Author: kannadanewsnow09

ಬೆಂಗಳೂರು: ರಾಜ್ಯ ರಾಜಕೀಯದಿಂದ ದೂರ ಸರಿಯುವುದಿಲ್ಲ. ನಾನು ರಾಜಕಾರಣದಲ್ಲಿ ಇದ್ದೇನೆ. ನಾನು ಎಲ್ಲಿರಬೇಕು ಎಂದು ತೀರ್ಮಾನ ಮಾಡುವುದು ರಾಜ್ಯದ ಜನತೆ. ರಾಜ್ಯ ರಾಜಕೀಯಕ್ಕೆ ಯಾವಾಗ ಬರಬೇಕು ಎಂದು ಜನತೆಯ ಆಶಯದ ಮೇರೆಗೆ ತೀರ್ಮಾನ ಮಾಡುತ್ತೇನೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು; ನಾವು ಎನ್ಡಿಎ ಮೈತ್ರಿಯಲ್ಲಿದ್ದೇವೆ. ಈ ಮೈತ್ರಿಯಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ಕೊಡಬಾರದು. ನಮ್ಮ ಉದ್ದೇಶ ರಾಜ್ಯದಲ್ಲಿ ಉತ್ತಮ ಸರ್ಕಾರ ತರಬೇಕು ಎನ್ನುವುದು. ಇದು ನನ್ನ ವೈಯಕ್ತಿಕ ಉದ್ದೇಶ ಎಂದು ಎಂದರು. ರಾಜ್ಯದಲ್ಲಿ ಈಗ ಆಡಳಿತ ಹೇಗೆ ನಡೆಯುತ್ತಿದೆ ಎಂದು ನಾನು ನಿರಂತರವಾಗಿ ಗಮನಿಸುತ್ತಿದ್ದೇನೆ. ಒಳ್ಳೆಯ ಸರ್ಕಾರ ಬಂದು ಜನತೆ ನೆಮ್ಮದಿಯಿಂದ ಇರಬೇಕು. ಈ ನಿಟ್ಟಿನಲ್ಲಿ ನಾಡಿನ ಜನತೆ ನಾನು ಯಾವ ಸ್ಥಾನದಲ್ಲಿ ಇರಬೇಕು ಅಂತ ತೀರ್ಮಾನ ಮಾಡಿದರೆ ಅದರಂತೆ ನಡೆಯುತ್ತೇನೆ. ಈ ವಿಷಯ ನನ್ನ ಕೈಯಲ್ಲಿ…

Read More

ಬೆಂಗಳೂರು : “ರಾಹುಲ್ ಗಾಂಧಿ ಅವರನ್ನು ನಾನು ಭೇಟಿ ಮಾಡುವುದು ಹೊಸತೇನಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ರಾಹುಲ್ ಗಾಂಧಿ ಅವರ ಭೇಟಿಗೆ ಸಮಯ ಕೇಳಿದ್ದೀರಾ ಎಂದು ಪ್ರಶ್ನಿಸಿದಾಗ, “ನಾಳೆ ದೆಹಲಿಗೆ ಹೋದಾಗ ಎಲ್ಲಾ ನಾಯಕರು ಅಲ್ಲೇ ಇರುತ್ತಾರೆ. ಭೇಟಿ ಮಾಡುತ್ತೇನೆ”ಎಂದರು. ರಾಹುಲ್ ಗಾಂಧಿ ಅವರ ಭೇಟಿ ನಂತರ ನಿಮ್ಮ ಬೆಂಬಲಿಗ ಶಾಸಕರು ಸಂತೋಷವಾಗಿದ್ದಾರೆ ಎಂದು ಕೇಳಿದಾಗ, “ಅವರು ನಮ್ಮ ಪಕ್ಷದ ನಾಯಕರು. ನಮ್ಮ ಪಕ್ಷದ ನಾಯಕರನ್ನು, ಅಧ್ಯಕ್ಷರನ್ನು ಭೇಟಿ ಮಾಡುವುದು, ಕರೆ ಮೂಲಕ ಚರ್ಚೆ ಮಾಡುವುದು ಸಹಜ ಪ್ರಕ್ರಿಯೆ. ಅವುಗಳನ್ನು ಸಾರ್ವಜನಿಕವಾಗಿ ಚರ್ಚೆ ಮಾಡುವುದಿಲ್ಲ” ಎಂದು ಸ್ಪಷ್ಟಪಡಿಸಿದರು. ನಿಮ್ಮ ಆಪ್ತರ ಬಯಕೆಯನ್ನು ರಾಹುಲ್ ಗಾಂಧಿ ಅವರ ಬಳಿ ಹೇಳಿಕೊಳ್ಳುತ್ತೀರಾ ಪ್ರಸ್ತಾಪ ಮಾಡುತ್ತೀರಾ ಎಂದು ಕೇಳಿದಾಗ, “ನಿಮ್ಮ (ಮಾಧ್ಯಮಗಳ) ಬಯಕೆಯನ್ನು ಅವರ ಮುಂದೆ ಪ್ರಸ್ತಾಪಿಸುತ್ತೇನೆ” ಎಂದು ತಿಳಿಸಿದರು. ನನ್ನ ಟ್ವೀಟ್ ಬೇರೆ ರೀತಿ ವ್ಯಾಖ್ಯಾನ ಮಾಡುವುದರಲ್ಲಿ…

