Author: kannadanewsnow09

ಕೊಡಗು: ಜಿಲ್ಲೆಯ ತಡಿಯಾಂಡಮೋಳ್ ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ನಾಪತ್ತೆಯಾಗಿದ್ದಳು. ಆಕೆಯ ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದರು. ಹೀಗಾಗಿ ಇಂದು ಹೆಚ್ಚುವರಿಯಾಗಿ 40 ಸಿಬ್ಬಂದಿಯ 4 ತಂಡ ನಿಯೋಜಿಸಲು ಹಾಗೂ ಡ್ರೋನ್ ಕ್ಯಾಮರಾ ಬಳಸುವಂತೆ ತಿಳಿಸಲಾಗಿದ್ದು, ಒಟ್ಟು 9 ತಂಡದಿಂದ ಶರಣ್ಯ ಪತ್ತೆ ಕಾರ್ಯಾಚರಣೆಗೆ ಇಳಿಯಲಾಗಿತ್ತು. ಅಂತಿಮವಾಗಿ ನಾಪತ್ತೆಯಾಗಿದ್ದಂತ ಶರಣ್ಯ ಪತ್ತೆಯಾಗಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಚಾರಣಕ್ಕಾಗಿ ಕೇರಳದಿಂದ ಒಬ್ಬರೇ ಆಗಮಿಸಿ, ಕಕ್ಕಬ್ಬೆ ಗ್ರಾಮದಲ್ಲಿ ಖಾಸಗಿ ಹೋಂಸ್ಟೇಯಲ್ಲಿ ತಂಗಿದ್ದ ಶರಣ್ಯ ಅವರು ಗೈಡ್ ಹಾಗೂ ಇನ್ನಿತರ 15 ಚಾರಣಿಗರೊಂದಿಗೆ ಕಳೆದ ಗುರುವಾರ (ಏ.2) ಕೊಡಗಿನ ಎತ್ತರದ ಗಿರಿಶ್ರೇಣಿ ತಡಿಯಂಡಮೋಳ್ ಬೆಟ್ಟಕ್ಕೆ ತೆರಳಿದ್ದರು. ಅಂದು ಮಧ್ಯಾಹ್ನ ಆಕೆ ಕಾಣೆಯಾಗಿದ್ದು, ವಿಷಯ ತಿಳಿದ ಕೂಡಲೇ ಪೊಲೀಸರು, ನಕ್ಸಲ್ ನಿಗ್ರಹದಳ, ಶ್ವಾನದಳ ಮತ್ತು ಅರಣ್ಯ ಸಿಬ್ಬಂದಿ ಸೇರಿ 50 ಜನರ ಐದು ತಂಡಗಳು ಶೋಧ ನಡೆಸಲಾಗಿತ್ತು ಎಂದು ಅವರು ತಿಳಿಸಿದ್ದಾರೆ. ಗುರುವಾರ ಕೊನೆಯದಾಗಿ ದೂರವಾಣಿ…

