Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಗರದಲ್ಲಿ ಎಟಿಎಂಗೆ ತುಂಬಲು ಕೊಂಡೊಯ್ಯುತ್ತಿದ್ದಂತ ವಾಹನ ತಡೆದು ಆರ್ ಬಿ ಐ ಅಧಿಕಾರಿಗಳು ಎಂಬುದಾಗಿ ಹೇಳಿಕೊಂಡು ಹಾಡ ಹಗಲೇ 7.11 ಕೋಟಿ ಹಣವನ್ನು ದರೋಡೆ ಮಾಡಲಾಗಿತ್ತು. ಈ ಕೃತ್ಯದ ಕಿಂಗ್ ಪಿನ್ ಕಾನ್ಸ್ ಟೇಬಲ್ ಒಪ್ಪರಾಗಿದ್ದರು. ಅವರನ್ನು ಅಮಾನತುಗೊಳಿಸಿ ಡಿಸಿಪಿ ಆದೇಶಿಸಿದ್ದಾರೆ. ಬೆಂಗಳೂರಿನಲ್ಲಿ 7.11 ಕೋಟಿ ರೂಪಾಯಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ಭಾಗಿಯಾಗಿದ್ದ ಪೊಲೀಸ್ ಕಾನ್ಸ್ ಟೇಬಲ್ ಅಣ್ಣಪ್ಪ ನಾಯ್ಕ್ ಅವರನ್ನು ಅಮಾನತುಗೊಳಿಸಲಾಗಿದೆ. ಈ ಸಂಬಂಧ ಬೆಂಗಳೂರಿನ ಪೂರ್ವ ವಿಭಾಗದ ಡಿಸಿಪಿ ದೇವರಾಜ್ ಆದೇಶ ಮಾಡಿದ್ದಾರೆ. ಅಮಾನತುಗೊಂಡ ಪೊಲೀಸ್ ಕಾನ್ಸ್ ಟೇಬಲ್ ಅಣ್ಣಪ್ಪ ನಾಯ್ಕ್ ಗೋವಿಂದಪುರ ಠಾಣೆಯ ಪೇದೆಯಾಗಿದ್ದಾರೆ. ಇಂತಹ ಇವರು ಬೆಂಗಳೂರಿನ ಹಾಡ ಹಗಲೇ ನಡೆದಿದ್ದಂತ ದರೋಡೆ ಕೃತ್ಯದ ಪ್ರಮುಖ ಆರೋಪಿಯಾಗಿದ್ದರು. https://kannadanewsnow.com/kannada/high-court-stays-election-of-sagars-marikamba-devi-trust-scheduled-for-november-30/ https://kannadanewsnow.com/kannada/follow-these-steps-to-link-your-pan-number-with-your-bank-account/ https://kannadanewsnow.com/kannada/alert-parents-beware-childrens-hearts-are-becoming-weak-due-to-excessive-mobile-phone-use/
BREAKING: ನ.30ರಂದು ನಿಗದಿಯಾಗಿದ್ದ ಸಾಗರದ ‘ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನ’ದ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ
ಶಿವಮೊಗ್ಗ: ಸಾಗರದ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನಕ್ಕೆ ನವೆಂಬರ್ 30ರಂದು ಚುನಾವಣೆ ನಿಗದಿಯಾಗಿತ್ತು. ಆದರೇ ಈ ಚುನಾವಣೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ವಿಧಿಸಿರುವುದಾಗಿ ತಿಳಿದು ಬಂದಿದೆ. ಹೀಗಾಗಿ ನವೆಂಬರ್.30ರಂದು ನಡೆಯಬೇಕಿದ್ದಂತ ಸಾಗರದ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಚುನಾವಣೆ ಮುಂದೂಡಿಕೆಯಾದಂತೆ ಆಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರದ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನಕ್ಕೆ ಚುನಾವಣೆ ಘೋಷಣೆಯಾಗಿತ್ತು. ಚುನಾವಣೆಗೆ ನಾಮಪತ್ರ ಸಲ್ಲಿಕೆ ಕೂಡ ಆರಂಭಗೊಂಡು ಸುಮಾರು 60ಕ್ಕೂ ಹೆಚ್ಚು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ. ನಿಗದಿಯಂತೆ ನಡೆದಿದ್ದರೇ ನವೆಂಬರ್.30ರಂದು ಮತದಾನ ನಡೆದು, ಅಂದೇ ಫಲಿತಾಂಶ ಘೋಷಣೆಯಾಗಬೇಕಿತ್ತು. ಆದರೇ ಈ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್ ತಡೆಯಾಜ್ಞೆ ಏಕೆ? ಕರ್ನಾಟಕ ಹೈಕೋರ್ಟ್ ಗೆ ಕೊರಚ-ಕೊರಮ ಸಮಾಜದ ಮುಖಂಡರಾದಂತ ಬಸವರಾಜು ಎಂಬುವರು ತಮ್ಮ ಸಮುದಾಯದಕ್ಕೆ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದಲ್ಲಿ ಸ್ಥಾನ ಮಾನ ನೀಡಿಲ್ಲ. ಹಲವು ವರ್ಷಗಳಿಂದ ನಾವು ದೇವಿಯ ಸೇವೆ ಮಾಡಿಕೊಂಡು ಬರುತ್ತಿದ್ದೇವೆ. ಹೀಗಾಗಿ ನಮ್ಮ ಸಮುದಾಯಕ್ಕೆ ಸ್ಥಾನ ಮಾನ ನೀಡುವವರೆಗೂ ಘೋಷಣೆಯಾಗಿರುವಂತ…
ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧದ ಮುಂಬರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಭಾನುವಾರ ಭಾರತ ತಂಡವನ್ನು ಪ್ರಕಟಿಸಿದೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರನ್ನೊಳಗೊಂಡ ತಂಡಕ್ಕೆ ಕೆಎಲ್ ರಾಹುಲ್ ಅವರನ್ನು ನಾಯಕರನ್ನಾಗಿ ನೇಮಿಸಲಾಗಿದ್ದು, ರವೀಂದ್ರ ಜಡೇಜಾ ಕೂಡ ತಂಡಕ್ಕೆ ಮರಳಿದ್ದಾರೆ. https://twitter.com/BCCI/status/1992561040559894534 ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ, ಜಡೇಜಾ ತಂಡಕ್ಕೆ ಆಯ್ಕೆ ಏತನ್ಮಧ್ಯೆ, ವೇಗಿ ಜಸ್ಪ್ರೀತ್ ಬುಮ್ರಾ ಅವರ ಕಾರ್ಯನಿರತ ಅಂತರರಾಷ್ಟ್ರೀಯ ವೇಳಾಪಟ್ಟಿಯ ಹಿನ್ನೆಲೆಯಲ್ಲಿ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಅವರು ಪ್ರಸ್ತುತ ದಕ್ಷಿಣ ಆಫ್ರಿಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುತ್ತಿದ್ದಾರೆ. ಬುಮ್ರಾ 2025 ರ ಏಷ್ಯಾ ಕಪ್ನ ಭಾಗವಾಗಿದ್ದರು, ಮೊದಲು ವೆಸ್ಟ್ ಇಂಡೀಸ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿಯೂ ಆಡಿದ್ದರು. ತರುವಾಯ, ಬುಮ್ರಾ ಆಸ್ಟ್ರೇಲಿಯಾ ವಿರುದ್ಧದ ಟಿ20ಐ ಸರಣಿಯಲ್ಲೂ ಆಡಿದರು, ಆದರೆ ಅವರು ಏಕದಿನ ಪಂದ್ಯಗಳನ್ನು ತಪ್ಪಿಸಿಕೊಂಡರು. ಭಾರತದ ಏಕದಿನ ತಂಡ: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್…
ಬೆಂಗಳೂರು: ಯಕ್ಷಗಾನ ಕಲಾವಿದರಲ್ಲಿ ಕೆಲವರು ಸಲಿಂಗಕಾಮಿಗಳು ಎನ್ನುವಂತ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರ ವಿವಾದಾತ್ಮಕ ಹೇಳಿಕೆ ಬಗ್ಗೆ ಚಿಂತಕ ಡಾ.ವಡ್ಡಗೆರೆ ನಾಗರಾಜಯ್ಯ ಹೇಳಿದ್ದೇನು ಅಂತ ಮುಂದೆ ಓದಿ. ಈ ಬಗ್ಗೆ ಚಿಂತಕ ಡಾ.ವಡ್ಡಗೆರೆ ನಾಗರಾಜಯ್ಯ ಅವರು ತಮ್ಮ ಫೇಸ್ ಬುಕ್ ಮುಖಪುಟದಲ್ಲಿ ಬರೆದುಕೊಂಡಿದ್ದು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ. ಪುರುಷೋತ್ತಮ ಬಿಳಿಮಲೆಯವರು, ಯಕ್ಷಗಾನ ಕಲಾವಿದರ ಸಂಕಟಗಳನ್ನು ಕುರಿತು ಮಂಡಿಸಿರುವ ವಿಚಾರಗಳಲ್ಲಿ ‘ಸಲಿಂಗಕಾಮ’ ಕುರಿತಾದ ಹೇಳಿಕೆಯೊಂದು ವಿವಾದವನ್ನು ಸೃಷ್ಟಿಸಿದೆ. ಪ್ರೊ.ಬಿಳಿಮಲೆಯವರು ತಮ್ಮ ಬಾಲ್ಯಕಾಲದಿಂದ ಮತ್ತು ಈಗಲೂ ಯಕ್ಷಗಾನದ ನಂಟನ್ನು ಉಳಿಸಿಕೊಂಡು ಬಂದಿದ್ದಾರೆ. ಪ್ರೊ.ಬಿಳಿಮಲೆ ಅವರು, ಯಕ್ಷಗಾನ ಕಲಾವಿದರ ಆತ್ಮಗೌರವ ಮತ್ತು ಸಾಮಾಜಿಕ ಘನತೆಯ ಸದಾಶಯ ಇರಿಸಿಕೊಂಡು ಆಡಿರುವ ಮಾತಿನ ಸಾಂದರ್ಭಿಕ ಹಿನ್ನೆಲೆಯನ್ನು ಅರ್ಥಮಾಡಿಕೊಳ್ಳದ ಕೆಲವರು ವಿವಾದಕ್ಕೆ ಗುರಿಪಡಿಸಿರುವುದು ಆಶ್ಚರ್ಯದ ಸಂಗತಿ ಎಂದಿದ್ದಾರೆ. ಪ್ರೊ.ಪುರುಷೋತ್ತಮ ಬಿಳಿಮಲೆಯವರು ಯಕ್ಷಗಾನದಲ್ಲಿ ಪಾತ್ರದಾರಿಯಾಗಿ ವೇಷ ಕಟ್ಟಿಕೊಂಡು ಕುಣಿದು, ಅರ್ಥದಾರಿಯಾಗಿ ವ್ಯಾಖ್ಯಾನ ಮಾಡುತ್ತಾ ಹಾಗೂ ಸಂಶೋಧಕನಾಗಿ ಯಕ್ಷಗಾನ ಕಲೆಯನ್ನು ಕುರಿತು ಬರೆಯುತ್ತಾ ರಂಗಭೂಮಿ ಮತ್ತು…
ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದಂತ ಪುರುಷೋತ್ತಮ ಬಿಳಿಮಲೆ ಅವರು ಯಕ್ಷಗಾನ ಕಲಾವಿಧರಲ್ಲಿ ಬಹುತೇಕರು ಸಲಿಂಗಿಗಳು ಎಂಬುದಾಗಿ ಹೇಳಿಕೆ ನೀಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಈ ಹೇಳಿಕೆಯ ಹಿನ್ನಲೆಯಲ್ಲಿ ಚರ್ಚೆಯಾಗಬೇಕಿರುವುದು ಸಲಿಂಗ ಕಾಮದ ಬಗ್ಗೆ ಅಲ್ಲ. ಯಕ್ಷಗಾನದಲ್ಲಿ ಯಾಕೆ ಮಹಿಳಾ ಕಲಾವಿದರು ಇಲ್ಲ ಎನ್ನುವ ಬಗ್ಗೆ ಎಂಬುದಾಗಿ ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಹೇಳಿದ್ದಾರೆ. ಈ ಕುರಿತಂತೆ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವಂತ ದಿನೇಶ್ ಅಮೀನ್ ಮಟ್ಟು ಅವರು, ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ.ಪುರುಷೋತ್ತಮ ಬಿಳಿಮಲೆ ಅವರ ವಿರುದ್ದ ಯಕ್ಷಗಾನ ಕಲಾವಿದರೊಬ್ಬರು ಮಂಗಳೂರಿನ ಉರ್ವ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಆ ಪೊಲೀಸ್ ಠಾಣೆಯ ಅಧಿಕಾರಿಗಳ ಗೊಂದಲವನ್ನು ನಿವಾರಿಸಿ ಅವರ ಕೆಲಸ ಸುಲಭಗೊಳಿಸುವ ಉದ್ದೇಶದಿಂದ ಕೆಲವು ವಿಷಯಗಳನ್ನು ಅವರ ಗಮನಕ್ಕೆ ತರುತ್ತಿದ್ದೇನೆ ಎಂದಿದ್ದಾರೆ. ಒಬ್ಬ ವ್ಯಕ್ತಿಯನ್ನು ಕಳ್ಳ, ಸುಳ್ಳ, ವಂಚಕ, ಭ್ರಷ್ಟ, ರೇಪಿಸ್ಟ್ ಎಂದೆಲ್ಲ ಕರೆಯುವುದು ಅಪರಾಧ. ಯಾಕೆಂದರೆ ಈ ಕೃತ್ಯಗಳೆಲ್ಲ ಭಾರತೀಯ ದಂಡ ಸಂಹಿತೆಯಡಿ ಅಪರಾಧಗಳು. ಆದರೆ…
ನವದೆಹಲಿ: ಭಾರತೀಯ ಕ್ರಿಕೆಟ್ ತಾರೆ ಸ್ಮೃತಿ ಮಂಧಾನ ಮತ್ತು ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಅವರ ವಿವಾಹವನ್ನು ಅವರ ತಂದೆಯ ಅನಿರೀಕ್ಷಿತ ಅನಾರೋಗ್ಯದ ನಂತರ ಮುಂದೂಡಲಾಗಿದೆ. ಮಂಧಾನ ಅವರ ವ್ಯವಸ್ಥಾಪಕ ತುಹಿನ್ ಮಿಶ್ರಾ ಈ ಬೆಳವಣಿಗೆಯನ್ನು ದೃಢಪಡಿಸಿದ್ದಾರೆ. “ಸ್ಮೃತಿ ಮಂಧಾನ ಅವರ ತಂದೆ ಇಂದು ಬೆಳಿಗ್ಗೆಯಿಂದ ಆರೋಗ್ಯವಾಗಿರಲಿಲ್ಲ. ಅವರನ್ನು