Author: kannadanewsnow09

ಬೆಂಗಳೂರು: ಕೆ ಎಸ್ ಆರ್ ಟಿ ಸಿ ನಿಗಮದ ಸಿಬ್ಬಂದಿಗಳ ಮಕ್ಕಳು ಅತ್ಯುತ್ತಮ ವಿದ್ಯಾಭ್ಯಾಸ ಮಾಡಿ ಚಿನ್ನದ ಪದಕ ಪಡೆದಿದ್ದರು. ವಿಷಯ ತಿಳಿದಂತ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ನಿಗಮದ ಕೇಂದ್ರ ಕಚೇರಿಗೆ ಕರೆಯಿಸಿ ಸನ್ಮಾನಿಸಿ, ನಗದು ಬಹುಮಾನ ನೀಡಿ ಪ್ರೋತ್ಸಾಹಿಸಿದರು. ಆ ಮೂಲಕ ಮತ್ತಷ್ಟು ಸಾಧನೆ ಮಾಡೋದಕ್ಕೆ ಹುರುಪು ತುಂಬಿದರು.  ಇಂದು ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ನಿಗಮದಲ್ಲಿನ ಸಿಬ್ಬಂದಿಗಳ ಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ಉನ್ನತ ವಿದ್ಯಾಭ್ಯಾಸ ಮಾಡಿ, ಹೆಚ್ಚಿನ ಅಂಕಗಳಿಸಿ ಚಿನ್ನದ ಪದಕ ಪಡೆದಿರುವ 6 ವಿದ್ಯಾರ್ಥಿಗಳನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು, ಸಂಸ್ಥೆಯ ವತಿಯಿಂದ ತಲಾ ರೂ.5,000/- ಗಳ ಗೌರವಧನ, ಪ್ರಮಾಣ ಪತ್ರ ನೀಡಿ ಗೌರವಿಸಿದರು. ಅಲ್ಲದೇ ಸಚಿವ ರಾಮಲಿಂಗಾರೆಡ್ಡಿ ಅವರು ವೈಯಕ್ತಿಕವಾಗಿ ಎಲ್ಲಾ 6 ವಿದ್ಯಾರ್ಥಿಗಳಿಗೆ ತಲಾ ರೂ.20,000/- ಗಳಂತೆ ನಗದು ಬಹಮಾನ ನೀಡಿ ಸನ್ಮಾನಿಸಿದರು. 1) ಕೆ ಎಸ್ ಆರ್ ಟಿ ಸಿಯ ಕೆಂಗೇರಿಯ ಪ್ರಾದೇಶಿಕ ಕಾರ್ಯಾಗಾರದಲ್ಲಿ ಕೆಲಸ ನಿರ್ವಹಿಸುತ್ತಿರುವ…

