Subscribe to Updates
Get the latest creative news from FooBar about art, design and business.
Author: kannadanewsnow09
ಮಂಡ್ಯ :- ಉದ್ಯೋಗದ ನಿರೀಕ್ಷೆಯಲ್ಲಿರುವ ಮದ್ದೂರು ನಗರ ಮತ್ತು ಸುತ್ತಮುತ್ತಲಿನ ಉದ್ಯೋಗಾಕಾಂಕ್ಷಿ ಯುವಕ-ಯುವತಿಯರಿಗೆ ಇಲ್ಲೊಂದು ಭರ್ಜರಿ ಸಿಹಿಸುದ್ದಿ ಇದೆ. ಮದ್ದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡ ಹಾಗೂ ಮನ್ ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಅವರ ಹುಟ್ಟುಹಬ್ಬ ಹಾಗೂ ಅಕ್ಷರ ಫೌಂಡೇಶನ್ ಗ್ರಾಮಾಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ ಯುವಜನತೆಗೆ ಉದ್ಯೋಗ ಕಲ್ಪಿಸುವ ಸದುದ್ದೇಶದಿಂದ ಏಪ್ರಿಲ್ 21 ರ ಮಂಗಳವಾರ ದಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಮದ್ದೂರು ನಗರದ ಮಳವಳ್ಳಿ ರಸ್ತೆಯ ಬಿಜೆಪಿ ಕಚೇರಿ ಆವರಣದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಈ ಮಹತ್ವದ ಉದ್ಯೋಗ ಮೇಳ ನಡೆಯಲಿದೆ. ಉದ್ಯೋಗಾಕಾಂಕ್ಷಿಗಳು ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಬಿಜೆಪಿ ಮುಖಂಡ ಹಾಗೂ ಮನ್ ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಉದ್ಯೋಗ ಮೇಳದ ಮುಖ್ಯಾಂಶಗಳು ಈಗಾಗಲೇ 50 ಕ್ಕೂ ಹೆಚ್ಚು ಕಂಪನಿಗಳು ಈ ಮೇಳದಲ್ಲಿ ಪಾಲ್ಗೊಳ್ಳಲು ನೋಂದಾಯಿಸಿಕೊಂಡಿವೆ. ಈ ಬೃಹತ್ ಮೇಳದಲ್ಲಿ ಬರೋಬ್ಬರಿ 5000ಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಲಭ್ಯವಿರುವುದು ವಿಶೇಷವಾಗಿದೆ. ವಿದ್ಯಾರ್ಹತೆ…
ಬೆಂಗಳೂರು: ರಾಜ್ಯದ ಎಸ್ಎಸ್ಎಲ್ಸಿ (SSLC) ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯು ಮಹತ್ವದ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಎಸ್ಎಸ್ಎಲ್ಸಿ ಪರೀಕ್ಷೆಯ ಒಟ್ಟು ಅಂಕಗಳಲ್ಲಿ ಬದಲಾವಣೆಯಾಗಲಿದ್ದು, ಈ ಕುರಿತು ಶಿಕ್ಷಣ ಇಲಾಖೆಯು ಅಧಿಕೃತ ಕರಡು ಅಧಿಸೂಚನೆಯನ್ನು ಹೊರಡಿಸಿದೆ. 