Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು : “ಮೇಕೆದಾಟು ಯೋಜನೆ ದಕ್ಷಿಣ ಭಾರತದ ಹೃದಯದಂತ ಯೋಜನೆ. ಈ ಯೋಜನೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡಿನ ಹಿತ ಅಡಗಿದೆ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ವಿಧಾನ ಪರಿಷತ್ ಚುನಾವಣೆ ಮತದಾನದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ತಮಿಳುನಾಡು ಸರ್ಕಾರ ನಿಮ್ಮ ಹೃದಯಕ್ಕೆ ಹತ್ತಿರವಾದ ಮೇಕೆದಾಟು ಯೋಜನೆ ತಡೆಯಲು ಕಾನೂನು ಅವಕಾಶ ಹುಡುಕುತ್ತಿದೆ ಎಂದು ಕೇಳಿದಾಗ, “ಮೇಕೆದಾಟು ಕೇವಲ ನನ್ನ ಹೃದಯಕ್ಕೆ ಮಾತ್ರ ಹತ್ತಿರವಾಗಿಲ್ಲ. ಮೇಕೆದಾಟು ಯೋಜನೆ ಕರ್ನಾಟಕ ರಾಜ್ಯಕ್ಕಿಂತ ತಮಿಳುನಾಡಿಗೆ ಹೆಚ್ಚು ಅನುಕೂಲ ನೀಡಲಿದೆ. ತಮಿಳುನಾಡು ಪಾಲಿನ 177 ಟಿಎಂಸಿ ನೀರನ್ನು ಬಿಡಲು ನಾವು ಸಿದ್ಧವಾಗಿದ್ದೇವೆ. ಈ ಬಗ್ಗೆ ಸುಪ್ರೀಂ ಕೋರ್ಟ್ ಆದೇಶವೂ ಇದೆ. ಈ ಯೋಜನೆ ತೀರ್ಮಾನವನ್ನು ಕೇಂದ್ರ ಜಲ ಆಯೋಗ ಮಾಡಬೇಕು ಎಂದು ಕೋರ್ಟ್ ತಿಳಿಸಿದೆ” ಎಂದು ತಿಳಿಸಿದರು. ಒಂದೇ ಒಂದು ಬಕೆಟ್ ನೀರನ್ನೂ ನೀರಾವರಿಗೆ ಬಳಸುವುದಿಲ್ಲ “ನಾವು ತಮಿಳುನಾಡಿನ ರೈತರ ಹಿತವನ್ನೂ ಕಾಪಾಡಬೇಕು. ಇದು ಸಮತೋಲಿತ ಜಲಾನಯನ. ಇಲ್ಲಿ…

