Author: kannadanewsnow09

ಶಿವಮೊಗ್ಗ: ಸಾಗರ ತಾಲೂಕಿನ ಬೇಸೂರು ಗ್ರಾಮದ ಸುತ್ತಮುತ್ತಲ ಪ್ರದೇಶದಲ್ಲಿ ಅಣುಸ್ಥಾವರ ಸ್ಥಾಪನೆಯಾಗಲಿದೆ ಎಂಬ ಸುದ್ದಿಯಿಂದ ಜನರು ಆತಂಕಕ್ಕೆ ಒಳಗಾಗ ಬಾರದು. ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಅಂತಹ ಯಾವುದೇ ಯೋಜನೆಗೆ ಅವಕಾಶ ನೀಡುವುದಿಲ್ಲ. ಯಾವುದೇ ಕಾರಣಕ್ಕೂ ಅಣುಸ್ಥಾವರ ಯೋಜನೆಗೆ ಅವಕಾಶ ನೀಡುವುದಿಲ್ಲ ಎಂಬುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಘೋಷಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಆವಿನಹಳ್ಳಿ ಸಮೀಪದ ಬೇಸೂರು ಗ್ರಾಮದ ಬಳಿಯಲ್ಲಿ ಅಣುಸ್ಥಾವರ ಯೋಜನೆ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದರು. ಸುದ್ದಿಯ ಮುಖ್ಯಾಂಶಗಳು: ಸರ್ವೆ ಕಾರ್ಯದ ಬಗ್ಗೆ ಮಾಹಿತಿ: ಕಾರವಾರ, ಚಿತ್ರದುರ್ಗ ಸೇರಿದಂತೆ ರಾಜ್ಯದ ನಾಲ್ಕೈದು ಕಡೆಗಳಲ್ಲಿ ಅಣುಸ್ಥಾವರಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮಾಹಿತಿಗಾಗಿ ಹೆಲಿಕಾಪ್ಟರ್ ಮೂಲಕ ಸರ್ವೆ ನಡೆಸಲಾಗಿದೆ. ಅದೇ ರೀತಿ ಸಿದ್ಧಾಪುರ ಹಾಗೂ ಬೇಸೂರು ಭಾಗದಲ್ಲೂ ಸರ್ವೆ ಮಾಡಲಾಗಿದೆ. ಆದರೆ ಇದು ಕೇವಲ ಮಾಹಿತಿಗಾಗಿ ನಡೆದಿದೆಯೇ ಹೊರತು, ಯಾವುದೇ ಅಂತಿಮ ಆದೇಶವಾಗಿಲ್ಲ ಎಂದು ಶಾಸಕರು ತಿಳಿಸಿದ್ದಾರೆ. ಅಧಿಕಾರಿಗಳೊಂದಿಗೆ ಚರ್ಚೆ: ಈ ವಿಚಾರವಾಗಿ ರಾಜ್ಯದ ಮುಖ್ಯ ಕಾರ್ಯದರ್ಶಿಗಳನ್ನು (Chief Secretary) ಭೇಟಿ ಮಾಡಿರುವ ಶಾಸಕರು,…

