Author: kannadanewsnow09

ಧಾರವಾಡ : ಅಬಕಾರಿ ಇಲಾಖೆಯಲ್ಲಿ ಸ್ಥಗಿತಗೊಂಡಿರುವ, ಮಂಜೂರಾಗದೇ ಬಾಕಿ ಉಳಿದಿರುವ ಸನ್ನದುಗಳನ್ನು ಭಾರತ ಸರ್ಕಾರದ ಸ್ವಾಮ್ಯದ ಸಂಸ್ಥೆಯಾದ ಎಮ್‍ಎಸ್‍ಟಿಸಿ ಲಿಮಿಟೆಡ್‍ನ ಇ-ಪೋರ್ಟಲ್ ನಲ್ಲಿ ಇ-ಹರಾಜು ಮಾಡಲು ಎಮ್‍ಎಸ್‍ಟಿಸಿ https://www.mstcecommerce.com ನಲ್ಲಿ ಬಿಡ್ಡುಗಳನ್ನು ಆಹ್ವಾನಿಸಲಾಗಿದೆ. ಹರಾಜು ನಡೆಯುವ ಮತ್ತು ಅಂಗೀಕಾರ ಪತ್ರ (ಎಲ್‍ಓಎ) ನೀಡುವ ವರ್ಷವನ್ನೂ ಒಳಗೊಂಡಂತೆ ಐದು ಅಬಕಾರಿ ವರ್ಷಗಳ ಅವಧಿಗೆ ಅನ್ವಯಿಸುತ್ತದೆ. ಕರ್ನಾಟಕ ರಾಜ್ಯದ್ಯಾಂತ ಒಟ್ಟು 569 ಸನ್ನದುಗಳನ್ನು ಇ-ಹರಾಜು ಮಾಡಲು ಉದ್ದೇಶಿಸಿದ್ದು, ಧಾರವಾಡ ಜಿಲ್ಲೆಗೆ ಒಟ್ಟು 15 ಸಿಎಲ್-2ಎ(ಎಸ್‍ಸಿ-ಎ-1, ಎಸ್‍ಸಿ-ಬಿ-1, ಎಸ್‍ಸಿ-ಸಿ-1, ಎಸ್‍ಟಿ-1/ ಜನರಲ್-11) ಹಾಗೂ 4 ಸಿಎಲ್-9ಂ ಸನ್ನದುಗಳನ್ನು ಜನರಲ್ ಕೆಟಗೆರಿ (General Category) ಹಂಚಿಕೆ ಮಾಡಿರುತ್ತಾರೆ. ಡಿಸೆಂಬರ್ 22, 2025 ರಿಂದ ಬಿಡ್ಡುದಾರರ ನೋಂದಣಿ ಪ್ರಕ್ರಿಯೆ ಆನ್‍ಲೈನ್‍ನಲ್ಲಿ ಪ್ರಾರಂಭವಾಗಿರುತ್ತದೆ. ಸದರಿ ವಿಷಯದ ಕುರಿತು ಜನೆವರಿ 05, 2026 ರಂದು ಬೆಳಿಗ್ಗೆ 11 ಗಂಟೆಗೆ ಧಾರವಾಡ ರಾಯಾಪೂರ ಕೆ.ಎಮ್.ಎಫ್ ತರಬೇತಿ ಕೇಂದ್ರದಲ್ಲಿ ತರಬೇತಿಯನ್ನು ಆಯೋಜಿಸಲಾಗಿರುತ್ತದೆ ಎಂದು ಅಬಕಾರಿ ಉಪ ಆಯುಕ್ತ ರಮೇಶಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಅಂದಹಾಗೇ…

Read More

ಧಾರವಾಡ : ಧಾರವಾಡ ತಾಲ್ಲೂಕಿನ ಮರೇವಾಡ ಹಾಗೂ ಕಲಘಟಗಿ ತಾಲ್ಲೂಕಿನ ದೇವಲಿಂಗಿಕೊಪ್ಪ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಗ್ರಾಮ-ಒನ್ ಕೇಂದ್ರಕ್ಕೆ ಫ್ರಾಂಚೈಸಿಯು ರಾಜೀನಾಮೆ ಹಾಗೂ ರದ್ದುಪಡಿಸಿದ ಪ್ರಯುಕ್ತ, ಮರೇವಾಡ ಹಾಗೂ ದೇವಲಿಂಗಿಕೊಪ್ಪ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಖಾಲಿಯಾಗಿರುವ ಗ್ರಾಮ-ಒನ್ ಕೇಂದ್ರಕ್ಕೆ ಫ್ರಾಂಚೈಸಿಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇ.ಡಿ.ಸಿ.ಎಸ್. ನಿರ್ದೆಶನಾಲಯ, ಇ-ಆಡಳಿತ ಇಲಾಖೆಯಿಂದ ಜಿಲ್ಲೆಯ ತಾಲ್ಲೂಕುಗಳ 02 ಗ್ರಾಮ್-ಒನ್ ಕೇಂದ್ರಗಳಿಗೆ ಫ್ರಾಂಚೈಸಿಗಳನ್ನು ಆಯ್ಕೆ ಮಾಡಲು ಆನ್ ಲೈನ್ ಮೂಲಕ (https://www.karnatakaone.gov.in/…/GramOneFranchiseeTerms) ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಜನೆವರಿ 15, 2026 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಹೆಲ್ಪ ಡೆಸ್ಕ್ ಮೊಬೈಲ್ ಸಂಖ್ಯೆ 9019026687, 9019026697, 9019026690, 9019027696 ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಯಾವುದೇ ಇಲಾಖೆಯವರು ಅನುಮತಿ ಪಡೆಯದೆ ರಸ್ತೆ ಕತ್ತರಿಸಿದರೆ ದಂಡ ವಿಧಿಸುವುದರ ಜೊತೆಗೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಬೆಸ್ಕಾಂ, ಕೆಪಿಟಿಸಿಎಲ್, ಜಲಮಂಡಳಿ ಹಾಗೂ ಗೇಲ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಬಿಎ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳು ಕೈಗೊಂಡಿರುವ ಕಾಮಗಾರಿಗಳ ಅನುಷ್ಠಾನದ ಸಂದರ್ಭದಲ್ಲಿ ಎದುರಾಗುವ ಸಮಸ್ಯೆಗಳ ಕುರಿತು ಇಂದು ನಡೆದ ಸಮನ್ವಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ರಸ್ತೆ ಕತ್ತರಿಸುವ ಅಗತ್ಯವಿದ್ದಲ್ಲಿ “ಮಾರ್ಕ್ಸ್” ತಂತ್ರಾಂಶದ ಮೂಲಕ ಅನುಮತಿ ಪಡೆಯುವುದು ಕಡ್ಡಾಯ. ಈ ಪೈಕಿ ಯಾವುದೇ ಇಲಾಖೆಯಾಗಲಿ ಅನುಮತಿಯಿಲ್ಲದೆ ರಸ್ತೆ ಕತ್ತರಿಸುವಂತಿಲ್ಲ ಎಂದು ಅವರು ಎಚ್ಚರಿಸಿದರು. ಆಯಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಕತ್ತರಿಸಲು ಮಾರ್ಕ್ಸ್ ತಂತ್ರಾಂಶದ ಮೂಲಕ ಬಂದಿರುವ ಅರ್ಜಿಗಳನ್ನು ಪರಿಶೀಲಿಸಿ ಕೂಡಲೇ ಅನುಮತಿ ನೀಡಬೇಕು. ಅನುಮತಿ ದೊರಕಿದ ನಂತರ ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ, ರಸ್ತೆ ದುರಸ್ತಿ ಕಾರ್ಯವನ್ನು ಸಮರ್ಪಕವಾಗಿ ನಡೆಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಯಾವುದೇ ಇಲಾಖೆ ಮುಂದಿನ ದಿನಗಳಲ್ಲಿ…