Read More

ದಾವಣಗೆರೆ : ಕೊಡಗಿನ ತಡಿಯಾಂಡಮೋಳ್ ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಇಂದು ಹೆಚ್ಚುವರಿಯಾಗಿ 40 ಸಿಬ್ಬಂದಿಯ 4 ತಂಡ ನಿಯೋಜಿಸಲು ಹಾಗೂ ಡ್ರೋನ್ ಕ್ಯಾಮರಾ ಬಳಸುವಂತೆ ತಿಳಿಸಲಾಗಿದ್ದು, ಒಟ್ಟು 9 ತಂಡದಿಂದ ಕಾರ್ಯಾಚರಣೆ ನಡೆಯುತ್ತಿದೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಚಾರಣಕ್ಕಾಗಿ ಕೇರಳದಿಂದ ಒಬ್ಬರೇ ಆಗಮಿಸಿ, ಕಕ್ಕಬ್ಬೆ ಗ್ರಾಮದಲ್ಲಿ ಖಾಸಗಿ ಹೋಂಸ್ಟೇಯಲ್ಲಿ ತಂಗಿದ್ದ ಶರಣ್ಯ ಅವರು ಗೈಡ್ ಹಾಗೂ ಇನ್ನಿತರ 15 ಚಾರಣಿಗರೊಂದಿಗೆ ಕಳೆದ ಗುರುವಾರ (ಏ.2) ಕೊಡಗಿನ ಎತ್ತರದ ಗಿರಿಶ್ರೇಣಿ ತಡಿಯಂಡಮೋಳ್ ಬೆಟ್ಟಕ್ಕೆ ತೆರಳಿದ್ದರು. ಅಂದು ಮಧ್ಯಾಹ್ನ ಆಕೆ ಕಾಣೆಯಾಗಿದ್ದು, ವಿಷಯ ತಿಳಿದ ಕೂಡಲೇ ಪೊಲೀಸರು, ನಕ್ಸಲ್ ನಿಗ್ರಹದಳ, ಶ್ವಾನದಳ ಮತ್ತು ಅರಣ್ಯ ಸಿಬ್ಬಂದಿ ಸೇರಿ 50 ಜನರ ಐದು ತಂಡಗಳು ಶೋಧ ನಡೆಸುತ್ತಿವೆ ಎಂದು ಅವರು ತಿಳಿಸಿದ್ದಾರೆ. ಗುರುವಾರ ಕೊನೆಯದಾಗಿ ದೂರವಾಣಿ ಮೂಲಕ ಹೋಂಸ್ಟೇ ಸಂಪರ್ಕಿಸಿರುವ ಯುವತಿ, ತಾವು ದಾರಿತಪ್ಪಿದ್ದಾಗಿ ತಿಳಿಸಿದ್ದಾರೆ ಎಂಬ…

Read More

ವಾಷಿಂಗ್ಟನ್: ಇರಾನ್ ಮತ್ತು ಅಮೆರಿಕಾ ನಡುವಿನ ಸಂಘರ್ಷ ಈಗ ತುದಿಗೇರಿದೆ. ಹಾರ್ಮುಜ್ ಜಲಸಂಧಿಯನ್ನು (Strait of Hormuz) ಬಂದ್ ಮಾಡಿರುವ ಇರಾನ್ ಕ್ರಮಕ್ಕೆ ಪ್ರತಿಯಾಗಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅತ್ಯಂತ ಕಠಿಣ ಎಚ್ಚರಿಕೆ ನೀಡಿದ್ದು, ಇರಾನ್‌ನ ಮೂಲಸೌಕರ್ಯಗಳನ್ನು ನಾಶಪಡಿಸುವುದಾಗಿ ಗುಡುಗಿದ್ದಾರೆ. ‘ಪವರ್ ಪ್ಲಾಂಟ್ ಡೇ’ ಎಚ್ಚರಿಕೆ: ಏಪ್ರಿಲ್ 6ರ ಗಡುವು ಮುಗಿಯಲು ಕೇವಲ ಒಂದು ದಿನ ಬಾಕಿ ಇರುವಾಗ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, “ಮಂಗಳವಾರ ಇರಾನ್ ಪಾಲಿಗೆ ಪವರ್ ಪ್ಲಾಂಟ್ ಡೇ ಮತ್ತು ಬ್ರಿಡ್ಜ್ ಡೇ ಆಗಲಿದೆ” ಎಂದು ಹೇಳಿದ್ದಾರೆ. ಅಂದರೆ, ಅಂದು ಇರಾನ್‌ನ ಪ್ರಮುಖ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ಅಮೆರಿಕಾ ಭೀಕರ ದಾಳಿ ನಡೆಸುವ ಮುನ್ಸೂಚನೆಯನ್ನು ಅವರು ನೀಡಿದ್ದಾರೆ. ಟ್ರಂಪ್ ನೀಡಿದ ಪ್ರಮುಖ ಎಚ್ಚರಿಕೆಗಳು: ನರಕ ಸದೃಶ ಜೀವನ: “ನೀವು ನರಕದಲ್ಲಿ ಬದುಕಬೇಕಾಗುತ್ತದೆ” ಎಂದು ಎಚ್ಚರಿಸಿರುವ ಟ್ರಂಪ್, ಈ ಕೂಡಲೇ ಹಾರ್ಮುಜ್ ಜಲಸಂಧಿಯನ್ನು ತೆರೆಯದಿದ್ದರೆ ಹಿಂದೆಂದೂ ಕಾಣದ ರೀತಿಯ ದಾಳಿಯನ್ನು ಎದುರಿಸಬೇಕಾಗುತ್ತದೆ ಎಂದು…