Read More

ಬೆಂಗಳೂರು: ರಾಜ್ಯದ ಕಬ್ಬು ಬೆಳೆಗಾರರ ಹಿತದೃಷ್ಟಿಯಿಂದ ಸರ್ಕಾರ ಘೋಷಿಸಿರುವ ಪ್ರೋತ್ಸಾಹಧನ ಪಾವತಿಸಲು ದಕ್ಷಿಣ ಕರ್ನಾಟಕದ 7 ಸಕ್ಕರೆ ಕಾರ್ಖಾನೆಗಳು ನಿರಾಕರಿಸುತ್ತಿವೆ. ಅಲ್ಲದೆ, ಸರ್ಕಾರವು ತನ್ನ ಪಾಲಿನ ಮೊತ್ತವನ್ನು ರೈತರ ಬ್ಯಾಂಕ್ ಖಾತೆಗಳಿಗೆ ಹಾಕಲು ವಿವರಗಳನ್ನು ಕೇಳಿದರೂ ನೀಡುತ್ತಿಲ್ಲ. ಈ ಮೂಲಕ ಸರ್ಕಾರದ ಆದೇಶವನ್ನೇ ದಕ್ಷಿಣ ಕರ್ನಾಟಕದ 7 ಖಾಸಗಿ ಸಕ್ಕರೆ ಕಾರ್ಖಾನೆಗಳು ಉಲ್ಲಂಘಿಸುತ್ತಿವೆ. ಇವುಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಗ್ಯಾರಂಟಿ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರು ಹಾಗೂ ಶಾಸಕರಾದ ದಿನೇಶ್ ಗೂಳಿಗೌಡ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿರುವ ಅವರು, ರೈತರಿಗೆ ಸೇರಬೇಕಾದ ಬಾಕಿ ಹಣವನ್ನು ಕೊಡಿಸದಿದ್ದರೆ ಮುಂಬರುವ ಹಂಗಾಮಿನಲ್ಲಿ ಈ ಕಾರ್ಖಾನೆಗಳ ಪರವಾನಗಿ ರದ್ದುಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ. ಮನವಿಯಲ್ಲೇನಿದೆ? 2025-26ನೇ ಸಾಲಿನ ಹಂಗಾಮಿನಲ್ಲಿ ರಾಜ್ಯದ ರೈತ ಸಮುದಾಯದ ಆರ್ಥಿಕ…

Read More

ರಾಯಚೂರು: ಜಿಲ್ಲೆಯ ಸಿಂಧನೂರಿನಲ್ಲಿ ನಡೆಯುತ್ತಿರುವ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರ ಹೆಲಿಕಾಪ್ಟರ್ ಲ್ಯಾಂಡಿಂಗ್ ವಿಚಾರದಲ್ಲಿ ಪೈಲಟ್ ಮಾಡಿದ ಸಣ್ಣ ಎಡವಟ್ಟು, ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯಲ್ಲಿ ಕೆಲಕಾಲ ಆತಂಕ ಮತ್ತು ಗೊಂದಲ ಮೂಡಿಸಿದ ಘಟನೆ ನಡೆದಿದೆ. ನಡೆದಿದ್ದೇನು? ಸಿಂಧನೂರಿನ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಒಂದೇ ಕಡೆ ಮೂರು ಹೆಲಿಪ್ಯಾಡ್‌ಗಳನ್ನು ಸಿದ್ಧಪಡಿಸಲಾಗಿತ್ತು. ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ನಟ ಕಿಚ್ಚ ಸುದೀಪ್ ಅವರು ಪ್ರತ್ಯೇಕ ಹೆಲಿಕಾಪ್ಟರ್‌ಗಳಲ್ಲಿ ಆಗಮಿಸಿದ್ದರು. ಈ ವೇಳೆ ಸುದೀಪ್ ಅವರಿದ್ದ ಹೆಲಿಕಾಪ್ಟರ್‌ನ ಪೈಲಟ್, ತಮಗೆ ನಿಗದಿಪಡಿಸಿದ್ದ ಹೆಲಿಪ್ಯಾಡ್ ಬಿಟ್ಟು, ಡಿ.ಕೆ. ಶಿವಕುಮಾರ್ ಅವರು ಇಳಿಯಬೇಕಿದ್ದ ಹೆಲಿಪ್ಯಾಡ್‌ನಲ್ಲಿ ಹೆಲಿಕಾಪ್ಟರ್ ಲ್ಯಾಂಡ್ ಮಾಡಿದರು. ಅಧಿಕಾರಿಗಳ ಆತಂಕ: ಗಣ್ಯರ ಸುರಕ್ಷತೆ ಮತ್ತು ಶಿಷ್ಟಾಚಾರದ (Protocol) ದೃಷ್ಟಿಯಿಂದ ನಿಗದಿತ ಹೆಲಿಪ್ಯಾಡ್‌ನಲ್ಲಿಯೇ ಲ್ಯಾಂಡಿಂಗ್ ಆಗಬೇಕಿತ್ತು. ಆದರೆ ಸ್ಥಳ ಬದಲಾವಣೆಯಿಂದಾಗಿ ತಬ್ಬಿಬ್ಬಾದ ಪೊಲೀಸ್ ಅಧಿಕಾರಿಗಳು ತಕ್ಷಣವೇ ಪೈಲಟ್ ಅತಾರಾಟೆ ತೆಗೆದುಕೊಂಡರು. ನಂತರ ಅಧಿಕಾರಿಗಳ ಸೂಚನೆ ಮೇರೆಗೆ ಹೆಲಿಕಾಪ್ಟರ್ ಅನ್ನು ಪುನಃ ಮೇಲೆಬ್ಬಿಸಿ, ನಿಗದಿಪಡಿಸಿದ…

