Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಚಿತ್ರದುರ್ಗ: ಕೇವಲ ನಾಲ್ಕು ವರ್ಷದ ಪುಟ್ಟ ಬಾಲಕನೊಬ್ಬ ತೀವ್ರ ಎದೆ ಉರಿಯಿಂದಾಗಿ ಆಸ್ಪತ್ರೆಗೆ ತಲುಪುವಷ್ಟರಲ್ಲೇ ಕೊನೆಯುಸಿರೆಳೆದಿರುವ ಅತ್ಯಂತ ಕರುಣಾಜನಕ ಘಟನೆ ಜಿಲ್ಲೆಯ ಹಿರಿಯೂರು ನಗರದಲ್ಲಿ ಸಂಭವಿಸಿದೆ. ಹಿರಿಯೂರು ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಅವರ ಪುತ್ರ ವೈಷ್ಣವ್ (4) ಮೃತಪಟ್ಟ ದುರ್ದೈವಿ ಬಾಲಕ. ಆಟ ಆಡಿಕೊಂಡಿರಬೇಕಾದ ವಯಸ್ಸಿನ ಪುಟ್ಟ ಕಂದಮ್ಮ ದಿಢೀರನೆ ಸಾವನ್ನಪ್ಪಿರುವುದು ಇಡೀ ಕುಟುಂಬವನ್ನು ಆಘಾತದ ಕಡಲಿನಲ್ಲಿ ಮುಳುಗಿಸಿದೆ. ಆಸ್ಪತ್ರೆ ತಲುಪುವಷ್ಟರಲ್ಲೇ ದುರಂತ! ಮೃತ ಬಾಲಕ ವೈಷ್ಣವ್ ತನಗೆ ಹಠಾತ್ತಾಗಿ ‘ಎದೆ ಉರಿಯುತ್ತಿದೆ’ ಎಂದು ಪೋಷಕರ ಬಳಿ ಹೇಳಿಕೊಂಡು ನರಳಾಡಿದ್ದಾನೆ. ಮಗನ ಅಳಲನ್ನು ಕೇಳಿ ಗಾಬರಿಗೊಂಡ ಪೋಷಕರು ತಕ್ಷಣವೇ ಆತನನ್ನು ಹಿರಿಯೂರಿನ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ವಿಧಿಯ ಆಟ ಬೇರೆಯೇ ಆಗಿತ್ತು. ಆಸ್ಪತ್ರೆಯ ಹೊಸ್ತಿಲು ತುಳಿಯುವಷ್ಟರಲ್ಲೇ ಬಾಲಕ ವೈಷ್ಣವ್ ಮಾರ್ಗಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾನೆ. ಹೃದಯಾಘಾತದ ಶಂಕೆ ಸಾಮಾನ್ಯವಾಗಿ ವಯಸ್ಸಾದವರಲ್ಲಿ ಕಾಣಿಸಿಕೊಳ್ಳುವ ಹೃದಯಾಘಾತ (Heart Attack), ಇತ್ತೀಚಿನ ದಿನಗಳಲ್ಲಿ ಸಣ್ಣ ಪ್ರಾಯದವರನ್ನೂ ಬಲಿ ತೆಗೆದುಕೊಳ್ಳುತ್ತಿರುವುದು ಆತಂಕ ಮೂಡಿಸಿದೆ. ಪ್ರಸ್ತುತ ನಾಲ್ಕು ವರ್ಷದ ಈ…
ಬೆಂಗಳೂರು: ನಾವು ಬಿಡದಿ ರೈತರ ಪರ ಹೋರಾಟ ನಡೆಸುತ್ತಿದ್ದರೆ, ಇನ್ನೊಂದೆಡೆ ಕಾಂಗ್ರೆಸ್ ಪೋಸ್ಟರ್ ಗಳನ್ನು ಅಂಟಿಸಿ ತಮ್ಮ ಕುಟುಂಬದ ವಿರುದ್ಧ ಅಪಪ್ರಚಾರ ನಡೆಸುತ್ತಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ರಾಜ್ಯದ ಮುಖ್ಯಮಂತ್ರಿಯಾದರೂ ಡಿ.