Author: kannadanewsnow09

ಬೆಂಗಳೂರು: ನಗರದಲ್ಲಿ 3 BHK ಮನೆಯ ನಿವಾಸಿಗಳಿಗೆ ಬೆಸ್ಕಾಂ ಕೊಟ್ಟ ವಿದ್ಯುತ್ ಬಿಲ್ ಕಂಡು ಶಾಕ್ ಆಗಿದ್ದಾರೆ. ಬರೋಬ್ಬರಿ 16,883 ವಿದ್ಯುತ್ ಬಿಲ್ ಕಂಡು ಆಘಾತಗೊಂಡಿದ್ದಾರೆ.  ಆ ಬಗ್ಗೆ ರೆಡ್ಡಿಟ್ ನಲ್ಲಿ ನಿವಾಸಿಯೊಬ್ಬರು ಮಾಹಿತಿ ಹಂಚಿಕೊಂಡಿದ್ದು,  ಒಂದು AC, ಗೇಮಿಂಗ್ PC ಮತ್ತು ಪ್ರಮಾಣಿತ ಅಡುಗೆ ಉಪಕರಣಗಳನ್ನು ಬಳಕೆ ಮಾಡಲಾಗುತ್ತಿದೆ. ಇಷ್ಟಕ್ಕೆ ಕರೆಂಟ್ ಬಿಲ್ ಬರೋಬ್ಬರಿ ರೂ.16,883 ನೀಡಲಾಗಿದೆ. ಇದು ಹೇಗೆ ಸಾಧ್ಯವೆಂದು ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಇಷ್ಟೊಂದು ಹೆಚ್ಚಿನ ಬಿಲ್ ಸಾಮಾನ್ಯವೇ?” ಎಂದು ರೆಡ್ಡಿಟ್ ಬಳಕೆದಾರರು ಬರೆದಿದ್ದಾರೆ. ಆ ವ್ಯಕ್ತಿಯು ಬೆಸ್ಕಾಂ (ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್) ಅಪ್ಲಿಕೇಶನ್‌ನ ಸ್ಕ್ರೀನ್‌ಶಾಟ್ ಅನ್ನು ಹಂಚಿಕೊಂಡಿದ್ದಾರೆ. ಅದು ಫೆಬ್ರವರಿ 18 ರೊಳಗೆ ಪಾವತಿಸಬೇಕಾದ ₹16,883 ವಿದ್ಯುತ್ ಬಿಲ್ ಅನ್ನು ತೋರಿಸುತ್ತದೆ. ಮುಂದಿನ ಸಾಲುಗಳಲ್ಲಿ, ಆ ವ್ಯಕ್ತಿ ತಮ್ಮ ಸಾಮಾನ್ಯ ವಿದ್ಯುತ್ ಬಳಕೆಯನ್ನು ವಿವರಿಸಿದ್ದಾರೆ. “ಬೆಂಗಳೂರಿನ ಲೆಕ್ಕದಲ್ಲಿ ನನ್ನ ವಿದ್ಯುತ್ ಬಿಲ್ ಇಷ್ಟೊಂದು ಹೆಚ್ಚಾಗುವುದು ಸಾಮಾನ್ಯವೇ?” ಎಂದು ಕೇಳಿದ್ದಾರೆ. ನಾನು 3 BHK ಅಪಾರ್ಟ್‌ಮೆಂಟ್‌ನಲ್ಲಿ…

