ದಾರೋ ಅದದೇ ಬಿಜೆಪಿ ಪಕ್ಷದ ನಾಯಕರು ಕಲಬುರಗಿ ರಿಪಬ್ಲಿಕ್ ಆಗಿದೆ ಎಂದರೆ ಜನ ನಂಬುತ್ತಾರೆಯೇ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಪ್ರಶ್ನಿಸಿದರು. ಕಲಬುರಗಿ ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ನಾಯಕರು ಕಲಬುರಗಿಗೆ ಆಗಮಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ರಿಪಬ್ಲಿಕ್ ಆಫ್ ಕಲಬುರಗಿ ಆಗಿದೆ ಎಂದರೆ ರಿಪಬ್ಲಿಕ್ ಆಗುತ್ತದಯಾ, ಕಲಬುರಗಿ ಜಿಲ್ಲೆಯ ಜನತೆಗೆ ಗೊತ್ತು ಕಾಂಗ್ರೆಸ್ ಇತಿಹಾಸ ಏನು ಅಂತಾ ಗೊತ್ತಿದೆ. ನಾವು ಅಧಿಕಾರದಲ್ಲಿದ್ದಾಗ ಅಭಿವೃದ್ಧಿ ಮಾಡಿದ್ದೆವೆ ಹೊರತು ರಿಪಬ್ಲಿಕ್ ಮಾಡಿಲ್ಲ. ರಿಪಬ್ಲಿಕ್ ಆಫ್ ಬಳ್ಳಾರಿ ಮಾಡಿದ ರಾಮುಲು ಇಲ್ಲಿ ಬಂದು ರಿಪಬ್ಲಿಕ್ ಆಪ್ ಕಲಬುರಗಿ ಬಗ್ಗೆ ಮಾತಾಡ್ತಾರೆ. ಮೊದಲು ನಿಮ್ಮ ನೈತಿಕತೆ ಎಂದು ಆಕ್ರೋಶ ಮಾತುಗಳಡಿದರು. ಪ್ರಿಯಾಂಕ್ ಖರ್ಗೆ ವಿರುದ್ದ ಬಿಜೆಪಿ ನಾಲ್ಕು…
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ -19 ಟೆಸ್ಟಿಂಗ್ ಗೆ ಅಗತ್ಯ ಟೆಸ್ಟಿಂಗ್ ಕಿಟ್ ಗಳ ಲಭ್ಯತೆಯಿದೆ. ಕೊರೋನಾ ಟೆಸ್ಟ್ ಕಿಟ್ ಕೊರತೆಯಿಲ್ಲ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟ ಪಡಿಸಿದ್ದಾರೆ. ಇಂದು ಮಾಹಿತಿ ಹಂಚಿಕೊಂಡಿರುವಂತ ಅವರು, ರಾಜ್ಯದಲ್ಲಿ SARI ಪ್ರಕರಣಗಳಲ್ಲಿ ಇಂದಿನಿಂದ ಟೆಸ್ಟಿಂಗ್ ನಡೆಸಲು ಸೂಚಿಸಲಾಗಿದೆ. ಸದ್ಯಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆ ಇರುವುದರಿಂದ VRDL ಟೆಸ್ಟಿಂಗ್ ಸೌಲಭ್ಯ ಇರುವ ಕೇಂದ್ರಗಳಲ್ಲಿ ಕೋವಿಡ್ ಟೆಸ್ಟಿಂಗ್ ನಡೆಸಲಾಗುತ್ತಿದೆ ಎಂದರು. ಬೆಂಗಳೂರಿನಲ್ಲಿ ನಿಮ್ಹಾನ್ಸ್ ಆಸ್ಪತ್ರೆ, ಬೆಂಗಳೂರು ಮೆಡಿಕಲ್ ಕಾಲೇಜು, NIV ಕೇಂದ್ರ ಸೇರಿದಂತೆ ರಾಜ್ಯದ 10 ಕಡೆಗಳಲ್ಲಿ ಟೆಸ್ಟಿಂಗ್ ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಒಂದು ತಿಂಗಳಿಗಾಗುವಷ್ಟು 5 ಸಾವಿರ RTPCR ಟೆಸ್ಟಿಂಗ್ ಕಿಟ್ ಗಳನ್ನ ತೆಗೆದುಕೊಳ್ಳಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಸರ್ಕಾರ ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ, ಸೂಕ್ತ ಆರೋಗ್ಯ ಸೇವೆ ಒದಗಿಸಲು ಸನ್ನದ್ಧವಾಗಿದೆ ಎಂದು ತಿಳಿಸಿದ್ದಾರೆ. ಲಭ್ಯವಿರುವ ಟೆಸ್ಟಿಂಗ್ ಕಿಟ್ಸ್ ಗಳ ಮಾಹಿತಿ RAT = 2500…