Read More

ರಾಯಚೂರು: ಜಿಲ್ಲೆಯ ಸಿಂಧನೂರಿನಲ್ಲಿ ಆಯೋಜಿಸಲಾಗಿದ್ದ ದೈತ್ಯ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಅವಘಡ ಸಂಭವಿಸಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹಾಗೂ ರಾಜ್ಯದ ಹಲವು ಸಚಿವರು ವೇದಿಕೆಯ ಮೇಲಿರುವಾಗಲೇ ಈ ಘಟನೆ ನಡೆದಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನೆಯ ವಿವರ: ಸಿಂಧನೂರಿನ ತಾಲೂಕು ಕ್ರೀಡಾಂಗಣದಲ್ಲಿ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಫೌಂಡೇಶನ್ ವತಿಯಿಂದ 151 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಅದ್ದೂರಿಯಾಗಿ ನಡೆಯುತ್ತಿದ್ದ ಸಂದರ್ಭದಲ್ಲಿ, ವೇದಿಕೆಯ ಒಂದು ಭಾಗದಲ್ಲಿ ಹಠಾತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ಬೆಂಕಿಯ ಕಿಡಿಗಳು ವೈಯರ್, ಸ್ಪೀಕರ್ ಹಾಗೂ ವೇದಿಕೆಯ ಅಲಂಕಾರಿಕ ಬಟ್ಟೆಗಳಿಗೆ ತಗುಲಿದ ಪರಿಣಾಮ ಕ್ಷಣಾರ್ಧದಲ್ಲಿ ಬೆಂಕಿ ಕಾಣಿಸಿಕೊಂಡಿತು. ಗಣ್ಯರ ಸಮ್ಮುಖದಲ್ಲೇ ಆತಂಕ: ಈ ಅವಘಡ ಸಂಭವಿಸಿದಾಗ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸ್ಯಾಂಡಲ್‌ವುಡ್ ನಟ ಸುದೀಪ್ ಹಾಗೂ ಸರ್ಕಾರದ ಹಲವು ಸಚಿವರು ವೇದಿಕೆಯ ಮೇಲಿದ್ದರು. ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು…

