Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ನವದೆಹಲಿ: ನವದೆಹಲಿ ಪ್ರವಾಸದಲ್ಲಿರುವ ತಿಪಟೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಷಡಕ್ಷರಿ ಅವರು ಇಂದು ಬೆಳಗ್ಗೆ ಇಲ್ಲಿನ ಕರ್ನಾಟಕ ಭವನದಲ್ಲಿ ದಿಢೀರ್ ಅಸ್ವಸ್ಥಗೊಂಡಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಶಾಸಕರನ್ನು ಆಸ್ಪತ್ರೆಗೆ ದಾಖಲಿಸಿ, ಅಗತ್ಯ ತುರ್ತು ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಕಲ್ಪಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಶಾಸಕರನ್ನು ಆಸ್ಪತ್ರೆಗೆ ಸೇರಿಸಿದ ಬಳಿಕ ಡಿಸಿಎಂ ಡಾ. ಜಿ. ಪರಮೇಶ್ವರ್ ಅವರು ಎರಡನೇ ಬಾರಿಗೆ ಖುದ್ದಾಗಿ ಆಸ್ಪತ್ರೆಗೆ ಭೇಟಿ ನೀಡಿ ಷಡಕ್ಷರಿ ಅವರ ಆರೋಗ್ಯ ಸ್ಥಿತಿಯನ್ನು ಮತ್ತೊಮ್ಮೆ ವಿಚಾರಿಸಿದರು. ಆರೋಗ್ಯ ಸ್ಥಿರ – ಆತಂಕ ಬೇಡ ಎಂದ ವೈದ್ಯರು: ಆಸ್ಪತ್ರೆಯ ಭೇಟಿಯ ಸಂದರ್ಭದಲ್ಲಿ ಡಿಸಿಎಂ ಅವರು ಶಾಸಕರಿಗೆ ಚಿಕಿತ್ಸೆ ನೀಡುತ್ತಿರುವ ತಜ್ಞ ವೈದ್ಯರ ತಂಡದೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದರು. ಷಡಕ್ಷರಿ ಅವರ ಆರೋಗ್ಯದ ಸ್ಥಿತಿಗತಿಯ ಕುರಿತು ಸಂಪೂರ್ಣ ಮಾಹಿತಿ ಪಡೆದುಕೊಂಡ ಅವರು, ಶಾಸಕರಿಗೆ ಅಗತ್ಯವಿರುವ ಎಲ್ಲ ರೀತಿಯ ಉನ್ನತ ಹಾಗೂ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದರು.…

Read More

ವಾಷಿಂಗ್ಟನ್: ಅಮೆರಿಕ ಮತ್ತು ಇರಾನ್ ನಡುವಿನ ಜಾಗತಿಕ ಸಂಘರ್ಷ ತಾರಕಕ್ಕೇರಿದ್ದು, “ಇಂದು ರಾತ್ರಿ ಇರಾನ್ ಮೇಲೆ ಅಮೆರಿಕ ಅತ್ಯಂತ ಭೀಕರವಾದ ದಾಳಿ ನಡೆಸಲಿದೆ” ಎಂದು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಘೋಷಿಸಿದ್ದಾರೆ. ಅಮೆರಿಕ ಪ್ರಸ್ತಾಪಿಸಿದ್ದ ಶಾಂತಿ ಒಪ್ಪಂದದ ನಿಯಮಗಳನ್ನು ಒಪ್ಪಿಕೊಳ್ಳಲು ಇರಾನ್ ನಿರಾಕರಿಸಿದ ಬೆನ್ನಲ್ಲೇ ಉಭಯ ದೇಶಗಳ ನಡುವೆ ವಾಯು ದಾಳಿಗಳು ನಡೆದಿವೆ. ಇದರಿಂದ ಕೋಪಗೊಂಡಿರುವ ಟ್ರಂಪ್ ಈ ಗಂಭೀರ ಎಚ್ಚರಿಕೆಯನ್ನು ನೀಡಿದ್ದು, ಮಧ್ಯಪ್ರಾಚ್ಯದಲ್ಲಿ ಭೀಕರ ಯುದ್ಧದ ಮುನ್ಸೂಚನೆ ಸಿಕ್ಕಂತಾಗಿದೆ. ತಮ್ಮ ‘ಟ್ರುತ್ ಸೋಶಿಯಲ್’ (Truth Social) ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, “ಇರಾನ್‌ನ ನೌಕಾಪಡೆ, ವಾಯುಪಡೆ, ರಾಡಾರ್, ವಿಮಾನ ವಿರೋಧಿ ರಕ್ಷಣಾ ವ್ಯವಸ್ಥೆ ಹಾಗೂ ಇತರೆಲ್ಲಾ ರಕ್ಷಣಾತ್ಮಕ ಮತ್ತು ಆಕ್ರಮಣಕಾರಿ ಸಾಮರ್ಥ್ಯಗಳು ಈಗಾಗಲೇ ನಾಶವಾಗಿವೆ! ಆದರೂ, ಇಂದು ರಾತ್ರಿ ಅಮೆರಿಕ ಇರಾನ್ ಮೇಲೆ ಅತ್ಯಂತ ಪ್ರಬಲವಾದ ದಾಳಿಯನ್ನು ಮಾಡಲಿದೆ” ಎಂದು ಬರೆದುಕೊಂಡಿದ್ದಾರೆ. ಇರಾನ್ ತೈಲ ಮಾರುಕಟ್ಟೆ ಮೇಲೆ ಅಮೆರಿಕ ಕಣ್ಣು ತಮ್ಮ ಎಚ್ಚರಿಕೆಯನ್ನು ಮತ್ತಷ್ಟು ತೀವ್ರಗೊಳಿಸಿರುವ ಡೊನಾಲ್ಡ್…

