Subscribe to Updates
Get the latest creative news from FooBar about art, design and business.
Author: kannadanewsnow09
ಕೊಪ್ಪಳ: ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಕೂಗು ವಿಚಾರ ಒಂದೆಡೆಯಾದರೇ, ಲಿಂಗಾಯತ ಕೋಟಾದಲ್ಲಿ ನಾನ್ಯಾಕೆ ಸಿಎಂ ಆಗಬಾರದು ಎಂಬುದಾಗಿ ಶಾಸಕ ಬಸವರಾಜ ರಾಯರೆಡ್ಡಿ ಧ್ವನಿ ಎತ್ತಿದ್ದಾರೆ. ಕೊಪ್ಪಳದ ಯಲಬುರ್ಗಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನ್ಯಾಕೆ ಸಿಎಂ ಆಗಬಾರದು? ಆದರೇ ಅದನ್ನ ಹೇಳಲು ಆಗಲ್ಲ. ಈಗ ಸಿದ್ಧರಾಮಯ್ಯ ಸಿಎಂ ಆಗಿದ್ದಾರೆ. ಸಿದ್ಧರಾಮಯ್ಯ ಬಜೆಟ್ ಸಿದ್ದತೆ ಮಾಡಲು ಸೂಚಿಸಿದ್ದಾರೆ. ಪಕ್ಷದಲ್ಲಿ ಸಿಎಂ ಆಗುವಂತ ನಾಯಕರು ಬಹಳ ಇದ್ದಾರೆ ಎಂದರು. ನನ್ನ ಪ್ರಕಾರ ಅಧಿಕಾರ ಹಂಚಿಕೆ ಚರ್ಚೆಯೇ ಅರ್ಥಹೀನ. ಸಿದ್ಧರಾಮಯ್ಯ ಐದು ವರ್ಷ ಇರ್ತಾರೆ. ಸಿಎಲ್ ಪಿ ಸಭೆಯಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಯಾರೂ ಹೇಳಿಲ್ಲ. ನಮಗೆ ಆವಾಗಲೇ ಹೇಳಬೇಕಿತ್ತಲ್ವ ಎಂದು ಪ್ರಶ್ನಿಸಿದರು. ಒಬ್ಬ ಮುಖ್ಯಮಂತ್ರಿಯನ್ನು ಸಮ್ಮ ಸುಮ್ಮನೆ ತೆಗೆಯೋದಕ್ಕೆ ಆಗೋದಿಲ್ಲ. ಸಿಎಂ ತೆಗೆಯಬೇಕು ಅಂದ್ರೆ ಭ್ರಷ್ಚಾಚಾರ ಆರೋಪ ಇರಬೇಕು. ಇಲ್ಲವೇ ಸಿಎಂ ಜನ ವಿರೋಧಿ ಕೆಲಸವನ್ನು ಮಾಡಿರಬೇಕು. ಡಿಸಿಎಂ ಡಿ.ಕೆ ಎಲ್ಲೂ ಕೂಡ ಸಿಎಂ ಆಗುತ್ತೇನೆ ಅಂದಿಲ್ಲ. ಡಿಕೆ ಅಧ್ಯಕ್ಷರು, ಹೀಗಾಗಿ ಅವರ ಪರ ಬ್ಯಾಟ್…
ಕೊಡಗು: ಜಿಲ್ಲೆಯಲ್ಲಿ ಪುಟ್ ಬಾಲ್ ಸೆಮಿಫೈನಲ್ ಪಂದ್ಯದ ವೇಳೆಯಲ್ಲಿ ಮಾರಾಮಾರಿಯೇ ನಡೆದಿದೆ. ಮೈದಾನದಲ್ಲೇ ಅಭಿಮಾನಿಗಳು ಬಡಿದಾಡಿಕೊಂಡಿದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆ ಪಟ್ಟಣದಲ್ಲಿ ಪುಟ್ ಬಾಲ್ ಪಂದ್ಯಾವಳಿಯ ಸಂದರ್ಭದಲ್ಲಿ ಎರಡು ಗುಂಪುಗಳು ಬಡಿದಾಡಿಕೊಂಡಿವೆ. ಕಲ್ಲುಬಾಯ್ಸ್ ಸಂಘದಿಂದ ಆಯೋಜಿಸಿದ್ದ ಪಂದ್ಯಾವಳಿಯ ವೇಳೆಯಲ್ಲಿ ಈ ಗಲಾಟೆ ನಡೆದಿದೆ. ಪುಟ್ ಬಾಲ್ ಸೆಮಿಫೈನಲ್ ಆಡುತ್ತಿದ್ದ 2 ತಂಡಗಳ ಅಭಿಮಾನಿಗಳು ನಡುವೆ ಮಾರಾಮಾರಿಯಾಗಿದೆ. ಕುರ್ಚಿ ಹಿಡಿದು ಪರಸ್ಪರ ಅಭಿಮಾನಿಗಳು ಬಡಿದಾಟ ಮಾಡಿಕೊಂಡಿದ್ದಾರೆ. ಈ ವೇಳೆ ಮಧ್ಯ ಪ್ರವೇಶಿಸಿದಂತ ಪೊಲೀಸರು ಗುಂಪನ್ನು ಚದುರಿಸಿದ್ದಾರೆ. https://kannadanewsnow.com/kannada/cab-drivers-blockade-uber-office-in-bengaluru-protest-deny-duty-to-kannadigas/ https://kannadanewsnow.com/kannada/nutritionist-clarifies-whether-to-use-freshly-prepared-or-leftover-atta-dough-kept-in-refrigerator-wheat-is-not-the-villain/
ಬೆಂಗಳೂರು: ಕನ್ನಡಿಗ ಚಾಲಕರಿಗೆ ಡ್ಯೂಟಿ ನೀಡದೇ ಬ್ಲಾಕ್ ಮಾಡಿ, ಬೇರೆ ರಾಜ್ಯದವರಿಗೆ ಅವಕಾಶ ನೀಡುತ್ತಿರುವುದನ್ನು ಖಂಡಿಸಿ, ಬೆಂಗಳೂರಲ್ಲಿ ಉಬರ್ ಕಚೇರಿ ಮುಂದೆ ಚಾಲಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೇ ಕಚೇರಿ ಸೆಟರ್ ಮುರಿದು ಒಳ ನುಗ್ಗೋದಕ್ಕೂ ಯತ್ನಿಸಿದ್ದಾರೆ. ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿರುವಂತ ಉಬರ್ ಕಚೇರಿಯ ಮುಂದೆ ಕನ್ನಡಿಗ ಚಾಲಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೇ ಕಚೇರಿ ಶೆಟರ್ ಮುಚ್ಚಿದ್ದರಿಂದ ಆಕ್ರೋಶಗೊಂಡ ಕ್ಯಾಬ್ ಚಾಲಕರು ಮುರಿದು ಒಳ ನುಗ್ಗೋದಕ್ಕೂ ಯತ್ನಿಸಿದಂತ ಘಟನೆ ನಡೆದಿದೆ. ಅಂದಹಾಗೇ ಕನ್ನಡಿಗ ಚಾಲಕರಿಗೆ ಡ್ಯೂಟಿ ನೀಡಿದೇ ಬಾಂಗ್ಲ ಹಾಗೂ ಬೇರೆ ರಾಜ್ಯಗಳ ಚಾಲಕರಿಗೆ ಉಬರ್ ಕಂಪನಿಯಿಂದ ಡ್ಯೂಟಿ ನೀಡಲಾಗಿತ್ತಂತೆ. ಕನ್ನಡಿಗ ಚಾಲಕರನ್ನು ಬ್ಲಾಕ್ ಮಾಡಿದ್ದಕ್ಕೆ ಸಿಡಿದೆದ್ದು ಪ್ರತಿಭಟನೆ ನಡೆಸುತ್ತಿದ್ದಾರೆ. https://kannadanewsnow.com/kannada/in-the-era-of-ai-it-is-necessary-to-ensure-the-authenticity-of-news-and-images-minister-ishwar-khandre/ https://kannadanewsnow.com/kannada/nutritionist-clarifies-whether-to-use-freshly-prepared-or-leftover-atta-dough-kept-in-refrigerator-wheat-is-not-the-villain/
ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬನನ್ನು ಕೊಂದು ನಿರ್ಜನ ಪ್ರದೇಶಕ್ಕೆ ತಂದು ಬೆಂಕಿ ಹಚ್ಚಿ ದುಷ್ಕರ್ಮಿಗಳು ಪರಾರಿಯಾಗಿರುವಂತ ಬೆಚ್ಚಿ ಬೀಳಿಸೋ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸುಮಾರು 30 ವರ್ಷದ ವ್ಯಕ್ತಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆ ಸಮೀಪದ ನೈಸ್ ರಸ್ತೆ ಪಕ್ಕದಲ್ಲೇ ಅರೆಬೆಂದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಬೇರೆ ಕಡೆಯಲ್ಲಿ ವ್ಯಕ್ತಿಯನ್ನು ಕೊಲೆ ಮಾಡಿ ಶವ ತಂದು, ನಿರ್ಜನ ಪ್ರದೇಶದಲ್ಲಿ ಸುಟ್ಟು ಹಾಕಿರುವಂತ ಶಂಕೆ ವ್ಯಕ್ತವಾಗಿದೆ. ಮೃತದೇಹದ ಮೇಲೆ ಹಗ್ಗದಿಂದ ಕಟ್ಟಿರುವಂತ ಗುರುತು ಪತ್ತೆಯಾಗಿದ್ದು, ಸ್ಥಳಕ್ಕೆ ಗ್ರಾಮಾಂತರ ಎಸ್ಪಿ ಸಿ.ಕೆ ಬಾಬಾ ಭೇಟಿ ನೀಡಿ, ಪರಿಶೀಲನೆ ಮಾಡಿದ್ದಾರೆ. https://kannadanewsnow.com/kannada/in-the-era-of-ai-it-is-necessary-to-ensure-the-authenticity-of-news-and-images-minister-ishwar-khandre/ https://kannadanewsnow.com/kannada/nutritionist-clarifies-whether-to-use-freshly-prepared-or-leftover-atta-dough-kept-in-refrigerator-wheat-is-not-the-villain/
ಬೆಂಗಳೂರು: ಇದು ಕೃತಕ ಬುದ್ಧಿಮತ್ತೆ (ಎ.ಐ.)ಕಾಲವಾಗಿದ್ದು, ಮಾಧ್ಯಮಗಳು ಸುದ್ದಿ ಪ್ರಸಾರಕ್ಕೆ ಮುನ್ನ ಸುದ್ದಿ ಚಿತ್ರಗಳ ನೈಜತೆಯನ್ನು ಖಚಿತ ಪಡಿಸಿಕೊಳ್ಳುವುದು ಅಗತ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ನಗರದ ಗಾಂಧೀಭವನದಲ್ಲಿಂದು ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸುಳ್ಳು ಸುದ್ದಿಗಳು, ನಕಲಿ ಚಿತ್ರ, ದೃಶ್ಯಗಳ ಬಗ್ಗೆ ಎಚ್ಚರಿಕೆ ಅಗತ್ಯ. ಒಮ್ಮೆ ಚಾರಿತ್ರ್ಯವಧೆ ಆದರೆ ಮತ್ತೆ ಅದನ್ನು ಸರಿಪಡಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಮಾಧ್ಯಮಗಳಿಗೆ ವಿಶ್ವಾಸಾರ್ಹತೆ ಮುಖ್ಯ. ಹೀಗಾಗಿ ಪೂರ್ವಾಗ್ರಹ ಪೀಡಿತವಾಗಿ ಮತ್ತು ರೋಚಕ ಸುದ್ದಿಗಳನ್ನು ಬಿತ್ತಸಿರುವ ಧಾವಂತದಲ್ಲಿ ಸುಳ್ಳೇ ಸತ್ಯ ಎಂಬಂತೆ ಬಿಂಬಿಸಬಾರದು, ಇದು ಜನರ ನಂಬಿಕೆಯನ್ನು ದೂರ ಮಾಡುತ್ತದೆ ಎಂದರು. ಮಾಧ್ಯಗಳಿಗೆ ಸ್ವಾತಂತ್ರ್ಯ ಇರಬೇಕು. ನಿಯಂತ್ರಣ ಹಾಕಲು ಹಲವು ಕಾಯಿದೆಗಳಿವೆ. ಆದರೆ, ಮಾಧ್ಯಮಗಳು ಸ್ವಯಂ ನಿಯಂತ್ರಣ ವಿಧಿಸಿಕೊಂಡು ಸತ್ಯ, ನಿಖರ ಮಾಹಿತಿಯನ್ನು ಜನರಿಗೆ ನೀಡಬೇಕು. ಮಾಹಿತಿದಾಹವನ್ನು ತಣಿಸಬೇಕು ಎಂದು ಹೇಳಿದರು. ಶಾಸಕಾಂಗ, ನ್ಯಾಯಾಂಗ ಮತ್ತು ಕಾರ್ಯಾಂಗದ ಜೊತೆಗೆ ನಾಲ್ಕನೇ…
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ ಆರ್.ಬಿ.ಐ, ಮತ್ತು ಆಸ್ಟೀನ್ ಟೌನ್ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 26.11.2025 (ಬುಧವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ನ.26ರಂದು ಆರ್. ಬಿ.ಐ ಲೇಔಟ್, ಕೊತ್ತನೂರು, ಜೆ.ಪಿ.ನಗರ, 5ನೇ ಹಂತ, ಶ್ರೇಯಸ್ ಕಾಲೋನಿ, ಗೌರವ್ ನಗರ, ನಟರಾಜ ಲೇಔಟ್, ನೃಪತುಂಗ ನಗರ, ಜಂಬುಸವಾರಿ ದಿಣ್ಣೆ, ಚುಂಚಗಟ್ಟ, ಬ್ರೀಗೆಡ್ ಮಿಲೇನಿಯಮ್ ಮತ್ತು ಬ್ರೀಗೆಡ್ ಗಾರ್ಡೇನಿಯ ಅಪಾರ್ಟ್ಮೆಂಟ್, ರಿಚ್ ಮಂಡ್ ಸರ್ಕಲ್, ಜಾನ್ಸನ್ ಮಾರ್ಕೆಟ್, ನಾರೀಸ್ ರಸ್ತೇ, ಅರಬ್ ಲ್ಯೇನ್, ವೆಲ್ಂಗ್ಟನ್ ಸ್ಡೀಟ್ ಕರ್ಲಿ ಸ್ಡೀಟ್, ಲಿಯೋನಾರ್ಡ್ ಸ್ಡೀಟ್, ರಿನಿಯಸ್ ಸ್ಡೀಟ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ ಎಂದರು. https://kannadanewsnow.com/kannada/nutritionist-clarifies-whether-to-use-freshly-prepared-or-leftover-atta-dough-kept-in-refrigerator-wheat-is-not-the-villain/ https://kannadanewsnow.com/kannada/the-power-to-drive-away-evil-lies-in-two-leaves/
ಚಿಕ್ಕಬಳ್ಳಾಪುರ: ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂಬ ಸಿಎಂ ಸಿದ್ಧರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿರುವಂತ ಡಿಸಿಎಂ ಡಿ.ಕೆ ಶಿವಕುಮಾರ್, ಸಿಎಂ ಹೇಳಿದ ಮೇಲೆ ಅದೇ ವೇದ ವಾಕ್ಯ ಎಂದಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈಗಾಗಲೇ ಸಿಎಂ ಸಿದ್ಧರಾಮಯ್ಯ ಹೈಕಮಾಂಡ್ ವಿಚಾರವನ್ನು ಹೇಳಿದ್ದಾರೆ. ಸಿಎಂ ಹೇಳಿದ ಮೇಲೆ ಅದೇ ವೇದ ವಾಕ್ಯ. ನಾನು ಹೇಳುವ ಅಗತ್ಯವಿಲ್ಲ ಎಂದರು. ಅಂದಹಾಗೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್ ಹೇಳಿಕೆಗೆ ಬದ್ಧ ಎಂಬುದಾಗಿ ತಿಳಿಸಿದ್ದರು. ಆ ಮೂಲಕ ರಾಜ್ಯದಲ್ಲಿ ಸಿಎಂ ಬದಲಾವಣೆ ಸುಳಿವು, ಸಂಪುಟ ಪುನಾರಚನೆಯ ಬಗ್ಗೆ ಮಾತನಾಡಿದ್ದರು. https://kannadanewsnow.com/kannada/14th-foundation-day-celebration-at-aap-office-in-bengaluru-on-nov-26-convener-jagadish-v-sadam/ https://kannadanewsnow.com/kannada/nutritionist-clarifies-whether-to-use-freshly-prepared-or-leftover-atta-dough-kept-in-refrigerator-wheat-is-not-the-villain/
ಬೆಂಗಳೂರು: ಆಮ್ ಆದ್ಮಿ ಪಕ್ಷದ 14ನೇ ಸಂಸ್ಥಾಪನಾ ದಿನಾಚರಣೆಯನ್ನು ಇದೇ ತಿಂಗಳ 26ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಬೆಂಗಳೂರಿನ ಪಕ್ಷದ ಪ್ರಧಾನ ಕಚೇರಿಯಲ್ಲಿ ಸಡಗರದಿಂದ ಆಚರಿಸಲಾಗುವುದೆಂದು ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಈ ಬಗ್ಗೆ ಮಾತನಾಡುತ್ತಾ ” ದೇಶದಲ್ಲಿ ಅವ್ಯಾಹತವಾಗಿ ಬೇರು ಬಿಟ್ಟಿರುವ ಭ್ರಷ್ಟ ಆಡಳಿತ ವ್ಯವಸ್ಥೆ, ಪಾರಂಪರಿಕ ಪಕ್ಷಗಳ ಕುಟುಂಬ ರಾಜಕಾರಣ , ಸ್ವಜನ ಪಕ್ಷಪಾತ, ಜನಸಾಮಾನ್ಯರಿಗೆ ಮೂಲಭೂತ ಹಕ್ಕುಗಳ ನಿರಾಕರಣೆ ಇವುಗಳ ವಿರುದ್ಧ ಕಳೆದ 13 ವರ್ಷಗಳ ಹಿಂದೆ ಉದಯಿಸಿದ ಆಮ್ ಆದ್ಮಿ ಪಕ್ಷವು ಕೇವಲ ರಾಜಕೀಯ ಪಕ್ಷವಾಗಿರದೆ ಜನಪರ ರಾಜಕೀಯ ಆಂದೋಲನವಾಗಿದೆ. ಪ್ರತಿಯೊಬ್ಬ ಜನಸಾಮಾನ್ಯನು ಸಹ ರಾಜಕೀಯ ಹಕ್ಕುಗಳನ್ನು ಪಡೆಯಬೇಕೆಂಬುದೇ ಪಕ್ಷದ ಹೆಗ್ಗುರಿಯಾಗಿದೆ. ಜಲಸಾಮಾನ್ಯನಿಂದಲೇ ಜಲಸಾಮಾನ್ಯನ ಮೂಲಭೂತ ಸಮಸ್ಯೆಗಳೆಲ್ಲ ಪರಿಹಾರ ಆಗಬೇಕೆಂಬುದು ಪಕ್ಷದ ಆಶಯವಾಗಿದೆ” ಎಂದು ತಿಳಿಸಿದರು. ಈ ನಿಟ್ಟಿನಲ್ಲಿ ವಿಶ್ವ ಮಾನ್ಯ ಜನಪ್ರಿಯ ನಾಯಕ ಅರವಿಂದ ಕೇಜ್ರಿವಾಲ್ ರವರ ನೇತೃತ್ವದಲ್ಲಿ ಪಕ್ಷವು ದೆಹಲಿ, ಪಂಜಾಬ್…
