Author: kannadanewsnow09

ಬೆಂಗಳೂರು: ರಾಜ್ಯದಲ್ಲಿ ನಡೆದಿದ್ದಂತ ಎಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ಕೇಸ್, ಪಿಎಸ್ಐ ನೇಮಕಾತಿ ಹಗರಣ ಸಂಬಂಧ ಜಾರಿ ನಿರ್ದೇಶನಾಲಯದಿಂದ ಬರೋಬ್ಬರಿ 21 ಕೋಟಿ ಮೌಲ್ಯದ ಆಸ್ತಿ ಪಾಸ್ತಿಯನ್ನು ಜಪ್ತಿ ಮಾಡಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಇಡಿ ಅಧಿಕಾರಿಗಳು ನೀಡಿದ್ದು, ಅಮೃತ್ ಪಾಲ್ ಮತ್ತು ಇತರರ (ಪಿಎಸ್ಐ ನೇಮಕಾತಿ ಹಗರಣ) ಪ್ರಕರಣದಲ್ಲಿ 2002 ರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ನಿಬಂಧನೆಗಳ ಅಡಿಯಲ್ಲಿ, ಬೆಂಗಳೂರು ವಲಯ ಕಚೇರಿಯ ಜಾರಿ ನಿರ್ದೇಶನಾಲಯ (ಇಡಿ) 23.01.2026 ರಂದು ರೂ. 1.53 ಕೋಟಿ ಮೌಲ್ಯದ ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಅಮೃತ್ ಪಾಲ್ (ಎಡಿಜಿಪಿ) ಮತ್ತು ಶ್ರೀಧರ್ ಎಚ್ (ಹೆಡ್ ಕಾನ್ಸ್ಟೇಬಲ್) ಅವರಿಗೆ ಸೇರಿದ ವಸತಿ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡ ಆಸ್ತಿಗಳಲ್ಲಿ ಸೇರಿವೆ ಎಂದಿದೆ. 2021-22 ರಲ್ಲಿ ಕರ್ನಾಟಕದಲ್ಲಿ ಪೊಲೀಸ್ ಸಬ್-ಇನ್ಸ್ಪೆಕ್ಟರ್‌ಗಳ ನೇಮಕಾತಿಯಲ್ಲಿ ಅಕ್ರಮಗಳಿಗಾಗಿ ವಿವಿಧ ಪೊಲೀಸ್ ಅಧಿಕಾರಿಗಳು ಮತ್ತು ಅಭ್ಯರ್ಥಿಗಳ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆ, ಸಿಐಡಿ, ದಾಖಲಿಸಿದ ಎಫ್‌ಐಆರ್ ಆಧಾರದ…

Read More

ರಾಮನಗರ: ಜಿಲ್ಲೆಯಲ್ಲಿ ಈಜುಕೊಳದಲ್ಲೇ ಮಹಿಳೆಯೊಬ್ಬರು ಅನುಮಾನಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮಹಿಳೆಯನ್ನು ಪತಿಯೇ ಕೊಲೆ ಮಾಡಿರುವಂತ ಆರೋಪ ಕೇಳಿ ಬಂದಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಬಚ್ಚೇಗೌಡಪಾಳ್ಯದಲ್ಲಿ ಸ್ವಿಮ್ಮಿಗ್ ಪೂಲ್ ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪ್ರತಿಭಾ(29) ಎನ್ನುವಂತ ಮಹಿಳೆಯ ಶವ ಪತ್ತೆಯಾಗಿದೆ. ಪ್ರತಿಮಾ ಹಾಗೂ ಪತಿ ಬಾಬು ಇಬ್ಬರು ಬಚ್ಚೇಗೌಡನಪಾಳ್ಯದ ಹೊರವಲಯದ ತೋಟದಲ್ಲಿ ವಾಸವಾಗಿದ್ದರು. ಮೃತ ಪತ್ನಿ ಪ್ರತಿಮಾ ಬಾಬು ಅವರಿಗೆ ಎರಡನೇ ಪತ್ನಿಯಾಗಿದ್ದರು. ಇಬ್ಬರು ಮಕ್ಕಳಿದ್ದಾರೆ. ಕೌಟುಂಬಿಕ ಕಲಹದಿಂದ ಜಗಳ ಉಂಟಾಗಿ, ಪತಿ ಬಾಬುವೇ ಪತ್ನಿ ಪ್ರತಿಮಾ ಕೊಲೆ ಮಾಡಿ ಈಜುಕೊಳದಲ್ಲಿ ಶವ ಎಸೆದಿರೋದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಕೋಡಿಹಳ್ಳಿ ಠಾಣೆಯ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿ, ಪ್ರತಿಭಾ ಅವರ ಪತಿ ಬಾಬು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರತಿಭಾ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. https://kannadanewsnow.com/kannada/shock-for-motorists-travelling-on-one-way-road-in-bengaluru-11498-cases-registered/

