Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ನಾಳೆ ರಾಜ್ಯ ರಾಜಕಾರಣದ ಅತ್ಯಂತ ಮಹತ್ವದ ದಿನವಾಗಿದ್ದು, ಡಿ.ಕೆ. ಶಿವಕುಮಾರ್ ಅವರು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಡೀ ರಾಜಧಾನಿ ಬೆಂಗಳೂರಿನಲ್ಲಿ, ವಿಶೇಷವಾಗಿ ಲೋಕಭವನ ಮತ್ತು ವಿಧಾನಸೌಧದ ಸುತ್ತಮುತ್ತ ಅತ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಯಾವುದೇ ಸಣ್ಣ ಅಹಿತಕರ ಘಟನೆಗೂ ಅವಕಾಶ ನೀಡದಂತೆ ಇಡೀ ಪ್ರದೇಶವನ್ನು ಪೊಲೀಸರು ತಮ್ಮ ಸುಪರ್ದಿಗೆ ಪಡೆದಿದ್ದಾರೆ. ನಾಳೆಯ ಬೃಹತ್ ಭದ್ರತಾ ಕಾರ್ಯಕ್ಕಾಗಿ ಒಟ್ಟು 3,500 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಭದ್ರತೆಯ ಸಂಪೂರ್ಣ ವಿವರ ಇಲ್ಲಿದೆ: ಕಾನೂನು ಸುವ್ಯವಸ್ಥೆ ಮತ್ತು ಟ್ರಾಫಿಕ್ಗೆ ಹೈ ಸೆಕ್ಯೂರಿಟಿ ಕಾನೂನು ಮತ್ತು ಸುವ್ಯವಸ್ಥೆ: ಸಮಾರಂಭದ ಸುರಕ್ಷತೆ ಹಾಗೂ ಜನದಟ್ಟಣೆಯನ್ನು ನಿಯಂತ್ರಿಸಲು 2,200 ಕಟ್ಟುನಿಟ್ಟಿನ ಕಾನೂನು ಸುವ್ಯವಸ್ಥೆ ವಿಭಾಗದ ಪೊಲೀಸರನ್ನು ನಿಯೋಜಿಸಲಾಗಿದೆ. ಸಂಚಾರ ನಿಯಂತ್ರಣ: ಗಣ್ಯರ ಆಗಮನ ಹಾಗೂ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗದಂತೆ ಸುಗಮ ವ್ಯವಸ್ಥೆ ಕಲ್ಪಿಸಲು 1,300 ಸಂಚಾರಿ (ಟ್ರಾಫಿಕ್) ಪೊಲೀಸರನ್ನು ಕರ್ತವ್ಯಕ್ಕೆ ಬಳಸಿಕೊಳ್ಳಲಾಗುತ್ತಿದೆ. ಉನ್ನತ ಅಧಿಕಾರಿಗಳ ದಂಡು: ಭದ್ರತೆಯ ನೇರ ಉಸ್ತುವಾರಿಯನ್ನು ನಗರದ ಎಲ್ಲಾ…
ಚಾಮರಾಜನಗರ: ಇ ಖಾತಾ ಮಾಡಿಸಲು 25 ಸಾವಿರ ಲಂಚ ಪೀಕುತ್ತಿದ್ದವರನ್ನ ಲೋಕಾಯುಕ್ತರು ಬಲೆಗೆ ಕೆಡವಿದ್ದಾರೆ. ಲೋಕಾಯುಕ್ತ ಚಾ.ನಗರದ ತನಿಖಾದಿಕಾರಿ ಲೋಹಿತ್ ಅವರ ನೇತೃತ್ವದಲ್ಲಿ ಡಿವೈಸ್ಪಿ ಗಜೇಂದ್ರಪ್ರಸಾದ್ ಅವರ ಮಾರ್ಗದರ್ಶನದಲ್ಲಿ ನಗರಸಭೆ ಕಚೇರಿಗೆ ದಾಳಿ ನಡೆಸಿ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಇಬ್ಬರು ಅಧಿಕಾರಿಗಳು ಹಾಗೂ ಮದ್ಯವರ್ತಿಯೊಬ್ಬರನ್ನ ವಶಕ್ಕೆ ಪಡೆದುಕೊಂಡಿದ್ದಾರೆ ನಗರಸಬೆಯ ಅದಿಕಾರಿಗಳಾದ ಆರ್ಒ ಹೇಮಂತ್ ಕುಮಾರ್ ಹಾಗೂ ಆರ್ಐ ಶಕೀಲ್ ಅಹಮ್ಮದ್ ಹಾಗೂ ಮದ್ಯವರ್ತಿ ಎನ್ನಲಾದ ಹಬೀಬ್ ಅವರು ಲೋಕಾ ಬಲೆಗೆ ಬಿದ್ದ ಅಧಿಕಾರಿಗಳು ಎಂದು ಹೇಳಲಾಗುತ್ತಿದ್ದು, ಸದ್ಯ ನಗರಸಭೆ ಕಚೇರಿಯಲ್ಲೇ ತನಿಖೆ ನಡೆಯುತ್ತಿದೆ. ಈ ಖಾತಾ ಸಂಬಂದ ದೂರುದಾರ ನಾಗರಾಜು ಎಂಬುವರು ನೀಡಿದ ದೂರಿನ ಮೇರೆ ಲಂಚವಾಗಿ 25 ಸಾವಿರ ಪಡೆಯುತ್ತಿದ್ದಾಗ ಬ್ರೋಕರ್ ಸಮೇತ ಅದಿಕಾರಿಗಳು ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ .ಚಾ.ನಗರ ಲೋಕಾಯುಕ್ತರು ಸಿಬ್ಬಂದಿ ವರ್ಗದವರು ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು. ಚಾಮರಾಜನಗರ ನಗರಸಬೆಯಲ್ಲಿ ಬಹುತೇಕವಾಗಿ ದಲ್ಲಾಳಿಗಳ ಮೂಲಕವೇ ಕೆಲಸವಾಗುತ್ತಿರೊದರ ಬಗ್ಗೆ ವ್ಯಾಪಕವಾಗಿ ದೂರುಗಳು ಕೇಳಿಬರುತ್ತಿದ್ದವು. ವರದಿ: ರಾಮಸಮುದ್ರ ಎಸ್. ವೀರಭದ್ರಸ್ವಾಮಿ, ಚಾಮರಾಜನಗರ https://kannadanewsnow.com/kannada/ahead-of-dkshs-swearing-in-as-cm-tomorrow-no-fly-zone-declared-in-this-area-in-bengaluru/…
ಬೆಂಗಳೂರು: ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಜೂನ್ 3ರಂದು ರಾಜಧಾನಿ ಬೆಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಗರದ ಪ್ರಮುಖ ಸ್ಥಳಗಳ ಸುತ್ತಮುತ್ತ ‘ತಾತ್ಕಾಲಿಕ ನೋ ಫ್ಲೈ ಝೋನ್’ (Temporary No Fly Zone) ಘೋಷಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಭದ್ರತಾ ಹಿತದೃಷ್ಟಿಯಿಂದ ಬೆಂಗಳೂರಿನ ಕನ್ನಿಂಗ್ಹ್ಯಾಮ್ ರಸ್ತೆಯಲ್ಲಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಕಚೇರಿ ಹಾಗೂ ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಹೋಟೆಲ್ ಶಾಂಗ್ರಿ-ಲಾ ಸುತ್ತಲಿನ 1 ಕಿಲೋಮೀಟರ್ ವ್ಯಾಪ್ತಿಯನ್ನು