Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣದ ಆದೇಶದನ್ವಯ ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಹ ಸಹಕಾರ ಸಂಘ ಸಂಸ್ಥೆಗಳು ಹಾಗೂ ವ್ಯಕ್ತಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬೆಂಗಳೂರು ದಕ್ಷಿಣ ತಾಲ್ಲೂಕು ವ್ಯಾಪ್ತಿಯಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಪ್ರಸ್ತಾಪಿಸಿರುವ ಪುಟ್ಟೇನಹಳ್ಳಿ ಪ್ರದೇಶದ ವಿನಾಯಕನಗರ ಒಟ್ಟು ಪಡಿತರ ಚೀಟಿ- 800 ಹಾಗೂ ಜರಗನಹಳ್ಳಿ ಪ್ರದೇಶದ ಚಿಕ್ಕಸ್ವಾಮಿ ಲೇಔಟ್ ನ ಒಟ್ಟು ಪಡಿತರ ಚೀಟಿ- 800 ಇಲ್ಲಿ ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿಗಳನ್ನು ನಿಯೋಜಿಸಲಾಗಿದೆ. ಅರ್ಹ ಸಂಸ್ಥೆಗಳು ನಿಗಧಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ಜಂಟಿ ನಿರ್ದೇಶಕರು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಇಲ್ಲಿ ಏಪ್ರಿಲ್ 23 ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕೆಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ…
ಬೆಂಗಳೂರ :ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2001-02 ರಿಂದ 2014-15 ನೇ ಶೈಕ್ಷಣಿಕ ಸಾಲುಗಳಲ್ಲಿ ಯುಜಿ/ಪಿ.ಜಿ ಕೋರ್ಸ್ಗಳಾದ ಬಿ.ಎ, ಬಿ.ಕಾಂ, ಬಿ.ಲಿಬ್ ಐ.ಎಸ್ಸಿ, ಎಂ.ಎ, ಎಂ.ಕಾಂ, ಎಂ.ಬಿ.ಎ, ಎಂ.ಎಸ್ಸಿ, ಎಲ್ ಎಲ್ ಎಂ, ಎಂಲಿಬ್ ಐ.ಎಸ್ಸಿ ಮತ್ತು ಬಿ.ಎಡ್, ಬಿ.ಎಡ್, ಎಂ.