Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ನೂತನ ನಾಯಕನಾಗಿ ಸರ್ವಾನುಮತದಿಂದ ಆಯ್ಕೆಯಾದ ಬೆನ್ನಲ್ಲೇ, ಡಿ.ಕೆ. ಶಿವಕುಮಾರ್ ಅವರು ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚಿಸಲು ಅಧಿಕೃತವಾಗಿ ಹಕ್ಕು ಮಂಡಿಸಿದ್ದಾರೆ. ವಿಧಾನಸೌಧದ ಪ್ರಕ್ರಿಯೆಗಳು ಮುಗಿಯುತ್ತಿದ್ದಂತೆ ಕಾಂಗ್ರೆಸ್ನ ಪ್ರಮುಖ ನಾಯಕರು ರಾಜಭವನದತ್ತ (ಲೋಕಭವನ) ಧಾವಿಸಿದರು. ಈ ವೇಳೆ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ, ನೂತನ ಸಿಎಂ ಆಗಿ ಆಯ್ಕೆಯಾಗಿರುವ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ್ ಅವರು ಒಂದೇ ಕಾರಿನಲ್ಲಿ ಒಟ್ಟಿಗೆ ಪ್ರಯಾಣಿಸಿದ್ದು ವಿಶೇಷವಾಗಿತ್ತು. ನಾಯಕರ ನಡುವಿನ ಈ ಒಗ್ಗಟ್ಟಿನ ಪ್ರದರ್ಶನ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ. ರಾಜ್ಯಪಾಲರಿಗೆ ಆಹ್ವಾನ ಪತ್ರ ಸಲ್ಲಿಕೆ ರಾಜಭವನಕ್ಕೆ ಆಗಮಿಸಿದ ಕಾಂಗ್ರೆಸ್ ನಿಯೋಗವು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿತು. ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ನೂತನ ನಾಯಕನನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿರುವ ಕುರಿತಾದ ಅಧಿಕೃತ ಪತ್ರವನ್ನು ಈ ಸಂದರ್ಭದಲ್ಲಿ…
BIG BREAKING: ಜೂನ್.3ರಂದು ಕರ್ನಾಟಕದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ: ಕೆ.ಸಿ ವೇಣುಗೋಪಾಲ್ ಘೋಷಣೆ
ಬೆಂಗಳೂರು: ಕಾಂಗ್ರೆಸ್ ನೂತನ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾಗಿರುವಂತ ಡಿ.ಕೆ ಶಿವಕುಮಾರ್ ಅವರು ಕರ್ನಾಟಕ ಮುಖ್ಯಮಂತ್ರಿಯಾಗಿ ಜೂನ್.3ರಂದು ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬುದಾಗಿ ಎಐಸಿಸಿ ವೀಕ್ಷಕರಾದಂತ ಕೆ.ಸಿ ವೇಣುಗೋಪಾಲ್ ಘೋಷಿಸಿದ್ದಾರೆ. ಇಂದು ಸಿಎಲ್ ಪಿ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ನೀಡಿದಂತ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ. ಆ ಬಳಿಕ ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕ ಮುಖ್ಯಮಂತ್ರಿ ಆಯ್ಕೆಗೆ ಸೂಚಿಸಲಾಗಿತ್ತು. ಅದರಂತೆ ಇಂದು ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ಸಿಎಲ್ ಪಿ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಅವರ ಆಯ್ಕೆಯನ್ನು ಸಿದ್ಧರಾಮಯ್ಯ ಅವರು ಪ್ರಸ್ತಾಪಿಸಿದರು. ಅದಕ್ಕೆ ಡಾ.