ಸಾಂಗ್ಲಿಯ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಮತ್ತು ವಿವಿಧ ಪರೀಕ್ಷೆಗಳನ್ನು ನಡೆಸಲಾಗುತ್ತಿರುವಾಗ ಅವರು ಪ್ರಸ್ತುತ ವೀಕ್ಷಣೆಯಲ್ಲಿದ್ದಾರೆ” ಎಂದು ಮಂಧಾನ ಅವರ ವ್ಯವಸ್ಥಾಪಕರು ಇಂಡಿಯಾ ಟುಡೇಗೆ ತಿಳಿಸಿದರು. “ಈ ಸಂದರ್ಭಗಳಲ್ಲಿ ಅವರು ಮದುವೆಯಾಗಲು ಬಯಸುವುದಿಲ್ಲ ಎಂದು ಮಂಧಾನ ಅವರಿಗೆ ಸ್ಪಷ್ಟವಾಗಿತ್ತು, ಅದಕ್ಕಾಗಿಯೇ ಮದುವೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ” ಎಂದು ಅವರು ಹೇಳಿದರು. ಮಂಧಾನ ಮತ್ತು ಮುಚ್ಚಲ್ ಮೂಲತಃ ನವೆಂಬರ್ 23 ರ ಭಾನುವಾರದಂದು ಆಪ್ತ ಸ್ನೇಹಿತರು ಮತ್ತು ಕುಟುಂಬಸ್ಥರ ನಡುವೆ ವಿವಾಹವಾಗಲು ನಿರ್ಧರಿಸಿದ್ದರು. ಆದಾಗ್ಯೂ, ವಿವಾಹವನ್ನು ಈಗ ಮುಂದೂಡಲಾಗಿದೆ ಮತ್ತು ಹೊಸ ದಿನಾಂಕದ ಬಗ್ಗೆ ಇನ್ನೂ ಯಾವುದೇ ದೃಢೀಕರಣವಿಲ್ಲ. ಕಳೆದ ಎರಡು ದಿನಗಳಿಂದ ಆಚರಣೆಗಳು…
ಪಶ್ಚಿಮ ಬಂಗಾಳ: ರಾಜ್ಯ ಮತದಾರರ ಪಟ್ಟಿ ಪರಿಷ್ಕರಣೆಯ ವೇಳೆಯಲ್ಲೇ ಪಾವಡವೊಂದು ನಡೆದಿದೆ. ಬರೋಬ್ಬರಿ 37 ವರ್ಷಗಳ ಹಿಂದೆ ನಾಪತ್ತೆಯಾಗಿದ್ದಂತ ಪುತ್ರನೊಬ್ಬ, ಕುಟುಂಬದೊಂದಿಗೆ ಸೇರಿದ್ದಾನೆ. ಅದು ಹೇಗೆ ಗೊತ್ತಾ? ಮುಂದೆ ಓದಿ. ಪಶ್ಚಿಮ ಬಂಗಾಳದ ಪುರುಲಿಯಾದ ಗೊಬೊರಾಂಡಾ ಗ್ರಾಮದ ಚಕ್ರವರ್ತಿ ಕುಟುಂಬದ ಹಿರಿಯ ಪುತ್ರ ವಿವೇಕ್ ಚಕ್ರವರ್ತಿ ಎಂಬುವರು ಕಳೆದ 1988ರಲ್ಲಿ ಮನೆಯಿಂದ ಹೋದವರು ವಾಪಾಸ್ ಆಗಿರಲಿಲ್ಲ. ವಿವೇಕ್ ಚಕ್ರವರ್ತಿ ಪತ್ತೆಗಾಗಿ ಕುಟುಂಬಸ್ಥರು ಅಲೆದಾಡಿಗೂ ಎಲ್ಲಿಯೂ ಸಿಗದೇ ನಾಪತ್ತೆಯಾಗಿದ್ದರು. ಅವರ ಆಸೆಯನ್ನೇ ಕುಟುಂಬಸ್ಥರು ಕೈಬಿಟ್ಟಿದ್ದರು. ವಿವೇಕ್ ಚಕ್ರವರ್ತಿ ಅವರ ಕಿರಿಯ ಸಹೋದರ ಪ್ರದೀಪ್ ಚಕ್ರವರ್ತಿ ತಮ್ಮ ಪುರುಲಿಯಾದ ಗೊಬೊರಾಂಡದ ಬೂತ್ ಮಟ್ಟದ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರಿಗೆ ಕೋಲ್ಕತ್ತಾದಲ್ಲಿ ವಾಸವಿದ್ದಂತ ವಿವೇಕ್ ಅವರ ಪುತ್ರನು ದಾಖಲೆಯ ಸಹಾಯಕ್ಕಾಗಿ ಬಿಎಲ್ಓ ಪ್ರದೀಪ್ ಚಕ್ರವರ್ತಿಗೆ ದೂರವಾಣಿ ಕರೆ ಮಾಡಿ ವಿಚಾರಿಸಿದ್ದಾರೆ. ಆತ ನೀಡಿದಂತ ಮಾಹಿತಿಯಿಂದ ಈತ ತನ್ನ ಅಣ್ಣನ ಮಗ ಎಂಬುದಾಗಿ ತಿಳಿದು ಪ್ರದೀಪ್ ಚಕ್ರವರ್ತಿ ಭಾವುಕರಾಗಿದ್ದಾರೆ. ಜೊತೆಗೆ 37 ವರ್ಷಗಳ ಹಿಂದೆ ನಾಪತ್ತೆಯಾಗಿದ್ದಂತ ತನ್ನ ಅಣ್ಣ…