ಎಡ್ ಗಳಿಗೆ ಪ್ರವೇಶ ಪಡೆದಯ ಪರೀಕ್ಷೇಗಳನ್ನು ತೆಗೆದುಕೊಂಡಿರದ/ ಉತ್ತೀರ್ಣರಾಗದ ವಿದ್ಯಾರ್ಥಿಗಳಿಗೆ ವಿವಿಯು ಪರೀಕ್ಷಾ ಶುಲ್ಕವನ್ನು ಪಾವತಿಸಲು ಅವಕಾಶವನ್ನು ಕಲ್ಪಸಿದೆ ಪರೀಕ್ಷಾ ಶುಲ್ಕವನ್ನು ಪಾವತಿಸಲು ದಂಡ ಶುಲ್ಕವಿಲ್ಲದೆ ಮಾರ್ಚ್ 30 ಹಾಗೂ ಏಪ್ರಿಲ್ 6 ರಂದು ದಂಡ ಶುಲ್ಕದೊಡನೆ ರೂ.200 ಪಾವತಿಸಲು ಕೊನೆಯ ದಿನ. ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ ಸೈಟ್ www.ksoumysuru.ac.in ಮೂಲಕ ಪರೀಕ್ಷಾ ಶುಲ್ಕವನ್ನು ಪಾವತಿಸಬಹುದು. ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-1, ಮೊದಲನೇ ಮಹಡಿ, ಕೆ.ಎಸ್.ಆರ್.ಟಿ.ಸಿ ಸ್ಯಾಟಿಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-26, ದೂರವಾಣಿ: 080-26603664 ಅಥವಾ 9880526439/9019526439 ಮೂಲಕ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರದ…
ನಮಸ್ಕಾರ ಸ್ನೇಹಿತರೆ ಸಾಮಾನ್ಯವಾಗಿ ಅಶ್ವಿನಿ ಕುಮಾರರ ಹೆಸರನ್ನು ಕೇಳಿರುತ್ತೀರಿ ಇವರು ವೈದ್ಯ ದೇವತೆಗಳು ಋಗ್ವೇದದಲ್ಲಿ ದೈವಿಕ ಅವಳಿ ಕುದುರೆ ಸವಾರರು, ಮೋಡಗಳ ದೇವತೆಗಳು ಇವರು ಸೂರ್ಯೋದಯ ಮತ್ತು ಸೂರ್ಯಾಸ್ತದ ಹೊಳಪನ್ನು ಸಂಕೇತಿಸುತ್ತಾರೆ, ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564 ಸೂರ್ಯೋದಯಕ್ಕೆ ಮುಂಚೆ ಆಕಾಶದಲ್ಲಿ ಸುವರ್ಣ ರಥದಲ್ಲಿ ಕಾಣಿಸಿಕೊಳ್ಳುತ್ತಾರೆ ಮತ್ತು ಮನುಷ್ಯರಿಗೆ ಸಂಪತ್ತನ್ನು ದಯಪಾಲಿಸುತ್ತಾರೆ ಮತ್ತು…
ಲಾಹೋರ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಲೋಧ್ರಾನ್ ಎಂಬಲ್ಲಿ ಮಂಗಳವಾರ ತಡರಾತ್ರಿ ತೇಜ್ಗಾಮ್ ಎಕ್ಸ್ಪ್ರೆಸ್ ರೈಲಿನ ಏಳು ಬೋಗಿಗಳು ಹಳಿತಪ್ಪಿದ್ದು, ಘಟನೆಯಲ್ಲಿ ಕನಿಷ್ಠ 25 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಲಾಹೋರ್ನಿಂದ ಸುಮಾರು 400 ಕಿಲೋಮೀಟರ್ ದೂರದಲ್ಲಿರುವ ಲೋಧ್ರಾನ್ ಬಳಿ ಈ ಅಪಘಾತ ಸಂಭವಿಸಿದೆ. ಇದರಿಂದಾಗಿ ಈ ಮಾರ್ಗದಲ್ಲಿ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಫೆಡರಲ್ ರೈಲ್ವೆ ಸಚಿವ ಹನೀಫ್ ಅಬ್ಬಾಸಿ ಅವರು, ಮಾನವ ತಪ್ಪು ಅಥವಾ ತಾಂತ್ರಿಕ ದೋಷ ಈ ಅಪಘಾತಕ್ಕೆ ಪ್ರಾಥಮಿಕ ಕಾರಣವಾಗಿರಬಹುದು ಎಂದು ತಿಳಿಸಿದ್ದಾರೆ. ಲೋಧ್ರಾನ್ ಡೆಪ್ಯೂಟಿ ಕಮಿಷನರ್ ಅಬ್ದುಲ್ ಹಫೀಜ್ ಅವರು ನೀಡಿದ ಮಾಹಿತಿಯ ಪ್ರಕಾರ, ಕರಾಚಿ ಕಡೆಗೆ ಹೊರಟಿದ್ದ ತೇಜ್ಗಾಮ್ ಎಕ್ಸ್ಪ್ರೆಸ್ ಮಂಗಳವಾರ ಸಂಜೆ ಲಾಹೋರ್ ರೈಲು ನಿಲ್ದಾಣದಿಂದ ಪ್ರಯಾಣ ಬೆಳೆಸಿತ್ತು. ರಾತ್ರಿ ಸುಮಾರು 9:30ರ ವೇಳೆಗೆ ಬಹವಾಲ್ಪುರ್-ಲೋಧ್ರಾನ್ ವಿಭಾಗದ ಆಡಮ್ ವಹಾನ್ ರೈಲು ನಿಲ್ದಾಣದ ಬಳಿ ತಲುಪಿದಾಗ ಈ ಅನಾಹುತ ಸಂಭವಿಸಿದೆ. ಹಳಿತಪ್ಪಿದ ಏಳು ಬೋಗಿಗಳಲ್ಲಿ ಕೆಲವು…
ಹೈದರಾಬಾದ್: ಗ್ಲೋಬಲ್ ಸ್ಟಾರ್ ರಾಮ್ ಚರಣ್ ಅವರು ತಮ್ಮ ಬಹುನಿರೀಕ್ಷಿತ ‘ಪೆದ್ದಿ’ (Peddi) ಚಿತ್ರದ ಚಿತ್ರೀಕರಣದ ಸಮಯದಲ್ಲಿ ಸಣ್ಣ ಅಪಘಾತಕ್ಕೆ ಒಳಗಾಗಿದ್ದಾರೆ. ಶೂಟಿಂಗ್ ಸೆಟ್ನಲ್ಲಿ ಗಾಯಗೊಂಡ ಚರಣ್ ಅವರಿಗೆ ತಕ್ಷಣವೇ ವೈದ್ಯಕೀಯ ನೆರವು ನೀಡಲಾಗಿದ್ದು, ಗಾಯದ ತೀವ್ರತೆಯಿಂದಾಗಿ ಹೊಲಿಗೆಗಳನ್ನು ಹಾಕಲಾಗಿದೆ ಎಂದು ತಿಳಿದುಬಂದಿದೆ. ಘಟನೆಯ ವಿವರ: ಶೂಟಿಂಗ್ ಸೆಟ್ನಲ್ಲಿ ಅವಘಡ: ಉಪ್ಪೆನ ಖ್ಯಾತಿಯ ನಿರ್ದೇಶಕ ಬುಚ್ಚಿ ಬಾಬು ಸನಾ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಪೆದ್ದಿ’ ಚಿತ್ರದ ಸಾಹಸ ದೃಶ್ಯ ಅಥವಾ ಚಿತ್ರೀಕರಣದ ವೇಳೆ ಈ ಘಟನೆ ಸಂಭವಿಸಿದೆ. ವೈದ್ಯಕೀಯ ಚಿಕಿತ್ಸೆ: ಗಾಯವಾದ ತಕ್ಷಣ ಚಿತ್ರೀಕರಣ ಸ್ಥಗಿತಗೊಳಿಸಿ ಚರಣ್ ಅವರಿಗೆ ಚಿಕಿತ್ಸೆ ಕೊಡಿಸಲಾಯಿತು. ಗಾಯಕ್ಕೆ ವೈದ್ಯರು ಹೊಲಿಗೆ ಹಾಕಿದ್ದಾರೆ ಎಂದು ವರದಿಯಾಗಿದೆ. ವೃತ್ತಿಪರತೆ ಮೆರೆದ ನಟ: ಗಾಯವಾಗಿದ್ದರೂ ಮತ್ತು ಹೊಲಿಗೆ ಹಾಕಿಸಿಕೊಂಡಿದ್ದರೂ, ರಾಮ್ ಚರಣ್ ಅವರು ವಿಶ್ರಾಂತಿ ಪಡೆಯುವ ಬದಲು ತಕ್ಷಣವೇ ಶೂಟಿಂಗ್ ಸೆಟ್ಗೆ ಮರಳುವ ಮೂಲಕ ತಮ್ಮ ವೃತ್ತಿಪರತೆಯನ್ನು ಮೆರೆದಿದ್ದಾರೆ. ಚಿತ್ರದ ಬಗ್ಗೆ: ‘ಪೆದ್ದಿ’ ಚಿತ್ರವು ಕ್ರೀಡಾ ಆಧಾರಿತ ಡ್ರಾಮಾವಾಗಿದ್ದು, ಇದರಲ್ಲಿ…
ಬೆಂಗಳೂರು: ಕರ್ನಾಟಕ ವಿಧಾನಸಭೆಯ ಇಂದಿನ ಕಲಾಪವು ಕೇವಲ ಗಂಭೀರ ಚರ್ಚೆಗಳಿಗೆ ಮಾತ್ರವಲ್ಲದೆ, ರಾಜಕೀಯ ಕಾಲೆಳೆಯುವಿಕೆ, ಭವಿಷ್ಯದ ಮುಖ್ಯಮಂತ್ರಿ ಅಭ್ಯರ್ಥಿಗಳ ಕುರಿತಾದ ಸ್ವಾರಸ್ಯಕರ ವಾದ-ಪ್ರತಿವಾದಗಳಿಗೆ ಸಾಕ್ಷಿಯಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರನ್ನು ಕೆಣಕುತ್ತಲೇ, ತಮ್ಮ ಪಕ್ಷದ ಆಂತರಿಕ ರಾಜಕೀಯದ ಪ್ರಶ್ನೆಗಳಿಗೆ ಅತ್ಯಂತ ಚಾಣಾಕ್ಷತನದಿಂದ ಉತ್ತರಿಸಿದರು. ‘ನಿನಗೆ ಸಿಎಂ ಆಗೋ ಆಸೆ ಇಲ್ವಾ ಅಶೋಕ್?’ ಬಜೆಟ್ ಮೇಲಿನ ಚರ್ಚೆಯ ನಡುವೆ ಸಿಎಂ ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರನ್ನು ನೇರವಾಗಿಯೇ ಪ್ರಶ್ನಿಸಿದರು. “ನಿನಗೆ ಸಿಎಂ ಆಗೋ ಆಸೆ ಇಲ್ವಾ ಅಶೋಕ್?” ಎಂದು ಕೇಳಿದಾಗ ಇಡೀ ಸದನ ನಗೆಗಡಲಲ್ಲಿ ತೇಲಿತು. ಇದಕ್ಕೆ ಉತ್ತರಿಸಲಾಗದೆ ಅಶೋಕ್ ಕೇವಲ ನಗುವಿನ ಮೂಲಕವೇ ಪ್ರತಿಕ್ರಿಯಿಸಿದರು. ಮಾತು ಮುಂದುವರಿಸಿದ ಸಿಎಂ, “ಅಶೋಕ್ ಆದ್ರೂ ಆಗಲಿ, ಅರವಿಂದ ಬೆಲ್ಲದ್ ಅಥವಾ ಅಶ್ವಥ್ ನಾರಾಯಣ್ ಆದ್ರೂ ನನಗೆ ಸಂತೋಷವೇ. ಆದರೆ ವಿಜಯೇಂದ್ರ ನಿಮ್ಮನ್ನು ಸಿಎಂ ಆಗಲು ಬಿಡುವುದಿಲ್ಲ” ಎನ್ನುವ ಮೂಲಕ ಬಿಜೆಪಿಯ ಆಂತರಿಕ ಭಿನ್ನಮತವನ್ನು ಕೆದಕಿದರು. ಡಿಕೆಶಿ…
ಬೆಂಗಳೂರು: ಅತ್ಯಂತ ಕೈಗೆಟುಕುವ ದರದಲ್ಲಿ ಆಹಾರ ವಿತರಿಸುವ ‘ಟೋಯಿಂಗ್’ ಆ್ಯಪ್ ಇಂದು ಬೆಂಗಳೂರಿನಲ್ಲಿ ತನ್ನ ಸೇವೆಯನ್ನು ಆರಂಭಿಸುವುದಾಗಿ ಘೋಷಿಸಿದೆ. ಕಳೆದ 7 ತಿಂಗಳುಗಳಲ್ಲಿ ಟೋಯಿಂಗ್ ತನ್ನ ಜಾಲವನ್ನು ಭಾರತದ 20 ನಗರಗಳಿಗೆ ವಿಸ್ತರಿಸಿದ್ದು, ಈಗಾಗಲೇ ಪುಣೆ, ಆಗ್ರಾ, ವಡೋದರಾ, ಗುವಾಹಟಿ, ನಾಸಿಕ್, ನಾಗ್ಪುರ, ಪಾಟ್ನಾ, ಔರಂಗಾಬಾದ್, ಭೋಪಾಲ್, ದೆಹಲಿ, ಗುರುಗ್ರಾಮ್, ನೋಯ್ಡಾ, ಫರಿದಾಬಾದ್, ಗಾಜಿಯಾಬಾದ್, ಚಂಡೀಗಢ, ಅಹಮದಾಬಾದ್, ಮುಂಬೈ, ಕೋಲ್ಕತ್ತಾ ಮತ್ತು ಜೈಪುರದಲ್ಲಿ ಲಭ್ಯವಿದೆ. ಟೋಯಿಂಗ್ ಆ್ಯಪ್ನಲ್ಲಿ ಲಭ್ಯವಿರುವ ಆಹಾರ ಮತ್ತು ಪಾನೀಯಗಳ ಬೆಲೆಗಳು ಮಾರುಕಟ್ಟೆಯಲ್ಲಿಯೇ ಅತ್ಯಂತ ಕಡಿಮೆಯಾಗಿರಲಿವೆ ಎಂದು ಕಂಪನಿ ಭರವಸೆ ನೀಡಿದೆ. ಅಷ್ಟೇ ಅಲ್ಲದೆ, ರೆಸ್ಟೋರೆಂಟ್ಗಳ ಟೇಬಲ್ ಮೆನು ದರಕ್ಕೆ ಸಮನಾದ ಅಥವಾ ಅದಕ್ಕಿಂತಲೂ ಕಡಿಮೆ ಬೆಲೆಗೆ ಆಹಾರವನ್ನು ಇಲ್ಲಿ ನೀಡಲಾಗುತ್ತದೆ. ಇದರ ಜೊತೆಗೆ, ಯಾವುದೇ ಆರ್ಡರ್ಗಳ ಮೇಲೆ ಪ್ಯಾಕೇಜಿಂಗ್ ಶುಲ್ಕ ಅಥವಾ ಪ್ಲಾಟ್ಫಾರ್ಮ್ ಶುಲ್ಕವನ್ನು ವಿಧಿಸಲಾಗುವುದಿಲ್ಲ. ಇದು ಟೋಯಿಂಗ್ ಅನ್ನು ಪ್ರಸ್ತುತ ಮಾರುಕಟ್ಟೆಯಲ್ಲಿ ಲಭ್ಯವಿರುವ ಅತ್ಯಂತ ಅಗ್ಗದ ಫುಡ್ ಡೆಲಿವರಿ ಆ್ಯಪ್ ಅನ್ನಾಗಿ ಮಾಡಿದೆ. ಗ್ರಾಹಕರು ಬಿರಿಯಾನಿ,…
ಬೆಂಗಳೂರು: ಒಬ್ಬ ಜನಪ್ರತಿನಿಧಿಗೆ ಕೇವಲ ಅಧಿಕಾರ ಮುಖ್ಯವಲ್ಲ, ಆ ಅಧಿಕಾರವನ್ನು ಜನರ ಕಲ್ಯಾಣಕ್ಕಾಗಿ ಹೇಗೆ ಬಳಸುತ್ತಾರೆ ಎಂಬುದು ಮುಖ್ಯ. ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದಲ್ಲಿ ಕೆ.ಜೆ. ಜಾರ್ಜ್ ಅವರ ನೇತೃತ್ವದಲ್ಲಿ ನಡೆದಿರುವ ಹಸಿರು ಕ್ರಾಂತಿ ಮತ್ತು ಮೂಲಸೌಕರ್ಯಗಳ ಅಭಿವೃದ್ಧಿಯು ಒಬ್ಬ ಜನಪ್ರತಿನಿಧಿ ಹೇಗೆ ಇರಬೇಕು ಎನ್ನುವುದಕ್ಕೆ ಸಾಕ್ಷಿಯಾಗಿದೆ. 