Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದಲ್ಲಿ ಸಿಎಂ ಕುರ್ಚಿ ಕದನ ತೀವ್ರಗೊಂಡಿದೆ. ಈ ಹೊತ್ತಿನಲ್ಲೇ ಸಿಎಂ ಸಿದ್ಧರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅವರ ನುಡೆವ ನಡೆಯುತ್ತಿರುವ ಕುರ್ಚಿ ಕಿತ್ತಾಟ ಈಗ ಬೀದಿಗೆ ಬಿದ್ದಂತಿದೆ. ಇದಕ್ಕೆ ಸಾಕ್ಷಿ ಎನ್ನುವಂತೆ ಸಿಎಂ ಸಿದ್ಧರಾಮಯ್ಯ ಮಾಡಿರುವಂತ ಎಕ್ಸ್ ಪೋಸ್ಟ್ ಆಗಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ ಎಂದಂತ ಡಿ.ಕೆ ಶಿವಕುಮಾರ್ ಗೆ ನೇರಾನೇರ ಟಾಂಗ್ ನೀಡಿದ್ದಾರೆ. ಅದೇ ಒಂದು ಮಾತು ಜಗತ್ತಿಗೆ ಉತ್ತಮವಾಗದ ಹೊರತು ಅದು ಶಕ್ತಿಯಲ್ಲ ಎಂದು ಹೇಳಿದ್ದಾರೆ. ಇನ್ನೂ ಶಕ್ತಿ ಯೋಜನೆಯು ನಮ್ಮ ರಾಜ್ಯದ ಮಹಿಳೆಯರಿಗೆ 600 ಕೋಟಿಗೂ ಹೆಚ್ಚು ಉಚಿತ ಪ್ರವಾಸಗಳನ್ನು ತಲುಪಿಸಿದೆ ಎಂದು ಘೋಷಿಸಲು ಹೆಮ್ಮೆಪಡುತ್ತೇನೆ. ಸರ್ಕಾರವನ್ನು ರಚಿಸಿದ ಮೊದಲ ತಿಂಗಳಿನಿಂದಲೇ, ನಾವು ನಮ್ಮ ಭರವಸೆಗಳನ್ನು ಕಾರ್ಯರೂಪಕ್ಕೆ ತಂದಿದ್ದೇವೆ. ಅದು ಪದಗಳಲ್ಲಿ ಅಲ್ಲ. ಕಾರ್ಯರೂಪದಿಂದ ಆಗಿದೆ ಎಂಬುದಾಗಿ ಹೇಳಿದ್ದಾರೆ. ✅ ಶಕ್ತಿ – 600 ಕೋಟಿಗೂ ಹೆಚ್ಚು ಉಚಿತ ಪ್ರವಾಸಗಳು, ದುಡಿಯುವ…
ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ಆಯ್ತು, ಇದೀಗ ಸಿದ್ಧರಾಮಯ್ಯ ಅವರು ಕೊಟ್ಟ ಮಾತಿನ ಬಾಣ ಬಿಟ್ಟಿದ್ದಾರೆ. ಕೊಟ್ಟ ಮಾತಿನ ಬಗ್ಗೆ ಸಿಎಂ ಸಿದ್ಧರಾಮಯ್ಯ ಮಾರ್ಮಿಕ ಪೋಸ್ಟ್ ಮಾಡಿ, ಒಂದು ಮಾತು ಜಗತ್ತಿಗೆ ಉತ್ತಮವಾಗದ ಹೊರತು ಅದು ಶಕ್ತಿಯಲ್ಲ ಎಂಬುದಾಗಿ ಹೇಳಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಒಂದು ಮಾತು ಉತ್ತಮವಾಗದ ಹೊರತು ಅದು ಶಕ್ತಿಯಲ್ಲ. ಶಕ್ತಿ ಯೋಜನೆ, ಗೃಹಲಕ್ಷ್ಮೀ, ಯುವನಿಧಿ ಮತ್ತು ಅನ್ನಭಾಗ್ಯ ಗ್ಯಾರಂಟಿ ಯೋಜನೆಗಳನ್ನು ಉಲ್ಲೇಖಿಸಿದ್ದಾರೆ. ನಾವು ನಮ್ಮ ಭರವಸೆಗಳನ್ನ ಪದಗಳಲ್ಲಿ ಅಲ್ಲ ನಿಜ ರೂಪದಲ್ಲಿ ಕಾರ್ಯರೂಪಕ್ಕೆ ತಂದಿದ್ದೇವೆ. ಕರ್ನಾಟಕಕ್ಕೆ ನಮ್ಮ ಮಾತು ಒಂದು ಘೋಷಣೆಯಲ್ಲ. ಅದು ನಮಗೆ ಒಂದಿಡೀ ಜಗತ್ತು ಎಂಬುದನ್ನು ಅರ್ಥೈಸುತ್ತದೆ ಎಂದಿದ್ದಾರೆ. ನನ್ನ ಮೊದಲ ಅವಧಿಯಾಗಿದ್ದಂತ 2013ರಿಂದ 18ರಲ್ಲಿ 165 ಭರವಸೆಗಳಲ್ಲಿ 157ಕ್ಕೂ ಹೆಚ್ಚು ಈಡೇರಿಸಿದ್ದೇವೆ. ಈ ಅವಧಿಯಲ್ಲಿ 593 ಭರವಸೆಗಳಲ್ಲಿ 243ಕ್ಕೂ ಹೆಚ್ಚು ಈಡೇರಿಸಿದ್ದಾಗಿ ಹೇಳಿದ್ದಾರೆ. ✅ ಶಕ್ತಿ – 600 ಕೋಟಿಗೂ ಹೆಚ್ಚು ಉಚಿತ ಪ್ರವಾಸಗಳು, ದುಡಿಯುವ ಮಹಿಳೆಯರಿಗೆ ಘನತೆ…
ಬೆಂಗಳೂರು: ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಹಾಗೂ ಚೈನಾದಲ್ಲಿ ನಡೆದ ಕಿರಿಯರ ಏಷ್ಯನ್ ಬ್ಯಾಡ್ಮಿಂಟನ್ ಸಿಂಗಲ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ ಲಕ್ಷ್ಯ ರಾಜೇಶ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಅಭಿನಂಧಿಸಿ ಸನ್ಮಾನ ಮಾಡಿ ತಲಾ ಐದು ಲಕ್ಷ ರೂ ಪ್ರೋತ್ಸಾಹ ಧನ ಘೋಷಿಸಿದರು. ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಗೋಂವಿಂದರಾಜು ಅವರ ನೇತೃತ್ವದಲ್ಲಿ ತಮ್ಮನ್ನು ಭೇಟಿಯಾದ ಇಬ್ಬರೂ ಪಟುಗಳಿಗೆ ಶುಭಾಶಯ ಕೋರಿದ ಮುಖ್ಯಮಂತ್ರಿಗಳು ರಾಜ್ಯಕ್ಕೆ ಮತ್ತು ದೇಶಕ್ಕೆ ಉತ್ತಮ ಹೆಸರು ತರುವ ನಿಟ್ಟಿನಲ್ಲಿ ಇನ್ನಷ್ಟು ಸಾಧನೆ ಮಾಡುವಂತೆ ಹಾರೈಸಿದರು. ಇಬ್ಬರೂ ಪಟುಗಳಿಗೆ ತಲಾ ಐದು ಲಕ್ಷದ ಚೆಕ್ ವಿತರಿಸುವಂತೆ ಸರ್ಕಾರದ ಅಪರ ಮುಖ್ಯಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷರಾದ ಮನೋಜ್ ಕುಮಾರ್, ಸಂಚಾಲಕರಾದ ರವೀಂದ್ರ, ಕಾರ್ಯದರ್ಶಿ…
ಬೆಂಗಳೂರು: ಪಕ್ಷದ ಹೈಕಮಾಂಡ್ ನಿಂದ ನನಗೆ ಯಾವುದೇ ಕರೆ ಬಂದಿಲ್ಲ. ಮಾಧ್ಯಮಗಳಲ್ಲಿ ಹರಿದಾಡುತ್ತಿರುವಂತ ಸುದ್ದಿ ಸತ್ಯಕ್ಕೆ ದೂರವಾಗಿರುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸ್ಪಷ್ಟ ಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ದೆಹಲಿಗೆ ಯಾರನ್ನು ಕರೆದುಕೊಂಡು ಹೋಗುವುದಿಲ್ಲ. ಹೋಗುವವರು ಹೋಗಲಿ. ಪಕ್ಷದ ಹೈಕಮಾಂಡ್ ನಿಂದ ನನಗೆ ಯಾವುದೇ ಕರೆ ಬಂದಿಲ್ಲ ಎಂಬುದಾಗಿ ಹೇಳಿದರು. ಇದೇ ಸಂದರ್ಭದಲ್ಲಿ ನಿರ್ಮಲಾನಂದ ಶ್ರೀ ಹೇಳಿಕೆ ಬಗ್ಗೆ ಕೇಳಿದಾಗ ಡಿಸಿಎಂ ಡಿ.