525 ಅಂಕಗಳ ಹೊಸ ಸೂತ್ರ: ಈ ಮೊದಲು ಎಸ್ಎಸ್ಎಲ್ಸಿ ಪರೀಕ್ಷೆಯು ಒಟ್ಟು 625 ಅಂಕಗಳಿಗೆ ನಡೆಯುತ್ತಿತ್ತು. ಆದರೆ, ಹೊಸ ನಿಯಮದ ಪ್ರಕಾರ ತೃತೀಯ ಭಾಷೆ (Third Language) ವಿಷಯಕ್ಕೆ ನೀಡಲಾಗುತ್ತಿದ್ದ 100 ಅಂಕಗಳನ್ನು ತೆಗೆದುಹಾಕಲಾಗಿದೆ. ಇದರ ಬದಲಾಗಿ ತೃತೀಯ ಭಾಷೆಯಲ್ಲಿ ಕೇವಲ ‘ಗ್ರೇಡ್’ (Grade System) ನೀಡಲು ತೀರ್ಮಾನಿಸಲಾಗಿದೆ. ಹೀಗಾಗಿ, ಇನ್ಮುಂದೆ ಫಲಿತಾಂಶವನ್ನು ಒಟ್ಟು 525 ಅಂಕಗಳಿಗೆ ಪರಿಗಣಿಸಲಾಗುತ್ತದೆ. ಉತ್ತೀರ್ಣರಾಗಲು ಮಾನದಂಡಗಳೇನು? ಹೊಸ ಅಧಿಸೂಚನೆಯಲ್ಲಿ ಉತ್ತೀರ್ಣರಾಗಲು ಅಗತ್ಯವಿರುವ ಕನಿಷ್ಠ ಅಂಕಗಳ ಬಗ್ಗೆ ಸ್ಪಷ್ಟಪಡಿಸಲಾಗಿದೆ: ಒಟ್ಟು ಅಂಕಗಳು: 525 ಅಂಕಗಳಲ್ಲಿ ಕನಿಷ್ಠ 173 ಅಂಕಗಳನ್ನು (ಶೇ. 33) ಗಳಿಸುವುದು ಕಡ್ಡಾಯ. ವಿಷಯವಾರು ಅಂಕ: ಪ್ರತಿ ವಿಷಯದಲ್ಲಿ ಕನಿಷ್ಠ ಶೇ. 30ರಷ್ಟು ಅಂಕಗಳನ್ನು ಪಡೆಯಲೇಬೇಕು. ತೃತೀಯ ಭಾಷೆಗೆ ಗ್ರೇಡ್…
ಮುಂಬೈ: ಭಾರತೀಯ ಚಿತ್ರರಂಗದ ಅಪ್ರತಿಮ ಗಾಯಕಿ, ಪದ್ಮವಿಭೂಷಣ ಆಶಾ ಭೋಂಸ್ಲೆ (92) ಅವರು ಭಾನುವಾರ (ಏಪ್ರಿಲ್ 12, 2026) ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾದರು. ಇಂದು ಸಂಜೆ 4 ಗಂಟೆಗೆ ಮುಂಬೈನ ಐತಿಹಾಸಿಕ ಶಿವಾಜಿ ಪಾರ್ಕ್ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು. ಈ ಮೂಲಕ ಎಂಟು ದಶಕಗಳ ಕಾಲ ಭಾರತೀಯರ ಕಿವಿಯಲ್ಲಿ ಜೇನಿನಂತೆ ಸಪ್ತಸ್ವರಗಳನ್ನು ಸುರಿಸಿದ್ದ ಮಹಾನ್ ಚೇತನ ಪಂಚಭೂತಗಳಲ್ಲಿ ಲೀನವಾಯಿತು. ಗೌರವ ವಂದನೆ ಮತ್ತು ಅಂತಿಮ ವಿಧಿವಿಧಾನ ಮುಂಬೈ ಪೊಲೀಸರು ಕುಶಾಲತೋಪುಗಳ ಗೌರವ ವಂದನೆ (Gun Salute) ಸಲ್ಲಿಸುವ ಮೂಲಕ ಗಾಯಕಿಗೆ ಅಂತಿಮ ನಮನ ಸಲ್ಲಿಸಿದರು. ಆಶಾ ಅವರ ಪಾರ್ಥಿವ ಶರೀರದ ಮೇಲೆ ಹೊದಿಸಲಾಗಿದ್ದ ತ್ರಿವರ್ಣ ಧ್ವಜವನ್ನು ಪೊಲೀಸರು ಗೌರವಪೂರ್ವಕವಾಗಿ ಅವರ ಪುತ್ರ ಆನಂದ್ ಭೋಂಸ್ಲೆ ಅವರಿಗೆ ಹಸ್ತಾಂತರಿಸಿದರು. ನಂತರ ಆನಂದ್ ಭೋಂಸ್ಲೆ ಅವರು ಚಿತೆಗೆ ಅಗ್ನಿಸ್ಪರ್ಶ ಮಾಡುವ ಮೂಲಕ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು. https://twitter.com/ANI/status/2043658768014250288 ಗಣ್ಯರ ದಂಡು ಗಾಯಕಿಯ ಅಂತಿಮ ದರ್ಶನ ಪಡೆಯಲು ರಾಜಕೀಯ…
ಬೆಂಗಳೂರು: ಟಾಟಾ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯಗಳು 2026ರ ಏಪ್ರಿಲ್ 15, 18 ಹಾಗೂ 24ರಂದು ಬೆಂಗಳೂರಿನಲ್ಲಿ ನಡೆಯಲಿದ್ದು, ಪ್ರಯಾಣಿಕರಿಗೆ ಸುರಕ್ಷಿತ ಹಾಗೂ ಅನುಕೂಲಕರ ಸಂಚಾರವನ್ನು ಕಲ್ಪಿಸುವ ಉದ್ದೇಶದಿಂದ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಏಪ್ರಿಲ್ 15 ಮತ್ತು 24ರ ರಾತ್ರಿ ಪಂದ್ಯಗಳ ದಿನಗಳಲ್ಲಿ ಮೆಟ್ರೋ ರೈಲು ಸೇವಾ ಅವಧಿಯನ್ನು ವಿಸ್ತರಿಸಲಾಗುತ್ತಿದೆ. ಈ ದಿನಗಳಲ್ಲಿ, ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ಮೆಟ್ರೋ ರೈಲು ಸೇವೆಗಳು ರಾತ್ರಿ 11:00 ಗಂಟೆಯಿಂದ ಮುಂದಿನ ದಿನದ ಮುಂಜಾನೆ 2:00 ಗಂಟೆಯವರೆಗೆ ವಿಸ್ತರಿಸಲಾಗಿದೆ. ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ರೈಲುಗಳು ಕೆಳಗಿನ ವೇಳಾಪಟ್ಟಿಯಂತೆ ಹೊರಡಲಿವೆ: ವೈಟ್ಫೀಲ್ಡ್ (ಕಾಡುಗೋಡಿ) ಯಿಂದ ರಾತ್ರಿ 12.30ಕ್ಕೆ ಮತ್ತು ಚೆಲ್ಲಘಟ್ಟ ದಿಂದ ರಾತ್ರಿ 12.45ಕ್ಕೆ. ರೇಷ್ಮೆ ಸಂಸ್ಥೆ ಹಾಗೂ ಮಾದಾವರ ದಿಂದ ರಾತ್ರಿ 12.45ಕ್ಕೆ. ಬೊಮ್ಮಸಂದ್ರ ದಿಂದ ರಾತ್ರಿ 12.30ಕ್ಕೆ ಹಾಗೂ ಆರ್.ವಿ. ರಸ್ತೆ ಯಿಂದ ರಾತ್ರಿ 02.00ಕ್ಕೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮಜೆಸ್ಟಿಕ್ ನಿಂದ ನಾಲ್ಕು ದಿಕ್ಕುಗಳಿಗೆ ಮಧ್ಯರಾತ್ರಿ 01:30ಕ್ಕೆ ಕೊನೆಯ ರೈಲು…
ಪತ್ರಕರ್ತರ ಸಂಘಟನೆಗೆ ಶಿವಮೊಗ್ಗದ ‘ಡಬಲ್ ಇಂಜಿನ್’ ಬಲ: KUWJ ರಾಜ್ಯ ನಿರ್ದೇಶಕರಾಗಿ ಎನ್.ರವಿಕುಮಾರ್ ಟೆಲೆಕ್ಸ್ ಆಯ್ಕೆ!
