Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಅಹಮದಾಬಾದ್: ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಸೋಮವಾರ ಅಹಮದಾಬಾದ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಬಂಧಿಸಿದೆ. ಅಹ್ಮದಾಬಾದ್ ವಿಮಾನ ನಿಲ್ದಾಣದಲ್ಲಿ ಶ್ರೀಲಂಕಾ ಮೂಲದ ನಾಲ್ವರು ಐಸಿಸ್ ಉಗ್ರರರನ್ನು ಎಟಿಎಸ್ ಅಧಿಕಾರಿಗಳು ಬಂಧಿಸಿದ್ದಾರೆ. ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗಿದೆ. https://kannadanewsnow.com/kannada/cet-exam-result-to-be-declared-only-after-2nd-puc-exam-2-results-kea/ https://kannadanewsnow.com/kannada/breaking-sc-refuses-to-entertain-plea-against-new-criminal-laws/
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2 ಹಾಗೂ ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶದ ನಂತ್ರ, ಸಾಮಾನ್ಯ ಪ್ರವೇಶ ಪರೀಕ್ಷೆ( CET-2024) ಫಲಿತಾಂಶ ಪ್ರಕಟಿಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಪಷ್ಟ ಪಡಿಸಿದೆ. ಈ ಬಗ್ಗೆ ಎಕ್ಸ್ ನಲ್ಲಿ ಮಾಹಿತಿ ಪೋಸ್ಟ್ ಮಾಡಿದ್ದು, ದ್ವಿತೀಯ ಪಿಯುಸಿ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾದ ನಂತರವೇ ಕೆಸಿಇಟಿ-24ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದಿದೆ. ಇದಲ್ಲದೆ, ಪ್ರಕಟಣೆಯ ದಿನಾಂಕಕ್ಕೆ ಮುಂಚಿತವಾಗಿ ಫಲಿತಾಂಶಗಳನ್ನು ಪ್ರಕಟಿಸುವ ದಿನಾಂಕವನ್ನು ಕೆಇಎ ಅಧಿಕೃತವಾಗಿ ತಿಳಿಸುತ್ತದೆ. ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೆ ಒಳಗಾಗಬಾರದು. ಹೆಚ್ಚಿನ ಮಾಹಿತಿಗೆ ಸಂಬಂಧಿಸಿದಂತೆ ಕೆಇಎ ಅಧಿಕೃತ ಜಾಲತಾಣ www.kea.kar.nic.in ಗೆ ಭೇಟಿ ನೀಡಿ ಪರಿಶೀಲಿಸಬಹುದು ಎಂದು ಹೇಳಿದೆ. https://twitter.com/KEA_karnataka/status/1792446348773708038 https://kannadanewsnow.com/kannada/did-cm-siddaramaiah-thank-the-killers/ https://kannadanewsnow.com/kannada/breaking-sc-refuses-to-entertain-plea-against-new-criminal-laws/