Read More

ಕಾರವಾರ: ಆತ ಕೇವಲ ವೈದ್ಯನಾಗಿರಲಿಲ್ಲ, ಆ ಕುಗ್ರಾಮದ ಪಾಲಿನ ಆಪದ್ಬಾಂಧವ. ವ್ಯವಸ್ಥೆಗಳೇ ಮರೆತುಹೋದ ದಟ್ಟ ಅರಣ್ಯದ ನಡುವಿನ ಹಳ್ಳಿಗೆ ಆತನೇ ಸಂಜೀವಿನಿಯಾಗಿದ್ದ. ಆದರೆ, ಸಾವಿರಾರು ಜನರ ಎದೆಯ ದವಡಿತ ಅಳೆದ ಆ ಜೀವ, ತನ್ನ ಎದೆಯಲ್ಲಿ ಏಳುವ ನೋವನ್ನು ಯಾರಿಗೂ ತಿಳಿಸಲಾಗದೆ, ನೆಟ್‌ವರ್ಕ್ ಇಲ್ಲದ ಊರಿನಲ್ಲಿ ಸಹಾಯಕ್ಕಾಗಿ ಹಲುಬುತ್ತಾ ಕೊನೆಯುಸಿರೆಳೆದಿದೆ. ಇದು ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಡಿಗ್ಗಿ ಗ್ರಾಮದ ಜನಮನ ಗೆದ್ದಿದ್ದ ಡಾ. ಲೆನ್ವರ್ ಲೋಬೋ ಅವರ ಹೃದಯವಿದ್ರಾವಕ ಕಥೆ. ಶಾಪವಾದ ಕೂಗ್ರಾಮದ ಒಂಟಿತನ ಉತ್ತರ ಕನ್ನಡ ಮತ್ತು ಗೋವಾ ಗಡಿಭಾಗದ ಡಿಗ್ಗಿ ಎನ್ನುವುದು ಹೊರಜಗತ್ತಿನಿಂದ ಸಂಪೂರ್ಣ ಕಡಿದುಹೋದ ಪ್ರದೇಶ. ಅಲ್ಲಿ ಸರಿಯಾದ ರಸ್ತೆಯಿಲ್ಲ, ಮೊಬೈಲ್ ನೆಟ್‌ವರ್ಕ್ ಅಂತೂ ಕನಸಿನ ಮಾತು. ಇಂತಹ ಕಠಿಣ ಪರಿಸ್ಥಿತಿಯ ನಡುವೆಯೂ ಡಾ. ಲೆನ್ವರ್ ಲೋಬೋ ಕಳೆದ ಮೂರು ವರ್ಷಗಳಿಂದ ಸ್ಕೋಡಾ ವೇಸ್ ಸಂಸ್ಥೆಯ ಮೂಲಕ ಜನರ ಸೇವೆ ಮಾಡುತ್ತಿದ್ದರು. ಅದೆಷ್ಟೋ ಸಂಕಷ್ಟದ ಪರಿಸ್ಥಿತಿಯಲ್ಲಿ ಜನರ ಪ್ರಾಣ ಉಳಿಸಿದ್ದ ಲೋಬೋ ಅವರು, ಡಿಗ್ಗಿ…

Read More

ಚಿಕ್ಕಮಗಳೂರು: ಹೈಕೋರ್ಟ್ ನಿರ್ದೇಶನದಂತೆ ನಡೆದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆಯು ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದೆ. 2023ರ ವಿಧಾನಸಭಾ ಚುನಾವಣೆಯ ಫಲಿತಾಂಶದ ಲೆಕ್ಕಾಚಾರವು ಈ ಮರು ಎಣಿಕೆಯಲ್ಲಿ ಸಂಪೂರ್ಣವಾಗಿ ಅದಲುಬದಲಾಗಿದ್ದು, ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರ ಪರವಾಗಿ ಫಲಿತಾಂಶ ವಾಲುವ ಸಾಧ್ಯತೆಗಳು ದಟ್ಟವಾಗಿವೆ. ಮರು ಎಣಿಕೆಯಲ್ಲಿ ಕಂಡುಬಂದ ಪ್ರಮುಖ ಬದಲಾವಣೆಗಳು ಚುನಾವಣಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ಅವರು ನೀಡಿರುವ ಮಾಹಿತಿಯಂತೆ, ಒಟ್ಟು 1,822 ಅಂಚೆ ಮತಗಳ ಮರು ಪರಿಶೀಲನೆ ನಡೆಸಲಾಯಿತು. ಮರು ಎಣಿಕೆಯ ನಂತರದ ಅಂಕಿ-ಅಂಶಗಳು ಹೀಗಿವೆ: ಡಿ.ಎನ್. ಜೀವರಾಜ್ (ಬಿಜೆಪಿ): 2023ರಲ್ಲಿ ಇವರು 692 ಮತಗಳನ್ನು ಪಡೆದಿದ್ದರು. ಈಗಿನ ಎಣಿಕೆಯಲ್ಲಿ ಇವರಿಗೆ 690 ಮತಗಳು ಲಭಿಸಿದ್ದು, ಕೇವಲ 2 ಮತಗಳ ಇಳಿಕೆಯಾಗಿದೆ. ಟಿ.ಡಿ. ರಾಜೇಗೌಡ (ಕಾಂಗ್ರೆಸ್): ಈ ಹಿಂದೆ ಇವರು 569 ಮತಗಳನ್ನು ಪಡೆದಿದ್ದರು. ಆದರೆ ಮರು ಎಣಿಕೆಯಲ್ಲಿ ಇವರು ಪಡೆದ ಮತಗಳ ಸಂಖ್ಯೆ 314ಕ್ಕೆ ಕುಸಿದಿದೆ. ಅಂದರೆ ಬರೋಬ್ಬರಿ 251…