ಶಿವಮೊಗ್ಗ: ಶರಣರ ನಾಡು, ಸೂಫಿ ಸಂತರ ಬೀಡು ಬೀದರ್ನಲ್ಲಿ ಇತ್ತೀಚೆಗೆ ಅದ್ಧೂರಿಯಾಗಿ ಜರುಗಿದ 40ನೇ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಮ್ಮೇಳನವು ಅಭೂತಪೂರ್ವ ಯಶಸ್ಸು ಕಂಡಿದೆ. ಈ ಯಶಸ್ಸಿನ ಸಡಗರದ ನಡುವೆಯೇ ಶಿವಮೊಗ್ಗ ಜಿಲ್ಲೆಯ ಪತ್ರಕರ್ತರ ಸಂಘಟನೆಗೆ ಹೊಸ ಹುರುಪು ಬಂದಿದೆ. ಸಂಘದ ರಾಜ್ಯ ನಿರ್ದೇಶಕರಾಗಿ ಶಿವಮೊಗ್ಗದ ಎನ್. ರವಿಕುಮಾರ್ ಅವರು ನೇಮಕಗೊಂಡಿರುವುದು ಜಿಲ್ಲೆಯ ಪತ್ರಕರ್ತ ವಲಯದಲ್ಲಿ ಹೊಸ ಆಶಾವಾದ ಮೂಡಿಸಿದೆ. ಸಮ್ಮೇಳನ ಯಶಸ್ವಿ: ಎನ್. ರವಿಕುಮಾರ್ ಹರ್ಷ ಸೋಮವಾರ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪತ್ರಕರ್ತ ಸ್ನೇಹಿತರಿಂದ ಹಾರ್ದಿಕ ಅಭಿನಂದನೆ ಸ್ವೀಕರಿಸಿ ಮಾತನಾಡಿದ ನೂತನ ರಾಜ್ಯ ನಿರ್ದೇಶಕ ಎನ್. ರವಿಕುಮಾರ್, “ಬೀದರ್ನಲ್ಲಿ ನಡೆದ ಸಮ್ಮೇಳನವು ಅತ್ಯಂತ ಅಚ್ಚುಗಟ್ಟಾಗಿ ಮತ್ತು ವ್ಯವಸ್ಥಿತವಾಗಿ ಮೂಡಿಬಂದಿದೆ. ಶಿವಮೊಗ್ಗ ಜಿಲ್ಲೆಯಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಪತ್ರಕರ್ತರು ಈ ಐತಿಹಾಸಿಕ ಸಮ್ಮೇಳನಕ್ಕೆ ಸಾಕ್ಷಿಯಾಗಿದ್ದು ಹೆಮ್ಮೆಯ ವಿಷಯ,” ಎಂದರು. ತಮ್ಮ ಹೊಸ ಜವಾಬ್ದಾರಿಯ ಕುರಿತು ಮಾತನಾಡುತ್ತಾ, “ಸಂಘಟನೆಯು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಎಲ್ಲರ ಸಹಕಾರದೊಂದಿಗೆ ಉಳಿಸಿಕೊಳ್ಳುತ್ತೇನೆ. ಈಗಾಗಲೇ ಜಿಲ್ಲಾ ಪ್ರತಿನಿಧಿಯಾಗಿ…
ಹರಿಹರ: ಪಂಚಮಸಾಲಿ ಗುರುಪೀಠದಿಂದ ತಮ್ಮನ್ನು ಉಚ್ಚಾಟನೆ ಮಾಡಿದ ಧರ್ಮದರ್ಶಿಗಳ ಮಂಡಳಿಯ ನಿರ್ಧಾರಕ್ಕೆ ವಚನಾನಂದ ಸ್ವಾಮೀಜಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. “ಪಂಚಮಸಾಲಿ ಸಮಾಜ ಇಂದು ಪ್ರಬಲವಾಗುತ್ತಿದೆ ಮತ್ತು ಸಮುದಾಯದ ಸ್ವಾಮೀಜಿಗಳು ಗಟ್ಟಿಯಾಗುತ್ತಿದ್ದಾರೆ ಎಂಬ ಕಾರಣಕ್ಕೆ ನಮ್ಮನ್ನು ವ್ಯವಸ್ಥಿತವಾಗಿ ಟಾರ್ಗೆಟ್ ಮಾಡಲಾಗುತ್ತಿದೆ” ಎಂದು ಅವರು ಆರೋಪಿಸಿದ್ದಾರೆ. ಉಚ್ಚಾಟನೆಗೆ ಶ್ರೀಗಳ ಪ್ರತಿಕ್ರಿಯೆ: ವ್ಯವಸ್ಥಿತ ಸಂಚು: “ಈ ಹಿಂದೆ ಜಯ ಮೃತ್ಯುಂಜಯ ಸ್ವಾಮೀಜಿ ಮತ್ತು ಸಿದ್ದಲಿಂಗ ಸ್ವಾಮೀಜಿ ಅವರನ್ನು ಟಾರ್ಗೆಟ್ ಮಾಡಲಾಗಿತ್ತು, ಈಗ ನನ್ನ ಸರದಿ. ಸಮಾಜದ ನಾಯಕರು ಮತ್ತು ಶ್ರೀಗಳು ಒಗ್ಗೂಡುತ್ತಿರುವುದು ಕೆಲವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ,” ಎಂದು ವಚನಾನಂದ ಶ್ರೀಗಳು ದೂರಿದ್ದಾರೆ. ನೋಟಿಸ್ ನೀಡಿಲ್ಲ: ಉಚ್ಚಾಟನೆಗೆ ಮುನ್ನ ನಡೆದ ಸಭೆಯ ಕುರಿತು ತಮಗೆ ಯಾವುದೇ ಅಧಿಕೃತ ನೋಟಿಸ್ ನೀಡಿಲ್ಲ. ಪಂಚಮಸಾಲಿ ಮಠವು ಕೇವಲ 12 ಜನರ ಮಠವಲ್ಲ, ಇದು ಇಡೀ ಸಮಾಜಕ್ಕೆ ಸೇರಿದ್ದು ಎಂದು ಅವರು ಗುಡುಗಿದ್ದಾರೆ. ವಿಚಾರಧಾರೆಗಳ ಸಂಘರ್ಷ: “ನಾನು ಹಿಂದೂಗಳು ಎಂದು ಹೇಳಬಾರದು ಎಂಬುದು ಕೆಲವರ ವಾದ. ಲಿಂಗಾಯತ ಹಿಂದೂ ಎನ್ನಬಾರದು ಎಂಬ ವಿರೋಧವೂ…
ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026-27ನೇ ಶೈಕ್ಷಣಿಕ ಸಾಲಿನ ವಾರ್ಷಿಕ ಕ್ರಿಯಾಯೋಜನೆಯನ್ನು ಬಿಡುಗಡೆ ಮಾಡಿದೆ. ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಅನ್ವಯವಾಗುವಂತೆ ಏಕರೂಪದ ಶೈಕ್ಷಣಿಕ ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ. ಪ್ರಮುಖ ದಿನಾಂಕಗಳು: ಶಾಲೆಗಳ ಪುನರಾರಂಭ: ಮೇ 29, 2026 ರಿಂದ ಶಿಕ್ಷಕರು ಹಾಜರಾಗಬೇಕು. ಮೇ 30ರಿಂದ ದಾಖಲಾತಿ ಅಂದೋಲನ ಹಾಗೂ ಜೂನ್ 1ರಿಂದ ಪೂರ್ಣ ಪ್ರಮಾಣದ ತರಗತಿಗಳು ಆರಂಭವಾಗಲಿವೆ. ದಸರಾ ರಜೆ: ಅಕ್ಟೋಬರ್ 03, 2026 ರಿಂದ ಅಕ್ಟೋಬರ್ 21, 2026 ರವರೆಗೆ. ಬೇಸಿಗೆ ರಜೆ (2027): ಏಪ್ರಿಲ್ 11, 2027 ರಿಂದ ಮೇ 28, 2027 ರವರೆಗೆ. ಶೈಕ್ಷಣಿಕ ಅವಧಿಗಳ ವಿವರ: ಮೊದಲನೇ ಅವಧಿ: 29-05-2026 ರಿಂದ 02-10-2026 ರವರೆಗೆ. ಎರಡನೇ ಅವಧಿ: 22-10-2026 ರಿಂದ 10-04-2027 ರವರೆಗೆ. ಕೆಲಸದ ದಿನಗಳ ಲೆಕ್ಕಾಚಾರ: ಈ ಶೈಕ್ಷಣಿಕ ವರ್ಷದಲ್ಲಿ ಒಟ್ಟು 245 ಶಾಲಾ ಕೆಲಸದ ದಿನಗಳು ಲಭ್ಯವಿವೆ. ಇವುಗಳಲ್ಲಿ: ಬೋಧನಾ-ಕಲಿಕಾ ಪ್ರಕ್ರಿಯೆಗೆ: 181…
