Subscribe to Updates
Get the latest creative news from FooBar about art, design and business.
Author: kannadanewsnow09
ಇಂದು ಜಗತ್ತಿನಾದ್ಯಂತ, ವಿಶೇಷವಾಗಿ ಅಮೆರಿಕದಂತಹ ದೇಶಗಳಲ್ಲಿ ಮರಣಕ್ಕೆ ಪ್ರಮುಖ ಕಾರಣ ಹೃದಯ ಸಂಬಂಧಿ ಕಾಯಿಲೆಗಳು. ಸಾಮಾನ್ಯವಾಗಿ ಹೃದಯವನ್ನು ಕಾಪಾಡಿಕೊಳ್ಳಲು ಕಠಿಣ ಆಹಾರ ಪಥ್ಯ (Diet) ಮಾಡಬೇಕು ಎಂಬ ಭಯ ಅನೇಕರಲ್ಲಿದೆ. ಆದರೆ, “ನಿಮ್ಮ ಇಡೀ ಆಹಾರ ಕ್ರಮವನ್ನು ಬದಲಿಸುವ ಅಗತ್ಯವಿಲ್ಲ, ಸಣ್ಣ ಮತ್ತು ಸರಳ ಬದಲಾವಣೆಗಳೇ ನಿಮ್ಮ ಜೀವ ಉಳಿಸಬಲ್ಲವು” ಎನ್ನುತ್ತಾರೆ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಸಂಶೋಧಕ ಮ್ಯಾಥ್ಯೂ ಲ್ಯಾಂಡ್ರಿ. ಹೃದಯಾಘಾತದ ಭೀತಿಯೇ? ಇಂದೇ ಈ 5 ಆಹಾರ ಬದಲಾವಣೆಗಳನ್ನು ರೂಢಿಸಿಕೊಳ್ಳಿ 1. ನಾರಿನಂಶವಿರುವ (Fiber) ಆಹಾರಗಳನ್ನು ಹೆಚ್ಚಿಸಿ ಓಟ್ಸ್, ಬಾರ್ಲಿ, ಮತ್ತು ದ್ವಿದಳ ಧಾನ್ಯಗಳಲ್ಲಿರುವ ‘ದ್ರವ ರೂಪದ ನಾರು’ (Soluble Fiber) ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ (LDL) ಹೀರಿಕೊಳ್ಳುವಿಕೆಯನ್ನು ಕಡಿಮೆ ಮಾಡುತ್ತದೆ. ದಿನಕ್ಕೆ ಕನಿಷ್ಠ ಒಂದು ಬಾರಿಯಾದರೂ ಇಡೀ ಧಾನ್ಯಗಳ ಸೇವನೆ ಇರಲಿ. 2. ಆರೋಗ್ಯಕರ ಕೊಬ್ಬನ್ನು ಆರಿಸಿ (Healthy Fats) ಸಾಚುರೇಟೆಡ್ ಫ್ಯಾಟ್ ಇರುವ ಬೆಣ್ಣೆ ಅಥವಾ ತುಪ್ಪದ ಬದಲಾಗಿ, ಹೃದಯಕ್ಕೆ ಹಿತವಾದ ಅನ್ಸಾಚುರೇಟೆಡ್ ಫ್ಯಾಟ್ ಬಳಸಿ. ಆಲಿವ್ ಎಣ್ಣೆ…