Read More

ಬಾಗಲಕೋಟೆ: ಹಿರಿಯ ನಾಯಕ ಹೆಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಏಪ್ರಿಲ್ 9 ರಂದು ನಡೆದಿದ್ದ ಮತದಾನದ ಅಂತಿಮ ತೀರ್ಪು ನಾಳೆ (ಮೇ 4, ಸೋಮವಾರ) ಪ್ರಕಟವಾಗಲಿದ್ದು, ಇಡೀ ರಾಜ್ಯದ ಕುತೂಹಲ ಬಾಗಲಕೋಟೆಯತ್ತ ನೆಟ್ಟಿದೆ. ಚುನಾವಣಾ ಕಣದ ಚಿತ್ರಣ ಈ ಬಾರಿಯ ಹಣಾಹಣಿ ನೇರ ಹಾಗೂ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ: ಕಾಂಗ್ರೆಸ್: ದಿವಂಗತ ಹೆಚ್.ವೈ. ಮೇಟಿ ಅವರ ಪುತ್ರ ಉಮೇಶ ಮೇಟಿ ಅವರು ಅನುಕಂಪದ ಅಲೆಯ ಮೇಲೆ ಕಣಕ್ಕಿಳಿದಿದ್ದಾರೆ. ಬಿಜೆಪಿ: ಕಳೆದ ಬಾರಿ ಸೋಲು ಕಂಡಿದ್ದ ಹಿರಿಯ ನಾಯಕ ವೀರಣ್ಣ ಚರಂತಿಮಠ ಅವರು ಬಿಜೆಪಿಯಿಂದ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಮತದಾನದ ಅಂಕಿ-ಅಂಶಗಳು ಕ್ಷೇತ್ರದಲ್ಲಿ ಒಟ್ಟು 1,78,273 (ಶೇ. 68) ಮತಗಳು ಚಲಾವಣೆಯಾಗಿವೆ. ವಿಶೇಷವೆಂದರೆ ಪುರುಷ ಮತದಾರರಿಗಿಂತ (88,241) ಮಹಿಳಾ ಮತದಾರರು (90,024) ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಹಕ್ಕು ಚಲಾಯಿಸಿರುವುದು ಯಾವುದಾದರೂ ಒಂದು ಪಕ್ಷಕ್ಕೆ ಪ್ಲಸ್ ಪಾಯಿಂಟ್ ಆಗುವ ಸಾಧ್ಯತೆಯಿದೆ. ಅಬ್ಬರದ ಪ್ರಚಾರದ…