ಅಕ್ಷಯ ತೃತೀಯ ಎಂದಾಕ್ಷಣ ನಮಗೆ ಮೊದಲು ನೆನಪಿಗೆ ಬರುವುದು ಚಿನ್ನವನ್ನು ಖರೀದಿಸುವುದು. ಈ ಅಕ್ಷಯ ತೃತಿಯ ದಿನದಂದು ಕುಬೇರನ ತಾಯಿ ಮಹಾಲಕ್ಷ್ಮಿ ಆಶೀರ್ವಾದ ಪಡೆದಳು ಎಂಬ ಪ್ರತೀತಿಯೂ ಇದೆ. ಈ ದಿನ ತಾಯಿ ಮಹಾಲಕ್ಷ್ಮಿಯನ್ನು ಪೂಜಿಸುವಷ್ಟೇ ಮಹತ್ವವನ್ನು ಈ ದಿನ ಕುಬೇರನಿಗೆ ನೀಡಬೇಕು. ಈ ದಿನದಂದು ನೀವು ಈ ಒಂದು ಸರಳ ಪರಿಹಾರವನ್ನು ಮಾಡಿದರೆ, ಸಂಪತ್ತಿನ ಅಧಿಪತಿಯಾದ ಕುಬೇರನು ನಿಮಗೆ ಸಂಪತ್ತು ಮತ್ತು ಸಮೃದ್ಧಿಯನ್ನು ನೀಡುತ್ತಾನೆ, ಅದು ಉತ್ತಮ ಫಲಿತಾಂಶಗಳನ್ನು ನೀಡುತ್ತದೆ ಎಂದು ಆಧ್ಯಾತ್ಮಿಕತೆ ಹೇಳುತ್ತದೆ . ಅದು ಏನೆಂದು ಕಂಡುಹಿಡಿಯಿರಿ ಮತ್ತು ಅದನ್ನು ಖರೀದಿಸಿ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು…
ಬೆಂಗಳೂರು: ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡಲು, ನೈಋತ್ಯ ರೈಲ್ವೆಯು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು- ರೂಪ್ಸಾ – ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣಗಳ ನಡುವೆ ಮೂರು ಟ್ರಿಪ್ಗಳ ವಿಶೇಷ ರೈಲು ಸೇವೆಯನ್ನು ಓಡಿಸಲಿದೆ. ರೈಲು ಸಂಖ್ಯೆ 06545 ಎಸ್.ಎಂ.ವಿ.ಟಿ. ಬೆಂಗಳೂರು – ರೂಪ್ಸಾ ವಿಶೇಷ ಎಕ್ಸ್ಪ್ರೆಸ್ ಏಪ್ರಿಲ್ 15, ಏಪ್ರಿಲ್ 22 ಮತ್ತು ಏಪ್ರಿಲ್ 29 ರಂದು (ಬುಧವಾರ) ಸಂಜೆ 04:35 ಗಂಟೆಗೆ ಎಸ್.ಎಂ.ವಿ.