ನವದೆಹಲಿ: ಇತ್ತೀಚಿನ ದಿನಗಳಲ್ಲಿ ಇಂಟರ್ನೆಟ್ನಲ್ಲಿ ಭಾರೀ ಸದ್ದು ಮಾಡುತ್ತಿರುವ ‘ಎಪ್ಸ್ಟೀನ್ ಫೈಲ್ಸ್’ (Epstein Files) ವಿಷಯದ ಬಗ್ಗೆ ಗೂಗಲ್ನಲ್ಲಿ ಹುಡುಕಾಟ ನಡೆಸುವ ಮುನ್ನ ಎಚ್ಚರವಿರಲಿ. ಜನರ ಕುತೂಹಲವನ್ನೇ ಬಂಡವಾಳ ಮಾಡಿಕೊಂಡಿರುವ ಸೈಬರ್ ಅಪರಾಧಿಗಳು, ಈ ಹೆಸರಿನಲ್ಲಿ ದೊಡ್ಡ ಮಟ್ಟದ ಡೇಟಾ ಕಳ್ಳತನದ ಜಾಲವನ್ನು ಹೆಣೆದಿದ್ದಾರೆ ಎಂದು ಸರ್ಕಾರಿ ಏಜೆನ್ಸಿಗಳು ಮತ್ತು ಸೈಬರ್ ತಜ್ಞರು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಹೇಗೆ ವಂಚನೆ ಗೊತ್ತಾ? ಸೈಬರ್ ತಜ್ಞರ ಪ್ರಕಾರ, ಬಳಕೆದಾರರು ಈ ವಿಷಯದ ಬಗ್ಗೆ ಮಾಹಿತಿ ಪಡೆಯಲು ಗೂಗಲ್ನಲ್ಲಿ ಸರ್ಚ್ ಮಾಡಿದಾಗ ಅನೇಕ ನಕಲಿ ವೆಬ್ಸೈಟ್ಗಳ ಲಿಂಕ್ಗಳು ಕಾಣಿಸಿಕೊಳ್ಳುತ್ತವೆ. ಇವು ನೋಡಲು ಅಧಿಕೃತ ಮತ್ತು ನಂಬಿಕಸ್ತ ವೆಬ್ಸೈಟ್ಗಳಂತೆಯೇ ಇರುತ್ತವೆ. ಈ ಲಿಂಕ್ ಕ್ಲಿಕ್ ಮಾಡಿದ ತಕ್ಷಣ, “ರಹಸ್ಯ ಕಡತಗಳನ್ನು ನೋಡಲು ನಿಮ್ಮ Gmail ಐಡಿ ಮತ್ತು ಪಾಸ್ವರ್ಡ್ ಬಳಸಿ ಲಾಗಿನ್ ಆಗಿ” ಎಂಬ ಸಂದೇಶ ಕಾಣಿಸಿಕೊಳ್ಳುತ್ತದೆ. ಅಪಾಯಗಳೇನು? ಬಳಕೆದಾರರು ಕುತೂಹಲಕ್ಕೆ ಬಿದ್ದು ತಮ್ಮ ಜಿಮೇಲ್ ವಿವರಗಳನ್ನು ನಮೂದಿಸಿದ ಕೂಡಲೇ ಹ್ಯಾಕರ್ಸ್ಗಳ ಆಟ ಶುರುವಾಗುತ್ತದೆ: ಮಾಹಿತಿ…
ನವದೆಹಲಿ: ಇಂದಿನ ವೇಗದ ಜೀವನಶೈಲಿಯಲ್ಲಿ ಸದಾ ಸುಸ್ತು ಮತ್ತು ನಿಶಕ್ತಿ ಸಾಮಾನ್ಯ ಎಂದು ಅನೇಕರು ನಿರ್ಲಕ್ಷಿಸುತ್ತಾರೆ. ಆದರೆ, ರಕ್ತದಲ್ಲಿನ ಹಿಮೋಗ್ಲೋಬಿನ್ (Hb) ಮಟ್ಟ ಕಡಿಮೆಯಾಗುವುದು ಇದಕ್ಕೆ ಪ್ರಮುಖ ಕಾರಣವಾಗಿರಬಹುದು. ಹಿಮೋಗ್ಲೋಬಿನ್ ಪ್ರಮಾಣ ಕುಂಠಿತಗೊಂಡಾಗ ಜೀವಕೋಶಗಳಿಗೆ ಆಮ್ಲಜನಕದ ಪೂರೈಕೆ ಕಡಿಮೆಯಾಗಿ, ದಣಿವು, ಉಸಿರಾಟದ ತೊಂದರೆ ಮತ್ತು ಪೇಲವ ಚರ್ಮದಂತಹ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ನೈಸರ್ಗಿಕವಾಗಿ ರಕ್ತದ ಮಟ್ಟವನ್ನು ಹೆಚ್ಚಿಸಲು ಮತ್ತು ಆರೋಗ್ಯವಾಗಿರಲು ತಜ್ಞರು ಈ ಕೆಳಗಿನ 6 ಆಹಾರ ಸಲಹೆಗಳನ್ನು ನೀಡಿದ್ದಾರೆ: 1. ಕಬ್ಬಿಣಾಂಶಯುಕ್ತ (Iron-rich) ಆಹಾರಗಳ ಸೇವನೆ ದೇಹದಲ್ಲಿ ಹಿಮೋಗ್ಲೋಬಿನ್ ಉತ್ಪಾದನೆಗೆ ಕಬ್ಬಿಣಾಂಶ ಅತಿ ಮುಖ್ಯ. ನಿಮ್ಮ ಆಹಾರದಲ್ಲಿ ದಾಳಿಂಬೆ, ಖರ್ಜೂರ, ಬೀಟ್ರೂಟ್, ಕುಂಬಳಕಾಯಿ ಬೀಜ, ನುಗ್ಗೆ ಸೊಪ್ಪು, ಒಣದ್ರಾಕ್ಷಿ, ಎಳ್ಳು, ಮೊಟ್ಟೆ, ಮೀನು ಮತ್ತು ಹಸಿರು ಎಲೆ ತರಕಾರಿಗಳನ್ನು ಹೆಚ್ಚಾಗಿ ಬಳಸಿ. 2. ವಿಟಮಿನ್ ಬಿ12 ಮರೆಯಬೇಡಿ ಕೆಂಪು ರಕ್ತಕಣಗಳ ಉತ್ಪಾದನೆಗೆ ವಿಟಮಿನ್ ಬಿ12 ಇಂಧನದಂತೆ ಕೆಲಸ ಮಾಡುತ್ತದೆ. ಹಾಲು, ಮೊಸರು, ಚೀಸ್ನಂತಹ ಡೈರಿ ಉತ್ಪನ್ನಗಳು ಮತ್ತು ಮೊಟ್ಟೆಗಳು ಬಿ12 ನ…
ಬೆಂಗಳೂರು: ಶಿರಸಿಯ ಪ್ರಸಿದ್ಧ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು, ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ತಾಳಗುಪ್ಪ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಓಡಿಸಲು ನಿರ್ಧರಿಸಿದೆ. ರೈಲು ಸಂಖ್ಯೆ 06587 ಯಶವಂತಪುರ–ತಾಳಗುಪ್ಪ ವಿಶೇಷ ಎಕ್ಸ್ ಪ್ರೆಸ್ ರೈಲು ಫೆಬ್ರವರಿ 27 (ಶುಕ್ರವಾರ) ರಂದು ರಾತ್ರಿ 10:45ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಶನಿವಾರ (ಫೆ. 28) ಬೆಳಿಗ್ಗೆ 5:05ಕ್ಕೆ ತಾಳಗುಪ್ಪ ತಲುಪಲಿದೆ. ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 06588 ತಾಳಗುಪ್ಪ–ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ ಫೆಬ್ರವರಿ 28 (ಶನಿವಾರ) ರಂದು ಬೆಳಿಗ್ಗೆ 9:30ಕ್ಕೆ ತಾಳಗುಪ್ಪದಿಂದ ಹೊರಟು, ಅದೇ ದಿನ ಸಂಜೆ 5:15ಕ್ಕೆ ಯಶವಂತಪುರ ಸೇರಲಿದೆ. ಈ ವಿಶೇಷ ರೈಲು ಎರಡು ಮಾರ್ಗಗಳಲ್ಲಿ ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು ಜಂಕ್ಷನ್, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಕೊನಗವಳ್ಳಿ ಹಾಲ್ಟ್, ಹಾರನಹಳ್ಳಿ ಹಾಲ್ಟ್, ಕುಂಸಿ, ಅರಸಾಳು ಹಾಲ್ಟ್, ಕೆಂಚನಾಳು ಹಾಲ್ಟ್, ಆನಂದಪುರಂ, ಅಡ್ಡೇರಿ ಹಾಲ್ಟ್ ಮತ್ತು ಸಾಗರ…
ಕೂದಲು ಉದುರುವ ಸಮಸ್ಯೆ ಇಂದಿನ ದಿನಗಳಲ್ಲಿ ಸಾಮಾನ್ಯವಾಗಿದೆ. ಏಕೆಂದರೆ ಇಂದಿನ ಪರಿಸ್ಥಿತಿ ಹೀಗಿದೆ. ಎಲ್ಲೆಂದರಲ್ಲಿ ಧೂಳು, ಕೊಳಕು ಇದೆ. ಕೂದಲು ಉದುರುವಿಕೆಗೆ ಪ್ರಮುಖ ಕಾರಣವೆಂದರೆ ಕೂದಲಿನಲ್ಲಿರುವ ಹೆಚ್ಚುವರಿ ಕೊಳೆ. ಅದೂ ಅಲ್ಲದೆ ಸರಿಯಾದ ಆಹಾರ ಪದ್ಧತಿ ಇಲ್ಲದಿರುವುದು, ದೇಹದಲ್ಲಿನ ಹಾರ್ಮೋನ್ ಬದಲಾವಣೆಯೂ ಇದಕ್ಕೆ ಕಾರಣ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564 ಕೂದಲು ಉದುರುವಿಕೆಗೆ ಕಾರಣ ಏನೇ…
ತುಮಕೂರು: ಜಿಲ್ಲೆಯಲ್ಲಿ ಸಿನಿಮಾ ಮಾದರಿಯಲ್ಲಿ ದರೋಡೆ ಕೃತ್ಯ ಎಸಗಲಾಗಿದೆ. ಈ ಕೃತ್ಯ ನಡೆದ ಕೆಲವೇ ಗಂಟೆಗಳಲ್ಲಿ ದರೋಡೆಕೋರರನ್ನು ಪೊಲೀಸರು ಬಂಧಿಸಿದ್ದಾರೆ. ಹೊರ ರಾಜ್ಯದಿಂದ ಬಂದು ಸಿನಿಮಾ ಮಾದರಿಯಲ್ಲಿ ದರೋಡೆಯನ್ನು ಖದೀಮರು ನಡೆಸಿದ್ದರು. ಇಂತಹ ದರೋಡೆ ಕೋರರನ್ನು ಕೃತ್ಯ ಎಸಗಿದ ಕೆಲವೇ ಗಂಟೆಯಲ್ಲಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದರೋಡೆ ಕೋರರು ಮಾಲು ಸಹಿತ ಪೊಲೀಸರು ಬಂಧಿಸಿದ್ದಾರೆ. ದರೋಡೆ ಕೋರನ ಬಳಿ ಇದ್ದಂತ ಚಿನ್ನಾಭರಣವನ್ನು ಜಪ್ತಿ ಮಾಡಿದ್ದಾರೆ. ಅರವಿಂದ್, ದುಂಗರ್ ಸಿಂಗ್, ಮಹೇಂದ್ರ, ಮಧುಸಿಂಗ್ ಸೇರಿದಂತೆ ರಾಜಸ್ಥಾನ ಮೂಲದ ನಾಲ್ವರು ದರೋಡೆಕೋರನನ್ನು ಪೊಲೀಸರು ಬಂಧಿಸಿದ್ದಾರೆ. https://kannadanewsnow.com/kannada/shivamogga-accidental-fire-at-mescom-transformer-repair-center-in-sagar-loss-of-lakhs-of-rupees/
