Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಅವರು 68 ಬಾರಿ ರಕ್ತದಾನ ಮಾಡಿದವರು. ಬರೋಬ್ಬರಿ 25 ಬಾರಿ ಕಣ್ಣಿನ ಸಮಸ್ಯೆಯಿಂದ ಬಳಲುತ್ತಿದ್ದವರಿಗೆ ಶಸ್ತ್ರ ಚಿಕಿತ್ಸೆಗೆ ನೆರವಾಗಲು ಶಿಬಿರ ಆಯೋಜಿಸಿದವರು. ಆ ಮೂಲಕ ಸಾಮಾಜಿಕ ಸೇವೆಗೈದವರೇ ಸಾಗರದ ವಿಜಯೇಂದ್ರ ಶಾನಭಾಗ್ ಅವರಾಗಿದ್ದಾರೆ. ಇಂತಹ ಅವರ ಸಾಮಾಜಿಕ ಸೇವೆಯನ್ನು ಗುರುತಿಸಿದಂತ ಅರಮನೆ ಆಶ್ರಯ ಸೇವಾ ಫೌಂಡೇಶನ್ ಅವರಿಗೆ ಸಹಾಯಧನ ನೀಡಿ, ಗೌರವಿಸಿದೆ. ಇಂದು ಸಾಗರದಲ್ಲಿರುವಂತ ಅವರ ನಿವಾಸಕ್ಕೆ ತೆರಳಿದಂತ ಸಿದ್ಧಾಪುರದ ಅರಮನೆ ಆಶ್ರಯ ಫೌಡೇಶನ್ ನ ಅಧ್ಯಕ್ಷರಾದಂತ ನಾಗರಾಜ ಗುಡ್ಡೇಮನೆ ಅವರು, 68 ಬಾರಿ ರಕ್ತದಾನ ಹಾಗೂ 25 ಬಾರಿ ಕಣ್ಣಿನ ಶಸ್ತ್ರ ಚಿಕಿತ್ಸೆ ಶಿಬಿರವನ್ನು ಹಾಗೂ ಸ್ಥಳೀಯ ಪತ್ರಿಕೆಯನ್ನು ನಡೆಸುತ್ತಿರುವ ವಿಜಯೇಂದ್ರ ಶಾನಭಾಗ್ ಅವರ ಸೇವೆಯನ್ನು ಗುರುತಿಸಿ ಅಭಿನಂದನಾ ಪತ್ರ ಹಾಗೂ ಸಹಾಯಧನ ನೀಡಿ, ಸನ್ಮಾನಿಸಿ ಗೌರವಿಸಿದರು. ಈ ವೇಳೆ ಮಾತನಾಡಿದಂತ ನಾಗರಾಜ ಗುಡ್ಡೇಮನೆ ಅವರು, ವಿಜಯೇಂದ್ರ ಶಾನುಭಾಗ್ ಅವರ ಸಾಮಾಜಿಕ ಸೇವೆ ಶ್ಲಾಘನೀಯವಾದದ್ದು. ಅವರ ಬದುಕಿನಲ್ಲಿ 68 ಬಾರಿ ರಕ್ತದಾನ, 25 ಬಾರಿ ಕಣ್ಣಿನ ಶಸ್ತ್ರ ಚಿಕಿತ್ಸೆ…
ಬೆಂಗಳೂರು: ಸಾರಿಗೆ ನೌಕರರ ಬಗ್ಗೆ ಮಾತನಾಡಿದಂತ ಬಿಜೆಪಿಗರಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಖಡಕ್ ತಿರುಗೇಟು ನೀಡಿದ್ದಾರೆ. ಬಿಜೆಪಿಗರೇ ಈ ಎಲ್ಲವನ್ನೂ ಮರೆತು ಬಿಟ್ಟಿರಾ? ಸಾರಿಗೆ ನೌಕರರ ಬಗ್ಗೆ ಕಾಳಜಿವಹಿಸದೆ ಈಗ ಟ್ವೀಟ್ ಮೂಲಕ ಕಾಳಜಿವಹಿಸುವ ನಾಟಕ ಆಡಲು ತಮಗೆ ನಾಚಿಕೆಯಾಗುವುದಿಲ್ಲವೇ? ಎಂಬುದಾಗಿ ಕಿಡಿಕಾರಿದ್ದಾರೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು, ವೇತನ ಪರಿಷ್ಕರಣೆ ಸಂಬಂಧ ಮೊದಲ ಬಾರಿಗೆ ಮುಷ್ಕರ ಮಾಡಿದ್ದು ನಿಮ್ಮ ಬಿ.ಜೆ.ಪಿ ಕಾಲದಲ್ಲಿಯೇ ಎಂಬುದನ್ನು ಮರೆತು ಬಿಟ್ಟಿರಾ ? ತಮ್ಮ ಬಿ.ಜೆ.ಪಿ ಅಧಿಕಾರವಧಿಯಲ್ಲಿ ಮೊದಲ ಬಾರಿಗೆ ವೇತನಕ್ಕಾಗಿ 15 ದಿವಸಗಳ ಸುದೀರ್ಘ ಮುಷ್ಕರ ನಡೆದಿದ್ದು ಮರೆತು ಬಿಟ್ಟಿರಾ? ಎಂದು ಕೇಳಿದ್ದಾರೆ. ಮುಷ್ಕರದಲ್ಲಿ ಪಾಲ್ಗೊಂಡ ಸುಮಾರು 3000 ನೌಕರರ ವಜಾ/ ಅಮಾನತು/ ವರ್ಗಾವಣೆ ಮಾಡಿ ಹಲವು ಸಿಬ್ಬಂದಿಗಳ ಮೇಲೆ FIR ಹಾಕಿಸಿ, ಇಂದಿಗೂ ಕೋರ್ಟ್/ಕಛೇರಿ ಅಂತ ಅಲೆಯುತ್ತಿದ್ದಾರೆ ಅದನ್ನು ಮರೆತು ಬಿಟ್ಟಿರಾ? ಬಿ.ಜೆ.ಪಿಯ ಅವಧಿಯಲ್ಲಿ ಸಾರಿಗೆ ನೌಕರರ ವೇತನ…
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ದುರಂತದ ಬಳಿಕವೂ ಐಪಿಎಲ್ ಮ್ಯಾಚ್ ಆಯೋಜನೆ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಬೆಂಗಳೂರಲ್ಲಿ ಆರ್ ಸಿ ಬಿ ಕಾಲ್ತುಳಿತ ಘಟನೆ ಬಳಿಕ ಚಿನ್ನಸ್ವಾಮಿ ಕ್ರೀಢಾಂಗಣದಲ್ಲಿ ಐಪಿಎಲ್ ಮ್ಯಾಚ್ ಆಯೋಜನೆ ಬಗ್ಗೆ ತೊಡಕು ಉಂಟಾಗಿತ್ತು. ಅಲ್ಲದೇ ಬೆಂಗಳೂರಲ್ಲಿ ಪಂದ್ಯ ಆಡಲು ಆರ್ ಸಿ ಬಿಗೆ ಕಂಡೀಷನ್ ಅಪ್ಲೈ ಮಾಡಲಾಗುತ್ತಿದೆ ಎನ್ನಲಾಗುತ್ತಿದೆ. ಕೆ ಎಸ್ ಸಿ ಎ ಗೆ ಕಂಡೀಷನ್ ಹಾಕಿ ಆರ್ ಸಿ ಬಿ ಮ್ಯಾನೇಜ್ಮೆಂಟ್ ಚಿನ್ನಸ್ವಾಮಿ ಕ್ರೀಢಾಂಗಣದಲ್ಲೇ ಆಯೋಜಿಸೋದಕ್ಕೆ ಅನುಮತಿಸೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಕ್ರೀಡಾಂಗಣದ ಸುತ್ತ ಎಐ ಕ್ಯಾಮೆರಾ ಅಳವಡಿಸಬೇಕು. ಆರ್ ಸಿ ಬಿ ಪ್ರೇಕ್ಷಕರ ಸುರಕ್ಷತೆಗೆ ಮಹತ್ವ ಕೊಡಬೇಕು. 300ರಿಂದ 350 ಎಐ ಕ್ಯಾಮೆರಾ ಅಳವಡಿಸೋದು ಕಡ್ಡಾಯ. ಪ್ರೇಕ್ಷಕರ ಸರತಿಸಾಲು ಶಿಸ್ತುಬದ್ಧವಾಗಿ ನಿರ್ವಹಿಸಬೇಕು ಎಂಬುದಾಗಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಆರ್ ಸಿ ಬಿಗೆ ಷರತ್ತು ವಿಧಿಸೋ ಸಾಧ್ಯತೆ ಇದೆ. https://kannadanewsnow.com/kannada/power-outages-in-these-areas-tomorrow-due-to-sagars-bh-road-widening-work/ https://kannadanewsnow.com/kannada/a-sinful-brother-stabbed-his-younger-brother-28-times-to-death-in-four-days-as-he-was-about-to-ascend-the-throne/