ಯಾವುದೇ ತಿಂಗಳಿನ 8, 17, 26ನೇ ತಾರೀಕಿನಂದು ಹುಟ್ಟಿದವರು ಎಂಟರ ಸಂಖ್ಯೆಯವರು ಆಗುತ್ತಾರೆ. 8, 17, 26ನೇ ತಾರೀಕಿನಂದು ಹುಟ್ಟಿದವರು ಬಹಳ ವಿಶೇಷ ವ್ಯಕ್ತಿತ್ವವನ್ನು ಹೊಂದಿರುತ್ತಾರೆ ಎಂದು ಹೇಳಲಾಗಿದೆ. ಶನೈಶ್ಚರ ಬಹಳ ವಿಶೇಷ ಹಾಗೂ ವಿಶಿಷ್ಟ. ಶನಿ ಗ್ರಹವನ್ನು ಪ್ರತಿನಿಧಿಸುವ ಸಂಖ್ಯೆ 8. ಇನ್ನು 8ನೇ ತಾರೀಕಿನಂದು ಹುಟ್ಟಿದವರ ಮೇಲೆ ಸಂಪೂರ್ಣವಾಗಿ ಶನೈಶ್ಚರನ ಪ್ರಭಾವ ಇದ್ದರೆ, ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ…
ಮೈಸೂರು: ಮೈಸೂರು ವಿಭಾಗದ ಬೀರೂರು-ತಾಳಗುಪ್ಪ ಸೆಕ್ಷನ್ನ ರೈಲ್ವೆ ಸಾಮಗ್ರಿಗಳ ಆಂತರಿಕ ಭದ್ರತಾ ಪರಿಶೀಲನೆ ನೈಋತ್ಯ ರೈಲ್ವೆ ಮುಖ್ಯಾಲಯದ ಅಧಿಕಾರಿಗಳ ತಂಡದಿಂದ 2025ರ ಮೇ 22 ಮತ್ತು 23ರಂದು ನಡೆಸಲಾಯಿತು. ಈ ತಂಡವನ್ನು ಎಂ. ರಾಮಕೃಷ್ಣ, ಪ್ರಧಾನ ಮುಖ್ಯ ಭದ್ರತಾ ಅಧಿಕಾರಿ ನೇತೃತ್ವವಹಿಸಿದ್ದರು. ಪರಿಶೀಲನೆಯ ವೇಳೆ, ತಂಡವು ರೈಲ್ವೆ ನಿಲ್ದಾಣಗಳು, ರಿಲೇ ಕೊಠಡಿಗಳು, ಪಾಯಿಂಟ್ ಮತ್ತು ಕ್ರಾಸಿಂಗ್ಗಳು, ಸೇತುವೆಗಳು, ರನ್ನಿಂಗ್ ರೂಮ್ಗಳು, ಲೆವೆಲ್ ಕ್ರಾಸಿಂಗ್ ಗೇಟ್ಗಳು, ಎ ಆರ್ ಎಂ ಇ (ಅಪಘಾತ ಪರಿಹಾರ ವೈದ್ಯಕೀಯ ಉಪಕರಣ), ಟ್ರಾಕ್ಷನ್ ಸಬ್ಸ್ಟೇಷನ್ಗಳು, ಸೆಕ್ಷನಿಂಗ್ ಪೋಸ್ಟ್ಗಳು ಮತ್ತು ಸಬ್ಸೆಕ್ಷನಿಂಗ್ ಪೋಸ್ಟ್ಗಳು ಸೇರಿದಂತೆ ವಿವಿಧ ರೈಲ್ವೆ ಸಾಮಗ್ರಿಗಳನ್ನು ಪರಿಶೀಲಿಸಲಾಯಿತು. ಭದ್ರತಾ ಕ್ರಮಗಳು ಮತ್ತು ಕಾರ್ಯಾಚರಣಾ ವ್ಯವಸ್ಥೆಗಳ ಸಮಗ್ರ ಪರಿಶೀಲನೆ ನಡೆಸಲಾಯಿತು. ಈ ತಂಡವು ಭದ್ರತಾ ಪ್ರೋಟೋಕಾಲ್ಗಳ ಕುರಿತು ಕ್ಷೇತ್ರದ ಸಿಬ್ಬಂದಿಯ ಅರಿವು ಮತ್ತು ತಿಳಿವಳಿಕೆಯನ್ನು ಮೌಲ್ಯಮಾಪನ ಮಾಡಲು ಅವರೊಂದಿಗೆ ಸಂವಾದ ನಡೆಸಿತು. ಮೈಸೂರು ವಿಭಾಗವು ಭದ್ರತಾ ಮಾನದಂಡಗಳನ್ನು ಕಾಪಾಡುವಲ್ಲಿ ತೆಗೆದುಕೊಂಡಿರುವ ನಿಷ್ಠೆಗೆ ಶ್ಲಾಘನೆ ವ್ಯಕ್ತಪಡಿಸಿದರು. ಮುದಿತ್ ಮಿತ್ತಲ್, ವಿಭಾಗೀಯ…
ಬೆಂಗಳೂರು: ನಗರದಲ್ಲಿ ಕೋವಿಡ್ ಸೋಂಕಿನ ಸಂಖ್ಯೆ ಏರಿಕೆಯಾಗುತ್ತಿದೆ. ಇದರ ನಡುವೆ ಕೊರೋನಾಗೆ ಬೆಂಗಳೂರು ನಗರದಲ್ಲಿ ಮೊದಲ ಬಲಿಯಾಗಿದೆ. ಕೋವಿಡ್ ಸೋಂಕಿಗೆ ತುತ್ತಾಗಿದ್ದಂತ ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದ ವೈಟ್ ಫೀಲ್ಡ್ ಮೂಲದ 84 ವರ್ಷದ ವೃದ್ಧರೊಬ್ಬರಿಗೆ ಉಸಿರಾಟದ ಸಮಸ್ಯೆ, ಅಂಗಾಂಗ ವೈಫಲ್ಯ ಕಂಡು ಬಂದಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಿ ಪರೀಕ್ಷೆಗೆ ಒಳಪಡಿಸಿದಾಗ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಮೇ.17ರಂದು ಕೋವಿಡ್ ಸೋಂಕಿತ ವೃದ್ಧ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಈ ಮೂಲಕ ಬೆಂಗಳೂರಲ್ಲಿ ಕೊರೋನಾ ಸೋಂಕಿಗೆ ಮೊದಲ ಬಲಿಯಾಗಿದೆ. https://kannadanewsnow.com/kannada/shivamogga-there-will-be-a-power-outage-in-the-areas-of-sagar-taluk-tomorrow/ https://kannadanewsnow.com/kannada/a-heart-wrenching-incident-in-the-state-three-commit-suicide-over-daughter-leaving-home/ https://kannadanewsnow.com/kannada/tender-for-the-construction-of-an-underground-road-in-two-phases-in-bengaluru-soon-dcm-d-k-shivakumar/
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ವಿವಿಧೆಡೆಯಲ್ಲಿ ಬಿಹೆಚ್ ರಸ್ತೆ ಅಗಲೀಕರಣ ಕಾಮಗಾರಿಯ ಹಿನ್ನಲೆಯಲ್ಲಿ ಮೇ.25, 2025ರ ಭಾನುವಾರದ ನಾಳೆ ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ. ಈ ಕುರಿತಂತೆ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ: 25.05.2025 ರ ಭಾನುವಾರದಂದು ಸಾಗರದ ಬಿ.ಹೆಚ್ ರಸ್ತೆ, ಅಗಲೀಕರಣ ಕಾಮಗಾರಿಯ ಸಲುವಾಗಿ ವಿದ್ಯುತ್ ಕಂಬಗಳ ಸ್ಥಳಾಂತರಿಸುವ ಕಾರ್ಯ ಹಮ್ಮಿಕೊಂಡಿರುವುದರಿಂದ ಸಾಗರ ಪಟ್ಟಣ ವ್ಯಾಪ್ತಿಯ ಈ ಕೆಳಕಂಡ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ ಅಂತ ತಿಳಿಸಿದೆ. ನಾಳೆ ಸಾಗರ ತಾಲ್ಲೂಕಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲಿ ಎಲ್.ಬಿ.ಕಾಲೇಜು, ಅಂಬಾಮರ, ಲೋಹಿಯಾನಗರ, ಪ್ರಗತಿನಗರ, ವಿನೋಬನಗರ, ಮಂಕಳಲೆ, ನೆಹರುನಗರ, ಅರಳಿಕೊಪ್ಪ ಜನ್ನತ್ಗಲ್ಲಿ, ಸಿಗಂದೂರು ಮಾರ್ಕೆಟ್ ರಸ್ತೆ, ಜೋಸಫ್ ನಗರ, ಅಶೋಕ ರಸ್ತೆ, ಕೃಷ್ಣ ಗ್ಯಾರೇಜ್, ಎಲ್.ಐ.ಸಿ ಆಫೀಸ್ ಹತ್ತಿರ ಪವರ್ ಕಟ್ ಆಗಲಿದೆ. ಎಸ್.ಎನ್.ನಗರ ಫೀಡರ್ ಮಾರ್ಗದಿಂದ ವಿದ್ಯುತ್ ಸಂಪರ್ಕ ಪಡೆದಿರುವ ಗಾಂಧೀನಗರ, ವಿಜಯನಗರ, ಬಿ.ಕೆ. ರಸ್ತೆ,…