ಶಿವಮೊಗ್ಗ : ಸಾಗರದ ಮೆಸ್ಕಾಂ ಕಚೇರಿ ಹಿಂಭಾಗದಲ್ಲಿರುವ ಟ್ರಾನ್ಸ್ಫರ್ಮರ್ ರಿಪೇರಿ ಕೇಂದ್ರದಲ್ಲಿ ಸೋಮವಾರ ಬೆಳಿಗ್ಗೆ 4ಕ್ಕೆ ಶಾರ್ಟ್ಸರ್ಕ್ಯೂಟ್ನಿಂದ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಜೋಗ ರಸ್ತೆಯ ಮೆಸ್ಕಾಂ ಕಚೇರಿ ಹಿಂಭಾಗದ ಸುಬ್ರಹ್ಮಣ್ಯ ದೇವಸ್ಥಾನದ ಸಮೀಪ ಇರುವ ಟಿ.ಸಿ. ರಿಪೇರಿ ಕೇಂದ್ರದಕ್ಕ ಬೆಳಗಿನ ಜಾವ 4 ಗಂಟೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ತಗುಲಿದೆ. ವ್ಯಾಪಕವಾಗಿ ಆವರಿಸಿದ ಬೆಂಕಿ ಕೆನ್ನಾಲಿಗೆಗೆ ರಿಪೇರಿಗೆ ಬಂದಿದ್ದ 15ಕ್ಕೂ ಹೆಚ್ಚು ಟಿ.ಸಿ.ಗಳು ಸುಟ್ಟು ಭಸ್ಮವಾಗಿದೆ. ಇದರ ಜೊತೆಗೆ ತಾಲ್ಲೂಕಿನ ಬೇರೆಬೇರೆ ಭಾಗಗಳಲ್ಲಿ ಅಳವಡಿಸಲು ತಂದಿದ್ದ ಐದಾರು ಹೊಸ ಟಿ.ಸಿ.ಗಳು ಸಹ ಸುಟ್ಟು ಹೋಗಿದೆ ಎಂದು ಹೇಳಲಾಗುತ್ತಿದೆ. ವಿದ್ಯುತ್ ಸಂಪರ್ಕ ಕಲ್ಪಿಸಲು ಎಳೆಯುವ ವೈಂಡಿ ವೈರ್ಗಳು ಗೋದಾಮಿನಲ್ಲಿ ದೊಡ್ಡ ಪ್ರಮಾಣದಲ್ಲಿ ಸಂಗ್ರಹವಾಗಿತ್ತು. ಬೆಂಕಿಯ ಕೆನ್ನಾಲಿಗೆ ಹಳೆಯ ಮತ್ತು ಹೊಸ ವಿದ್ಯುತ್ ತಂತಿಗಳು ಸಂಪೂರ್ಣ ಸುಟ್ಟು ಹೋಗಿದ್ದು, ಸುಮಾರು ೨೦ಲಕ್ಷ ರೂಪಾಯಿಗೂ ಅಧಿಕ ನಷ್ಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಇದರ ಜೊತೆಗೆ ರಿಪೇರಿ ಕೇಂದ್ರದ ಮೇಲ್ಚಾವಣಿ…
ಕೆಎನ್ಎನ್ ಡಿಜಿಟಲ್ ಡೆಸ್ಕ್: ವಾಟರ್ ಹೀಟ್ ಮೂಲಕ ಬಿಸಿ ನೀರು ಕಾಯಿಸಿ ಉಪಯೋಗಿಸುವಾಗ ಎಚ್ಚರಿಕೆ ವಹಿಸಬೇಕಿದೆ. ಒಂದು ವೇಳೆ ವಾಟರ್ ಹೀಟರ್ ಬಳಸುವಾಗ ಈ ತಪ್ಪು ಮಾಡಿದರೇ ಪ್ರಾಣಾಪಾಯ ಉಂಟಾಗುವ ಸಾಧ್ಯತೆ ಇದೆ. ಗೀಸರ್ ಅಥವಾ ಇಮ್ಮರ್ಶನ್ ರಾಡ್ ಬಳಸಿ ನೀರನ್ನು ಅತಿಯಾಗಿ ಕಾಯಿಸಿ ಸ್ನಾನ ಮಾಡುವುದು ನಿಮ್ಮ ಚರ್ಮ ಮತ್ತು ಆರೋಗ್ಯದ ಮೇಲೆ ಗಂಭೀರ ಪ್ರಭಾವ ಬೀರಬಹುದು ಎಂದು ವೈದ್ಯಕೀಯ ತಜ್ಞರು ಎಚ್ಚರಿಸಿದ್ದಾರೆ. ಚರ್ಮದ ನೈಸರ್ಗಿಕ ತೇವಾಂಶಕ್ಕೆ ಕುತ್ತು ನಮ್ಮ ಚರ್ಮದ ಮೇಲೆ ನೈಸರ್ಗಿಕವಾಗಿ ತೇವಾಂಶದ ಪದರವೊಂದು (Moisture Barrier) ಇರುತ್ತದೆ, ಇದು ಬಾಹ್ಯ ಸೋಂಕುಗಳಿಂದ ಚರ್ಮವನ್ನು ಕಾಪಾಡುತ್ತದೆ. ನೀರನ್ನು ಅತಿಯಾದ ಉಷ್ಣಾಂಶಕ್ಕೆ ಕಾಯಿಸಿ ಸ್ನಾನ ಮಾಡುವುದರಿಂದ ಈ ರಕ್ಷಣಾ ಪದರವು ಹಾನಿಗೊಳಗಾಗುತ್ತದೆ. ಇದರಿಂದಾಗಿ ಈ ಕೆಳಗಿನ ಸಮಸ್ಯೆಗಳು ಎದುರಾಗಬಹುದು: ಚರ್ಮದ ಶುಷ್ಕತೆ: ಚರ್ಮವು ಅತಿಯಾಗಿ ಒಣಗುವುದು ಮತ್ತು ಬಿರುಕು ಬಿಡುವುದು. ತುರಿಕೆ ಮತ್ತು ಅಲರ್ಜಿ: ಚರ್ಮ ಕೆಂಪಾಗುವುದು ಮತ್ತು ನಿರಂತರ ತುರಿಕೆ ಕಾಣಿಸಿಕೊಳ್ಳುವುದು. ಸುಟ್ಟ ಗಾಯಗಳು: ವಿಶೇಷವಾಗಿ ಸಣ್ಣ ಮಕ್ಕಳು…
ಮೈಸೂರು: ಮಾರಿಕಾಂಬಾ ದೇವಿ ಜಾತ್ರೆ ಮಹೋತ್ಸವದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು, ನೈಋತ್ಯ ರೈಲ್ವೆಯು ಯಶವಂತಪುರ–ಶಿವಮೊಗ್ಗ ಟೌನ್ ನಡುವೆ ಸಂಚರಿಸುವ ಟ್ರೈ-ವೀಕ್ಲಿ ಎಕ್ಸ್ ಪ್ರೆಸ್ ರೈಲನ್ನು (16581/16582) ತಾತ್ಕಾಲಿಕವಾಗಿ ತಾಳಗುಪ್ಪದವರೆಗೆ ವಿಸ್ತರಿಸಲು ನಿರ್ಧರಿಸಿದೆ. ಅದರಂತೆ, ಮಾರ್ಚ್ 1ರಂದು (ಭಾನುವಾರ) ಯಶವಂತಪುರದಿಂದ ಹೊರಡುವ ರೈಲು ಸಂಖ್ಯೆ 16581 ಶಿವಮೊಗ್ಗದ ಬದಲಾಗಿ ತಾಳಗುಪ್ಪದವರೆಗೆ ಸಂಚರಿಸಲಿದೆ. ಮರಳಿ, ರೈಲು ಸಂಖ್ಯೆ 16582 ಶಿವಮೊಗ್ಗಕ್ಕೆ ಬದಲಾಗಿ ತಾಳಗುಪ್ಪದಿಂದಲೇ ತನ್ನ ಪ್ರಯಾಣವನ್ನು ಆರಂಭಿಸಲಿದೆ. ಈ ವಿಸ್ತರಣೆಯು ಕೇವಲ ಒಂದು ಟ್ರಿಪ್ ಗೆ ಮಾತ್ರ ಅನ್ವಯಿಸಲಿದೆ. ರೈಲು