Read More

ಇಂದಿನ ಆಧುನಿಕ ಜೀವನಶೈಲಿಯಲ್ಲಿ ಸೋಡಾ, ಸಾಫ್ಟ್ ಡ್ರಿಂಕ್ಸ್ ಮತ್ತು ಪ್ಯಾಕ್ ಮಾಡಿದ ಹಣ್ಣಿನ ರಸಗಳಂತಹ ಸಕ್ಕರೆಯುಕ್ತ ಪಾನೀಯಗಳು (Sugar-Sweetened Beverages) ನಮ್ಮ ದೈನಂದಿನ ಜೀವನದ ಭಾಗವಾಗಿಬಿಟ್ಟಿವೆ. ಆದರೆ, ಇವುಗಳ ನಿರಂತರ ಸೇವನೆ ಜೀವಕ್ಕೇ ಕಂಟಕವಾಗಬಹುದು ಎಂದು ಇತ್ತೀಚಿನ ಜಾಗತಿಕ ಅಧ್ಯಯನವೊಂದು ಎಚ್ಚರಿಸಿದೆ. ಸುಮಾರು 1.5 ಮಿಲಿಯನ್‌ಗಿಂತಲೂ ಹೆಚ್ಚು ವಯಸ್ಕರನ್ನು ಒಳಗೊಂಡ 18 ವರ್ಷಗಳ ಸುದೀರ್ಘ ಸಂಶೋಧನೆಯು, ಸಕ್ಕರೆಯುಕ್ತ ಪಾನೀಯಗಳ ಅತಿಯಾದ ಸೇವನೆಯಿಂದ ಲಿವರ್ ಕ್ಯಾನ್ಸರ್ (ಯಕೃತ್ತಿನ ಕ್ಯಾನ್ಸರ್) ಅಪಾಯ ಗಣನೀಯವಾಗಿ ಹೆಚ್ಚುತ್ತದೆ ಎಂಬುದನ್ನು ಬಹಿರಂಗಪಡಿಸಿದೆ. ಪ್ರಸಿದ್ಧ ವೈದ್ಯಕೀಯ ನಿಯತಕಾಲಿಕೆ ‘JAMA Network Open’ ನಲ್ಲಿ ಪ್ರಕಟವಾದ ಈ ವರದಿಯು, ನಾವು ಪ್ರತಿದಿನ ಕುಡಿಯುವ ಸಿಹಿ ಪಾನೀಯಗಳು ನಮ್ಮ ಯಕೃತ್ತಿನ ಮೇಲೆ ಹೇಗೆ ದೀರ್ಘಕಾಲದ ದುಷ್ಪರಿಣಾಮ ಬೀರುತ್ತವೆ ಎಂಬುದನ್ನು ಎತ್ತಿ ತೋರಿಸುತ್ತದೆ. ಅಧ್ಯಯನ ನಡೆದಿದ್ದು ಹೇಗೆ? ಯುಎಸ್ ಮತ್ತು ಯುರೋಪ್‌ನ 11 ವಿಭಿನ್ನ ದೀರ್ಘಕಾಲೀನ ಸಂಶೋಧನೆಗಳ ದತ್ತಾಂಶಗಳನ್ನು (Data) ಕ್ರೋಢೀಕರಿಸಿ ಈ ಬೃಹತ್ ಅಧ್ಯಯನವನ್ನು ನಡೆಸಲಾಗಿದೆ. ಒಟ್ಟು ಪಾಲ್ಗೊಂಡವರು: 15 ಲಕ್ಷಕ್ಕೂ ಹೆಚ್ಚು…

Read More

​ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯನ್ನು ದುರುಪಯೋಗದಿಂದ ತಡೆದು, ಅರ್ಹರಿಗೆ ಮಾತ್ರ ತಲುಪಿಸುವ ನಿಟ್ಟಿನಲ್ಲಿ ಯೋಜನೆ ಪರಿಷ್ಕರಣೆಗೆ ಆಗ್ರಹಿಸಲಾಗಿದೆಯೇ ಹೊರತು, ಯೋಜನೆಯನ್ನು ನಿಲ್ಲಿಸುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ವಿಧಾನಪರಿಷತ್ ಶಾಸಕರಾದ ದಿನೇಶ್ ಗೂಳಿಗೌಡ ಅವರು ಸ್ಪಷ್ಟಪಡಿಸಿದ್ದಾರೆ. ​ವಿರೋಧ ಪಕ್ಷದ ವರು ಗೃಹಲಕ್ಷ್ಮಿ ಯೋಜನೆ ಕುರಿತು ಇಲ್ಲದ ಅಪಪ್ರಚಾರಗಳನ್ನು ಮಾಡುತ್ತಿದ್ದು, ಸಾರ್ವಜನಿಕರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ. ವಿರೋಧ ಪಕ್ಷದ ನಾಯಕರ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಅವರು ಜರೆದಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಸುಮಾರು 1 ಕೋಟಿ 24 ಲಕ್ಷಕ್ಕೂ ಅಧಿಕ ಮಹಿಳಾ ಯಜಮಾನಿಯರಿಗೆ ಪ್ರತಿ ತಿಂಗಳು ತಲಾ 2,000 ರೂಪಾಯಿಗಳಂತೆ ಗೃಹಲಕ್ಷ್ಮಿ ಯೋಜನೆಯ ಹಣ ತಲುಪುತ್ತಿದೆ. ಇತ್ತೀಚಿನ ಅಂಕಿ-ಅಂಶಗಳ ಪ್ರಕಾರ, ಯೋಜನೆಯ ಫಲಾನುಭವಿಗಳಾಗಿದ್ದ ಸುಮಾರು 1 ಲಕ್ಷದ 95 ಸಾವಿರಕ್ಕೂ ಹೆಚ್ಚು ಕುಟುಂಬದ ಯಜಮಾನಿಯರು ಮರಣ ಹೊಂದಿದ್ದಾರೆ. ಆದಾಗ್ಯೂ, ತಾಂತ್ರಿಕ ಕಾರಣಗಳಿಂದಾಗಿ ಮೃತಪಟ್ಟವರ ಬ್ಯಾಂಕ್ ಖಾತೆಗಳಿಗೂ ಇನ್ನೂ ಹಣ ಸಂದಾಯವಾಗುತ್ತಿರುವುದು…