Read More

ಬೆಂಗಳೂರು: ರಾಜ್ಯ ಸರ್ಕಾರ ಇತ್ತೀಚೆಗೆ 20 ಕೆಎಎಸ್ (KAS) ಅಧಿಕಾರಿಗಳಿಗೆ ಬಡ್ತಿ ನೀಡಿ ಅಧಿಕೃತ ಆದೇಶ ಹೊರಡಿಸಿದೆ. ಈ ಪಟ್ಟಿಯಲ್ಲಿ ಹಿರಿಯ ಶ್ರೇಣಿಯ ಅಧಿಕಾರಿಗಳಿಗೆ ಪದೋನ್ನತಿ ನೀಡಲಾಗಿದೆ. ಆದರೆ, ಅಚ್ಚರಿಯ ವಿಷಯವೆಂದರೆ ಈ ಪಟ್ಟಿಯಲ್ಲಿ ಈಗಾಗಲೇ ಸರ್ಕಾರಿ ಸೇವೆಯಿಂದ ಸ್ವಯಂ ನಿವೃತ್ತಿ ಪಡೆದಿರುವ  ಹೆಚ್.ಎಲ್. ನಾಗರಾಜ (ಪ್ರಸ್ತುತ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ) ಅವರ ಹೆಸರೂ ಸೇರಿದೆ ಎಂಬುದಾಗಿ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ಧಾಳಿ ನಡೆಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಸಿಎಂ ಸಿದ್ಧರಾಮಯ್ಯನವರೇ, ನಿಮ್ಮ ಕಾಂಗ್ರೆಸ್ ಸರ್ಕಾರದ ಅದಕ್ಷತೆ, ಅಸಮರ್ಥತೆ ಈಗ ಯಾವ ಮಟ್ಟಕ್ಕೆ ತಲುಪಿದೆ ಗೊತ್ತಾ? ಸೇವೆಯಿಂದ ಸ್ವಯಂನಿವೃತ್ತರಾಗಿ ಕಾವಿ ಧರಿಸಿ ಪೀಠಾಧಿಪತಿಯಾಗಿರುವವರಿಗೂ “ಬಡ್ತಿ ಭಾಗ್ಯ” ನೀಡುವ ಮಟ್ಟಕ್ಕೆ! ಒಬ್ಬ ಅಧಿಕಾರಿ ಸೇವೆಯಿಂದ ನಿವೃತ್ತರಾಗಿ, ಸಂನ್ಯಾಸ ಸ್ವೀಕರಿಸಿ, ಆಧ್ಯಾತ್ಮಿಕ ಜೀವನ ನಡೆಸುತ್ತಿದ್ದರೂ, ನಿಮ್ಮ ಸರ್ಕಾರದ ದಾಖಲೆಗಳಲ್ಲಿ ಅವರು ಇನ್ನೂ “ಸೇವೆಯಲ್ಲಿರುವ ಅಧಿಕಾರಿ”! ನಿಮ್ಮ ಘನಂದಾರಿ ಆಡಳಿತದಲ್ಲಿ ಮುಖ್ಯಮಂತ್ರಿಗಳು, ಸಚಿವರು, ಅಧಿಕಾರಿಗಳು ಸಹಿ ಮಾಡುವ ಮುನ್ನ ಫೈಲುಗಳನ್ನು ಓದುತ್ತಾರೋ…

