Author: kannadanewsnow09

ಬೆಂಗಳೂರು: ಗಂಭೀರ ಕರ್ತವ್ಯ ಲೋಪ, ಶಿಸ್ತು ನಿಯಮ ಉಲ್ಲಂಘನೆ ಆರೋಪದ ಹಿನ್ನಲೆಯಲ್ಲಿ ಪಂಕಜ್ ಕುಮಾರ್ ಪಾಂಡೆ ಅವರಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ನೋಟಿಸ್ ನೀಡಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚನೆಯ ಮೇರೆಗೆ ಕೆಪಿಟಿಸಿಎಲ್ ಎಂ.ಡಿಯಾಗಿರುವಂತ ಐಎಎಸ್ ಅಧಿಕಾರಿ ಪಂಕಜ್ ಕುಮಾರ್ ಪಾಂಡೆ ಅವರಿಗೆ ಸಿಎಸ್ ಶಾಲಿನಿ ರಜನೀಶ್ ಅವರು ನೋಟಿಸ್ ನೀಡಿದ್ದಾರೆ. ಸಿಎಂ ಸೂಚನೆ ಮೇರೆಗೆ ಪಂಕಜ್ ಕುಮಾರ್ ಪಾಂಡೆಗೆ ನೋಟಿಸ್ ನೀಡಲಾಗಿದ್ದು, ಉಕ್ಷಣವೇ ತಮ್ಮ ಮೇಲಿನ ಗಂಭೀರ ಕರ್ತವ್ಯ ಲೋಪ, ಶಿಸ್ತು ಕ್ರಮದ ಉಲ್ಲಂಘನೆಯ ಬಗ್ಗೆ ಉತ್ತರ ನೀಡುವಂತೆ ಸಿಎಸ್ ಶಾಲಿನಿ ರಜನೀಶ್ ಸೂಚಿಸಿದ್ದಾರೆ. ಜನವರಿ.20ರಂದು ಮಧ್ಯಾಹ್ನ 12.30ಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಭೇಟಿಗೆ ಸೂಚಿಸಲಾಗಿತ್ತು. ಆದರೇ ಪಂಕಜ್ ಕುಮಾರ್ ಪಾಂಡೆ ಅವರು ಸರಿಯಾದ ಸಮಯಕ್ಕೆ ಸಿಎಂ ಭೇಟಿಯಾಗದೇ ಕಡೆಗಣಿಸಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ್ದಂತ ಸಿಎಂ ಸಿದ್ಧರಾಮಯ್ಯ ಕೆಂಡಾಮಂಡಲರಾಗಿದ್ದರು. ಮುಖ್ಯಮಂತ್ರಿ ಕರೆ ಮೇರೆಗೆ ಹಾಜರಾಗದೇ ಕರ್ತವ್ಯಲೋಪ ಎಸಗಿದ್ದಂತ ಆರೋಪ ಪಂಕಜ್ ಕುಮಾರ್ ಪಾಂಡೆ ಮೇಲಿತ್ತು. ಗಂಭೀರ…

