Author: kannadanewsnow09

ಮಂಡ್ಯ : ಅಂಗನವಾಡಿ ಕೇಂದ್ರಗಳು ಮಕ್ಕಳ ಪೌಷ್ಟಿಕತೆ ಜೊತೆಗೆ ಶಾಲಾ ಪೂರ್ವ ಶಿಕ್ಷಣ ನೀಡುವ ಕೆಲಸವನ್ನು ಮಾಡುವ ಗುರುತರ ಜವಾಬ್ದಾರಿ ಹೊಂದಿವೆ ಎಂದು ಶಾಸಕ ಕೆ.ಎಂ.ಉದಯ್ ಸೋಮವಾರ ಹೇಳಿದರು. ಮದ್ದೂರು ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಶಿಶು ಅಭಿವೃದ್ಧಿ ಯೋಜನೆ ಇವರ ಸಹಯೋಗದೊಂದಿಗೆ ತಾಲೂಕಿನ ಸಕ್ಷಮ ಅಂಗನವಾಡಿ ಕೇಂದ್ರಗಳಿಗೆ ಸ್ಮಾಟ್ ಟಿವಿ ವಿತರಣೆ ಮಾಡಿ ಅವರು ಮಾತನಾಡಿದರು. ಇತ್ತಿಚಿನ ದಿನಗಳಲ್ಲಿ ಮಕ್ಕಳು ಸಾಕಷ್ಟು ಚುರುಕುತನದಿಂದ ಬೆಳವಣಿಗೆ ಹೊಂದುತ್ತಿದ್ದಾರೆ. ಹೀಗಾಗಿ, ಅಂಗನವಾಡಿಗಳಲ್ಲಿ ಶಾಲಾ ಪೂರ್ವ ಶಿಕ್ಷಣ ನೀಡುವುದರಲ್ಲಿ ತಂತ್ರಜ್ಞಾನ ಆಧಾರಿತ ಕಲಿಕಾಭಿವೃದ್ದಿಗೆ ಸಹಾಯವಾಗಲು ತಾಲೂಕಿನಲ್ಲಿ 408 ಕೇಂದ್ರಗಳಿದ್ದು, ಇಂದು 108 ಕೇಂದ್ರಗಳಿಗೆ ಸ್ಮಾರ್ಟ್ ಟಿವಿ ವಿತರಣೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಅಂಗನವಾಡಿಗಳಿಗೆ ಹಂತ ಹಂತವಾಗಿ ವಿತರಿಸಲಾಗುವುದು ಎಂದು ತಿಳಿಸಿದರು. ಮಕ್ಕಳಲ್ಲಿ ಯಾವುದೇ ರೀತಿಯ ಅಪೌಷ್ಟಿಕತೆಯಿಂದ ಬಳಲುಬಾರದು ಎಂಬ ಉದ್ದೇಶದಿಂದ ಸರ್ಕಾರ ಈಗಾಗಲೇ ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿ ಮತ್ತು ಬಾಣಂತಿಯರಿಗೆ…

Read More

ಧಾರವಾಡ : ಅಗ್ನಿವೀರ ನೇಮಕಾತಿಯನ್ನು ನವೆಂಬರ್ 13, 2025 ರಿಂದ ನವೆಂಬರ್ 19, 2025 ರವರೆಗೆ ಬಳ್ಳಾರಿ ಜಿಲ್ಲೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಅಗ್ನವೀರ ಅಭ್ಯರ್ಥಿಗಳು ಆನ್‍ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ ಸಿಇಇ ಯಲ್ಲಿ ಜೂನ್ 30,2025 ರಿಂದ ಜುಲೈ 10, 2025 ರವೆಗೆ ಉತ್ತೀರ್ಣರಾಗಿರುವ (ಅಭ್ಯರ್ಥಿಗಳು) ರ್ಯಾಲಿಗೆ ಹಾಜರಾಗಬೇಕು. ಅಗ್ನವೀರ ಸಾಮಾನ್ಯ ಡ್ಯೂಟಿ ವರ್ಗಕ್ಕೆ ಮಾತ್ರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಬೆಂಗಳೂರು (ಪ್ರಾ.ಕ): ಬೆಂಗಳೂರು ನಗರದ, ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ, ರಾಮನಗರ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ಹಾಸನ, ಚಿತ್ರದುರ್ಗ, ವಿಜಯನಗರ ಜಿಲ್ಲೆಗಳಲ್ಲಿ ಹಾಜರಾಗಬೇಕು. ಅಗ್ನಿವೀರ ಸಾಮಾನ್ಯ ಡ್ಯೂಡಿ ಹೊರತುಪಡಿಸಿ ಒಂದೇ ವರ್ಗಕ್ಕೆ ಅರ್ಜಿ ಸಲ್ಲಿಸಿದ ಎಲ್ಲ ಅಗ್ನಿವೀರ ಟೆಕ್ನಿಕಲ್, ಕ್ಲರ್ಕ್/ಸ್ಕ್ಟೋರ್ ಕೀಪರ್ ಟೆಕ್ನಿಕಲ್, ಟ್ರೇಡ್ಸ್ಮನ್ ಅಭ್ಯರ್ಥಿಗಳು ಹಾಗೂ ಬಹು ವರ್ಗಗಳಿಗೆ ಅರ್ಜಿ ಸಲ್ಲಿಸಿದ ಎಲ್ಲ ಅಭ್ಯರ್ಥಿಗಳು ಬೆಂಗಳೂರು (ಪ್ರಾ.ಕ): ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ, ರಾಮನಗರ, ಕೊಡಗು,…

