Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು ತಮ್ಮ ವೃತ್ತಿ ನಿರತ ಚಟುವಟಿಕೆಗಳ ಸಂಬಂಧ ತಮ್ಮ ಜಿಲ್ಲಾದ್ಯಂತ ಉಚಿತವಾಗಿ ಸಂಚರಿಸಲು ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪತ್ರಕರ್ತರು ತಾವು ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಗಳಿಂದ ಸೇವಾ ಪ್ರಮಾಣಪತ್ರ, ಶಿಫಾರಸ್ಸು ಪತ್ರ ಮತ್ತು 11 ತಿಂಗಳುಗಳ ವೇತನಪತ್ರ (ಲೈನೇಜ್/ಸಂಭಾವನೆ/ಕಮೀಷನ್ ಪಡೆದಿರುವ ದಾಖಲೆ)ಗಳನ್ನು ಅಥವಾ ವೇತನ ಜಮಾ ಆಗಿರುವ ಮಾಹಿತಿ ಇರುವಂತಹ ಬ್ಯಾಂಕ್ ಸ್ಟೇಟಮೆಂಟ್ ಲಗತ್ತಿಸಿ ‘ಸೇವಾಸಿಂಧು’ ಪೋರ್ಟಲ್ (https://sevasindhu.karnataka.gov.in) ಮೂಲಕ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಆನ್ ಲೈನ್ ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುತ್ತದೆ. ರಾಜ್ಯದ ಎಲ್ಲ ತಾಲ್ಲೂಕುಗಳ ಅರ್ಹ ಪತ್ರಕರ್ತರು ಕೂಡಲೇ ‘ಸೇವಾಸಿಂಧು’ ಪೋರ್ಟಲ್ ಮೂಲಕ ಅರ್ಜಿಗಳನ್ನು…
ಬಳ್ಳಾರಿ : ಕಂಪ್ಲಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರ ವತಿಯಿಂದ ಫೆ.16 ರಿಂದ 21ರವರೆಗೆ 6 ದಿನಗಳ ಜೇನು ಕೃಷಿಯ ಕುರಿತು ಉಚಿತ ತರಬೇತಿಯನ್ನು ಕಂಪ್ಲಿಯ ಕೃಷಿ ತರಬೇತಿ ಕೇಂದ್ರದಲ್ಲಿ ನೀಡಲು ಉದ್ದೇಶಿಸಲಾಗಿದ್ದು, ಆಸಕ್ತ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಎಲ್ಲಾ ವರ್ಗದ ರೈತರು, ರೈತ ಮಹಿಳೆಯರಿಂದ ಹೆಸರು ನೋಂದಣಿಮಾಡಿಕೊಳ್ಳಲು ಆಹ್ವಾನಿಸಲಾಗಿದೆ. ತರಬೇತಿಯಲ್ಲಿ ಊಟ ಹಾಗೂ ವಸತಿ ಸೌಕರ್ಯ ಇರಲಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರಾದ ವಿದ್ಯಾವತಿ ಹೊಸಮನಿ(ಮೊ.7353533138), ಕೃಷಿ ಅಧಿಕಾರಿಗಳಾದ ಯೇಸುಬಾಬು(ಮೊ.6360645255), ನವ್ಯ ಪ್ರಶಾಂತ್(ಮೊ.6360139316) ಗೆ ಸಂಪರ್ಕಿಸಬಹುದು ಎಂದು ಕಂಪ್ಲಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/supreme-court-allows-530-appeals-filed-by-karnataka-in-land-acquisition-case/ https://kannadanewsnow.com/kannada/actress-tamannaah-becomes-ambassador-for-sandalwood-soap-from-today-57-new-products-launched/
ಬೆಂಗಳೂರು: ಭಾರತದ ಸುಪ್ರೀಂ ಕೋರ್ಟ್, ಸೋಮವಾರ ದಿನಾಂಕ 09 ಫೆಬ್ರವರಿ 2026 ರಂದು, Deputy Commissioner & Special Land Acquisition Officer vs. SV Global Mills (SLP Civil No. 215 of 2023) ಹಾಗೂ ಸಂಬಂಧಿತ ಪ್ರಕರಣಗಳಲ್ಲಿ ಐತಿಹಾಸಿಕ ತೀರ್ಪು ನೀಡಿದ್ದು, ಕರ್ನಾಟಕ ರಾಜ್ಯ ಸರ್ಕಾರ ಸಲ್ಲಿಸಿದ್ದ 530 ಮೇಲ್ಮನವಿಗಳನ್ನು ಅನುಮತಿಸಿದೆ. ಈ ಮೇಲ್ಮನವಿಗಳು ಕೃಷ್ಣಾ ಮೇಲ್ದಂಡೆ ಯೋಜನೆ, ಸಿಂಗಟಾಲೂರು ಏತ ನೀರಾವರಿ ಯೋಜನೆ, ರಾಜ್ಯ ಹೆದ್ದಾರಿ ಯೋಜನೆಗಳು ಹಾಗೂ ಇತರೆ ಪ್ರಮುಖ ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದ ಭೂಸ್ವಾಧೀನ ಪ್ರಕರಣಗಳಿಗೆ ಸಂಬಂಧಿಸಿದ ಧಾವೆಗಳಾಗಿವೆ. ಈ ತೀರ್ಪು ರಾಜ್ಯದ ಆರ್ಥಿಕ ಸ್ಥಿತಿಗತಿಗಳ ಮೇಲೆ ವ್ಯಾಪಕ ಪರಿಣಾಮ ಬೀರುವಂತದ್ದಾಗಿದ್ದು, ಕರ್ನಾಟಕ ಸರ್ಕಾರದ ಯಶಸ್ವಿ ಕಾನೂನು ಸವಾಲಿನ ಫಲವಾಗಿ ಪಣದಲ್ಲಿದ್ದ ಹತ್ತು ಸಾವಿರಾರು ಕೋಟಿ ರೂಪಾಯಿಗಳ ಸಾರ್ವಜನಿಕ ಹಣವನ್ನು ರಕ್ಷಿಸಲಾಗಿದೆ. ಪ್ರಕರಣದ ಹಿನ್ನೆಲೆ 1.ರಾಜ್ಯದ ವಿವಿಧ ಭಾಗಗಳಲ್ಲಿ ಸಾರ್ವಜನಿಕ ಹಾಗೂ ಮೂಲಸೌಕರ್ಯ ಯೋಜನೆಗಳಿಗಾಗಿ ಭೂಸ್ವಾಧೀನ ಅಧಿಕಾರಿಗಳು ಭೂಮಿಯನ್ನು ಸ್ವಾಧೀನಪಡಿಸಿಕೊಂಡರು. 2.ಭೂಮಾಲೀಕರು, ಭೂಸ್ವಾಧೀನ…