Read More

ಬೆಂಗಳೂರು: ನಗರದಲ್ಲಿ ಒನ್ ವೇ ರಸ್ತೆಯಲ್ಲಿ ಸಂಚರಿಸಿದಂತ ವಾಹನ ಸವಾರರಿಗೆ ಸಂಚಾರ ಪೊಲೀಸರು ಶಾಕ್ ನೀಡಿದ್ದಾರೆ. ಬರೋಬ್ಬರಿ 11,498 ಪ್ರಕರಣಗಳನ್ನು ದಾಖಲಿಸಿದ್ದಾರೆ. ಈ ಕುರಿತಂತೆ ಬೆಂಗಳೂರು ಸಂಚಾರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬೆಂಗಳೂರು ನಗರ ರಸ್ತೆ ಅಪಘಾತಗಳನ್ನು ತಡೆಗಟ್ಟುವ ಸಲುವಾಗಿ ಏಕಮುಖ ರಸ್ತೆಗಳಲ್ಲಿ ವಿರುದ್ಧವಾಗಿ ವಾಹನಗಳನ್ನು ಚಲಾಯಿಸುವ ಚಾಲಕರು, ಸವಾರರ ವಿರುದ್ಧ ದಿನಾಂಕ 21-01-2026ರಿಂದ ವಿಶೇಷ ಕಾರ್ಯಾಚರಣೆಯನ್ನು ನಗರದಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದಿದೆ. ಸಂಚಾರ ಪೊಲೀಸರ ವಿಶೇಷ ಕಾರ್ಯಾಚರಣೆಯಲ್ಲಿ ದಿನಾಂಕ 21-01-2026ರಿಂದ 24-01-2026ರವರೆಗೆ ಒಟ್ಟು 11,498 ಪ್ರಕರಣಗಳನ್ನು ದಾಖಲು ಮಾಡಲಾಗಿದೆ. ಸಾರ್ವಜನಿಕ ಸುರಕ್ಷತಾ ಸಂಚಾರವನ್ನು ಗಮನದಲ್ಲಿಟ್ಟುಕೊಂಡು ಈ ವಿಶೇಷ ಕಾರ್ಯಾಚರಣೆಯನ್ನು ನಿರಂತರವಾಗಿ ಮುಂದುವರೆಸಲಾಗುವುದು ಎಂಬುದಾಗಿ ತಿಳಿಸಿದೆ.

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಧಾನ ಪರಿಷತ್ ಸದಸ್ಯರಿಗೆ ಭಂಪರ್ ಗಿಫ್ಟ್ ನೀಡಲಾಗಿದೆ. ಬರೋಬ್ಬರಿ 299 ಕೋಟಿ ಅನುದಾನವನ್ನು ಬಿಡುಗಡೆ ಮಾಡಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಜಂಟಿ ನಿರ್ದೇಶಕರು ಹಾಗೂ ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿಯವು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ  ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಅಧೀನದಲ್ಲಿ ಬರುವ ವಿವಿಧ ಇಲಾಖೆ/ಸಂಸ್ಥೆ/ಮಂಡಳಿ/ಪ್ರಾಧಿಕಾರಗಳಿಗೆ ಸಂಬಂಧಿಸಿದಂತೆ ಯೋಜನಾ ಕಾರ್ಯಕ್ರಮಗಳನ್ನು 2025-26ನೇ ಸಾಲಿಗೆ ಮುಂದುವರೆಸಲಾಗಿದೆ ಹಾಗೂ ಪುಸಕ್ತ ಸಾಲಿನ ಆಯವ್ಯಯದಲ್ಲಿ ಕರ್ನಾಟಕ ಶಾಸಕರ ಸ್ಥಳೀಯ ಪುದೇಶಾಭಿವೃದ್ಧಿ ಯೋಜನೆಯಡಿ ಒಟ್ಟು ರೂ.60225.17 ಲಕ್ಷಗಳನ್ನು ಈ ಕೆಳಕಂಡಂತೆ ಒದಗಿಸಲಾಗಿದೆ ಎಂದಿದ್ದಾರೆ. ಕರ್ನಾಟಕ ಶಾಸಕರ ಸ್ಥಳೀಯ ಪುದೇಶಾಭಿವೃದ್ಧಿ ಯೋಜನೆಯ ಮಾರ್ಗಸೂಚಿ ಕಂಡಿಕೆ 4.7 ರನ್ವಯ ಜಿಲ್ಲಾ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಲೆಕ್ಕ ಶೀರ್ಷಿಕೆ 2575-60-265-0-02- 034 (ಗುತ್ತಿಗೆ/ಹೊರಗುತ್ತಿಗೆ) ರಡಿ 2025-26ನೇ ಸಾಲಿನಲ್ಲಿ ಒದಗಿಸಿರುವ ಅನುದಾನದ ಪೈಕಿ ರೂ.6.71 ಲಕ್ಷಗಳನ್ನು, 2024-25ನೇ ಸಾಲಿನಲ್ಲಿ ಕಾರ್ಯನಿರತ ಸಿಬ್ಬಂದಿಗಳ ವೇತನಕ್ಕೆ ಕೊರತೆಯಾಗಿದ್ದ ಅನುದಾನವನ್ನು…

