Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಲೂಧಿಯಾನ: ಪಂಜಾಬಿ ಸಂಗೀತ ಲೋಕವನ್ನು ಬೆಚ್ಚಿಬೀಳಿಸುವ ಆಘಾತಕಾರಿ ಘಟನೆಯೊಂದರಲ್ಲಿ, ಕಳೆದ ಆರು ದಿನಗಳ ಹಿಂದೆ ಗನ್ ಪಾಯಿಂಟ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ಪ್ರಸಿದ್ಧ ಪಂಜಾಬಿ ಗಾಯಕಿ ಇಂದರ್ ಕೌರ್ (ಯಶಿಂದರ್ ಕೌರ್) ಅವರ ಮೃತದೇಹ ಮಂಗಳವಾರ (ಮೇ 19) ಲೂಧಿಯಾನದ ಕಾಲುವೆಯೊಂದರಲ್ಲಿ ಪತ್ತೆಯಾಗಿದೆ. 29 ವರ್ಷದ ಯುವ ಗಾಯಕಿಯ ನಿಗೂಢ ನಾಪತ್ತೆ ಮತ್ತು ಕೊಲೆ ಪ್ರಕರಣವು ಪಂಜಾಬ್‌ನಾದ್ಯಂತ ತೀವ್ರ ಸಂಚಲನ ಮೂಡಿಸಿದ್ದು, ಚಿತ್ರರಂಗ ಹಾಗೂ ಅಭಿಮಾನಿಗಳನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಘಟನೆಯ ಹಿನ್ನೆಲೆ: ಪೊಲೀಸರು ಮತ್ತು ಕುಟುಂಬಸ್ಥರು ನೀಡಿರುವ ಮಾಹಿತಿ ಪ್ರಕಾರ, ಇಂದರ್ ಕೌರ್ ಮೇ 13 ರಂದು ರಾತ್ರಿ 8:30 ರ ಸುಮಾರಿಗೆ ತಮ್ಮ ಫೋರ್ಡ್ ಫಿಗೋ ಕಾರಿನಲ್ಲಿ ದಿನಸಿ ಸಾಮಗ್ರಿಗಳನ್ನು ಖರೀದಿಸಲು ಮನೆಯಿಂದ ಹೊರಟಿದ್ದರು. ಆದರೆ ತಡರಾತ್ರಿಯಾದರೂ ಅವರು ಮನೆಗೆ ಮರಳದಿದ್ದಾಗ ಆತಂಕಗೊಂಡ ಕುಟುಂಬಸ್ಥರು ಹುಡುಕಾಟ ನಡೆಸಿದ್ದರು. ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ ಮೇ 15 ರಂದು ಅವರ ಸಹೋದರ ಜೋತಿಂದರ್ ಸಿಂಗ್ ಪೊಲೀಸರಿಗೆ ದೂರು ನೀಡಿದ್ದರು. ಮದುವೆ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಕೊಲೆ?…