Read More

ಬೆಂಗಳೂರು: ರಾಜ್ಯದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಉಪ ವಿಭಾಗೀಯ ಕಚೇರಿ, ಜಿಲ್ಲಾಧಿಕಾರಿಗಳ ಕಚೇರಿಗಳಲ್ಲಿನ ಭೂ ದಾಖಲೆಗಳನ್ನು ಡಿಜಿಟಲೀಕರಣ ಮಾಡುವುದಾಗಿ ಕಂದಾಯ ಸಚಿವ ಕೃಷ್ಣ ಬೇರೇಗೌಡ ತಿಳಿಸಿದ್ದಾರೆ. ರಾಜ್ಯದಲ್ಲಿ ಭೂ ದಾಖಲೆಗಳನ್ನು ಸಂಪೂರ್ಣ ಡಿಜಿಟಲೀಕರಣ ಮಾಡಲಾಗುತ್ತಿದೆ. ಕಳೆದ ವರ್ಷ ಜನವರಿಯಲ್ಲಿ ಎಲ್ಲ ತಾಲೂಕು ಕಚೇರಿಗಳ ಮೂಲ ಭೂ ದಾಖಲೆಗಳನ್ನು ಸ್ಕ್ಯಾನ್‌ ಮಾಡಿ ಡಿಜಿಟಲೀಕರಿಸಲಾಗಿತ್ತು. ಇದೀಗ ಉಪ ವಿಭಾಗಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿರುವ ದಾಖಲೆಗಳ ಸ್ಕ್ಯಾನಿಂಗ್‌ಗೂ ಚಾಲನೆ ನೀಡಲಾಗಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/2008505495280320542 https://kannadanewsnow.com/kannada/complaint-to-it-against-minister-jameer-ahmed/ https://kannadanewsnow.com/kannada/do-you-know-what-a-woman-desires-from-her-husband/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 19 ಡಿವೈಎಸ್ಪಿ ಹಾಗೂ 53 ಪೊಲೀಸ್ ಇನ್ಸ್ ಪೆಕ್ಟರ್ ಸಿವಿಲ್ ಅವರನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ ವರ್ಗಾವಣೆ ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು, ಆಂತರಿಕ ಭದ್ರತ ವಿಭಾಗದ ಡಿವೈಎಸ್ಪಿಯಾಗಿದ್ದಂತ ಗಣೇಶ್ ಎಂ ಹೆಗಡೆ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಬೆಂಗಳೂರಿನ ಶೇಷಾದ್ರಿಪುರಂ ಉಪ ವಿಭಾಗದ ಡಿವೈಎಸ್ಪಿ ಪ್ರಕಾಶ್.ಆರ್ ಅವರನ್ನು ಚಿಕ್ಕಬಳ್ಳಾಪುರ ಉಪ ವಿಭಾಗಕ್ಕೆ, ಸಿಸಿಪಿಎಸ್ ಡಿವೈಎಸ್ಪಿ ನಾಗರಾಜ.ಜಿ ಅವರನ್ನು ವಿಜಯಪುರ ಉಪ ವಿಭಾಗಕ್ಕೆ, ಮೈಸೂರಿನ ಕೆಪಿಎ ಡಿವೈಎಸ್ಪಿ ಮೊಹಮ್ಮದ ಹಸ್ಮತ್ ಖಾನ್.ಐ ಅವರನ್ನು ಹೊಳೆನರಸೀಪುರ ಉಪ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಹೀಗಿದೆ 19 ಡಿವೈಎಸ್ಪಿ ವರ್ಗಾವಣೆ ಪಟ್ಟಿ ಇನ್ನೂ 53 ಪೊಲೀಸ್ ಇನ್ಸ್ ಪೆಕ್ಟರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಬೆಳಗಾವಿಯ ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಸುನೀಲ್ ಬಿ ಪಾಟೀಲ್ ಅವರನ್ನು ಇಂಡಿ ಗ್ರಾಮಾಂತರ ವೃತ್ತಕ್ಕೆ ವರ್ಗಾವಣೆ…

Read More

ಬೆಂಗಳೂರು : ಆಚಾರ್ಯ ಪಾಠಶಾಲಾ ಶಿಕ್ಷಣಸಂಸ್ಥೆ ವತಿಯಿಂದ ನಡೆದ ಬ್ರೈಲ್ ದಿನ ಕಾರ್ಯಕ್ರಮವನ್ನು ದೂರದರ್ಶನದ ಸಹಾಯಕ ನಿರ್ದೇಶಕರಾದ ಮೇಘನಾ ಕೆ. ಟಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಆಚಾರ್ಯ ಪಾಠಶಾಲಾ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ. ವಿಷ್ಣು ಭರತ್ ಆಲಂಪಲ್ಲಿ, ನರ್ಮದ ವಿಭಿನ್ನ ಚೇತನರ ಸಾಮರ್ಥ್ಯ ಘಟಕದ ಸಂಯೋಜಕರು ಹಾಗೂ ಸಂಸ್ಥೆಯ ಉಪನ್ಯಾಸಕಿ ಎಸ್. ಹೇಮಾವತಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳೆ ವಿವಿಧ ಕ್ರೀಡಾ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿಶೇಷ ಚೇತನ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಜೊತೆಗೆ ಶಿಕ್ಷಣ ಸಂಸ್ಥೆಯಲ್ಲಿ ಕಲಿತು ಉನ್ನತ ವ್ಯಾಸಂಗ ಕೈಗೊಂಡಿರುವ ಹಿರಿಯ ವಿದ್ಯಾರ್ಥಿಗಳನ್ನೂ ಅಭಿನಂದಿಸಲಾಯಿತು. ಅಂಧರ ಅಂದದ ಅಂಗಳ ಪುಸ್ತಕವನ್ನು ಗಣ್ಯರು ಲೋಕಾರ್ಪಣೆ ಮಾಡಿದರು. ಬಳಿಕ ಕಾರ್ಯಕ್ರಮದಲ್ಲಿ ಮೇಘನಾ ಕೆ. ಟಿ, ನಮ್ಮಲ್ಲಿ ಯಾವುದೇ ನ್ಯೂನ್ಯತೆ ಇದ್ದರೂ ಅದರ ಬಗ್ಗೆ ಸದಾ ಕೊರಗಿ ಕುಗ್ಗದೆ ಅದನ್ನು ಸವಾಲಾಗಿ ಸ್ವೀಕರಿಸಿ ಹೊಸ ಜೀವನವನ್ನು ನಾವೇ ರೂಪಿಸಿಕೊಳ್ಳಬೇಕು. ಯಾವುದೇ ಕೊರತೆ ನಮ್ಮನ್ನು ಕುಗ್ಗಿಸುವುದು ಸಹಜ, ಆದರೆ…