Read More

ಬೆಂಗಳೂರು: ಭಾರತ ವಿಶ್ವದಲ್ಲೇ ಅತಿದೊಡ್ಡ ದ್ವಿಚಕ್ರ ವಾಹನ ಮಾರುಕಟ್ಟೆಯಾಗಿದ್ದು, ಇಲ್ಲಿ ಬರೋಬ್ಬರಿ 2.5 ಕೋಟಿಗೂ ಅಧಿಕ ನೋಂದಾಯಿತ ವಾಹನಗಳಿವೆ. ದಿನದಿಂದ ದಿನಕ್ಕೆ ಈ ಬೈಕ್‌ಗಳಲ್ಲಿ ಸುರಕ್ಷತಾ ಫೀಚರ್‌ಗಳ ಬೇಡಿಕೆ ಹೆಚ್ಚಾಗುತ್ತಿದೆ. ಇದನ್ನು ಮನಗಂಡಿರುವ ಜಾಗತಿಕ ಬ್ರೇಕಿಂಗ್ ತಂತ್ರಜ್ಞಾನದ ದೈತ್ಯ ಕಂಪನಿ ‘ಬ್ರೆಂಬೊ’ ಮತ್ತು ಚೀನಾದ ಖ್ಯಾತ ಕಂಪನಿ ‘ನಿಂಗ್ಬೊ ಸೇಫ್ ಬ್ರೇಕ್ಸ್ ಸಿಸ್ಟಮ್ಸ್’, ಭಾರತದಲ್ಲಿ ಜಂಟಿ ಕಾರ್ಯಾಚರಣೆಗೆ ಮುಂದಾಗಿವೆ. ಭಾರತೀಯ ಮಾರುಕಟ್ಟೆಗೆಂದೇ ವಿಶೇಷವಾಗಿ ಮೋಟಾರ್‌ಸೈಕಲ್ ಎಬಿಎಸ್ (ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್) ಗಳನ್ನು ಉತ್ಪಾದಿಸಲು ಈ ಎರಡೂ ಕಂಪನಿಗಳು ಒಪ್ಪಂದಕ್ಕೆ ಸಹಿ ಹಾಕಿದ್ದು, ‘BRSF ಆಕ್ಟೀವ್ ಸೇಫ್ಟಿ ಸೊಲ್ಯೂಷನ್ಸ್’ ಎಂಬ ಹೊಸ ಕಂಪನಿಯನ್ನು ಸ್ಥಾಪಿಸಿವೆ. ಹೇಗಿರಲಿದೆ ಪಾಲುದಾರಿಕೆ? ಈ ಹೊಸ ಜಂಟಿ ಒಪ್ಪಂದದಲ್ಲಿ ಇಟಲಿ ಮೂಲದ ‘ಬ್ರೆಂಬೊ’ ಸಂಸ್ಥೆಯು ಶೇ.60ರಷ್ಟು ಬಹುಪಾಲು ಷೇರನ್ನು ಹೊಂದಿರಲಿದೆ. ಭಾರತದ ಪ್ರಮುಖ ಆಟೋಮೊಬೈಲ್ ಕೈಗಾರಿಕಾ ಕೇಂದ್ರವಾಗಿರುವ ಪುಣೆಯ ‘ಚಾಕನ್’ನಲ್ಲಿ (ಬ್ರೆಂಬೊ ಇಂಡಿಯಾ ಘಟಕದ ಪಕ್ಕದಲ್ಲೇ) ಈ ನೂತನ ಉತ್ಪಾದನಾ ಘಟಕ ತಲೆ ಎತ್ತಲಿದೆ. ಅತ್ಯಾಧುನಿಕ ಹಾಗೂ ಸ್ವಯಂಚಾಲಿತ…

Read More

ನವದೆಹಲಿ: ಜನಪ್ರಿಯ ಮೆಸೇಜಿಂಗ್ ಆ್ಯಪ್ ಟೆಲಿಗ್ರಾಂ (Telegram) ಅನ್ನು ಉಗ್ರವಾದ, ಸೈಬರ್ ಅಪರಾಧ, ಮಾದಕ ದ್ರವ್ಯ ಸಾಗಣೆ ಹಾಗೂ ಹಣಕಾಸು ವಂಚನೆಗಳಂತಹ ಕಾನೂನುಬಾಹಿರ ಚಟುವಟಿಕೆಗಳಿಗೆ ವ್ಯಾಪಕವಾಗಿ ಬಳಸಿಕೊಳ್ಳಲಾಗುತ್ತಿದ್ದು, ಇದು ಅಪರಾಧಿಗಳ ಪಾಲಿಗೆ “ಹೊಸ ಡಾರ್ಕ್ ವೆಬ್” (New Dark Web) ಆಗಿ ಮಾರ್ಪಟ್ಟಿದೆ ಎಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ. ಜೂನ್ 21 ರಂದು ನಡೆಯಲಿರುವ ನೀಟ್-ಯುಜಿ 2026 (NEET-UG 2026) ಮರುಪರೀಕ್ಷೆಯ ಹಿನ್ನೆಲೆಯಲ್ಲಿ, ಭಾರತದಲ್ಲಿ ಟೆಲಿಗ್ರಾಂ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಟೆಲಿಗ್ರಾಂ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಕಾನೂನು ಹೋರಾಟದ ನಡುವೆ ಕೇಂದ್ರ ಸರ್ಕಾರವು ನ್ಯಾಯಾಲಯಕ್ಕೆ ಆಘಾತಕಾರಿ ವಿವರಗಳನ್ನೊಳಗೊಂಡ ಅಫಿಡವಿಟ್ ಸಲ್ಲಿಸಿದೆ. ‘ಟೆಲಿಗ್ರಾಂ ಹೊಸ ಡಾರ್ಕ್ ವೆಬ್’: ನ್ಯಾಯಾಲಯಕ್ಕೆ ಸಲ್ಲಿಕೆಯಾಗಿರುವ ವರದಿಯಲ್ಲಿ, “ಟೆಲಿಗ್ರಾಂ ಜಾಲವು ಸೈಬರ್ ಅಪರಾಧಿಗಳನ್ನು ಲಿಂಕ್ ಮಾಡುವ ಹೊಸ ಡಾರ್ಕ್ ವೆಬ್ ಆಗಿದೆ. ಅಪರಾಧಿಗಳು ತನಿಖಾ ಸಂಸ್ಥೆಗಳಿಗೆ ಸಿಗದೇ ತಪ್ಪಿಸಿಕೊಳ್ಳಲು ಟೆಲಿಗ್ರಾಂ ಚಾನೆಲ್‌ಗಳನ್ನು ಬಳಸುತ್ತಿದ್ದಾರೆ. ಈ ಚಾನೆಲ್‌ಗಳ ಮೂಲಕ ಡೀಪ್ ವೆಬ್…