ಕೆ. ಶಿವಕುಮಾರ್ ತನ್ನ ಹಳೆಯ ಚಾಳಿ ಬಿಟ್ಟಿಲ್ಲ ಎಂದರು. ಬುಧವಾರ ಬೆಳಗ್ಗೆ ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವರು; ಬಿಡದಿ ಭಾಗದಲ್ಲಿ ತಮ್ಮ ಮತ್ತು ತಮ್ಮ ಕುಟುಂಬದ ವಿರುದ್ದ ಪೋಸ್ಟರ್ ಅಂಟಿಸಿರುವ ಮಾಹಿತಿ ನನಗೂ ಬಂದಿದೆ. ರಾಜ್ಯದ ಸಿಎಂ ಆದ ಮೇಲೆಯೂ ಬ್ಲೂ ಫಿಲ್ಮ್ ಮಾಡಿಸುವುದು, ಪೋಸ್ಟರ್ ಅಂಟಿಸುವುದು ಬಿಡುತ್ತಾರೆ ಅಂದುಕೊಂಡಿದ್ದೆ. ಆ ಚಾಳಿ ಡಿ.ಕೆ.ಶಿವಕುಮಾರ್’ಗೆ ಇನ್ನೂ ಹೋಗಿಲ್ಲ. ವೈಯಕ್ತಿಕವಾಗಿ ಅಪಪ್ರಚಾರ ಮಾಡಿದರೆ ನಾನು ಕುಗ್ಗುವ ಮನುಷ್ಯ ಅಲ್ಲ. ನನ್ನ ಹೋರಾಟ ಇನ್ನೂ ತೀವ್ರವಾಗುತ್ತದೆ ಎಂದು ಅವರು ಕಿಡಿಕಾರಿದರು. ಕೈಲಾಗದವನ ಕೊನೆಯ ಅಸ್ತ್ರವೇ ಅಪಪ್ರಚಾರ. ಅದನ್ನೇ ಡಿ.ಕೆ.ಶಿವಕುಮಾರ್ ಮಾಡುತ್ತಿದ್ದಾರೆ. ಪೋಸ್ಟರ್ ಅಂಟಿಸಿ ಅಪಪ್ರಚಾರ ಮಾಡುತ್ತಿದ್ದಾರೆ.…
ಬೆಳಗಾವಿ: ಒಂಬತ್ತು ವರ್ಷಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಆ ಜೋಡಿ ನೆಮ್ಮದಿಯಾಗಿಯೇ ಇತ್ತು. ಆದರೆ, ಕಳೆದ ನಾಲ್ಕು ವರ್ಷಗಳ ಹಿಂದೆ ಪತಿಯ ಬಾಳಿಗೆ ಆ “ಮತ್ತೊಬ್ಬಳು” ಎಂಟ್ರಿ ಕೊಟ್ಟಿದ್ದೇ ತಡ, ಆ ಹಸನ್ಮುಖಿ ಹೆಂಡತಿಯ ಬಾಳಿನಲ್ಲಿ ಯಮನ ಕರಾಳ ನೆರಳು ಆವರಿಸಿತ್ತು. ವಿಧವೆಯೊಬ್ಬಳ ಮೇಲಿನ ಮೋಹಕ್ಕಾಗಿ, ಹೆತ್ತ ಹೆಂಡತಿಯನ್ನೇ ದೇವಸ್ಥಾನದ ಮುಂದೆಯೇ ಬಲಿಗೊಟ್ಟ ಪಾಪಿ ಪತಿಯ ಕ್ರೂರ ಕಥೆಯಿದು! ಧರ್ಮಪತ್ನಿಯೇ ಶತ್ರುವಾದಳು! ಧಾರವಾಡ ತಾಲೂಕಿನ ಕಲ್ಲೂರು ಗ್ರಾಮದ ಸಕ್ಕುಬಾಯಿ ಹಾಗೂ ಸಂತೋಷ್ ಪಟಾಯತ್ ವಿವಾಹವಾಗಿ 9 ವರ್ಷಗಳು ಕಳೆದಿದ್ದವು. ಆದರೆ, ಕಳೆದ ನಾಲ್ಕು ವರ್ಷಗಳಿಂದ ಸಂತೋಷ್ನಿಗೆ ಮತ್ತೊಬ್ಬ ವಿಧವೆ ಮಹಿಳೆಯ ಪರಿಚಯವಾಗಿ, ಅದು ಅಕ್ರಮ ಸಂಬಂಧಕ್ಕೆ ತಿರುಗಿತ್ತು. ಆಕೆಯ ಜೊತೆಗೇ ಇಡೀ ಜೀವನ ಕಳೆಯಬೇಕೆಂಬ ಹಠಕ್ಕೆ ಬಿದ್ದ ಸಂತೋಷ್ಗೆ, ತನ್ನ ಪತ್ನಿ ಸಕ್ಕುಬಾಯಿ ಕಂಟಕದಂತೆ ಕಾಣತೊಡಗಿದಳು. ಹೆಂಡತಿಯನ್ನು ದಾರಿಯಿಂದ ಮುಳ್ಳಿನಂತೆ ತೆಗೆದುಹಾಕಲು ಆತ ಭೀಕರ ಸ್ಕೆಚ್ ಒಂದನ್ನು ಹಾಕಿದ. ‘ದೇವಿ ಪ್ರಸಾದ’ ರೂಪದಲ್ಲಿ ಬಂದ ಯಮದೂತ! ಅಧಿಕ ಮಾಸದ ನಿಮಿತ್ತ…