ಶಿವಮೊಗ್ಗ: ರಾಜ್ಯ ಸರ್ಕಾರದ ಆದೇಶವನ್ನೇ ಗಾಳಿಗೆ ತೂರಿ, ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯ್ತಿ ಸದಸ್ಯರಿಗೆ ಹಾರ, ತುರಾಯಿ, ನೆನಪಿನ ಕಾಣಿಗೆ ನೀಡಿ ಅದ್ಧೂರಿಯಾಗಿ ಬೀಳ್ಕೊಡುಗೆಯನ್ನು ಪಿಡಿಓ ಒಬ್ಬರು ನೀಡಿರುವಂತ ಘಟನೆ ಸಾಗರ ತಾಲ್ಲೂಕಿನ ಬರೂರು ಗ್ರಾಮ ಪಂಚಾಯ್ತಿಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಬರೂರು ಗ್ರಾಮ ಪಂಚಾಯ್ತಿಯ ಸದಸ್ಯರ ಅಧಿಕಾರವಧಿ ಮುಕ್ತಾಯಗೊಂಡಿತ್ತು. ಹೀಗೆ ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯ್ತಿಗಳಿಗೆ ದಿನಾಂಕ 06-02-2026ರಂದು ಶಿವಮೊಗ್ಗ ಜಿಲ್ಲಾಧಿಕಾರಿಗಳು ಆಡಳಿತಾಧಿಕಾರಿಯನ್ನು ನೇಮಕ ಮಾಡಿದ್ದಾರೆ. ಅದರಂತೆ ಸಾಗರ ತಾಲ್ಲೂಕಿನ ಬರೂರು ಗ್ರಾಮ ಪಂಚಾಯ್ತಿಗೆ ಸಾಗರದ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಾಜೇಶ್ವರಿ ಅವರನ್ನು ಆಡಳಿತಾಧಿಕಾರಿಯಾಗಿಯೂ ನೇಮಕ ಮಾಡಲಾಗಿದೆ. ರಾಜ್ಯ ಸರ್ಕಾರದ ಆದೇಶ ಏನು? ಈ ಎಲ್ಲದರ ನಡುವೆ ಸಾಗರ ತಾಲ್ಲೂಕಿನ ಬರೂರು ಗ್ರಾಮ ಪಂಚಾಯ್ತಿ ಪಿಡಿಓ ರಾಜು ಸಾಹೇಬ್ರು ಮಾತ್ರ, ಸರ್ಕಾರದ ನಿಯಮವನ್ನೇ ಗಾಳಿಗೆ ತೂರಿ ಅವಧಿ ಮುಕ್ತಾಯಗೊಂಡ ಬರೂರು ಗ್ರಾಮ ಪಂಚಾಯ್ತಿ ಸದಸ್ಯರಿಗೆ ಬೀಳ್ಗೊಡುಗೆ ಮಾಡಿದ್ದಾರೆ. ಶಾಲು ಹೊದಿಸಿ, ಹಾರ ಹಾಕಿ, ನೆನಪಿನ ಕಾಣಿಕೆಯನ್ನು ನೀಡಿದ್ದು…
ಬೆಂಗಳೂರು: ಕರ್ನಾಟಕದ ಹೆಮ್ಮೆಯ ಸಂಕೇತವಾದ, ಹೆಂಗಳೆಯರ ಪಾಲಿಗೆ ಅಚ್ಚುಮೆಚ್ಚಿನದಾಗಿರುವ ತಿಳಿಗೆಂಪು ಬಣ್ಣದ ಮೈಸೂರು ಸಿಲ್ಕ್ ಸೀರೆ ಉಟ್ಟುಕೊಂಡು, ನೆರೆದಿದ್ದವರ ಮೋಡಿ ಮಾಡುವಂತೆ ವೇದಿಕೆಯ ಮೇಲೆ ನಸುನಗುತ್ತಾ ಹಿಂಬಾಗಿಲ ಮೂಲಕ ವಿಶೇಷವಾದ ರೀತಿಯಲ್ಲಿ ಪ್ರತ್ಯಕ್ಷರಾದವರು ಹೆಸರಾಂತ ನಟಿ ತಮನ್ನಾ ಭಾಟಿಯಾ. ಅವರ ಆಗಮನಕ್ಕೆ ಕಾರಣವಾಗಿದ್ದು ನಾಡಿನ ಮತ್ತೊಂದು ಐಕಾನಿಕ್ ಉತ್ಪನ್ನವಾದ ಮೈಸೂರು ಸ್ಯಾಂಡಲ್ ಸೋಪ್! ಇವೆಲ್ಲ ಸೇರಿಕೊಂಡು, ತಮನ್ನಾ ಅವರು ಶತಮಾನಕ್ಕೂ ಹೆಚ್ಚಿನ ಇತಿಹಾಸವಿರುವ ಕೆಎಸ್ಡಿಎಲ್ ಸಂಸ್ಥೆಯ ಪ್ರಚಾರ ರಾಯಭಾರಿಯಾಗಿ ಹೊಸ ಅಧ್ಯಾಯವನ್ನು ವಿಧ್ಯುಕ್ತವಾಗಿ ಆರಂಭಿಸಿದರು. ಇದಕ್ಕೆ ವೇದಿಕೆಯಾಗಿದ್ದು ತಾಜ್ ವೆಸ್ಟ್ ಎಂಡ್ ಹೋಟೆಲಿನ ಝಗಮಗಿಸುವ ಸಭಾಂಗಣ. ಹೌದು, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹಾಗೂ ಅಧ್ಯಕ್ಷ ಸಿ.ಎಸ್.ನಾಡಗೌಡ ಅವರ ನೇತೃತ್ವದಲ್ಲಿ ಕೆಎಸ್ಡಿಎಲ್, ಹೊಸ ಯುಗಕ್ಕೆ ಕಾಲಿಟ್ಟಿದೆ. ಇದಕ್ಕೆ ಸಾಕ್ಷಿಯಾಗಿ ಹಾಲುಬಣ್ಣದ ಬೆಡಗಿ ತಮನ್ನಾ ವಿಶೇವಾಗಿ ಸಿದ್ಧಪಡಿಸಿದ್ದ ವೇದಿಕೆ ಮೇಲೆ ಬೆಳಕಿನ ಹೊನಲಿನಲ್ಲಿ ನಗೆ ಸೂಸುತ್ತ ಪ್ರತ್ಯಕ್ಷರಾದರು. ಹೊಚ್ಚಹೊಸ ಪ್ಯಾಕ್ನ ರೂಪ ತಾಳಿರುವ ಮೈಸೂರು ಸ್ಯಾಂಡಲ್ ಸೋಪ್…
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಕಸವನ್ನು ಎಲ್ಲೆಂದರಲ್ಲಿ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಕಳೆದ 3 ತಿಂಗಳಲ್ಲಿ 30 ಲಕ್ಷ ರೂ. ದಂಡ ವಸೂಲಿಯನ್ನು ಮಾಡಿರುವುದಾಗಿ ಜಿಬಿಎ ಆಯುಕ್ತ ಕೆ. ಎನ್ ರಮೇಶ್ ತಿಳಿಸಿದ್ದಾರೆ. ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ವಾರ್ಡ್ಗಳ ವ್ಯಾಪ್ತಿಯಲ್ಲಿನ ಸಾರ್ವಜನಿಕರ ಸ್ಥಳಗಳಲ್ಲಿ ಹಾಗೂ ಸರ್ಕಾರಿ ಸ್ವತ್ತುಗಳಲ್ಲಿ ಕಸಗಳನ್ನು ಎಲ್ಲೆಂದರಲ್ಲಿ ಎಸೆಯುವುದನ್ನು, ಶೇಖರಿಸುವುದನ್ನು ಅಥವಾ ಬ್ಲ್ಯಾಕ್ ಸ್ಪಾಟ್ ತಡೆಗಟ್ಟುವ ಸಲುವಾಗಿ ಸಾರ್ವಜನಿಕರಲ್ಲಿ ಜಾಗೃತಿ ಮತ್ತು ಅರಿವು ಮೂಡಿಸಲು ಕ್ರಮಕೈಗೊಳ್ಳಲಾಗಿರುತ್ತದೆ. ಕಸಗಳನ್ನು ಎಲ್ಲೆಂದರಲ್ಲಿ ಎಸೆಯುವುದನ್ನು ಅಥವಾ ಬ್ಲ್ಯಾಕ್ ಸ್ಪಾಟ್ ತಡೆಗಟ್ಟುವ ಸಲುವಾಗಿ ವಾರ್ಡ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಕಿರಿಯ ಆರೋಗ್ಯ ಪರಿವೀಕ್ಷಕರು. ಲಿಂಕ್ ವರ್ಕರ್ ಹಾಗೂ ಪೌರ ಕಾರ್ಮಿಕರ ಮೇಲ್ವಿಚಾರಕರು ವಾರ್ಡ್ ವ್ಯಾಪ್ತಿಯಲ್ಲಿನ ನಿವಾಸಿಗಳನ್ನು ವಿಚಾರಿಸಿದಾಗ ಕೆಲವು ನಿವಾಸಿಗಳು ಕಸವನ್ನು ಸಂಗ್ರಹಿಸುವ ಆಟೋಗಳು ನಿಗದಿತ ವೇಳೆಯಲ್ಲಿ ಬರುತ್ತಿಲ್ಲ ಹಾಗೂ ಆಟೋಗಳು ಬರುವ ವೇಳೆಯಲ್ಲಿ ನಿವಾಸಿಗಳು ಕೆಲಸ ಕಾರ್ಯಗಳಿಗೆ ತೆರಳುತ್ತಿದ್ದೇವೆ ಎಂದು ತಿಳಿಸಿರುತ್ತಾರೆ. ಈ ಸಂಬಂಧ ಕೆಲಸ ಕಾರ್ಯಗಳಿಗಾಗಿ ತೆರಳುವ ನಿವಾಸಿಗಳಿಗೆ…
ನವದೆಹಲಿ: ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಗೆ ಬೆದರಿಕೆ ಸಂದೇಶ ಕಳುಹಿಸಲಾಗಿದೆ. ವಾಟ್ಸಾಪ್ ವಾಯ್ಸ್ ನೋಟ್ ಮೂಲಕ ಬೆದರಿಕೆ ಸಂದೇಶ ಕಳುಹಿಸಲಾಗಿದ್ದು, ಅದರಲ್ಲಿ ಕೋಟಿ ಕೋಟಿ ಹಣಕ್ಕೂ ಬೇಡಿಕೆ ಇಟ್ಟಿರುವುದಾಗಿ ಹೇಳಲಾಗುತ್ತಿದೆ. ಸಂದೇಶ ಸ್ವೀಕರಿಸಿದ ನಂತರ, ರಣವೀರ್ ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದ್ದು, ಅಧಿಕಾರಿಗಳು ತಕ್ಷಣವೇ ತಮ್ಮ ನಿವಾಸದ ಹೊರಗೆ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದು, ಬೆದರಿಕೆ ವಾಯ್ಸ್ ನೋಟ್ ಕಳುಹಿಸಿದ ವ್ಯಕ್ತಿಯನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ. ತನಿಖೆ ಮುಂದುವರೆದಂತೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. https://kannadanewsnow.com/kannada/that-one-word-from-the-guru-changed-the-young-mans-life/ https://kannadanewsnow.com/kannada/all-railway-services-now-in-one-place-railone-super-app/
ನವದೆಹಲಿ: ಭಾರತೀಯ ರೈಲ್ವೆಯು ತನ್ನ ಅಧಿಕೃತ ‘ಆಲ್-ಇನ್-ಒನ್’ ಸೂಪರ್ ಆ್ಯಪ್ ಆದ ‘ರೈಲ್ಒನ್’ (RailOne) ಅನ್ನು ಬಿಡುಗಡೆ ಮಾಡಿದೆ. ಇದು ಪ್ರಯಾಣಿಕರಿಗೆ ಹಲವಾರು ರೈಲ್ವೆ ಸೇವೆಗಳನ್ನು ಪಡೆಯಲು ಸುಲಭ ಮತ್ತು ಅನುಕೂಲಕರ ಡಿಜಿಟಲ್ ವೇದಿಕೆಯನ್ನು ಒದಗಿಸುತ್ತದೆ. ಈ ಅಪ್ಲಿಕೇಶನ್ ಹಲವಾರು