Read More

ಬೆಂಗಳೂರು: ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಮಂಜುನಾಥ ಪೂಜಾರಿ ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ. ಇತ್ತೀಚೆಗಷ್ಟೇ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಮಂಜುನಾಥ ಪೂಜಾರಿ ಗುರುವಾರ ಸರಳವಾಗಿ ಅಧಿಕಾರ ಸ್ವೀಕರಿಸಿದರು. ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ಅವರು, ಈಡಿಗ, ಬಿಲ್ಲವ, ನಾಮಧಾರಿ ಸೇರಿದಂತೆ 26 ಪಂಗಡಗಳ ತಳ ಸಮುದಾಯದ ಹಿತಾಸಕ್ತಿಗಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಆಶಯದಂತೆ ಉತ್ತಮವಾಗಿ ಸೇವೆ ಮಾಡುವ ಮೂಲಕ ಜನರ ವಿಶ್ವಾಸ ಉಳಿಸಿಕೊಳ್ಳುವುದಾಗಿ ಅವರು ಹೇಳಿದರು. ಸಮಾಜದ ಮುಖಂಡರು ಹಾಗೂ ಸ್ವಾಮೀಜಿಗಳ ವಿಶ್ವಾಸ ಪಡೆದು ಉತ್ತಮವಾಗಿ ಸಮಾಜದ ಅಭಿವೃದ್ಧಿ ಗೆ ಶ್ರಮಿಸುವುದಾಗಿ ಅವರು ನುಡಿದರು. ಇದೇ ಸಂದರ್ಭದಲ್ಲಿ ನಿಗಮದ ಪ್ರಭಾರಿ ವ್ಯವಸ್ಥಾಪಕ ನಿರ್ದೇಶಕ ಡಾ. ರಾಜೀವ ಎನ್.ಕೂಲೇರ ಹಾಗೂ ಸಿಬ್ಬಂದಿ ಹಾಜರಿದ್ದರು. https://kannadanewsnow.com/kannada/good-news-for-the-nomadic-semi-nomadic-community-from-the-state-government-assistance-for-house-construction-from-now-on/ https://kannadanewsnow.com/kannada/5-years-age-relaxation-for-all-candidates-in-government-recruitment-in-the-state-cabinet-decision/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಜನರಿಗೆ ಸಿಹಿಸುದ್ದಿ ನೀಡಲಾಗಿದೆ. ಅದೇನು ಅಂದ್ರೆ ಇನ್ಮುಂದೆ ಮನೆ ನಿರ್ಮಾಣಕ್ಕೆ ನೆರವು ನೀಡೋದಕ್ಕೆ ಇಂದಿನ ಸಂಪುಟ ಸಭೆಯಲ್ಲಿ 100 ಕೋಟಿ ಅನುದಾನಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಇಂದಿನ  ಸಿಎಂ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಸಿವಿಲ್ ಸೇವಾ ಹುದ್ದೆಗಳ ನೇಮಕಾತಿ ಗೊಂದಲಕ್ಕೆ ತೆರೆ ಎಳೆಯಲಾಗಿದೆ. ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಯ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಡಿಸೆಂಬರ್.31, 2027ರವರೆಗೆ ಹೊರಡಿಸುವ ಅಧಿಸೂಚನೆಗೆ ಈ ನಿಯಮ ಅನ್ವಯವಾಗಲಿದೆ. ಸಾಮಾನ್ಯ ವರ್ಗಕ್ಕೆ 35 ರಿಂದ 40 ವರ್ಷ, ಎಸ್ಸಿ-ಎಸ್ಟಿಗಳಿಗೆ 38ರಿಂದ 43 ವರ್ಷಕ್ಕೆ ವಯೋಮಿತಿ ಸಡಿಲಿಕೆಯ ನಿರ್ಧಾರ ಕೈಗೊಳ್ಳಲಾಗಿದೆ. ಇದಲ್ಲದೇ 22 ಹಿಂದುಳಿದ/ ದಲಿತ ಮಠಗಳಿಗೆ ಜಾಗ ಮಂಜೂರು ಮಾಡಲು ಸಂಪುಟ ಒಪ್ಪಿಗೆ ನೀಡಿದೆ. ಬೆಂಗಳೂರು ನಗರ‌ ಜಿಲ್ಲೆ, ಉತ್ತರ ತಾಲೂಕಿನ ದಾಸನಪುರ ಹೋಬಳಿಯಲ್ಲಿ ಜಾಗ ಮಂಜೂರಿಗೆ ಒಪ್ಪಿಗೆ ನೀಡಲಾಗಿದೆ. ರಾವುತ್ತನಹಳ್ಳಿ ಗ್ರಾಮದ ಸರ್ವೇ 57, 58 ರಲ್ಲಿರುವ ಸರ್ಕಾರಿ ಜಮೀನು ದಲಿತ,…

Read More

ಧಾರವಾಡ: ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಗಳಿಸಿದ ಆರೋಪವು ಸಾಭೀತಾದ ಹಿನ್ನಲೆಯಲ್ಲಿ ತುಂಗಾ ಮೇಲ್ದಂಡೆ ಯೋಜನೆಯ ಮುಖ್ಯ ಇಂಜಿನಿಯರ್ ಗೆ 4 ವರ್ಷ ಜೈಲು ಶಿಕ್ಷೆಯಲ್ಲದೇ 1 ಲಕ್ಷ ದಂಡವನ್ನು ವಿಧಿಸಿ ಧಾರವಾಡದ 3ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆದೇಶಿಸಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಸಿದಂತ ಆರೋಪದಡಿ ತುಂಗಾ ಮೇಲ್ದಂಡೆ ಯೋಜನೆಯ ಮುಖ್ಯ ಇಂಜಿನಿಯರ್ ಅಂದಾನಗೌಡ ಪಾಟೀಲ್ ಗೆ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಅವರಿಗೆ ಸಂಬಂಧಿಸಿದಂತ 51,72,003 ರೂಪಾಯಿ ಮೌಲ್ಯದ ಅಕ್ರಮ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಆಗಸ್ಟ್.6, 2014ರಂದು ತುಂಗಾ ಮೇಲ್ದಂಡೆಯ ಸಿಇ ಅಂದಾನಗೌಡ ಪಾಟೀಲ್ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿತ್ತು. ಲೋಕಾಯುಕ್ತ ಎಸ್ಪಿ ಕೆ.ಪರಶುರಾಮ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿತ್ತು. ಇದೇ ಪ್ರಕರಣದಲ್ಲಿ ಕೋರ್ಟ್ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ್ದು ಸಾಭೀತಾದ ಹಿನ್ನಲೆಯಲ್ಲಿ ನಾಲ್ಕು ವರ್ಷ ಜೈಲು, 1 ಲಕ್ಷ ದಂಡವನ್ನು ವಿಧಿಸಿ ಆದೇಶಿಸಿದೆ. https://kannadanewsnow.com/kannada/nita-ambani-donates-rs-5-crore-to-nab-from-reliance-foundation/ https://kannadanewsnow.com/kannada/5-years-age-relaxation-for-all-candidates-in-government-recruitment-in-the-state-cabinet-decision/

Read More

ನವದೆಹಲಿ: ನ್ಯಾಷನಲ್ ಅಸೋಸಿಯೇಷನ್ ಫಾರ್ ದಿ ಬ್ಲೈಂಡ್ (ಎನ್ಎಬಿ) ಇಂಡಿಯಾದ 75 ನೇ ಸಂಸ್ಥಾಪನಾ ದಿನಾಚರಣೆಯಲ್ಲಿ, ರಿಲಯನ್ಸ್ ಫೌಂಡೇಶನ್‌ನ ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಅಂಬಾನಿ ಅವರು ಎನ್‌ಎಬಿಗೆ ರಿಲಯನ್ಸ್ ಫೌಂಡೇಶನ್ ಪರವಾಗಿ 5 ಕೋಟಿ ರೂ.ಗಳ ವಿಶೇಷ ನೆರವು ಘೋಷಿಸಿದ್ದಾರೆ. ಮುಂದಿನ ಐದು ವರ್ಷಗಳಲ್ಲಿ ಈ ನೆರವು ನೀಡಲಾಗುವುದು. ದೃಷ್ಟಿ ಕಳೆದುಕೊಂಡಿರುವ ದುಡಿಯುವ ಮಹಿಳೆಯರು ಮತ್ತು ಬಾಲಕಿಯರಿಗಾಗಿ ವಸತಿ ನಿಲಯಗಳನ್ನು ನವೀಕರಿಸಲಾಗುವುದು ಮತ್ತು ಪರಿವರ್ತಿಸಲಾಗುವುದು. ಈ ಹಾಸ್ಟೆಲ್ ಸುರಕ್ಷಿತ, ಗೌರವಯುತ ಮತ್ತು ಸ್ವಾವಲಂಬಿ ವರ್ಧಕವಾಗಿದೆ. ರಿಲಯನ್ಸ್ ಫೌಂಡೇಶನ್, ಎನ್ಎಬಿ ಇಂಡಿಯಾ ಸಹಯೋಗದೊಂದಿಗೆ ರಾಷ್ಟ್ರಮಟ್ಟದ ಕೌಶಲ್ಯ ನಿರ್ಮಾಣ ಕಾರ್ಯಕ್ರಮವನ್ನು ಪ್ರಾರಂಭಿಸಲಿದೆ. ಬ್ರೈಲ್ ಲಿಪಿಯಲ್ಲಿ ಓದುವುದು ಮತ್ತು ಬರೆಯುವುದು, ಕ್ರೀಡೆ, ಸಂಸ್ಕೃತಿ, ಸೃಜನಶೀಲ ಅಭಿವ್ಯಕ್ತಿ ಮತ್ತು ವಿಶೇಷ ಶಿಕ್ಷಕರ ತರಬೇತಿಗೆ ವಿಶೇಷ ಗಮನ ನೀಡಲಾಗುವುದು. ಮಕ್ಕಳಿಗಾಗಿ ಸುಂದರವಾದ ಹೊಸ ಆಟದ ಪ್ರದೇಶವನ್ನು ಸಹ ನಿರ್ಮಿಸಲಾಗುವುದು. ಈ ಸಂದರ್ಭದಲ್ಲಿ ಮಾತನಾಡಿದ ನೀತಾ ಅಂಬಾನಿ, ರಿಲಯನ್ಸ್ ಫೌಂಡೇಶನ್‌ನ ‘ದೃಷ್ಟಿ ಕಾರ್ಯಕ್ರಮ’ದ ಅಡಿಯಲ್ಲಿ, ಎನ್ಎಬಿ ಸಹಯೋಗದೊಂದಿಗೆ ಶಿಕ್ಷಣ,…

Read More

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಂಪುಟ ಸಭೆಯಲ್ಲಿ ಡಿಸೆಂಬರ್ 31, 2027ರವರೆಗೆ ಎಲ್ಲಾ ನೇಮಕಾತಿಯಲ್ಲಿ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಐದು ವರ್ಷ ವಯೋಮಿತಿ ಸಡಿಲಿಕೆ ಸೇರಿದಂತೆ ಇತರೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಯಿತು. ಆ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಇಂದಿನ  ಸಿಎಂ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಸಿವಿಲ್ ಸೇವಾ ಹುದ್ದೆಗಳ ನೇಮಕಾತಿ ಗೊಂದಲಕ್ಕೆ ತೆರೆ ಎಳೆಯಲಾಗಿದೆ. ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಯ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಡಿಸೆಂಬರ್.31, 2027ರವರೆಗೆ ಹೊರಡಿಸುವ ಅಧಿಸೂಚನೆಗೆ ಈ ನಿಯಮ ಅನ್ವಯವಾಗಲಿದೆ. ಸಾಮಾನ್ಯ ವರ್ಗಕ್ಕೆ 35 ರಿಂದ 40 ವರ್ಷ, ಎಸ್ಸಿ-ಎಸ್ಟಿಗಳಿಗೆ 38ರಿಂದ 43 ವರ್ಷಕ್ಕೆ ವಯೋಮಿತಿ ಸಡಿಲಿಕೆಯ ನಿರ್ಧಾರ ಕೈಗೊಳ್ಳಲಾಗಿದೆ. ಇದಲ್ಲದೇ 22 ಹಿಂದುಳಿದ/ ದಲಿತ ಮಠಗಳಿಗೆ ಜಾಗ ಮಂಜೂರು ಮಾಡಲು ಸಂಪುಟ ಒಪ್ಪಿಗೆ ನೀಡಿದೆ. ಬೆಂಗಳೂರು ನಗರ‌ ಜಿಲ್ಲೆ, ಉತ್ತರ ತಾಲೂಕಿನ ದಾಸನಪುರ ಹೋಬಳಿಯಲ್ಲಿ…

Read More

ಬೆಂಗಳೂರು: ವಿವಿಧ ಕ್ಷೇತ್ರಗಳಾದ್ಯಂತ ಕೃತಕ ಜಾಣ್ಮೆ (ಎಐ) ಅಳವಡಿಕೆ, ಉದ್ಯಮ 4.0 ನಾವೀನ್ಯತೆ ಮತ್ತು ಡಿಜಿಟಲ್‌ ಪರಿವರ್ತನೆಗೆ ವೇಗ ನೀಡಲು ಅನ್ವಯಿಕ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಪರಿಹಾರಗಳ ಕೇಂದ್ರ (ಸಿಎಟಿಎಸ್‌) ಹೆಸರಿನ ಕೃತಕ ಬುದ್ಧಿಮತ್ತೆಯ ಶ್ರೇಷ್ಠತಾ ಕೇಂದ್ರ ಸ್ಥಾಪನೆಗೆ ರಾಜ್ಯ ಸರ್ಕಾರವು ಅನುಮೋದನೆ ನೀಡಿದೆ. ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿ ಈ ಕೇಂದ್ರವನ್ನು ಸ್ಥಾಪಿಸಲಾಗುವುದು. ರಾಷ್ಟ್ರೀಯ ಸಾಫ್ಟ್‌ವೇರ್‌ ಹಾಗೂ ಸೇವಾ ಸಂಸ್ಥೆಯ ಒಕ್ಕೂಟದ (ನಾಸ್ಕಾಂ) ಸಹಭಾಗಿತ್ವದಲ್ಲಿ ಬೆಂಗಳೂರಿನ ಎಚ್‌ಎಸ್‌ಆರ್‌ ಲೇಔಟ್‌ನಲ್ಲಿರುವ ಕಿಯೊನಿಕ್ಸ್‌ ತಾಣದಲ್ಲಿ ನಾಲ್ಕು ವರ್ಷಗಳಲ್ಲಿ ಒಟ್ಟು ₹ 20 ಕೋಟಿ ವೆಚ್ಚದಲ್ಲಿ ಈ ಕೇಂದ್ರವು ಅಸ್ತಿತ್ವಕ್ಕೆ ಬರಲಿದೆ. ಕೇಂದ್ರ ಸ್ಥಾಪನೆಗೆ ಬಳಕೆಯಾಗಲಿರುವ ಹಣಕಾಸು ನೆರವು- ಕೇಂದ್ರ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (ಎಂಇಐಟಿವೈ), ಕರ್ನಾಟಕ ಸರ್ಕಾರ ಮತ್ತು ಉದ್ಯಮ ಪಾಲುದಾರರ 40:40:20 ಕೊಡುಗೆ ಮಾದರಿಯಲ್ಲಿ ಇರಲಿದೆ. ಈ ಎಐ ಶ್ರೇಷ್ಠತಾ ಕೇಂದ್ರವು ಕೃತಕ ಬುದ್ಧಿಮತ್ತೆ, ರೋಬೊಟಿಕ್ಸ್, ಸ್ವಯಂಚಾಲನೆ, ಪೂರೈಕೆ ಸರಪಳಿ…