ನಿಷೇಧಿತ ವಲಯ ಎಂದು ಘೋಷಿಸಲಾಗಿದೆ. ಡ್ರೋನ್, ಗ್ಲೈಡರ್ ಹಾರಾಟಕ್ಕೆ ಕಟ್ಟುನಿಟ್ಟಿನ ನಿಷೇಧ! ಪೊಲೀಸ್ ಆಯುಕ್ತರು ಮತ್ತು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಗಿರುವ ಸೀಮಂತ್ ಕುಮಾರ್ ಸಿಂಗ್ (I.P.S) ಅವರು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಸೆಕ್ಷನ್ 163ರ ಅಡಿಯಲ್ಲಿ ಈ ಆದೇಶವನ್ನು ಹೊರಡಿಸಿದ್ದಾರೆ. ಇದರ ಅನ್ವಯ ನಿಗದಿತ ದಿನ ಹಾಗೂ ಸಮಯದ ಅವಧಿಯಲ್ಲಿ ಯಾವುದೇ ರೀತಿಯ ಡ್ರೋನ್ಗಳು,…
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಹುನಿರೀಕ್ಷಿತ ಕ್ಷಣ ಹತ್ತಿರವಾಗಿದ್ದು, ನಾಳೆ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಐತಿಹಾಸಿಕ ಮತ್ತು ಅದ್ಧೂರಿ ರಾಜಕೀಯ ಸಮಾರಂಭಕ್ಕೆ ಸಾಕ್ಷಿಯಾಗಲಿರುವ ಗಣ್ಯಾತಿಗಣ್ಯರ ಹಾಗೂ ವಿಶೇಷ ಆಹ್ವಾನಿತರ ಅಧಿಕೃತ ಪಟ್ಟಿ ಸಿದ್ಧವಾಗಿದೆ. ಕೇವಲ ರಾಜಕೀಯ ಮುಖಂಡರಷ್ಟೇ ಅಲ್ಲದೆ, ಸಮಾಜದ ಎಲ್ಲಾ ಸ್ತರದ ಜನರನ್ನು ಒಳಗೊಂಡ ವಿಶಿಷ್ಟ ಆಹ್ವಾನಿತರ ಪಟ್ಟಿ ಇದಾಗಿದೆ. ಸಮಾರಂಭದಲ್ಲಿ ಭಾಗವಹಿಸಲಿರುವ ಪ್ರಮುಖ ಆಹ್ವಾನಿತರ ವಿವರ ಈ ಕೆಳಗಿನಂತಿದೆ: ಹೈಕಮಾಂಡ್ ಮತ್ತು ರಾಜಕೀಯ ಗಣ್ಯರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ದಂಡೇ ಈ ಸಮಾರಂಭಕ್ಕೆ ಸಾಕ್ಷಿಯಾಗಲಿದೆ. ಎಐಸಿಸಿ (AICC) ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹೂಲ್ ಗಾಂಧಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ವಿವಿಧ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿ (PCC) ಅಧ್ಯಕ್ಷರುಗಳು ಹಾಗೂ ಸಂಸದರು ವಿಶೇಷ ಆಹ್ವಾನಿತರು: ಡಿಕೆಶಿ ಶಾಲಾ…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಗಿಳಾಲಗುಂಡಿ ಕ್ರಾಸ್ ಬಳಿ ಇಂದು ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಚಲಿಸುತ್ತಿದ್ದ ಖಾಸಗಿ ಬಸ್ ಶಿವಮೊಗ್ಗದಿಂದ ಸಾಗರದ ಕಡೆಗೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ಬಸ್ನಲ್ಲಿದ್ದ ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಖಾಸಗಿ ಬಸ್ನ ಮುಂಭಾಗ ನಜ್ಜುಗುಜ್ಜಾಗಿದೆ. ರಸ್ತೆ ಪಕ್ಕದ ತಡೆಗೋಡೆಗೆ ಡಿಕ್ಕಿ ಹೊಡೆಯುತ್ತಿದ್ದಂತೆ ಬಸ್ನಲ್ಲಿದ್ದ ಪ್ರಯಾಣಿಕರು ಆತಂಕದಿಂದ ಕಿರುಚಾಡಿದ್ದಾರೆ. ಅದೃಷ್ಟವಶಾತ್, ಸದ್ಯಕ್ಕೆ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದ್ದು, ಪ್ರಯಾಣಿಕರು ದೊಡ್ಡ ಗಂಡಾಂತರದಿಂದ ಪಾರಾಗಿದ್ದಾರೆ. ಖಾಸಗಿ ಬಸ್ ಶಿವಮೊಗ್ಗದಿಂದ ಸಾಗರದ ಕಡೆಗೆ ತೆರೆಳುತ್ತಿತ್ತು ಎನ್ನಲಾಗಿದೆ. ಅಪಘಾತ ನಡೆದ ವಿಷಯ ತಿಳಿಯುತ್ತಿದ್ದಂತೆಯೇ ಆನಂದಪುರ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲು ನೆರವಾಗಿದ್ದು, ಘಟನಾ ಸ್ಥಳದ ಪರಿಶೀಲನೆ ನಡೆಸುತ್ತಿದ್ದಾರೆ. ಜೊತೆಗೆ ರಸ್ತೆಯಲ್ಲಿ ಉಂಟಾಗಿದ್ದ ಸಂಚಾರ ದಟ್ಟಣೆಯನ್ನು ಸುಗಮಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಅಪಘಾತಕ್ಕೆ ಚಾಲಕನ ಅತಿವೇಗ ಕಾರಣವೇ…
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಹುದೊಡ್ಡ ಇತಿಹಾಸ ಸೃಷ್ಟಿಯಾಗುತ್ತಿದ್ದು, ನಾಳೆ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಐತಿಹಾಸಿಕ ಕ್ಷಣವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸಜ್ಜಾಗಿದ್ದಾರೆ. ಈ ಮಹೋತ್ಸವದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಬರೋಬ್ಬರಿ 10 ಲಕ್ಷ ಲಾಡುಗಳನ್ನು ಸಿದ್ಧಪಡಿಸಲಾಗುತ್ತಿದೆ! ನೆಲಮಂಗಲದ ಗ್ಲೋಬಲ್ ಕಾಲೇಜು ಮೈದಾನದಲ್ಲಿ ಈ ಬೃಹತ್ ಲಾಡು ತಯಾರಿಕಾ ಕಾರ್ಯ ಭರದಿಂದ ಸಾಗುತ್ತಿದೆ. ಡಿ.