Read More

ನವದೆಹಲಿ: 2026 ರಲ್ಲಿಯೂ ಚಿನ್ನವು ಘನ ಹೂಡಿಕೆ ಕರೆನ್ಸಿಯಾಗಿ ಮುಂದುವರಿಯುತ್ತದೆ. ಜಾಗತಿಕ ಅನಿಶ್ಚಿತತೆ ಮತ್ತು ಬಡ್ಡಿದರಗಳಲ್ಲಿನ ಕಡಿತದಿಂದಾಗಿ ಚಿನ್ನದ ಬೆಲೆ ಪ್ರತಿ ಪೌಂಡ್‌ಗೆ 4000 US ಡಾಲರ್‌ಗಳಿಗೆ ಏರುತ್ತದೆ ಎಂದು ವಿಶ್ಲೇಷಕರು ಅಂದಾಜಿಸಿದ್ದಾರೆ. ಹಾಗಾದ್ರೆ ಡಿಜಿಟಲ್ ಚಿನ್ನ ವರ್ಸಸ್ ಭೌತಿಕ ಚಿನ್ನ ಇವೆರಡರಲ್ಲಿ 2026ರಲ್ಲಿ ಯಾವುದು ಬೆಸ್ಟ್ ಎನ್ನುವ ಬಗ್ಗೆ ಮುಂದೆ ಓದಿ. ಭಾರತದಲ್ಲಿ ಚಿನ್ನವು ಒಂದು ಆಸ್ತಿಯಷ್ಟೇ ಅಲ್ಲ, ಇದು ಸಾಂಪ್ರದಾಯಿಕ ಮತ್ತು ಸಾಂಸ್ಕೃತಿಕ ಮೌಲ್ಯವನ್ನು ಸಹ ಪ್ರತಿನಿಧಿಸುತ್ತದೆ. ಇತ್ತೀಚಿನ ದಿನಗಳಲ್ಲಿ, ಜನರು ಡಿಜಿಟಲ್ ಚಿನ್ನ ಮತ್ತು ಭೌತಿಕ ಚಿನ್ನವನ್ನು ಬಳಸುವ ಆಯ್ಕೆಯನ್ನು ಸಹ ಹೊಂದಿದ್ದಾರೆ. ಡಿಜಿಟಲ್ ಚಿನ್ನ: ಸುಲಭ ಮತ್ತು ಹೊಂದಿಕೊಳ್ಳುವ ಆಯ್ಕೆ ಡಿಜಿಟಲ್ ಚಿನ್ನವು ವಿಶೇಷವಾಗಿ ಯುವಕರಲ್ಲಿ ಜನಪ್ರಿಯತೆಯನ್ನು ಗಳಿಸುತ್ತಿದೆ. ಇದು ಜನರು Paytm, PhonePe ಅಥವಾ Google Pay ನಂತಹ ಅಪ್ಲಿಕೇಶನ್‌ಗಳಲ್ಲಿ ಚಿನ್ನವನ್ನು ಖರೀದಿಸಲು ಅನುವು ಮಾಡಿಕೊಡುತ್ತದೆ. ಚಿನ್ನವನ್ನು ವಿಮೆ ಮಾಡಿದ ಕಮಾನುಗಳಲ್ಲಿ ಸಂಗ್ರಹಿಸಲಾಗಿರುವುದರಿಂದ ಸಂಗ್ರಹಣೆ ಮತ್ತು ಸುರಕ್ಷತೆಯು ಕಾಳಜಿ ವಹಿಸಬಾರದು. ಡಿಜಿಟಲ್ ಚಿನ್ನವನ್ನು ಖರೀದಿಸುವುದು…