Read More

ಮುಂಬೈ: ಇಲ್ಲಿನ ಮುಲುಂಡ್‌ನ ಎಲ್‌ಬಿಎಸ್ ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿರುವ ಎತ್ತರದ ಮೆಟ್ರೋ ರೈಲು ಸೇತುವೆಯ ಪ್ಯಾರಪೆಟ್‌ನ ಒಂದು ಭಾಗ ಬಿದ್ದು ಆಟೋ ರಿಕ್ಷಾ ಮತ್ತು ಕಾರಿನ ಮೇಲೆ ಬಿದ್ದಿದೆ. ಇದರ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಗಾಯಗೊಂಡವರಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ಸಹಾಯವನ್ನು ನೀಡಲಾಗುತ್ತಿದೆ ಎಂದು ಮುಂಬೈ ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (MMRDA) ತಿಳಿಸಿದೆ. ಮೆಟ್ರೋ ಯೋಜನಾ ತಂಡವು ಸ್ಥಳದಲ್ಲಿದ್ದು, ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಮತ್ತು ವಿಪತ್ತು ನಿರ್ವಹಣಾ ಅಧಿಕಾರಿಗಳೊಂದಿಗೆ ನಿಕಟ ಸಮನ್ವಯದೊಂದಿಗೆ ಪರಿಹಾರ ಕಾರ್ಯಾಚರಣೆಗಳು ಮತ್ತು ಸ್ಥಳವನ್ನು ಸುರಕ್ಷಿತಗೊಳಿಸುವ ಕೆಲಸದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. BMC ಯ ವಿಪತ್ತು ನಿಯಂತ್ರಣ ವಿಭಾಗವು ಪ್ಯಾರಪೆಟ್ನ ಭಾಗವು ಸರಿಸುಮಾರು 6X4 ಆಗಿತ್ತು ಎಂದು ಹೇಳಿದರು. ಸಾವನ್ನಪ್ಪಿದ ವ್ಯಕ್ತಿಯನ್ನು ರಾಮಧನ್ ಯಾದವ್ ಎಂದು ಅಧಿಕಾರಿಗಳು ಗುರುತಿಸಿದ್ದಾರೆ. 45 ವರ್ಷದ ರಾಜ್‌ಕುಮಾರ್ ಇಂದ್ರಜೀತ್ ಯಾದವ್ ಅವರನ್ನು ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಅವರು ಹೇಳಿದರು.…

Read More

ಬೀದರ್: ರಾಜ್ಯದಲ್ಲೊಂದು ಧಾರುಣ ಘಟನೆ ಎನ್ನುವಂತೆ ಮನೆಯ ಮುಂದೆ ಆಟವಾಡುತ್ತಿದ್ದ ಸಮಯದಲ್ಲೇ ಚರಂಡಿಗೆ ಬಿದ್ದಂತ ಬಾಲಕನೊಬ್ಬ ಸಾವನ್ನಪ್ಪಿರುವಂತ ಘಟನೆ ಬೀದರ್ ನಲ್ಲಿ ನಡೆದಿದೆ. ಬೀದರ್ ತಾಲ್ಲೂಕಿನ ಮಲ್ಲಿಕ್ ಮರ್ಜಾಪುರ ಗ್ರಾಮದಲ್ಲಿ ಮನೆಯ ಮುಂದೆ ಆಟ ಆಡುವ ಸಮಯದಲ್ಲೇ ಚರಂಡಿಗೆ ಬಿದ್ದಂತ 5 ವರ್ಷದ ಬಾಲಕ ಅವಿನಾಶ್ ಧಾರುಣವಾಗಿ ಸಾವನ್ನಪ್ಪಿದ್ದಾನೆ. ಶುಕ್ರವಾರ ಸಂಜೆ 6 ಗಂಟೆಯಿಂದ 5 ವರ್ಷದ ಬಾಲಕ ಅವಿನಾಶ್ ಕಾಣೆಯಾಗಿದ್ದನು. ಬಾಲಕನಿಗಾಗಿ ಕುಟುಂಬಸ್ಥರು ಹುಡುಕಾಡಿದ್ದರೂ ಪತ್ತೆಯಾಗಿರಿಲ್ಲ. ಆದರೇ ಮನೆಯ ಮುಂದಿನ ಚರಂಡಿಯಲ್ಲೇ ಬಾಲಕನ ಮೃತದೇಹ ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಬಗ್ಗೆ ಬಗದಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು: ಜಾಲಹಳ್ಳಿ ವಿಭಾಗದ 66/11 ಕೆವಿಎ ಗೋಕುಲ ಉಪಕೇಂದ್ರ ವ್ಯಾಪ್ತಿಯಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 14.02.2026 (ಶನಿವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಗೋಕುಲ ಎಂ ಯು ಎಸ್ ಎಸ್, ಡಿ.ಬಿ ಸಂದ್ರಾ 4ನೇ ಬ್ಲಾಕ್, ಜೆ.ಬಿ.ಕಾವಲ್ ಅರಣ್ಯ, ಗಂಗಮ್ಮ ವೃತ್ತ, ಡಿ.ಬಿ.ಸಂದ್ರ 2ನೇ ಬ್ಲಾಕ್, ಕಮ್ಮಗೊಂಡನಹಳ್ಳಿ, ಬಿಇಎಲ್ ಉತ್ತರ ಕಾಲೋನಿ ಮತ್ತು ಬಿಇಎಲ್ ಸೌತ್ ಕಾಲೋನಿ, ಬಾಹುಬಲಿ ನಗರ, ಡಿ.ಬಿ.ಸಂದ್ರ 4ನೇ ಬ್ಲಾಕ್, ಪಟೇಲ್ ಪಿಳ್ಳೇಗೌಡ ಲೇಔಟ್, ಬ್ಲೂಮ್ ಫೀಲ್ಡ್ ಗರ‍್ಡನ್, ರಾಮಚಂದ್ರಾಪುರ, ಜಾಲಹಳ್ಳಿ ಗ್ರಾಮ, ಶಾರದಾಂಬನಗರ, ಬಾಹುಬಲಿನಗರ, ಊಒಖಿ ಇಂಡಸ್ಟ್ರಿಯಲ್ ಎಸ್ಟೇಟ್, ಪ್ರೆಸ್ಟೀಜ್ ವೆಲ್ಲಿಂಗ್ಟನ್ ಮತ್ತು ಪ್ರೆಸ್ಟೀಜ್ ಕೆನ್ಸಿಂಗ್ಟನ್ ಅಪರ‍್ಟ್‌ಮೆಂಟ್, ಮುತ್ಯಾಲನಗರ, ಚಾಮುಂಡೇಶ್ವರಿ ಲೇಔಟ್, ನಂಜಪ್ಪ ಲೇಔಟ್, ಸಿ.ರಾಮಯ್ಯ ಲೇಔಟ್, ಗೋಕುಲ ಎಕ್ಸ್‌ಟಿಎನ್, HMR ಲೇಔಟ್ MRTDC, ಪ್ರೆಸ್ಟೀಜ್ ಅಪರ‍್ಟ್ಮೆಂಟ್ ವ್ಯಾಪ್ತಿಯಲ್ಲಿ