Read More

ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಸಾಗರ ತಾಲೂಕಿನಲ್ಲಿ ನೂತನ ತಹಶೀಲ್ದಾರ್ ಆಗಿ ಅಧಿಕಾರ ವಹಿಸಿಕೊಂಡಿರುವ ಡಾ. ಪ್ರತಿಭಾ ಆರ್. ಅವರು ಅಕ್ರಮ ದಂಧೆಕೋರರ ವಿರುದ್ಧ ದಂಡಯಾತ್ರೆ ಆರಂಭಿಸಿದ್ದಾರೆ. ತಾಲೂಕಿನಾದ್ಯಂತ ಸದ್ದಿಲ್ಲದೆ ನಡೆಯುತ್ತಿದ್ದ ಅಕ್ರಮ ಜಂಬಿಟ್ಟಿಗೆ (ಲೆಟರೈಟ್ ಕಲ್ಲು) ಮತ್ತು ಮರಳು ಸಾಗಾಣಿಕೆ ಜಾಲದ ಮೇಲೆ ಖಡಕ್ ದಾಳಿ ನಡೆಸುವ ಮೂಲಕ ದಂಧೆಕೋರರ ನಡುಕ ಹುಟ್ಟಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಹಶೀಲ್ದಾರ್ ಡಾ.ಪ್ರತಿಭಾ ಅವರು ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಜಂಬಿಟ್ಟಿಗೆ, ಮರಳು ಸಾಗಾಟ ನಿರತ ಲಾರಿಗಳನ್ನು ವಶಕ್ಕೆ ಪಡೆದು ಕಾನೂನು ಕ್ರಮ ಜರುಗಿಸಿದೆ. ಹಿರೇನೆಲ್ಲೂರು ಗ್ರಾಮದಲ್ಲಿ ನಡೆದಿದ್ದೇನು? ಸಾಗರ ತಾಲೂಕಿನ ತಾಳಗುಪ್ಪ ಹೋಬಳಿಯ ಹಿರೇನೆಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇನೆಲ್ಲೂರು ಗ್ರಾಮದ ಸರ್ವೆ ನಂಬರ್ 211 ರ ಸರ್ಕಾರಿ ಜಾಗದಲ್ಲಿ ಯಾವುದೇ ಅನುಮತಿಯಿಲ್ಲದೆ, ಅಕ್ರಮವಾಗಿ ಜಂಬಿಟ್ಟಿಗೆ ಕಲ್ಲುಗಳನ್ನು ಗಣಿಗಾರಿಕೆ ಮಾಡಿ ಲಾರಿಗಳ ಮೂಲಕ ಸಾಗಿಸಲಾಗುತ್ತಿದೆ ಎಂಬ ದೂರು ತಹಶೀಲ್ದಾರ್ ಅವರಿಗೆ ತಲುಪಿತ್ತು. ಮಾಹಿತಿ ಸಿಗುತ್ತಿದ್ದಂತೆ ತಕ್ಷಣವೇ ಕಾರ್ಯಪ್ರವೃತ್ತರಾದ ತಹಶೀಲ್ದಾರ್…

Read More

ಬೆಂಗಳೂರು: ನಷ್ಟದ ಕಾರಣದಿಂದಾಗಿ ಸದ್ಯಕ್ಕೆ ಸ್ಥಗಿತಗೊಂಡಿರುವ ಬೆಂಗಳೂರು-ಶಿವಮೊಗ್ಗ ವಿಮಾನ ಸೇವೆಯನ್ನು ಸದ್ಯದಲ್ಲೇ ನಡೆಯಲಿರುವ ‘ಉಡಾನ್’ (UDAN) ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ಸೇರಿಸಬೇಕು ಎಂದು ರಾಜ್ಯ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಮಾರ್ಗದಲ್ಲಿ ವಿಮಾನಸೇವೆಯ ಪುನಾರಂಭವು ಮಲೆನಾಡು ಮತ್ತು ಮಧ್ಯ ಕರ್ನಾಟಕದ ಒಟ್ಟಾರೆ ಪ್ರಗತಿಗೆ ಅತ್ಯಂತ ನಿರ್ಣಾಯಕವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಈ ಸಂಬಂಧವಾಗಿ ಸಚಿವ ಎಂ.ಬಿ. ಪಾಟೀಲ ಅವರು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರಿಗೆ ಅಧಿಕೃತ ಪತ್ರ ಬರೆದು ವಿಶೇಷ ಆಗ್ರಹ ಮಾಡಿದ್ದಾರೆ. ಪ್ರಾದೇಶಿಕ ಪ್ರಗತಿಗೆ ಹಿನ್ನಡೆ: ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣವು 2023ರ ಫೆಬ್ರವರಿಯಲ್ಲಿ ಲೋಕಾರ್ಪಣೆಗೊಂಡು ಕಾರ್ಯಾರಂಭ ಮಾಡಿತ್ತು. ಇದಾದ ನಂತರ ಇಂಡಿಗೋ ವಿಮಾನಯಾನ ಸಂಸ್ಥೆಯು ಶಿವಮೊಗ್ಗ-ಬೆಂಗಳೂರು ನಡುವೆ ಯಶಸ್ವಿಯಾಗಿ ವಿಮಾನ ಕಾರ್ಯಾಚರಣೆ ನಡೆಸುತ್ತಿತ್ತು. ಆದರೆ, ಆರ್ಥಿಕ ನಷ್ಟದ ಕಾರಣವನ್ನು ನೀಡಿ ಕಳೆದ ಕೆಲವು ತಿಂಗಳುಗಳಿಂದ ಈ ಸೇವೆಯನ್ನು ಹಠಾತ್ತನೆ ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ಶಿವಮೊಗ್ಗ ಸೇರಿದಂತೆ ಚಿಕ್ಕಮಗಳೂರು, ಉತ್ತರ…