Read More

ನವದೆಹಲಿ: ಕೆಂಪು ಕೋಟೆ ಪ್ರದೇಶದ ಕಾರ್ ಬಾಂಬ್ ಸ್ಫೋಟದಲ್ಲಿ 10 ಜನರು ಸಾವನ್ನಪ್ಪಿ 32 ಜನರು ಗಾಯಗೊಂಡ ಘಟನೆಯ ಹಿಂದಿನ ಭಯೋತ್ಪಾದಕನ ಮತ್ತೊಬ್ಬ ಸಹಚರನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಸೋಮವಾರ ಬಂಧಿಸಿದೆ. ತನಿಖೆಯ ಭಾಗವಾಗಿ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಿಂದ ಡ್ಯಾನಿಶ್ ಎಂದೂ ಕರೆಯಲ್ಪಡುವ ಜಾಸಿರ್ ಬಿಲಾಲ್ ವಾನಿಯನ್ನು ಬಂಧಿಸಲಾಗಿದೆ ಎಂದು ಎನ್ಐಎ ತಿಳಿಸಿದೆ. https://twitter.com/ANI/status/1990404506765721953 ಅನಂತ್‌ನಾಗ್ ಜಿಲ್ಲೆಯ ಖಾಜಿಗುಂಡ್ ನಿವಾಸಿ ವಾನಿ, ಸ್ಫೋಟಕ್ಕೆ ಮುಂಚಿತವಾಗಿ ಡ್ರೋನ್‌ಗಳನ್ನು ಮಾರ್ಪಡಿಸುವ ಮತ್ತು ರಾಕೆಟ್‌ಗಳನ್ನು ತಯಾರಿಸಲು ಪ್ರಯತ್ನಿಸುವ ಮೂಲಕ ದಾಳಿಕೋರರಿಗೆ ತಾಂತ್ರಿಕ ಬೆಂಬಲವನ್ನು ನೀಡಿದ್ದಾನೆ ಎಂದು ಏಜೆನ್ಸಿ ತಿಳಿಸಿದೆ. ಐತಿಹಾಸಿಕ ಸ್ಮಾರಕದ ಬಳಿ ದಾಳಿಯನ್ನು ಯೋಜಿಸಲು ಪ್ರಮುಖ ಆರೋಪಿ ಉಮರ್ ಉನ್ ನಬಿಯೊಂದಿಗೆ ನಿಕಟವಾಗಿ ಕೆಲಸ ಮಾಡಿದ ಸಕ್ರಿಯ ಸಹ-ಸಂಚುಕೋರ ಎಂದು ಅವರನ್ನು ವಿವರಿಸಲಾಗಿದೆ. ವಿಶಾಲವಾದ ಪಿತೂರಿಯನ್ನು ಬಹಿರಂಗಪಡಿಸಲು ಬಹು ಕೋನಗಳನ್ನು ಪರಿಶೀಲಿಸಲಾಗುತ್ತಿದೆ ಮತ್ತು ಹಲವಾರು ತಂಡಗಳು ಸುಳಿವುಗಳನ್ನು ಅನುಸರಿಸುತ್ತಿವೆ ಮತ್ತು ಬಾಂಬ್ ದಾಳಿಯಲ್ಲಿ ಭಾಗಿಯಾಗಿರುವ ಎಲ್ಲರನ್ನು ಗುರುತಿಸಲು ರಾಜ್ಯಗಳಾದ್ಯಂತ ಹುಡುಕಾಟಗಳನ್ನು ನಡೆಸುತ್ತಿವೆ ಎಂದು…