Read More

ಕಾರವಾರ: ಹವಾಮಾನ ವೈಪರಿತ್ಯ ಹಾಗೂ ಮಳೆಗಾಲದ ಮುನ್ಸೂಚನೆ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಜಲಸಾಹಸ (ವಾಟರ್ ಸ್ಪೋರ್ಟ್ಸ್) ಕ್ರೀಡೆಗಳಿಗೆ ಇಂದಿನಿಂದಲೇ ಜಾರಿಗೆ ಬರುವಂತೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ಜಿಲ್ಲಾ ಜಲಸಾಹಸ ಕ್ರೀಡೆ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿಯು ಈ ಮಹತ್ವದ ಆದೇಶವನ್ನು ಹೊರಡಿಸಿದೆ. ಕಡಲತೀರ ಹಾಗೂ ನದಿಗಳಲ್ಲಿ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಎಲ್ಲೆಲ್ಲಿ ನಿರ್ಬಂಧ ಅನ್ವಯಿಸುತ್ತದೆ? ಸಮಿತಿಯ ಆದೇಶದಂತೆ ಜಿಲ್ಲೆಯ ಪ್ರಮುಖ ಜಲಮೂಲಗಳಲ್ಲಿ ಸಾಹಸ ಕ್ರೀಡೆಗಳನ್ನು ಸ್ಥಗಿತಗೊಳಿಸಲಾಗಿದೆ: ಅರಬ್ಬಿ ಸಮುದ್ರದ ತೀರಗಳು: ಕಾರವಾರ, ಗೋಕರ್ಣ, ಮುರುಡೇಶ್ವರ ಸೇರಿದಂತೆ ಜಿಲ್ಲೆಯ ಎಲ್ಲಾ ಪ್ರಸಿದ್ಧ ಕಡಲತೀರಗಳು. ಶರಾವತಿ ಹಿನ್ನೀರು: ಹೊನ್ನಾವರ ಭಾಗದ ಶರಾವತಿ ನದಿಯ ಹಿನ್ನೀರಿನ ಪ್ರದೇಶಗಳು. ಅಘನಾಶಿನಿ ನದಿ: ಕುಮಟಾ ಭಾಗದ ಅಘನಾಶಿನಿ ನದಿಯ ಪಾತ್ರಗಳು. ಮಳೆಗಾಲ ಮುಗಿಯುವವರೆಗೆ ನಿಷೇಧ ಪ್ರಮುಖ ಸೂಚನೆ: ಈ ನಿರ್ಬಂಧವು ಇಂದಿನಿಂದಲೇ (ಮೇ 19) ಜಾರಿಗೆ ಬಂದಿದ್ದು, ಮುಂಬರುವ ಸಂಪೂರ್ಣ ಮಳೆಗಾಲ ಮುಕ್ತಾಯದವರೆಗೆ ಚಾಲ್ತಿಯಲ್ಲಿರಲಿದೆ. ಸಾಮಾನ್ಯವಾಗಿ ಮಳೆಗಾಲದಲ್ಲಿ ಸಮುದ್ರದ…

Read More

ಇತ್ತೀಚಿನ ದಿನಗಳಲ್ಲಿ ಫಿಟ್‌ನೆಸ್ ಹಾಗೂ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಬಹುತೇಕರ ಮೊದಲ ಆಯ್ಕೆ ‘ಗ್ರೀನ್ ಟೀ’ (Green Tea). ಬೆಳಗಿನ ಆರಂಭವನ್ನು ಗ್ರೀನ್ ಟೀಯೊಂದಿಗೆ ಮಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಆದರೆ, ಇದನ್ನು ಪ್ರತಿದಿನ ನಿಯಮಿತವಾಗಿ ಕುಡಿಯುವುದರಿಂದ ನಮ್ಮ ದೇಹದ ಮೇಲೆ ಯಾವ ರೀತಿಯ ಧನಾತ್ಮಕ ಪರಿಣಾಮಗಳು ಬೀರುತ್ತವೆ ಮತ್ತು ನಮ್ಮ ದೇಹದಲ್ಲಿ ಏನೆಲ್ಲಾ ಬದಲಾವಣೆಗಳಾಗುತ್ತವೆ ಎಂಬುದರ ಸೈನ್ಸ್‌-ಬ್ಯಾಕ್ಡ್ (Science-backed) ಮಾಹಿತಿ ಇಲ್ಲಿದೆ: 1. ಚಯಾಪಚಯ ಕ್ರಿಯೆ (Metabolism) ಹೆಚ್ಚುತ್ತದೆ ಗ್ರೀನ್ ಟೀಯಲ್ಲಿ ‘ಎಪಿಗಾಲೊಕಾಟೆಚಿನ್ ಗ್ಯಾಲೇಟ್’ (EGCG) ಎಂಬ ಪ್ರಬಲ ಆಂಟಿ-ಆಕ್ಸಿಡೆಂಟ್ ಇದೆ. ಇದು ದೇಹದ ಚಯಾಪಚಯ ಕ್ರಿಯೆಯನ್ನು ಚುರುಕುಗೊಳಿಸುತ್ತದೆ. ಪ್ರತಿದಿನ ಗ್ರೀನ್ ಟೀ ಕುಡಿಯುವುದರಿಂದ ದೇಹವು ಕ್ಯಾಲೊರಿಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಬರ್ನ್ ಮಾಡಲು ಸಹಾಯ ಮಾಡುತ್ತದೆ, ಇದು ತೂಕ ನಿರ್ವಹಣೆಗೆ (Weight Management) ಪೂರಕವಾಗಿದೆ. 2. ಮೆದುಳಿನ ಕಾರ್ಯಕ್ಷಮತೆ ಮತ್ತು ಏಕಾಗ್ರತೆ ವೃದ್ಧಿ ಗ್ರೀನ್ ಟೀಯಲ್ಲಿ ಕೆಫೀನ್ (Caffeine) ಅಂಶವಿದ್ದರೂ, ಅದು ಕಾಫಿಗಿಂತ ಕಡಿಮೆ ಇರುತ್ತದೆ. ಇದರೊಂದಿಗೆ…