Read More

ಮೈಸೂರು: ಬೀರೂರು–ಶಿವಮೊಗ್ಗ ಟೌನ್ ನಿಲ್ದಾಣಗಳ ಮಧ್ಯೆ ಲೈನ್ ಬ್ಲಾಕ್ ಮತ್ತು ಪವರ್ ಬ್ಲಾಕ್ ಕಾಮಗಾರಿಗಳನ್ನು ಕೈಗೊಳ್ಳುವ ಹಿನ್ನೆಲೆಯಲ್ಲಿ ಕೆಳಕಂಡ ರೈಲುಗಳ ಸಂಚಾರದಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ: ರೈಲುಗಳ ನಿಯಂತ್ರಣ ರೈಲು ಸಂಖ್ಯೆ 16225 ಮೈಸೂರು–ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ ರೈಲು 12.06.2026 ಮತ್ತು 13.06.2026ರಂದು 35 ನಿಮಿಷಗಳ ಕಾಲ ಮಾರ್ಗಮಧ್ಯೆ ನಿಯಂತ್ರಣಕ್ಕೆ ಒಳಪಡಲಿದೆ. 14.06.2026 ರಿಂದ 30.06.2026ರವರೆಗೆ ಮಾರ್ಗಮಧ್ಯೆ 55 ನಿಮಿಷಗಳ ಕಾಲ ಹಾಗೂ 01.07.2026 ರಿಂದ 05.07.2026ರವರೆಗೆ ಮಾರ್ಗಮಧ್ಯೆ 30 ನಿಮಿಷಗಳ ಕಾಲ ನಿಯಂತ್ರಣಕ್ಕೆ ಒಳಪಡಲಿದೆ. ರೈಲು ಸಂಖ್ಯೆ 20690 ಶಿವಮೊಗ್ಗ ಟೌನ್–ಯಶವಂತಪುರ ಎಕ್ಸ್‌ಪ್ರೆಸ್ ರೈಲು 07.07.2026 ರಿಂದ 11.07.2026ರವರೆಗೆ 30 ನಿಮಿಷಗಳ ಕಾಲ ಮಾರ್ಗಮಧ್ಯೆ ನಿಯಂತ್ರಣಕ್ಕೆ ಒಳಪಡಲಿದೆ. ರೈಲು ಮರುನಿಗದಿಪಡಿಕೆ ರೈಲು ಸಂಖ್ಯೆ 20690 ಶಿವಮೊಗ್ಗ ಟೌನ್–ಯಶವಂತಪುರ ಎಕ್ಸ್‌ಪ್ರೆಸ್ ರೈಲು 01.07.2026 ರಿಂದ 05.07.2026ರವರೆಗೆ ಶಿವಮೊಗ್ಗ ಟೌನ್ ನಿಂದ 20 ನಿಮಿಷಗಳ ಕಾಲ ತಡವಾಗಿ ಹೊರಡಲಿದೆ.