Read More

ಬೆಂಗಳೂರು: ಬೀದರ್ ಜಿಲ್ಲೆಯಲ್ಲಿ ಮಾರ್ಚ್‌ನಲ್ಲಿ ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಸಂಘಟಿಸುವ 40ನೇ ರಾಜ್ಯ ಸಮ್ಮೇಳನದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಗುರುವಾರ ಅನಾವರಣ ಮಾಡಿದರು. ಈ ಸಂದರ್ಭದಲ್ಲಿ ಅರಣ್ಯ ಸಚಿವ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾದ ಈಶ್ವರ ಬಿ ಖಂಡ್ರೆ ಅವರು ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂೃಜೆ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಸಮ್ಮೇಳನಕ್ಕೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ರಾಜ್ಯ ಪತ್ರಕರ್ತರ ಸಂಘದ ಉಪಾಧ್ಯಕ್ಷ ಎಚ್.ಬಿ.ಮದನಗೌಡ, ಪ್ರಧಾನ ಕಾರ್ಯದರ್ಶಿ ಲೋಕೇಶ್, ಕಾರ್ಯದರ್ಶಿ ಸೋಮಶೇಖರ ಕೆರಗೋಡು, ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಆನಂದ್ ದೇವಪ್ಪ, ಬಾಬುವಾಲಿ, ಶಿವಕುಮಾರಸ್ವಾಮಿ, ಪೃಥ್ವಿ ಮತ್ತಿತರರು ಪಾಲ್ಗೊಂಡಿದ್ದರು. ಅರ್ಥಪೂರ್ಣ ಸಮ್ಮೇಳನವಾಗಿಸಲು ಶ್ರಮಿಸಿ: ಈಶ್ವರ ಖಂಡ್ರೆ ಕರೆ ವಿಕಾಸಸೌಧದ ತಮ್ಮ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂಜೆ) 40ನೇ…