ಕೆ. ಶಿವಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿರುವ ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ನರಸಿಂಹಮೂರ್ತಿ ಅವರ ನೇತೃತ್ವದಲ್ಲಿ ಈ ಮೆಗಾ ಲಾಡು ಪ್ರಸಾದದ ವ್ಯವಸ್ಥೆಯನ್ನು ಮಾಡಲಾಗಿದೆ. 250ಕ್ಕೂ ಹೆಚ್ಚು ಬಾಣಸಿಗರಿಂದ ಅಹೋರಾತ್ರಿ ಕೆಲಸ! ಹತ್ತು ಲಕ್ಷ ಲಾಡುಗಳನ್ನು ಅತ್ಯಂತ ರುಚಿಕರವಾಗಿ ಮತ್ತು ಸಮಯಕ್ಕೆ ಸರಿಯಾಗಿ ಸಿದ್ಧಪಡಿಸಲು ತಿರುಪತಿಯಿಂದ ಆಗಮಿಸಿರುವ ವಿಶೇಷ ಪರಿಣಿತರು ಸೇರಿದಂತೆ ಒಟ್ಟು 250ಕ್ಕೂ ಹೆಚ್ಚು ಪ್ರಸಿದ್ಧ ಬಾಣಸಿಗರು (ಅಡುಗೆ ಭಟ್ಟರು) ಅಹೋರಾತ್ರಿ ಶ್ರಮಿಸುತ್ತಿದ್ದಾರೆ. ಲಾಡು ತಯಾರಿಕೆಗೆ ಬಳಕೆಯಾಗುತ್ತಿರುವ ಬೃಹತ್…
ಬೆಂಗಳೂರು: ರಾಜ್ಯದಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಸಂಪುಟ ರಚನೆಯ ಕಸರತ್ತು ತೀವ್ರಗೊಂಡಿದೆ. ದೆಹಲಿಯಲ್ಲಿ ಬೀಡುಬಿಟ್ಟಿರುವ ಕಾಂಗ್ರೆಸ್ ನಾಯಕರು ಹೈಕಮಾಂಡ್ ಜೊತೆ ನಡೆಸಿದ ಸರಣಿ ಸಭೆಗಳ ಬಳಿಕ, ಸಚಿವರಾಗಲಿರುವ ಶಾಸಕರ ಮೊದಲ ಪಟ್ಟಿ ಬಹುತೇಕ ಬಹಿರಂಗಗೊಂಡಿದೆ. ಮೂಲಗಳ ಪ್ರಕಾರ, ಬುಧವಾರ ನಡೆಯಲಿರುವ ಸುದೀರ್ಘ ಕಾರ್ಯಕ್ರಮದಲ್ಲಿ ಡಿ.ಕೆ.ಶಿವಕುಮಾರ್ ಅವರ ಜೊತೆಗೆ ಒಟ್ಟು 14 ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಚಿವರ ಆಯ್ಕೆ ಕುರಿತು ಹೈಕಮಾಂಡ್ ನಾಯಕರು, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ. ಈ ಸಭೆಯ ಮುಖಾಂತರ ಇದುವರೆಗೆ ಒಟ್ಟು 12 ಪ್ರಮುಖ ನಾಯಕರ ಹೆಸರುಗಳು ಅಂತಿಮಗೊಂಡಿವೆ ಎನ್ನಲಾಗಿದ್ದು, ಇಂದು ರಾತ್ರಿ 9 ಗಂಟೆಯ ವೇಳೆಗೆ ಸಚಿವರ ಸಂಪೂರ್ಣ ಹಾಗೂ ಅಧಿಕೃತ ಅಂತಿಮ ಪಟ್ಟಿ ಹೊರಬೀಳುವ ಸಾಧ್ಯತೆಯಿದೆ. ನೂತನ ಸಚಿವರ ಸಂಭಾವ್ಯ ಪಟ್ಟಿ ಇಲ್ಲಿದೆ: ಕಾಂಗ್ರೆಸ್ ವಲಯದಲ್ಲಿ ಸದ್ಯಕ್ಕೆ ಕೇಳಿಬರುತ್ತಿರುವ ಹಾಗೂ ಅಂತಿಮಗೊಂಡಿದೆ ಎನ್ನಲಾದ ಪ್ರಮುಖ 12 ಸಚಿವರ ಹೆಸರುಗಳು ಈ ಕೆಳಗಿನಂತಿವೆ:…