Read More

ಬೆಂಗಳೂರು: ತಂತ್ರಜ್ಞಾನ ಬೆಳೆದಂತೆ ಉದ್ಯೋಗ ಮಾರುಕಟ್ಟೆಯಲ್ಲಿ ಭಾರೀ ಬದಲಾವಣೆಗಳಾಗುತ್ತಿವೆ. ಕೃತಕ ಬುದ್ಧಿಮತ್ತೆ (ಎಐ)ಯಿಂದಾಗಿ ಜಾಗತಿಕ ಮಟ್ಟಕ್ಕಿಂತ ವೇಗವಾಗಿ ಭಾರತದ ಆರಂಭಿಕ ಹಂತದ ಉದ್ಯೋಗಗಳು ಬದಲಾಗುತ್ತಿವೆ ಎಂದು ಪ್ರಮುಖ ಐಟಿ ಸಂಸ್ಥೆ ‘ಕಾಗ್ನಿಜೆಂಟ್’ ಮತ್ತು ಶಿಕ್ಷಣ ಸಂಸ್ಥೆ ‘ಪಿಯರ್ಸನ್’ ಬಿಡುಗಡೆ ಮಾಡಿರುವ ನೂತನ ಅಧ್ಯಯನ ವರದಿ ತಿಳಿಸಿದೆ. ಅಮೆರಿಕ, ಬ್ರಿಟನ್ ಮತ್ತು ಭಾರತದ ಸುಮಾರು 750 ಎಚ್‌ಆರ್ ನಾಯಕರನ್ನು ಸಮೀಕ್ಷೆಗೊಳಪಡಿಸಿ ʼದಿ ಎಐ ವರ್ಕ್‌ಫೋರ್ಸ್ ಪಲ್ಸ್ʼ ಎಂಬ ವರದಿಯನ್ನು ಸಿದ್ಧಪಡಿಸಲಾಗಿದೆ. ಈ ವರದಿಯಲ್ಲಿ ಹಲವು ಸ್ಫೋಟಕ ಅಂಶಗಳಿವೆ. ಫ್ರೆಶರ್ಸ್ ಮಾಡುವ 37% ಕೆಲಸ ಈಗ ಎಐ ಪಾಲು ಜಾಗತಿಕವಾಗಿ ಎಂಟ್ರಿ ಲೆವೆಲ್ ಹುದ್ದೆಗಳ ಶೇ. 33ರಷ್ಟು ಕೆಲಸಗಳನ್ನು ಎಐ ಮಾಡುತ್ತಿದ್ದರೆ, ಭಾರತದಲ್ಲಿ ಈ ಪ್ರಮಾಣ ಶೇ. 37ರಷ್ಟಿದೆ! ಶೇ.18ರಷ್ಟು ಎಚ್‌ಆರ್ ಅಧಿಕಾರಿಗಳ ಪ್ರಕಾರ, ಹೊಸಬರು ಮಾಡುವ ಅರ್ಧಕ್ಕಿಂತ ಹೆಚ್ಚು ಕೆಲಸವನ್ನು ಈಗ ಎಐ ಮೂಲಕವೇ ಮಾಡಿಸಲಾಗುತ್ತಿದೆ. ಉದ್ಯೋಗ ಕಡಿತವಲ್ಲ, ಕೆಲಸದ ಸ್ವರೂಪವೇ ಬದಲು! ಎಐ ಬಂದರೆ ಉದ್ಯೋಗ ಹೋಗುತ್ತದೆ ಎಂಬ ಭಯ ಬೇಡ.…

Read More

ಬೆಂಗಳೂರು: ಹಿಂದಿನ ಪ್ರಕಟಣೆಗಳಿಗೆ ಸಂಬಂಧಿಸಿದಂತೆ, ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ರೈಲ್ವೆ ಮಂಡಳಿಯು ರೈಲು ಸಂಖ್ಯೆ 06281/06282 ಮೈಸೂರು – ಮದಾರ್ ಜಂಕ್ಷನ್ – ಮೈಸೂರು ಎಕ್ಸ್‌ಪ್ರೆಸ್ ವಿಶೇಷ ರೈಲು ಸೇವೆಯನ್ನು ಮುಂದುವರಿಸಲು ಅನುಮೋದಿಸಿದೆ. ಈ ರೈಲುಗಳು ಈಗಿರುವ ಸಮಯ, ನಿಲ್ದಾಣಗಳು, ದರ ವ್ಯವಸ್ಥೆ ಹಾಗೂ ಸಂಯೋಜನೆಯಲ್ಲಿ ಯಾವುದೇ ಬದಲಾವಣೆ ಇಲ್ಲದೆ ಮುಂದುವರಿಯಲಿವೆ. ರೈಲು ಸಂಖ್ಯೆ 06281 ಮೈಸೂರು – ಮದಾರ್ ಜಂಕ್ಷನ್ ಎಕ್ಸ್‌ಪ್ರೆಸ್ ವಿಶೇಷ ರೈಲು, ಇದು ಪ್ರಸ್ತುತ 27.06.2026ರವರೆಗೆ ಅಧಿಸೂಚಿತವಾಗಿದ್ದು, ಇದೀಗ 04.07.2026 ಮತ್ತು 11.07.2026 (ಶನಿವಾರ) ರಂದು ವಿಸ್ತರಿಸಲಾಗಿದ್ದು, ಒಟ್ಟು 2 ಹೆಚ್ಚುವರಿ ಟ್ರಿಪ್ ಸಂಚರಿಸಲಿದೆ. ರೈಲು ಸಂಖ್ಯೆ 06282 ಮದಾರ್ ಜಂಕ್ಷನ್ – ಮೈಸೂರು ಎಕ್ಸ್‌ಪ್ರೆಸ್ ವಿಶೇಷ ರೈಲು, ಇದು 29.06.2026ರವರೆಗೆ ಅಧಿಸೂಚಿತವಾಗಿದ್ದು, ಇದೀಗ 06.07.2026 ಮತ್ತು 13.07.2026 (ಸೋಮವಾರ) ರಂದು ವಿಸ್ತರಿಸಲಾಗಿದ್ದು, ಒಟ್ಟು 2 ಹೆಚ್ಚುವರಿ ಟ್ರಿಪ್ ಸಂಚರಿಸಲಿದೆ. https://kannadanewsnow.com/kannada/do-you-want-to-go-to-the-kannada-bigg-boss-house-dont-delay-do-this-by-june-21st/