Read More

ಮಂಡ್ಯ: ರಾಜ್ಯದಲ್ಲಿ ಮುಂಗಾರು (ಮುಂಗಾರು ಮಳೆ) ಅಧಿಕೃತವಾಗಿ ಪ್ರವೇಶ ಪಡೆದಿದ್ದರೂ ಸಹ, ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಮಾತ್ರ ವರುಣ ದೇವ ಇನ್ನು ಕೃಪೆ ತೋರಿಲ್ಲ. ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಕಾವೇರಿ ಕೊಳ್ಳದ ಜೀವನಾಡಿ ಕೃಷ್ಣರಾಜಸಾಗರ (KRS) ಜಲಾಶಯ ದಿನೇ ದಿನೇ ಬರಿದಾಗುವತ್ತ ಸಾಗುತ್ತಿದ್ದು, ತೀವ್ರ ಆತಂಕ ಮೂಡಿಸಿದೆ. ಒಂದೆಡೆ ಕಡು ಬೇಸಿಗೆಯ ರಣ ಬಿಸಿಲಿನ ತಾಪ, ಮತ್ತೊಂದೆಡೆ ಮುಂಗಾರು ಆರಂಭದಲ್ಲೇ ವಕ್ಕರಿಸಿರುವ ಮಳೆಯ ಅಭಾವದಿಂದಾಗಿ ಡ್ಯಾಂನ ನೀರಿನ ಮಟ್ಟ ತಳ ಹಿಡಿಯುತ್ತಿದ್ದು, ಜಿಲ್ಲೆಯ ರೈತರು ಕಂಗಾಲಾಗಿದ್ದಾರೆ. ಬೆಂಗಳೂರು-ಮೈಸೂರಿಗೆ ಕುಡಿಯುವ ನೀರಿನ ಆತಂಕ: ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ತೀವ್ರವಾಗಿ ಕುಸಿತ ಕಂಡಿರುವುದರಿಂದ ಕೇವಲ ಮಂಡ್ಯ ಜಿಲ್ಲೆಯ ಕೃಷಿ ವಲಯಕ್ಕೆ ಮಾತ್ರವಲ್ಲದೆ, ರಾಜಧಾನಿ ಬೆಂಗಳೂರು, ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ಸುತ್ತಮುತ್ತಲಿನ ಹಲವು ಜಿಲ್ಲೆ ಹಾಗೂ ಪ್ರಮುಖ ನಗರಗಳಿಗೆ ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಭೀಕರ ಸಮಸ್ಯೆ ಎದುರಾಗುವ ಮುನ್ಸೂಚನೆ ಸಿಕ್ಕಿದೆ. ಜಲಾಶಯ ಬತ್ತಿ ಹೋಗುತ್ತಿರುವುದರಿಂದ, ಈ ಹಿಂದೆ…

Read More

ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಘೋಷಣೆಯಾಗಿದ್ದ ದ್ವೈವಾರ್ಷಿಕ ಚುನಾವಣೆಯ ಪ್ರಕ್ರಿಯೆ ಪೂರ್ಣಗೊಂಡಿದ್ದು, ನಾಲ್ಕೂ ಜನ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಮಪತ್ರಗಳನ್ನು ಹಿಂಪಡೆಯಲು ಇಂದು ಕಡೆಯ ದಿನವಾಗಿದ್ದು, ಕಣದಲ್ಲಿದ್ದ ಏಕೈಕ ಪಕ್ಷೇತರ ಅಭ್ಯರ್ಥಿಯ ನಾಮಪತ್ರ ತಾಂತ್ರಿಕ ಕಾರಣಗಳಿಂದಾಗಿ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಈ ಅವಿರೋಧ ಆಯ್ಕೆ ನಿಶ್ಚಿತವಾಗಿದೆ. ಕಾಂಗ್ರೆಸ್ ಪಕ್ಷದ ಮೂವರು ಹಾಗೂ ಬಿಜೆಪಿಯ ಓರ್ವ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಅವಿರೋಧವಾಗಿ ಆಯ್ಕೆಯಾದ ನೂತನ ಸದಸ್ಯರು: ಎಂ. ಮಲ್ಲಿಕಾರ್ಜುನ ಖರ್ಗೆ (ಕಾಂಗ್ರೆಸ್) ಪವನ್ ಖೇರಾ (ಕಾಂಗ್ರೆಸ್) ಮನ್ಸೂರ್ ಅಲಿಖಾನ್ (ಕಾಂಗ್ರೆಸ್) ಎಂ. ನಾಗರಾಜ್ (ಬಿಜೆಪಿ) ಪಕ್ಷೇತರ ಅಭ್ಯರ್ಥಿ ನಾಮಪತ್ರ ತಿರಸ್ಕೃತ: ಈ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ಹೊರತಾಗಿ ಭೋಸರಾಜು ಸೋಮಯ್ಯ (ಭೋಜಣ್ಣ ಸೋಮಯ್ಯ) ಎಂಬುವರು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದು ನಾಮಪತ್ರ ಸಲ್ಲಿಸಿದ್ದರು. ಆದರೆ, ನಿಯಮಾವಳಿಗಳ ಪ್ರಕಾರ ಅಗತ್ಯವಿದ್ದ ಸೂಚಕರ ಸಹಿ ಇಲ್ಲದ ಕಾರಣ ಅವರ…

Read More

ಮುಂಬೈ: ಬಾಲಿವುಡ್ ಹಾಗೂ ಮರಾಠಿ ಚಿತ್ರರಂಗದ ಹಿರಿಯ ನಟ ನಾನಾ ಪಾಟೇಕರ್ ತಮ್ಮ ವಿಶಿಷ್ಟ ನಟನೆ, ಗಂಭೀರ ಧ್ವನಿ ಮತ್ತು ನೇರ ನಡೆ-ನುಡಿಗಳಿಗೆ ಹೆಸರುವಾಸಿಯಾಗಿದ್ದಾರೆ. ಚಿತ್ರರಂಗದಲ್ಲಿ ಅಪಾರ ಯಶಸ್ಸು ಗಳಿಸಿರುವ ಇವರ ವೃತ್ತಿಜೀವನದಷ್ಟೇ ಇವರ ವೈಯಕ್ತಿಕ ಜೀವನವೂ ಆಗಾಗ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗುತ್ತದೆ. ಅದರಲ್ಲೂ ವಿಶೇಷವಾಗಿ, ನಾನಾ ಪಾಟೇಕರ್ ಮತ್ತು ಅವರ ಪತ್ನಿ ನೀಲಕಾಂತಿ ಪಾಟೇಕರ್ ಅವರು ಕಾನೂನಾತ್ಮಕವಾಗಿ ವಿಚ್ಛೇದನ ಪಡೆಯದಿದ್ದರೂ, ಕಳೆದ ಸುಮಾರು 35 ವರ್ಷಗಳಿಂದ ಪರಸ್ಪರ ದೂರ ವಾಸಿಸುತ್ತಿರುವುದು ಅನೇಕರಲ್ಲಿ ಕುತೂಹಲ ಮೂಡಿಸಿದೆ. ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ನಾನಾ ಪಾಟೇಕರ್ ಅವರೇ ತಮ್ಮ ದಾಂಪತ್ಯ ಜೀವನ ಮತ್ತು ಪತ್ನಿಯಿಂದ ದೂರವಿರಲು ಕಾರಣವೇನು ಎಂಬುದನ್ನು ಬಹಿರಂಗಪಡಿಸಿದ್ದಾರೆ. ರಂಗಭೂಮಿಯಿಂದ ಶುರುವಾದ ಪ್ರೇಮಕಥೆ: ನಾನಾ ಪಾಟೇಕರ್ ಮತ್ತು ನೀಲಕಾಂತಿ ಅವರ ಮೊದಲ ಭೇಟಿ ಆಗಿದ್ದು ರಂಗಭೂಮಿಯಲ್ಲಿ. ನಾಟಕಗಳಲ್ಲಿ ಒಟ್ಟಿಗೆ ಅಭಿನಯಿಸುತ್ತಿದ್ದ ಇವರ ಪರಿಚಯ ಹಂತಹಂತವಾಗಿ ಸ್ನೇಹಕ್ಕೆ ತಿರುಗಿ, ಬಳಿಕ ಪ್ರೇಮವಾಗಿ ಬದಲಾಯಿತು. ಆ ದಿನಗಳಲ್ಲಿ ನಾನಾ ಪಾಟೇಕರ್ ಅವರಿಗೆ ಒಂದು ನಾಟಕದ…

Read More