Read More

ಇಂದಿನ ಡಿಜಿಟಲ್ ಯುಗದಲ್ಲಿ ಆನ್‌ಲೈನ್ ಶಾಪಿಂಗ್ ಕ್ರೇಜ್ ಎಷ್ಟಿದೆ ಎಂಬುದು ನಮಗೆಲ್ಲರಿಗೂ ತಿಳಿದಿದೆ. ಫ್ಲಿಪ್‌ಕಾರ್ಟ್ (Flipkart) ಮತ್ತು ಮಿಂತ್ರಾ (Myntra) ಅಂತಹ ದೈತ್ಯ ಕಂಪನಿಗಳ ಉತ್ಪನ್ನಗಳನ್ನು ಗ್ರಾಹಕರ ಮನೆ ಬಾಗಿಲಿಗೆ ತಲುಪಿಸುವ ಜವಾಬ್ದಾರಿ ಹೊತ್ತಿರುವುದು ‘ಇ-ಕಾರ್ಟ್ ಲಾಜಿಸ್ಟಿಕ್ಸ್’ (Ekart Logistics). ಈಗ ನೀವು ಕೂಡ ಈ ಕಂಪನಿಯ ಜೊತೆ ಕೈಜೋಡಿಸಿ, ನಿಮ್ಮದೇ ಆದ ಸಣ್ಣ ಉದ್ಯಮ ಆರಂಭಿಸಿ ಉತ್ತಮ ಲಾಭ ಗಳಿಸಬಹುದು. ಇ-ಕಾರ್ಟ್ ಫ್ರಾಂಚೈಸಿ ಎಂದರೆ ಏನು? ಇದು ಸರಳವಾಗಿ ಹೇಳುವುದಾದರೆ ಒಂದು ಡೆಲಿವರಿ ಹಬ್. ನಿಮ್ಮ ಪ್ರದೇಶದಲ್ಲಿ ಬರುವ ಆರ್ಡರ್‌ಗಳನ್ನು ಸ್ಟಾಕ್ ಮಾಡಿಕೊಂಡು, ಅವುಗಳನ್ನು ಗ್ರಾಹಕರಿಗೆ ವಿತರಿಸುವುದು ನಿಮ್ಮ ಕೆಲಸವಾಗಿರುತ್ತದೆ. ಹೂಡಿಕೆ ಮತ್ತು ಆದಾಯ ಎಷ್ಟು? ಹೂಡಿಕೆ: ಈ ಉದ್ಯಮ ಆರಂಭಿಸಲು ಅಂದಾಜು ₹1 ಲಕ್ಷದಿಂದ ₹3 ಲಕ್ಷದವರೆಗೆ ಹೂಡಿಕೆ ಬೇಕಾಗಬಹುದು. ಇದು ನಿಮ್ಮ ಜಾಗದ ಬಾಡಿಗೆ ಮತ್ತು ವಾಹನಗಳ ವ್ಯವಸ್ಥೆಯ ಮೇಲೆ ಅವಲಂಬಿತವಾಗಿರುತ್ತದೆ. ಗಳಿಕೆ: ಪ್ರತಿ ಪಾರ್ಸೆಲ್ ಡೆಲಿವರಿ ಮೇಲೆ ನಿಮಗೆ ಕಮಿಷನ್ ಸಿಗುತ್ತದೆ. ವ್ಯವಹಾರ ಚೆನ್ನಾಗಿದ್ದರೆ ತಿಂಗಳಿಗೆ…

Read More

ಗ್ರೇಟರ್ ನೋಯ್ಡಾ: “ದುಬಾರಿ ಬೆಲೆ ತೆತ್ತು ಪೆಟ್ರೋಲ್ ಹಾಕಿಸಿದರೆ ಸಿಕ್ಕಿದ್ದು ಮಾತ್ರ ನೀರು!” – ಇದು ಗ್ರೇಟರ್ ನೋಯ್ಡಾದ ಸೆಕ್ಟರ್ Pi-1 ರಲ್ಲಿರುವ ಪೆಟ್ರೋಲ್ ಬಂಕ್‌ವೊಂದಕ್ಕೆ ಹೋದ ವಾಹನ ಸವಾರರ ಅಳಲು. ಪೆಟ್ರೋಲ್ ಬದಲಿಗೆ ನೀರು ಮಿಶ್ರಿತ ಇಂಧನ ಪೂರೈಕೆಯಾದ ಹಿನ್ನೆಲೆಯಲ್ಲಿ ಶನಿವಾರ ಇಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ಘಟನೆಯ ಹಿನ್ನೆಲೆ: ಶನಿವಾರ ಸಂಜೆ ಸೆಕ್ಟರ್ Pi-1 ರ ಪೆಟ್ರೋಲ್ ಬಂಕ್‌ನಲ್ಲಿ ಇಂಧನ ತುಂಬಿಸಿಕೊಂಡ ಸುಮಾರು 25ಕ್ಕೂ ಹೆಚ್ಚು ವಾಹನಗಳು (ಕಾರು, ಬೈಕ್ ಮತ್ತು ಸ್ಕೂಟರ್‌ಗಳು) ಬಂಕ್‌ನಿಂದ ಸ್ವಲ್ಪ ದೂರ ಹೋಗುತ್ತಿದ್ದಂತೆಯೇ ಅರ್ಧ ಹಾದಿಯಲ್ಲೇ ಕೆಟ್ಟು ನಿಂತಿವೆ. ಹರಿದ್ವಾರ, ದೆಹಲಿ ಮತ್ತು ಗುರುಗ್ರಾಮಕ್ಕೆ ತೆರಳುತ್ತಿದ್ದ ಪ್ರಯಾಣಿಕರು ಇದರಿಂದ ತೀವ್ರ ಸಂಕಷ್ಟಕ್ಕೀಡಾದರು. ಬಯಲಾದ ಅಸಲಿಯತ್ತು: ವಾಹನಗಳು ಕೆಟ್ಟು ನಿಂತಾಗ ಸಂಶಯಗೊಂಡ ಮಾಲೀಕರು ಮೆಕ್ಯಾನಿಕ್‌ಗಳನ್ನು ಕರೆಸಿ ತಪಾಸಣೆ ನಡೆಸಿದಾಗ ಅಚ್ಚರಿಯ ವಿಷಯ ಬೆಳಕಿಗೆ ಬಂದಿದೆ. ಇಂಧನ ಟ್ಯಾಂಕ್‌ನಲ್ಲಿದ್ದದ್ದು ಪೆಟ್ರೋಲ್ ಅಲ್ಲ, ಬದಲಾಗಿ ಹೆಚ್ಚಿನ ಪ್ರಮಾಣದ ನೀರು! ಸವಾರರು ಪೆಟ್ರೋಲ್ ಮಾದರಿಯನ್ನು ಬಾಟಲಿ ಮತ್ತು ಬಕೆಟ್‌ಗಳಲ್ಲಿ…

Read More

ನವದೆಹಲಿ: ದೇಶದ ಕೋಟ್ಯಂತರ ಅನ್ನದಾತರಿಗೆ ಕೇಂದ್ರ ಸರ್ಕಾರವು ಶೀಘ್ರದಲ್ಲೇ ಸಿಹಿ ಸುದ್ದಿ ನೀಡಲು ಸಜ್ಜಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-Kisan) ಯೋಜನೆಯಡಿ ರೈತರು ಬಹುನಿರೀಕ್ಷಿತ 23ನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಹೊಸ ಅಪ್‌ಡೇಟ್ ಹೊರಬಿದ್ದಿದೆ. ಈ ಯೋಜನೆಯಡಿ ಅರ್ಹ ರೈತ ಕುಟುಂಬಗಳಿಗೆ ವಾರ್ಷಿಕವಾಗಿ 6,000 ರೂಪಾಯಿಗಳನ್ನು ತಲಾ 2,000 ರೂಪಾಯಿಯಂತೆ ಮೂರು ಕಂತುಗಳಲ್ಲಿ ನೇರವಾಗಿ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುತ್ತದೆ. 1. 23ನೇ ಕಂತಿನ ಹಣ ಯಾವಾಗ ಬರಬಹುದು? ಸಾಮಾನ್ಯವಾಗಿ ಸರ್ಕಾರವು ಪ್ರತಿ ನಾಲ್ಕು ತಿಂಗಳಿಗೊಮ್ಮೆ ಕಂತಿನ ಹಣವನ್ನು ಬಿಡುಗಡೆ ಮಾಡುತ್ತದೆ. ಮೂಲಗಳ ಪ್ರಕಾರ, ಪಿಎಂ ಕಿಸಾನ್ ಯೋಜನೆಯ 23ನೇ ಕಂತಿನ ಹಣವು ಏಪ್ರಿಲ್ ಅಥವಾ ಮೇ 2026 ರ ವೇಳೆಗೆ ರೈತರ ಖಾತೆ ಸೇರುವ ಸಾಧ್ಯತೆಯಿದೆ. ಆದರೆ, ಈ ಬಗ್ಗೆ ಕೇಂದ್ರ ಸರ್ಕಾರದಿಂದ ಇನ್ನೂ ಅಧಿಕೃತ ದಿನಾಂಕ ಘೋಷಣೆಯಾಗಬೇಕಿದೆ. 2. ಇ-ಕೆವೈಸಿ (e-KYC) ಕಡ್ಡಾಯ ಯೋಜನೆಯ ಲಾಭ ಪಡೆಯಲು ರೈತರು ಕಡ್ಡಾಯವಾಗಿ ಇ-ಕೆವೈಸಿ ಪೂರ್ಣಗೊಳಿಸಬೇಕು ಎಂದು…

Read More

ಬಾಗಲಕೋಟೆ: ಸಿಎಂ ಸಿದ್ದರಾಮಯ್ಯ ಪಾಪ‌ರ್ ಸರ್ಕಾರದ ಸಾಹುಕಾರ. ರಾಜ್ಯ ಸರ್ಕಾರದ ಕಿಸೆಯಲ್ಲಿ, ಖಜಾನೆಯಲ್ಲಿ ಏನೂ ಇಲ್ಲ. ಸಾಹುಕಾರನ ಧಿಮಾಕು ಸಾಲಗಾರರು ಬಂದಾಗ ಗೊತ್ತಾಗುತ್ತದೆ. ಈ ಸರ್ಕಾರದ ಬಂಡವಾಳ ಈ ಸರ್ಕಾರ ಹೋದಾಗ ಗೊತ್ತಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬಾಗಲಕೋಟೆಯ ಉಪಚುನಾವಣೆಯ ಹಿನ್ನೆಲೆಯಲ್ಲಿ ಇಂದು ನಗರದ ವಾರ್ಡ ನಂಬರ 29 ರಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರವಾಗಿ ಮತಯಾಚನೆಯನ್ನು ಮಾಡಿದರು. ಅಭಿವೃದ್ಧಿ ನಿರಂತರ ನಡೆಯುವ ಪ್ರಕ್ರಿಯೆ ಅದು ಹಳಿ ತಪ್ಪಿದರೆ ಅದನ್ನು ಹಳಿಗೆ ತರುವುದು ದುಬಾರಿಯಾಗುತ್ತದೆ. ಒಂದು ಕೆಲಸ ಈಗ ಮಾಡಿದರೆ 1 ಕೋಟಿ ರೂ. ಇರುತ್ತದೆ. ಅದನ್ನು ಎರಡು ವರ್ಷ ಬಿಟ್ಟರೆ ಎರಡು ಕೋಟಿ ಹೆಚ್ಚಾಗುತ್ತದೆ. ಮೂರು ವರ್ಷದಿಂದ ಯಾವುದೇ ಅಭಿವೃದ್ಧಿ ಕಾರ್ಯ ನಡೆಯದಿರುವುದರಿಂದ ಬಾಗಲಕೋಟೆಯ ವೆಚ್ಚ ಸಾವಿರ ಕೋಟಿ ಹೆಚ್ಚಾಗುತ್ತದೆ. ಬಾಗಲಕೋಟೆಯೊಂದಿಗೆ ನನ್ನ ಸಂಬಂಧ ದೈವಿಚ್ಚೆ. ನಾನು ನೀರಾವರಿ ಸಚಿವನಾಗಿದ್ದಾಗ ಸ್ಟೇಜ್ 1 ನಲ್ಲಿ ಅಭಿವೃದ್ದಿಗೆ 700…