Read More

ಹುಬ್ಬಳ್ಳಿ : ರಾಜ್ಯದ ಕಾಂಗ್ರೆಸ್‌ ಸರ್ಕಾರ ಜಾರಿ ಮಾಡಿದ ಪಂಚ ಗ್ಯಾರಂಟಿಗಳು ಇಡೀ ವಿಶ್ವದಲ್ಲೇ ಮಾದರಿಯಾಗಿವೆ. ಈ ಗ್ಯಾರಂಟಿಗಳಿಗೆ ವರ್ಷಕ್ಕೆ ಅರವತ್ತು ಸಾವಿರ ಕೋಟಿ ವ್ಯಯಿಸಲಾಗುತ್ತಿದೆ. ಐದು ವರ್ಷಕ್ಕೆ ಮೂರು ಲಕ್ಷ ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ವಸತಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಗೃಹಮಂಡಳಿ ವತಿಯಿಂದ ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗೃಹ ಮಂಡಳಿ ನಿರ್ಮಿಸಿರುವ 42,345 ಮನೆಗಳು ಹಾಗೂ ಕೊಳಗೇರಿ ಅಭಿವೃದ್ಧಿ ಮಂಡಳಿಯ 46,000 ಮನೆಗಳ ವಿತರಣೆ ಸಮಾರಂಭದಲ್ಲಿ ಅವರು ಮಾತನಾಡಿದರು. ದೇಶದ ಸಾಕಷ್ಟು ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇದೆ. ಆದರೆ ಅವರು ಯಾರೂ ನಮ್ಮ ಸರ್ಕಾರ ನೀಡಿರುವ ಗ್ಯಾರಂಟಿಗಳನ್ನು ಜಾರಿ ಮಾಡಿಲ್ಲ. ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಇಂತಹ ಮಹತ್ವದ ಅಭೂತಪೂರ್ವ ಗ್ಯಾರಂಟಿಗಳನ್ನು ಜಾರಿ ಮಾಡಿ ಮಾದರಿಯಾಗಿದೆ ಎಂದು ಬಣ್ಣಿಸಿದರು. ಶಕ್ತಿ ಯೋಜನೆಯಲ್ಲಿ 500 ಕೋಟಿ ಮಹಿಳೆಯರು…

