Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಹುಬ್ಬಳ್ಳಿ ಘಟನೆಯನ್ನು ರಾಷ್ಟ್ರೀಯ ಮಹಿಳಾ ಆಯೋಗ (NCW) ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡಿರುವುದು, ಮಹಿಳೆಯರ ಘನತೆಯನ್ನು ರಕ್ಷಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಸಂಪೂರ್ಣ ವೈಫಲ್ಯಕ್ಕೆ ಜೀವಂತ ಸಾಕ್ಷಿಯಾಗಿದೆ ಎಂಬುದಾಗಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಪೊಲೀಸ್ ಬಂಧನದ ಸಮಯದಲ್ಲಿ ಮಹಿಳೆಯೊಬ್ಬರು ಅತ್ಯಂತ ಸಂಕಷ್ಟದ ಮತ್ತು ಅವಮಾನಕರ ಸ್ಥಿತಿಯಲ್ಲಿರುವ ದೃಶ್ಯಗಳು ಹೊರಬಂದಾಗ, ಒಂದು ಜವಾಬ್ದಾರಿಯುತ ಸರ್ಕಾರ ಸಂವೇದನಾಶೀಲತೆಯಿಂದ ಪಾರದರ್ಶಕವಾಗಿ ನ್ಯಾಯವನ್ನು ಒದಗಿಸುವ ಮಾಡಬೇಕಿತ್ತು. ಆದರೆ ಲಜೆಗೆಟ್ಟ ಕಾಂಗ್ರೆಸ್ ಸರ್ಕಾರ ಮಾಡಿದ್ದು, ನಿರಾಕರಣೆ ಮತ್ತು ಸಾರ್ವಜನಿಕ ಆಕ್ರೋಶವನ್ನು ಲಘುವಾಗಿ ಕಾಣುವ ಪ್ರಯತ್ನ ಎಂದು ಹೇಳಿದ್ದಾರೆ. ಸಾಂವಿಧಾನಿಕ ಸಂಸ್ಥೆಗಳು ರಾಜ್ಯ ಸರ್ಕಾರಕ್ಕೆ ಅದರ ಮೂಲಭೂತ ಕರ್ತವ್ಯವಾದ ನಾಗರೀಕರ ಘನತೆ ಮತ್ತು ವೈಯಕ್ತಿಕ ಸ್ವಾತಂತ್ರ್ಯವನ್ನು ರಕ್ಷಿಸುವ ಬಗ್ಗೆ ನೆನಪಿಸುವಂತಹ ಪರಿಸ್ಥಿತಿ ಬಂದಿರುವುದು ಅತ್ಯಂತ ದುರದೃಷ್ಟಕರ. ಈ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸುವಂತೆ, ನ್ಯಾಯಯುತ ಮತ್ತು ಕಾಲಮಿತಿಯ ತನಿಖೆ ನಡೆಸುವಂತೆ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ, ಮತ್ತು ಸಂತ್ರಸ್ತೆಗೆ ಸೂಕ್ತ…
ನವದೆಹಲಿ: ಗುರುವಾರದ ಇಂದು ಭಾರತೀಯ ಷೇರು ಮಾರುಕಟ್ಟೆಯು ತೀವ್ರ ಮಾರಾಟಕ್ಕೆ ಸಾಕ್ಷಿಯಾಯಿತು. ಇದು ದುರ್ಬಲ ಜಾಗತಿಕ ಮಾರುಕಟ್ಟೆ ಭಾವನೆಯನ್ನು ಪ್ರತಿಬಿಂಬಿಸುತ್ತದೆ. ಸೆನ್ಸೆಕ್ಸ್ ನಾಲ್ಕು ತಿಂಗಳಿನಲ್ಲಿಯೇ ಒಂದು ದಿನದ ಅತಿದೊಡ್ಡ ಕುಸಿತವನ್ನು ಶೇಕಡಾವಾರು ಪ್ರಮಾಣದಲ್ಲಿ ಅನುಭವಿಸಿತು, ಆದರೆ ನಿಫ್ಟಿ 50 ಕುಸಿತದ ಸಮಯದಲ್ಲಿ 25,900 ಅನ್ನು ದಾಟಿತು. ಭಾರಿ ಮಾರಾಟವು 30-ಷೇರುಗಳ ಪ್ಯಾಕ್ ಸೆನ್ಸೆಕ್ಸ್ ಅನ್ನು 780 ಅಂಕಗಳು ಅಥವಾ 0.92% ನಷ್ಟು ಕುಸಿತದೊಂದಿಗೆ 84,180.96 ಕ್ಕೆ ತಳ್ಳಿತು. ಕ್ಯಾಪಿಟಲ್ ಮಾರ್ಕೆಟ್ನ ದತ್ತಾಂಶವು ಆಗಸ್ಟ್ 26, 2025 ರಂದು ಸೂಚ್ಯಂಕವು 1.04% ನಷ್ಟು ನಷ್ಟವನ್ನು ಅನುಭವಿಸಿದ ನಂತರ ಸೂಚ್ಯಂಕದ ಒಂದು ದಿನದ ಅತಿದೊಡ್ಡ ಕುಸಿತವಾಗಿದೆ ಎಂದು ತೋರಿಸುತ್ತದೆ. ನಿಫ್ಟಿ 50 ದಿನವನ್ನು 264 ಅಂಕಗಳು ಅಥವಾ 1.01% ನಷ್ಟು ನಷ್ಟದೊಂದಿಗೆ 25,876.85 ಕ್ಕೆ ಕೊನೆಗೊಳಿಸಿತು. ಬಿಎಸ್ಇ ಮಿಡ್ಕ್ಯಾಪ್ ಮತ್ತು ಸ್ಮಾಲ್ಕ್ಯಾಪ್ ಸೂಚ್ಯಂಕಗಳು ತಲಾ 2% ರಷ್ಟು ಕುಸಿದವು. ಬಿಎಸ್ಇ-ಪಟ್ಟಿಮಾಡಿದ ಸಂಸ್ಥೆಗಳ ಒಟ್ಟಾರೆ ಮಾರುಕಟ್ಟೆ ಬಂಡವಾಳೀಕರಣವು ಹಿಂದಿನ ವಹಿವಾಟಿನಲ್ಲಿ ಸುಮಾರು ₹480 ಲಕ್ಷ ಕೋಟಿಗಳಿಂದ…
ಅಮೇರಿಕಾ: ರಷ್ಯಾದ ಮಾಧ್ಯಮಗಳು ಉಲ್ಲೇಖಿಸಿರುವ ಮೂಲಗಳ ಪ್ರಕಾರ, ಉತ್ತರ ಅಟ್ಲಾಂಟಿಕ್ನಲ್ಲಿ ಅಮೆರಿಕ ವಶಪಡಿಸಿಕೊಂಡ ರಷ್ಯಾ ಸಂಬಂಧಿತ ತೈಲ ಟ್ಯಾಂಕರ್ ಮರಿನೆರಾದಲ್ಲಿ ಮೂವರು ಭಾರತೀಯ ನಾಗರಿಕರು ಸಿಬ್ಬಂದಿ ಇದ್ದಾರೆ. ಆರ್ಟಿ ಮೂಲದ ಪ್ರಕಾರ, ಮರಿನೆರಾದ ಸಿಬ್ಬಂದಿ 17 ಉಕ್ರೇನಿಯನ್ ನಾಗರಿಕರು, ಆರು ಜಾರ್ಜಿಯನ್ ನಾಗರಿಕರು, ಮೂವರು ಭಾರತೀಯ ನಾಗರಿಕರು ಮತ್ತು ಇಬ್ಬರು ರಷ್ಯಾದ ನಾಗರಿಕರನ್ನು ಒಳಗೊಂಡಿದೆ. ಗಯಾನ ಧ್ವಜದಡಿಯಲ್ಲಿ ಖಾಸಗಿ ವ್ಯಾಪಾರಿಯೊಬ್ಬರು ವಶಪಡಿಸಿಕೊಂಡ ವಾಣಿಜ್ಯ ಹಡಗನ್ನು 20 ಉಕ್ರೇನಿಯನ್ನರು, ಆರು ಜಾರ್ಜಿಯನ್ನರು – ಅವರಲ್ಲಿ ಕ್ಯಾಪ್ಟನ್ – ಮತ್ತು ಇಬ್ಬರು ರಷ್ಯಾದ ನಾಗರಿಕರು ಸೇರಿದಂತೆ 28 ಸಿಬ್ಬಂದಿಯನ್ನು ಹೊತ್ತೊಯ್ದಿದ್ದಾರೆ ಎಂದು ವರದಿ ತಿಳಿಸಿದೆ. https://twitter.com/RT_com/status/2009207924409946283 ರಷ್ಯಾದ ನೌಕಾಪಡೆಯ ಬೆಂಗಾವಲಿನ ಹೊರತಾಗಿಯೂ ಅಮೆರಿಕ ಟ್ಯಾಂಕರ್ ವಶ ವೆನೆಜುವೆಲಾ ಬಳಿ ಪ್ರಾರಂಭವಾದ ಬೆನ್ನಟ್ಟುವಿಕೆಯ ನಂತರ, “ಯುಎಸ್ ಫೆಡರಲ್ ನ್ಯಾಯಾಲಯ ಹೊರಡಿಸಿದ ವಾರಂಟ್ಗೆ ಅನುಸಾರವಾಗಿ” ಉತ್ತರ ಅಟ್ಲಾಂಟಿಕ್ನಲ್ಲಿ ಟ್ಯಾಂಕರ್ ಅನ್ನು ವಶಪಡಿಸಿಕೊಂಡಿರುವುದಾಗಿ ಯುಎಸ್ ಮಿಲಿಟರಿ ಬುಧವಾರ ದೃಢಪಡಿಸಿತು. ಜಲಾಂತರ್ಗಾಮಿ ಸೇರಿದಂತೆ ರಷ್ಯಾದ ನೌಕಾ ಸ್ವತ್ತುಗಳಿಂದ ಹಡಗನ್ನು ಕರೆದೊಯ್ಯಲಾಗುತ್ತಿದೆ…