Read More

ಬೆಂಗಳೂರು: ರಿಯಾಲಿಟಿ ಶೋ ಪ್ರೇಕ್ಷಕರ ನೆಚ್ಚಿನ ಕಾರ್ಯಕ್ರಮ ‘ಬಿಗ್ ಬಾಸ್ ಕನ್ನಡ ಸೀಸನ್ 13’ರ ಆರಂಭಕ್ಕೆ ದಿನಗಣನೆ ಶುರುವಾಗಿದ್ದು, ಇದೀಗ ಆಡಿಷನ್ ಪ್ರಕ್ರಿಯೆಗಳು ಭರದಿಂದ ಸಾಗುತ್ತಿವೆ. ಪ್ರತಿ ಬಾರಿಯ ಸೀಸನ್‌ಗಿಂತಲೂ ಈ ಬಾರಿಯ ಬಿಗ್ ಬಾಸ್ ಅತ್ಯಂತ ವಿಶೇಷವಾಗಿರಲಿದ್ದು, ಕಿರುತೆರೆ ವೀಕ್ಷಕರಲ್ಲಿ ಭಾರಿ ಕುತೂಹಲ ಮೂಡಿಸಿದೆ. ಅದಕ್ಕೆ ಮುಖ್ಯ ಕಾರಣ, ಈ ಬಾರಿ ಕೇವಲ ಸೆಲೆಬ್ರಿಟಿಗಳಷ್ಟೇ ಅಲ್ಲದೆ ಸಾರ್ವಜನಿಕರಿಗೂ (ಜನಸಾಮಾನ್ಯರಿಗೂ) ಬಿಗ್ ಬಾಸ್ ಮನೆಗೆ ಸ್ಪರ್ಧಿಯಾಗಿ ಎಂಟ್ರಿ ಕೊಡಲು ರನ್ ವೇ ಸಿದ್ಧಗೊಳಿಸಲಾಗಿದೆ. ವಿಡಿಯೊ ಅಪ್‌ಲೋಡ್ ಮಾಡಲು ಜೂನ್ 21 ಕೊನೆಯ ದಿನಾಂಕ! ಬಿಗ್ ಬಾಸ್ ಮನೆಯೊಳಗೆ ಪ್ರವೇಶಿಸಲು ಕಾತರರಾಗಿರುವ ಜನಸಾಮಾನ್ಯರಿಗೆ ವಾಹಿನಿಯು ಮಹತ್ವದ ಪ್ರಕಟಣೆಯೊಂದನ್ನು ಹೊರಡಿಸಿದೆ. ಬಿಗ್ ಬಾಸ್ ಆಡಿಷನ್‌ಗಾಗಿ ವಿಡಿಯೊ ಕಳುಹಿಸಿಕೊಡಲು ಜೂನ್ 21 ಕೊನೆಯ ದಿನಾಂಕವಾಗಿದೆ. ಆಸಕ್ತರು ತಮ್ಮ ಸ್ವ-ಪರಿಚಯದೊಂದಿಗೆ “ನಾವು ಏಕೆ ಬಿಗ್‌ಬಾಸ್ ಮನೆಯಲ್ಲಿರಬೇಕು?” ಎಂಬ ಪ್ರಮುಖ ಪ್ರಶ್ನೆಗೆ ಉತ್ತರಿಸುವ ವಿಡಿಯೊವನ್ನು ತಯಾರಿಸಬೇಕಾಗುತ್ತದೆ. ಅಪ್ಲಿಕೇಶನ್ ಸಲ್ಲಿಸುವುದು ಹೇಗೆ? ಈ ಸುವರ್ಣಾವಕಾಶವನ್ನು ಪಡೆದುಕೊಳ್ಳಲು ಇಚ್ಚಿಸುವವರು ಅಧಿಕೃತ ಆಡಿಷನ್…