1. ಪರಿಸರ ಮತ್ತು ಹಸಿರಿನ ಸಂರಕ್ಷಣೆ ಆಧುನಿಕ ಜಗತ್ತಿನಲ್ಲಿ ಅಭಿವೃದ್ಧಿಯೆಂದರೆ ಕೇವಲ ಕಾಂಕ್ರೀಟ್ ಕಟ್ಟಡಗಳಲ್ಲ, ಬದಲಿಗೆ ಹಸಿರನ್ನು ಉಳಿಸಿ ಬೆಳೆಸುವುದು. ಸರ್ವಜ್ಞನಗರದಲ್ಲಿ ಬೃಹತ್ ಉದ್ಯಾನವನಗಳನ್ನು ನಿರ್ಮಿಸುವ ಮೂಲಕ ಜನರ ಆರೋಗ್ಯಕ್ಕೆ ಆದ್ಯತೆ ನೀಡಲಾಗಿದೆ. ಹೇಣ್ಣೂರು ಬಯೋ ಡೈವರ್ಸಿಟಿ ಪಾರ್ಕ್ ನಂತಹ ಯೋಜನೆಗಳು ನಗರದ ಮಧ್ಯೆ ದಟ್ಟವಾದ ಅರಣ್ಯವನ್ನು ಸೃಷ್ಟಿಸಿವೆ, ಇದು ಭವಿಷ್ಯದ ಪೀಳಿಗೆಗೆ ನಾವು ನೀಡುವ ದೊಡ್ಡ ಕೊಡುಗೆಯಾಗಿದೆ. ಆ ಮೂಲಕ ಸರ್ವಜ್ಞನಗರದಲ್ಲಿ ಸಚಿವ ಕೆ.ಜೆ ಜಾರ್ಜ್ ಹಸಿರು ಕ್ರಾಂತಿಯನ್ನೇ ಉಂಟು ಮಾಡಿದ್ದಾರೆ. 2. ಸರ್ವರಿಗೂ ಸಮಬಾಳು: ಉದ್ಯಾನವನಗಳ ನವೀಕರಣ ಕೇವಲ ಉದ್ಯಾನವನಗಳನ್ನು ನಿರ್ಮಿಸುವುದು ಮಾತ್ರವಲ್ಲ, ಅವುಗಳನ್ನು ಸಾರ್ವಜನಿಕರಿಗೆ ಹೇಗೆ ಉಪಯೋಗವಾಗುವಂತೆ ಮಾಡಬೇಕು ಎಂಬುದಕ್ಕೆ…
ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ನೌಕರರನ್ನು ಖಾಯಂಗೊಳಿಸಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ. ವಿಧಾನಸಭೆಯ ಕಲಾಪದಲ್ಲಿ ಈ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಹೊರಗುತ್ತಿಗೆ ನೌಕರರ ದೀರ್ಘಕಾಲದ ಬೇಡಿಕೆಗೆ ತೆರೆ ಎಳೆದಿದ್ದಾರೆ. ಪ್ರಮುಖ ಅಂಶಗಳು: ಕಾನೂನು ಅಡೆತಡೆ: ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಖಾಯಂ ನೇಮಕಾತಿ ನಿಯಮಗಳ ಅಡಿಯಲ್ಲಿ ಹೊರಗುತ್ತಿಗೆ ನೌಕರರನ್ನು ವಿಲೀನಗೊಳಿಸಲು ಅವಕಾಶವಿಲ್ಲ. ಪರ್ಯಾಯ ಕ್ರಮಗಳು: ಹೊರಗುತ್ತಿಗೆ ಪದ್ಧತಿಯನ್ನು ಹಂತಹಂತವಾಗಿ ಕಡಿಮೆ ಮಾಡಿ, ಖಾಲಿ ಇರುವ ಸುಮಾರು 2.84 ಲಕ್ಷ ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಸರ್ಕಾರ ಉದ್ದೇಶಿಸಿದೆ. ಮೀಸಲಾತಿ ಚಿಂತನೆ: ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ ಪದ್ಧತಿಯನ್ನು ಜಾರಿಗೆ ತರುವ ಬಗ್ಗೆ ಸರ್ಕಾರ ಗಂಭೀರವಾಗಿ ಯೋಚಿಸುತ್ತಿದೆ ಎಂದು ಸಿಎಂ ಈ ಹಿಂದೆ ತಿಳಿಸಿದ್ದರು. ಸೇವಾ ಭದ್ರತೆ: 2028ರ ವೇಳೆಗೆ ಹೊರಗುತ್ತಿಗೆ ಪದ್ಧತಿಯನ್ನು ಸಂಪೂರ್ಣವಾಗಿ ನಿಷೇಧಿಸಿ, ನೌಕರರಿಗೆ ಹೆಚ್ಚಿನ ಸೇವಾ…
ಬೆಂಗಳೂರು: ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಸುಳ್ಳು ಕಥೆಗಳನ್ನು ಮುಂದುವರಿಸುತ್ತಿದ್ದಾರೆ” ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಕಿಡಿಕಾರಿದ್ದಾರೆ. 17 ಬಜೆಟ್ ಮಂಡಿಸಿರುವ ಸಿದ್ದರಾಮಯ್ಯನವರಿಗೆ ಆರ್ಥಿಕತೆಯ ಮೂಲಪಾಠಗಳನ್ನು ಹೇಳಿಕೊಡುವ ಶೋಚನೀಯ ಸ್ಥಿತಿ ಬಂದಿದೆ ಎಂದು ಅವರು ವ್ಯಂಗ್ಯವಾಡಿದ್ದಾರೆ. ಬಂಡವಾಳ ವೆಚ್ಚದ ವ್ಯತ್ಯಾಸ: ಕೇಂದ್ರ vs ರಾಜ್ಯ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಲದ ಬಳಕೆಯ ನಡುವಿನ ವ್ಯತ್ಯಾಸವನ್ನು ಅಂಕಿ-ಅಂಶಗಳ ಸಮೇತ ಅಶೋಕ್ ವಿವರಿಸಿದ್ದಾರೆ: ಕೇಂದ್ರ ಸರ್ಕಾರ: ಕೇಂದ್ರದ ಸಾಲದ ಬಹುದೊಡ್ಡ ಭಾಗ ಬಂಡವಾಳ ವೆಚ್ಚಕ್ಕೆ (Capital Expenditure) ಬಳಕೆಯಾಗುತ್ತಿದೆ. ಸುಮಾರು ₹12.2 ಲಕ್ಷ ಕೋಟಿ (GDPಯ 3.1%) ಹಣವನ್ನು ರಸ್ತೆ, ರೈಲು ಮತ್ತು ಮೂಲಸೌಕರ್ಯಗಳಂತಹ ಉತ್ಪಾದಕ ಆಸ್ತಿಗಳ ಸೃಜನೆಗೆ ಬಳಸಲಾಗುತ್ತಿದೆ. ರಾಜ್ಯ ಸರ್ಕಾರ: ಕರ್ನಾಟಕದ 2026-27ರ ಬಜೆಟ್ ಗಾತ್ರ ₹4.48 ಲಕ್ಷ ಕೋಟಿ ಇದ್ದರೂ, ಬಂಡವಾಳ ವೆಚ್ಚಕ್ಕೆ ಮೀಸಲಿಟ್ಟಿರುವುದು ಕೇವಲ ₹74,682 ಕೋಟಿ (16-17%) ಮಾತ್ರ. ಇದು ರಾಜ್ಯದ ಒಟ್ಟು ಅಭಿವೃದ್ಧಿಗೆ ಮಾರಕ ಎಂದು ಅವರು…