Read More

ರಥ ಸಪ್ತಮಿ ಸ್ನಾನ ಮಂತ್ರ” – ಸ್ನಾನ ಮಾಡುವಾಗ ಹೇಳುವ ಧ್ಯಾನಶ್ಲೋಕ ಮತ್ತು ಮಂತ್ರಗಳು. ಸಪ್ತ ಸಪ್ತ ಮಹಾಸಪ್ತ ಸಪ್ತದ್ವೀಪಾ ವಸುಂಧರಾ | ಸಪಾರ್ಕಪರ್ಣಮಾದಾಯ ಸಪ್ತಮ್ಯಾಂಸ್ನಾನ ಮಾಚರೇತ್ || ಪ್ರಣವಸ್ಯ ಪರಬ್ರಹ್ಮಋಷಿ: ಪರಮಾತ್ಮಾ ದೇವತಾ., ……… ಶುಭೇಶೋಭನ ಮುಹೂರ್ತೇ ಅದ್ಯಬ್ರಹ್ಮಣ: ದ್ವಿತೀಯಪರಾರ್ಧೇ ಶ್ರೀಶ್ವೇತವರಾಹಕಲ್ಪೇ ವೈವಸ್ವತ ಮನ್ವಂತರೇ ಕಲಿಯುಗೇ ಪ್ರಥಮಪಾದೇ ಭರತವರ್ಷೇ ದಂಡಕಾರಣ್ಯೇ ಗೋದಾವರ್ಯಾ: ದಕ್ಷಿಣೇತೀರೇ ಶಾಲೀವಾಹನಶಖೇ, ಬೌದ್ಧಾವತಾರೇ, ರಾಮಕ್ಷೇತ್ರೇ/ಪರಶುರಾಮಕ್ಷೇತ್ರೇ, ಅಸ್ಮಿನ್ ವರ್ತಮಾನೇ ಚಾಂದ್ರಮಾನೇನ ಶ್ರೀ _____ ಸಂವತ್ಸರೇ, ಉತ್ತರಾಯಣೇ, ಶಿಶಿರಋತೌ, ಮಾಘಮಾಸೇ, ಶುಕ್ಲಪಕ್ಷೇ ಸಪ್ತಮ್ಯಾಂ ಶುಭತಿಥೌ, ರಥಸಪ್ತಮೀ ಪ್ರಯುಕ್ತ, ಲಕ್ಷ್ಮೀ ವೆಂಕಟೇಶ/ನರಸಿಂಹ ಪ್ರೀತ್ಯರ್ಥಂ ಸ್ನಾನಮಹಂ ಕರಿಷ್ಯೇ. ಯದ್ಯಜ್ಜನ್ಮಕೃತಂ ಪಾಪಂ ಮಯಾ ಸಪ್ತಸು ಜನ್ಮಸು | ತನ್ಮೇ ರೋಗಂ ಚ ಶೋಕಂ ಚ ಮಾಕರೀ ಹಂತು ಸಪ್ತಮೀ | ಏತಜ್ಜನ್ಮಕೃತಂ ಪಾಪಂ ಜಚ್ಚ ಜನ್ಮಾಂತರಾರ್ಜಿತಂ | ಮನೋವಾಕ್ಕಾಯಜಂ ಯಚ್ಚ ಜ್ಞಾತಾಜ್ಞಾತಂ ಚ ಯತ್ಪುನ: | ಇತಿ ಸಪ್ತವಿಧಂ ಪಾಪಂ ಸ್ನಾನಾನ್ಮೇ ಸಪ್ತ ಸಪ್ತಕೇ | ಸಪ್ತವ್ಯಾಧಿಸಮಾಯುಕ್ತಂ ಹರ ಮಾಕರಿ ಸಪ್ತಮಿ | ಸೂರ್ಯನ ಅರ್ಘ್ಯ ಮಂತ್ರ…

Read More

ಬೆಂಗಳೂರು: ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆಯ ನಿರ್ಧಾರವನ್ನು ಸಂಪುಟ ಕೈಗೊಂಡಿದೆ. ಎಲ್ಲಾ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿಯನ್ನು ಸಡಿಲ ಮಾಡುವಂತ ನಿರ್ಧಾರವನ್ನು ಇಂದಿನ ರಾಜ್ಯ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಸರ್ಕಾರಿ ನೇಮಕಾತಿಯಲ್ಲಿ ಈವರೆಗೆ ಇದ್ದಂತ ವಯೋಮಿತಿಯನ್ನು ಮತ್ತಷ್ಟು ಸಡಿಲಿಕೆ ಮಾಡಲು ನಿರ್ಧರಿಸಿದೆ. ಎಲ್ಲಾ ವರ್ಗದಗಳಿಗೂ 5 ವರ್ಷ ವಯೋಮಿತಿ ಸಡಿಲಿಕೆ ಮಾಡುವಂತ ನಿರ್ಧಾರವನ್ನು ಕೈಗೊಂಡಿದೆ. ಈವರೆಗೆ ಸಾಮಾನ್ಯ ವರ್ಗಕ್ಕೆ 35 ವರ್ಷ, ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 38 ವರ್ಷ ವಯೋಮಿತಿ ಸಡಿಲಿಕೆ ಇತ್ತು. ಇದೀಗ ಎಲ್ಲಾ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ಡಿಸೆಂಬರ್.31, 2027ರವರೆಗೆ ಐದು ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ಡಿಸೆಂಬರ್.31, 2027ರವರೆಗೆ ರಾಜ್ಯ ಸರ್ಕಾರದಿಂದ ಕರೆಯಲಾಗುವಂತ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಸಾಮಾನ್ಯ ವರ್ಗದವರಿಗೆ 35 ವರ್ಷದ ಬದಲಾಗಿ 40 ವರ್ಷ, ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 43…

Read More