Read More

ಶಿವಮೊಗ್ಗ; ಜನವರಿ 3 ಮತ್ತು 4, 2026 ರಂದು ನಡೆಯಲಿರುವ ರಜತ ಸಾಗರೋತ್ಸವ -2026 ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಳೆದ 25 ವರ್ಷಗಳಿಂದ ಈ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದೆ. ನಾಳೆ, ನಾಡಿದ್ದು ಆಯೋಜಿಸಿರುವಂತ ಕಾರ್ಯಕ್ರಮಕ್ಕೆ ಸಾಗರದ ಜನತೆ ಆಗಮಿಸಿ ಯಶಸ್ವಿಗೊಳಿಸುವಂತೆ ಸಾಗರಸುತ್ತ ಪತ್ರಿಕೆಯ ಸಂಪಾದಕ ಮತ್ತು ಸಾಗರೋತ್ಸವ ಸಮಿತಿಯ ಅಧ್ಯಕ್ಷ ಜಿ‌. ನಾಗೇಶ್ ವಿನಂತಿಸಿಕೊಂಡಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಅವರು, ಸಹೃದಯ ಬಳಗ ಮತ್ತು ತಾಲೂಕು ಇತಿಹಾಸ ವೇದಿಕೆ ವತಿಯಿಂದ ದಿನಾಂಕ 03-01-2026ರ ನಾಳೆ ರಜತ ಸಾಗರೋತ್ಸವ-2026 ಕಾರ್ಯಕ್ರಮವನ್ನು ಸಾಗರದ ಗಾಂಧಿ ಮೈದಾನದಲ್ಲಿ ನಡೆಸಲಾಗುತ್ತಿದೆ. ಈ ಕಾರ್ಯಕ್ರಮ ದಿವ್ಯ ಸಾನಿಧ್ಯವನ್ನು ಆನಂದಪುರಂನ ಮುರುಘಾಮಠದ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮಿಗಳು ವಹಿಸಲಿದ್ದಾರೆ. ಶಾಸಕ ಗೋಪಾಲಕೃಷ್ಣ ಬೇಳೂರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದಿದ್ದಾರೆ. ಅಂದು ರಾಷ್ಟ್ರಮಟ್ಟದ ಸಹೃದಯ ಪ್ರಶಸ್ತಿಯನ್ನು ರಾಜಕೀಯ ಕ್ಷೇತ್ರದ ಸಾಧನೆಗಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ, ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಡಾ.ವಿದ್ವಾನ್ ಬಿಎಲ್ ನಾಗರಾಜ್, ಗುರುಗಳಾದ ವೇಣುಗೋಪಾಲ ಗುರೂಜಿ, ನಿರ್ದೇಶಕ ಡಾ.ಬ.ಲ ಸುರೇಶ್, ಕೃಷಿಕ…

Read More

ಬೆಂಗಳೂರು: ಕಂದಾಯ ಅದಾಲತ್ ಕಾರ್ಯಕ್ರಮದ ಮೂಲಕ ಪಹಣಿ ತಿದ್ದುಪಡಿ ಅಧಿಕಾರವನ್ನು ತಹಶೀಲ್ದಾರರಿಗೆ ಪ್ರತ್ಯಾಯೋಜಿಸುವ ಅವಧಿಯನ್ನು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಿದೆ.  ಈ ಕುರಿತಂತೆ ಕಂದಾಯ ಇಲಾಖೆಯ ಆಯುಕ್ತರು ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದು, ರಾಜ್ಯ ಸರ್ಕಾರದ ವಿವಿಧ ಆದೇಶಗಳಲ್ಲಿ ಕಾಲಕಾಲಕ್ಕೆ ಪಹಣಿ ತಿದ್ದುಪಡಿ ಅಧಿಕಾರವನ್ನು ಸಹಾಯಕ ಆಯುಕ್ತರಿಂದ ತಹಶೀಲ್ದಾರರಿಗೆ ಪ್ರತ್ಯಾಯೋಜಿಸಿ ಮುಂದುವರೆಸಿಕೊಂಡು ಬರಲಾಗುತ್ತಿದೆ. ಅದರಂತೆ ದಿನಾಂಕ:30.06.2025 ಕ್ಕೆ ಸದರಿ ಪ್ರತ್ಯಾಯೋಜನೆಯ ಅವಧಿಯು ಮುಕ್ತಾಯಗೊಂಡಿರುತ್ತದೆ ಎಂದಿದ್ದಾರೆ. ಸದರಿ ಕಂದಾಯ ಅದಾಲತ್ ಯೋಜನೆಯನ್ನು 2014ನೇ ಸಾಲಿನಿಂದ ಆರಂಭಿಸಿದ್ದು, ಜೂನ್ 2025 ರವರೆಗೂ ವಿಸ್ತರಿಸಲಾಗಿರುತ್ತದೆ. ಆದಾಗ್ಯೂ ಪಹಣಿ ತಿದ್ದುಪಡಿ ಪ್ರಕರಣಗಳನ್ನು ವಿಲೇವಾರಿ ಮಾಡುವ ಸಂಬಂಧ ಕಂದಾಯ ಅದಾಲತ್‌ ಅವಧಿಯನ್ನು ವಿಸ್ತರಿಸಲು ಕೋರಿ ಕೆಲವು ತಾಲ್ಲೂಕುಗಳಿಂದ ಮನವಿಗಳು ಸ್ವೀಕೃತವಾಗಿರುತ್ತವೆ ಎಂದು ಹೇಳಿದ್ದಾರೆ. ಈ ಹಿನ್ನಲೆಯಲ್ಲಿ ಕಂದಾಯ ಅದಾಲತ್ ಕಾರ್ಯಕ್ರಮದ ಮೂಲಕ ಪಹಣಿ ತಿದ್ದುಪಡಿ ಅಧಿಕಾರವನ್ನು ತಹಶೀಲ್ದಾರರಿಗೆ ಪ್ರತ್ಯಾಯೋಜಿಸುವ ಅವಧಿಯನ್ನು ವಿಸ್ತರಿಸುವ ಕುರಿತಂತೆ ತಮ್ಮ ಸ್ಪಷ್ಟ ಅಭಿಪ್ರಾಯವನ್ನು 15 ದಿನಗಳಲ್ಲಿ ಸಲ್ಲಿಸಲು ತಿಳಿಸಿದ್ದಾರೆ.