ಶಿವಮೊಗ್ಗ : ಶಿವಮೊಗ್ಗ ಸಿನಿಮಾ ಕ್ಷೇತ್ರಕ್ಕೆ ಅಪಾರವಾದ ಕೊಡುಗೆ ನೀಡುತ್ತಿದ್ದು, ಈ ಉದ್ದೇಶದಿಂದ ಶಿವಮೊಗ್ಗದಲ್ಲಿ ಕಂಠೀರವ ಸ್ಟುಡಿಯೋವನ್ನು ನಿರ್ಮಾಣ ಮಾಡಲು ನಿಗಮದಿಂದ ರೂಪರೇಷಗಳನ್ನು ಸಿದ್ದಪಡಿಸಲಾಗುತ್ತಿದೆ ಎಂದು ಕಂಠೀರವ ಸ್ಟುಡಿಯೋ ನಿಗಮದ ಅಧ್ಯಕ್ಷರಾದ ಮೊಹಬೂಬ್ ಭಾಷಾ ತಿಳಿಸಿದರು. ಭಾನುವಾರ ನಗರದ ಪ್ರತಿಕಾ ಭವನದಲ್ಲಿ ಏರ್ಪಡಿಸಲಾಗಿದ್ದ ಪ್ರತಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕಂಠೀರವ ಸ್ಟುಡಿಯೋವನ್ನು ರಾಜ್ಯ ಮಟ್ಟದಲ್ಲಿ ವಿಸ್ತರಣೆ ಮಾಡುವ ಉದ್ದೇಶವನ್ನು ನಿಗಮ ಹೊಂದಿದ್ದು, ಇದಕ್ಕಾಗಿ ಜಿಲ್ಲಾವಾರುಗಳಲ್ಲಿ ಬಹಳಷ್ಟು ಬೇಡಿಕೆಯೂ ಸಹ ಇತ್ತು. ಹಾಗಾಗಿ ಕಂಠೀರವ ಸ್ಟುಡಿಯೋವನ್ನು ಶಿವಮೊಗ್ಗ ಜಿಲ್ಲೆಯಲ್ಲಿ ನಿರ್ಮಾಣ ಮಾಡಲು ಸಿದ್ದವಾಗಿದ್ದೇವೆ. ಇದಕ್ಕೆ ಸಂಬಂಧಪಟ್ಟಂತೆ ರಾಜ್ಯ ಹಾಗೂ ಜಿಲ್ಲಾ ಹೆದ್ದಾರಿಯಲ್ಲಿರುವ 25 ಎಕರೆಯ ಅನುಪಯುಕ್ತವಾಗಿರುವ ಭೂಮಿಯನ್ನು ಸ್ಟುಡಿಯೋ ನಿರ್ಮಾಣ ಕೊಡಿ ಎಂದು ಡಿಸಿ ಮನವಿ ಮಾಡಲಾಗಿದೆ ಎಂದರು. ಶಿವಮೊಗ್ಗ ಕನ್ನಡದಲ್ಲಿ ಶ್ರೀಮಂತ ಜಿಲ್ಲೆ. ಇಲ್ಲಿ ಸಿನಿಮಾ ಕಲಾವಿದರು ತುಂಬಾ ಇದ್ದಾರೆ. ಇವೆಲ್ಲರನ್ನೂ ಜಾಗತೀಕ ಮಟ್ಟಕ್ಕೆ ತೆಗೆದುಕೊಂಡು ಹೋಗುವ ಉದ್ದೇಶದಿಂದ ಈ ಪ್ರಯತ್ನ ಮಾಡಲಾಗುತ್ತಿದೆ. ಹಾಗೂ ಶಿವಮೊಗ್ಗದಲ್ಲಿ ನಡೆಯುವ ಹೊರಾಂಗಣ ಮತ್ತು ಒಳಾಂಗಣ ಚಿತ್ರೀಕರಣಕ್ಕೆ ಇದು…
ಬೆಂಗಳೂರು: ಸಾಧು ವಾಸವಾನಿ ಜಯಂತಿಯ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆದೇಶಿಸಿದೆ. ಹೀಗಾಗಿ ನವೆಂಬರ್.25ರಂದು ಬೆಂಗಳೂರು ನಗರದಲ್ಲಿ ಮಾಂಸ ಸಿಗೋದಿಲ್ಲ. ಈ ಕುರಿತಂತೆ ಜಿ ಬಿ ಎ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ: 25-11-2025 (ಮಂಗಳವಾರ) ದಂದು “ಸಾಧು ವಾಸವಾನಿ ಜಯಂತಿ” ಪ್ರಯುಕ್ತ ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆ ಹಾಗೂ ಮಾಂಸ ಮಾರಾಟ ಮಳಿಗೆಗಳಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತರವರು ತಿಳಿಸಿದ್ದಾರೆ. https://kannadanewsnow.com/kannada/what-are-the-rules-for-appointing-legislative-pas-here-is-the-information/ https://kannadanewsnow.com/kannada/follow-these-steps-to-link-your-pan-number-with-your-bank-account/
ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಎಚ್ಚರಿಕೆ ವಹಿಸುವಂತೆ ಹಿರಿಯ ಅಧಿಕಾರಿಗಳಿಗೆ ಕೆಲ ಸೂಚನೆಗಳನ್ನು ಕೊಟ್ಟಿದ್ದೇನೆ. ಒಂದು ವೇಳೆ ಅಪರಾಧ ಚಟುವಟಿಕೆಯಲ್ಲಿ ಪೊಲೀಸರು ಭಾಗಿಯಾದರೆ ಮುಲಾಜಿಲ್ಲದೆ ಸೇವೆಯಿಂದ ವಜಾಗೊಳಿಸುವುದಾಗಿ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಎಚ್ಚರಿಕೆ ನೀಡಿದ್ದಾರೆ. ಸದಾಶಿವನಗರದ ನಿವಾಸದಲ್ಲಿ, ನಗರ ಪೊಲೀಸ್ ಆಯುಕ್ತರಾದ ಸೀಮಾಂತ್ ಕುಮಾರ್ ಸಿಂಗ್, ಜಂಟಿ ಪೊಲೀಸ್ ಆಯುಕ್ತರಾದ ಅಜಯ್ ಹಿಲೋರಿ, ವಂಶಿಕೃಷ್ಣ ಅವರೊಂದಿಗೆ ಪ್ರಕರಣದ ತನಿಖೆಯ ಕುರಿತು ಚರ್ಚಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, 7.11 ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಏಳು ಆರೋಪಿಗಳನ್ನು ಬೆಂಗಳೂರು ನಗರ ಪೊಲೀಸರು ಹಿಡಿದಿದ್ದಾರೆ. ಇನ್ನು ಕೆಲವರು ಸಿಗಬೇಕಿದೆ. ಪ್ರಕರಣದಲ್ಲಿ ಇಲಾಖೆಯ ಒಬ್ಬ ವ್ಯಕ್ತಿ ಭಾಗಿಯಾಗಿದ್ದ. ಮೂರು ವಿಶೇಷ ತಂಡಗಳು ತನಿಖೆ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ. ನಗರ ಪೊಲೀಸ್ ಆಯುಕ್ತರು ಸೇರಿದಂತೆ ಪ್ರಕರಣದ ಜವಾಬ್ದಾರಿ ವಹಿಸಿಕೊಂಡ ಇಬ್ಬರು ಜಂಟಿ ಪೊಲೀಸ್ ಆಯುಕ್ತರಿಗೆ, ಇಬ್ಬರು ಡಿಸಿಪಿಗಳು ಮತ್ತು 200ಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಬೆಂಗಳೂರಿನಲ್ಲಿ ಇಂಥ ಘಟನೆಯಾದಾಗ ಯಾರು ಕೂಡ ನಂಬಲು ಸಾಧ್ಯವಾಗಿರಲಿಲ್ಲ.…