Read More

ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ಐ20 ಕಾರಿನಲ್ಲಿ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿದ್ದಂತ ಇಬ್ಬರು ಗಾಯಾಳು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಹೀಗಾಗಿ ದೆಹಲಿ ಕಾರು ಸ್ಪೋಟ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ದೆಹಲಿಯ ಎಲ್‌ಎನ್‌ಜೆಪಿ ಆಸ್ಪತ್ರೆಯಲ್ಲಿ ಕಾರು ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿದ್ದಂತ ಇಬ್ಬರು ಗಾಯಾಳುಗಳು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಹೀಗಾಗಿ  ಕೆಂಪು ಕೋಟೆ ಸ್ಫೋಟದ ಸಾವಿನ ಸಂಖ್ಯೆ 15 ಕ್ಕೆ ಏರಿದೆ. ದೆಹಲಿ ಕೆಂಪು ಕೋಟೆ ಬಳಿಯ ಕಾರು ಸ್ಪೋಟ ಘಟನೆಯಲ್ಲಿ ಗಾಯಗೊಂಡಿದ್ದಂತ ಹಲವಾರು ಗಾಯಾಳುಗಳು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. https://kannadanewsnow.com/kannada/school-children-wrote-and-sang-a-song-expressing-their-love-for-the-mla/ https://kannadanewsnow.com/kannada/good-news-for-sports-achievers-in-the-state-applications-invited-for-various-awards-and-incentives/

Read More

ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅರ್ಹ ಸಾಧಕ ಕ್ರೀಡಾಪಟುಗಳು ಹಾಗೂ ಇತರರಿಂದ ವಿವಿಧ ಪ್ರಶಸ್ತಿ ಮತ್ತು ವಿವಿಧ ಪ್ರೋತ್ಸಾಹಧನ ನೀಡುವ ಯೋಜನೆಗಳಿಗೆ ಅರ್ಹರಿಮದ ಅರ್ಜಿ ಆಹ್ವಾನಿಸಲಾಗಿದೆ. ಪ್ರಶಸ್ತಿ ವಿವರ: ಏಕಲವ್ಯ ಪ್ರಶಸ್ತಿ -2024, ಜೀವಮಾನ ಸಾಧನೆ ಪ್ರಶಸ್ತಿ-2024, ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ -2024, ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ-2024, ಗುರಿ-ಓಲಂಪಿಕ್ ಪದಕ -2025-2026, ನಗದು ಪುರಸ್ಕಾರ -2023 ಮತ್ತು 2024, ಶೈಕ್ಷಣಿಕ ಶುಲ್ಕ ಮರುಪಾವತಿ-2025-26, ಕ್ರೀಡಾ ವಿದ್ಯಾರ್ಥಿ ವೇತನ -2025-26. ಅರ್ಹ ಕ್ರೀಡಾಪಟುಗಳು https://sevasindhu.karnakata.gov.in ವೆಬ್‍ಸೈಟ್ ಮೂಲಕ ಡಿಸೆಂಬರ್ 02, 2025 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2447424 ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/high-command-decision-on-state-cabinet-reshuffle-cm-siddaramaiahs-announcement/ https://kannadanewsnow.com/kannada/school-children-wrote-and-sang-a-song-expressing-their-love-for-the-mla/