ಬೆಂಗಳೂರು: ಹಣಕಾಸು ಇಲಾಖೆಯವರು ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ಎರಡು ತಿಂಗಳ ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಕುರಿತಂತೆ ಈಗಾಗಲೇ ಮುಖ್ಯಮಂತ್ರಿಗಳ ಬಳಿ ಮಾತನಾಡಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳು ಕೂಡ ಸದನದಲ್ಲಿ ಉತ್ತರ ಕೊಟ್ಟಿದ್ದಾರೆ ಎಂದರು. ಅನರ್ಹ ರೇಷನ್ ಕಾರ್ಡ್ ರದ್ದಾಗಿರುವ ಕಾರಣ ಕೆಲವರಿಗೆ ಹಣ ಸಂದಾಯವಾಗಿಲ್ಲ. ಆಹಾರ ಇಲಾಖೆಯಿಂದ ಹೊಸ ಡೇಟಾ ಬಂದ ತಕ್ಷಣ ಅವರಿಗೂ ದುಡ್ಡು ರಿಲೀಸ್ ಆಗಲಿದೆ. ರೇಷನ್ ಕಾರ್ಡ್ ಆಧರಿಸಿ ನಾವು ಗೃಹಲಕ್ಷ್ಮಿ ಫಲಾನುಭವಿಗಳಿಗೆ ದುಡ್ಡು ಹಾಕುತ್ತಿದ್ದೇವೆ. ಕೆಲ ರೇಷನ್ ಕಾರ್ಡ್ ರದ್ದಾದಾಗ ದುಡ್ಡು ಹೋಲ್ಡ್ ಆಗಿರಬಹುದು. ಆದರೆ ಅವರು ತೆರಿಗೆ ಪಾವತಿದಾರರಲ್ಲದಿದ್ದಲ್ಲಿ ಹಣ ಸಿಗಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು. ಗೃಹಲಕ್ಷ್ಮೀ ಸಹಕಾರ ಸಂಘಕ್ಕೆ…
ಬೆಂಗಳೂರು : ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವತಿಯಿಂದ 2024-25ನೇ ಸಾಲಿನ ಡಿವಿಡೆಂಡ್ 77,17,50,000 ರೂ.ಅನ್ನು ಇಂಧನ ಸಚಿವ ಕೆ.ಜೆ ಜಾರ್ಜ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ ಸಲ್ಲಿಸಿದರು. ಕ್ರೆಡಲ್ 2024-25ನೇ ಸಾಲಿನಲ್ಲಿ 257.25 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು, ಲಾಭದ ಶೇ. 30ರಷ್ಟು ಡಿವಿಡೆಂಡ್ 77,17,50,000 ರೂ. ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಪಿಸಿಎಲ್ ಕಚೇರಿಯಲ್ಲಿ ಸ್ವೀಕರಿಸಿದರು. ಇದೇ ವೇಳೆ ಕ್ರೆಡಲ್ ವತಿಯಿಂದ ಮಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ. ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕ್ರೆಡಲ್ ಅಧ್ಯಕ್ಷರೂ ಆಗಿರುವ ಶಾಸಕ ಟಿ.ಡಿ. ರಾಜೇಗೌಡ, ಇಂಧನ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. https://kannadanewsnow.com/kannada/many-important-decisions-including-a-account-for-everyone-were-taken-in-todays-state-cabinet-meeting-here-are-the-key-highlights/ https://kannadanewsnow.com/kannada/breaking-screaming-over-priests-rights-against-the-neighbors-cannot-be-filed-as-a-case-high-court-important-verdict/