ಸಂಖ್ಯೆ 16581 ಯಶವಂತಪುರದಿಂದ ಮಧ್ಯರಾತ್ರಿ 12:15ಕ್ಕೆ ಹೊರಟು, ಅಂದು ಬೆಳಿಗ್ಗೆ 09:00 ಗಂಟೆಗೆ ತಾಳಗುಪ್ಪ ತಲುಪಲಿದೆ. ಅಂದೇ ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 16582 ತಾಳಗುಪ್ಪದಿಂದ ರಾತ್ರಿ 10:00 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 04:45ಕ್ಕೆ ಯಶವಂತಪುರ ತಲುಪಲಿದೆ. ಶಿವಮೊಗ್ಗ ಟೌನ್ ನಿಂದ ಮುಂದಕ್ಕೆ ಈ ರೈಲು ಕೊನಗವಳ್ಳಿ ಹಾಲ್ಟ್, ಹಾರನಹಳ್ಳಿ ಹಾಲ್ಟ್, ಕುಂಸಿ, ಅರಸಾಳು ಹಾಲ್ಟ್, ಕೆಂಚನಾಳು ಹಾಲ್ಟ್, ಆನಂದಪುರಂ,…
ಬೆಂಗಳೂರು: ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ ಮತ್ತು ಕಾರ್ಮಿಕ ಸಂಘಟನೆಗಳಿಗೆ, ಸ್ಥಳೀಯ ಮುಖಂಡರಿಗೆ ಮಾಹಿತಿ ರವಾನಿಸಲು ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಚಿಕ್ಕಮಗಳೂರು ತಾಲೂಕು ಹುಣಸೆಹಳ್ಳಿ ಬಳಿಯ ತೋಟದಲ್ಲಿ ಕಳೆದ 7 ದಿನಗಳ ಅಂತರದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಉನ್ನತಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ತುರ್ತು ಸಭೆ ನಡೆಸಿದ ಸಚಿವರು ವನ್ಯಜೀವಿ -ಮಾನವ ಸಂಘರ್ಷ ಇರುವ ಪ್ರದೇಶಗಳ ಸ್ಥಳೀಯ ಮುಖಂಡರ, ಗ್ರಾಮಗಳ ಜಮೀನು ಮಾಲೀಕರ ವಾಟ್ಸ್ ಅಪ್ ಗ್ರೂಪ್ ಮಾಡಿ ಮಾಹಿತಿ ಪ್ರಸಾರ ಮಾಡುವಂತೆ ಸೂಚಿಸಿದರು. ಮಾನವ ಜೀವ ಅತ್ಯಮೂಲ್ಯವಾದ್ದು, ಒಂದು ಜೀವಹಾನಿ ಆದ ಬಳಿಕ ಮತ್ತೊಂದು ಜೀವ ಹಾನಿ ಆಗಿರುವುದು ಅತ್ಯಂತ ನೋವಿನ ಸಂಗತಿ. ಅಧಿಕಾರಿಗಳು ಮತ್ತು ಸಿಬ್ಬಂದಿ ಇಂತಹ ಘಟನೆ ಮರುಕಳಿಸದಂತೆ 24×7 ನಿಗಾ ಇಡಬೇಕು. ಕಡ್ಡಾಯವಾಗಿ ಸೆಕ್ಷನ್ 144 ಜಾರಿ ಮಾಡಿ…