Read More

ಶಿವಮೊಗ್ಗ: ಸಾಗರದ ಜೋರಡಿ ವಲಯದ ಅರಣ್ಯಾಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಕಡಿತಲೆ ಮಾಡಿದ್ದಂತ ಸಾಗುವಾನಿ ಮರವನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಚೋರಡಿಯ ಉಪ ವಲಯ ಅರಣ್ಯಾಧಿಕಾರಿ ಕಾಮನಾಯ್ಕ್ ಅವರಿಗೆ ತಮ್ಮ ವ್ಯಾಪ್ತಿಯ ಕೋಟೆಹಾಳದಲ್ಲಿ ಅಕ್ರಮವಾಗಿ ಸಾಗುವಾನಿ ಮರಗಳನ್ನು ಕಡಿಯುತ್ತಿರುವ ಮಾಹಿತಿ ತಿಳಿದು ಬಂದಿತ್ತು. ಈ ಖಚಿತ ಮಾಹಿತಿ ಆಧರಿಸಿ ಸರ್ವೆ ನಂಬರ್.118ರಲ್ಲಿ 2 ಸಾಗುವಾನಿ ಮರ ಕಡಿತಲೆ ಮಾಡಿ, 7 ತುಂಡುಗಳನ್ನಾಗಿ ಮಾಡಿದ್ದಂತ ಸುಮಾರು 0.641 ಕ್ಯೂಬಿಕ್ ನಾಟವನ್ನು ಸೀಜ್ ಮಾಡಿದ್ದಾರೆ. ಅಕ್ರಮವಾಗಿ ಸಾಗುವಾನಿ ಮರ ಕಡಿತಲೆ ಮಾಡುತ್ತಿದ್ದಂತ ಸತ್ಯನಾರಾಯಣ, ಶರಣು, ಅಶೋಕ ಎಂಬುವರ ವಿರುದ್ಧ ಅರಣ್ಯ ಇಲಾಖೆ ಕೇಸ್ ದಾಖಲಿಸಿದೆ. ಈ ಮೂಲಕ ಅಕ್ರಮವಾಗಿ ಸಾಗುವಾನಿ ಮರ ಕಡಿದಂತವರಿಗೆ ಅರಣ್ಯ ಇಲಾಖೆಯಿಂದ ಬಿಸಿ ಮುಟ್ಟಿಸಲಾಗಿದೆ. ಈ ಕಾರ್ಯಾಚರಣೆಯನ್ನು ಶಿವಮೊಗ್ಗ ಸಿಸಿಎಫ್ ಹನುಮಂತಪ್ಪ.ಕೆ.ಟಿ ನಿರ್ದೇಶನದಂತೆ, ಡಿಎಫ್ಓ ಮೊಹಮ್ಮದ್ ಫಯಾಜುದ್ದೀನ್, ಸಾಗರ ಎಸಿಎಫ್ ರವಿ.ಕೆ ಮಾರ್ಗದರ್ಶನದಲ್ಲಿ, ಸಾಗರ ವಲಯ ಅರಣ್ಯಾಧಿಕಾರಿ ಅಣ್ಣಪ್ಪ.ಬಿ ಸೂಚನೆಯಂತೆ ಚೋರಡಿಯ ಡಿಆರ್…