Read More

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು ಮೂರು ವಾರದ ಈ ದಿನದನಂದು ತಪ್ಪದೆ ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರನಾಗುತ್ತಾನೆ. ಲವಂಗದಿಂದ ಈ ಪರಿಹಾರವನ್ನು ಮಾಡಿಕೊಳ್ಳಿ ಮೂರು ಶುಕ್ರ ವಾರ ಗಳ ಕಾಲ ಈ ಪರಿಹಾರವನ್ನು ನೀವು ಪಾಲಿಸಿಕೊಂಡು ಬಂದಿದೆ ಅದರೆ ನಿಮ್ಮ ಜೀವನದಲ್ಲಿ ಎದುರಾಗುತ್ತ ಇರುವಂತಹ ಹಣಕಾಸಿಗೆ ಸಂಬಂಧಪಟ್ಟ ವಿಚಾರಗಳು ಬೇಗ ಪರಿಹರವಾಗುತ್ತದೆ. ಪಂಡಿತ್  ವಿದ್ಯಾಧರ್ ನಕ್ಷತ್ರಿ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್…

Read More

ದಾವಣಗೆರೆ: ಸಹೋದ್ಯೋಗಿಗಳ ಮಾನಸಿಕ ಹಿಂಸೆ ಹಾಗೂ ಜಾತಿ ನಿಂದನೆಗೆ ಬೇಸತ್ತು ಮುಖ್ಯ ಶಿಕ್ಷಕರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದ್ದು, ಈ ಸಂಬಂಧ ಐವರು ಶಿಕ್ಷಕರು ಸೇರಿದಂತೆ ಒಟ್ಟು 10 ಜನರ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ. ಕೊಕ್ಕನೂರು ಶಾಲೆಯ ಮುಖ್ಯ ಶಿಕ್ಷಕರಾಗಿದ್ದ ಜಯಪ್ಪ (54) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈ ಕುರಿತು ಮೃತರ ಪತ್ನಿ ಆಂಜನಮ್ಮ ಅವರು ನೀಡಿದ ದೂರಿನನ್ವಯ ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 10 ಜನರ ವಿರುದ್ಧ ಎಫ್‌ಐಆರ್ ದಾಖಲು: ಮುಖ್ಯ ಶಿಕ್ಷಕ ಜಯಪ್ಪ ಅವರ ಸಾವಿಗೆ ಕಾರಣರಾದ ಆರೋಪದ ಮೇಲೆ ಸಹ ಶಿಕ್ಷಕರಾದ ಶ್ರೀಕಾಂತಚಾರಿ, ವೆಂಕಟೇಶ್, ರಂಜನಿ, ಚೇತನಾ, ಮಹಾಂತೇಶ್ ಗೌಳಿ, ಅಡುಗೆ ಸಿಬ್ಬಂದಿಯಾದ ಸುಮಾ, ಚೆನ್ನಮ್ಮ, ರೂಪಾ, ವಿಜಯಮ್ಮ ಹಾಗೂ ಸಂಬಂಧಪಟ್ಟ ಸಿಆರ್‌ಪಿ (CRP) ಮತ್ತು ಬಿಆರ್‌ಪಿ (BRP) ಸೇರಿದಂತೆ ಒಟ್ಟು ಹತ್ತು ಜನರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ದೂರಿನಲ್ಲೇನಿದೆ? ಕಳೆದ 10 ತಿಂಗಳಿನಿಂದ ಕೊಕ್ಕನೂರು ಶಾಲೆಯಲ್ಲಿ ಜಯಪ್ಪ…