ಶಿವಮೊಗ್ಗ: ಸಾಗರದ ನಗರದಲ್ಲಿ ಬಿಹೆಚ್ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದೆ. ಇದರಿಂದಾಗಿ ಕಳೆದ ಹಲವು ತಿಂಗಳಿನಿಂದ ಬಿಹೆಚ್ ರಸ್ತೆಯಲ್ಲಿ ಪವರ್ ಕಟ್ ಸಮಸ್ಯೆಯನ್ನು ಎದುರಿಸಲಾಗುತ್ತಿದೆ. ಇದೀಗ ನಾಳೆ ಕೂಡ ವಿದ್ಯುತ್ ಕಂಬಗಳ ಸ್ಥಳಾಂತರದ ಕಾರಣ ಸಾಗರದ ಕೆಲ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ ಅಂತ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಈ ಕುರಿತಂತೆ ಸಾಗರದ ಮೆಸ್ಕಾಂ ಕಚೇರಿಯು ಮಾಹಿತಿ ಹಂಚಿಕೊಂಡಿದ್ದು,ದಿನಾಂಕ: 17.01.2026 ಶನಿವಾರದಂದು ಸಾಗರದ ಬಿ.ಹೆಚ್ ರಸ್ತೆ ಅಗಲೀಕರಣ ಕಾಮಗಾರಿಯ ಸಲುವಾಗಿ ವಿದ್ಯುತ್ ಕಂಬಗಳ ಸ್ಥಳಾಂತರಿಸುವ ಹಮ್ಮಿಕೊಂಡಿರುವುದರಿಂದ ಸಾಗರ ಪಟ್ಟಣ ವ್ಯಾಪ್ತಿಯ ಈ ಕೆಳಕಂಡ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದಿದೆ. ನೆಹರೂ ನಗರ, ಜೋಸೆಫ್ ನಗರ, ಅರಳೀಕೊಪ್ಪ, ಜನ್ನತ್ಗಲ್ಲಿ, ಸಿಗಂದೂರು ಮಾರ್ಕೆಟ್ ರಸ್ತೆ, ಬಿ.ಹೆಚ್ ರಸ್ತೆ, ಅಶೋಕ ರಸ್ತೆ, ಕೃಷ್ಣ ಗ್ಯಾರೇಜ್, ಎಲ್.ಐ.ಸಿ ಆಫೀಸ್ ಹತ್ತಿರ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಲ್ಲಿ ಬೆಳಗ್ಗೆ: 10:00 ಘಂಟೆಯಿಂದ ಸಂಜೆ: 06:00 ಘಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ವಿದ್ಯುತ್ ಗ್ರಾಹಕರು ಸಹಕರಿಸುವಂತೆ ಕೋರಿದೆ. ವರದಿ;…
ಕಲಬುರ್ಗಿ: ನನ್ನ ಹೆಸರಿನಲ್ಲಿ ನೀವು ಹಣ ಮಾಡ್ತಾ ಇದ್ದೀರಿ. ಹೀಗಾಗಿ ನನಗೂ ಹಣ ನೀಡುವಂತೆ ತಹಶೀಲ್ದಾರ್ ಒಬ್ಬರು ಸಿಬ್ಬಂದಿಗಳಿಗೆ ಅವಾಜ್ ಹಾಕಿದಂತ ಆಡಿಯೋ ಕಲಬುರ್ಗಿಯಲ್ಲಿ ವೈರಲ್ ಆಗಿದೆ. ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಹಶೀಲ್ದಾರ್ ಮತ್ತು ಸಿಬ್ಬಂದಿಗಳ ನಡುವಿನ ಇಂತದ್ದೊಂದು ಆಡಿಯೋ ಈಗ ವೈರಲ್ ಆಗಿದೆ. ಕಲಬುರ್ಗಿಯ ಜೇವರ್ಗಿ ತಹಶೀಲ್ದಾರ್ ಮಲ್ಲಣ್ಣ ಯಲಗೋಡ ಓಪನ್ ಸಭೆಯಲ್ಲೇ ಹಣಕ್ಕಾಗಿ ಸಿಬ್ಬಂದಿಗಳಿಗೆ ಬೇಡಿಕೆ ಇಟ್ಟಿರೋದು ಬಹಿರಂಗಗೊಂಡಿದೆ. ಜೇವರ್ಗಿ ತಹಶೀಲ್ದಾರ್ ಮಲ್ಲಣ್ಣ ಯಲಗೋಡ ಓಪನ್ ಮೀಟಿಂಗ್ ನಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಂತ ಆಡಿಯೋ ವೈರಲ್ ಆಗಿದೆ. ಜೊತೆಗೆ ತಹಶೀಲ್ದಾರ್ ಕಿರುಕುಳಕ್ಕೆ ಬೇಸತ್ತು ಸಿಬ್ಬಂದಿಗಳು ಕಲಬುರ್ಗಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ದೂರು ನೀಡಿದ್ದಾರೆ. ಓಪನ್ ಮೀಟಿಂಗ್ ನಲ್ಲಿ ಜೇವರ್ಗಿ ತಹಶೀಲ್ದಾರ್ ಮಲ್ಲಣ್ಣ ಸಾಹೇಬ್ರು ನನ್ನ ಹೆಸರಿನಲ್ಲಿ ನೀವು ಹಣ ಮಾಡುತ್ತೀರಿ. ನನಗೂ ಹಣ ನೀಡುವಂತೆ ಒತ್ತಾಯಿಸಿದ್ದಾರೆ. ಇದೇ ಕಾರಣದಿಂದ ಆರ್ ಐ ಒಬ್ಬರು ನನಗೆ ಅದರ ಜವಾಬ್ದಾರಿಯೇ ಬೇಡ, ಕಚೇರಿ ಕೆಲಸಕ್ಕೆ ಹಾಕಿ. ನನಗೆ ಹಣ ನೀಡಲು ಆಗೋದಿಲ್ಲ…
ವಿಜಯಪುರ: ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಖಾಸಗಿ ಹೋಟೆಲ್ ಒಂದರಲ್ಲಿ ಆಯೋಜಿಸಿದ್ದ, ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯನ್ನು ಉಳಿಸಲು ಆಗ್ರಹಿಸಿ ನಡೆಸುವ ಆಂದೋಲನ ಕುರಿತು ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಪಾಲ್ಗೊಂಡು, ಕೇಂದ್ರ ಸರ್ಕಾರ ಎಂ.ಜಿ. ನರೇಗಾ ಯೋಜನೆಯ ಹೆಸರನ್ನು ಮಾತ್ರವಲ್ಲದೆ, ಅದರ ಮೂಲ ಉದ್ದೇಶವನ್ನೇ ದುರ್ಬಲಗೊಳಿಸುವ ಮೂಲಕ ಗ್ರಾಮೀಣ ಜನತೆಯ ಬದುಕನ್ನು ಸಂಕಷ್ಟಕ್ಕೆ ತಳ್ಳುತ್ತಿರುವ ವಿಚಾರವನ್ನು ವಿವರವಾಗಿ ತಿಳಿಸಿದೆ. ಈ ಹಿನ್ನೆಲೆ, ಯೋಜನೆಯನ್ನು ರಕ್ಷಿಸಲು ಜನಾಂದೋಲನ ರೂಪಿಸುವ ಅಗತ್ಯತೆ ಕುರಿತು ಸವಿಸ್ತಾರವಾಗಿ ಪ್ರಸ್ತಾಪಿಸಲಾಯಿತು. ಇಂದಿನ ಸಭೆಯಲ್ಲಿ ಶಾಸಕರಾದ ವಿಠ್ಠಲ ಕಟಕದೋಂಢ, ಡಿಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಲೋಣಿ, ಮುಖಂಡರಾದ ಅಬ್ದುಲ್ ಹಮೀದ್ ಮುಶ್ರೀಫ್, ಮಹಿಳಾ ಕಾಂಗ್ರೆಸ್ ನ ಪದಾಧಿಕಾರಿಗಳು ಹಾಗೂ ಜಿಲ್ಲಾ ಕಾಂಗ್ರೆಸ್ ನ ಕಾರ್ಯಕರ್ತರು