Read More

ಬಾಗಲಕೋಟೆ: ಕರ್ನಾಟಕ ರಾಜ್ಯದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ. ಮನೆಯಲ್ಲಿ ಹೆಣ್ಣು ಮಗಳು ಕಾಲೇಜಿಗೆ ಹೋಗಿದ್ದರೆ ಸಂಜೆ ಮನೆಗೆ ತಡವಾಗಿ ಬಂದರೆ ಭಯವಾಗುತ್ತದೆ. ಕೆಲಸಕ್ಕೆ ಹೋದ ಹೆಣ್ಣು ಮಗಳು ಬರುತ್ತಾರೊ ಇಲ್ಲವೊ ಎನ್ನುವ ಆತಂಕದಲ್ಲಿ ತಾಯಂದಿರು ಬದುಕುತ್ತಿದ್ದಾರೆ. ಈ ವ್ಯವಸ್ಥೆ ಬದಲಾಗಬೇಕೆಂದರೆ ಕರ್ನಾಟಕ ಸರ್ಕಾರ ಬದಲಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಬಾಗಲಕೋಟೆಯ ಉಪಚುನಾವಣೆಯ ಹಿನ್ನೆಲೆಯಲ್ಲಿ ಇಂದು ನಗರದ ವಾರ್ಡ ನಂಬರ 28 ರ ಪ್ರಕಾಶ ಹಂಡಿ ಅವರ ಮನೆ ಹಾಗೂ ವಾರ್ಡ್ ನಂಬರ್ 29 ರಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರವಾಗಿ ಮತಯಾಚನೆಯನ್ನು ಮಾಡಿದರು. ಹೆಣ್ಣು ಮಕ್ಕಳ ಸುರಕತೆಯಲ್ಲಿ ತಾಯಂದಿರು ಬಹಳ ಆತಂಕದಲ್ಲಿದ್ದಾರೆ. ರಾಜ್ಯದಲ್ಲಿ ಹೆಣ್ಣು ಮಕ್ಕಳ ವಿಚಾರದಲಿ ಸುರಕ್ಷತೆ ಇಲ್ಲ. ಬೆಳಿಗ್ಗೆ ಟಿವಿ ನೋಡಿದರೆ ರೇಪ್, ಮರ್ಡರ್, ಲವ್ ಜಿಹಾದ್ ಹೆಚ್ಚುತ್ತಿವೆ. ದುಷ್ಕೃತ್ಯ ಮಾಡವವರ ಮೇಲೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಅವರಿಗೆ ಯಾವುದೇ ಭಯ ಇಲ್ಲ. ಅವರನ್ನು ರಕ್ಷಣೆ ಮಾಡಲು…