Read More

ಬೆಂಗಳೂರು: ರಾಜ್ಯದ ಜೈಲಿನಲ್ಲಿರುವಂತ ವಿಚಾರಣಾಧೀನ ಆರೋಪಿಗಳಿಗೆ ಒದಗಿಸುವಂತ ಸೌಕರ್ಯಗಳ ಕುರಿತಂತೆ ಮಹತ್ವದ ಆದೇಶವನ್ನು ಕಾರಾಗೃಹ ಸುಧಾರಣಾ ಸೇವೆಯ ಡಿಜಿಪಿ ಅಲೋಕ್ ಕುಮಾರ್ ಹೊರಡಿಸಿದ್ದಾರೆ. ಅದರಲ್ಲಿ ನಟ ದರ್ಶನ್ ಅವರಿಗೆ ಹೆಚ್ಚುವರಿ ಬ್ಲಾಂಕೆಟ್ ಸೌಲಭ್ಯಕ್ಕೆ ಬ್ರೇಕ್ ಹಾಕಲಾಗಿದೆ. ರಾಜ್ಯ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಹೊರಡಿಸಿರುಂತ ಆದೇಶದಲ್ಲಿ ಬೆಂಗಳೂರು: ರಾಜ್ಯದ ಜೈಲಿನಲ್ಲಿರುವಂತ ವಿಚಾರಣಾಧೀನ ಆರೋಪಿಗಳಿಗೆ ಒದಗಿಸುವಂತ ಸೌಕರ್ಯಗಳ ಕುರಿತಂತೆ ಮಹತ್ವದ ಆದೇಶವನ್ನು ಕಾರಾಗೃಹ ಸುಧಾರಣಾ ಸೇವೆಯ ಡಿಜಿಪಿ ಅಲೋಕ್ ಕುಮಾರ್ ಹೊರಡಿಸಿದ್ದಾರೆ. ಅದರಲ್ಲಿ ನಟ ದರ್ಶನ್ ಅವರಿಗೆ ಹೆಚ್ಚುವರಿ ಬ್ಲಾಂಕೆಟ್ ಸೌಲಭ್ಯಕ್ಕೆ ಬ್ರೇಕ್ ಹಾಕಲಾಗಿದೆ. ರಾಜ್ಯ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಹೊರಡಿಸಿರುಂತ ಆದೇಶದಲ್ಲಿ ವಿಚಾರಣಾಧೀನ ಆರೋಪಿಗೆ ಜೈಲಿನಲ್ಲಿ ಕೊಡುವೆ ಬ್ಲಾಂಕೆಟ್ ಬಳಸಬೇಕು. ಹೆಚ್ಚುವರಿಯಾಗಿ ಒಂದು ಬ್ಲಾಂಕೆಟ್ ನೀಡಲಾಗುತ್ತದೆ. ಅದರ ಹೊರತಾಗಿ ಯಾವುದೇ ಹಾಸಿಗೆ ಸೌಲಭ್ಯ ಇರೋದಿಲ್ಲ ಎಂಬುದಾಗಿ ತಿಳಿಸಿದ್ದಾರೆ. ಇನ್ನೂ ಕೈದಿಗಳಿಗೆ ಆಹಾರ, ಬಟ್ಟೆ, ಹಾಸಿಗೆ ಸರಬರಾಜು ನಿಯಂತ್ರಣಕ್ಕೆ ಸೂಚಿಸಲಾಗಿದೆ. ಜೈಲಿನ ನಿಯಮಾವಳಿ ಪ್ರಕಾರ ಆಹಾರ, ಬಟ್ಟೆ, ಹಾಸಿಗೆ ನೀಡಲಾಗುತ್ತದೆ. ಸಂದರ್ಶನ ವೇಳೆ…

