Subscribe to Updates
Get the latest creative news from FooBar about art, design and business.
Author: kannadanewsnow09
ಮಂಡ್ಯ : ಶತಮಾನಗಳ ಸಿಟ್ಟನ್ನು ಸಿಡಿಮದ್ದಾಗಿಸಿಕೊಂಡು ಸಿದ್ದ ನಾಕಾ ನೇತೃತ್ವದಲ್ಲಿ ಯುದ್ಧ ಗೆದ್ದ ಭೀಮ ಕೋರೆಗಾಂವ್ ಯುದ್ಧವೀರರನ್ನು ನೆನೆಯಬೇಕಿದೆ. ಈ ಹಿನ್ನಲೆಯಲ್ಲಿ ಜ.1ರಂದು ಮದ್ದೂರು ತಾಲೂಕಿನ ಎಲ್ಲಾ ಶೋಷಿತ ಸಮುದಾಯದವರು 208 ನೇ ಭೀಮ ಕೋರೆಗಾಂವ್ ಕದನ ವಿಜಯೋತ್ಸವ ಆಚರಣೆಯಲ್ಲಿ ಭಾಗವಹಿಸಬೇಕೆಂದು ಜಿ.ಪಂ ಮಾಜಿ ಅಧ್ಯಕ್ಷ ಸುರೇಶ್ ಕಂಠಿ ಮಂಗಳವಾರ ಹೇಳಿದರು. ಜ.1 ಗುರುವಾರ ಬೆಳಿಗ್ಗೆ 9 ಗಂಟೆಗೆ ಮದ್ದೂರು ನಗರದ ನಗರಸಭೆ ಮುಂಭಾಗದ ಬಾಬಾ ಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಲಾಗುವುದು ಎಂದರು. ಭಾರತದಲ್ಲಿ ನಡೆದಿರುವ ಸಾವಿರಾರು ಯುದ್ಧಗಳ ಪೈಕಿ ಭೀಮಾ ಕೋರೆಗಾಂವ್ ಯುದ್ಧದ ವಿಜಯವು ಜಗತ್ತೇ ನಿಬ್ಬೆರಗಾಗುವಂತೆ ಮಾಡಿದ್ದಲ್ಲದೆ ಆ ಯುದ್ಧವು ಮುಂದಿನ ತಲೆಮಾರಿಗಳಿಗೆ ಸ್ವಾಭಿಮಾನದ ಪ್ರತೀಕವಾಗಿ ಶಾಶ್ವತವಾಗಿ ಉಳಿದು ಬಿಟ್ಟಿದೆ. ಕೇವಲ 500ಮಂದಿ ಮಹಾರ್ ಸೈನಿಕರು 28 ಸಾವಿರ ಜಾತಿವಾದಿ ಪೇಶ್ವೆ ಸೈನಿಕರನ್ನು ಸೆದೆಬಡಿದ ಭಾರತದ ಸ್ವಾಭಿಮಾನದ ಇತಿಹಾಸವನ್ನು ಸಾರಿ ಸಾರಿ ಹೇಳುವಂತಿದೆ. ಹೀಗಾಗಿ 1 ಜನವರಿ 1818…
ಬ್ರಾಹ್ಮಣ ಭೋಜನ ಪ್ರಿಯಃ”, ಬರೀ ಇದೊಂದೇ ಸಾಲು ಮಾತ್ರನಾ ಇರೋದು,? ಖಂಡಿತಾ ಇಲ್ಲ ಬ್ರಾಹ್ಮಣ ಭೋಜನ ಪ್ರಿಯ: ಬ್ರಾಹ್ಮಣರಿಗೆ ಭೋಜನ ಮಾಡಿಸಿದರೆ ಸಕಲ ದೇವತೆಗಳೂ ತೃಪ್ತರಾಗುತ್ತಾರೆ ತುಂಬಾ ಜನ ಇದನ್ನು ಕೊಂಕು ಮಾತಾಗಿ ಉಪಯೋಗಿಸುತ್ತೀರಾ..! ಸರಿಯಾಗಿ ಅರ್ಥ ತಿಳಿದುಕೊಂಡು ಮಾತನಾಡುವುದು ಒಳಿತು.. TODAY ಯಾರೋ ಒಬ್ಬರು ದೇವಾಲಯದಲ್ಲಿ ಮಾತಾಡುತ್ತಿದ್ದನ್ನು ಕೇಳಿಸಿಕೊಂಡಿದಕ್ಕಾಗಿ ಹಾಕುತ್ತಿದ್ದೇನೆ..( ಬರೆದವರ ಹೆಸರು ಗೊತ್ತಿಲ್ಲ. ಅವರಿಗೆ ಧನ್ಯವಾದಗಳು) ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ…
ಬೆಂಗಳೂರು: ಪ್ರಸ್ತುತ 108 – ಆರೋಗ್ಯ ಕವಚ ಆಂಬುಲೆನ್ಸ್ ಸೇವೆಯನ್ನು ಒಡಂಬಡಿಕೆ ಮಾದರಿಯಲ್ಲಿ ನಿರ್ವಹಣೆ ಮಾಡುತ್ತಿದ್ದು, ಸೇವೆಯ ಕುರಿತು ಸಾರ್ವಜನಿಕರಿಂದ ಹಲವಾರು ಆಕ್ಷೇಪಣೆಗಳು, ಸಮಸ್ಯೆಗಳು ದಾಖಲಾಗಿದ್ದರಿಂದ, ಸನ್ಮಾನ್ಯ ಮುಖ್ಯಮಂತ್ರಿಗಳು 2025-26 ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಸರ್ಕಾರದ ವತಿಯಿಂದಲೇ ಆರೋಗ್ಯ ಕವಚ-108 ನಿರ್ವಹಣೆ ಮಾಡಲು ಆರೋಗ್ಯ ಇಲಾಖೆ ಸಕಲ ಸಿದ್ಧತೆ ನಡೆಸುತ್ತಿದೆ. ಅವಶ್ಯಕವಾದ ತಂತ್ರಜ್ಞಾನ, ಕಮಾಂಡ್ ಕಂಟ್ರೋಲ್ ಸೆಂಟರ್, ಅದಕ್ಕೆ ಬೇಕಾದ ಮಾನವ ಸಂಪನ್ಮೂಲ ಸೇರಿದಂತೆ ಎಲ್ಲಾ ಸಿದ್ಧತೆಗಳು ಅಂತಿಮ ಹಂತ ತಲುಪಿದೆ. ಸದ್ಯದಲ್ಲಿಯೇ ಸರ್ಕಾರದ ವತಿಯಿಂದ ರಾಜ್ಯದಾದ್ಯಂತ ಆಂಬ್ಯುಲೆನ್ಸ್ ಸೇವೆ ಪ್ರಾರಂಭಗೊಳ್ಳಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳಡಿಯಲ್ಲಿ ಒಟ್ಟಾರೆ 1841 ಆಂಬ್ಯುಲೆನ್ಸ್ ಲಭ್ಯವಿದ್ದು, ಇದರಲ್ಲಿ 108-ಆರೋಗ್ಯ ಕವಚ ಕಾರ್ಯಕ್ರಮದಡಿಯಲ್ಲಿ ಒಟ್ಟು 715 ಆಂಬ್ಯುಲೆನ್ಸ್ಗಳು ಹಾಗೂ ರಾಜ್ಯ ವಲಯದ 1126 ಆಂಬ್ಯುಲೆನ್ಸ್ಗಳು ಲಭ್ಯವಿದೆ. ಮಾನದಂಡಗಳನ್ವಯ ಹಾಲಿ ಜನಸಂಖ್ಯೆಗೆ 813 ಆಂಬ್ಯುಲೆನ್ಸ್ಗಳು ಅಗತ್ಯವಿದ್ದು, ಇತರೆ ಇಲಾಖೆಯ ಆಂಬ್ಯುಲೆನ್ಸ್ಗಳನ್ನು ಹೊರತುಪಡಿಸಿ ಆರೋಗ್ಯ…
ಮೈಸೂರು: ಮೈಸೂರು ವಿಭಾಗದ ನೈರುತ್ಯ ರೈಲ್ವೆ ವಿಭಾಗದಲ್ಲಿನ ಎಕ್ಸ್ಪ್ರೆಸ್, ಸೂಪರ್ಫಾಸ್ಟ್ ಹಾಗೂ ಪ್ರಯಾಣಿಕ ರೈಲುಗಳ ಸಮಯವನ್ನು ಪರಿಷ್ಕರಣೆ ಮಾಡಲಾಗಿದೆ. ಮೈಸೂರು ವಿಭಾಗದ ಮೂಲಕ ಸಂಚರಿಸುವ ಹಾಗೂ ಮೈಸೂರು ವಿಭಾಗದಿಂದ ಆರಂಭವಾಗುವ/ಅಂತ್ಯಗೊಳ್ಳುವ ಹಲವು ಎಕ್ಸ್ಪ್ರೆಸ್, ಸೂಪರ್ಫಾಸ್ಟ್, ಮೆಮು ಮತ್ತು ಪ್ರಯಾಣಿಕ ರೈಲುಗಳ ವೇಳಾಪಟ್ಟಿಯಲ್ಲಿ ಪರಿಷ್ಕರಣೆ ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ. ಈ ಪರಿಷ್ಕರಣೆಯಡಿ ಕೆಲವು ರೈಲುಗಳ ಸಂಚಾರ ಸಮಯವನ್ನು ಮುಂಚಿತಗೊಳಿಸಲಾಗಿದ್ದು, ಕೆಲವು ರೈಲುಗಳ ಸಂಚಾರ ಸಮಯವನ್ನು ಮುಂದೂಡಲಾಗಿದೆ. ಈ ಬದಲಾವಣೆಗಳು ವಿವಿಧ ದಿನಾಂಕಗಳಿಂದ 01.01.2026ರಿಂದ ಜಾರಿಗೆ ಬರಲಿವೆ. ಉತ್ತಮ ಕಾರ್ಯಾಚರಣಾ ದಕ್ಷತೆ, ಸಮಯಪಾಲನೆಯ ಸುಧಾರಣೆ ಹಾಗೂ ವಿಭಾಗೀಯ ಸಂಚಾರವನ್ನು ಸಮರ್ಪಕವಾಗಿ ವ್ಯವಸ್ಥಿತಗೊಳಿಸುವ ಉದ್ದೇಶದಿಂದ ಈ ವೇಳಾಪಟ್ಟಿ ಪರಿಷ್ಕರಣೆ ಕೈಗೊಳ್ಳಲಾಗಿದೆ. ಈ ಬದಲಾವಣೆಗಳ ವ್ಯಾಪ್ತಿಯಲ್ಲಿ ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಅರಸೀಕೆರೆ, ದಾವಣಗೆರೆ, ಬೆಳಗಾವಿ, ಹುಬ್ಬಳ್ಳಿ, ಯಶವಂತಪುರ, ಬೆಂಗಳೂರು, ಚೆನ್ನೈ, ತಿರುಪತಿ, ಅಜ್ಮೀರ್, ವಾರಾಣಸಿ, ಗಾಂಧಿಧಾಮ್, ಬಾರ್ಮೇರ್, ಉದಯಪುರ, ಚಂಡೀಗಢ ಹಾಗೂ ಹಜ್ರತ್ ನಿಜಾಮುದ್ದೀನ್ ನಗರಗಳನ್ನು ಸಂಪರ್ಕಿಸುವ ದೀರ್ಘ ದೂರದ ರೈಲುಗಳನ್ನು ಸೇರಿದಂತೆ…
ಶಿವಮೊಗ್ಗ: ಜಡತ್ವದಿಂದ ಹೊಂದಿರುವ ಜನರಿಗೆ ದುಡಿಮೆಯನ್ನು ಯೋಜನೆ ಕಲಿಸಿಕೊಟ್ಟಿದೆ ಪ್ರತಿಯೊಬ್ಬರಲ್ಲಿಯೂ ನಾನು ನನ್ನ ಕುಟುಂಬವನ್ನು ಹೇಗೆ ರಕ್ಷಣೆ ಮಾಡಬೇಕು ಎಂಬುದನ್ನು ಸ್ವ ಸಹಾಯ ಗುಂಪುಗಳ ಮೂಲಕ ಜನರು ಅರಿತಿದ್ದಾರೆ. ಜಾತಿ ಮತ ಭೇದ ಇಲ್ಲದೇ ಎಲ್ಲರೂ ಸಮಾನತೆಯಿಂದ ಬದುಕುವ ವಾತಾವರಣ ನಿರ್ಮಾಣ ಆಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಎಲ್ಲರಿಗೂ ಅಬಿವೃದ್ಧಿ ಹೊಂದಲು ಸಮಾನ ಅವಕಾಶ ಕಲ್ಪಿಸಿದೆ. ಈ ಕಾರಣದಿಂದಾಗಿ ಜನಸಾಮಾನ್ಯರ ಬದುಕಿಗೆ ಬೆಳಕಾಗಿದೆ ಎಂದು ಸಾಗರ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕ ನಿಗಮ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ಸೋಮವಾರದಂದು ಶಿವಮೊಗ್ಗದ ಸಾಗರ ತಾಲ್ಲೂಕಿನ ಆನಂದಪುರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಾಗರ ತಾಲೂಕು, ಪ್ರಗತಿ ಬಂದು ಸ್ವ ಸಹಾಯ ಸಂಘಗಳ ಒಕ್ಕೂಟ ಆನಂದಪುರ ವಲಯದ ಶ್ರೀ ವೀರಾಂಜನೇಯ ಸಭಾಭವನದಲ್ಲಿ ಆಯೋಜಿಸಲಾದ ಸಾಮೂಹಿಕ ಶ್ರೀ ಸತ್ಯ ನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಮದ್ಯ ವರ್ಜನಾ ಶಿಬಿರಗಳ…