ಪ್ರಯಾಣಿಕ ಸೌಲಭ್ಯಗಳನ್ನು ಒಂದೇ ಅಪ್ಲಿಕೇಶನ್’ನಲ್ಲಿ ಒಳಗೊಂಡಿದ್ದು, ರೈಲ್ವೆ ಪ್ರಯಾಣವನ್ನು ಹೆಚ್ಚು ಸ್ಮಾರ್ಟ್, ವೇಗ ಮತ್ತು ತೊಂದರೆ ರಹಿತವಾಗಿಸುತ್ತದೆ. ರೈಲ್ಒನ್ ಆ್ಯಪ್ ಮೂಲಕ ಪ್ರಯಾಣಿಕರು ಕಾಯ್ದಿರಿಸಿದ (Reserved) ಟಿಕೆಟ್’ಗಳು, ಕಾಯ್ದಿರಿಸದ (Unreserved) ಟಿಕೆಟ್’ಗಳು, ಪ್ಲಾಟ್ಫಾರ್ಮ್ ಟಿಕೆಟ್’ಗಳು ಮತ್ತು ಸೀಸನ್ ಟಿಕೆಟ್’ಗಳನ್ನು ಬುಕ್ ಮಾಡಬಹುದು. ಇದರೊಂದಿಗೆ ರೈಲುಗಳ ಹುಡುಕಾಟ, ಪಿಎನ್ಆರ್ (PNR) ಸ್ಥಿತಿ, ಕೋಚ್ ವಿವರ ಮತ್ತು ರೈಲು ಎಲ್ಲಿದೆ ಎಂಬ ನೈಜ ಸಮಯದ ಮಾಹಿತಿ (Real-time tracking) ಸೇರಿದಂತೆ ಹಲವು ಸುಧಾರಿತ ವೈಶಿಷ್ಟ್ಯಗಳನ್ನು ಈ ಆ್ಯಪ್ ಒದಗಿಸುತ್ತದೆ. ಡಿಜಿಟಲ್ ಟಿಕೆಟ್ ಬುಕಿಂಗ್ ಸೌಲಭ್ಯವು ಪ್ರಯಾಣಿಕರು ಟಿಕೆಟ್ ಕೌಂಟರ್’ಗಳಲ್ಲಿ ದೀರ್ಘ ಸರತಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಲು ಸಹಾಯ ಮಾಡುತ್ತದೆ, ವಿಶೇಷವಾಗಿ ಪ್ರಯಾಣಿಕರ ಸಂಖ್ಯೆ…
ಒಬ್ಬ ಯುವಕನಿಗೆ ಬದುಕೇ ಬೇಸರವಾಗಿತ್ತು. ಯಾವುದರಲ್ಲೂ ಆಸಕ್ತಿ ಇಲ್ಲ. ಒಂಥರಾ ಖಿನ್ನತೆ. ಮನೆಯಲ್ಲಿ ಒಬ್ಬನೇ ಕುಳಿತಿರುತ್ತಿದ್ದ. ಸ್ನೇಹಿತರ ಜತೆಗೆ ಬೆರೆಯುವುದು ಕೂಡಾ ಬೇಡ ಅನಿಸುತ್ತಿತ್ತು. ಒಂದು ದಿನ ಆ ಊರಿಗೆ ಒಬ್ಬ ಗುರುಗಳು ಬಂದಿದ್ದಾರೆ ಎನ್ನುವ ಸುದ್ದಿ ಅವನಿಗೆ ಗೊತ್ತಾಯಿತು. ತನ್ನ ಸಮಸ್ಯೆಗೆ ಅವರ ಬಳಿ ಏನಾದರೂ ಪರಿಹಾರ ಇರಬಹುದಾ ಎಂದು ಯೋಚಿಸಿದ. ಯುವಕ ಗುರುಗಳ ಬಳಿಗೆ ಹೋಗಿ, ʻʻಜೀವನದಲ್ಲಿ ನನಗೆ ಹಲವಾರು ಸಮಸ್ಯೆಗಳಿವೆ. ಹಾಗಾಗಿ ಸದಾ ಬೇಸರದಲ್ಲಿ ಕಾಲ ಕಳೆಯುತ್ತಿದ್ದೇನೆ. ನಾನು ಎಲ್ಲರ ಹಾಗೆ ಸಂತೋಷವಾಗಿರೋದು ಹೇಗೆ? ದಯವಿಟ್ಟು ನನ್ನ ಸಮಸ್ಯೆಗೆ ಪರಿಹಾರ ತಿಳಿಸಿʼʼ ಎಂದು ಕೇಳಿದ. ಗುರುಗಳು ಯುವಕ ಹೇಳಿದ್ದೆಲ್ಲವನ್ನೂ ಗಮನವಿಟ್ಟು ಕೇಳಿದರು. ಆದರೆ, ಏನೂ ಉತ್ತರ ನೀಡದೆ ಎದ್ದು ಒಳಗೆ ನಡೆದರು. ಯುವಕನಿಗೆ ಗೊಂದಲವಾಯಿತು. ʻʻನಾನೇನೋ ಇವರಾದರೂ ಪರಿಹಾರ ಹೇಳುತ್ತಾರೆ ಎಂದು ಇಲ್ಲಿಗೆ ಬಂದರೆ ಏನೂ ಹೇಳದೆ ಒಳಗೆ ಹೋಗಿಬಿಟ್ಟರಲ್ಲʼʼ ಅಂತ ಮನಸ್ಸಿನೊಳಗೇ ಹೇಳಿಕೊಂಡ. ಅಷ್ಟು ಹೊತ್ತಿಗೆ ಗುರುಗಳು ಹೊರಗೆ ಬಂದರು. ಅವರ ಒಂದು ಕೈಯಲ್ಲಿ ಒಂದು…
ಬೆಂಗಳೂರು: ಬೆಂಗಳೂರು ನಗರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಗೆ ನೀಡಿದ್ದಂತ ತಡೆಯಾಜ್ಞೆಯನ್ನು ಸಿಟಿ ಸಿವಿಲ್ ಕೋರ್ಟ್ ತೆರವುಗೊಳಿಸಿದೆ. ಅಲ್ಲದೇ ಒಂದು ತಿಂಗಳ ಒಲಗಾಗಿ ಅರ್ಜಿದಾರನ ನಾಮಪತ್ರವನ್ನು ಪರಿಗಣಿಸಿ ಚುನಾವಣೆ ನಡೆಸಲು ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಬೆಂಗಳೂರು ನಗರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಗೆ ಕೋರ್ಟ್ ಈ ಹಿಂದೆ ತಡೆಯಾಜ್ಞೆ ನೀಡಿತ್ತು. ಈ ತಡೆಯಾಜ್ಞೆ ತೆರವುಗೊಳಿಸುವಂತೆ ಕೆಯುಡಬ್ಲ್ಯೂಜೆಯಿಂದ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದಂತ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್, ವಾದ – ಪ್ರತಿವಾದವನ್ನು ಆಲಿಸಿದ ಬಳಿಕ, ಇಂದು ತಡೆಯಾಜ್ಞೆಯನ್ನು ತೆರವುಗೊಳಿಸಿದೆ. ಇನ್ನೂ ಬೆಂಗಳೂರಿನ ನಗರ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸಲ್ಲಿಸಿದ್ದ ವಾದಿಯ ನಾಮಪತ್ರವನ್ನು ಪರಿಗಣಿಸುವಂತೆ ಸಿಟಿ ಸಿವಿಲ್ ಕೋರ್ಟ್ ಸೂಚಿಸಿದೆ. ಚುನಾವಣೆಯನ್ನು ಕ್ಯಾಲೆಂಡರ್ ಪ್ರಕಾರ ಒಂದು ತಿಂಗಳೊಳಗೆ ಪೂರ್ಣಗೊಳಿಸುವಂತೆ ತಿಳಿಸಿದೆ. ಅಲ್ಲದೆ, ವಾದಿಯು ನ್ಯಾಯಾಲಯದಲ್ಲಿ ದಾಖಲಿಸಿದ್ದ ದಾವವನ್ನು ವಜಾಗೊಳಿಸಿದೆ. ನ್ಯಾಯಾಲಯ ತೀರ್ಪಿಗೆ ಸ್ವಾಗತ: ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ನೀಡಿರುವ ತೀರ್ಪು ನ್ನು ಸ್ವಾಗತಿಸಿರುವ ಕರ್ನಾಟಕ…