ಶಿವಮೊಗ್ಗ: ರಾಜಕೀಯ ನಾಯಕರನ್ನು ಇಷ್ಟಪಡುವ, ಆರಾಧಿಸುವ ಅಭಿಮಾನಿಗಳನ್ನು ನಾವು ಸಾಕಷ್ಟು ನೋಡಿದ್ದೇವೆ. ಆದರೆ ಶಿವಮೊಗ್ಗ ಜಿಲ್ಲೆಯ ಸಾಗರದ ನಾಗರಾಜ್ ಗುಡ್ಡೇಮನೆ ಅವರ ಅಭಿಮಾನ ಮಾತ್ರ ನಿಜಕ್ಕೂ ವಿಶಿಷ್ಟ ಮತ್ತು ಅನನ್ಯ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮೇಲಿನ ಅಪ್ಪಟ ಅಭಿಮಾನದಿಂದಾಗಿ ನಾಗರಾಜ್ ಅವರು ತಮ್ಮ ಎರಡು ಕೈಗಳ ಭುಜಗಳ ಮೇಲೆ ಡಿ.ಕೆ.ಶಿ ಅವರ ಚಿತ್ರವನ್ನು ಟ್ಯಾಟೋ (ಹಚ್ಚೆ) ಹಾಕಿಸಿಕೊಳ್ಳುವ ಮೂಲಕ ತಮ್ಮ ಅಭಿಮಾನದ ಭಕ್ತಿಯನ್ನು ಮೆರೆದಿದ್ದಾರೆ. 8 ಗಂಟೆಗಳ ಕಾಲ ನೋವು ಭರಿಸಿ ಹಚ್ಚೆ! ಡಿ.ಕೆ. ಶಿವಕುಮಾರ್ ಅವರು ಈ ಹಿಂದೆ ಇಡಿ (ED) ಪ್ರಕರಣದಲ್ಲಿ ದೆಹಲಿಯ ತಿಹಾರ್ ಜೈಲು ಸೇರಿ, ಬಳಿಕ ಬಿಡುಗಡೆಯಾದ ದಿನವೇ ನಾಗರಾಜ್ ಈ ಸಾಹಸಕ್ಕೆ ಕೈಹಾಕಿದ್ದರು. ಬೆಂಗಳೂರಿನಲ್ಲಿ ಡಿಕೆ ಶಿವಕುಮಾರ್ ಜೈಲಿನಿಂದ ಬಿಡುಗಡೆಯಾದ ಅದೇ ದಿನದಂದು, ಸಾಗರದಲ್ಲಿ ನಾಗರಾಜ್ ಅವರು ಸತತ 8 ಗಂಟೆಗಳ ಕಾಲ ತೀವ್ರ ನೋವನ್ನು ಲೆಕ್ಕಿಸದೆ ತಮ್ಮ ಎರಡೂ ಭುಜಗಳ ಮೇಲೆ ನೆಚ್ಚಿನ ನಾಯಕನ ಚಿತ್ರವನ್ನು ಕೆತ್ತಿಸಿಕೊಂಡಿದ್ದಾರೆ. ಇವರ ಒಂದು ಭುಜದ…
ಇಂಗ್ಲಿಷ್ನಲ್ಲಿ ಒಂದು ಪ್ರಸಿದ್ಧ ಗಾದೆಯಿದೆ – “An apple a day keeps the doctor away” (ದಿನಕ್ಕೊಂದು ಸೇಬು ತಿಂದರೆ ವೈದ್ಯರಿಂದ ದೂರವಿರಬಹುದು). ಇತ್ತೀಚಿನ ಆಧುನಿಕ ವೈದ್ಯಕೀಯ ಸಂಶೋಧನೆಗಳು ಮತ್ತು ಪೌಷ್ಟಿಕಾಂಶ ತಜ್ಞರ ಪ್ರಕಾರ ಈ ಮಾತು ಅಕ್ಷರಶಃ ಸತ್ಯ. ನಮ್ಮ ದೇಹಕ್ಕೆ ಕಾಡುವ ಸಣ್ಣಪುಟ್ಟ ಇನ್ಫೆಕ್ಷನ್ಗಳಿಂದ ಹಿಡಿದು ದೀರ್ಘಕಾಲದ ಕಾಯಿಲೆಗಳವರೆಗೆ, ಬಹುತೇಕ ಎಲ್ಲಾ ಕಾಯಿಲೆಗಳ ವಿರುದ್ಧ ಹೋರಾಡುವ ಅದ್ಭುತ ಶಕ್ತಿ ಸೇಬಿನಲ್ಲಿದೆ. ಹಾಗಾದರೆ, ಈ ಒಂದು ಹಣ್ಣು ನಮ್ಮ ದೇಹದಲ್ಲಿ ಹೇಗೆ ರೋಗಗಳ ವಿರುದ್ಧ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತದೆ? ಇದರ ಪ್ರಮುಖ ಆರೋಗ್ಯ ಪ್ರಯೋಜನಗಳು ಇಲ್ಲಿವೆ: 1. ಕರುಳಿನ ಆರೋಗ್ಯದ ರಕ್ಷಕ (Gut Health