Read More

ಮಂಡ್ಯ : ಶಿಂಷಾ ಎಡ ದಂಡೆ ವ್ಯಾಪ್ತಿಯ ಕೆರೆ ಮತ್ತು ನಾಲೆಗಳ ಆಧುನಿಕರಣಕ್ಕೆ 127 ಕೋಟಿ ರೂ ಅನುದಾನ ಬಿಡುಗಡೆ ಮಾಡುವುದಾಗಿ ಉಪ ಮುಖ್ಯಮಂತ್ರಿ ಡಿ‌.ಕೆ.ಶಿವಕುಮಾರ್ ಒಪ್ಪಿಗೆ ನೀಡಿದ್ದಾರೆ ಎಂದು ಶಾಸಕ ಕೆ.ಎಂ.ಉದಯ್ ಶುಕ್ರವಾರ ಹೇಳಿದರು. ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದ ಕೆರೆ ಸೌಂದರ್ಯಕರಣ ಕಾಮಗಾರಿಗೆ ಅಂದಾಜು 4 ಕೋಟಿ ವೆಚ್ಚದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು. ಸೋಮನಹಳ್ಳಿ ಕೆರೆಯನ್ನು ಸೌಂದರ್ಯಕರಣ ಮಾಡಲು 4 ಕೋಟಿ ವೆಚ್ಚದಲ್ಲಿ ಚಾಲನೆ ನೀಡಲಾಗಿದ್ದು, ಇದರಲ್ಲಿ ಏರಿ ಅಗಲೀಕರಣ, ವಾಕಿಂಗ್ ಪಾತ್, ಗ್ರಿಲ್ ಹಾಗೂ ವಿದ್ಯುತ್ ಕಂಬಗಳ ನಿರ್ಮಾಣ ಮಾಡಲಾಗುವುದು ಇದರ ಜೊತೆಗೆ ಇನ್ನು ಒಂದು ತಿಂಗಳೊಳಗೆ ಹೆಚ್ಚುವರಿಯಾಗಿ 5 ಕೋಟಿ ಅನುದಾನ ನೀಡಿ ಅದರಲ್ಲಿ ಒತ್ತುವರಿ ತೆರವು, ಹೂಳು ಎತ್ತುವುದು, ಹೊಸ ತೂಬುಗಳ ನಿರ್ಮಾಣ ಹಾಗೂ ಹೆಚ್ಚುವರಿ ನೀರು ತುಂಬಿಸಲು ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸ ಮಾಡಲಾಗುವುದು ಎಂದು ತಿಳಿಸಿದರು. ಕೆಸ್ತೂರು ಮತ್ತು ಸೋಮನಹಳ್ಳಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ರೈತರಿಗೆ ಯಾವುದೇ ಶಾಶ್ವತ ನೀರಾವರಿ…