Read More

ಬೆಂಗಳೂರು: ನಗರದ ಯಶವಂತಪುರ ಸ್ಪರ್ಶ್‌ ಆಸ್ಪತ್ರೆಯಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ರೊಬೊಟಿಕ್‌ ತಂತ್ರಜ್ಞಾನ ಬಳಸಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು 75 ವರ್ಷದ ತಾಯಿ ಮಗನಿಗೆ ಮರು ಜೀವ ಮತ್ತು ಜೀವನವನ್ನು ಒದಗಿಸಿಕೊಟ್ಟಿದ್ದಾರೆ. ತಾಯಿ ವಯೋವೃದ್ಧರಾಗಿದ್ದರೂ ರೊಬೊಟಿಕ್‌ ತಂತ್ರಜ್ಞಾನದ ನೆರವಿನಿಂದ ಅವರ ಮೂತ್ರಪಿಂಡವನ್ನು ತೆಗೆದು ಮಗನಿಗೆ ಕಸಿ ಮಾಡುವಲ್ಲಿ ತಜ್ಞ ವೈದ್ಯರು ಯಶಸ್ವಿಯಾಗಿದ್ದು ನಗರದ ವೈದ್ಯ ವಿಜ್ಞಾನ ಸಾಧನೆಯಲ್ಲಿ ಮತ್ತೊಂದು ಮೈಲಿಗಲ್ಲಾಗಿದೆ. 38 ವರ್ಷದ ಯುವಕ ಕಳೆದೆರಡು ವರ್ಷದ ಹಿಂದೆ ದೀರ್ಘ ಕಾಲದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಅವರ ಕಿಡ್ನಿ ಚಿಕ್ಕದಾಗಿದ್ದು ಬಯಾಪ್ಸಿ ಮಾಡುವುದು ಕಾರ್ಯಸಾಧ್ಯವಿಲ್ಲದ ಹಿನ್ನೆಲೆಯಲ್ಲಿ ಜೊತೆಗೆ ದೀರ್ಘ ಕಾಲದ ಡಯಾಲಿಸಿಸ್‌ ತಪ್ಪಿಸುವ ಸಲುವಾಗಿ ಅವರು ಕಿಡ್ನಿ ಕಸಿಗೆ ನಿರ್ಧರಿಸಿದ್ದರು. ಸ್ಪರ್ಶ್‌ಗೆ ಬರುವುದಕ್ಕು ಮುನ್ನ ಹಲವಾರು ತಜ್ಞರ ಸಲಹೆ ಪಡೆದಿದ್ದ ಅವರು ಯಶವಂತಪುರ ಆಸ್ಪತ್ರೆಯಲ್ಲಿ ಹಿರಿಯ ಸಮಾಲೋಚಕ ಮೂತ್ರಪಿಂಡ ರೋಗಗಳ ತಜ್ಞ ವೈದ್ಯ ಮತ್ತು ಕಸಿ ವೈದ್ಯ ಡಾ.ಅರುಣ್‌ ಕುಮಾರ್‌ ಅವರಲ್ಲಿ ವಿವರವಾದ ಪರೀಕ್ಷೆಗೊಳಪಟ್ಟಾಗ ಕಿಡ್ನಿ ಕಸಿ ಮಾಡಿಸಿಕೊಳ್ಳುವುದು…

Read More

ಬೆಂಗಳೂರು: ಹಬ್ಬ ಹರಿದಿನಗಳು ಬಂದ್ರೆ ಸಾಕು ವಾಟ್ಸ್ ಆಪ್ ನಲ್ಲಿ ಸ್ಕ್ಯಾಮ್ ಗಳ ಸಂಖ್ಯೆ ಹೆಚ್ಚಾಗುತ್ತವೆ. ಒಂದು ವೇಳೆ ಅವರ ಆಫರ್ ನಂಬಿ, ಅವರು ಕಳುಹಿಸೋ ಲಿಂಕ್ ಕ್ಲಿಕ್ ಮಾಡಿದ್ರೆ ಸಾಕು ನಿಮ್ಮ ಬ್ಯಾಂಕ್ ಖಾತೆಯೇ ಖಾಲಿ ಆಗೋದು ಗ್ಯಾರಂಟಿ ಎಂಬುದು ಹಣ ಕಳೆದುಕೊಂಡವರ ಮಾತಾಗಿದೆ. ನಿಮಗೂ ಈ ರೀತಿಯಾಗಿ ವಾಟ್ಸ್ ಆಪ್ ಮೆಸೇಜ್ ಬಂದಿದ್ರೆ ಯಾವುದೇ ಕಾರಣಕ್ಕೂ ಕ್ಲಿಕ್ ಮಾಡಬೇಡಿ ಎಂಬುದು ಪೊಲೀಸರ ಎಲರ್ಟ್ ಆಗಿದೆ. ಹೌದು.. ಸದ್ಯ ವಾಟ್ಸ್ ಅಪ್ ಗ್ರೂಪ್ ಗಳಲ್ಲಿ ಅಂತೂ ಮೆಸೇಜ್ ಒಂದು ಹರಿದಾಡುತ್ತಿದೆ. ಅದು ನೀವು ಇರುವಂತ ಗ್ರೂಪ್ ನಲ್ಲಿಯೂ ಬಂದಿರಬಹುದು. ಇಲ್ಲವೇ ನಿಮ್ಮ ಸ್ನೇಹಿತರು ನಿಮಗೆ ಪರ್ಸನಲ್ ಆಗಿಯೂ ಕಳುಹಿಸಿರಬಹುದು. ಅದೇನೆಂದ್ರೇ “ಮೊದಲಿಗೆ ಇದು ನಕಲಿ ಎಂದು ಭಾವಿಸಿದ್ದೆ, ಆದರೆ ನಿಜವಾಗಿಯೂ ನನಗೆ ₹50,000 ದೊರೆಯಿತು! ನೀವೂ ಪ್ರಯತ್ನಿಸಿ ನೋಡಿ!” ಎಂಬುದಾಗಿದೆ. ಹೀಗೆ ತಲೆ ಬರಹ ಇರುವಂತ ವಾಟ್ಸ್ ಅಪ್ ಮೆಸೇಜ್ ಜೊತೆಗೆ ಒಂದು ಲಿಂಕ್ ಕೂಡ ಹರಿ ಬಿಡಲಾಗಿದೆ. ಆ…

Read More

ಬೆಂಗಳೂರು : ಬೆಂಗಳೂರು ನಗರದಲ್ಲಿ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಜನವರಿ 26 ರಂದು ನಡೆಯಲಿರುವ ರಾಜ್ಯ ಮಟ್ಟದ *77ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ವೀಕ್ಷಿಸಿಸಲು ಸಾರ್ವಜನಿಕರಿಗೆ E-Pass ವ್ಯವಸ್ಥೆ* ಯನ್ನು ಕಲ್ಪಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ. ಜಗದೀಶ ರವರು ತಿಳಿಸಿದ್ದಾರೆ. ಆಸಕ್ತರು ಸೇವಾ ಸಿಂಧು ವೆಬ್ ಸೈಟ್ www.sevasindhu.karnataka.gov.in ನಲ್ಲಿ ಜನವರಿ 14 2026 ರಿಂದ ಜನವರಿ 24, 2026 ರ ಸಂಜೆ 5.00 ಗಂಟೆಯೊಳಗೆ ಸೇವಾ ಸಿಂಧು ವೆಬ್ ಸೈಟ್ ನಲ್ಲಿ ಅಗತ್ಯವಿರುವ ಎಲ್ಲ ವೈಯಕ್ತಿಕ ವಿವರಗಳನ್ನು ನಮೂದಿಸಿ ಇ-ಪಾಸ್ ಗಳನ್ನು ಪಡೆಯಬಹುದು. ಇ-ಪಾಸ್ ಗಳನ್ನು ಹೊಂದಿರುವವರು ಪರೇಡ್ ಮೈದಾನದ ಪ್ರವೇಶ ದ್ವಾರ ಸಂಖ್ಯೆ: 05 ರಲ್ಲಿ ಪರಿಶೀಲನೆಗಾಗಿ ಇ-ಪಾಸ್ ನ ಮುದ್ರಿತ ಪ್ರತಿಯನ್ನು ಅಥವಾ ಡಿಜಿಟಲ್ (ಮೊಬೈಲ್ ) ಪ್ರತಿಯನ್ನು ಕಡ್ಡಾಯವಾಗಿ ಹೊಂದಿರಬೇಕು. ಇ-ಪಾಸ್ ನೋಂದಣಿ ಪ್ರಕ್ರಿಯೆ ಕುರಿತು ಸಹಾಯಕ್ಕಾಗಿ ಸೇವಾ ಸಿಂಧು ವೈಬ್ ಸೈಟ್ ನಲ್ಲಿ ಸಹಾಯ ವಿಭಾಗವನ್ನು ವಿಕ್ಷೀಸಬಹುದಾಗಿದೆ…