ಬೆಂಗಳೂರು: ಮುಖ್ಯಮಂತ್ರಿಗಳು ಕೊಲೆಗಡುಕರಿಗೆ ಧನ್ಯವಾದ ಹೇಳಿದ್ದಾರಾ? ತಮ್ಮ ಸರಕಾರದ ಅವಧಿ ಮುಗಿದುದಕ್ಕೆ ಬೈಬೈ- ಗುಡ್ ಬೈ ಎಂದು ಧನ್ಯವಾದ ಹೇಳಿದ್ದಾರೋ ಅರ್ಥ ಆಗಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅವರ ಮುಖದ ಕಳೆ ನೋಡಿದರೆ ಅವರು ಸರಕಾರದ ಕೊನೆ ಅವಧಿ ಎದುರಿಸುತ್ತಿರುವಂತಿತ್ತು ಎಂದು ವಿಶ್ಲೇಷಿಸಿದರು. ಕಾಂಗ್ರೆಸ್ ಸರಕಾರದ ಒಂದು ವರ್ಷ ಕೊಲೆಗಡುಕರಿಗೆ ಹರ್ಷ. ಒನ್ ಇಯರ್ ಖಜಾನೆ ಫುಲ್ ಕ್ಲಿಯರ್, ಖಾಲಿ ಖಾಲಿ. ವರುಷ ಒಂದು ಸಮಸ್ಯೆಗಳು ನೂರೊಂದು. ಕಾಂಗ್ರೆಸ್ ಸರಕಾರ ಬಂತು; ಜನರ ಮುಖದಲ್ಲಿ ಹರ್ಷ ಇಲ್ಲ ಎಂದು ತಿಳಿಸಿದರು. ಕಾಂಗ್ರೆಸ್ ಲೂಟಿ ಎಷ್ಟು ಕೋಟಿ ಎಂದು ಜನರು ಲೆಕ್ಕ ಹಾಕುತ್ತಿದ್ದಾರೆ. ನೇಹಾ, ಮೀನಾ, ಅಂಜಲಿ ಎಂಬ ಮಹಾಲಕ್ಷ್ಮಿಯರು. ನಮ್ಮ ಮನೆಯ ಮಹಾಲಕ್ಷಿಯರಿಗಿಲ್ಲ ಬದುಕುವ ಭಾಗ್ಯ ಎಂದರಲ್ಲದೆ, ನೇಹಾ, ಮೀನಾ, ಅಂಜಲಿ ಆಯ್ತು. ಮುಂದೆ ಯಾರೆಂದು ನಮ್ಮ ಹೆಣ್ಮಕ್ಕಳು ಆತಂಕದಿಂದ…
ಬೆಂಗಳೂರು: ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ಮಹಿಳೆಯರೊಬ್ಬರು ಲೈಂಗಿಕ ದೌರ್ಜನ್ಯ ಪ್ರಕರಮ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಇಂದು ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಮೇ.16ರಂದು ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಒಂದು ದಿನದ ಮಟ್ಟಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಮೇ.17ರಂದು ಜಾಮೀನು ಅವಧಿ ಮುಕ್ತಾಯಗೊಂಡ ಹಿನ್ನಲೆಯಲ್ಲಿ ನ್ಯಾಯಪೀಠವು, ಅರ್ಜಿಯ ವಿಚಾರಣೆ ನಡೆಸಿತು. ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನ ನ್ಯಾಯಪೀಠದ ಮುಂದೆ ಎಸ್ಐಟಿ ಪರ ಎಸ್ ಪಿಪಿ ಜಾಯ್ನಾ ಕೊಥಾರಿ ಅವರು ಆರಂಭದಲ್ಲಿ ವಾದ ಮಂಡಿಸಿದರು. ಅವರು ಐಪಿಸಿ ಸೆಕ್ಷನ್ 436ರಡಿ ದಾಖಲಾಗಿರುವಂತ ಪ್ರಕರಣದಲ್ಲಿ ಜಾಮೀನು ಅರ್ಜಿ ಊರ್ಜಿತವಲ್ಲ. ಈಗಾಗಲೇ ಈ ಪ್ರಕರಣದಲ್ಲಿ ಹೆಚ್.ಡಿ ರೇವಣ್ಣ ಅವರು ಕೋರ್ಟ್ ಮುಂದೆ ಶರಣಾಗಿದ್ದಾರೆ. ಐಪಿಸಿ ಸೆಕ್ಷನ್ 376ರಡಿ ಜೀವಾವಧಿ ಶಿಕ್ಷೆ ಇದೆ. ಇದು ಜಾಮೀನು…
ಬೆಂಗಳೂರು : ಬಿಜೆಪಿಯ ನಿರಂತರ ಅಪಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ. ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ ಸಮೇತ ವಿವರಿಸಿದರು. ಸರ್ಕಾರಕ್ಕೆ ವರ್ಷ ಪೂರೈಸಿದ ಸಂದರ್ಭದಲ್ಲಿ ಬೆಂಗಳೂರು ಪ್ರೆಸ್ ಕ್ಲಬ್ ಆಯೋಜಿಸಿದ್ದ ಮೀಟ್ ದ ಪ್ರೆಸ್ ನಲ್ಲಿ ಮಾತನಾಡಿದರು. ವಿಜಯೇಂದ್ರ, ಆರ್.ಅಶೋಕ್ ಗೆ ಆರ್ಥಿಕತೆ ಅರ್ಥ ಆಗಲ್ಲ. ಹೀಗಾಗಿ ಖಜಾನೆ ಖಾಲಿ ಆಗಿದೆ ಎಂದು ಪರಮ ಸುಳ್ಳು ಹೇಳುತ್ತಿದ್ದಾರೆ. ನಾವು ಗ್ಯಾರಂಟಿಯೇತರ ಅಭಿವೃದ್ಧಿ ಕಾರ್ಯಗಳಿಗೆ 54374 ಕೋಟಿ ಖರ್ಚು ಮಾಡುವುದಾಗಿ ಬಜೆಟ್ ನಲ್ಲಿ ಹೇಳಿದ್ದೆವು. ಆದರೆ 56274 ಕೋಟಿ ಖರ್ಚು ಮಾಡಿದೆವು. ಅಂದರೆ ಬಜೆಟ್ ನಲ್ಲಿ ಹೇಳಿದ್ದಕ್ಕಿಂತ ಹೆಚ್ಚು ಖರ್ಚು ಮಾಡಿದ್ದೇವೆ ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು. ನೀರಾವರಿಗೆ 16360 ಕೋಟಿ ಖರ್ಚು ಮಾಡುವುದಾಗಿ ಬಜೆಟ್ ನಲ್ಲಿ ಹೇಳಿದ್ದೆವು. ಆದರೆ 18198 ಕೋಟಿ ಖರ್ಚು ಮಾಡಿದೆವು. ಹೇಳಿದ್ದಕ್ಕಿಂತ ಹೆಚ್ಚು ಖರ್ಚು ಮಾಡಿದ್ದೇವೆ. ಲೋಕೋಪಯೋಗಿ ಇಲಾಖೆಗೂ 9661…
ಇರಾನ್: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾದ ಹಿನ್ನೆಲೆಯಲ್ಲಿ ಅವರ ನಿಧನಕ್ಕೆ ಐದು ದಿನಗಳ ಸಾರ್ವಜನಿಕ ಶೋಕಾಚರಣೆಯನ್ನು ಇರಾನ್ನ ಸರ್ವೋಚ್ಚ ನಾಯಕ ಅಲಿ ಖಮೇನಿ ಘೋಷಿಸಿದ್ದಾರೆ. ಮೊದಲ ಉಪಾಧ್ಯಕ್ಷ ಮೊಹಮ್ಮದ್ ಮೊಖ್ಬರ್ ಅವರನ್ನು ದೇಶದ ಕಾರ್ಯನಿರ್ವಾಹಕ ಶಾಖೆಯ ಮಧ್ಯಂತರ ಮುಖ್ಯಸ್ಥರಾಗಿ ನೇಮಕ ಮಾಡಿರುವುದನ್ನು ದೃಢಪಡಿಸಿದ್ದಾರೆ. ರೈಸಿ ಅವರ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಲು ಅಧ್ಯಕ್ಷೀಯ ಚುನಾವಣೆ ನಡೆಸಲು ಇರಾನ್ ಈಗ ಗರಿಷ್ಠ 50 ದಿನಗಳ ಅವಧಿಯನ್ನು ಹೊಂದಿದೆ. “ನಾನು ಐದು ದಿನಗಳ ಸಾರ್ವಜನಿಕ ಶೋಕಾಚರಣೆಯನ್ನು ಘೋಷಿಸುತ್ತೇನೆ ಮತ್ತು ಇರಾನ್ನ ಪ್ರೀತಿಯ ಜನರಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ” ಎಂದು ಖಮೇನಿ ಅಧಿಕೃತ ಸುದ್ದಿ ಸಂಸ್ಥೆ ಐಆರ್ಎನ್ಎ ನಡೆಸಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಮೊಖ್ಬರ್ ಕಾರ್ಯನಿರ್ವಾಹಕ ಶಾಖೆಯನ್ನು ನಿರ್ವಹಿಸುತ್ತಾರೆ ಮತ್ತು ಗರಿಷ್ಠ 50 ದಿನಗಳಲ್ಲಿ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ಶಾಸಕಾಂಗ ಮತ್ತು ನ್ಯಾಯಾಂಗ ಶಾಖೆಗಳ ಮುಖ್ಯಸ್ಥರೊಂದಿಗೆ ವ್ಯವಸ್ಥೆ ಮಾಡಲು ಬದ್ಧರಾಗಿದ್ದಾರೆ” ಎಂದು ಅವರು ಹೇಳಿದರು. https://kannadanewsnow.com/kannada/note-date-for-registration-of-students-for-sslc-exam-ii-extended/ https://kannadanewsnow.com/kannada/breaking-sc-refuses-to-entertain-plea-against-new-criminal-laws/