ಮೈಸೂರು: ನಾನೇ 5 ವರ್ಷ ಸಿಎಂ ಎಂದು ಎದೆ ಬಡಿದುಕೊಂಡು ಹೇಳುವ ಪರಿಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು. ಇದು ರೆಬೆಲಿಯನ್ ಸಿದ್ದರಾಮಯ್ಯ ವರ್ಸಸ್ ಕಾಂಪ್ರಮೈಸ್ ಸಿದ್ದರಾಮಯ್ಯ ನಡುವಿನ ಹೋರಾಟ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದಲಿನಂತೆ ರೆಬೆಲಿಯನ್ ಸಿದ್ದರಾಮಯ್ಯ ಆದರೆ ಯಾವುದೇ ಕಾರಣಕ್ಕೂ ಅಧಿಕಾರ ಬಿಟ್ಟು ಕೊಡುವುದಿಲ್ಲ ಕಾಂಪ್ರಮೈಸ್ ಸಿದ್ದರಾಮಯ್ಯ ಆದರೆ ಬಿಟ್ಟುಕೊಡುತ್ತಾರೆ. ಸಿದ್ದರಾಮಯ್ಯ ಎಷ್ಟರ ಮಟ್ಟಿಗೆ ತಮ್ಮ ಗಟ್ಟಿತನ ಉಳಿಸಿಕೊಂಡಿದ್ದಾರೆ ಎಂಬುದು ಈ ತಿಂಗಳಿನಲ್ಲಿ ಗೊತ್ತಾಗಲಿದೆ. ನಾವು ನೋಡಿದ ಸಿದ್ದರಾಮಯ್ಯ ಮೊದಲಿನಿಂದಲೂ ರೆಬೆಲಿಯನ್. ಅವರದ್ದು ಯಾವಗಲೂ ಗಟ್ಟಿ ಗಡಸುತನದ ರಾಜಕಾರಣ. ಅದೇ ಮೂಲ ಸಿದ್ದರಾಮಯ್ಯ ಈಗ ಅಧಿಕಾರದ ಆಸೆಗಾಗಿ ಬದಲಾಗಿದ್ದಾರಾ ಎಂಬುದು ಗೊತ್ತಾಗುತ್ತದೆ ಎಂದು ಹೇಳಿದರು. ಬಿಜೆಪಿ ಸರ್ಕಾರದ ವಿರುದ್ದ ಕಮಿಷನ್ ಆರೋಪ ಮಾಡಿದ್ದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಸರ್ಕಾರದ ಮೇಲೆ ಕಮಿಷನ್ ಆರೋಪ ಮಾಡಿದ್ದು ಸುಳ್ಳು ಎಂಬುದು ತನಿಖಾ ವರದಿಯಿಂದ ಸಾಬೀತಾಗಿದೆ. ಈಗ ಅವರ…
ಮಂಡ್ಯ : ರಾಜ್ಯದ ಮುಖ್ಯಮಂತ್ರಿ ಸ್ಥಾನದ ಹಂಚಿಕೆ ಕಗ್ಗಂಟಾದ ಬೆನ್ನಲ್ಲೇ ಇದೀಗ ಒಕ್ಕಲಿಗ ಸಮುದಾಯ ಬೀದಿಗಿಳಿದಿದ್ದು, ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಮದ್ದೂರು ತಾಲೂಕಿನ ಒಕ್ಕಲಿಗ ಸಮುದಾಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ನಡೆಯಿತು. ಮದ್ದೂರು ನಗರದ ಪ್ರವಾಸಿ ಮಂದಿರದ ಬಳಿ ಜಮಾಯಿಸಿದ ಶ್ರೀ ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘ, ಚುಂಚಶ್ರೀ ಗೆಳೆಯರ ಬಳಗ ಹಾಗೂ ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಹಾಗೂ ಮುಖಂಡರು ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಚುಂಚಶ್ರೀ ಗೆಳೆಯರ ಬಳಗ ಅಧ್ಯಕ್ಷ ಡಾ.ಬಿ.ಕೃಷ್ಣ ಅವರು, ಕಳೆದ ವಿಧಾನಸಭಾ ಚುನಾವಣೆ ವೇಳೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು, ರಾಜ್ಯಾದ್ಯಂತ ಪ್ರವಾಸ ಮಾಡಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಿ ಹಾಗೂ ಸಧೃಡಗೊಳಿಸುವ ಮೂಲಕ 126ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ…