Read More

ಬೆಂಗಳೂರು: ಜಿಬಿಎ ವ್ಯಾಪ್ತಿಯ ವಾಣಿಜ್ಯ ಸಂಕೀರ್ಣದ ಮಳಿಗೆದಾರರು ನವೀಕರಣಕ್ಕಾಗಿ ಮಳಿಗೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಿ ಎಂಬುದಾಗಿ ಕೆ.ಎನ್ ರಮೇಶ್ ತಿಳಿಸಿದ್ದಾರೆ. ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 280 ಬಿಬಿಎಸ್ 2023 (ಇ) 6 ಆಸ್ತಿ ನಿರ್ವಹಣೆ ನಿಯಮಗಳು-2024 ಕರ್ನಾಟಕ ರಾಜ್ಯ ಪತ್ರದಲ್ಲಿ ಅಧಿಕೃತವಾಗಿ ದಿ: 01-01-2025 ರಂತೆ ಹೊಸ ನಿಯಮ ಜಾರಿಗೆ ಬಂದಿರುತ್ತದೆ. ಪಾಲಿಕೆಯ ಮಾಲೀಕತ್ವಕ್ಕೆ ಒಳಪಟ್ಟಿರುವ ಜಯನಗರ ನಾಲ್ಕನೇ ಬಡಾವಣೆಯಲ್ಲಿರುವ ಜಯನಗರ ವಾಣಿಜ್ಯ ಸಂಕೀರ್ಣ ಹಾಗೂ ಸರ್.ಎಂ.ವಿಶ್ವೇಶ್ವರಯ್ಯ ವಾಣಿಜ್ಯ ಸಂಕೀರ್ಣದಲ್ಲಿನ 251 ಮಳಿಗೆಗಳು ಮತ್ತು ಜಯನಗರ 4ನೇ `ಟಿ ‘ ಬ್ಲಾಕ್‌ನ ಮಾರುಕಟ್ಟೆ ಕಟ್ಟಡದಲ್ಲಿನ 39 ಮಳಿಗೆಗಳ ನವೀಕರಣದ ಅವಧಿಯು ಮುಕ್ತಾಯಗೊಂಡಿರುವುದರಿಂದ, ಕರ್ನಾಟಕ ಸರ್ಕಾರ ಅಧಿಸೂಚನೆ ಸಂಖ್ಯೆ:ನಅಇ 280 ಬಿಬಿಎಸ್ 2023 (ಇ) ದಿನಾಂಕ:01-01-2025ರ ನಿಯಮಾವಳಿಯಂತೆ ಸದರಿ ಮಳಿಗೆಗಳ ಗುತ್ತಿಗೆಯನ್ನು ನಿಯಮ 8 ರಂತೆ ಇನ್ನೊಂದು ಅವಧಿಗೆ ನವೀಕರಿಸಲು ಅವಕಾಶ ಕಲ್ಪಿಸಿ ಅರ್ಜಿಗಳನ್ನು ಸಲ್ಲಿಸಲು ಸೂಚಿಸಲಾಗಿತ್ತು. ಹಾಗೂ ಈ ಸಂಬಂಧ ಪ್ರತಿಯೊಂದು ಮಳಿಗೆಯ ಮಳಿಗೆದಾರರಿಗೆ ಪ್ರತ್ಯೇಕ ಸೂಚನಾ ಪತ್ರವನ್ನು ನೀಡಲಾಗಿರುವಂತೆ,…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಗಿಲೆನ್-ಬಾರಿ ಸಿಂಡ್ರೋಮ್ ಪೀಡಿತರಿಗೆ ಗುಡ್ ನ್ಯೂಸ್ ಎನ್ನುವಂತೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಅಡಿಯಲ್ಲಿ ಚಿಕಿತ್ಸೆಗೆ ಅವಕಾಶ ನೀಡಿದೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿದ್ದು, ರಾಜ್ಯದಲ್ಲಿ ಗಿಲೆನ್-ಬಾರಿ ಸಿಂಡ್ರೋಮ್ (GBS) ಎಂಬ ನರಮಂಡಲದ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ದುಬಾರಿ ಚಿಕಿತ್ಸೆಯನ್ನು ಕೈಗೆಟುಕುವಂತೆ ಮಾಡುವ ಮೂಲಕ ನೆರವಾಗಲು ನಮ್ಮ ಸರ್ಕಾರ ಒಂದು ಮಹತ್ವದ ನಿರ್ಧಾರ ಕೈಗೊಂಡಿದೆ ಎಂದಿದ್ದಾರೆ. ಈ ಕಾಯಿಲೆಯ ಚಿಕಿತ್ಸೆಯಲ್ಲಿ ಅತ್ಯಂತ ಪ್ರಮುಖವೂ ಮತ್ತು ದುಬಾರಿಯೂ ಆದ ‘ಇಂಟ್ರಾವೆನಸ್ ಇಮ್ಯುನೊಗ್ಲಾಬ್ಯುಲಿನ್’ (IVIG) ಚಿಕಿತ್ಸೆಯನ್ನು ಈಗ ‘ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ’ (AB PMJAY-CM’s ArK) ಯೋಜನೆಯ ವ್ಯಾಪ್ತಿಗೆ ತರಲಾಗಿದೆ. ಈ ಕುರಿತು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST) ಮೂಲಕ ನೂತನ ಸುತ್ತೋಲೆಯನ್ನು ಹೊರಡಿಸಲಾಗಿದೆ. ಅದರಂತೆ, * ದುಬಾರಿ ಚಿಕಿತ್ಸೆಗೆ ಸರ್ಕಾರಿ ಸವಲತ್ತು: ಈ ಹಿಂದೆ ಜಿ.ಬಿ.ಎಸ್ ಕಾಯಿಲೆಗೆ ನೀಡಲಾಗುತ್ತಿದ್ದ ಮೂಲ ಚಿಕಿತ್ಸೆಯ ಜೊತೆಗೆ, ಈಗ ಅತ್ಯಗತ್ಯವಾದ IVIG…