Read More

ಮಂಡ್ಯ : ಮದ್ದೂರು ತಾಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ ಹಾಗೂ ಸೋಮನಹಳ್ಳಿ ಗ್ರಾಮ ಪಂಚಾಯಿತಿಗಳನ್ನು ಮದ್ದೂರು ನಗರಸಭೆಗೆ ಸೇರ್ಪಡೆ ಮಾಡಿರುವುದನ್ನು ವಿರೋಧಿಸಿ ಗ್ರಾಮಸ್ಥರು ಮದ್ದೂರು ನಗರದಲ್ಲಿ ಗುರುವಾರ ರಾತ್ರಿ ಪಂಜಿನ ಮೆರವಣಿಗೆ ನಡೆಸಿ ಪ್ರತಿಭಟನೆ ಮಾಡಿದರು. ಮದ್ದೂರು ನಗರಸಭೆಗೆ ಗೆಜ್ಜಲಗೆರೆ ಗ್ರಾ.ಪಂ ಅನ್ನು ಸೇರಿಸಿರುವುದನ್ನು ವಿರೋಧಿಸಿ ಗೆಜ್ಜಲಗೆರೆ ಗ್ರಾಪಂ ಆವರಣದಲ್ಲಿ 53 ದಿನಗಳಿಂದ ಹಾಗೂ ಗೊರವನಹಳ್ಳಿ ಗ್ರಾಪಂ ಕಚೇರಿ ಎದುರು 34 ದಿನಗಳಿಂದ ಅನಿದಿಷ್ಟಾವಧಿ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪಂಜಿನ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು. ನಗರದ ಶಿವಪುರ ಧ್ವಜ ಸತ್ಯಾಗ್ರಹ ಸೌಧದಿಂದ ಆರಂಭಗೊಂಡ ಪಂಜಿನ ಮೆರವಣಿಗೆಗೆ ರೈತ ನಾಯಕಿ ಸುನಂದ ಜಯರಾಮು ಚಾಲನೆ ನೀಡಿ ಮಾತನಾಡಿ, ಮದ್ದೂರು ನಗರಸಭೆಗೆ ಗೆಜ್ಜಲಗೆರೆ, ಸೋಮನಹಳ್ಳಿ, ಚಾಮನಹಳ್ಳಿ ಹಾಗೂ ಗೊರವನಹಳ್ಳಿ ಗ್ರಾಪಂಗಳನ್ನು ಸೇರಿಸಿರುವುದು ಸರಿಯಲ್ಲ. ಈ ಕೂಡಲೇ ಈ ಪಂಚಾಯಿತಿಗಳನ್ನು ನಗರಸಭೆಯಿಂದ ಕೈ ಬಿಡಬೇಕು ಎಂದು ಆಗ್ರಹಿಸಿದರು. ಇಲ್ಲದಿದ್ದರೆ, ಮುಂದಿನ ದಿನಗಳಲ್ಲಿ ನಾಲ್ಕು ಪಂಚಾಯತಿಗಳ ಗ್ರಾಮಸ್ಥರು ಒಗ್ಗೂಡಿ ಉಗ್ರ ಹೋರಾಟ ರೂಪಿಸಲಾಗುವುದು ಎಂದು…

Read More

ಮಂಡ್ಯ : ಮದ್ದೂರು ನಗರದ ತಾಲೂಕು ಕಛೇರಿ ಪಕ್ಕದದಲ್ಲಿರುವ 22 ಮಳಿಗೆಗಳನ್ನು ಒಂದು ವಾರದೊಳಗೆ ಖಾಲಿ ಮಾಡಬೇಕೆಂದು ತಾಪಂ ಇಓ ರಾಮಲಿಂಗಯ್ಯ ಡೆಡ್ ಲೈನ್ ನೀಡಿದರು. ಮದ್ದೂರು ಪೋಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಜೊತೆ ಶುಕ್ರವಾರ ತೆರಳಿ ಮಳಿಗೆಗಳನ್ನು ಖಾಲಿ ಮಾಡುವಂತೆ ಮಾಲೀಕರಿಗೆ ಸೂಚನೆ ನೀಡಿದರು. ಈ ವೇಳೆ ಮಾಲೀಕರು ಈ ರೀತಿ ಏಕಾಏಕಿ ಮಳಿಗೆಗಳನ್ನು ಖಾಲಿ ಮಾಡಿ ಎಂದರೆ ಎಲ್ಲಿಗೆ ಹೋಗೋದು ನಮಗೆ ಸಮಯಾವಕಾಶ ನೀಡುವಂತೆ ಅಧಿಕಾರಿಗಳು ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ಈ ವೇಳೆ ಪೋಲೀಸರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಈ ವೇಳೆ ಮಾತನಾಡಿದ ತಾಪಂ ಇಓ ರಾಮಲಿಂಗಯ್ಯ ಈಗಾಗಲೇ ಮಳಿಗೆಗಳ ಕರಾರು ಅವಧಿ ಮುಗಿದಿದ್ದು, ಈ ಮಳಿಗೆಗಳನ್ನು ಮರು ಹರಾಜು ಮಾಡಬೇಕೆಂದು ಹಲವು ಬಾರಿ ಮಳಿಗೆಗಳನ್ನು ಖಾಲಿ ಮಾಡುವಂತೆ ನೋಟೀಸ್ ಜಾರಿ ಮಾಡಲಾಗಿದೆ. ಕಳೆದ ತಿಂಗಳು ಸಹ ಕೊನೆಯ ನೋಟೀಸ್ ನೀಡಿ ಒಂದು ವಾರದೊಳಗೆ ಖಾಲಿ ಮಾಡುವಂತೆ ಕೊನೆಯ ಸೂಚನೆ ನೀಡಲಾಗಿತ್ತು.…