Read More

ಮಂಡ್ಯ: ತಾಯಿ ಯಾವುದೋ ವಿಷಯಕ್ಕೆ ಬೈದರೆಂಬ ಕಾರಣಕ್ಕೆ ಇಬ್ಬರು ಅಪ್ರಾಪ್ತ ಸಹೋದರಿಯರು ಭಾವುಕವಾಗಿ ಪತ್ರ ಬರೆದಿಟ್ಟು ಮನೆಯಿಂದ ನಾಪತ್ತೆಯಾಗಿರುವ ಆಘಾತಕಾರಿ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕಾಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರಾಮಚಂದ್ರ ಎಂಬುವರ ಮಕ್ಕಳಾದ ಸುಜಾತಾ (16) ಹಾಗೂ ರುಕ್ಮಿಣಿ (14) ನಾಪತ್ತೆಯಾದ ದುರ್ದೈವಿ ಸಹೋದರಿಯರು. ತಾಯಿ ಬೈದಿದ್ದರಿಂದ ತೀವ್ರ ಮನನೊಂದಿರುವ ಈ ಇಬ್ಬರು ಹೆಣ್ಣುಮಕ್ಕಳು, ಮನೆ ಬಿಟ್ಟು ಹೋಗುವ ಮುನ್ನ ಬರೆದಿಟ್ಟಿರುವ ಪತ್ರ ಈಗ ಪೋಷಕರು ಹಾಗೂ ಗ್ರಾಮಸ್ಥರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಪತ್ರದಲ್ಲೇನಿದೆ? (ಡೆತ್‌ನೋಟ್) ಮನೆ ಬಿಡುವ ಮುನ್ನ ಸಹೋದರಿಯರು ತಮ್ಮ ನೋವನ್ನು ಪತ್ರದಲ್ಲಿ ತೋಡಿಕೊಂಡಿದ್ದಾರೆ. “ಅಮ್ಮ-ಅಪ್ಪ ಸ್ವಾರಿ… ನಿಮ್ಮ ಕಣ್ಣು ಮುಂದೆ ಸಾಯುವುದಕ್ಕೆ ಆಗಲ್ಲ. ಹೀಗಾಗಿ ನಾವು ದೂರ ಹೋಗಿ ಸತ್ತಿದ್ದೇವೆ, ಸ್ವಾರಿ…” ಎಂದು ಆಘಾತಕಾರಿ ಲೇಖನ ಬರೆದಿಟ್ಟು ಹೋಗಿದ್ದಾರೆ. ಕಣ್ಣೀರಿಡುತ್ತಾ ಪೊಲೀಸ್ ಠಾಣೆ ಮೆಟ್ಟಿಲೇರಿದ ಪೋಷಕರು ಮಕ್ಕಳು ಬರೆದಿಟ್ಟಿದ್ದ ಪತ್ರವನ್ನು ಓದುತ್ತಿದ್ದಂತೆ ಪೋಷಕರ ಜಗತ್ತೇ ಕತ್ತಲಾದಂತಾಗಿದೆ. ಆತಂಕದಿಂದಲೇ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಗೆ…