ಜಿ ಪರಮೇಶ್ವರ್ ಅವರು ಅನುಮೋದನೆ ನೀಡಿದರು ಎಂದರು. ಜೂನ್.3ರಂದು ಸಂಜೆ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರಿಸಲಿದ್ದಾರೆ. ಅವರು ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಆಹ್ವಾನಿಸಲಿದ್ದಾರೆ ಎಂಬುದಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಕೆ.ಸಿ ವೇಣುಗೋಪಲ್ ತಿಳಿಸಿದರು. ಸಿಎಲ್ ಪಿ ನಾಯಕರಾಗಿ ಡಿ.ಕೆ ಶಿವಕುಮಾರ್…
ಬೆಂಗಳೂರು: ಸಿದ್ಧರಾಮಯ್ಯ ನಂತ್ರದ ಉತ್ತರಾಧಿಕಾರಿಯಾಗಿ ಡಿಕೆ ಶಿವಕುಮಾರ್ ಅವರನ್ನು ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಇಂದಿನ ಸಿಎಲ್ ಪಿ ಸಭೆಯಲ್ಲಿ ಡಿ.ಕೆ ಶಿವಕುಮಾರ್ ಪರವಾಗಿ ಶಾಸಕರು ಭರ್ಜರಿ ಬೆಂಬಲ ವ್ಯಕ್ತ ಪಡಿಸಿದ್ದಾರೆ. ಸಿಎಲ್ ಪಿ ಸಭೆಗೆ ಹಾಜರಾಗಿದ್ದಂತ ಬಹುತೇಕ ಶಾಸಕರು ಡಿ.ಕೆ ಶಿವಕುಮಾರ್ ಅವರನ್ನು ನೂತನ ಶಾಸಕಾಂಗ ಪಕ್ಷದ ನಾಯಕನಾಗಿ, ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆಗೆ ಕೈ ಎತ್ತಿ ಬೆಂಬಲ ವ್ಯಕ್ತ ಪಡಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಕಾಂಗ್ರೆಸ್ ಪಕ್ಷದ ಮಹತಕ್ವದ ಶಾಸಕಾಂಕ ಪಕ್ಷದ ಸಭೆ ನಡೆಯಿತು. ಈ ಸಭೆಯಲ್ಲಿ ಶಾಸಕರು, ರಾಜ್ಯ ಸಭೆ ಸದಸ್ಯರು ಭಾಗಿಯಾಗಿದ್ದರು. ಸಿದ್ಧರಾಮಯ್ಯ ತರುವಾಯ ಮುಂದಿನ ಮುಖ್ಯಮಂತ್ರಿ ಆಯ್ಕೆಗಾಗಿ, ಶಾಸಕಾಂಗ ಪಕ್ಷದ ನೂತನ ನಾಯಕನನ್ನಾಗಿ ಆಯ್ಕೆಗೆ ಶಾಸಕರನ್ನು ಕೋರಲಾಯಿತು. ಈ ವೇಳೆ ಸಭೆಯಲ್ಲಿ ಹಾಜರಿದ್ದಂತ ಬಹುತೇಕರು ಕೈ ಎತ್ತಿ ಡಿ.ಕೆ ಶಿವಕುಮಾರ್ ಗೆ ಬೆಂಬಲ ಸೂಚಿಸಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ಸಿಎಲ್ ಪಿ ನಾಯಕ, ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆಯ ಬಗ್ಗೆ…