Read More

ಮಹಾರಾಷ್ಟ್ರ: ಪುಣೆ ಜಿಲ್ಲೆಯಲ್ಲಿ ನಡೆದ ನಾಲ್ಕು ವರ್ಷದ ಹೆಣ್ಣು ಮಗುವಿನ ಮೇಲಿನ ಅತ್ಯಾಚಾರ ಮತ್ತು ಬರ್ಬರ ಹತ್ಯೆ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಹಸಿವಿನ ಆಸೆಯನ್ನೇ ಬಂಡವಾಳ ಮಾಡಿಕೊಂಡು, ಅಮಾಯಕ ಮಗುವಿನ ಜೀವ ಕಸಿದುಕೊಂಡ 65 ವರ್ಷದ ವೃದ್ಧನ ಈ ಹೇಯ ಕೃತ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಆರೋಪಿಗೆ ಗಲ್ಲು ಶಿಕ್ಷೆ ನೀಡಬೇಕೆಂಬ ಕೂಗು ಎಲ್ಲೆಡೆಯಿಂದ ಕೇಳಿಬರುತ್ತಿದೆ. ಘಟನೆಯ ಭೀಕರತೆ ಪುಣೆಯ ಭೋರ್ ತಹಸಿಲ್‌ನಲ್ಲಿ ನಡೆದ ಈ ಘಟನೆಯ ವಿವರಗಳು ಎಂಥವರನ್ನೂ ಕಣ್ಣೀರು ಹಾಕುವಂತೆ ಮಾಡುತ್ತದೆ. ಆಮಿಷ ಮತ್ತು ಕೃತ್ಯ: ಕೂಲಿ ಕೆಲಸ ಮಾಡುತ್ತಿದ್ದ ಮತ್ತು ಕ್ರಿಮಿನಲ್ ಹಿನ್ನೆಲೆ ಹೊಂದಿದ್ದ 65 ವರ್ಷದ ವೃದ್ಧ, ನಾಲ್ಕು ವರ್ಷದ ಬಾಲಕಿಗೆ ಆಹಾರದ ಆಮಿಷವೊಡ್ಡಿ ಕರೆದೊಯ್ದಿದ್ದಾನೆ. ಅತ್ಯಾಚಾರ ಮತ್ತು ಕೊಲೆ: ನಿರ್ಜನ ಪ್ರದೇಶದ ದನಗಳ ಶೆಡ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿ, ಕಲ್ಲಿನಿಂದ ಜಜ್ಜಿ ಬರ್ಬರ ಹತ್ಯೆ ಮಾಡಿದ್ದಾನೆ. ಶವದ ವಿಲೇವಾರಿ: ಕೊಲೆಯ ನಂತರ ಬಾಲಕಿಯ ಮೃತದೇಹವನ್ನು ಸಗಣಿಯಲ್ಲಿ ಎಸೆದು ಆರೋಪಿ ಪರಾರಿಯಾಗಲು ಯತ್ನಿಸಿದ್ದನು. ಮುಂಬೈ-ಬೆಂಗಳೂರು ಹೆದ್ದಾರಿ ತಡೆದು…

Read More

ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಫಾಲ್ಟಾ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮಗಳು ನಡೆದ ಹಿನ್ನೆಲೆಯಲ್ಲಿ, ಕೇಂದ್ರ ಚುನಾವಣಾ ಆಯೋಗವು ಕ್ಷೇತ್ರದ ಎಲ್ಲಾ 285 ಮತಗಟ್ಟೆಗಳಲ್ಲಿ ಮೇ 21ರಂದು ಮರು ಮತದಾನ ನಡೆಸುವಂತೆ ಶನಿವಾರ ಆದೇಶಿಸಿದೆ. ಏನಿದು ಪ್ರಕರಣ? ಏಪ್ರಿಲ್ 29ರಂದು ನಡೆದ ಎರಡನೇ ಹಂತದ ಮತದಾನದ ವೇಳೆ ಗಂಭೀರ ಸ್ವರೂಪದ ಚುನಾವಣಾ ಅಪರಾಧಗಳು ಮತ್ತು ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಬುಡಮೇಲು ಮಾಡುವಂತಹ ಕೃತ್ಯಗಳು ನಡೆದಿರುವ ದೂರುಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಆಯೋಗವು ಅಂದಿನ ಮತದಾನವನ್ನು ‘ಅನೂರ್ಜಿತ’ ಎಂದು ಘೋಷಿಸಿದೆ. ಆಯೋಗದ ಪ್ರಮುಖ ನಿರ್ಧಾರಗಳು: ಮರು ಮತದಾನದ ಸಮಯ: ಮೇ 21ರಂದು ಬೆಳಿಗ್ಗೆ 7ರಿಂದ ಸಂಜೆ 6ರವರೆಗೆ ಎಲ್ಲಾ ಮತಗಟ್ಟೆಗಳಲ್ಲಿ ಹಾಗೂ ಸಹಾಯಕ ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. ವರದಿಗಳ ಆಧಾರ: ಮುಖ್ಯ ಚುನಾವಣಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ ಮತ್ತು ಚುನಾವಣಾ ವೀಕ್ಷಕರು ನೀಡಿದ ವರದಿಗಳನ್ನು ಪರಿಶೀಲಿಸಿದ ನಂತರ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಗಂಭೀರ ಆರೋಪ: ಮತದಾರರಿಗೆ ಬೆದರಿಕೆ ಹಾಕುವುದು, ಮತಗಟ್ಟೆಗಳೊಳಗೆ ಅನಧಿಕೃತ…