ಉಪಸ್ಥಿತರಿದ್ದರು. https://kannadanewsnow.com/kannada/good-news-for-those-suffering-from-guillain-barre-syndrome-gbs-in-the-state-free-treatment-up-to-rs-2-lakh/ https://kannadanewsnow.com/kannada/a-sinful-brother-stabbed-his-younger-brother-28-times-to-death-in-four-days-as-he-was-about-to-ascend-the-throne/
ಬೆಂಗಳೂರು: ಇಂದಿನಿಂದ ಜನವರಿ.25ರವರೆಗೆ ಬೆಂಗಳೂರು ಹಬ್ಬ ನಡೆಯಲಿದೆ. ಇಂದು ಸಂಜೆ 5.30ಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಬೆಂಗಳೂರು ಹಬ್ಬಕ್ಕೆ ಚಾಲನೆ ನೀಡಲಿದ್ದಾರೆ. ಕನ್ನಡ ನಾಡಿನ ಸಾಹಿತ್ಯ, ಕಲೆ, ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಕೈಗಾರಿಕಾ ವಲಯ ಹಾಗೂ ವಿವಿಧ ಖಾಸಗಿ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಜನವರಿ 16 ರಿಂದ 25ರ ವರೆಗೆ ʼಬೆಂಗಳೂರು ಹಬ್ಬʼವನ್ನು ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ಹಬ್ಬ-2026ರಲ್ಲಿ ಸಂಗೀತ ಹಾಗೂ ವೈವಿಧ್ಯಮಯ ಕಲೆಗಳ ಪ್ರದರ್ಶನ, ಸ್ತಬ್ದ ಚಿತ್ರಗಳು, ವಿವಿಧ ಜಾನಪದ ಕಲಾತಂಡಗಳು, ಮಹಿಳೆಯರ ಪೂರ್ಣ ಕುಂಭ, ಸಾಂಪ್ರದಾಯಿಕ ಉಡುಗೆ ತೊಟ್ಟ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಒಳಗೊಂಡ ಮೆರವಣಿಗೆ ನಡೆಯಲಿದೆ. ವಿಧಾನಸೌಧ, ಕಬ್ಬನ್ ಪಾರ್ಕ್ ಒಳಭಾಗದಿಂದ ಕೇಂದ್ರ ಗ್ರಂಥಾಲಯ, ಟೆನ್ನಿಸ್ ಮೈದಾನ, ವಿಕ್ಟೋರಿಯಾ ಪ್ರತಿಮೆ, ಅನಿಲ್ ಕುಂಬ್ಳೆ ವೃತ್ತ, ಮಹಾತ್ಮ ಗಾಂಧಿ ರಸ್ತೆ, ಮಹಾತ್ಮ ಗಾಂಧಿ ಮೆಟ್ರೋ ನಿಲ್ದಾಣದ ರಂಗೋಲಿ ಕಲಾ ಕೇಂದ್ರದ ಮೂಲಕ ಮೆರವಣಿಗೆ ಸಾಗಲಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ, ಕೈಗಾರಿಕಾ ವಲಯ ಹಾಗೂ ವಿವಿಧ ಖಾಸಗಿ ಸಂಘ-ಸಂಸ್ಥೆಗಳ…
