Subscribe to Updates
Get the latest creative news from FooBar about art, design and business.
Author: kannadanewsnow09
ತೆಹ್ರಾನ್: ಇರಾನ್ನ ಸರ್ವೋಚ್ಚ ನಾಯಕ ಅಲಿ ಖಮೇನಿ ಅವರ ನಿಧನದ ಬೆನ್ನಲ್ಲೇ ದೇಶದ ವಿದೇಶಾಂಗ ನೀತಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಸ್ಪಷ್ಟಪಡಿಸಿದ್ದಾರೆ. ಖಮೇನಿ ಅವರು ಹಾಕಿಕೊಟ್ಟ ಹಾದಿಯಲ್ಲೇ ದೇಶವು ಮುಂದುವರಿಯಲಿದೆ ಎಂದು ಅವರು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ವಿರುದ್ಧ ಆಕ್ರೋಶ: ಖಮೇನಿ ನಿಧನದ ಹಿನ್ನೆಲೆಯಲ್ಲಿ ಇರಾನ್ ವಿದೇಶಾಂಗ ಸಚಿವಾಲಯವು ಪ್ರಕಟಣೆಯೊಂದನ್ನು ಹೊರಡಿಸಿದ್ದು, ಅದರಲ್ಲಿ ಅಮೆರಿಕ ಮತ್ತು ಇಸ್ರೇಲ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇರಾನ್ನ ಪರಮಾಣು ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಟೆಹ್ರಾನ್ ಮತ್ತು ವಾಷಿಂಗ್ಟನ್ ನಡುವೆ ರಾಜತಾಂತ್ರಿಕ ಮಾತುಕತೆಗಳು ನಡೆಯುತ್ತಿದ್ದ ಸಂದರ್ಭದಲ್ಲೇ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳನ್ನು ಇರಾನ್ ಕಟುವಾಗಿ ಖಂಡಿಸಿದೆ. ಶಾಂತಿ ಮಾತುಕತೆ ಮತ್ತು ಅಡೆತಡೆ: ವಿಶೇಷವೆಂದರೆ, ಫೆಬ್ರವರಿ 26 ರಂದು ಜಿನೀವಾದಲ್ಲಿ ಇರಾನ್ ಮತ್ತು ಅಮೆರಿಕ ನಡುವೆ ಓಮನ್ ದೇಶದ ಮಧ್ಯಸ್ಥಿಕೆಯಲ್ಲಿ ಮಹತ್ವದ ಸಂಧಾನ ಮಾತುಕತೆಗಳು ನಡೆದಿದ್ದವು. ಈ ಮಾತುಕತೆಗಳ ಬೆನ್ನಲ್ಲೇ ದಾಳಿಗಳು ನಡೆದಿರುವುದು…
ಇರಾನ್-ಇರಾಕ್ ಸಂಘರ್ಷ: ಇರಾನ್ ಪ್ರತಿದಾಳಿ ತೀವ್ರಗೊಳಿಸುತ್ತಿದ್ದಂತೆ ದುಬೈ, ಅಬುಧಾಬಿ, ದೋಹಾ, ಮನಾಮದಲ್ಲಿ ಹೊಸ ಸ್ಫೋಟಗಳ ಸದ್ದು ಕೇಳಿಬಂದಿದೆ. ಭೀಕರ ಕ್ಷಿಪಣಿ ದಾಳಿಯನ್ನು ನಡೆಸಲಾಗುತ್ತಿದ್ದು, ಎಲ್ಲೆಲ್ಲೂ ಸ್ಪೋಟಕದ ಸದ್ದು ಕೇಳಿ ಬರುತ್ತಿದ್ದು, ಜನರು ಭಯ ಭೀತಿಯಲ್ಲಿದ್ದಾರೆ. ಇರಾನ್ನ ಗಡಿಪಾರು ಮಾಡಲಾದ ರಾಜಕುಮಾರ ರಜಾ ಪೆಹಲ್ವಿ ಖಮೇನಿ ಹತ್ಯೆ ಶ್ಲಾಘನೆ ನಮ್ಮ ಕಾಲದ ಜಹ್ಹಾಕ್, ಕೆಲವೇ ವಾರಗಳ ಹಿಂದೆ ಇರಾನ್ನ ಹತ್ತಾರು ಸಾವಿರ ಅತ್ಯುತ್ತಮ ಪುತ್ರರು ಮತ್ತು ಪುತ್ರಿಯರನ್ನು ಹತ್ಯೆ ಮಾಡಲು ಆದೇಶ ಹೊರಡಿಸಿದ ರಾಕ್ಷಸ ವ್ಯಕ್ತಿ ಅಲಿ ಖಮೇನಿಯನ್ನು ನಿರ್ಮೂಲನೆ ಮಾಡಲಾಗಿದೆ. ಅವರ ಅವಮಾನಕರ ಸಾವಿನೊಂದಿಗೆ ಮತ್ತು ಅವರ ಅನೇಕ ನೇಮಕಗೊಂಡವರು ಮತ್ತು ನಿಷ್ಠಾವಂತರ ಸಾವಿನೊಂದಿಗೆ, ಇಸ್ಲಾಮಿಕ್ ಗಣರಾಜ್ಯವು ತನ್ನ ಅಂತಿಮ ಉಸಿರನ್ನು ಎಳೆಯುತ್ತಿದೆ. ನಿಮ್ಮ ದೃಢಸಂಕಲ್ಪ ಮತ್ತು ಧೈರ್ಯದ ಮೂಲಕ, ಅದು ಶೀಘ್ರದಲ್ಲೇ ಇತಿಹಾಸದ ಕಸದ ಬುಟ್ಟಿಗೆ ಸೇರಲಿದೆ. ಮಹಾನ್ ರಾಷ್ಟ್ರವಾದ ಇರಾನ್ ಇಸ್ಲಾಮಿಕ್ ಗಣರಾಜ್ಯದ ಸಂಪೂರ್ಣ ಪತನವನ್ನು ಬಯಸುತ್ತದೆ. ಮತ್ತು ನಾವು ಈ ರಾಕ್ಷಸ ಆಡಳಿತವನ್ನು ಉರುಳಿಸುತ್ತೇವೆ ಎಂದು ಅವರು…
ಶಿವಮೊಗ್ಗ : ಇತ್ತೀಚಿಗೆ ಅಹಿತಕರ ಘಟನೆಯೊಂದರಲ್ಲಿ ಮೃತನಾದ ವಿದ್ಯಾರ್ಥಿ ಸಂಕೇತ್ನ ಪೋಷಕರಿಗೆ ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣದಲ್ಲಿ ಸಾಂತ್ವನ ಹೇಳಿ ಸಂತೈಸಿದರಲ್ಲದೇ 15ಲಕ್ಷ ರೂ.ಗಳ ಪರಿಹಾರದ ಚೆಕ್ಕನ್ನು ವಿತರಿಸಿದರು. ಅವರು ಇಂದು ತರೀಕೆರೆಯ ಖಾಸಗಿ ಕಾರ್ಯಕ್ರಮವೊಂದಕ್ಕೆ ತೆರಳುವ ಮುನ್ನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಅಮೇರಿಕಾ ಮದ್ಯಪ್ರಾಚ್ಯ ರಾಷ್ಟ್ರಗಳ ನಡುವೆ ತಾರಕಕ್ಕೇರಿರುವ ಯುದ್ಧದಿಂದಾಗಿ ಇರಾನ್ನ ಮುಖ್ಯಸ್ಥ ಮೃತರಾಗಿರುವ ವಿಷಯವನ್ನು ಕೇಳಿ ತಿಳಿದಿದ್ದೇನೆ. ಈ ಘಟನೆ ಸಂಭವಿಸಬಾರದಾಗಿತ್ತು. ಮೃತ ಖಮೈನಿ ಅವರ ಆತ್ಮಕ್ಕೆ ಚಿರಶಾಂತಿ ಬಯಸುವುದಾಗಿ ತಿಳಿಸಿದ ಅವರು, ಅಮೇರಿಕಾ ಅಧ್ಯಕ್ಷರು ಮಾತಿನಂತೆ ನಡೆದುಕೊಳ್ಳುತ್ತಿಲ್ಲ. ವಿಶ್ವಶಾಂತಿಯ ಬಗ್ಗೆ ಸದಾ ಮಾತನಾಡುವ ಅವರು, ಯುದ್ಧಕ್ಕೆ ಹಾತೊರೆಯುತ್ತಿರುವ ದ್ವಿಮುಖ ನೀತಿ ಸರಿಯಲ್ಲ ಎಂದರು. ಈ ಅನಿರೀಕ್ಷಿತವಾಗಿ ಆರಂಭವಾಗಿರುವ ಈ ಯುದ್ದದಿಂದಾಗಿ ಮದ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಅನೇಕ ಜನ ಸಕಾಲದಲ್ಲಿ ತಮ್ಮ ನಿರೀಕ್ಷೆಯಂತೆ ಪ್ರಯಾಣ ಮುಂದುವರೆಸಲಾದೇ ಆತಂಕದಲ್ಲಿದ್ದಾರೆ. ದುಬೈನಲ್ಲಿ ಸುಮಾರು 35ಕ್ಕೂ ಹೆಚ್ಚಿನ ಜನ ಸಿಲುಕಿಕೊಂಡಿರುವುದು ಗಮನಕ್ಕೆ ಬಂದಿದೆ. ಅಲ್ಲದೇ ಅಲ್ಲಿನ ಏರ್ಪೋರ್ಟ್ಗಳಲ್ಲಿ…
ಶಿವಮೊಗ್ಗ: ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪನವರು ತಮ್ಮ ಜನ್ಮದಿನವನ್ನು ಅತ್ಯಂತ ವಿಭಿನ್ನವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಗಮನ ಸೆಳೆದಿದ್ದಾರೆ. ಸೊರಬ ತಾಲೂಕಿನ ಪುರಸಭೆ ಹಾಗೂ ಆನವಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪೌರಕಾರ್ಮಿಕರಿಗೆ ವಿಮಾನಯಾನ ಮಾಡಿಸುವ ಮೂಲಕ ಅವರ ಮೊಗದಲ್ಲಿ ಮಂದಹಾಸ ಮೂಡಿಸಿ, ಸಮಾಜಕ್ಕೆ ಹೊಸ ಮಾದರಿಯನ್ನು ತೋರಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನಡೆದ ಈ ವಿಶೇಷ ಕ್ಷಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಾಕ್ಷಿಯಾದರು. ಸಚಿವ ಮಧು ಬಂಗಾರಪ್ಪನವರಿಗೆ ಜನ್ಮದಿನದ ಶುಭಾಶಯ ಕೋರಿದ ಮುಖ್ಯಮಂತ್ರಿಗಳು, ಬಳಿಕ ವಿಮಾನ ಪ್ರಯಾಣಕ್ಕೆ ಸಜ್ಜಾಗಿದ್ದ ಪೌರಕಾರ್ಮಿಕರೊಂದಿಗೆ ಆತ್ಮೀಯವಾಗಿ ಮಾತನಾಡಿದರು. “ಶ್ರಮಿಕ ವರ್ಗದವರನ್ನು ಈ ರೀತಿಯಾಗಿ ಸನ್ಮಾನಿಸುವುದು ಮತ್ತು ಅವರಿಗೆ ವಿಮಾನಯಾನದಂತಹ ಅಪರೂಪದ ಅವಕಾಶ ಕಲ್ಪಿಸುವುದು ಶ್ಲಾಘನೀಯ ಕೆಲಸ” ಎಂದು ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು. ಮೊದಲ ಬಾರಿಗೆ ವಿಮಾನ ಹತ್ತಲು ಬಂದಿದ್ದ ಪೌರಕಾರ್ಮಿಕರ ಕಣ್ಣಲ್ಲಿ ಸಂಭ್ರಮ ಎದ್ದು ಕಾಣುತ್ತಿತ್ತು. “ನಮ್ಮ ಸೇವೆಯನ್ನು ಗುರುತಿಸಿ ಇಂತಹದೊಂದು ದೊಡ್ಡ ಅವಕಾಶ ನೀಡಿದ ಸಚಿವರಿಗೆ ನಾವು ಋಣಿ” ಎಂದು…
ಶಿವಮೊಗ್ಗ: ಕಳೆದ ಕೆಲ ದಿನಗಳ ಹಿಂದೆ ಅನ್ಯಕೋಮಿನ ಅಪ್ರಾಪ್ತ ಬಾಲಕರು ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಸಂಕೇತ್ ನನ್ನು ಭೀಕರವಾಗಿ ಹಲ್ಲೆ ಮಾಡಿ ಕೊಲೆ ಮಾಡಿದ್ದರು. ಇಂತಹ ಬಾಲಕನ ಕುಟುಂಬಕ್ಕೆ ಸರ್ಕಾರ 15 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿತ್ತು. ಅದರಂತೆ ಇಂದು ಸಿಎಂ ಸಿದ್ಧರಾಮಯ್ಯ ಹಾಗೂ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮೃತ ಸಂಕೇತ್ ಕುಟುಂಬಕ್ಕೆ 15 ಲಕ್ಷ ಪರಿಹಾರದ ಚೆಕ್ ಹಸ್ತಾಂತರಿಸಿದರು. ಕಳೆದ ಕೆಲ ದಿನಗಳ ಹಿಂದೆ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಸಂಕೇತ್ ಸ್ನೇಹಿತನ ಜೊತೆಗೆ ಅನ್ಯಕೋಮಿನ ಅಪ್ರಾಪ್ತ ಬಾಲಕರು ಜಗಳ ಮಾಡುತ್ತಿದ್ದರು. ಈ ವೇಳೆ ಮಧ್ಯ ಪ್ರವೇಶಿಸಿ ಸಂಕೇತನಿಗೆ ಆ ಅಪ್ರಾಪ್ತ ಬಾಲಕರು ಹಲ್ಲೆ ಮಾಡಿ ಕೊಲೆ ಮಾಡಿದ್ದರು. ಆ ಸಂಬಂಧ ಪೊಲೀಸರು ಐವರು ಅಪ್ರಾಪ್ತ ಬಾಲಕರನ್ನು ಅರೆಸ್ಟ್ ಮಾಡಿದ್ದರು. ಈ ಘಟನೆಯ ಬಳಿಕ ಮೃತನ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 10 ಲಕ್ಷ ರೂಪಾಯಿ ಹಾಗೂ ಶಿಕ್ಷಣ ಇಲಾಖೆಯಿಂದ 5…
ಬೆಂಗಳೂರು: ಇಸ್ರೇಲ್-ಇರಾನ್ ಯುದ್ಧದ ಭೀತಿಯಿಂದಾಗಿ ದುಬೈ ಸೇರಿದಂತೆ ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಮಾಹಿತಿ ನೀಡಿದ್ದಾರೆ. ವಿಧಾನ ಪರಿಷತ್ ಶಾಸಕ ದಿನೇಶ್ ಗೂಳಿಗೌಡ ಅವರು ಈ ಕುರಿತು ಬರೆದಿದ್ದ ಪತ್ರಕ್ಕೆ ತಕ್ಷಣವೇ ಸ್ಪಂದಿಸಿದ ಶಾಲಿನಿ ರಜನೀಶ್ ಅವರು, ವಿದೇಶದಲ್ಲಿರುವ ಕನ್ನಡಿಗರ ಸುರಕ್ಷತೆಗಾಗಿ ಸರ್ಕಾರವು ಈಗಾಗಲೇ ಕಾರ್ಯಪ್ರವೃತ್ತವಾಗಿದೆ ಎಂದು ತಿಳಿಸಿದ್ದಾರೆ. “ಸದ್ಯದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ವಿದೇಶದಲ್ಲಿ ಸಿಲುಕಿರುವ ಕನ್ನಡಿಗರ ಮಾಹಿತಿಯನ್ನು ನಾವು ಸಂಗ್ರಹಿಸುತ್ತಿದ್ದೇವೆ. ಇವರೆಲ್ಲರ ಹೆಸರನ್ನು ನೋಂದಾಯಿಸಲು ಮತ್ತು ಮುಂದಿನ ನೆರವು ಹಾಗೂ ರಕ್ಷಣಾ ಕಾರ್ಯಕ್ಕಾಗಿ ನಾವು ಎಲ್ಲ ಅಗತ್ಯ ವಿವರಗಳನ್ನು (ದೂರವಾಣಿ ಸಂಖ್ಯೆಗಳು ಮತ್ತು ಮಾಹಿತಿ) ಸಂಬಂಧಪಟ್ಟ ಭಾರತೀಯ ರಾಯಭಾರ ಕಚೇರಿಗಳಿಗೆ ನೀಡುತ್ತಿದ್ದೇವೆ” ಎಂದು ಅವರು ತಿಳಿಸಿದ್ದಾರೆ. https://kannadanewsnow.com/kannada/cm-siddaramaiah-condemns-americas-contradictory-stance/ https://kannadanewsnow.com/kannada/good-news-for-the-people-of-the-state-no-increase-in-electricity-rates-for-now-cm-clarifies/
ಶಿವಮೊಗ್ಗ : ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಶಿವಮೊಗ್ಗದ ವಿಮಾನ ನಿಲ್ದಾಣ ದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅರಬ್ ದೇಶಗಳಲ್ಲಿ ಸಿಲುಕಿರುವ ಬಳ್ಳಾರಿಯ 30 ಜನರನ್ನು ವಾಪಸ್ಸು ಕರೆತರಲಾಗುವುದು ಎಂದು ಹೇಳಿದರಲ್ಲದೆ ದುಬೈ ನಲ್ಲಿರುವ ಭಾರತೀಯರು ಸುರಕ್ಷಿತವಾಗಿದ್ದಾರೆ ಎಂದರು. ಕನ್ನಡಿಗರನ್ನು ಸುರಕ್ಷಿತವಾಗಿ ವಾಪಸ್ಸು ಕರೆತರಲಾಗುವುದು ಅರಬ್ ದೇಶಗಳಲ್ಲಿ ವಾಸಿಸುತ್ತಿರುವ ಕನ್ನಡಿಗರ ಸುರಕ್ಷತೆಯ ಬಗ್ಗೆ ಮುಖ್ಯ ಕಾರ್ಯದರ್ಶಿ, ಸ್ಥಾನಿಕ ಆಯುಕ್ತರೊಂದಿಗೆ ಚರ್ಚಿಸಲಾಗಿದೆ. ದುಬೈ ವಿಮಾನ ನಿಲ್ದಾಣ ಬಂದ್ ಮಾಡಲಾಗಿದ್ದು, ಅದನ್ನು ತೆರೆದ ಮೇಲೆ ಅವರನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆ ತರಲು ವ್ಯವಸ್ಥೆ ಮಾಡಲಾಗುವುದು. ವಿಧಾನ ಪರಿಷತ್ ಸದಸ್ಯ ಭೋಜೇಗೌಡರು ದುಬೈದಲ್ಲಿದ್ದು, ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ ಹೋಟೆಲಿನಲ್ಲಿ ಸುರಕ್ಷಿತವಾಗಿರುವುದಾಗಿ ಹೇಳಿದರು ಎಂದರು. ಅಮೆರಿಕಾದ ತದ್ವಿರುದ್ಧ ನಿಲುವನ್ನು ಖಂಡಿಸುತ್ತೇನೆ ಅಮೆರಿಕಾ ಇರಾನ್ ಮೇಲೆ ಮಾಡಿರುವ ದಾಳಿ ಅನಗತ್ಯವಾದುದು. ಒಂದೆಡೆ ಶಾಂತಿ ಮಾತ್ರ…
ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಯ ನಂತರ ಪಶ್ಚಿಮ ಏಷ್ಯಾದಲ್ಲಿ ವಾಯುಪ್ರದೇಶ ನಿರ್ಬಂಧಗಳಿಂದಾಗಿ ದೆಹಲಿ ಮತ್ತು ಮುಂಬೈ ವಿಮಾನ ನಿಲ್ದಾಣಗಳಿಂದ ಕಾರ್ಯನಿರ್ವಹಿಸುತ್ತಿದ್ದ 225 ಸೇರಿದಂತೆ ಭಾರತೀಯ ವಿಮಾನಯಾನ ಸಂಸ್ಥೆಗಳು ನಿರ್ವಹಿಸುತ್ತಿದ್ದ ಒಟ್ಟು 350 ಅಂತರರಾಷ್ಟ್ರೀಯ ವಿಮಾನಗಳನ್ನು ಭಾನುವಾರ ರದ್ದುಗೊಳಿಸಲಾಯಿತು, ಇದು ಕೆಲಸಕ್ಕೆ ಮರಳುತ್ತಿದ್ದ ಅನೇಕರು ಸೇರಿದಂತೆ ನೂರಾರು ವಿಮಾನಯಾನದಾರರ ಪ್ರಯಾಣ ಯೋಜನೆಗಳನ್ನು ಅಡ್ಡಿಪಡಿಸಿತು. ಭಾನುವಾರ ಮುಂಜಾನೆ, ನಾಗರಿಕ ವಿಮಾನಯಾನ ಸಚಿವಾಲಯವು ಈ ಪ್ರದೇಶದಲ್ಲಿನ ಬೆಳವಣಿಗೆಗಳಿಂದಾಗಿ ಭಾರತೀಯ ವಿಮಾನಯಾನ ಸಂಸ್ಥೆಗಳು ಹಗಲಿನಲ್ಲಿ 444 ಅಂತರರಾಷ್ಟ್ರೀಯ ವಿಮಾನಗಳನ್ನು ರದ್ದುಗೊಳಿಸುವ ನಿರೀಕ್ಷೆಯಿದೆ ಎಂದು ತಿಳಿಸಿದೆ. ಶನಿವಾರ, ದೇಶೀಯ ವಿಮಾನಯಾನ ಸಂಸ್ಥೆಗಳ 410 ವಿಮಾನಗಳನ್ನು ರದ್ದುಗೊಳಿಸಲಾಗಿದೆ. ನಾಗರಿಕ ವಿಮಾನಯಾನ ಸಚಿವಾಲಯವು ಪರಿಸ್ಥಿತಿಯನ್ನು ಪೂರ್ವಭಾವಿಯಾಗಿ ಮೇಲ್ವಿಚಾರಣೆ ಮಾಡಲು ಮತ್ತು ಅಗತ್ಯ ಪ್ರಯಾಣಿಕರ ಬೆಂಬಲವನ್ನು ಒದಗಿಸಲು ವಿಮಾನಯಾನ ಸಂಸ್ಥೆಗಳು, ವಿಮಾನ ನಿಲ್ದಾಣ ನಿರ್ವಾಹಕರು ಮತ್ತು ಇತರ ಪಾಲುದಾರರೊಂದಿಗೆ ನಿಕಟ ಸಮನ್ವಯದಲ್ಲಿದೆ ಎಂದು ಹೇಳಿದೆ. ಭಾನುವಾರ 350 ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಅದು ಹೇಳಿದೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಹಗಲಿನಲ್ಲಿ ಕನಿಷ್ಠ…
ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘ (KSHCOEA) ಮಾಚ್ 11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಇದರಿಂದಾಗಿ ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳ ಆರೋಗ್ಯ ಸೇವೆಯಲ್ಲಿ ಭಾರೀ ವ್ಯತ್ಯಯ ಉಂಟಾಗುವ ಆತಂಕ ಎದುರಾಗಿದೆ. ಮುಷ್ಕರದ ಭಾಗವಾಗಿ ನೌಕರರು ಮಾರ್ಚ್ 11ರಿಂದ ಮಾರ್ಚ್ 15ರವರೆಗೆ ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಲಿದ್ದಾರೆ. ಈ ಅವಧಿಯಲ್ಲಿ ಹೊರರೋಗಿ (OPD) ಸೇವೆ ನೀಡದೆ, ಕೇವಲ ತುರ್ತು ಸೇವೆಗಳನ್ನು ಮಾತ್ರ ಒದಗಿಸಲು ಸಂಘ ನಿರ್ಧರಿಸಿದೆ. ಮಾರ್ಚ್ 16, ಸೋಮವಾರದಿಂದ ಅನಿರ್ದಿಷ್ಟಾವಧಿವರೆಗೆ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಪೂರ್ಣ ಪ್ರಮಾಣದ ಮುಷ್ಕರ ಆರಂಭಿಸಲಿದ್ದಾರೆ. NHM ಗುತ್ತಿಗೆ, ಹೊರಗುತ್ತಿಗೆ ನೌಕರರ ಪ್ರಮುಖ ಬೇಡಿಕೆಗಳೇನು? ಖಾಯಂ ನೇಮಕಾತಿ: ಚುನಾವಣಾ ಪೂರ್ವದಲ್ಲಿ ಭರವಸೆ ನೀಡಿದಂತೆ ಎಲ್ಲಾ ಗುತ್ತಿಗೆ ಮತ್ತು ಹೊರಗುತ್ತಿಗೆ ಸಿಬ್ಬಂದಿಗಳನ್ನು ಖಾಯಂ ಮಾಡುವ ಪ್ರಕ್ರಿಯೆ ಆರಂಭಿಸಬೇಕು. ಕೆಲಸದಿಂದ ವಜಾ ಮಾಡಬಾರದು: ಯಾವುದೇ…
ಶಿವಮೊಗ್ಗ : ಸಾಗರದ ಉಪವಿಭಾಗೀಯ ಆಸ್ಪತ್ರೆ ಎದುರು ವೈದ್ಯಾಧಿಕಾರಿಗಳ ಸಂಘ ಹಾಗೂ ಆರೋಗ್ಯ ಇಲಾಖೆ ನೌಕರರ ಸಂಘದ ವತಿಯಿಂದ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಶನಿವಾರ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾತನಾಡಿದಂತ ಶಿವಮೊಗ್ಗ ವೈದ್ಯಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಡಾ.ನಾಗೇಂದ್ರಪ್ಪ, ಆರೋಗ್ಯ ಇಲಾಖೆಯ ವೈದ್ಯಸಿಬ್ಬಂದಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಈತನಕ 13 ಸಭೆಗಳನ್ನು ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೆ ಒಂದು ಬೇಡಿಕೆಯನ್ನು ಸಹ ಸರ್ಕಾರ ಈತನಕ ಈಡೇರಿಸಿಲ್ಲ ಎಂಬುದಾಗಿ ಆಕ್ರೋಶ ವ್ಯಕ್ತ ಪಡಿಸಿದರು. ತಮ್ಮ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ ಹಾದಿ ಹಿಡಿಯುವುದು ನಮಗೆ ಅನಿವಾರ್ಯವಾಗಿದೆ. ಸರ್ಕಾರ ತಕ್ಷಣ ನಮ್ಮ ಬೇಡಿಕೆ ಈಡೇರಿಸದೆ ಹೋದಲ್ಲಿ ಮಾ.11ರಿಂದ ನಮ್ಮ ಸೇವೆಯನ್ನು ಸ್ಥಗಿತಗೊಳಿಸಿ ಹೋರಾಟ ಮಾಡುವುದು ಅನಿವಾರ್ಯವಾಗುತ್ತದೆ. ಸಾರ್ವಜನಿಕರಿಗೆ ಆಗುವ ತೊಂದರೆಗಳಿಗೆ ಸರ್ಕಾರವೇ ಹೊಣೆಯಾಗಿರುತ್ತದೆ ಎಂಬುದಾಗಿ ಎಚ್ಚರಿಸಿದರು. ಒಟ್ಟು 14 ಬೇಡಿಕೆಗಳನ್ನು ಮುಂದಿಟ್ಟುಕೊoಡು ನಾವು ಪ್ರತಿಭಟನೆ ನಡೆಸುತ್ತಿದ್ದು ಔಷಧಿ ಪೂರೈಕೆ ಪ್ರಮುಖ ಬೇಡಿಕೆಯಾಗಿದೆ. ಒಟ್ಟು 800 ಔಷಧಿಗಳನ್ನು ಕೊಡಬೇಕಾಗಿದ್ದು ನಮಗೆ ಕೇವಲ 140 ಔಷಧಿಗಳನ್ನು…