Read More

ತುಮಕೂರು: ಬರೀ ಸುಳ್ಳುಗಳನ್ನು ಹೇಳುತ್ತಾ, ಬೆಲೆ ಏರಿಕೆಯ ಮೂಲಕ ಬಡ, ಮಧ್ಯಮವರ್ಗದವರ ಬದುಕನ್ನು ದುಸ್ತರ ಮಾಡಿರುವ ಬಿಜೆಪಿಯನ್ನು ಜನರೇ ಬುಡ ಸಮೇತ ಕಿತ್ತು ಹಾಕುವ ಕಾಲ ದೂರವಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.  ಕಾಂಗ್ರೆಸ್ ಸರ್ಕಾರಕ್ಕೆ 3 ವರ್ಷ ತುಂಬಿದ ಸಂಭ್ರಮದಲ್ಲಿ ತುಮಕೂರಿನಲ್ಲಿಂದು ನಡೆದ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು ಪಂಚ  ರಾಜ್ಯ ಚುನಾವಣೆ ಮುಗಿಯುತ್ತಿದ್ದಂತೆ, ಡೀಸೆಲ್, ಪೆಟ್ರೋಲ್, ಅಡುಗೆ ಅನಿಲ ದರ ಹೆಚ್ಚಿಸಿ ಬಡ, ಮಧ್ಯಮ ವರ್ಗದವರ ನೆಮ್ಮದಿಗೆ ಕೊಳ್ಳಿ ಇಟ್ಟಿರುವ ಬಿಜೆಪಿ ನೇತೃತ್ವದ ಎನ್.ಡಿ.ಎ. ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸುತ್ತಾರೆ ಎಂದರು. ನುಡಿದಂತೆ ನಡೆಯುತ್ತಿರುವ ಕಾಂಗ್ರೆಸ್ ಪಂಚ ಗ್ಯಾರಂಟಿಗಳನ್ನು ಯಶಸ್ವಿ ಅನುಷ್ಠಾನ ಮಾಡುವ ಮೂಲಕ  1 ಕೋಟಿಗೂ ಹೆಚ್ಚು ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆ ತಂದಿದ್ದು, 2028ರ ಚುನಾವಣೆಯಲ್ಲೂ ಜಯಭೇರಿ ಬಾರಿಸಿ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಪಂಚ ಗ್ಯಾರಂಟಿಗಳು ಅಸಮಾನತೆಯ ನಿವಾರಣೆಯ ನಿಟ್ಟಿನಲ್ಲಿ ಬಹುದೊಡ್ಡ…

Read More

ಬೆಂಗಳೂರು: ಭಾರತದ ಸಂಶೋಧನಾ ಮತ್ತು ನಾವೀನ್ಯತಾ ರಂಗದಲ್ಲಿ ಹೊಸ ಸಂಚಲನ ಮೂಡಿಸುವ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ದೇಶದ ಶೈಕ್ಷಣಿಕ ಸಂಶೋಧನೆಗಳನ್ನು ಸಮಾಜಮುಖಿ ಪರಿಹಾರಗಳನ್ನಾಗಿ ಪರಿವರ್ತಿಸುವ ಉದ್ದೇಶದಿಂದ ‘ವಾಧ್ವಾನಿ ಫೌಂಡೇಶನ್’ ಮತ್ತು ‘ಗೇಟ್ಸ್ ಫೌಂಡೇಶನ್’ ಪರಸ್ಪರ ಒಪ್ಪಂದಕ್ಕೆ ಸಹಿ ಹಾಕಿವೆ. ವಾಧ್ವಾನಿ ಇನ್ನೋವೇಶನ್ ನೆಟ್‌ವರ್ಕ್‌ನ (ಡಬ್ಲ್ಯೂಐಎನ್‌) ರಾಷ್ಟ್ರೀಯ ವಿಸ್ತರಣೆಯಾದ ‘ನ್ಯಾಷನಲ್ ಇನ್ನೋವೇಶನ್ ನೆಟ್‌ವರ್ಕ್’ (ಎನ್‌ಐಎಣ್‌) ಮೂಲಕ ಭಾರತದ ನಾವೀನ್ಯತಾ ಪರಿಸರ ವ್ಯವಸ್ಥೆಯನ್ನು ಬಲಪಡಿಸುವುದು ಈ ಒಪ್ಪಂದದ ಪ್ರಮುಖ ಉದ್ದೇಶವಾಗಿದೆ. ಯಾವೆಲ್ಲಾ ಕ್ಷೇತ್ರಗಳಿಗೆ ಆದ್ಯತೆ? ಮುಖ್ಯವಾಗಿ ಆರೋಗ್ಯ, ಪೌಷ್ಟಿಕಾಂಶ, ಜೈವಿಕ ತಂತ್ರಜ್ಞಾನ, ಜೀನೋಮಿಕ್ಸ್, ಮೆಡ್‌ಟೆಕ್ ಹಾಗೂ ಭಾರತದ ಅಭಿವೃದ್ಧಿಗೆ ಪೂರಕವಾಗಿರುವ ಇತರ ಉದಯೋನ್ಮುಖ ಕ್ಷೇತ್ರಗಳ ಮೇಲೆ ಎರಡೂ ಸಂಸ್ಥೆಗಳು ಗಮನ ಹರಿಸಲಿವೆ. ಗೇಟ್ಸ್ ಫೌಂಡೇಶನ್‌ನ ಪಾತ್ರವೇನು? ಈ ಒಪ್ಪಂದದ ಭಾಗವಾಗಿ, ಗೇಟ್ಸ್ ಫೌಂಡೇಶನ್ ಮುಂದಿನ ಐದು ವರ್ಷಗಳಲ್ಲಿ ಐದು ಎನ್‌ಐಎನ್‌ ‘ಸೆಂಟರ್ಸ್ ಆಫ್ ಎಕ್ಸಲೆನ್ಸ್’ಗಳಿಗೆ ಬೆಂಬಲ ನೀಡಲಿದೆ. ಈ ವರ್ಷವೇ ಎರಡು ಕೇಂದ್ರಗಳು ಕಾರ್ಯಾರಂಭ ಮಾಡಲಿವೆ. ಈ ಕೇಂದ್ರಗಳು ಸಂಶೋಧಕರಿಗೆ ತಮ್ಮ ಪ್ರಯೋಗಾಲಯದ ಐಡಿಯಾಗಳನ್ನು…