Read More

ಶಿವಮೊಗ್ಗ: ಅವರೆಂದರೇ ಇಡೀ ತಾಲ್ಲೂಕಿನ ಜನತೆಗೆ ಅಚ್ಚುಮೆಚ್ಚು. ನಗುಮುಖದಿಂದಲೇ ಸಾರ್ವಜನಿಕರನ್ನು ಕಾಣುವ ಆ ಶಾಸಕರ ಬಗ್ಗೆ ಜನರಿಗೆ ಎಲ್ಲಿಲ್ಲದ ಆತ್ಮೀಯತೆ. ಇವರು ಶಾಸಕರಲ್ಲ. ನಮ್ಮ ಕುಟುಂಬದವರೇ ಎನ್ನುವ ಭಾವನೆ. ಇದು ಜನರಲ್ಲಿ ಅಷ್ಟೇ ಅಲ್ಲ, ಶಾಲಾ ಮಕ್ಕಳಲ್ಲಿಯೂ ಹುಟ್ಟಿದೆ ಎನ್ನುವುದಕ್ಕೆ ಶಾಸಕರ ಮೇಲಿನ ಪ್ರೀತಿಗೆ ಹಾಡು ಕಟ್ಟಿ ಹಾಡಿದ್ದೇ ಸಾಕ್ಷೀಕರಿಸಿತು. ಅದೆಲ್ಲಿ? ಹಾಡು ಏನು ಅಂತ ಮುಂದೆ ಓದಿ, ವೀಡಿಯೋ ಲಿಂಕ್ ಇದೆ ಕ್ಲಿಕ್ ಮಾಡಿ ತಪ್ಪದೇ ಹಾಡು ಕೇಳಿ. ಶಿವಮೊಗ್ಗದ ಸಾಗರದ ಪ್ರಜ್ಞಾ ಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂದು ಪ್ರತಿಭಾ ಕಾರಂಜಿ ಹಾಗೂ ಕಾಲೋತ್ಸವ ಆಯೋಜಿಸಲಾಗಿತ್ತು. ಶಾಸಕ ಗೋಪಾಲಕೃಷ್ಣ ಬೇಳೂರು ಅವರನ್ನು ಕಾರ್ಯಕ್ರಮ ಉದ್ಘಾಟನೆಗೆ ಆಹ್ವಾನಿಸಲಾಗಿತ್ತು. ಇಂದಿನ ಕಾರ್ಯಕ್ರಮದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಪಾಲ್ಗೊಂಡಿದ್ದರು. ಈ ವೇಳೆ ಅವರನ್ನು ಪುಟಾಣಿಗಳೇ ಬರೆದಿದ್ದಂತ ಸನ್ಮಾನ ಗೀತೆಯ ಮೂಲಕ ಸ್ವಾಗತಿಸಿದ್ದು ಮಾತ್ರ ಶಾಸಕರನ್ನು ಕೆಲ ಕಾಲ ಮೂಕ ವಿಸ್ಮಿತರನ್ನಾಗಿ ಮಾಡಿ ಬಿಟ್ಟಿತು. ಶಾಲಾ ಮಕ್ಕಳು ಬೇಳೂರು ಗೋಪಾಲಕೃಷ್ಣ, ನಮ್ಮ ಪ್ರೀತಿಯ…

Read More

ನವದೆಹಲಿ: ರಾಜ್ಯ ಸಂಪುಟ ಪುನಾರಚನೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಿದೆ. ಹೀಗಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಳಿಯಲ್ಲಿ ಚರ್ಚೆ ಮಾಡುವುದಕ್ಕೆ ತೆರಳುತ್ತಿರುವುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಈ ಮೂಲಕ ರಾಜ್ಯ ಸಂಪುಟ ಪುನಾರಚನೆ ಫಿಕ್ಸ್ ಎಂಬುದಾಗಿ ಘೋಷಿಸಿದ್ದಾರೆ. ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಗೂ ಮುನ್ನಾ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ತೀರ್ಮಾನಿಸಿದೆ. ಹೀಗಾಗಿ ಖರ್ಗೆ ಜೊತೆ ಮಾತನಾಡಲು ಹೋಗುತ್ತಿದ್ದೇನೆ ಎಂದರು. ನಾಲ್ಕೈದು ತಿಂಗಳ ಹಿಂದೆಯೇ ಸಂಪುಟ ಪುನಾರಚನೆಗೆ ಹೇಳಿದ್ದರು. ನಮ್ಮಲ್ಲಿ 142 ಶಾಸಕರುಗಳು ಆಕಾಂಕ್ಷಿಗಳಾಗಿದ್ದಾರೆ. ಆ ಬಗ್ಗೆ ಎಲ್ಲ ಚರ್ಚಿಸೋದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಳಿಯಲ್ಲಿ ತೆರಳುತ್ತಿರುವುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. https://kannadanewsnow.com/kannada/attention-bengaluru-residents-power-outages-expected-in-these-areas-tomorrow/ https://kannadanewsnow.com/kannada/shivamogga-minority-relatives-should-provide-good-education-to-their-children-mla-gopalakrishna-belur/

Read More

ಬೆಂಗಳೂರು: ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ನವೆಂಬರ್.18ರ ನಾಳೆ, ನವೆಂಬರ್.19ರ ನಾಡಿದ್ದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಬೆಸ್ಕಾಂ ತಿಳಿಸಿದೆ. ನಾಳೆ ಬೆಂಗಳೂರಿನ ಈ ವ್ಯಾಪ್ತಿಯಲ್ಲಿ ವಿದ್ಯುತ್‌ ವ್ಯತ್ಯಯ ಬೆಂಗಳೂರು: ಆಡುಗೋಡಿ ನಿರ್ವಹಣಾ ಕಾಮಗಾರಿ ನಿಮಿತ್ತ ನವೆಂಬರ್ 18 ರಂದು (ಮಂಗಳವಾರ) ಬೆಳಿಗ್ಗೆ 10.00 ರಿಂದ ಸಂಜೆ 5.00 ಗಂಟೆಯವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಆಡುಗೋಡಿ, ಸಲಾಪುರಿಯಾ ಟವರ್, ಬಿಗ್ ಬಜಾರ್, ಆಕ್ಸೆಂಚರ್, ಕೆ.ಎಮ್.ಎಪ್, ಗೋಡೌನ್, ನಂಜಪ್ಪ ಲೇಔಟ್‌, ನ್ಯೂ ಮೈಕೋ ರಸ್ತೆ, ಚಿಕ್ಕಲಕ್ಷ್ಮೀ ಲೇಔಟ್‌, ಮಹಲಿಂಗೇಶ್ವರ ಬಡಾವಾಣೆ, ಬೆಂಗಳೂರು ಡ್ಯೆರಿ, ಫೋರಾಮ್, ರಂಗದಾಸಪ್ಪ ಲೇಔಟ್‌, ಲಕ್ಕಸಂದ್ರ, ವಿಲ್ಸನ್ ಗಾಡ್‍ðನ್, ಚಿನ್ನಯ್ಯನ್ನ ಪಾಳ್ಯ, ಚಂದ್ರಪ್ಪ ನಗರ, ನಿಮ್ಯಾನ್ಸ್ ಅಡ್ಮಿನಿಸ್ರೆಟಿವ್ ಬ್ಲಾಕ್, ಬಂಡೆ ಸ್ಲಮ್, ಸುಣ್ಣದಕಲ್ಲು, ಬೃಂದವನ ಸ್ಲಮ್, ಲಾಲ್ ಜಿ ನಗರ, ಶಾಮಣ್ಣ ಗಾರ್ಡನ್‌ , ಎನ್ ಡಿ ರ್ ಐ, ಪೋಲಿಸ್ ವಸತಿ ಗೃಹಗಳು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ. ನಾಡಿದ್ದು…