Read More

ಬೆಂಗಳೂರು: ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಉಪಾಧ್ಯಕ್ಷರು, ಹಿರಿಯ ಪತ್ರಕರ್ತರಾದ ನಾಗಶೆಟ್ಟಿ ಧರಂಪುರ (56) ಅವರು ಹೃದಯಾಘಾತದಿಂದ ಬೀದರ್‌ನಲ್ಲಿ ನಿಧನರಾದರು. ಪತ್ನಿ, ಇಬ್ಬರು ಪುತ್ರಿಯರು ಸೇರಿದಂತೆ ಮೂವರು ಮಕ್ಕಳು ಮತ್ತು ಬಂಧು ಬಳಗವನ್ನು ಅಗಲಿದ್ದಾರೆ. ಕೆಯುಡಬ್ಲೂಜೆ ಸಂತಾಪ: ಸಂಘ ನಿಷ್ಠರಾಗಿದ್ದ ನಾಗಶೆಟ್ಟಿ ಧಮರಂಪುರ ಅವರು ಬೀದರ್ ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ, ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಹಲವು ಮಾಧ್ಯಮದಲ್ಲಿ ಕೆಲಸ ಮಾಡಿದ್ದ ಅವರು ಸಾವು ನೋವಿನ ಸಂಗತಿ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಶೋಕಿಸಿದ್ದು, ಅವರ ಆತ್ಮಕ್ಕೆ ಶಾಂತಿ ಸಿಗಲಿ. ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ. ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವೂ ತೀವ್ರ ಸಂತಾಪ ವ್ಯಕ್ತಪಡಿಸಿದೆ. https://kannadanewsnow.com/kannada/applications-invited-for-subsidy-under-pradhan-mantri-matsya-sampada-yojana/ https://kannadanewsnow.com/kannada/do-you-know-what-a-woman-desires-from-her-husband/