Guardian) ಸೇಬು ಹಣ್ಣಿನಲ್ಲಿ ‘ಪೆಕ್ಟಿನ್’ (Pectin) ಎಂಬ ಕರಗುವ ನಾರಿನಂಶ (Soluble Fiber) ಹೇರಳವಾಗಿದೆ. ಇದು ನಮ್ಮ ಕರುಳಿನಲ್ಲಿರುವ ಒಳ್ಳೆಯ ಬ್ಯಾಕ್ಟೀರಿಯಾಗಳಿಗೆ (Probiotics) ಆಹಾರವಾಗಿ ಕೆಲಸ ಮಾಡುತ್ತದೆ. ಕರುಳಿನ ಆರೋಗ್ಯ ಉತ್ತಮವಾಗಿದ್ದರೆ ದೇಹದ ರೋಗನಿರೋಧಕ ಶಕ್ತಿ ತಂತಾನೇ ಹೆಚ್ಚುತ್ತದೆ ಮತ್ತು ಜೀರ್ಣಕ್ರಿಯೆಯ…
ಬೆಂಗಳೂರು: ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಮತ್ತು ಅಲ್ಪಸಂಖ್ಯಾತರನ್ನು ಓಲೈಸಲು ಆಳಂದದ ಶ್ರೀ ರಾಘವ ಚೈತನ್ಯ ಮಂದಿರದ ಮೇಲೆ ದಾಳಿ ಮಾಡಿದವರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕಾಂಗ್ರೆಸ್ ಸರ್ಕಾರ ವಾಪಸ್ ಪಡೆದಿದೆ ಎಂದು ವಿಧಾನಪರಿಷತ್ತಿನ ವಿರೋಧಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದ್ದಾರೆ. ಕಲಬುರ್ಗಿಯ ಆಳಂದದಲ್ಲಿ ಪವಿತ್ರ ಶ್ರೀ ರಾಘವ ಚೈತನ್ಯ ಶಿವಲಿಂಗಕ್ಕೆ ಅಪಮಾನ ಎಸಗಿ, ಕೋಮು ಉದ್ವಿಗ್ನತೆ ಸೃಷ್ಟಿಸಿದ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಉಂಟುಮಾಡಿದ ಹಾಗೂ ಪೆÇಲೀಸ್ ಅಧಿಕಾರಿಗಳ ಮೇಲೆಯೇ ಹಲ್ಲೆ ನಡೆಸಿದ ಗಂಭೀರ ಪ್ರಕರಣಗಳ ಹಲವು ಕೇಸ್ಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ಮುಂದಾಗಿರುವುದು ಅತ್ಯಂತ ಆಘಾತಕಾರಿ ಮತ್ತು ಖಂಡನೀಯ. ಇಂತಹ ಸಮಾಜವಿರೋಧಿ ಹಾಗೂ ಕ್ರಿಮಿನಲ್ ತತ್ವಗಳ ಬೆನ್ನಿಗೆ ನಿಲ್ಲುವ ಮೂಲಕ ಕಾಂಗ್ರೆಸ್ ಸರ್ಕಾರ ತಾನು ಜನವಿರೋಧಿ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಈ ಹಿನ್ನೆಲೆಯಲ್ಲಿ, ಸಂವಿಧಾನವಿರೋಧಿ ಹಾಗೂ ಜನವಿರೋಧಿಯಾದ ಈ ಆದೇಶವನ್ನು ತಕ್ಷಣವೇ ರದ್ದುಪಡಿಸುವಂತೆ ಗೌರವಾನ್ವಿತ ರಾಜ್ಯಪಾಲರಿಗೆ ಇಂದು ಮನವಿ ಸಲ್ಲಿಸಲಾಯಿತು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ ಅವರು, ಘಟನೆಯ…