Read More

ಮಂಡ್ಯ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಮಂಡ್ಯದಲ್ಲಿ ಜ.13 ರಂದು ನಡೆದ ಜಿಲ್ಲಾ ಮಟ್ಟದ 2025-26 ಸಾಲಿನ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಮದ್ದೂರು ನಗರದ ಶಿವಪುರದ ಪೂರ್ಣಪ್ರಜ್ಞಾ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕನ್ನಡ ಭಾಷಣದಲ್ಲಿ ಎಸ್.ಪಿ.ಚಂದನ, ಹಿಂದಿ ಭಾಷಣದಲ್ಲಿ ಕುಲ್ಸಮ್ ನಿದಾ, ಗಜಲ್ ನಲ್ಲಿ ಸಾರಾ ಅಲಿ ಪ್ರಥಮ ಬಹುಮಾನ ಪಡೆಯುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಮತ್ತು ತಾಲೂಕಿಗೆ ಕೀರ್ತಿ ತಂದಿದ್ದಾರೆಂದು ಬಿಇಒ ಎಸ್.ಬಿ.ಧನಂಜಯ, ಸಂಸ್ಥೆಯ ಅಧ್ಯಕ್ಷೆ ಪಿ.ಕಸ್ತೂರಿ, ಕಾರ್ಯದರ್ಶಿ ಎಚ್.ಆರ್.ಅನಂತೇಗೌಡ ಹಾಗೂ ಶಿಕ್ಷಕ ವೃಂದ ಅಭಿನಂದಿಸಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. https://kannadanewsnow.com/kannada/government-land-grabbing-four-government-employees-of-nagamangala-taluk-office-mandya-suspended/

Read More