Read More

ನವದೆಹಲಿ: ದೇಶದ ಪ್ರಮುಖ ದೇವಸ್ಥಾನಗಳು ಹಾಗೂ ಧಾರ್ಮಿಕ ಸಂಸ್ಥೆಗಳ ಬಳಿ ಇರುವ ಚಿನ್ನದ ನಿಧಿಯನ್ನು (Gold Reserves) ಕೇಂದ್ರ ಸರ್ಕಾರವು ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳಲಿದೆ ಮತ್ತು ಅದನ್ನು ‘ಗೋಲ್ಡ್ ಬಾಂಡ್’ ರೂಪಕ್ಕೆ ಪರಿವರ್ತಿಸಲಿದೆ ಎಂಬ ವದಂತಿಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರವಾಗಿ ಹರಿದಾಡುತ್ತಿದ್ದವು. ಇದೀಗ ಈ ಎಲ್ಲಾ ಸುಳ್ಳು ಸುದ್ದಿಗಳಿಗೆ ಕೇಂದ್ರ ಹಣಕಾಸು ಸಚಿವಾಲಯವು (Ministry of Finance) ಅಧಿಕೃತವಾಗಿ ಬ್ರೇಕ್ ಹಾಕಿದ್ದು, ಇವೆಲ್ಲವೂ ಸಂಪೂರ್ಣ ಸುಳ್ಳು ಮತ್ತು ಆಧಾರರಹಿತ ಎಂದು ಸ್ಪಷ್ಟಪಡಿಸಿದೆ. ವದಂತಿಗಳಿಗೆ ಹಣಕಾಸು ಸಚಿವಾಲಯದ ಸ್ಪಷ್ಟನೆ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಇಂತಹ ಸುದ್ದಿಗಳು ಸಾರ್ವಜನಿಕರಲ್ಲಿ ಗೊಂದಲ ಮೂಡಿಸುತ್ತಿವೆ. ದೇವಸ್ಥಾನಗಳ ಚಿನ್ನವನ್ನು ನಗದೀಕರಣ (Monetization) ಮಾಡುವ ಅಥವಾ ದೇವಸ್ಥಾನಗಳ ಟ್ರಸ್ಟ್‌ಗಳಿಗೆ ಚಿನ್ನದ ಬದಲಾಗಿ ಗೋಲ್ಡ್ ಬಾಂಡ್‌ಗಳನ್ನು ವಿತರಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಇಂತಹ ಯಾವುದೇ ಯೋಜನೆಯನ್ನು ಸರ್ಕಾರ ಅನುಮೋದಿಸಿಲ್ಲ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಗೋಪುರ ಮತ್ತು ಬಾಗಿಲುಗಳ ಚಿನ್ನದ ಮೇಲೂ ಹರಡಿತ್ತು ಸುಳ್ಳು ಸುದ್ದಿ! “ದೇವಸ್ಥಾನಗಳ…

Read More

ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲ್ಲೂಕಿನಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆಯೊಂದನ್ನು ನಡೆಸಿದ್ದಾರೆ. ಜಮೀನಿನಲ್ಲಿ ಅಕ್ರಮವಾಗಿ ಮರ ಕಡಿದು, ಯಾರಿಗೂ ತಿಳಿಯದಂತೆ ಭೂಮಿಯ ಅಡಿಯಲ್ಲಿ ಬಚ್ಚಿಟ್ಟಿದ್ದ ಬರೋಬ್ಬರಿ ಎರಡು ಅಡಿಗೂ ಹೆಚ್ಚು ಆಳದಲ್ಲಿದ್ದ ಬೀಟೆ ಮರದ ತುಂಡುಗಳನ್ನು ಪತ್ತೆ ಹಚ್ಚಿ ಜಪ್ತಿ ಮಾಡುವಲ್ಲಿ ಅಧಿಕಾರಿಗಳ ತಂಡ ಯಶಸ್ವಿಯಾಗಿದೆ. ಆ ಮೂಲಕ ಅಕ್ರಮ ಮರ ಕಡಿತಲೆ ದಂದೆಗೆ ಅರಣ್ಯ ಇಲಾಖೆ ತೀವ್ರ ಬಿಸಿ ಮುಟ್ಟಿಸಿದೆ. ರಹಸ್ಯ ಮಾಹಿತಿ ಆಧರಿಸಿ ದಾಳಿ ಹೊಸನಗರ ತಾಲ್ಲೂಕಿನ ನಂದ್ರಿ ಗ್ರಾಮದ ನಿವಾಸಿ ಗಣೇಶ್ ಶೆಟ್ಟಿ ಬಿನ್ ಬಾಬು ಶೆಟ್ಟಿ ಎಂಬುವರು ತಮ್ಮ ಜಮೀನಿನಲ್ಲಿ ಬೀಟೆ ಮರವನ್ನು ಅಕ್ರಮವಾಗಿ ಕಡಿತಲೆ ಮಾಡಿದ್ದರು. ಅಷ್ಟೇ ಅಲ್ಲದೆ, ಅರಣ್ಯ ಇಲಾಖೆಯ ಕಣ್ಣಿಗೆ ಮಣ್ಣೆರಚಲು ಆ ಮರದ ತುಂಡುಗಳನ್ನು ನೆಲದ ಅಡಿಯಲ್ಲಿ ಹೂತಿಟ್ಟಿದ್ದಾರೆ ಎಂಬ ಖಚಿತ ಮಾಹಿತಿ ಅರಣ್ಯ ಇಲಾಖೆಗೆ ಲಭ್ಯವಾಗಿತ್ತು. ಈ ವಿಷಯ ತಿಳಿಯುತ್ತಿದ್ದಂತೆ ವಲಯ ಅರಣ್ಯಾಧಿಕಾರಿ (RFO) ಅನೀಲ್ ಅವರು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಮೋಹನ್ ಕುಮಾರ್ ಹಾಗೂ…