ಬೆಂಗಳೂರು: ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಮತ್ತು ಮಿತ್ರ ಪಕ್ಷಗಳ ಜಯಭೇರಿಯ ಹಿನ್ನೆಲೆಯಲ್ಲಿ ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯ ಬಳಿ ಇಂದು ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು. ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಅವರು ಮಾಧ್ಯಮಗಳ ಜೊತೆ ಮಾತನಾಡಿ, ಮುಂಬೈಯಲ್ಲಿ ಅತಿ ದೊಡ್ಡ ಮಹಾನಗರಪಾಲಿಕೆಯಲ್ಲಿ ಬಿಜೆಪಿ ಮತ್ತು ಮಿತ್ರಪಕ್ಷವು ಭಾರೀ ಮುನ್ನಡೆ ಸಾಧಿಸಿದೆ. ಇದು ಸಂತಸದ ವಿಚಾರ ಎಂದರು. ಕಾಂಗ್ರೆಸ್ನವರು ಮತಪತ್ರದಲ್ಲಿ ಚುನಾವಣೆ ಮಾಡಿದರೆ ಗೆಲ್ಲುವುದಾಗಿ ಹೇಳುತ್ತಿದ್ದರು. ಅದರಲ್ಲೂ ನಮ್ಮ ರಾಜ್ಯದಲ್ಲಿ ಸೋತಿದ್ದಾರೆ. ಈಗ ಮತ್ತೆ ಇವಿಎಂ ಹ್ಯಾಕ್ ಆಗಿದೆ ಎನ್ನಲಿದ್ದಾರೆ ಎಂದು ವ್ಯಂಗ್ಯವಾಡಿದರು. 30 ವರ್ಷಗಳ ನಂತರ ಬಿಜೆಪಿ ಮೇಯರ್ ಚುಕ್ಕಾಣಿ ಹಿಡಿಯುವುದು ಅತ್ಯಂತ ಖುಷಿ ತಂದಿದೆ ಎಂದು ತಿಳಿಸಿದರು. ಕೇರಳದ ತಿರುವನಂತಪುರದಲ್ಲೂ ನಾವು ಗೆದ್ದಿದ್ದೇವೆ. ನರೇಂದ್ರ ಮೋದಿ ಜೀ ಅವರು ಮಾಡುವ ಕೆಲಸ ಇದಕ್ಕೆ ಕಾರಣ; ಬಿಜೆಪಿಗೆ ಪರ್ಯಾಯ ಯಾವುದೂ ಇಲ್ಲವೆಂದು ಎಲ್ಲರೂ ಒಪ್ಪಿಕೊಳ್ಳುತ್ತಿದ್ದಾರೆ ಎಂದು ಹೇಳಿದರು. ಮುಂಬೈ ಜನತೆಯನ್ನು ಹಾಗೂ ಮಹಾರಾಷ್ಟ್ರದ…
ವಿಜಯಪುರ: ಜಿಲ್ಲೆಯಲ್ಲಿ ಟ್ರ್ಯಾಕರ್, ಜಿಪಿಎಸ್ ಹೊಂದಿರುವಂತ ರಣಹದ್ದು ಪತ್ತೆಯಾಗಿ, ಆತಂಕವನ್ನು ಉಂಟು ಮಾಡಿದೆ. ಪತ್ತೆಯಾಗಿರುವಂತ ರಣಹದ್ದಿಗೆ ಟ್ರ್ಯಾಕರ್, ಜಿಪಿಎಸ್ ಹಾಗೂ ಕ್ಯಾಮರಾ ಮಾದರಿಯ ವಸ್ತುಗಳನ್ನು ಅಳವಡಿಸಲಾಗಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನ ಗೋಟ್ಯಾಳ ಗ್ರಾಮದ ತೋಟವೊಂದರಲ್ಲಿ ಟ್ರ್ಯಾಕರ್, ಜಿಪಿಎಸ್ ಹಾಗೂ ಕ್ಯಾಮರಾ ಮಾದರಿಯ ವಸ್ತುವನ್ನು ಅಳವಡಿಸಲಾಗಿದ್ದಂತ ರಹಣದ್ದೊಂದು ಪತ್ತೆಯಾಗಿದೆ. ಇದಷ್ಟೇ ಅಲ್ಲದೇ ಪತ್ತೆಯಾದಂತ ರಣಹದ್ದಿನ ಕಾಲಿನಲ್ಲಿ ಗುರುತಿನ ಸಂಖ್ಯೆಯ ಟ್ಯಾಗ್ ಕೂಡ ಇರುವುದು ಕಂಡು ಬಂದಿದೆ. ರಣಹದ್ದು ಕಂಡಂತ ಸಾರ್ವಜನಿಕರು 112ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದಂತ ಪೊಲೀಸರು, ರಣಹದ್ದು ವಶಕ್ಕೆ ಪಡೆದು, ಝಳಕಿ ಪೊಲೀಸ್ ಠಾಣೆಗೆ ಕೊಂಡೊಯ್ದಿದ್ದಾರೆ. https://kannadanewsnow.com/kannada/a-sinful-brother-stabbed-his-younger-brother-28-times-to-death-in-four-days-as-he-was-about-to-ascend-the-throne/
ಮಂಡ್ಯ: ಜಿಲ್ಲೆಯಲ್ಲಿ ಬೆಚ್ಚಿ ಬೀಳಿಸೋ ಕೃತ್ಯವೊಂದನ್ನು ಎಸಗಲಾಗಿದೆ. ಆಸ್ತಿಗಾಗಿ ನಾಲ್ಕು ದಿನದಲ್ಲಿ ಹಸೆಮಣೆ ಏರಬೇಕಿದ್ದಂತ ತಮ್ಮನನ್ನೇ ಅಣ್ಣನೊಬ್ಬ 28 ಬಾರಿ ಇರಿದು ಕೊಂದಿರುವಂತ ಘಟನೆ ಮಂಡ್ಯದ ಮಾಯಪ್ಪನಹಳ್ಳಿಯಲ್ಲಿ ನಡೆದಿದೆ. ಮಂಡ್ಯ ತಾಲ್ಲೂಕಿನ ಮಾಯಪ್ಪನಹಳ್ಳಿಯಲ್ಲಿ ಆಸ್ತಿಗಾಗಿ ಅಣ್ಣ, ಅಣ್ಣನ ಮಕ್ಕಳು ಸೇರಿಕೊಂಡು ತಮ್ಮ ಯೋಗೇಶ್(35) ಎಂಬುವರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಇಂದು ಬೆಳಗ್ಗೆ ತಮ್ಮ ಯೋಗೇಶ್ ನನ್ನು ಅಣ್ಣ ಲಿಂಗರಾಜ, ಮಕ್ಕಳಾದಂತ ಭರತ್, ದರ್ಶನ್ ಸೇರಿ ಮನೆಯ ಕೊಟ್ಟಿಗೆಯಲ್ಲೇ ಹರಿತವಾದ ಆಯುಧಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಬುಧವಾರ ಮೃತ ಯೋಗೇಶ್ ಮದುವೆ ಫಿಕ್ಸ್ ಆಗಿತ್ತು. ಇಂದು ಅವರನ್ನು ಕೊಲೆ ಮಾಡಲಾಗಿದೆ. ಕೊಲೆಯ ಬಳಿಕ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ಆಸ್ತಿಗಾಗಿ ಸಹೋದರರ ನಡುವೆ ಆಗಿದ್ದಾಂಗೆ ನಡೆಯುತ್ತಿದ್ದಂತ ಜಗಳ, ಈಗ ಕೊಲೆಯಲ್ಲಿ ಅಂತ್ಯಗೊಂಡಿದೆ. ವಿಷಯ ತಿಳಿದು ಸ್ಥಳಕ್ಕೆ ಕೆರಗೋಡು ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ. ಕೊಲೆ ಮಾಡಿ ಪರಾರಿಯಾಗಿರುವಂತ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. https://kannadanewsnow.com/kannada/the-issue-of-the-cms-post-is-a-matter-between-me-the-cm-and-the-high-command-dcm-d-k-shivakumar/