ಕೆ ಶಿವಕುಮಾರ್ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. https://kannadanewsnow.com/kannada/here-are-the-highlights-of-the-state-cabinet-meeting-held-today-under-the-leadership-of-cm-siddaramaiah-2/ https://kannadanewsnow.com/kannada/ban-on-supply-of-only-halal-meat-in-trains-nhrc-notice-to-railways-seeking-report/
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ನೀರಿನ ಬಾಕಿ, ಅಸಲು ಬಿಲ್ ಕಟ್ಟಿದಂತ ಬೆಂಗಳೂರು ನಗರದ ಜನರಿಗೆ ಬಡ್ಡಿ ಮನ್ನಾ ಮಾಡುವುದು ಸೇರಿದಂತೆ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಯಿತು. ಆ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಈ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಸಚಿವ ಹೆಚ್.ಕೆ ಪಾಟೀಲ್ ಅವರು, ಬೆಂಗಳೂರು ನಾಗರಿಕರಿಗೆ ಗುಡ್ ನ್ಯೂಸ್ ನೀಡಲಾಗಿದೆ. ನೀರಿನ ಬಿಲ್ ಪಾವತಿಸಿದರೆ ಬಡ್ಡಿ ಮನ್ನಾ ಮಾಡಲು ನಿರ್ಧರಿಸಲಾಗಿದೆ. ಬಾಕಿ, ಅಸಲು ಏಕ ಕಾಲದಲ್ಲಿ ಪಾವತಿಸಿದರೆ ಬಡ್ಡಿ ಮನ್ನಾ ಮಾಡುವಂತ ನಿರ್ಧಾರ ಕೈಗೊಂಡಿದೆ. ಏಕಕಾಲಿಕ ತೀರುವಳಿ ಯೋಜನೆಗೆ ಅನುಮೋದನೆಯನ್ನು ಸಂಪುಟ ನೀಡಿದೆ ಎಂದರು. ಇನ್ನೂ ಶರಾವತಿ ನದಿಗೆ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ 200 ಕೋಟಿ ಮೊತ್ತದ ಯೋಜನೆಗೆ ಒಪ್ಪಿಗೆ ನೀಡಲಾಗಿದೆ. ಮುಳ್ಕೋಡು ಗ್ರಾಮದ ಬಳಿ ನಿರ್ಮಾಣ ಮಾಡಲಾಗುತ್ತಿದೆ. ಮೈಸೂರು ಮಹಾನಗರ ಪಾಲಿಕೆ ಮೇಲ್ದರ್ಜೇಗೇರಿಕೆ ನಿರ್ಧರಿಸಿದೆ. ಗ್ರೇಡ್-1 ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೆ…