Read More

ಬಳ್ಳಾರಿ : ಪ್ರಸ್ತಕ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸö್ಯಸಂಪದ ಯೋಜನೆಯ ಧರ್ತಿ ಆಭಾ ಜನಜಾತೀಯ ಗ್ರಾಮ ಉತ್ಕೃರ್ಷ ಅಭಿಯಾನ ಯೋಜನೆಯಡಿ ಫಲಾನುಭವಿ ಆಧಾರಿತ ವಿವಿಧ ಘಟಕಗಳಿಗೆ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ತಾಲ್ಲೂಕುಗಳ ಗ್ರಾಮಗಳು: ಕಂಪ್ಲಿ: ತಾಲ್ಲೂಕಿನ ಉಪ್ಪಾರಹಳ್ಳಿ, ಬೆಳುಗೋಡುಹಾಳು, ಸಣಾಪುರ, ಮುದ್ದಾಪುರ-02, ಮುದ್ದಾಪುರ-10, ರಾಮಸಾಗರ, ಕಣವಿ ತಿಮ್ಮಲಾಪುರ, ದೇವಸಮುದ್ರ, ಚಿಕ್ಕ ಜಾಯಿಗನೂರು, ಹಿರೇ ಜಾಗನೂರು, ಹಂಪದೇವನಹಳ್ಳಿ, ಜವುಕು, ಮೆಟ್ರಿ, ದೇವಲಾಪುರ, ಸುಗ್ಗೇನಹಳ್ಳಿ, ಸೋಮಲಾಪುರ, ಮಾವಿನಹಳ್ಳಿ, ಹೊನ್ನಳ್ಳಿ, ನೆಲ್ಲುಡಿ, ಕೊಟ್ಟಾಲ್ ಕ್ಯಾಂಪ್, ಎಮ್ಮಿಗನೂರು. ಬಳ್ಳಾರಿ: ತಾಲ್ಲೂಕಿನ ಹಿರೇಹಡ್ಲಿಗಿ, ಬಸರಕೋಡು, ಸಿಂಧುವಾಳ, ಎರ್ರಿಗುಡಿ, ತಂಬ್ರಹಳ್ಳಿ, ಬ್ಯಾಲಚಿಂತೆ, ಮೀನಹಳ್ಳಿ, ಪರಮದೇವನಹಳ್ಳಿ, ಕುಂಟನಹಾಳು, ಬುರನಾಯಕನಹಳ್ಳಿ. ಕುರುಗೋಡು: ತಾಲ್ಲೂಕಿನ ಮುಷ್ಟ್ಟಗಟ್ಟ, ಕರಿಕೆರಿ, ಸೋಮಲಾಪುರ ಮತ್ತು ಸಿರುಗುಪ್ಪ ತಾಲ್ಲೂಕಿನ ಹಳೆಕೋಟೆ, ಕರ್ಚಿಗನೂರು, ಸಾಲಿಗನೂರು, ಅಕ್ಕತಂಗಿರಹಾಳು, ಮಿಟ್ಟೆಸುಗೂರು. ಸಂಡೂರು: ತಾಲ್ಲೂಕಿನ ಮಲ್ಲಾಪುರ-72, ಹುಲಿಕುಂಟ-73, ಹಿರೇಕೇರಿಯಗಿನಹಳ್ಳಿ, ಅಂಕಮ್ಮನಹಾಳ್, ತೊಣಸಿಗೆರೆ, ಕನಕಪುರ-ಬಿ.ಸಿ, ಯರ್ರಯ್ಯನಹಳ್ಳಿ, ಅಗ್ರಹಾರ, ಎಸ್.ಹೆಚ್.ಆರ್.ಒ. ಓಬಳಾಪುರ, ದೇವರ ಬೂದೇನಹಳ್ಳಿ, ಸಿದ್ದಾಪುರ, ಮುರಾರಿಪುರ, ನರಸಿಂಗಪುರ, ವಿಠ್ಠಲನಗರ, ಲಿಂಗದಹಳ್ಳಿ, ಮಾಲಾಪುರ, ತುಮಟಿ, ರಾಜಪುರ,…

Read More

ಬಳ್ಳಾರಿ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕಲಬುರಗಿ ವಿಭಾಗ-1ರ ಕಲಬುರಗಿ ಘಟಕ-1 ರಿಂದ ಕಲಬುರಗಿ-ಮೈಸೂರು (ಅಮೋಘವರ್ಷ) ಮತ್ತು ಕಲಬುರಗಿ-ಚಿತ್ರದುರ್ಗ ನಾನ್ ಎ/ಸಿ ಸ್ಲೀಪರ್ ಬಸ್ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕಲುಬುರಗಿ ವಿಭಾಗ-1 ರ ವಿಭಾಗೀಯ ನಿಯಂತ್ರಣಾಧಿಕಾರಿ ಅವರು ತಿಳಿಸಿದ್ದಾರೆ. ಕಲಬುರಗಿ-ಮೈಸೂರು ಬಸ್ ಸಂಚಾರವು ಕಲುಬುರಗಿ ಬಸ್ ನಿಲ್ದಾಣದಿಂದ ಸಂಜೆ 05 ಗಂಟೆಗೆ ನಿರ್ಗಮಿಸಿ ವಯಾ ಜೇವರ್ಗಿ, ಶಹಾಪೂರ, ಲಿಂಗಸೂರು, ಸಿಂಧನೂರು, ಬಳ್ಳಾರಿ, ಚಳ್ಳಕೆರೆ, ಹಿರಿಯೂರು, ನಾಗಮಂಗಲ ಮತ್ತು ಪಾಂಡವಪುರ ಮಾರ್ಗದ ಮೂಲಕ ಬೆಳಿಗ್ಗೆ 07 ಗಂಟೆಗೆ ಮೈಸೂರು ತಲುಪುತ್ತದೆ. ಪುನಃ ಮೈಸೂರು ಬಸ್ ನಿಲ್ದಾಣದಿಂದ ಸಂಜೆ 05.30 ಗಂಟೆಗೆ ನಿರ್ಗಮಿಸಿ ಬೆಳಿಗ್ಗೆ 07.30 ಗಂಟೆಗೆ ಕಲಬುರಗಿ ಗೆ ತಲುಪುತ್ತದೆ. ಕಲಬುರಗಿ-ಚಿತ್ರದುರ್ಗ ಬಸ್ ಸಂಚಾರವು ಕಲುಬುರಗಿ ಬಸ್ ನಿಲ್ದಾಣದಿಂದ ರಾತ್ರಿ 10.45 ಗಂಟೆಗೆ ನಿರ್ಗಮಿಸಿ ವಯಾ ಜೇವರ್ಗಿ, ಶಹಾಪೂರ, ಲಿಂಗಸೂರು, ಸಿಂಧನೂರು, ಗಂಗಾವತಿ ಮತ್ತು ಹೊಸಪೇಟೆ ಮಾರ್ಗದ ಮೂಲಕ ಬೆಳಿಗ್ಗೆ 08 ಗಂಟೆಗೆ ಚಿತ್ರದುರ್ಗ…