Read More

ನವದೆಹಲಿ: ದೇಶಾದ್ಯಂತ ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ ಮತ್ತು ಕಡಿತದ ಪ್ರಕರಣಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಅತ್ಯಂತ ಪ್ರಮುಖವಾದ ತೀರ್ಪೊಂದನ್ನು ನೀಡಿದೆ. ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ, ಅತಿಯಾಗಿ ಆಕ್ರಮಣಕಾರಿಯಾಗಿರುವ ಮತ್ತು ರೇಬಿಸ್ (Rabies) ರೋಗದಿಂದ ಬಳಲುತ್ತಿರುವ ಬೀದಿ ನಾಯಿಗಳಿಗೆ ಅಗತ್ಯವಿದ್ದರೆ ‘ದಯಾಮರಣ’ (Euthanasia) ನೀಡಬಹುದು ಎಂದು ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿಸಿದೆ. ಸದ್ಭಾವನೆಯಿಂದ ಕೆಲಸ ಮಾಡುವ ಅಧಿಕಾರಿಗಳ ವಿರುದ್ಧ FIR ಇಲ್ಲ! ಸ್ಥಳೀಯ ಸಂಸ್ಥೆಗಳು ಅಥವಾ ಸಂಬಂಧಪಟ್ಟ ಅಧಿಕಾರಿಗಳು ಸಾರ್ವಜನಿಕ ಹಿತಾಸಕ್ತಿ ಮತ್ತು ಸದ್ಭಾವನೆಯಿಂದ (Good Faith) ಇಂತಹ ಕಠಿಣ ಕ್ರಮಗಳನ್ನು ಕೈಗೊಂಡರೆ, ಅವರ ವಿರುದ್ಧ ಯಾವುದೇ ಎಫ್‌ಐಆರ್ (FIR) ಅಥವಾ ಕಾನೂನು ಕ್ರಮ ಜರುಗಿಸುವಂತಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಈ ಮೂಲಕ ಬೀದಿ ನಾಯಿಗಳ ನಿಯಂತ್ರಣಕ್ಕೆ ಮುಂದಾಗುವ ಅಧಿಕಾರಿಗಳಿಗೆ ಕೋರ್ಟ್ ದೊಡ್ಡ ಕಾನೂನು ರಕ್ಷಣೆ ನೀಡಿದೆ. ಸುಪ್ರೀಂ ಕೋರ್ಟ್ ಹೇಳಿದ್ದೇನು? (ಪ್ರಮುಖಾಂಶಗಳು): ಸಾರ್ವಜನಿಕ ಸುರಕ್ಷತೆಗೆ ಮೊದಲ ಆದ್ಯತೆ: ಪ್ರಾಣಿ ಹಕ್ಕುಗಳು ಮುಖ್ಯವಾದರೂ, ಮಾನವನ ಜೀವ ಮತ್ತು ಸಾರ್ವಜನಿಕ ಸುರಕ್ಷತೆ…

Read More

ಪ್ರಸಿದ್ಧ ಶ್ರೀ ಭೂವರಾಹ ಸ್ವಾಮಿ ದೇವಸ್ಥಾನದ ಹಿನ್ನೆಲೆಯ ಚರಿತ್ರೆ…!! ಇದರ ವಿವರಣೆ ಈ ಕೆಳಗಿನಂತಿದೆ: ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ.  ​ಶ್ರೀ ಭೂವರಾಹ ಸ್ವಾಮಿ ದೇವಸ್ಥಾನ, ವರಹನಾಥ ಕಲ್ಲಹಳ್ಳಿ ​ವಿಶೇಷತೆ ಹಾಗೂ ವಿಗ್ರಹ: ಇಲ್ಲಿನ ಮುಖ್ಯ ಆಕರ್ಷಣೆ ಭಗವಾನ್ ವಿಷ್ಣುವಿನ ಮೂರನೇ ಅವತಾರವಾದ ವರಾಹ ಸ್ವಾಮಿಯ (ಕಾಡುಹಂದಿಯ ಮುಖ ಮತ್ತು ಮಾನವ ಶರೀರ) ಬೃಹತ್ ವಿಗ್ರಹ. ಸುಮಾರು 15 ಅಡಿ ಎತ್ತರದ ಈ ಏಕಶಿಲಾ ವಿಗ್ರಹವು ಅತ್ಯಂತ ಸುಂದರವಾಗಿದ್ದು, ಸ್ವಾಮಿಯು ತನ್ನ ಮಡದಿಯಾದ ಭೂದೇವಿಯನ್ನು ತನ್ನ ಎಡ ತೊಡೆಯ ಮೇಲೆ ಕುಳ್ಳಿರಿಸಿಕೊಂಡಿರುವ ಭಂಗಿಯಲ್ಲಿದೆ. ಭಾರತದಲ್ಲಿರುವ ಕೆಲವೇ ಕೆಲವು ವರಾಹ ಸ್ವಾಮಿ ದೇವಸ್ಥಾನಗಳಲ್ಲಿ ಇದು ಅತ್ಯಂತ ಪ್ರಮುಖವಾದುದಾಗಿದೆ. ​ಐತಿಹಾಸಿಕ ಹಿನ್ನೆಲೆ: ಈ ದೇವಸ್ಥಾನಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ.…

Read More