Read More

ಶಿವಮೊಗ್ಗ: ಸಾಗರ ಪೊಲೀಸ್ ಉಪವಿಭಾಗದಲ್ಲಿ ಸಂಚಾರ ನಿಯಮಗಳ ಜಾರಿಯನ್ನು ಹೆಚ್ಚಿಸಲು ಕಳೆದ 2 ತಿಂಗಳಿಂದ ಐಟಿಎಂಎಸ್ (ITMS) ತಂತ್ರಜ್ಞಾನದ ಪರಿಚಯಿಸಲಾಗಿದೆ. ಆದರೇ ನೋ ಪಾರ್ಕಿಂಗ್ ಪ್ರದೇಶದಲ್ಲಿದ್ದಂತ ಕಾರಿಗೆ ದಂಡ ವಿಧಿಸೋ ನಿಟ್ಟಿನಲ್ಲಿ ಮಾಡಿದಂತ ಎಡವಟ್ಟಿನಿಂದಾಗಿ ಕಾರಿನಲ್ಲಿ ತೆರಳೋರಿಗೆ ಹೆಲ್ಮೆಟ್ ದಂಡದ ವಿವಾದ ಸೃಷ್ಠಿಯಾಗಿದೆ ಎಂಬುದಾಗಿ ಎಎಸ್ಪಿ ಡಾ. ಬೆನಕ ಪ್ರಸಾದ್ ಅವರು ಮಹತ್ವದ ಸ್ಪಷ್ಟಪಡಿಸಿದ್ದಾರೆ. ಇಂದು ಅವರು ಸಾಗರ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಚಲನ್ ದೋಷದ ಘಟನೆಯ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಘಟನೆಯ ವಿವರ ದಿನಾಂಕ 01/05/2026 ರಂದು ಸಾಗರ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರಿನ (4 ಚಕ್ರದ ವಾಹನ) ಮಾಲೀಕರೊಬ್ಬರಿಗೆ ಹೆಲ್ಮೆಟ್ ಧರಿಸದಿದ್ದಕ್ಕಾಗಿ ದಂಡ ವಿಧಿಸಲಾಗಿತ್ತು. ವಾಸ್ತವವಾಗಿ ಇದು ನೋ-ಪಾರ್ಕಿಂಗ್ (ನಿಲುಗಡೆ ನಿಷೇಧಿತ) ವಲಯದಲ್ಲಿ ವಾಹನವನ್ನು ನಿಲ್ಲಿಸಿದ್ದ ಪ್ರಕರಣವಾಗಿತ್ತು. ಐಟಿಎಂಎಸ್ ತಂತ್ರಾಂಶದಲ್ಲಿ ವಾಹನ ಮಾಲೀಕರು ಮಾಡಿದ ಉಲ್ಲಂಘನೆಯ ಬಗೆಯನ್ನು ನಮೂದಿಸುವಾಗ ಸಿಬ್ಬಂದಿಯೊಬ್ಬರು ಮಾಡಿದ ಸಣ್ಣ ಕೈತಪ್ಪಿನಿಂದಾಗಿ ಈ ಪ್ರಮಾದ ಸಂಭವಿಸಿದೆ. ಚಲನ್…

Read More