Read More

ರಾಯಚೂರು: ಖಾಸಗಿ ಶಾಲೆಯೊಂದರ ನವೀಕರಣದ ಕೆಲಸಕ್ಕಾಗಿ ಲಂಚ ಸ್ವೀಕರಿಸುತ್ತಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆಯ (DDPI) ಪ್ರಥಮ ದರ್ಜೆ ಸಹಾಯಕರೊಬ್ಬರು (FDA) ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ರಾಯಚೂರಿನ ಹೊಸ ಜಿಲ್ಲಾಧಿಕಾರಿ (DC) ಕಚೇರಿ ಸಂಕೀರ್ಣದಲ್ಲಿರುವ ಡಿಡಿಪಿಐ ಕಚೇರಿಯಲ್ಲೇ ಈ ದಾಳಿ ನಡೆದಿದ್ದು, ಎಫ್‌ಡಿಎ ಮಹಾಬಲೇಶ್ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಅಧಿಕಾರಿ. ಘಟನೆಯ ವಿವರ: ಖಾಸಗಿ ಶಾಲೆಯ ನವೀಕರಣ ಪ್ರಕ್ರಿಯೆಗೆ ಸಂಬಂಧಿಸಿದಂತೆ ದೂರುದಾರರಾದ ಸಿದ್ದಣ್ಣ ಎಂಬುವವರ ಬಳಿ ಎಫ್‌ಡಿಎ ಮಹಾಬಲೇಶ್ ಒಟ್ಟು 25,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಕುರಿತು ಸಿದ್ದಣ್ಣ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ, ಇಂದು ಡಿಡಿಪಿಐ ಕಚೇರಿಯಲ್ಲಿ ದೂರುದಾರರಿಂದ ಮುಂಗಡವಾಗಿ 15,000 ರೂಪಾಯಿ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ಹಠಾತ್ ದಾಳಿ ನಡೆಸಿ ಮಹಾಬಲೇಶ್‌ನನ್ನು ನಗದು ಸಮೇತ ವಶಕ್ಕೆ ಪಡೆದಿದ್ದಾರೆ. ಸದ್ಯ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಯನ್ನು ಬಂಧಿಸಿದ್ದು, ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಕಚೇರಿಯಲ್ಲೇ ನಡೆದ ಈ ಕಾರ್ಯಾಚರಣೆ ಸರ್ಕಾರಿ…

Read More

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆ-2026ರ (Biennial Election to Karnataka Legislative Council-2026) ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಇಂದು ಮಧ್ಯಾಹ್ನ 1:00 ಗಂಟೆಯ ವೇಳೆಗೆ ಶೇಕಡಾ 95.50 ರಷ್ಟು ದಾಖಲೆಯ ಮತದಾನವಾಗಿದೆ. ಚುನಾವಣಾಧಿಕಾರಿಗಳ ಅಧಿಕೃತ ಪತ್ರದ ಮಾಹಿತಿಯ ಪ್ರಕಾರ, ಮತದಾನದ ಸಂಪೂರ್ಣ ವಿವರಗಳು ಈ ಕೆಳಗಿನಂತಿವೆ: ಒಟ್ಟು ಮತದಾರರ ಸಂಖ್ಯೆ (Total No. of Electors): 222 ಮಧ್ಯಾಹ್ನ 1:00 ಗಂಟೆಯವರೆಗೆ ಚಲಾವಣೆಯಾದ ಒಟ್ಟು ಮತಗಳು: 212 ಒಟ್ಟು ಮತದಾನದ ಶೇಕಡಾವಾರು ಪ್ರಮಾಣ: ಶೇ. 95.50% ಕರ್ನಾಟಕ ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿಯಾಗಿರುವ ಎಂ.ಕೆ. ವಿಶಾಲಾಕ್ಷಿ ಅವರು ಭಾರತೀಯ ಚುನಾವಣಾ ಆಯೋಗದ (ECI) ಕಾರ್ಯದರ್ಶಿ ಸುಮನ್ ಕುಮಾರ್ ದಾಸ್ ಅವರಿಗೆ ಅಧಿಕೃತವಾಗಿ ಪತ್ರ ಬರೆಯುವ ಮೂಲಕ ಈ ಗಂಟೆವಾರು ಮತದಾನದ ಪ್ರಗತಿ ವರದಿಯನ್ನು ಸಲ್ಲಿಸಿದ್ದಾರೆ. ಒಟ್ಟು 222 ಮತದಾರರಲ್ಲಿ ಈಗಾಗಲೇ 212 ಮಂದಿ ತಮ್ಮ ಹಕ್ಕನ್ನು ಚಲಾಯಿಸಿದ್ದು, ಬಹುತೇಕ ಶಾಸಕರು ಮಧ್ಯಾಹ್ನದ ಒಳಗಾಗಿಯೇ ಮತದಾನ ಪ್ರಕ್ರಿಯೆಯಲ್ಲಿ…

Read More