ಟಿ. ಬೆಂಗಳೂರು ನಿಲ್ದಾಣದಿಂದ ಹೊರಟು, ಮರುದಿನ ರಾತ್ರಿ 08:30 ಕ್ಕೆ ರೂಪ್ಸಾ ತಲುಪಲಿದೆ. ರೈಲು ಸಂಖ್ಯೆ 06546 ರೂಪ್ಸಾ – ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್ಪ್ರೆಸ್ ಏಪ್ರಿಲ್ 16, ಏಪ್ರಿಲ್ 23 ಮತ್ತು ಏಪ್ರಿಲ್ 30 ರಂದು (ಗುರುವಾರ) ರಾತ್ರಿ 11:30 ಕ್ಕೆ ರೂಪ್ಸಾ ನಿಲ್ದಾಣದಿಂದ ಹೊರಟು, ಶನಿವಾರ ಬೆಳಿಗ್ಗೆ 05:30 ಕ್ಕೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ. ಈ ರೈಲುಗಳಿಗೆ ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್ಪೇಟೆ, ಕಾಟ್ಪಾಡಿ, ರೇಣಿಗುಂಟಾ, ನೆಲ್ಲೂರು, ಓಂಗೋಲ್, ವಿಜಯವಾಡ, ರಾಜಮಂಡ್ರಿ, ವಿಜಯನಗರಂ, ಶ್ರೀಕಾಕುಳಂ…
ಬೆಂಗಳೂರು: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಪರೀಕ್ಷೆ- 1 ಮತ್ತು ಪರೀಕ್ಷೆ-2 ರಲ್ಲಿ ಪಡೆದ ಅಂಕಗಳ ಪೈಕಿ ಯಾವುದು ಅತ್ಯಧಿಕವೊ ಆ ಅಂಕಗಳನ್ನೇ ಸಿಇಟಿ ಫಲಿತಾಂಶಕ್ಕೆ ಪರಿಗಣಿಸಲಾಗುವುದು. ಈ ವಿಷಯದಲ್ಲಿ ಗೊಂದಲ ಬೇಡ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಸ್ಪಷ್ಟಪಡಿಸಿದ್ದಾರೆ. ಕೆಲ ಅಭ್ಯರ್ಥಿಗಳು ಪರೀಕ್ಷೆ-1 ರಲ್ಲಿ ಪಡೆದ ಅಂಕಗಳನ್ನು ಉತ್ತಮಪಡಿಸಿಕೊಳ್ಳಲು ಎರಡನೇ ಪರೀಕ್ಷೆ ಕೂಡ ತೆಗೆದುಕೊಳ್ಳುತ್ತಿದ್ದಾರೆ. ಅಂತಹವರಿಗೆ ಕಳೆದ ವರ್ಷದಂತೆ ಎರಡೂ ಪರೀಕ್ಷೆಗಳಲ್ಲಿ ಪಡೆದ ಅತ್ಯಧಿಕ ಅಂಕಗಳನ್ನು ಸಿಇಟಿ ರಾಂಕ್ ಗೆ ಪರಿಗಣಿಸಲಾಗುತ್ತದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ದ್ವಿತೀಯ ಪಿಯುಸಿಯ ಎರಡೂ ಪರೀಕ್ಷೆ ಗಳ ಫಲಿತಾಂಶ ಬಂದ ನಂತರವೇ ಸಿಇಟಿ ಫಲಿತಾಂಶ ಪ್ರಕಟಿಸುವುದು. ಹೀಗಾಗಿ ಎರಡನೇ ಪರೀಕ್ಷೆಯ ಅಂಕಗಳನ್ನು ಪರಿಗಣಿಸುವುದಿಲ್ಲ ಎನ್ನುವುದು ಸುಳ್ಳು. ಇಂತಹ ವದಂತಿಗಳಿಗೆ ಕಿವಿ ಕೊಡಬೇಡಿ ಎಂದು ಹೇಳಿದರು. ಕರ್ನಾಟಕ ರಾಜ್ಯ ಪಠ್ಯ ಕ್ರಮದ ಪಿಯುಸಿ ಅಭ್ಯರ್ಥಿಗಳಿಗೆ ಮಾತ್ರ ಈ ಎರಡು ಪರೀಕ್ಷೆಗಳ ನಿಯಮ ಅನ್ವಯ ವಾಗುತ್ತದೆ. ಉಳಿದಂತೆ ಕೇಂದ್ರ ಹಾಗೂ…