Read More

ಬೆಂಗಳೂರು: ಡಿ.ದೇವರಾಜ ಅರಸರು ಅವರು ಮುಖ್ಯಮಂತ್ರಿಗಳಾಗಿ ಏಳು ವರ್ಷ ಏಳು ತಿಂಗಳು ಇಪ್ಪತ್ತಮೂರು ದಿನಗಳ ಕಾಲ ಈ ರಾಜ್ಯದ ಜನರ ಸೇವೆ ಮಾಡಿದ್ದಾರೆ. ಅದಕ್ಕಿಂತಲೂ ಹೆಚ್ಚಿನ ಅವಧಿಗೆ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸುವ ಅವಕಾಶವನ್ನು ರಾಜ್ಯದ ಜನತೆ ನನಗೆ ನೀಡಿದ್ದಾರೆ. ಇದನ್ನೆಲ್ಲ ದಾಖಲೆಗಳ ದೃಷ್ಟಿಯಿಂದ ನಾನು ನೋಡುವುದಿಲ್ಲ, ಯಾರೂ ನೋಡಬಾರದು ಕೂಡಾ. ಇದು ಜನರ ಸೇವೆಗೆ ಸಿಕ್ಕಿರುವ ಅವಕಾಶದ ಭಾಗ್ಯ ಎಂದು ತಿಳಿದುಕೊಂಡಿದ್ದೇನೆ ಅಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ನನ್ನ ರಾಜಕೀಯ ಜೀವನಕ್ಕೆ ಹಲವು ಹಿರಿಯರ ಚಿಂತನೆ ಮತ್ತು ಸಾಧನೆಗಳು ಪ್ರೇರಣೆ ಮತ್ತು ಮಾರ್ಗದರ್ಶನ ನೀಡಿವೆ. ಆ ಹಿರಿಯರ ಸಾಲಿನಲ್ಲಿ ದೇವರಾಜ ಅರಸು ಪ್ರಮುಖರು. ನಮ್ಮಿಬ್ಬರ ನಡುವಿನ ಸೈದ್ಧಾಂತಿಕ ಸಹಮತ ಮತ್ತು ನಾನು ಕೂಡಾ ಅವರಂತೆ ಮೈಸೂರಿನ ಮಣ್ಣಿನ ಮಗ ಎನ್ನುವ ಕಾರಣಕ್ಕೆ ನನ್ನ ಹೃದಯದಲ್ಲಿ ಅವರಿಗೆ ವಿಶೇಷವಾದ ಸ್ಥಾನ ಇದೆ ಎಂದಿದ್ದಾರೆ. ಸಾಮಾಜಿಕ ನ್ಯಾಯದ ಬಂಡಿಯ ಪಯಣಕ್ಕೆ ಕರ್ನಾಟಕದಲ್ಲಿ ದೀರ್ಘ ಪರಂಪರೆ ಇದೆ. ಬಸವಣ್ಣನವರಿಂದ…