ಮಂಡ್ಯ : ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪೋಲೀಸ್ ಇಲಾಖೆಯಿಂದ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದ್ದು, ಪ್ರವಾಸಿ ತಾಣಗಳಿಗೆ ಅತಿ ಹೆಚ್ಚು ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿದೆ. ಹೀಗಾಗಿ ಮುಂಜಾಗ್ರತಾ ಕ್ರಮಗಳನ್ನು ಈಗಾಗಲೇ ಜಿಲ್ಲಾಡಳಿತ ಕೈಗೊಂಡಿದ್ದು, ಪ್ರವಾಸಿಗರಿಗೂ ಸಹ ಹಲವು ಸೂಚನೆಗಳನ್ನು ನೀಡಲಾಗಿದೆ. ಹೊಸ ವರ್ಷಾಚರಣೆಯ ಸಂಬಂಧ ಮಂಡ್ಯ ಜಿಲ್ಲಾ ಪೊಲೀಸರು ಕೆ.ಆರ್.ಎಸ್ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ಪ್ರವೇಶ ನಿರ್ಬಂಧಿಸಿ ಆದೇಶವನ್ನು ಹೊರಡಿಸಿದ್ದಾರೆ. ಡಿಸೆಂಬರ್ 31ರ ಬೆಳಗ್ಗೆ 6 ಗಂಟೆಯಿಂದ ಜನವರಿ 1 ರಾತ್ರಿ 8 ಗಂಟೆಯ ತನಕ ಈ ಆದೇಶ ಜಾರಿಯಲ್ಲಿರುತ್ತದೆ. ಮಂಡ್ಯ ಜಿಲ್ಲೆಯ ಕಡೆ ಹೋಗಿ ಹೊಸ ವರ್ಷಾಚರಣೆ ಮಾಡುವವರಿದ್ದರೆ ಈ ಕುರಿತು ನೀವು ಮಾಹಿತಿ ತಿಳಿದು ಪ್ರವಾಸ ಮಾಡುವುದು ಉತ್ತಮ. ಕೆ.ಆರ್.ಎಸ್. ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧ ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಹೊಸ ವರ್ಷದ ಪ್ರಯುಕ್ತ ಬಲಮುರಿ, ಎಡಮುರಿ ವೇಣುಗೋಪಾಲಸ್ವಾಮಿ ದೇವಾಲಯ, ಚಿಕ್ಕಯಾರಹಳ್ಳಿ ಬಳಿಯ ಕೆ.ಆರ್.ಸಾಗರ ಅಣೆಕಟ್ಟು, ಕಾವೇರಿ ಹಿನ್ನೀರು ಮತ್ತು ನದಿ ಪಾತ್ರದ…
ಬೆಂಗಳೂರು: ನಗರದಲ್ಲಿ ಭೀಕರ ಅವಘಡ ಸಂಭವಿಸಿದೆ. ಪಿಜಿಯೊಂದರಲ್ಲಿನ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಓರ್ವ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಕುಂದಲಹಳ್ಳಿ ಕಾಲೋನಿಯಲ್ಲಿ ಇರುವಂತ ಪಿಜಿಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಸ್ಪೋಟಗೊಂಡು, ಈ ದುರ್ಘಟನೆ ಸಂಭವಿಸಿದೆ. ಸಿಲಿಂಡರ್ ಸ್ಪೋಟದಲ್ಲಿ ಅರವಿಂದ್(23) ಎಂಬುವರು ದುರ್ಮರಣ ಹೊಂದಿದ್ದಾರೆ. ಇನ್ನೂ ಈ ದುರ್ಘಟನೆಯಲ್ಲಿ ದೇವಿ, ವಿಶಾಲ್ ಎಂಬುವರಿಗೆ ಸಣ್ಣಪುಟ್ಟ ಗಾಯವಾಗಿದೆ. ಜೊತೆಗೆ ವೆಂಕಟೇಶ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಹೆಚ್ ಎ ಎಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಚಿಕ್ಕಮಗಳೂರು: ಹೊಸ ವರ್ಷದ ಪ್ರಯುಕ್ತ ಕಾಫಿನಾಡು ಚಿಕ್ಕಮಗಳೂರಿನ ಹಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ. ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುಳ್ಳಯ್ಯನಗಿರಿ, ಕೆಮ್ಮಣ್ಣುಗುಂಡಿ, ಎತ್ತಿನಭುಜ, ಸೇರಿದಂತೆ 22 ಪ್ರವಾಸಿ ತಾಣಗಳಿಗೆ ತಾತ್ಕಾಲಿಕವಾಗಿ ನಿರ್ಬಂಧ ಹೇರಿದೆ. ಡಿಸೆಂಬರ್.31ರ ಸಂಜೆ 6 ಗಂಟೆಯಿಂದ ಜನವರಿ 1ರ ಬೆಳಗ್ಗೆ 6 ಗಂಟೆಯವರೆಗೆ ಚಿಕ್ಕಮಗಳೂರಿನ 22 ಪ್ರವಾಸಿ ತಾಣಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆಯವರ ಮನವಿ ಮೇರೆಗೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಿ ಆದೇಶಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಹಿನ್ನಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಮಾಣಿಕ್ಯಧಾರಾ, ಝರಿ ಫಾಲ್ಸ್, ಹೊನ್ನಮ್ಮನಹಳ್ಳ, ಗಾಳಿಕೆರೆ, ಹಿರೇಕೊಳಲೆ ಕೆರೆ, ಡೈಮಂಡ್ ಫಾಲ್ಸ್, ಎತ್ತಿನಭುಜ, ದೇವರಮನೆ, ರಾಣಿಝರಿ, ಬಳ್ಳಾಲರಾಯನ ದುರ್ಗ, ಕೆಮ್ಮಣ್ಣುಗುಂಡಿ, ಕಲ್ಲತ್ತಿಗಿರಿ, ಬಂಡಾಜೆ ಫಾಲ್ಸ್, ಕೂಡಿಗೆ ಫಾಲ್ಸ್, ಕ್ಯಾತನಮಕ್ಕಿ, ರುದ್ರಪಾದ, ತೂಗು ಸೇತುವೆ, ಅಬ್ಬುಗುಡಿಗೆ ಫಾಲ್ಸ್,…
ಬೆಂಗಳೂರು: ಕೋಗಿಲು ಬಡಾವಣೆಯಲ್ಲಿ ಡಿಸೆಂಬರ್ 20ರಂದು ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಶೆಡ್ ಗಳನ್ನು ನಿರ್ಮಾಣ ಮಾಡಿದ್ದ ಸುಮಾರು 167 ಶೆಡ್ಗಳನ್ನು ತೆರವುಗೊಳಿಸಲಾಗಿತ್ತು. ಅವರೆಲ್ಲರಿಗೂ ನೋಟಿಸ್ ನೀಡಿ, ಸರ್ಕಾರದ ಜಾಗವಾಗಿದ್ದು ತೆರವು ಮಾಡುವಂತೆ ಅವರ ಗಮನಕ್ಕೂ ತರಲಾಗಿತ್ತು, ಆದರೂ ಅವರು ಖಾಲಿ ಮಾಡಿರಲಿಲ್ಲ. ನಿನ್ನೆ ನಾನು ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಮತ್ತು ನನ್ನ ರಾಜಕೀಯ ಕಾರ್ಯದರ್ಶಿಯಾದ ನಸೀರ್ ಅಹ್ಮದ್ ಅವರನ್ನು ಸ್ಥಳಕ್ಕೆ ಕಳಿಸಿಕೊಟ್ಟಿದ್ದೆ. ಇಂದು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಕೂಡ ಅಧಿಕಾರಿಗಳ ಜೊತೆ ಭೇಟಿ ನೀಡಿದ್ದಾರೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದರು. ಕಸ ವಿಲೇವಾರಿ ಮಾಡುವ ಉದ್ದೇಶಕ್ಕೆ 15 ಎಕರೆ ಜಮೀನನ್ನು ಜಿಲ್ಲಾಧಿಕಾರಿಗಳು ನಗರ ಪಾಲಿಕೆಗೆ ಹಸ್ತಾಂತರ ಮಾಡಿದ್ದರು. ಬಂಡೆ ಕ್ವಾರಿ ಕೂಡ ಅಲ್ಲಿದೆ. ಪಾಲಿಕೆಯವರು ಕಸ ಹಾಕುತ್ತಿದ್ದು, ಭೂಮಿ ಅವರ ಸ್ವಾಧೀನದಲ್ಲೇ ಇದೆ. ನಾವು ಸುಮಾರು 2020-21 ರಿಂದ ಈ ರೀತಿ ಅಕ್ರಮವಾಗಿ ಶೆಡ್ ಕಟ್ಟಿಕೊಂಡು ವಾಸ ಮಾಡುತ್ತಿದ್ದರು, ಹೀಗಾಗಿ ಅಲ್ಲಿನ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ…
ಬೆಂಗಳೂರು: ಹೊಸ ವರ್ಷಾಚರಣೆ ಪ್ರಯುಕ್ತ ದಿನಾಂಕ: 31.12.2025 ರಂದು ಬೆಂಗಳೂರಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಮುಂಜಾನೆ 2 ಗಂಟೆಯವರೆಗೆ ಬಿಎಂಟಿಸಿ ಬಸ್ ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ದಿನಾಂಕ: 31.12.2025 ರಂದು ಹೊಸ ವರ್ಷಾಚರಣೆಯಲ್ಲಿ ಭಾಗವಹಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಎಂ.ಜಿ.ರಸ್ತೆ/ಬ್ರಿಗೇಡ್ ರಸ್ತೆಯಿಂದ ನಗರದ ವಿವಿಧ ಭಾಗಗಳಿಗೆ ಹೆಚ್ಚಿನ ಸಾರಿಗೆ ಸೌಲಭ್ಯ ಒದಗಿಸುವ ದೃಷ್ಟಿಯಿಂದ ರಾತ್ರಿ 11:00 ಗಂಟೆಯ ನಂತರ ತಡರಾತ್ರಿ 02:00 ಗಂಟೆಯವರೆಗೆ ಪ್ರಯಾಣಿಕರ ಸಂಚಾರದ ಒತ್ತಡಕ್ಕನುಗುಣವಾಗಿ ಕೆಳಕಂಡ ಮಾರ್ಗಗಳಲ್ಲಿ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲು ಕ್ರಮ ವಹಿಸಲಾಗಿದೆ. ಕ್ರ. ಸಂ ಮಾರ್ಗ ಸಂಖ್ಯೆ ಎಲ್ಲಿಂದ ಎಲ್ಲಿಗೆ ಬಸ್ಸುಗಳ ಸಂಖ್ಯೆ ವಲಯ 1 G-3 ಬ್ರಿಗೇಡ್ ರಸ್ತೆ ಎಲೆಕ್ಟ್ರಾನಿಕ್ಸ್ ಸಿಟಿ 6 ಪೂರ್ವ 2 G-4 ಜಿಗಣಿ 6 ದಕ್ಷಿಣ 3 G-2 ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣ ಸರ್ಜಾಪುರ 6 ದಕ್ಷಿಣ 4 G-6 ಕೆಂಗೇರಿ KHB ಕ್ವಾರ್ಟ್ರ್ಸ್ 4 ಪಶ್ಚಿಮ 5 G-7 ಜನಪ್ರಿಯ ಟೌನ್ ಶಿಪ್…