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ಸಂಪುಟ ಸಭೆಯಲ್ಲಿ ರಾಜ್ಯದ ಎಲ್ಲಾ ಬಿ-ಖಾತಾ ಆಸ್ತಿ ಮಾಲೀಕರಿಗೆ ಎ-ಖಾತಾ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. ಇದಲ್ಲದೇ ಇನ್ನೂ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಆ ಎಲ್ಲಾ ಇಂದಿನ ರಾಜ್ಯ ಸಚಿವ ಸಂಪುಟ ಸಭೆ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಇಂದಿನ ರಾಜ್ಯ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ, ಇಂದು 27 ವಿಷಯಗಳ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ. ಸಾಬೂನು ತಯಾರಿಕೆ ಯಂತ್ರ ಖರೀದಿಗೆ ಒಪ್ಪಿಗೆ ನೀಡಲಾಗಿದೆ. 17 ಕೋಟಿ ವೆಚ್ಚದಲ್ಲಿ ಖರೀದಿಗೆ ಒಪ್ಪಿಗೆ ನೀಡಲಾಗಿದೆ. ಕೆಎಸ್ ಐಡಿಎಲ್ ಗೆ ಖರೀದಿಗೆ ಒಪ್ಪಿಗೆ ನೀಡಲಾಗಿದೆ ಎಂದರು. ಹಸಿತ್ಯಾಜ್ಯ ಸಂಸ್ಕರಣೆಗೆ ಅನುಮತಿ ನೀಡಲಾಗಿದೆ. 150 ಟಿಪಿಟಿ ಸಿಬಿಜಿ ಘಟಕಕ್ಕೆ ಅನುಮತಿಸಲಾಗಿದೆ. ಗೇಲ್ ಸಂಸ್ಥೆ ಸ್ಥಾಪಿಸುತ್ತಿರುವ ಘಟಕ ಇದಾಗಿದೆ ಎಂದರು. ಕಲಬುರಗಿಯಲ್ಲಿ ಸಹಕಾರ ಭವನವನ್ನು 10 ಕೋಟಿ ವೆಚ್ಚದಲ್ಲಿ ಭವನ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ. ಪಿಎಂಎಬಿಹೆಚ್ ಐ ಯೋಜನೆಯಡಿ 196 ಗ್ರಾಮಾಂತರ ವೆಲ್ ನೆಸ್ ಸೆಂಟರ್…
ಸಾಲ ಅಂತ ಇದ್ರೆ ಅದು ನಮ್ಮನ್ನು ನಿದ್ರೆ ಮಾಡಲು ಬಿಡುವುದಿಲ್ಲ ಯಾವಗ ಸಾಲ ತೀರುತ್ತದೆ ಎಂಬ ಚಿಂತೆ ನಿಮ್ಮನ್ನು ಕಾಡುತ್ತಿದೇಯೆ..!! ಸಾಲ ಲಕ್ಷ ಇರಲಿ ಕೋಟಿ ಇರಲಿ ಎಲೆ ಲವಂಗ ಏಲಕ್ಕಿ ಪ್ರಯೋಗ ಮಾಡಿ । ಸಾಲ ತೀರೋದು ಗ್ಯಾರಂಟಿ 1)ಸಾಲ ಲಕ್ಷ ಕೋಟಿ ಇರಲಿ ಎಲೆ ಲವಂಗ ಏಲಕ್ಕಿಯ ಪ್ರಯೋಗ ಮಾಡಿದರೆ ಸಾಲತಿರುವುದು 2)ಪಕ್ಕಾ ಸಾಲ ಅಂತ ಇದ್ರೆ ಅದು ನಮ್ಮನ್ನು ನಿದ್ರೆ ಮಾಡಲು ಬಿಡುವುದಿಲ್ಲ ಯಾವಗ ಸಾಲ ತೀರುತ್ತದೆ ಎಂಬ ಚಿಂತೆ ನಮ್ಮನ್ನು ಕಾಡುತ್ತದೆ ಸಾಲ ಇಲ್ಲದ ಜೀವನ ಅತಿ ಸುಂದರ ಜೀವನ ಎನ್ನಬಹುದು ಸಾಲ ತೆಗೆದುಕೊಳ್ಳುವುದು ತುಂಬಾ ಸುಲಭ ಆದರೆ ಅದನ್ನು ತೀರಿಸುವುದು ತುಂಬಾ ಕಷ್ಟಕರವಾದ ಕೆಲಸ ಎಂದು ಎಲ್ಲರಿಗೂ ಗೊತ್ತು ಕೆಲವೊಮ್ಮೆ ಪರಿಸ್ಥಿತಿಗಳು ಹೇಗೆ ಬರುತ್ತಿದೆ ಎಂದರೆ ತಗೊಂಡ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ…
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮೀಣ ನೀರು ಸರಬರಾಜು ವಿಭಾಗದ ಮೂಲಕ ಚಾಮರಾಜನಗರ ತಾಲ್ಲೂಕಿನ 166 ಗ್ರಾಮಗಳು ಮತ್ತು ಗುಂಡ್ಲುಪೇಟೆ ತಾಲ್ಲೂಕಿನ 163 ಗ್ರಾಮಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ 95 ಗ್ರಾಮಗಳಲ್ಲಿ ಬಹುಗ್ರಾಮ ನೀರು ಸರಬರಾಜು ಯೋಜನೆಯಡಿ ಮನೆ ಮನೆಗೆ ನೀರು ಪೂರೈಸುವ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಚಾಮರಾಜನಗರ ತಾಲ್ಲೂಕಿನ 166 ತಾಲ್ಲೂಕುಗಳ ಯೋಜನೆಗೆ 33.04 ಕೋಟಿ ರೂ., ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ 131 ಗ್ರಾಮಗಳು ಹಾಗೂ ಮತ್ತು ಮಾರ್ಗ ಮಧ್ಯದ 32 ಗ್ರಾಮಗಳ ಯೋಜನೆಗೆ 27.38 ಕೋಟಿ ರೂ., ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಸರವಾಡಿ ಹಾಗೂ ಇತರ 95 ಗ್ರಾಮಗಳ ಯೋಜನೆಗೆ 16.70 ಕೋಟಿ ರೂ ವೆಚ್ಚದಲ್ಲಿ ಬಹುಗ್ರಾಮ ನೀರು…
ಬೆಂಗಳೂರು: ಸಾರಿಗೆ ಬಸ್ ಪ್ರಯಾಣಿಕರಿಗೆ ಸಿಹಿಸುದ್ದಿ ಎನ್ನುವಂತೆ ಕೆ ಎಸ್ ಆರ್ ಟಿ ಸಿಯ ಪ್ರತಿಷ್ಠಿತ ಬಸ್ಸುಗಳ ದರದಲ್ಲಿ ಭಾರೀ ರಿಯಾಯಿತಿಯನ್ನು ಘೋಷಣೆ ಮಾಡಲಾಗಿದೆ. ಸಾರ್ವಜನಿಕ ಪ್ರಯಾಣಿಕರಿಗೆ ಕರಾರಸಾ ನಿಗಮವು ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸುತ್ತಿದ್ದು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ನಿಗಮದ ವತಿಯಿಂದ ಆಯ್ದ ಮಾರ್ಗಗಳಾದ ಬೆಂಗಳೂರು-ಮಂಗಳೂರು, ಬೆಂಗಳೂರು-ಕುಂದಾಪುರ, ಬೆಂಗಳೂರು-ಉಡುಪಿ, ಬೆಂಗಳೂರು-ಧರ್ಮಸ್ಥಳ, ಬೆಂಗಳೂರು-ಕುಕ್ಕೆಸುಬ್ರಮಣ್ಯ, ಬೆಂಗಳೂರು-ಪುತ್ತೂರು, ಬೆಂಗಳೂರು-ಮಡಿಕೇರಿ/ವಿರಾಜಪೇಟೆ. ಬೆಂಗಳೂರು-ದಾವಣಗೆರೆ, ಬೆಂಗಳೂರು-ಶಿವಮೊಗ್ಗ/ಸಾಗರ, ಬೆಂಗಳೂರು-ಚೆನ್ನೈ, ಬೆಂಗಳೂರು-ಹೈದರಾಬಾದ್/ಸಿಕಂದರಾಬಾದ್, ಬೆಂಗಳೂರು-ತಿರುಪತಿ, ಬೆಂಗಳೂರು-ಮಂತ್ರಾಲಯ, ಬೆಂಗಳೂರು-ಪೂನಾ/ಮುಂಬೈ, ಬೆಂಗಳೂರು-ವಿಜಯವಾಡ, ಬೆಂಗಳೂರು-ಎರ್ನಾಕುಲಂ, ಬೆಂಗಳೂರು-ಮದುರೈ, ಬೆಂಗಳೂರು-ಕೋಯಿಮತ್ತೂರು, ಬೆಂಗಳೂರು-ತಿಶ್ರೂರು