Read More

ಬೆಂಗಳೂರು: ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು ಸೃಷ್ಟಿಸಿ, ಮಂಡ್ಯ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ||ಕೆ.ಮೋಹನ್ ಇವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು ಸೃಷ್ಟಿಸಿ, ಮಂಡ್ಯ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ||ಕೆ.ಮೋಹನ್ ಇವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು, ಅಪಪ್ರಚಾರದಲ್ಲಿ ತೊಡಗಿರುವುದು ಖಂಡನೀಯ ಮತ್ತು ಅತ್ಯಂತ ಗಂಭೀರ ಸ್ವರೂಪದ ಅಪರಾಧವಾಗಿದೆ. ಈ ಬಗ್ಗೆ ನನ್ನ ಸಚಿವಾಲಯದ ಅಧಿಕಾರಿಗಳು ದೂರು ದಾಖಲಿಸಿದ್ದು, ಪೊಲೀಸ್ ಇಲಾಖೆ ಇದರ ಹಿಂದಿರುವ ದುಷ್ಟರನ್ನು ಪತ್ತೆ ಮಾಡಿ, ಕಾನೂನು ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ. https://twitter.com/siddaramaiah/status/2022323778454220809 ಇಂತಹ ನಕಲಿ ಸುದ್ದಿಗಳನ್ನು ನಂಬಿ ಶೇರ್ ಮಾಡುವ ಮುನ್ನ ಜಾಲತಾಣ ಬಳಕೆದಾರರು ಎಚ್ಚರಿಕೆ ವಹಿಸಬೇಕು.…

Read More

ಶಿವಮೊಗ್ಗ: ಅರಣ್ಯ ಸಚಿವ ಈಶ್ವರ್ ಖಂಡ್ರೆಯವರ ಟಿಪ್ಪಣಿಯಿಂದಾಗಿ ಸಾಗರದ ಶರಾವತಿ ಮುಳುಗಡೆ ಸಂತ್ರಸ್ತರನ್ನು ಸಂಕಷ್ಟಕ್ಕೆ ದೂಡುವಂತಾಗಿತ್ತು. ಇಂತಹ ಸಾಗರದ ಯಡಮನೆ ಗ್ರಾಮಕ್ಕೆ ಮಾಜಿ ಸಚಿವ ಹರತಾಳು ಹಾಲಪ್ಪ ಭೇಟಿ ನೀಡಿದರು. ಅಲ್ಲದೇ ಗ್ರಾಮಸ್ಥರಿಂದ ಮಾಹಿತಿ ಪಡೆದು, ಸರ್ಕಾರದ ಗಮನ ಸೆಳೆದು, ಪರಿಹಾರದ ಭರವಸೆಯನ್ನು ನೀಡಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕರೂರು ಹೋಬಳಿಯ ಕಟ್ಟಿನಕಾರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಯಡಮನೆ ಗ್ರಾಮಕ್ಕೆ ಮಾಜಿ ಸಚಿವ ಹರತಾಳು ಹಾಲಪ್ಪ ಭೇಟಿ ನೀಡಿದರು. ಈ ಗ್ರಾಮದಲ್ಲಿದ್ದಂತ 16 ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ಮನೆ, ಜಮೀನು ಖಾಲಿ ಮಾಡುವಂತೆ ನೋಟಿಸ್ ನೀಡಿದ್ದ ಹಿನ್ನಲೆಯಲ್ಲಿ ರೈತ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದವು. ಅವರನ್ನು ಭೇಟಿ ಮಾಡಿರು. ಮಾಜಿ ಸಚಿವ ಹರತಾಳು ಹಾಲಪ್ಪ ಬಳಿಯಲ್ಲಿ ಯಡಮನೆ ಗ್ರಾಮದ ಗ್ರಾಮಸ್ಥರು ತಮ್ಮ ಕಣ್ಣೀರಿನ ಕತೆಯನ್ನೇ ಬಿಚ್ಚಿಟ್ಟಿದರು. ಮನೆ, ಜಮೀನು, ಕೊಚ್ಚಿಗೆಯಯನ್ನು ಖಾಲಿ ಮಾಡಿರೋದು, ಹಾಳಾದ ಮನೆಯ ಸಂಪೂರ್ಣ ಚಿತ್ರಣವನ್ನೇ ಮಾಜಿ ಸಚಿವರ ಮುಂದಿಟ್ಟಿದರು. ಯಡಮನೆ ಗ್ರಾಮಸ್ಥರ ಸಂಕಷ್ಟ ಕೇಳಿದಂತ ಹಾಲಪ್ಪ…

Read More