ನವದೆಹಲಿ: ಇಂದು (ಮೇ 30, 2026) ನಡೆದ ಸಿಯುಇಟಿ ಯುಜಿ (CUET UG 2026) ಪರೀಕ್ಷೆಯ ಮೊದಲ ಶಿಫ್ಟ್ನಲ್ಲಿ ಎದುರಾದ ತಾಂತ್ರಿಕ ಅಡಚಣೆಯಿಂದ ಕಂಗಾಲಾಗಿದ್ದ ಅಭ್ಯರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಬಿಗ್ ರಿಲೀಫ್ ನೀಡಿದೆ. ತಾಂತ್ರಿಕ ಸಮಸ್ಯೆಯಿಂದಾಗಿ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ನಡೆಸಲಾಗುವುದು ಎಂದು ಎನ್ಟಿಎ ಅಧಿಕೃತವಾಗಿ ಪ್ರಕಟಿಸಿದೆ. https://twitter.com/NTA_Exams/status/2060687615209472019 ತಾಂತ್ರಿಕ ದೋಷದಿಂದ ಅಭ್ಯರ್ಥಿಗಳಿಗೆ ಸಂಕಷ್ಟ ಮೇ 30 ರ ಶನಿವಾರದಂದು ನಡೆದ ಶಿಫ್ಟ್-1 (Shift-I) ಪರೀಕ್ಷೆಯ ಸಂದರ್ಭದಲ್ಲಿ ದೇಶದ ಕೆಲವು ಪರೀಕ್ಷಾ ಕೇಂದ್ರಗಳಲ್ಲಿ ಹಠಾತ್ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಇದರಿಂದಾಗಿ ಪರೀಕ್ಷೆ ಬರೆಯಲು ಸಜ್ಜಾಗಿದ್ದ ನೂರಾರು ವಿದ್ಯಾರ್ಥಿಗಳು ತೀವ್ರ ಆತಂಕ ಮತ್ತು ಕದಡpoints ಅನುಭವಿಸುವಂತಾಯಿತು. ಈ ದುರದೃಷ್ಟಕರ ಘಟನೆಯಿಂದಾಗಿ ಉಂಟಾದ ಗೊಂದಲಕ್ಕೆ ಎನ್ಟಿಎ ವಿಷಾದ ವ್ಯಕ್ತಪಡಿಸಿದೆ. ಮರುಪರೀಕ್ಷೆಗೆ ಯಾರು ಅರ್ಹರು? ಎನ್ಟಿಎ ನೀಡಿರುವ ಸ್ಪಷ್ಟನೆಯ ಪ್ರಕಾರ, ಈ ಕೆಳಗಿನ ಮಾನದಂಡಗಳನ್ನು ಹೊಂದಿರುವ ಅಭ್ಯರ್ಥಿಗಳಿಗೆ ಮಾತ್ರ ಮತ್ತೊಮ್ಮೆ ಪರೀಕ್ಷೆ ಬರೆಯುವ ಅವಕಾಶ ಸಿಗಲಿದೆ: ಇಂದು (30.05.2026) ತಮ್ಮ ಪರೀಕ್ಷಾ…
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಬದಲಾವಣೆಯ ಪ್ರಕ್ರಿಯೆ ಬೆನ್ನಲ್ಲೇ, ಇದೀಗ ಅಧಿಕಾರ ಹಂಚಿಕೆಯ ಹೋರಾಟ ತೀವ್ರಗೊಂಡಿದೆ. ಆಂತರಿಕ ಗೊಂದಲಗಳು ಕೇವಲ ಸಿಎಂ ಹುದ್ದೆಗೆ ಸೀಮಿತವಾಗಿರದೆ, ಮುಂಬರುವ ಸಂಪುಟ ಪುನರ್ ರಚನೆ ಮತ್ತು ಪ್ರಮುಖ ಹುದ್ದೆಗಳಿಗಾಗಿ ಭಾರಿ ಪೈಪೋಟಿ ಆರಂಭವಾಗಿದೆ ಎಂದು ‘ಕನ್ನಡ ನ್ಯೂಸ್ ನೌ.ಕಾಂ’ ವರದಿ ಮಾಡಿದೆ. ಪಕ್ಷದೊಳಗಿನ ಪ್ರಮುಖ ಶಕ್ತಿ ಕೇಂದ್ರಗಳು ಸಂಪುಟ ವಿಸ್ತರಣೆ, ನೂತನ ಕೆಪಿಸಿಸಿ ಅಧ್ಯಕ್ಷರ ಆಯ್ಕೆ, ರಾಜ್ಯಸಭಾ ಸೀಟುಗಳ ಹಂಚಿಕೆ ಹಾಗೂ ವಿವಿಧ ನಿಗಮ-ಮಂಡಳಿಗಳ ನೇಮಕಾತಿಗಳ ಮೇಲೆ ಕಣ್ಣಿಟ್ಟಿದ್ದು, ಹೈಕಮಾಂಡ್ ಮೇಲೆ ಒತ್ತಡ ಹೇರಲು ಸಜ್ಜಾಗಿವೆ. ರಾಜ್ಯ ಕಾಂಗ್ರೆಸ್ನಲ್ಲಿ ಪ್ರಸ್ತುತ ಮೂರು ಪ್ರಮುಖ ಬಣಗಳು ಸಕ್ರಿಯವಾಗಿದ್ದು, ಆ ಶಕ್ತಿ ಕೇಂದ್ರಗಳ ಸಂಪೂರ್ಣ ವಿವರ ಇಲ್ಲಿದೆ: 1. ರಾಜ್ಯ ರಾಜಕಾರಣದ 3 ಮುಖ್ಯ ಧ್ರುವಗಳು ರಾಜ್ಯದಲ್ಲಿ ತಮಗೆ ಮತ್ತು ತಮ್ಮ ಬೆಂಬಲಿಗರಿಗೆ ಗರಿಷ್ಠ ಪ್ರಮಾಣದ ಅಧಿಕಾರ ಸಿಗುವಂತೆ ಮಾಡಲು ಹಿರಿಯ ನಾಯಕರು ಆಗಾಗ್ಗೆ ದೆಹಲಿಗೆ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ, ನೂತನ ಮುಖ್ಯಮಂತ್ರಿಯಾಗಿ…