Read More

ಶಿವಮೊಗ್ಗ: ಹಾಲಪ್ಪ 5 ಕೋಟಿ ಅಲ್ಲ, 25 ಕೋಟಿ ಮಾನನಷ್ಟ ಮೊಕದ್ದಮೆ ಹಾಕಿದರೂ ನಾನು ಎದುರಿಸೋದಕ್ಕೆ ಸಿದ್ಧನಿದ್ದೇನೆ. ಅದಕ್ಕೆಲ್ಲ ಜಗ್ಗೋದು ಇಲ್ಲ, ಬಗ್ಗೋದು ಇಲ್ಲ ಎಂಬುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಬಹಿರಂಗವಾಗಿಯೇ ಸವಾಲ್ ಹಾಕಿದ್ದಾರೆ. ಇಂದು ಸುದ್ದಿಗಾರರು ಮಾನನಷ್ಟ ಮೊಕದ್ದಮೆ ನೋಟಿಸ್ ಕುರಿತಂತೆ ಕೇಳಿದಂತ ಪ್ರಶ್ನೆಗೆ ಉತ್ತರಿಸಿದಂತ ಅವರು, ಹಾಲಪ್ಪ ಶಾಸಕರಾಗಿದ್ದಂತ ಸಂದರ್ಭದಲ್ಲಿ ಸಿಗಂದೂರು ದೇವಸ್ಥಾನದ ಆಡಳಿತ ಮಂಡಳಿಯ ರಾಮಪ್ಪನವರ ನಡುವೆ ವೈಮನಸ್ಸು ಇದ್ದ ಕಾರಣ, ಅಂದಿನ ಬಿಜೆಪಿ ಸರ್ಕಾವು ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ಸೇರಿಸಲು ಹೊರಟಿತ್ತು. ಆ ಬಗ್ಗೆ ಹಾಲಪ್ಪ ವಿರೋಧ ವ್ಯಕ್ತ ಪಡಿಸಲಿಲ್ಲ. ಅದಕ್ಕೆ ಸಮ್ಮತಿ ಎನ್ನುವಂತೆ ಮೌನವಾಗಿಯೇ ಇದ್ದರು. ಹಾಗಾಗೀ ನಾನು ಬಹಿರಂಗವಾಗಿ ಅವರ ವಿರುದ್ಧ ಮಾತನಾಡಿದ್ದೇನೆ ಎಂದರು. ಸಿಗಂದೂರು ದೇವಸ್ಥಾನದ ವಿಚಾರವಾಗಿ ನಾನು ಯಾವತ್ತೂ ರಾಜಕೀಯ ಮಾಡುವುದಿಲ್ಲ. ದೇವಿಯ ಸನ್ನಿಧಿಗೆ ನಮ್ಮ ಕುಟುಂಬ ತಲೆ ತಲಾಂತರಿಂದ ನಡೆದುಕೊಳ್ಳುತ್ತಿದೆ. ನಾನು ಸಿಗಂದೂರು ದೇವಿಯ ಭಕ್ತನಾಗಿದ್ದೇನೆ. ನಾನು ಸಿಗಂದೂರು ದೇವಸ್ಥಾನದ ಆಡಳಿತ ಮಂಡಳಿ ಅಥವಾ ಪೂಜೆ ಮಾಡುವಂತ ಭಟ್ಟರ…

Read More

ಬೆಂಗಳೂರು: ನಗರದ ಮೆಜೆಸ್ಟಿಕ್ ನಿಂದ ಕೆಂಪೇಗೌಡ ವಿಮಾನ ನಿಲ್ದಾಣದವರೆಗೆ ಸಬ್ ಅರ್ಬನ್ ರೈಲು ಯೋಜನೆಗೆ ರೈಲ್ವೆ ಇಲಾಖೆ ಗ್ರೀನ್ ಸಿಗ್ನಲ್ ನೀಡಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಮೆಜೆಸ್ಟಿಕ್ ಟು ಏರ್ ಪೋರ್ಟ್ ಗೆ ಸಬ್ ಅರ್ಬನ್ ರೈಲು ಯೋಜನೆಗೆ ಸುಮಾರು 4,100 ಕೋಟಿ ವೆಚ್ಚ ಆಗಲಿದೆ. ಇದಕ್ಕೆ ರೈಲ್ವೆ ಇಲಾಖೆ ಅನುಮೋದನೆ ನೀಡಿದೆ. 2030ರ ವೇಳೆಗೆ ಕಾಮಗಾರಿ ಮುಗಿಯೋ ಸಾಧ್ಯತೆ ಇದೆ. https://kannadanewsnow.com/kannada/cm-siddaramaiah-issues-stern-instructions-to-all-ministers-to-attend-the-session-in-person-not-absent/ https://kannadanewsnow.com/kannada/ex-minister-harathalu-halappa-defamation-suit-notice-to-mla-belur-gopalakrishna/