ನವದೆಹಲಿ: ದೆಹಲಿಯ ಕೆಂಪು ಕೋಟೆ ಬಳಿ ಇತ್ತೀಚೆಗೆ ನಡೆದ ಸ್ಫೋಟದಲ್ಲಿ ಮಹಾರಾಷ್ಟ್ರದ ಸಂಭಾಜಿನಗರದಲ್ಲಿ (ಹಿಂದೆ ಔರಂಗಾಬಾದ್) ವಾಸಿಸುತ್ತಿದ್ದ ಮಹಿಳೆಯೊಬ್ಬರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಐಎಎಸ್ ಅಧಿಕಾರಿ ಎಂಬ ನಕಲಿ ಗುರುತಿನೊಂದಿಗೆ ವಾಸಿಸುತ್ತಿದ್ದ ಮಹಿಳೆ ಪಾಕಿಸ್ತಾನ ಸೇನೆಯೊಂದಿಗೆ ಮತ್ತು ಅಫ್ಘಾನಿಸ್ತಾನದ ಜನರೊಂದಿಗೆ ಸಂಪರ್ಕ ಹೊಂದಿದ್ದಾಳೆ ಎಂದು ಸಂಭಾಜಿನಗರ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಆಕೆಯನ್ನು ಅವರು ತಂಗಿದ್ದ ಐಷಾರಾಮಿ ಹೋಟೆಲ್ನಿಂದ ಬಂಧಿಸಲಾಗಿದೆ. ಕಲ್ಪನಾ ಭಾಗವತ್ ಎಂದು ಕರೆದುಕೊಳ್ಳುವ ಮಹಿಳೆ ಬಾಂಬ್ ಸ್ಫೋಟಗಳು ನಡೆದ ಸಮಯದಲ್ಲಿ ದೆಹಲಿಯಲ್ಲಿದ್ದರು ಎಂದು ಪೊಲೀಸರು ಹೇಳಿಕೊಂಡಿದ್ದಾರೆ. ಇಂದು ಅವರ ಬಂಧನಕ್ಕಾಗಿ ನಡೆದ ವಿಚಾರಣೆಯ ಸಂದರ್ಭದಲ್ಲಿ, ಅವರು ಕಳೆದ ಆರು ತಿಂಗಳಿನಿಂದ ಹೋಟೆಲ್ನಲ್ಲಿ ತಂಗಿದ್ದರು ಆದರೆ ಸ್ಫೋಟಗಳ ಸಮಯದಲ್ಲಿ ದೆಹಲಿಯಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಅವರು ರಾಷ್ಟ್ರೀಯ ಭದ್ರತೆಗೆ ಬೆದರಿಕೆಯಾಗಿದ್ದಾರೆಯೇ ಎಂದು ನಿರ್ಧರಿಸುವತ್ತ ತನಿಖೆ ಕೇಂದ್ರೀಕರಿಸುತ್ತದೆ ಮತ್ತು ದೆಹಲಿ ಸ್ಫೋಟ ಪ್ರಕರಣಕ್ಕೆ ಅವರ ಸಂಭಾವ್ಯ ಸಂಪರ್ಕಗಳನ್ನು ಕೂಲಂಕಷವಾಗಿ ಪರಿಶೀಲಿಸಲಾಗುವುದು ಎಂದು ಪೊಲೀಸರು ಅವರ ಬಂಧನಕ್ಕೆ ಕೋರಿದ್ದಾರೆ. ಹೋಟೆಲ್ನಲ್ಲಿ ನಡೆದ ಶೋಧದ ಸಮಯದಲ್ಲಿ, ಆಕೆಯ…
ಬೆಂಗಳೂರು: ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ನುಡಿದಂತೆ ನಡೆದಿದ್ದಾರೆ. ವಾಯವ್ಯ ಸಾರಿಗೆ ಸಂಸ್ಥೆಯಲ್ಲಿ 1000 ಚಾಲನಾ ಹುದ್ದೆಗಳ ಭರ್ತಿಗೆ ಸಚಿವ ಸಂಪುಟದಿಂದ ಅನುಮೋದನೆಯನ್ನು ಪಡೆದಿದ್ದಾರೆ. ಈ ಮೂಲಕ ಮತ್ತೊಮ್ಮೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮಾನವೀಯ, ಬದ್ಧತೆಯ ಕಾರ್ಯ ಅನುಕರಣೀಯ ನಡೆ ಪ್ರಶಂಸಗೆ ಪಾತ್ರವಾಗಿದ್ದಾರೆ. ಕೋವಿಡ್ -19 ರ ಹಿನ್ನೆಲೆಯಲ್ಲಿ ಸರ್ಕಾರದ ಆದೇಶ ಸಂಖ್ಯೆ ಆಇ03 ಬಿಇಎಂ 2020, ದಿನಾಂಕ: 06.07.2020 ರನ್ವಯ ಎಲ್ಲಾ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವುದನ್ನು ತಡೆಹಿಡಿಯಲಾಗಿರುತ್ತದೆ. ತದನಂತರ ದಿನಾಂಕ: 1.03.2024 ರ ಆದೇಶದಲ್ಲಿ ಚಾಲನಾ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ಗೆ ಅನುಮೋದನೆ ನೀಡಲಾಗಿರುತ್ತದೆ. 2019 ರಲ್ಲಿ ಹೊರಡಿಸಲಾದ ಅಧಿಸೂಚನೆಯಲ್ಲಿ ಕೇವಲ ಚಾಲಕರ ಹುದ್ದೆಗೆ ಅಧಿಸೂಚನೆ ಹೊರಡಿಸಲಾಗಿತ್ತು. ವಾಯವ್ಯ ಸಾರಿಗೆ ಸಂಸ್ಥೆಯ ಮನವಿ ಮೇರೆಗೆ, ಸಂಸ್ಥೆಯಲ್ಲಿ ನಿರ್ವಾಹಕರ ಕೊರತೆ ಇರುವುದರಿಂದ ಹಾಗೂ ವಿದ್ಯುತ್ ಚಾಲಿತ ಬಸ್ಸುಗಳು ಮುಂದಿನ ದಿನಗಳಲ್ಲಿ ಸೇರ್ಪಡೆಯಾಗುವುದರಿಂದ ನಿರ್ವಾಹಕ ಹುದ್ದೆಗಳನ್ನು ಮಾತ್ರ ಭರ್ತಿ ಮಾಡುವ ಸಂಬಂಧ, ಈಗಾಗಲೇ ಹೊರಡಿಸಿರುವ ಅಧಿಸೂಚನೆಯಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮಾನ್ಸೂನ್ ಅವಧಿಯಲ್ಲಿ ಅತಿವೃಷ್ಟಿಯಿಂದ ಆದ ಬೆಳೆ ಹಾನಿ ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಿದೆ. ಒಂದೇ ದಿನ ರೈತರಿಗೆ ಹೆಚ್ಚುವರಿಯಾಗಿ ರೂ.1033.60 ಕೋಟಿ ಇನ್ಪುಟ್ ಸಬ್ಸಿಡಿಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ವಿತರಿಸಿದ್ದಾರೆ. ಇಂದು ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣಾದಲ್ಲಿ ಚಾಲನೆ ನೀಡಿದರು. ರೈತರ ಖಾತೆಗಳಿಗೆ ಇನ್ ಪುಟ್ ಸಬ್ಸಿಡಿ ನೀಡಿ ಬಳಿಕ ಮುಖ್ಯಮಂತ್ರಿಗಳು ಮಾಧ್ಯಮದವರೊಂದಿಗೆ ಮಾತನಾಡಿದ ಹೈಲೈಟ್ಸ್ ಮುಂದಿದೆ ಓದಿ. • ಪ್ರಸ್ತುತ ವರ್ಷದ ಮಾನ್ಸೂನ್ ಅವಧಿಯಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಸಬ್ಸಿಡಿಗಾಗಿ ರೂ.1033.60 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಾಗಿದ್ದು, ಇಂದು ಚಾಲನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. • ಬೆಳೆ ಹಾನಿ ಸಂಭವಿಸಿದ 14.24 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಒಟ್ಟು ರೂ. 1033.60 ಕೋಟಿ ಹೆಚ್ಚುವರಿ ಪರಿಹಾರ ಒದಗಿಸುವ ಕಾರ್ಯಕ್ಕೆ ಮುಖ್ಯಮಂತ್ರಿ ಅವರು ಬಟನ್ ಒತ್ತುವ ಮೂಲಕ ಚಾಲನೆ ನೀಡಿದರು. • ರಾಜ್ಯ ಸರ್ಕಾರ ರೈತರ ಪರವಾಗಿದ್ದು, ಬೆಳೆ ಹಾನಿಗೊಳಗಾದ ರೈತರಿಗೆ…
ಬೆಂಗಳೂರು: ಗಂಡ ಎಂಬ ಪದವು ಐಪಿಸಿ ಸೆಕ್ಷನ್ 498ಎ( ಮದುವೆಯಾದ ಮಹಿಳೆಯ ಮೇಲಿನ ಕ್ರೌರ್ಯ ಮತ್ತು ಹಿಂಸೆ) ಅಲ್ಲಿ ಬಳಸಿರುವುದು ಕೇವಲ ಕಾನೂನು ಬದ್ಧವಾಗಿ ವಿವಾಹವಾದ ಸಂಬಂಧಕ್ಕೆ ಮಾತ್ರ ಸೀಮಿತವಾಗೋದಿಲ್ಲ. ಅದು ಲಿವ್-ಇನ್-ರಿಲೇಷನ್ ಶಿಪ್ ಗಳಿಗೂ ಅನ್ವಯಿಸಲಿದೆ ಎಂಬುದಾಗಿ ಹೈಕೋರ್ಟ್ ಮಹತ್ವದ ಅಭಿಪ್ರಾಯ ಪಟ್ಟಿದೆ. ಈ ಕುರಿತಂತೆ ಅರ್ಜಿಯೊಂದರ ವಿಚಾರಣೆಯ ವೇಳೆಯಲ್ಲಿ ಈ ಅಂಶವನ್ನು ಹೈಕೋರ್ಟ್ ಉಲ್ಲೇಖಿಸಿದೆ. ಅದರಲ್ಲಿ ಐಪಿಸಿ ಸೆಕ್ಷನ್ 498ಎ ಅಡಿಯಲ್ಲಿ ಬಳಸಿರುವಂತ ಗಂಡ ಎಂಬ ಪದವು ಕೇವಲ ಕಾನೂನು ಬದ್ಧವಾಗಿ ಮಾನ್ಯವಾದಂತ ವಿವಾಹ ಸಂಬಂಧಕ್ಕೆ ಮಾತ್ರ ಸೀಮಿತವಲ್ಲ. ಬದಲಾಗಿ ಲಿವ್-ಇನ್ ರಿಲೇಷನ್ ಶಿಪ್ ಗಳಿಗೂ ಅನ್ವಯಿಸುತ್ತದೆ ಎಂಬುದಾಗಿ ತಿಳಿಸಿದೆ. ಇದಷ್ಟೇ ಅಲ್ಲದೇ ವಿವಾಹದ ಸ್ವರೂಪದ ಸಂಬಂಧಗಳಿಗೂ ಕ್ರೌರ್ಯದ ವಿಚಾರದಲ್ಲಿ ಐಪಿಸಿ ಸೆಕ್ಷನ್ 498ಎ ಅನ್ವಯವಾಗಲಿದೆ ಎಂಬುದಾಗಿ ಅಭಿಪ್ರಾಯ ಪಟ್ಟಂತ ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದ್ ರಾಜ್ ಅವರಿದ್ದಂತ ನ್ಯಾಯಪೀಠವು, ಅರ್ಜಿಯನ್ನು ವಜಾಗೊಳಿಸಿತು. ಹೈಕೋರ್ಟ್ ಗೆ ದೂರುದಾರೆಯೊಂದಿಗೆ ಅರ್ಜಿದಾರನ ವಿವಾಹ ಕಾನೂನಾತ್ಮಕವಾಗಿ ಅಮಾನ್ಯವಾಗಿದೆ. ಹೀಗಾಗಿ 498ಎ ಅನ್ವಯಿಸೋದಿಲ್ಲ ಎಂಬುದಾಗಿ…
ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಸುದ್ದಿ ಜೋರಾಗಿದೆ. ಒಂದೊಂದು ಗುಂಪು ಒಂದೊಂದು ರೀತಿಯಲ್ಲಿ ಪರ ವಿರೋಧದ ಮಾತುಗಳನ್ನಾಡುತ್ತಿದ್ದಾರೆ. ಇದರ ನಡುವೆ ಸಿದ್ಧರಾಮಯ್ಯ ಅವರು ಏಕೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುತ್ತಿಲ್ಲ ಎನ್ನುವ ಹಿಂದಿನ ಸಿಕ್ರೇಟ್ ಅನ್ನು ಸುಪ್ರೀಂ ಕೋರ್ಟ್ ವಕೀಲ ಸಂಕೇತ್ ಏಣಗಿ ರಿವೀಲ್ ಮಾಡಿದ್ದಾರೆ. ಅದೇನು ಅಂತ ಮುಂದೆ ಓದಿ. ಇಂದು ಈ ಕುರಿತಂತೆ ಸುಪ್ರೀಂ ಕೋರ್ಟ್ ವಕೀಲ ಸಂಕೇತ್ ಏಣಗಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಡಿಸಿಎಂ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದಲ್ಲಿ, ಹಲವಾರು ವರ್ಷಗಳಿಂದ ಅಧಿಕಾರ ಅನುಭವಿಸುತ್ತಿರುವ ಕೆಲ ಪ್ರಭಾವಿ ಮಂತ್ರಿಗಳು ಅಧಿಕಾರ ಕಳೆದುಕೊಳ್ಳಬಹುದೆಂಬ ಭೀತಿಯಲ್ಲಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ. ಹಾಗಾಗಿ, ಅವರಿಂದ ಪ್ರತ್ಯಕ್ಷ ಹಾಗೂ ಪರೋಕ್ಷ ವಿರೋಧ ವ್ಯಕ್ತವಾಗುವುದು ಸಹಜ ಮತ್ತು ನಿರೀಕ್ಷಿತ ಎಂಬುದಾಗಿ ತಿಳಿಸಿದ್ದಾರೆ. ಈ ಮೂಲಕ ಸಿಎಂ ಸಿದ್ಧರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿದರೇ, ಕೆಲ ಪ್ರಭಾವಿ ಮಂತ್ರಿಗಳು ಅಧಿಕಾರ ಕಳೆದುಕೊಳ್ಳುವಂತ ಗುಟ್ಟು ರಿವೀಲ್ ಮಾಡಿದ್ದಾರೆ. https://twitter.com/Sanket_Yenagi/status/1993908898877915447?t=h5-UXMQzmgQ374KY08GhuA&s=19 https://kannadanewsnow.com/kannada/there-are-no-allegations-against-our-father-no-power-sharing-formula-has-been-formed-dr-yathindra/ https://kannadanewsnow.com/kannada/ban-on-supply-of-only-halal-meat-in-trains-nhrc-notice-to-railways-seeking-report/…