ಬೆಂಗಳೂರು : ನೂತನ ಸಚಿವ ಸಂಪುಟದಲ್ಲಿ ತಾವು ಉಪ ಮುಖ್ಯಮಂತ್ರಿ ಆಗಬೇಕು ಎಂಬುದು ವೀರಶೈವ ಲಿಂಗಾಯತ ಸಮಾಜದ ಆಶಯವಾಗಿದೆ. ಈ ಬಾರಿ 36 ಲಿಂಗಾಯತ ಶಾಸಕರು ಜಯ ಸಾಧಿಸಿದ್ದು, ಸೂಕ್ತ ಪ್ರಾತಿನಿಧ್ಯ ದೊರಕುತ್ತದೆ ಎಂಬ ವಿಶ್ವಾಸವನ್ನು ಮಾಜಿ ಸಚಿವ ಈಶ್ವರ ಖಂಡ್ರೆ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ವಿವಿಧ ಮಠಾಧಿಪತಿಗಳು, ಹರಚರ ಗುರುಮೂರ್ತಿಗಳು ತಮಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಅವರೆಲ್ಲರ ಅಭಿಮಾನ, ಹಾರೈಕೆಗೆ ತಾವು ಆಭಾರಿ ಎಂದರು. ನಾನು, ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಸೇವಾದಳದಿಂದ ಸಾರ್ವಜನಿಕ ಜೀವನಕ್ಕೆ ಕಾಲಿಟ್ಟು, ಜಿಲ್ಲಾಧ್ಯಕ್ಷನಾಗಿ, ಶಾಸಕನಾಗಿ, ಕಾರ್ಯಾಧ್ಯಕ್ಷನಾಗಿ, ಸಚಿವನಾಗಿ ಸೇವೆ ಸಲ್ಲಿಸಿದ್ದು, ತಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಲಭಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷನಾಗಿ ಸಂಪುಟದಲ್ಲಿ ತಮ್ಮ ಸಮಾಜದ ಶಾಸಕರಿಗೆ ಹೆಚ್ಚಿನ ಸ್ಥಾನ ನೀಡಬೇಕು ಎಂದು ವರಿಷ್ಠರಿಗೆ ಮನವಿ ಮಾಡಿರುವುದಾಗಿ ತಿಳಿಸಿದ ಈಶ್ವರ ಖಂಡ್ರೆ, ಇಂದು ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ…
ಶಿವಮೊಗ್ಗ: ಜಿಲ್ಲೆಯ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ನೂತನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಸೋಮಶೇಖರ ಲ್ಯಾವಿಗೆರೆ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಪಕ್ಷ ಸಂಘಟನೆಯ ದೃಷ್ಟಿಯಿಂದ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ. ಜಿಲ್ಲೆಯಲ್ಲಿ ಬಿಜೆಪಿ ಕಟ್ಟಿಹಾಕಲು ಬೇಳೂರು ಅನಿವಾರ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿಯನ್ನು ಅತ್ಯಂತ ಪ್ರಬಲವಾಗಿ ತಮ್ಮ ನೇರ ಹಾಗೂ ದಿಟ್ಟ ಹೇಳಿಕೆಗಳ ಮೂಲಕ ಕಟ್ಟಿಹಾಕುವ ರಾಜಕೀಯ ಸಾಮರ್ಥ್ಯ ಇರುವುದು ಗೋಪಾಲಕೃಷ್ಣ ಬೇಳೂರು ಅವರಿಗೆ ಮಾತ್ರ ಎಂದು ಸೋಮಶೇಖರ ಲ್ಯಾವಿಗೆರೆ ಹೇಳಿದ್ದಾರೆ. ಕಳೆದ ಎರಡೂವರೆ ದಶಕಗಳಿಂದ ರಾಜ್ಯ ರಾಜಕಾರಣದಲ್ಲಿ ಸಕ್ರಿಯವಾಗಿರುವ ಬೇಳೂರು ಅವರು ಈಗಾಗಲೇ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಕ್ಷೇತ್ರದ ಅಭಿವೃದ್ಧಿಯ ಜೊತೆಗೆ ಜನರೊಂದಿಗೆ ಉತ್ತಮ ಸೌಹಾರ್ದ ಸಂಬಂಧವನ್ನು ಅವರು ಹೊಂದಿದ್ದಾರೆ ಎಂದು ಲ್ಯಾವಿಗೆರೆ ಗುಣಗಾನ ಮಾಡಿದ್ದಾರೆ.…
ಬೆಂಗಳೂರು: ನೊಣವಿನಕೆರೆಯ ಕಾಡುಸಿದ್ದೇಶ್ವರ ಮಠದ ಸ್ವಾಮೀಜಿಗಳ ಮಾರ್ಗದರ್ಶನ ಹಾಗೂ ಶುಭ ಮುಹೂರ್ತದ ಅನ್ವಯ ದಿನಾಂಕವನ್ನು ನಿಗದಿಪಡಿಸಲಾಗಿದೆ. ಜೂನ್ 3ರ ಬುಧವಾರ ಸಂಜೆ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ. ಯಾವುದೇ ರೀತಿಯ ಬಿಲ್ಡಪ್ ಅಥವಾ ಆಡಂಬರವಿಲ್ಲದೆ, ಬೆಂಗಳೂರಿನ ಲೋಕಭವನದ ಗ್ಲಾಸ್ ಹೌಸ್ನಲ್ಲಿ ಅತ್ಯಂತ ಸರಳವಾಗಿ ಈ ಕಾರ್ಯಕ್ರಮ ಜರುಗಲಿದೆ. ಇಂಧನ ಬಿಕ್ಕಟ್ಟು ಹಾಗೂ ಸಂಚಾರ ದಟ್ಟಣೆಯನ್ನು ತಪ್ಪಿಸುವ ನಿಟ್ಟಿನಲ್ಲಿ ಅದ್ಧೂರಿತನಕ್ಕೆ ಬ್ರೇಕ್ ಹಾಕಲಾಗಿದ್ದು, ಕಾರ್ಯಕ್ರಮವನ್ನು ಸರಳವಾಗಿ ನಡೆಸಲು ಹೈಕಮಾಂಡ್ ಸೂಚಿಸಿದೆ. ಡಿ.ಕೆ ಶಿವಕುಮಾರ್ ಕರ್ನಾಟಕದ ನೂತನ ಸಿಎಂ: CLP ಸಭೆಯಲ್ಲಿ ಅಧಿಕೃತವಾಗಿ ಹೆಸರು ಘೋಷಣೆ ರಾಜ್ಯ ರಾಜಕಾರಣದ ತೀವ್ರ ಕುತೂಹಲಕ್ಕೆ ತೆರೆ ಬಿದ್ದಿದ್ದು, ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಶನಿವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ಈ ಅಧಿಕೃತ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ ಡಿ.ಕೆ.…
ಬೆಂಗಳೂರು: ರಾಜ್ಯ ರಾಜಕಾರಣದ ತೀವ್ರ ಕುತೂಹಲಕ್ಕೆ ತೆರೆ ಬಿದ್ದಿದ್ದು, ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಶನಿವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ಈ ಅಧಿಕೃತ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಅವರು ಮುಂದಿನ ಸಿಎಂ ಆಗುವುದು ನಿಶ್ಚಿತವಾಗಿತ್ತು. ಇಂದು ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಪ್ರಕ್ರಿಯೆಯಂತೆ ಅವರನ್ನು ನೂತನ ನಾಯಕನನ್ನಾಗಿ ಅಧಿಕೃತವಾಗಿ ಘೋಷಿಸಲಾಯಿತು. ಕಳೆದ ಮೂರು ವರ್ಷಗಳ ಕಾಲ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಡಿಸಿಎಂ ಆಗಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸಿದ್ದ ಡಿಕೆಶಿ, ಇದೀಗ ರಾಜ್ಯದ ಅತ್ಯುನ್ನತ ಗದ್ದುಗೆಯನ್ನು ಅಲಂಕರಿಸಲಿದ್ದಾರೆ. ಶಾಸಕರಿಗೆ ಹಸ್ತಲಾಘವ ಮಾಡಿದ ಡಿಕೆಶಿ ಸಿಎಲ್ಪಿ ಸಭೆಗೆ ಆಗಮಿಸುವ ಮುನ್ನ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದ ಕೊಠಡಿಯಲ್ಲಿ ತಮ್ಮ ಆರಾಧ್ಯ ದೈವ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ್ದರು. ಸಭೆಯಲ್ಲಿ ಎಐಸಿಸಿ ವೀಕ್ಷಕರಾಗಿ ಹಿರಿಯ ನಾಯಕರಾದ…
ಬೆಂಗಳೂರು: ಕರ್ನಾಟಕ ರಾಜಕೀಯದ ಮಹತ್ವದ ಬೆಳವಣಿಗೆಯೊಂದರಲ್ಲಿ, ನಿರೀಕ್ಷೆಯಂತೆಯೇ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ನೂತನ ನಾಯಕರಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕೃತವಾಗಿ ಆಯ್ಕೆಯಾಗಿದ್ದಾರೆ. ಶನಿವಾರ ವಿಧಾನಸೌಧದಲ್ಲಿ ನಡೆದ ಮಹತ್ವದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ಐತಿಹಾಸಿಕ ನಿರ್ಧಾರವನ್ನು ಕೈಗೊಳ್ಳಲಾಗಿದೆ. ರಾಜ್ಯ ರಾಜಕಾರಣದ ಮುಂದಿನ ದಿಕ್ಸೂಚಿ ಎಂದೇ ಬಿಂಬಿತವಾಗಿದ್ದ ಈ ಸಭೆಗೆ ರಾಜ್ಯದ ಮೂಲೆ ಮೂಲೆಗಳಿಂದ ಕಾಂಗ್ರೆಸ್ ಶಾಸಕರು ಆಗಮಿಸಿದ್ದರು. ಸಭೆಯ ಪ್ರಮುಖ ಆಕರ್ಷಣೆಯಾಗಿದ್ದ ಡಿ.ಕೆ. ಶಿವಕುಮಾರ್ ಅವರು ಯಾವುದೇ ಸರ್ಕಾರಿ ವಾಹನ ಬಳಸದೆ, ಅತ್ಯಂತ ಸರಳವಾಗಿ ಖಾಸಗಿ ಕಾರಿನಲ್ಲಿಯೇ ವಿಧಾನಸೌಧಕ್ಕೆ ಆಗಮಿಸಿದ್ದು ಎಲ್ಲರ ಗಮನ ಸೆಳೆಯಿತು. ಸಭೆಯಲ್ಲಿ ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್, ಹಿರಿಯ ಶಾಸಕರಾದ ಟಿ.ಬಿ. ಜಯಚಂದ್ರ, ರಾಮಲಿಂಗಾರೆಡ್ಡಿ, ಸಿ.ಪಿ. ಯೋಗೇಶ್ವರ್, ಆನೇಕಲ್ ಶಿವಣ್ಣ, ಪ್ರದೀಪ್ ಈಶ್ವರ್, ಗೋಪಾಲಕೃಷ್ಣ ಬೇಳೂರು, ಜಮೀರ್ ಅಹ್ಮದ್ ಖಾನ್, ಸತೀಶ್ ಜಾರಕಿಹೊಳಿ, ನಾಗೇಂದ್ರ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಮತ್ತು ಶಾಸಕರು ಭಾಗವಹಿಸಿದ್ದರು. ಸಭೆಯ ಆರಂಭ ಮತ್ತು ಗಣ್ಯರ ಭಾಷಣ ಕಾಂಗ್ರೆಸ್…