ಬೆಂಗಳೂರು: ಬೆಂಗಳೂರು ಹೊರವಲಯದ ಬಿಡದಿಯಲ್ಲಿರುವ ವಂಡರ್ ಲಾ ರೆಸಾರ್ಟ್ನಲ್ಲಿ ಮಂಗಳವಾರ ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಮಹತ್ವದ ಸಭೆ ಜರುಗಿತು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಪಕ್ಷದ ಪ್ರಮುಖ ನಾಯಕರು ಮತ್ತು ಸಚಿವರು ಭಾಗವಹಿಸಿ, ಪ್ರಸ್ತುತ ರಾಜಕೀಯ ವಿದ್ಯಮಾನಗಳು ಹಾಗೂ ಸರ್ಕಾರದ ಮುಂದಿನ ನಡೆಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು. ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಉಪಸ್ಥಿತರಿದ್ದು, ಶಾಸಕರಿಗೆ ಪ್ರಮುಖ ಮಾರ್ಗದರ್ಶನ ನೀಡಿದರು. ಪ್ರಮುಖ ನಾಯಕರ ಉಪಸ್ಥಿತಿ: ಈ ಉನ್ನತ ಮಟ್ಟದ ಸಭೆಯಲ್ಲಿ ಸರ್ಕಾರದ ಹಲವು ಹಿರಿಯ ಸಚಿವರು ಹಾಗೂ ಪಕ್ಷದ ಪದಾಧಿಕಾರಿಗಳು ಭಾಗವಹಿಸಿದ್ದರು. ಅವರಲ್ಲಿ ಪ್ರಮುಖರೆಂದರೆ: ಹಿರಿಯ ಸಚಿವರು: ಕೆ.ಜೆ. ಜಾರ್ಜ್, ಕೆ.ಎಚ್. ಮುನಿಯಪ್ಪ, ಆರ್.ವಿ. ದೇಶಪಾಂಡೆ, ಎಂ.ಬಿ. ಪಾಟೀಲ್, ಯು.ಟಿ. ಖಾದರ್ ಮತ್ತು ದಿನೇಶ್ ಗುಂಡೂರಾವ್. ಪ್ರಮುಖ ನಾಯಕರು: ಯತೀಂದ್ರ ಸಿದ್ದರಾಮಯ್ಯ, ಸಿಎಲ್ಪಿ ಕಾರ್ಯದರ್ಶಿ ಅಲ್ಲಮಪ್ರಭು…
ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ, ವಸತಿ ಸೌಲಭ್ಯ ವಿಸ್ತರಣೆ ಹಾಗೂ ಭವಿಷ್ಯದ ಸಾರ್ವಜನಿಕ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಕ್ಷೇತ್ರದ ಶಾಸಕ ಪಿ. ರವಿಕುಮಾರ್ ಗೌಡ ಗಣಿಗ ಅವರು ಮಂಡ್ಯ ತಹಸಿಲ್ದಾರ್ ರವರ ಕಚೇರಿಯಲ್ಲಿ ಅಧಿಕಾರಿಗಳ ಸಭೆಯಲ್ಲಿ ಮಹತ್ವದ ನಿರ್ದೇಶನಗಳನ್ನು ನೀಡಿದರು. ಕ್ಷೇತ್ರ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ 5,000 ನಿವೇಶನಗಳನ್ನು ವಿತರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಶಾಸಕ, ವಸತಿ ರಹಿತ ಕುಟುಂಬಗಳಿಗೆ ಸ್ವಂತ ನಿವೇಶನ ಒದಗಿಸುವುದು ತಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ತಿಳಿಸಿದರು. ತಂಗಳಗೆರೆ ಹಾಗೂ ಹೊನಗನಹಳ್ಳಿ ಗ್ರಾಮಗಳಲ್ಲಿ ನಿವೇಶನ ಹಂಚಿಕೆಗೆ ಅಗತ್ಯವಾದ ಟೌನ್ ಪ್ಲಾನಿಂಗ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಯೋಜನೆ ಅನುಷ್ಠಾನಕ್ಕೆ ಬರಲಿದೆ ಎಂದು ಮಾಹಿತಿ ನೀಡಲಾಯಿತು. ಇದೇ ವೇಳೆ ಹುಲಿವಾನ ಹಾಗೂ ಬಸರಾಳು ಗ್ರಾಮಗಳಲ್ಲಿ ನಿವೇಶನ ವಿತರಣೆಗೆ ಸಂಬಂಧಿಸಿದ ಹಕ್ಕುಪತ್ರಗಳ ತಿದ್ದುಪಡಿ ಕಾರ್ಯ ಪೂರ್ಣಗೊಂಡಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು. ಮಂಡ್ಯ ನಗರ ವ್ಯಾಪ್ತಿಯಲ್ಲಿ ಸರ್ಕಾರಿ ನೌಕರರ ವಸತಿ ಸಮಸ್ಯೆ ನಿವಾರಣೆಗೆ ಅಪಾರ್ಟ್ಮೆಂಟ್ ಮಾದರಿಯ…
ಬೆಂಗಳೂರು : “ನೂತನವಾಗಿ ನಿರ್ಮಾಣವಾಗುತ್ತಿರುವ ಕೆಂಪೇಗೌಡ ಬಡಾವಣೆಯಲ್ಲಿ ಇದೇ 27ರಂದು ಬೆಳಗ್ಗೆ 11.30ಕ್ಕೆ ನಾಡಪ್ರಭು ಕೆಂಪೇಗೌಡ ಜಯಂತಿ ನಡೆಸಲು ತೀರ್ಮಾನಿಸಲಾಗಿದೆ. ಬಿಡಿಎ ವತಿಯಿಂದ ಅಧ್ಯಕ್ಷರಾದ ಹ್ಯಾರೀಸ್ ಅವರ ನೇತೃತ್ವದಲ್ಲಿ ನಗರದಲ್ಲಿ 15 ಲಕ್ಷ ಗಿಡಗಳನ್ನು ನೆಡಲಾಗುವುದು. ಈ ಬಡಾವಣೆಯಲ್ಲಿ ನೂತನ ರಸ್ತೆಯನ್ನು ಉದ್ಘಾಟಿಸಲಾಗುವುದು” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಹಿತಿ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಂಗಳವಾರ ನಡೆದ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ ಪೂರ್ವಭಾವಿ ಸಭೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಪ್ರತಿ ವರ್ಷದಂತೆ ಕೆಂಪೇಗೌಡ ಜಯಂತಿ ಆಚರಣೆ ಕುರಿತಾಗಿ ಪೂರ್ವಭಾವಿ ಸಭೆ ಕರೆಯಲಾಗಿತ್ತು. ಕಾರ್ಯಕ್ರಮದ ರೂಪುರೇಷೆ ಬಗ್ಗೆ ಎಲ್ಲಾ ಸಂಘಟನೆಗಳ ಜತೆ ಚರ್ಚೆ ಮಾಡಲಾಗಿದೆ. ಪ್ರತಿ ಬಾರಿಯಂತೆ ನಗರದ ನಾಲ್ಕು ಕೆಂಪೇಗೌಡ ಗೋಪುರಗಳಿಂದ ಪ್ರತ್ಯೇಕ ತಂಡಗಳು ಆಗಮಿಸಲಿವೆ. ನಾಲ್ಕು ಗೋಪುರಗಳ ಪೈಕಿ ರಾಮಲಿಂಗಾ ರೆಡ್ಡಿ, ಕೃಷ್ಣ ಬೈರೇಗೌಡ, ಕೆ.ಜೆ ಜಾರ್ಜ್ ಹಾಗೂ ಬೈರತಿ ಸುರೇಶ್ ಅವರು ಜವಾಬ್ದಾರಿ ವಹಿಸಲಿದ್ದಾರೆ. ಇನ್ನು ಮಾಗಡಿ ತಂಡವನ್ನು ಸ್ಥಳೀಯ…
ಬೆಂಗಳೂರು: ಕರ್ನಾಟಕ ಸರ್ಕಾರವು ಹೆಮ್ಮೆಯಿಂದ ಜಾರಿಗೆ ತಂದಿರುವ ‘ಡಾ. ಪುನೀತ್ ರಾಜ್ಕುಮಾರ್ ಹೃದಯ ಜ್ಯೋತಿ ಯೋಜನೆ’ಯು ರಾಜ್ಯದ ಲಕ್ಷಾಂತರ ಜನರ ಜೀವ ಉಳಿಸುವಲ್ಲಿ ಹಾಗೂ ಆರೋಗ್ಯ ರಕ್ಷಣೆಯಲ್ಲಿ ಅಭೂತಪೂರ್ವ ಯಶಸ್ಸು ಕಂಡಿದೆ. 2023ರ ಮಾರ್ಚ್ ತಿಂಗಳಿನಲ್ಲಿ ಅಧಿಕೃತವಾಗಿ ಚಾಲನೆ ಪಡೆದ ಈ ಯೋಜನೆಯು, ಕೇವಲ ಮೂರು ವರ್ಷಗಳ ಅವಧಿಯಲ್ಲಿ ರಾಜ್ಯಾದ್ಯಂತ ಅತ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಗೊಂಡಿದೆ. ”ಹೃದಯ ಜ್ಯೋತಿಯಿಂದ ಹಲವರ ಬಾಳು ಪುನೀತ” ಎಂಬ ಧ್ಯೇಯವಾಕ್ಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಈ ಯೋಜನೆಯು ತುರ್ತು ಸಂದರ್ಭಗಳಲ್ಲಿ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಜನಸಾಮಾನ್ಯರ ಪಾಲಿಗೆ ಸಂಜೀವಿನಿಯಾಗಿದೆ. ಮೂರು ವರ್ಷಗಳ ಸಾಧನೆಯ ವಿವರಗಳು: ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕೃತ ಮಾಹಿತಿಯ ಪ್ರಕಾರ, ಕಳೆದ 3 ವರ್ಷಗಳಲ್ಲಿ ಈ ಯೋಜನೆಯಡಿ ಕೆಳಗಿನ ಪ್ರಮುಖ ಮೈಲಿಗಲ್ಲುಗಳನ್ನು ಸಾಧಿಸಲಾಗಿದೆ: ತುರ್ತು ಮತ್ತು ಜೀವ ರಕ್ಷಕ ಚಿಕಿತ್ಸೆ: ಹೃದಯ ಸಂಬಂಧಿ ಕಾಯಿಲೆ ಅಥವಾ ತುರ್ತು ಪರಿಸ್ಥಿತಿಗೆ ಸಿಲುಕಿದ 18,804 ಜನರಿಗೆ ಅತ್ಯಂತ ವೇಗವಾಗಿ ತುರ್ತು ಹಾಗೂ ಜೀವ ರಕ್ಷಕ…