Read More

ಬೆಂಗಳೂರು: ಮಹಿಳೆಯರ ಮತ್ತು ಮಕ್ಕಳ ರಕ್ಷಣೆಗಾಗಿ ಅಕ್ಕ ಪಡೆಯನ್ನು ಸರ್ಕಾರ ರಚಿಸಿದೆ. ಈ ಅಕ್ಕ ಪಡೆಯು ನವೆಂಬರ್.19ರಿಂದ ರಾಜ್ಯದಲ್ಲಿ ಕಾರ್ಯಾರಂಭ ಮಾಡಲಿದೆ. ಹೌದು.. ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗಾಗಿ ʼಅಕ್ಕ ಪಡೆʼ ರೂಪಿಸಲಾಗಿದ್ದು, ನವೆಂಬರ್‌ 19 ರಿಂದ ಕಾರ್ಯಾರಂಭವಾಗಲಿದೆ. ಇದಕ್ಕಾಗಿ ಸಹಾಯವಾಣಿ ಸಂಖ್ಯೆ ಕೂಡ ಸರ್ಕಾರ ಆರಂಭಿಸಿದೆ. ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗಾಗಿ 1098, 181 ಅಥವಾ 112ಗೆ ಕರೆ ಮಾಡುವಂತೆ ಮನವಿ ಮಾಡಲಾಗಿದೆ. “ಹೆಣ್ಣುಮಕ್ಕಳ ಸುರಕ್ಷತೆ ದೃಷ್ಟಿಯಿಂದ ಇದೊಂದು ಕ್ರಾಂತಿಕಾರಿ ಯೋಜನೆಯಾಗಿದೆ. ಶಾಲಾ – ಕಾಲೇಜು, ಹಾಸ್ಟೆಲ್‌, ಮಾಲ್‌ಗಳು, ಜನನಿಬಿಡ ಪ್ರದೇಶಗಳಲ್ಲಿ ಅಕ್ಕ ಪಡೆ ವಾಹನ ಗಸ್ತು ತಿರುಗಲಿದೆ. ಮನೆಯಲ್ಲಿ, ನೆರೆ ಹೊರೆಯವರಿಂದ ತೊಂದರೆ ಅನುಭವಿಸುವ ಮಹಿಳೆಯರು ಸಹಾಯವಾಣಿ ಮೂಲಕ ಅಕ್ಕ ಪಡೆಯನ್ನು ಸಂಪರ್ಕಿಸಬಹುದು. ಪೊಲೀಸ್‌ ಇಲಾಖೆ ಹಾಗೂ ಎನ್‌ಸಿಸಿ ಸಹಯೋಗದಲ್ಲಿ ಈ ಪಡೆ ಕಾರ್ಯನಿರ್ವಹಿಸಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. https://twitter.com/KarnatakaVarthe/status/1990385915127361975 https://kannadanewsnow.com/kannada/here-is-the-official-complete-list-of-state-universal-limited-holidays-for-the-year-2026/ https://kannadanewsnow.com/kannada/shivamogga-minority-relatives-should-provide-good-education-to-their-children-mla-gopalakrishna-belur/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ 2026ನೇ ಸಾಲಿನ ಸಾರ್ವತ್ರಿಕ ಹಾಗೂ ಪರಿಮಿತ ರಜಾ ದಿನಗಳ ಪಟ್ಟಿ ಪ್ರಕಟಿಸಲಾಗಿದೆ. ಹಾಗಾದ್ರೇ 2026ನೇ ಸಾಲಿಗೆ ಮಂಜೂರಾದ ಸಾರ್ವತ್ರಿಕೆ ರಜಾ ದಿನಗಳು ಹಾಗೂ ಪರಿಮಿತ ರಜಾ ದಿನಗಳ ಅಧಿಕೃತ ಪಟ್ಟಿಯನ್ನು ಮುಂದಿದೆ ನೋಡಿ.. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಅಧಿಸೂಚನೆ ಹೊರಡಿಸಿದ್ದಾರೆ. 2026ನೇ ಸಾಲಿಗೆ ಮಂಜೂರು ಮಾಡಿರುವ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಸಾರ್ವಜನಿಕರಿಗಾಗಿ ಈ ಕೆಳಕಂಡಂತೆ ಪ್ರಕಟಿಸಲಾಗಿದೆ ಎಂದಿದ್ದಾರೆ. ಹೀಗಿದೆ 2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ದಿನಾಂಕ 15-01-2026 ಗುರುವಾರ, ಉತ್ತರಾಯಣ ಪುಣ್ಯಕಾಲ, ಮಕರ ಸಂಕ್ರಾಂತಿ ದಿನಾಂಕ 26-01-2026 ಸೋಮವಾರ, ಗಣರಾಜ್ಯೋತ್ಸವ ದಿನಾಂಕ 19-03-2026 ಗುರುವಾರ, ಯುಗಾದಿ ಹಬ್ಬ ದಿನಾಂಕ 21-03-2026 ಶನಿವಾರ, ಖುತುಬ್ ಎ ರಂಜಾನ್ ದಿನಾಂಕ 31-03-2026 ಮಂಗಳವಾರ, ಮಹಾವೀರ ಜಯಂತಿ ದಿನಾಂಕ 03-04-2026 ಶುಕ್ರವಾರ, ಗುಡ್ ಪ್ರೈಡೆ ದಿನಾಂಕ 14-04-2026 ಮಂಗಳವಾರ, ಡಾ.ಬಿಆರ್ ಅಂಬೇಡ್ಕರ್ ಜಯಂತಿ ದಿನಾಂಕ 04-04-2026 ಸೋಮವಾರ, ಬಸವಜಯಂತಿ,…

Read More