ಉಡುಪಿ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯವು ಶಿಕ್ಷಣದಲ್ಲಿ ಸುಧಾರಣಾ ಕ್ರಮಗಳನ್ನು ಕೈಗೊಂಡಿದ್ದು, ಪರೀಕ್ಷಾ ವಿಧಾನದಲ್ಲೂ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕುಲಪತಿ ಪ್ರೊ.ಸಿ.ಬಸವರಾಜು ತಿಳಿಸಿದ್ದಾರೆ. ಉಡುಪಿಯ ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ನಡೆದ ವಾರ್ಷಿಕ ದಿನ ಮತ್ತು ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿದರು. ಪ್ರತಿಭಾವಂತ ಕಾನೂನು ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಿಸಿದ ಅವರು, ಶೈಕ್ಷಣಿಕ ಸಾಧನೆಗೆ ಪೂರಕವಾದ ಮಾತುಗಳನ್ನಾಡಿ ಗಮನಸೆಳೆದರು. ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾಲಯವೆನಿಸಿರುವ ಕರ್ನಾಟಕ ರಾಜ್ಯ ಕಾನೂನು ವಿವಿ ಇದೀಗ ಪದವಿ ಶಿಕ್ಷಣದಲ್ಲಿ ಪರಿವರ್ತನೆ ತಂದಿದ್ದು, ದೇಶಾದ್ಯಂತ ಇರುವ ಕಾನೂನು ತಜ್ಞರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅವರ ಸಲಹೆಗಳನ್ನು ಆಧರಿಸಿ ಪಠ್ಯ ಕ್ರಮ ಹಾಗೂ ಪರಿಕ್ಷಾ ಪದ್ದತಿಯನ್ನು ಅಳವಡಿಸಲಾಗಿದೆ ಎಂದು ಡಾ.ಸಿ.ಬಸವರಾಜು ತಿಳಿಸಿದರು. ಪರೀಕ್ಷಾ ಹಂತದಲ್ಲಿ ಸುರಕ್ಷಾ ವ್ಯವಸ್ಥೆ ಅನುಸರಿಸಲಾಗುತ್ತಿದೆ. ಅಕ್ರಮಗಳನ್ನು ತಡೆಯಲು ಹೆಂದೆಂದಿಗಿಂತಲೂ ಹೆಚ್ಚಿನ ಬಿಗಿ ಕ್ರಮಗಳನ್ನು ಅನುಸರಿಸಲಾಗುತ್ತಿದೆ. ಈ ಮೂಲಕ, ನ್ಯಾಯವಾದಿಗಳಾಗುವ, ಕಾನೂನು ಪಂಡಿತರಾಗುವ ಕನಸು ಹೊತ್ತರುವ ಪ್ರತಿಭಾವಂತ ಕಾನೂನು ವಿದ್ಯಾರ್ಥಿಗಳಿಗೆ ನ್ಯಾಯಕೊಡಿಸುವ ಪ್ರಯತ್ನ ನಡೆದಿದೆ ಎಂದು ಮಾಹಿತಿ…
BREAKING: ರಾಜ್ಯದಲ್ಲಿಂದು ಐವರಿಗೆ ಕೊರೋನಾ ಪಾಸಿಟಿವ್: ಸೋಂಕಿತರ ಸಂಖ್ಯೆ 38ಕ್ಕೆ ಏರಿಕೆ, ಓರ್ವ ಸಾವು | Corona Case
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಆರ್ಭಟ ಶುರುವಾಗಿದೆ. ಇಂದು ಪರೀಕ್ಷೆ ಮಾಡಿದಂತ ಮಾದರಿಯಲ್ಲಿ ಐವರಿಗೆ ಕೋವಿಡ್ ಪಾಸಿಟಿವ್ ( Covide Positive ) ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ ಕೋರೋನಾ ಸೋಂಕಿತ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯಿಂದ ಕೋವಿಡ್ ಬುಲೆಟಿನ್ ಬಿಡುಗಡೆ ಮಾಡಲಾಗಿದ್ದು, ಬೆಂಗಳೂರು ನಗರದಲ್ಲಿ 92 ಮಂದಿಯನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇವರಲ್ಲಿ ಇಬ್ಬರಿಗೆ ಪಾಸಿಟಿವ್ ಬಂದಿದ್ದರೇ, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದಿದೆ. ಇನ್ನೂ ಮೈಸೂರಿನಲ್ಲಿ ಮೂವರು ಕೋವಿಡ್ ಪರೀಕ್ಷೆಗೆ ( Covide 19 Test) ಒಳಪಡಿಸಲಾಗಿದ್ದು, ಇಬ್ಬರಿಗೆ ಪಾಸಿಟಿವ್ ಬಂದಿದೆ. ವಿಜಯನಗರದಲ್ಲಿ ಒಬ್ಬರಿಗೆ ಸೇರಿದಂತೆ ರಾಜ್ಯಾಧ್ಯಂತ ಐವರಿಗೆ ಕೊರೋನಾ ಪಾಸಿಟಿವ್ ( Corona Positive ) ಅಂತ ವರದಿಯಿಂದ ದೃಢಪಟ್ಟಿದೆ. ಹೀಗಾಗಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. https://kannadanewsnow.com/kannada/a-heart-wrenching-incident-in-the-state-three-commit-suicide-over-daughter-leaving-home/ https://kannadanewsnow.com/kannada/bike-rider-burnt-alive-in-road-accident-in-kalaburagi/ https://kannadanewsnow.com/kannada/there-are-35-covid-positive-cases-in-the-state-there-is-no-situation-to-panic-minister-dinesh-gundu-rao/
ಕಲಬುರ್ಗಿ: ಜಿಲ್ಲೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ಬೈಕ್ ಸವಾರನ ಮೇಲೆ ಪೆಟ್ರೋಲ್ ಬಿದ್ದು ಸ್ಥಳದಲ್ಲೇ ಸಜೀವ ದಹನವಾಗಿರುವಂತ ಘಟನೆ ನಡೆದಿದೆ. ಕಲಬುರ್ಗಿ ಜಿಲ್ಲೆಯ ಕಾಳಗಿ ಪಟ್ಟಣದ ಕೊಡದೂರಿನಲ್ಲಿ ನಡೆದಂತ ಅವಘಡದಲ್ಲಿ ಬೈಕ್ ಸವಾರ ಸಜೀವದಹನವಾಗಿರುವಂತ ಶಾಕಿಂಗ್ ಘಟನೆ ನಡೆದಿದೆ. ಪರಸ್ಪರ ಡಿಕ್ಕಿಯಾಗಿ ಬೈಕ್ ಹೊತ್ತಿ ಉರಿದಿದೆ. ಮೈಮೇಲೆ ಪೆಟ್ರೋಲ್ ಬಿದ್ದು ಬೈಕ್ ನಲ್ಲಿ ತೆರಳುತ್ತಿದ್ದಂತ ವ್ಯಕ್ತಿ ಸಜೀವ ದಹನವಾಗಿದ್ದಾರೆ. ಕಲಬುರ್ಗಿ ಜಿಲ್ಲೆಯ ಕಾಳಗಿ ಪಟ್ಟಣದ ಕೊಡದೂರಿನಲ್ಲಿ ನಡೆದಂತ ಈ ಘಟನೆಯಲ್ಲಿ ಸವಾರ ದಶರಥ್ ಮಡಿವಾಳ(28) ಎಂಬುವರು ಸಜೀವದಹನವಾಗಿದ್ದಾರೆ. https://kannadanewsnow.com/kannada/distribution-of-2000-electric-buses-to-hyderabad-city-transport-corporation-under-pme-drive-scheme-hdk/ https://kannadanewsnow.com/kannada/a-heart-wrenching-incident-in-the-state-three-commit-suicide-over-daughter-leaving-home/