Read More

ಬೆಂಗಳೂರು:  UGCET-26: 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (UGCET-26) ಯನ್ನು ಏಪ್ರಿಲ್ 23 ಮತ್ತು 24ರಂದು ನಡೆಸಲಾಗುವುದು ಎಂದು ಡಾ.ಎಂ.ಸಿ ಸುಧಾಕರ್ ಘೋಷಿಸಿದರು. ಹೊರನಾಡು ಮತ್ತು ಗಡಿ ನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಏ.22ರಂದು ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜನವರಿ 17ರಿಂದ ಆರಂಭವಾಗಲಿದೆ ಎಂದಿದ್ದಾರೆ. ಇದೇ ಸಂದರ್ಭದಲ್ಲಿ ಸಚಿವರು ಇತರ ಪರೀಕ್ಷೆಗಳ ವೇಳಾ ಪಟ್ಟಿಯನ್ನೂ ಪ್ರಕಟಿಸಿದರು. ಕ್ರೈಸ್ ಪರೀಕ್ಷೆ ಮಾರ್ಚ್ 1, ಪಿಜಿಸಿಇಟಿ (ಎಂಬಿಎ, ಎಂಸಿಎ) ಪರೀಕ್ಷೆ ಮೇ 14ರಂದು, ಪಿಜಿಸಿಇಟಿ (ಎಂಇ/ಎಂ.ಟೆಕ್) ಹಾಗೂ ಡಿಸಿಇಟಿ ಪರೀಕ್ಷೆಗಳು ಮೇ 23ರಂದು ನಡೆಯಲಿವೆ ಎಂದು ತಿಳಿಸಿದ್ದಾರೆ. ಎಂಎಸ್ಸಿ ನರ್ಸಿಂಗ್, ಎಂಪಿಟಿ, ಎಂ.ಎಸ್ಸಿ-ಎಎಚ್ ಎಸ್ ಪರೀಕ್ಷೆ ಗಳು ಜು.18ರಂದು, ಅಕ್ಟೋಬರ್ 11ರಂದು ಕೆಸೆಟ್ ಹಾಗೂ ನವೆಂಬರ್ 21ರಂದು ಎಂ-ಫಾರ್ಮಾ ಹಾಗೂ ಫಾರ್ಮಾ-ಡಿ ಪರೀಕ್ಷೆ ಗಳನ್ನು ನಡೆಸಲಾಗುವುದು ಎಂದು ಸಚಿವರು ಘೋಷಿಸಿದರು. ಈ ಸಂದರ್ಭದಲ್ಲಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್, ಉನ್ನತ…

Read More

ಬಳ್ಳಾರಿ: ಈ ಹಿಂದೆ ಭರತ್ ರೆಡ್ಡಿ ತಂದೆ ಶ್ರೀರಾಮುಲು ಕೊಲೆಗೆ ಯತ್ನಿಸಿದ್ರು. ನಾರಾ ಭರತ್ ರೆಡ್ಡಿ ತಂದೆ ಬಳಿ 3 ಕೋಟಿ ಮೌಲ್ಯದ ವೆಪನ್ಸ್ ಸಿಕ್ಕಿತ್ತು. ವಾರ್ಡ್ ಗಳಲ್ಲಿ ಮಟ್ಕಾ, ಡ್ರಗ್ಸ್, ಗಾಂಜಾ ವ್ಯವಹಾರ ನಡೆಸುತ್ತಿದ್ದಾರೆ ಎಂಬುದಾಗಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರು ಶಾಸಕ ನಾರಾ ಭರತ್ ರೆಡ್ಡಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಶಾಸಕ ಭರತ್ ರೆಡ್ಡಿ ಪೊಲೀಸರ ಬಳಿ ಹಫ್ತಾ ವಸೂಲಿ ಮಾಡ್ತಿದ್ದಾನೆ. ಭರತ್ ರೆಡ್ಡಿ ಮಹರ್ಷಿ ವಾಲ್ಮೀಕಿ ಬ್ಯಾನರ್ ನೆಪ ಇಟ್ಟುಕೊಂಡು ಹೀರೋ ಆಗಬಹುದು ಅಂದುಕೊಂಡಿದ್ದಾನೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಮ್ಮುಖದಲ್ಲಿ ದೂರು ನೀಡುವುದಾಗಿ ಹೇಳಿದ್ದಾರೆ.

Read More

ಬೆಂಗಳೂರು : ಸಫಾರಿ ವಾಹನಗಳ ಕಿರಿಕಿರಿಯಿಂದ ವನ್ಯಜೀವಿಗಳು ಕಾಡಿನಿಂದ ನಾಡಿಗೆ ಬರುತ್ತಿವೆಯೇ, ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿ ವಾಹನಗಳ ಧಾರಣಾ ಸಾಮರ್ಥ್ಯವೆಷ್ಟು ಎಂಬ ಬಗ್ಗೆ ಅಧ್ಯಯನ ಮಾಡಲು ತಜ್ಞರ ಸಮಿತಿ ರಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿಂದು ನಡೆದ ಕರ್ನಾಟಕ ವನ್ಯಜೀವಿ ಮಂಡಳಿಯ 20ನೇ ಸಭೆಯಲ್ಲಿ ನಿರ್ಣಯಿಸಲಾಗಿದೆ. ಸಭೆಯಲ್ಲಿ ಅಧ್ಯಕ್ಷರ ಅನುಮತಿಯ ಮೇರೆಗೆ ಈ ವಿಷಯ ಪ್ರಸ್ತಾಪಿಸಿದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಕಳೆದ ಅಕ್ಟೋಬರ್ ಮತ್ತು ನವೆಂಬರ್ ನಲ್ಲಿ ಹುಲಿಗಳ ದಾಳಿಯಿಂದ ಮೂವರು ಮೃತಪಟ್ಟು ಒಬ್ಬರು ಶಾಶ್ವತ ವಿಶೇಷಚೇತನರಾದ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿ ಸ್ಥಗಿತಗೊಳಿಸಲಾಗಿತ್ತು. ಈ 2 ತಿಂಗಳ ಅವಧಿಯಲ್ಲಿ ಕಾಡಿನ ಹೊರಗೆ ಹುಲಿ ದಾಳಿ ನಡೆದಿಲ್ಲ, ಯಾವುದೇ ಜೀವಹಾನಿ ಆಗಿಲ್ಲ ಎಂದು ಸಭೆಗೆ ವಿವರಿಸಿದರು. ಸಫಾರಿ ವಾಹನದ ಕಿರಿಕಿರಿಯಿಂದ, ವಾಹನಗಳ ಬೆಳಕಿನಿಂದ ವನ್ಯಜೀವಿಗಳು ಹೊರಬರುತ್ತವೆ ಎಂಬುದು ಸ್ಥಳೀಯರು ಮತ್ತು ರೈತರ ಆರೋಪವಾಗಿದೆ. ಈ ಬಗ್ಗೆ ಅಧ್ಯಯನ ನಡೆಸುವ ಅಗತ್ಯವಿದೆ…