ಇನ್ನು ಕೆಲವು ಆಯ್ದ ಮಾರ್ಗಗಳಲ್ಲಿ ಕಾರ್ಯಾಚರಣೆ ಮಾಡುತ್ತಿರುವ ಪ್ರತಿಷ್ಠಿತ ಸಾರಿಗೆಗಳಾದ ರಾಜಹಂಸ, ನಾನ್ ಎಸಿ ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್, ಎಸಿ ಸ್ಲೀಪರ್, ಮಲ್ಟಿ ಆಕ್ಸೆಲ್ ಎಸಿ ಸ್ಲೀಪರ್ ಮಾದರಿಯ ಸಾರಿಗೆಗಳ ಪ್ರಯಾಣದರಗಳಲ್ಲಿ ಶೇಕಡ 5 ರಿಂದ 15 ರವರೆಗೆ ರಿಯಾಯಿತಿ ನೀಡಲಾಗಿದೆ. ಸದರಿ ರಿಯಾಯಿತಿಯು ದಿನಾಂಕ:05.01.2026 ರಿಂದ ಜಾರಿಗೆ ಬರಲಿದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್ ksrtc.in ಗೆ ಭೇಟಿ ನೀಡಿ. ಸಾರ್ವಜನಿಕ ಪ್ರಯಾಣಿಕರು…
ಮೈಸೂರು: ಹೆಜ್ಜಾಲ ಮತ್ತು ಕೆಂಗೇರಿ ನಿಲ್ದಾಣಗಳ ನಡುವೆ ನಡೆಯುತ್ತಿರುವ ರೈಲ್ವೆ ಕಾಮಗಾರಿಯ ಕಾರಣದಿಂದ, ಕೆಳಕಂಡ ರೈಲುಗಳನ್ನು ನಿಯಂತ್ರಣ ಮಾಡಲಾಗುತ್ತದೆ: 1. ರೈಲು ಸಂಖ್ಯೆ 16021 ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ – ಅಶೋಕಪುರಂ ಎಕ್ಸಪ್ರೇಸ್, 08.01.2026ರಂದು ಪ್ರಯಾಣ ಆರಂಭಿಸುವ ಈ ರೈಲು ಮಾರ್ಗ ಮಧ್ಯೆ 20 ನಿಮಿಷ ನಿಯಂತ್ರಿಸಲಾಗುತ್ತದೆ. 2. ರೈಲು ಸಂಖ್ಯೆ 16021 ಎಂ.ಜಿ.ಆರ್. ಚೆನ್ನೈ – ಅಶೋಕಪುರಂ ಎಕ್ಸಪ್ರೆಸ್, 22.01.2026ರಂದು ಪ್ರಯಾಣ ಆರಂಭಿಸುವ ಈ ರೈಲು ಮಾರ್ಗ ಮಧ್ಯೆ 35 ನಿಮಿಷ ನಿಯಂತ್ರಿಸಲಾಗುತ್ತದೆ. 3. ರೈಲು ಸಂಖ್ಯೆ 16220 ತಿರುಪತಿ – ಚಾಮರಾಜನಗರ ಎಕ್ಸಪ್ರೆಸ್, 22.01.2026ರಂದು ಪ್ರಯಾಣ ಆರಂಭಿಸುವ ಈ ರೈಲು ಮಾರ್ಗ ಮಧ್ಯೆ 15 ನಿಮಿಷ ನಿಯಂತ್ರಿಸಲಾಗುತ್ತದೆ. 4. ರೈಲು ಸಂಖ್ಯೆ 16586 ಮುರ್ಡೇಶ್ವರ – ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸಪ್ರೆಸ್, 29.01.2026ರಂದು ಪ್ರಯಾಣ ಆರಂಭಿಸುವ ಈ ರೈಲು ಮಾರ್ಗ ಮಧ್ಯೆ 30 ನಿಮಿಷ ನಿಯಂತ್ರಿಸಲಾಗುತ್ತದೆ. 5. ರೈಲು ಸಂಖ್ಯೆ 16021 ಎಂ.ಜಿ.ಆರ್. ಚೆನ್ನೈ – ಅಶೋಕಪುರಂ…