ಬೆಂಗಳೂರು: 2024ರ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಪುನರಾವರ್ತಿತ ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳ ನೋಂದಣಿ ದಿನಾಂಕವನ್ನು ವಿಸ್ತರಣೆ ಮಾಡಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದ್ದು, 2024ರ ಎಸ್ ಎಸ್ ಎಲ್ ಸಿ ಪರೀಕ್ಷೆ-1ಕ್ಕೆ ನೋಂದಾಯಿಸಿಕೊಂಡು ಪರೀಕ್ಷೆಗೆ ಗೈರು ಹಾಜರಾದ, ಪೂರ್ಣಗೊಳಿಸಲಾಗಿಲ್ಲದ, ಹಿಂದಿನ ಸಾಲಿನಲ್ಲಿ ಅನುತ್ತೀರ್ಣರಾದ ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳುವ ಅಭ್ಯರ್ಥಿಗಳಿಗೆ 2024ರ ಜೂನ್ ನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷ-2 ಅನ್ನು ನಡೆಸಲಾಗುತ್ತಿದೆ ಎಂದಿದ್ದಾರೆ. ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಪುನರಾವರ್ತಿತ ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳ ನೋಂದಣಿ ದಿನಾಂಕವನ್ನು ಈ ಕೆಳಕಂಡಂತೆ ವಿಸ್ತರಣೆ ಮಾಡಲಾಗಿದೆ. ಮಂಡಳಿಯ ಜಾಲತಾಣದ ಶಾಲಾ ಲಾಗಿನ್ ಮೂಲಕ ವಿದ್ಯಾರ್ಥಿಗಳ ಮಾಹಿತಿಯನ್ನು ಅಪ್ ಲೋಡ್ ಮಾಡಲು ದಿನಾಂಕ 21-05-2024ರ ಮಧ್ಯರಾತ್ರಿ 12 ಗಂಟೆಯವರೆಗೆ ವಿಸ್ತರಣೆ ಮಾಡಲಾಗಿದೆ. ಮಂಡಳಿಯ ಜಾಲತಾಣದ ಶಾಲಾ ಲಾಗಿನ್ ಮೂಲಕ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕದ ಚಲನ್ ಮುದ್ರಿಸಿಕೊಳ್ಳಲು ದಿನಾಂಕ…
ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದಂತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಗೆಲುವಿನ ನಗೆ ಬೀರಲಿದೆ. ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಗೆಲುವು ಸಾಧಿಸಲಿದ್ದಾರೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಅವರು, ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಈ ವೇಳೆ ಮಾತನಾಡಿದಂತ ಸಿಎಂ ಸಿದ್ಧರಾಮಯ್ಯ ಅವರು, ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಶಿಕ್ಷಕರ ನೋವಿಗೆ ಸ್ಪಂದಿಸುವ ರೀತಿಯಲ್ಲಿ ಕೆಲಸ ಮಾಡಲಿದ್ದಾರೆ. ಅವರಿಗೆ ಈ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವಿನ ಎಲ್ಲಾ ಲಕ್ಷಣಗಳಿದ್ದಾವೆ ಎಂದರು. ಶಿಕ್ಷಕರ ಕ್ಷೇತ್ರದ ಸಮಸ್ಯೆ ನಿವಾರಿಸೋ ನಿಟ್ಟಿನಲ್ಲಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಒಲವು ಇರುವಂತವರು ಆಗಿದ್ದಾರೆ. ನಮ್ಮ ಸರ್ಕಾರವು ಶಿಕ್ಷಕರ ಪರವಾಗಿ ನಿಲ್ಲುತ್ತಿದೆ. ಶಿಕ್ಷಕರು ನಮ್ಮ ಪರವಾಗಿ ನಿಂತು, ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ…
ಬೆಂಗಳೂರು: ವಿವಿಧ ಕಾರಣಗಳಿಂದಾಗಿ ಉದ್ಯಾನ್ ಎಕ್ಸ್ಪ್ರೆಸ್ ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಲಾಗಿದೆ. ಜೂನ್ 21, 2024 ರಿಂದ ಜಾರಿಗೆ ಬರುವಂತೆ ರೈಲು ಸಂಖ್ಯೆ 11302 ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು- ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (CSMT) ಮುಂಬೈ ಉದ್ಯಾನ್ ಡೈಲಿ ಎಕ್ಸ್ಪ್ರೆಸ್ ರೈಲು ಯಾದಗಿರಿ ನಿಲ್ದಾಣದ ಆಗಮನ/ನಿರ್ಗಮನದ ಸಮಯವನ್ನು ಪರಿಷ್ಕರಿಸಲು ದಕ್ಷಿಣ ಮಧ್ಯ ರೈಲ್ವೆಯು ಸೂಚಿಸಿದೆ. ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಈ ರೈಲು ಯಾದಗಿರಿ ನಿಲ್ದಾಣಕ್ಕೆ ಬೆಳಿಗ್ಗೆ 05:49/05:50ರ ಬದಲು 05:29/05:30 ಗಂಟೆಗೆ ಆಗಮಿಸಿ / ನಿರ್ಗಮಿಸಲಿದೆ. https://kannadanewsnow.com/kannada/housewife-commits-suicide-after-being-criticised-on-social-media/ https://kannadanewsnow.com/kannada/breaking-sc-refuses-to-entertain-plea-against-new-criminal-laws/
ತಮಿಳುನಾಡು: ಇಲ್ಲಿನ ಕೊಯಮತ್ತೂರಿನಲ್ಲಿ ಅಪರ್ಮೆಂಟ್ ಒಂದರ 4ನೇ ಮಹಡಿಯಿಂದ ಬಿದ್ದಿದ್ದಂತ ಮಗುವನ್ನು ಸ್ಥಳೀಯ ನಿವಾಸಿಗಳೇ ರಕ್ಷಣೆ ಮಾಡಿದ್ದರು. ಈ ರಕ್ಷಣೆಯ ವೀಡಿಯೋ ವೈರಲ್ ಆಗಿತ್ತು. ಈ ವೀಡಿಯೋಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಬಂದ ಟೀಕೆಯಿಂದ ಮನನೊಂದು ಮಗುವಿನ ತಾಯಿ ನೇಣಿಗೆ ಶರಣಾಗಿದ್ದಾರೆ. ತಮಿಳುನಾಡಿನ ಕೊಯಮತ್ತೂರಿನಲ್ಲಿರುವಂತ ಅಪಾರ್ಮೆಂಟ್ ಒಂದರ 4ನೇ ಮಹಡಿಯಿಂದ ದಿನಾಂಕ 28-04-2024ರಂದು ಮಗು ಕೆಳಗೆ ಬಿದ್ದಿತ್ತು. ಕಿಟಕಿಯ ಮೇಲೆ ಬಿದ್ದಿದ್ದಂತ ಮಗುವನ್ನು ರಕ್ಷಣೆ ಮಾಡಲಾಗಿತ್ತು. ಹೀಗೆ ಅಪಾರ್ಮೆಂಟ್ ನಿವಾಸಿಗಳು ಮಗುವನ್ನು ರಕ್ಷಣೆ ಮಾಡುತ್ತಿದ್ದಂತ ವೀಡಿಯೋ ವೈರಲ್ ಆಗಿತ್ತು. ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ನೋಡಿದಂತ ನೆಟ್ಟಿಗರು ಮಗುವ ಹೀಗೆ ಕೆಳಗೆ ಬೀಳೋದಕ್ಕೆ ತಾಯಿಯ ನಿರ್ಲಕ್ಷ್ಯವೇ ಕಾರಣ. ತಾಯಿ ಅಜಾಗರೂಕತೆಯನ್ನು ಮಗುವಿನ ಬಗ್ಗೆ ತೋರಿದ್ದಾಳೆ. ಮಗುವಿನ ಬಗ್ಗೆ ಕಣ್ಣಿಟ್ಟಿದ್ದರೇ ಇಂತಹ ಅನಾಹುತ ನಡೆಯುತ್ತಿರಲಿಲ್ಲ. ಹಾಗೆ ಹೀಗೆ ಅಂತ ಟೀಕೆ ಮಾಡಿದ್ದರು. ವೈರಲ್ ವೀಡಿಯೋಗಳಿಗೆ ಬಂದಂತ ಟೀಕೆಗಳನ್ನು ಗಮನಿಸಿದಂತ ಮಗುವಿನ ತಾಯಿ ರಮ್ಯಾ ಇಂದು ತಮಿಳುನಾಡಿ ಕೊಯಮತ್ತೂರಲ್ಲಿ ತಮ್ಮ ನಿವಾಸದಲ್ಲಿ ಮನನೊಂದು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.…