Read More

ಸಂಕ್ರಾಂತಿ ಪರ್ವಪುಣ್ಯಕಾಲದ ಆಚರಣೆಯನ್ನು ಮಾಡಬೇಕು. ಈ ಸಮಯದಲ್ಲಿ ಸ್ನಾನ,ದಾನ,ಪಿತೃತರ್ಪಣ ಮುಂತಾದ ಕಾರ್ಯವನ್ನು ಮಾಡಬೇಕು. ಸಂಕ್ರಾಂತಿ ಸ್ವರೂಪ : ಯೌವನಾವಸ್ಥೆಯ ಪಕ್ಷಿಜಾತಿಯ ಸಂಕ್ರಾಂತಿ ದೇವಿಯು ಪೂರ್ವದಿಂದ ಬಂದು, ದಕ್ಷಿಣಕ್ಕೆ ಮುಖಮಾಡಿ, ವಾಯವ್ಯಕ್ಕೆ ದೃಷ್ಟಿನೆಟ್ಟು, ಪಶ್ಚಿಮದೆಡೆಗೆ ಹೊರಟಿದ್ದಾಳೆ. ಶ್ವೇತ ಬಣ್ಣದ ಹತ್ತಿ ಬಟ್ಟೆ ತೊಟ್ಟು, ದಂಡ ಆಯುಧ ಧರಿಸಿ, ಬೆಳ್ಳಿ ಪಾತ್ರೆಯಲ್ಲಿ ಅಪೂಪ (ಕರಿದ ಸಿಹಿ) ಉಂಡು, ವಜ್ರ, ಹವಳ, ಕೇದಿಗೆ ಪುಷ್ಪ, ಗೋಪಿಚಂದನದಿಂದ ಅಲಂಕೃತಳಾಗಿ ಕುಳಿತಿದ್ದಾಳೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ,…

Read More

ಬಳ್ಳಾರಿ : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೀರ್ಘಾವಧಿ ಮುಖ್ಯಮಂತ್ರಿಯಾಗಿ ನಾಡಿಗೆ ಸೇವೆ ಸಲ್ಲಿಸುತ್ತಿರುವ ಸಂದರ್ಭದಲ್ಲಿ ಅವರ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರೆಡ್ಡಿ ಪತ್ರ ಬರೆದು, ಕರ್ನಾಟಕದ ಸಾಮಾಜಿಕ ನ್ಯಾಯ ಹಾಗೂ ಜನಪರ ಸರ್ವಾಂಗೀಣ ಅಭಿವೃದ್ಧಿ ಪರಂಪರೆಯನ್ನು ಸಮರ್ಥವಾಗಿ ಮುಂದುವರೆಸುತ್ತಿರುವ ದೂರದೃಷ್ಟಿಯ ನಾಯಕತ್ವಕ್ಕೆ ಅಭಿನಂದನೆಯನ್ನು ಮುಖ್ಯಮಂತ್ರಿಗಳ ಅರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ. ಬಸವರಾಜ ರಾಯರೆಡ್ಡಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಉದ್ದೇಶಿಸಿ ಬರೆದ ಪತ್ರದ ಸಾರಾಂಶ ಇಂತಿದೆ. ಕರ್ನಾಟಕದ ರಾಜಕೀಯ ಇತಿಹಾಸವು ಜನಪರ ಆಡಳಿತ, ಸಾಮಾಜಿಕ ನ್ಯಾಯ ಹಾಗೂ ಸಂವಿಧಾನಾತ್ಮಕ ಸಮಾನತೆಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ನಾಯಕರ ದಿಟ್ಟ ಹೋರಾಟಗಳಿಂದ ರೂಪುಗೊಂಡ ಸುವರ್ಣ ಪರಂಪರೆ ಹೊಂದಿದೆ. ಶೋಷಿತರು, ಹಿಂದುಳಿದವರು ಮತ್ತು ಸಮಾಜದ ಅಂಚಿನಲ್ಲಿರುವ ಸಮುದಾಯಗಳ ಪರವಾಗಿ ಧೈರ್ಯವಾಗಿ ನಿಂತ ನಾಯಕರಿಂದಲೇ ಈ ನಾಡಿನ ಪ್ರಗತಿಪರ ರಾಜಕೀಯ ಸಂಸ್ಕೃತಿ ಬೆಳೆದಿದೆ. ಆ ಪರಂಪರೆಯಲ್ಲಿ ಅಚ್ಚಳಿಯದ ಗುರುತು ಮೂಡಿಸಿದ ಮಹಾನ್ ನಾಯಕರಲ್ಲಿ ದಿವಂಗತ ದೇವರಾಜ…

Read More