Read More

ಬೆಂಗಳೂರು: ರಾಜ್ಯದಲ್ಲಿ ವಿಧಾನಮಂಡಲದ ಅಧಿವೇಶನ ನಡೆಯುತ್ತಿದೆ. ಈ ಅಧಿವೇಶನದ ವೇಳೆಯಲ್ಲೇ ಕೆಲ ಸಚಿವರು ಗೈರು ಹಾಜರಾಗಿದ್ದರ ಬಗ್ಗೆ ವಿಪಕ್ಷಗಳ ಸದಸ್ಯರು ಆಕ್ರೋಶ ಹೊರಹಾಕಿದ್ದರು. ಈ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವಂತ ಸಿಎಂ ಸಿದ್ಧರಾಮಯ್ಯ ಅವರು, ಅಧಿವೇಶನದಕ್ಕೆ ಎಲ್ಲರೂ ಹಾಜರಿರಬೇಕು. ಯಾವುದೇ ಕಾರಣಕ್ಕೂ ಗೈರಾಗದಂತೆ ಖಡಕ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ವಿಧಾನಮಂಡಲದ ಅಧಿವೇಶನಕ್ಕೆ ಸಚಿವರೇ ಗೈರು ಹಾಜರಾಗುವುದರಿಂದ ಸಾರ್ವಜನಿಕ ವಲಯದಲ್ಲಿ ತಪ್ಪು ಸಂದೇಶ ರವಾನೆಯಾಗಲಿದೆ. ಹೀಗಾಗಿ ವಿವಿಧ ಕಾರಣಗಳನ್ನು ನೀಡಿ ಸದನಕ್ಕೆ ಸಚಿವರು ಗೈರ ಹಾಜರಾಗಬಾರದು. ಖುದ್ದು ಹಾಜರಿರುವಂತೆ ತಿಳಿಸಿದ್ದಾರೆ ಎನ್ನಲಾಗಿದೆ. ಅಧಿವೇಶನ ನಡೆಯುತ್ತಿರುವಂತ ಸಂದರ್ಭದಲ್ಲಿಯೇ ಆಯಾ ಸಚಿವರು ತಮ್ಮ ಇಲಾಖೆ ಅಥವಾ ಬೇರೆ ಯಾವುದೇ ಸಭೆ ಸಮಾರಂಭಗಳನ್ನು ಆಯೋಜಿಸಬಾರದು. ಪ್ರತಿ ದಿನವೂ ಸದನದಕ್ಕೆ ಗೌರವ ಹೆಚ್ಚಿಸುವ ನಿಟ್ಟಿನಲ್ಲಿ ಖುದ್ದು ಹಾಜರಾಗಿ ಎಂಬುದಾಗಿ ಸೂಚಿಸಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. https://kannadanewsnow.com/kannada/boy-commits-suicide-by-shooting-himself-after-stabbing-father/ https://kannadanewsnow.com/kannada/from-now-on-government-officials-must-accept-phone-calls-from-public-representatives-state-government-orders/

Read More

ಮಂಗಳೂರು : ತಂದೆಯೊಂದಿಗೆ ಜಗಳವಾಡಿದಂತ ಬಾಲಕನೊಬ್ಬ, ಸಿಟ್ಟಿನಲ್ಲಿ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾನೆ. ಆ ಬಳಿಕ ಮನೆಯಲ್ಲಿದ್ದಂತ ಕೋವಿಯಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಉಪ್ಪಿನಂಗಡಿ ಸಮೀಪದ ರಾಮಕುಂಜ ಗ್ರಾಮದ ಪಾದೆಯಲ್ಲಿ ನಡೆದಿದೆ. ಮಂಗಳೂರಿನ ಉಪ್ಪಿನಂಗಡಿ ಸಮೀಪದ ರಾಮಕುಂಜ ಗ್ರಾಮದ ಪಾದೆ ಎಂಬಲ್ಲಿ ತಂದೆ ವಸಂತ ಅಮೀನ್ ಹಾಗೂ ಬಾಲಕ ಮೋಕ್ಷ ನಡುವೆ ಜಗಳ ಉಂಟಾಗಿದೆ. ಈ ಜಗಳ ತಾರಕಕ್ಕೇರಿದಂತ ಸಂದರ್ಭದಲ್ಲಿ ತಂದೆ ವಸಂತ ಅಮೀನ್ ಅವರಿಗೆ ಬಾಲಕ ಮೋಕ್ಷ ಚಾಕುವಿನಿಂದ ಇರಿದು ಗಾಯಗೊಳಿಸಿದ್ದಾರೆ. ಪುತ್ರನ ಚಾಕು ಇರಿತಕ್ಕೆ ಒಳಗಾದಂತ ತಂದೆ ವಸಂತ ಅಮೀನ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಎ.ಜೆ ಆಸ್ಪತ್ರೆದೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ತಂದೆ ವಸಂತ ಅಮೀನ್ ಸಾವು ಬದುಕಿನ ನಡುವೆ ಹೋರಾಡುತ್ತಿರುವ ವಿಷಯ ತಿಳಿದಂತ ಅವರ ಪುತ್ರ ಬಾಲಕ ಮೋಕ್ಷ, ಮನೆಯಲ್ಲಿದ್ದಂತ ಕೋವಿಯಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ತಂದೆ-ಪುತ್ರನ ನಡುವೆ ಯಾವ ವಿಷಯಕ್ಕೆ ಜಗಳವಾಗಿದೆ ಎನ್ನುವ ವಿಚಾರ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ. ಅಂದಹಾಗೇ…

Read More