Read More

ಸೌಂದರ್ಯ ಎನ್ನುವುದು ಕೇವಲ ಹೊರಗಿನ ನೋಟಕ್ಕೆ ಮಾತ್ರ ಸೀಮಿತವಲ್ಲ. ಅದರಲ್ಲೂ ಹುಡುಗಿಯರು ಹುಡುಗರನ್ನು ಇಷ್ಟಪಡುವಾಗ ಕೇವಲ ಅವರ ಸ್ಟೈಲ್ ಅಥವಾ ಬಟ್ಟೆಬರೆಯನ್ನು ನೋಡುವುದಿಲ್ಲ. ಸಂಶೋಧನೆಗಳು ಮತ್ತು ಸಾಮಾಜಿಕ ಅಧ್ಯಯನಗಳ ಪ್ರಕಾರ, ಹುಡುಗಿಯರನ್ನು ತಕ್ಷಣವೇ ಆಕರ್ಷಿಸುವಂತಹ ಕೆಲವು ವಿಶೇಷ ವ್ಯಕ್ತಿತ್ವದ ಗುಣಗಳು ಹುಡುಗರಲ್ಲಿರುತ್ತವೆ. ಅವುಗಳಲ್ಲಿ ಅತಿ ಮುಖ್ಯವಾದ ‘ಆ ಒಂದು’ ಗುಣದ ಬಗ್ಗೆ ಈ ಲೇಖನದಲ್ಲಿದೆ ಮಾಹಿತಿ. 1. ಆತ್ಮವಿಶ್ವಾಸ (Confidence): ಅತಿ ದೊಡ್ಡ ಆಕರ್ಷಣೆ ಹಲವು ಸಮೀಕ್ಷೆಗಳ ಪ್ರಕಾರ, ಹುಡುಗಿಯರು ಅತಿ ಹೆಚ್ಚು ಇಷ್ಟಪಡುವ ಗುಣವೆಂದರೆ ಅದು ‘ಆತ್ಮವಿಶ್ವಾಸ’. ಒಬ್ಬ ಯುವಕ ತನ್ನ ಮಾತು, ನಡಿಗೆ ಮತ್ತು ನಿರ್ಧಾರಗಳಲ್ಲಿ ಎಷ್ಟು ಆತ್ಮವಿಶ್ವಾಸ ಹೊಂದಿರುತ್ತಾನೋ, ಅಷ್ಟು ವೇಗವಾಗಿ ಆತ ಇತರರ ಗಮನ ಸೆಳೆಯುತ್ತಾನೆ. ಅತಿಯಾದ ಅಹಂಕಾರವಲ್ಲದ, ಮೃದುವಾದ ಆದರೆ ದೃಢವಾದ ಆತ್ಮವಿಶ್ವಾಸವು ವ್ಯಕ್ತಿತ್ವಕ್ಕೆ ವಿಶೇಷ ಮೆರುಗು ನೀಡುತ್ತದೆ. 2. ಪ್ರಾಮಾಣಿಕತೆ ಮತ್ತು ಸತ್ಯಸಂಧತೆ (Honesty) ಸುಳ್ಳು ಹೇಳುವ ಅಥವಾ ಬಡಾಯಿ ಕೊಚ್ಚಿಕೊಳ್ಳುವ ಹುಡುಗರಿಗಿಂತ, ತಾವು ಹೇಗಿದ್ದೇವೋ ಹಾಗೆಯೇ ಇರುವ ಪ್ರಾಮಾಣಿಕ ಹುಡುಗರನ್ನು ಹುಡುಗಿಯರು…

Read More

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧದ ಕಾರ್ಮೋಡಗಳು ಜಾಗತಿಕ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ. ಇರಾನ್ ಮತ್ತು ಇಸ್ರೇಲ್ ನಡುವಿನ ನೇರ ಸಂಘರ್ಷದಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ (Crude Oil) ಬೆಲೆ ದಿಢೀರ್ ಏರಿಕೆ ಕಂಡಿದೆ. ಈ ಬೆಳವಣಿಗೆಯು ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಮೇಲೆ ಪರಿಣಾಮ ಬೀರಲಿದ್ದು, ಇಂಧನವನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವ ಅಗತ್ಯದ ಬಗ್ಗೆ ದೊಡ್ಡ ಪ್ರಶ್ನೆಯನ್ನು ಎತ್ತಿದೆ. 1. ಕಚ್ಚಾ ತೈಲ ಬೆಲೆಯ ಮೇಲೆ ಯುದ್ಧದ ಪ್ರಭಾವ ಇರಾನ್ ವಿಶ್ವದ ಪ್ರಮುಖ ತೈಲ ಉತ್ಪಾದಕ ರಾಷ್ಟ್ರಗಳಲ್ಲಿ ಒಂದಾಗಿದೆ. ಯುದ್ಧ ತೀವ್ರಗೊಂಡರೆ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಬಹುದು ಎಂಬ ಭೀತಿಯಿಂದ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ ಗಣನೀಯವಾಗಿ ಏರಿಕೆಯಾಗಿದೆ. ಭಾರತವು ತನ್ನ ತೈಲ ಅಗತ್ಯದ ಶೇ. 80ಕ್ಕೂ ಹೆಚ್ಚು ಭಾಗವನ್ನು ಆಮದು ಮಾಡಿಕೊಳ್ಳುವುದರಿಂದ, ಈ ಬೆಲೆ ಏರಿಕೆಯು ದೇಶದ ಹಣದುಬ್ಬರದ ಮೇಲೆ ನೇರ ಪರಿಣಾಮ ಬೀರಲಿದೆ. 2. ಜಿಎಸ್‌ಟಿ ವ್ಯಾಪ್ತಿಗೆ ಇಂಧನ: ತಜ್ಞರ ವಿಶ್ಲೇಷಣೆ…

Read More