Read More

ಬಳ್ಳಾರಿ: ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ರೆಡ್ಡಿ ಹತ್ಯೆ ಹಿನ್ನಲೆಯಲ್ಲಿ ನಾಳೆ ಆಯೋಜಿಸಿದ್ದಂತ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಮುಂದೂಡಿಕೆ ಮಾಡಲಾಗಿದೆ. ಈ ಕುರಿತಂತೆ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಮಾಹಿತಿ ನೀಡಿದ್ದು, ರಾಜಶೇಖರ ರೆಡ್ಡಿ ಹತ್ಯೆ ಹಿನ್ನಲೆಯಲ್ಲಿ ನಾಳೆಯ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಮುಂದೂಡಿಕೆ ಮಾಡಿರುವುದಾಗಿ ತಿಳಿಸಿದ್ದಾರೆ. ನಾಳೆ ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮ ಆಯೋಜಿಸಲಾಗಿತ್ತು. ನಾಳೆಯ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲಾಗಿದೆ. ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಮುಂದೂಡಿಕೆ ಮಾಡಲಾಗಿದೆ ಎಂದಿದ್ದಾರೆ. https://kannadanewsnow.com/kannada/first-bullet-train-to-run-on-august-15-2027-raiway-minister-ashwini-vaishnaw/ https://kannadanewsnow.com/kannada/power-outage-in-these-areas-of-bengaluru-tomorrow-from-10-am-to-5-pm/

Read More

ಮುಂಬೈ: ಭಾರತದ ಮಹತ್ವಾಕಾಂಕ್ಷೆಯ ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಕೆಲಸವು ಪೂರ್ಣ ವೇಗದಲ್ಲಿ ಪ್ರಗತಿಯಲ್ಲಿದ್ದು, ಕೇಂದ್ರವು ಈಗ ಬಹುನಿರೀಕ್ಷಿತ ಸಮಯವನ್ನು ಘೋಷಿಸಿದೆ. ದೇಶದ ಮೊದಲ ಬುಲೆಟ್ ರೈಲು ಆಗಸ್ಟ್ 15, 2027 ರಂದು ಕಾರ್ಯಾಚರಣೆಯನ್ನು ಪ್ರಾರಂಭಿಸಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಗುರುವಾರ ಹೇಳಿದ್ದಾರೆ, ಇದು ಭಾರತದ ರೈಲ್ವೆ ಆಧುನೀಕರಣ ಪ್ರಯಾಣದಲ್ಲಿ ಪ್ರಮುಖ ಮೈಲಿಗಲ್ಲು ಎಂದು ಗುರುತಿಸಲಾಗಿದೆ. ಈ ಘೋಷಣೆಯು, ಭಾರತವು ತನ್ನ ಮೊದಲ ಬುಲೆಟ್ ರೈಲು ಯಾವಾಗ ಕಾರ್ಯಾಚರಣೆಯನ್ನು ನೋಡುತ್ತದೆ ಎಂದು ಅನೇಕ ನಾಗರಿಕರು ಕೇಳುತ್ತಿದ್ದ ಪ್ರಶ್ನೆಗೆ ಸ್ಪಷ್ಟತೆಯನ್ನು ತಂದಿದೆ. ಪ್ರಸ್ತುತ ನಿರ್ಮಾಣ ಹಂತದಲ್ಲಿರುವ ಈ ಹೈಸ್ಪೀಡ್ ರೈಲು ಯೋಜನೆಯು ಮಹಾರಾಷ್ಟ್ರದ ಮುಂಬೈ ಮತ್ತು ಗುಜರಾತ್‌ನ ಅಹಮದಾಬಾದ್ ನಡುವಿನ ಪ್ರಯಾಣದ ಸಮಯವನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ ಮತ್ತು ದೇಶದಲ್ಲಿ ಜಾಗತಿಕ ಗುಣಮಟ್ಟದ ರೈಲು ಮೂಲಸೌಕರ್ಯವನ್ನು ಪರಿಚಯಿಸುತ್ತದೆ ಎಂದು ನಿರೀಕ್ಷಿಸಲಾಗಿದೆ. https://twitter.com/ians_india/status/2006646954336596253 ರೈಲ್ವೆ ಸಚಿವರು 1 ನೇ ವಂದೇ ಭಾರತ್ ಸ್ಲೀಪರ್ ರೈಲನ್ನು ಪರಿಚಯ ಏತನ್ಮಧ್ಯೆ, ವೈಷ್ಣವ್ ಭಾರತದ…

Read More