ಬೆಂಗಳೂರು : ರಾಜ್ಯದಲ್ಲಿ ಮಳೆ ಕೊರತೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಪರ್ಯಾಯ ಜಲ ಮೂಲಗಳನ್ನು ಗುರುತಿಸಿ, ನೀರಿನ ಪರೀಕ್ಷೆ ಮಾಡಿ ಸನ್ನದ್ಧ ಸ್ಥಿತಿಯಲ್ಲಿರುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಕಾರ್ಯದರ್ಶಿಗಳಿಗೆ ಈ ಸಂಬಂಧ ಲಿಖಿತ ಸೂಚನೆ ನೀಡಿರುವ ಅವರು, ಜೂನ್ ಮಧ್ಯಭಾಗದ ಹೊತ್ತಿಗೆ ರಾಜ್ಯದಲ್ಲಿ ವಾಡಿಕೆಯಂತೆ ಆಗಬೇಕಿದ್ದ ಮಳೆ ಆಗಿಲ್ಲ, ಎಲ್ ನಿನೋ (El Nino) ಪ್ರಭಾವದಿಂದಾಗಿ ಮುಂಗಾರು ಮಳೆ ಕೊರತೆ ಉಂಟಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ, ಈ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. ಈ ಬಾರಿ ರಾಜ್ಯದಲ್ಲಿ ಮಳೆಯ ಸರಾಸರಿ ಪ್ರಮಾಣ ಮತ್ತು ಸರಾಸರಿ ಮಳೆಯ ಅವಧಿ ಕಡಿಮೆ ಆಗುವ ಭೀತಿ ಎದುರಾಗಿದ್ದು, ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಅಪಾಯವೂ ಇದೆ. ಈ ನಿಟ್ಟಿನಲ್ಲಿ ಎಲ್ಲ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಹಾಲಿ ನೀರು ಪೂರೈಕೆ ಮಾಡುತ್ತಿರುವ ಜಲ ಮೂಲಗಳ…
ಬೆಂಗಳೂರು: 1948ರಲ್ಲಿ ಮಹಾತ್ಮ ಗಾಂಧಿಯವರು ಕಾಂಗ್ರೆಸ್ ಪಕ್ಷದ ವಿಸರ್ಜನೆ ಮಾಡಲು ಹೇಳಿದ್ದರು. ಕಾಂಗ್ರೆಸ್ ಹೆಸರು ಬದಲಿಸಿ ಲೋಕ ಸೇವಕ ಸಂಘ ಎಂಬ ಹೆಸರು ಇಡಲು, ಮಹಿಳೆಯರು, ಹರಿಜನರು, ಗೋವುಗಳ ರಕ್ಷಣೆಗೆ ನಿಲ್ಲಲು ಹೇಳಿದ್ದರಲ್ಲವೇ? ಈಗ ನಿಮ್ಮ ತಂದೆಯವರೇ ಎಐಸಿಸಿ ಅಧ್ಯಕ್ಷರಿದ್ದಾರೆ. ಮಹಾತ್ಮ ಗಾಂಧಿಯವರ ಆಶಯಕ್ಕೆ ಅನುಗುಣವಾಗಿ ಕಾಂಗ್ರೆಸ್ಸನ್ನು ವಿಸರ್ಜಿಸುವುದು ಯಾವಾಗ ಎಂದು ಯಾಕೆ ಇನ್ನೂ ನೀವು ಪತ್ರ ಬರೆದಿಲ್ಲ ಎಂದು ವಿಧಾನ ಪರಿಷತ್ತಿನ ವಿರೋಧಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಿಯಾಂಕ್ ಖರ್ಗೆಯವರನ್ನು ಪ್ರಶ್ನಿಸಿದ್ದಾರೆ. ಇಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ನೀಡಿದರು. ಪ್ರಿಯಾಂಕ್ ಖರ್ಗೆಯವರ ಪ್ರಶ್ನೆಗೆ ಮೋಹನ್ ಭಾಗವತ್ ಅವರು ಈಗಾಗಲೇ ಉತ್ತರ ಕೊಟ್ಟಿದ್ದಾರೆ. ಅವರಿಗೆ ಉತ್ತರ ಸಿಕ್ಕಿದೆ ಎಂದುಕೊಳ್ಳುವೆ. ಪ್ರಶ್ನೆ ಕೇಳಿದ ಕಾಂಗ್ರೆಸ್ಸಿನವರು ಗಾಂಪರ ದೊರೆಗಳಾಗಿದ್ದರು ಎಂದು ನುಡಿದರು. ಮೋಹನ್ ಭಾಗವತ್ ಅವರು ಈಗಾಗಲೇ ಉತ್ತರ ಕೊಟ್ಟಿದ್ದಾರೆ. ದೇಶದ ಕಾನೂನು ಒಂದೇ ಎನ್ನುವಿರಲ್ಲವೇ? ಹಾಗಿದ್ದರೆ ನೀವು ಕಾನೂನಿನ ಮೊರೆ ಯಾಕೆ ಹೋಗಿಲ್ಲ ಎಂದು ಕೇಳಿದರು. ಆರೆಸ್ಸೆಸ್…
ಬೆಂಗಳೂರು : ಬೆಂಗಳೂರು ನಗರದಲ್ಲಿ ವಾಸಿಸುವ 1.5 ಕೋಟಿ ಜನರ ಜೀವನ ಗುಣಮಟ್ಟವನ್ನು ಸುಧಾರಿಸುವುದು ನಮ್ಮ ಮೊದಲ ಆದ್ಯತೆಯಾಗಿದ್ದು, ಆ ನಿಟ್ಟಿನಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಗಳು, ಬಿ-ಸ್ಮೈಲ್, ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತ ಸೇರಿದಂತೆ ವಿವಿಧ ವಿಷಯಗಳ ಕುರಿತು ಮೊದಲ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರು ಬಹಳಷ್ಟು ಸವಾಲುಗಳನ್ನು ಹೊಂದಿರುವ ನಗರವಾಗಿದೆ. ಸುಮಾರು 1.5 ಕೋಟಿ ಜನರಿಗೆ ಆಶ್ರಯ ತಾಣವಾಗಿರುವ ಈ ನಗರವು ಉದ್ಯೋಗ, ಶಿಕ್ಷಣ ಹಾಗೂ ಉತ್ತಮ ಜೀವನಕ್ಕೆ ಅವಕಾಶ ಕಲ್ಪಿಸುತ್ತಿದೆ. ಬೆಂಗಳೂರು ನಮ್ಮ ರಾಜ್ಯ ಹಾಗೂ ದೇಶದ ಅಮೂಲ್ಯ ಆಸ್ತಿಯಾಗಿದ್ದು, ವಿಶ್ವದ ವಿವಿಧ ಭಾಗಗಳ ಜನರು ಹಾಗೂ ಅನೇಕ ಸಂಸ್ಥೆಗಳು ಇಲ್ಲಿ ಕಾರ್ಯನಿರ್ವಹಿಸುತ್ತಿವೆ. ಈ ಹಿನ್ನೆಲೆಯಲ್ಲಿ ಜಿಬಿಎ ಆಡಳಿತವನ್ನು ಸುಧಾರಣೆ ಮಾಡುವ ದ್ಯೇಯೆಯೊಂದಿಗೆ ಕಾರ್ಯನಿರ್ವಹಿಸಲಾಗುವುದು ಎಂದು ತಿಳಿಸಿದರು.…














