Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಜಿಲ್ಲೆಯಲ್ಲಿ ರಾಜ್ಯದಲ್ಲೇ ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ಮೊಬೈಲ್ ಅಂಗಡಿಗೆ ನುಗ್ಗಿ ಚಾಕುವಿನಿಂದ ಇರಿದಿರುವಂತ ಘಟನೆ ನಡೆದಿದೆ. ಶಿವಮೊಗ್ಗದ ಅಮೀರ್ ಅಹ್ಮದ್ ಸರ್ಕಲ್ ನಲ್ಲಿರುವಂತ ಅಂಗಡಿಗೆ ನುಗ್ಗಿ ಮಾಲೀಕ ಸೈಯದ್ ಬರ್ಕತ್(32) ಎಂಬಾತನಿಗೆ ಚಾಕುವಿನಿಂದ ಇರಿಯಲಾಗಿದೆ. ಹಳೆಯ ದ್ವೇಷದ ಹಿನ್ನಲೆಯಲ್ಲಿ ಸೈಯದ್ ಗೆ ಚಾಕುವಿನಿಂದ ಇರಿದಿರುವ ಶಂಕೆ ವ್ಯಕ್ತವಾಗಿದೆ. ಚಾಕು ಇರಿತಕ್ಕೆ ಒಳಗಾದಂತ ಸೈಯದ್ ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/strong-opposition-to-the-inclusion-of-gejjalagere-gram-panchayat-in-maddur-municipal-council-protests-from-various-organizations/ https://kannadanewsnow.com/kannada/big-news-rbis-big-shock-for-those-taking-loans-against-gold-from-now-on-60-loan-for-10-grams-of-gold/
ಮಂಡ್ಯ : ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮ ಪಂಚಾಯಿತಿಯನ್ನು ಮದ್ದೂರು ನಗರಸಭೆಗೆ ಸೇರ್ಪಡೆಗೊಳಿಸಿರುವುದನ್ನು ವಿರೋಧಿಸಿ ಸ್ಥಳೀಯ ಸಾರ್ವಜನಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಕೈಗೊಂಡು ಗ್ರಾಮ ಪಂಚಾಯಿತಿ ಕಚೇರಿ ಎದುರು ಸೋಮವಾರದಿಂದ ಪ್ರತಿಭಟನೆ ಕೈಗೊಂಡಿದ್ದಾರೆ. ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾ.ಪಂ. ಕಚೇರಿ ಬಳಿ ಆಗಮಿಸಿದ ನೂರಾರು ಸಂಖ್ಯೆಯ ನಿವಾಸಿಗಳು ಪಂಚಾಯಿತಿಯನ್ನು ನಗರಸಭೆಯನ್ನಾಗಿಸಲು ಸಹಿ ಹಾಕಿರುವ ಸ್ಥಳೀಯ ಚುನಾಯಿತ ಪ್ರತಿನಿಧಿಗಳ ವಿರುದ್ಧ ಮತ್ತು ಶಾಸಕರ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯಾದ್ಯಂತ ಇರುವ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬುಡಮೇಲು ಮಾಡಲು ಹೊರಟಿರುವ ಸರ್ಕಾರ ಹಾಗೂ ಶಾಸಕ ವಿರುದ್ಧ ಕಿಡಿಕಾರಿದ ಪ್ರತಿಭಟನಾಕಾರರು ಕೂಡಲೇ ಗೆಜ್ಜಲಗೆರೆ ಪಂಚಾಯಿತಿಯನ್ನು ನಗರಸಭೆಯಿಂದ ಕೈಬಿಡುವಂತೆ ತಪ್ಪಿದಲ್ಲಿ ನಿರಂತರ ಪ್ರತಿಭಟನೆಯನ್ನು ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ರೈತನಾಯಕಿ ಸುನಂದ ಜಯರಾಮ್ ಮಾತನಾಡಿ, ಬೆಂಗಳೂರಿನಿಂದ ಮೈಸೂರಿನವರೆಗೂ ಶಾಸಕರುಗಳು ನಗರೀಕರಣ ಮಾಡಲು ಕೈ ಜೋಡಿದಸಿದ್ದಾರೆಂದು ಆರೋಪಿಸಿದರಲ್ಲದೆ ಈಗಾಗಲೇ ನಗರಸಭೆಯಿಂದ ಕೈಬಿಡುವಂತೆ ಹಲವಾರು ಬಾರಿ ಮನವಿ ಮಾಡಿದ್ದರೂ ಯಾವುದೇ…
ಬೆಂಗಳೂರು: ಕಾಯಿಲೆ ವಾಸಿಗೆ ಪ್ರಿಸ್ಕ್ರಪ್ಪನ್ನಲ್ಲಿ (ಔಷಧ ಚೀಟಿ) ವೈದ್ಯರು ಬರೆಯುವ ಔಷಧವನ್ನೇ ಕಡ್ಡಾಯವಾಗಿ ರೋಗಿಗಳಿಗೆ ನೀಡುವುದು ಔಷಧ ಮಳಿಗೆಗಳ ಕರ್ತವ್ಯ. ಆದರೆ,ವೈದ್ಯರು ಬರೆದಿರುವ ಔಷಧ ಬದಲು ಇನ್ಯಾವುದೋ ಕೊಡುವ ಔಷಧವನ್ನು ಸೇವಿಸಿದರೆ ರೋಗಿಗಳ ದೇಹದಲ್ಲಿ ಅಡ್ಡ ಪರಿಣಾಮ ಅಥವಾ ಕೆಲವೊಮ್ಮೆ ಪ್ರಾಣಕ್ಕೂ ಅಪಾಯ ಇರುತ್ತದೆ. ಅದರಂತೆ, ರಾಜ್ಯದ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆಯಾದ ವಿಕ್ಟೋರಿಯಾ ಹಾಗೂ ನಿಮ್ಹಾನ್ಸ್ ಆವರಣದಲ್ಲಿರುವ ‘ಜನತಾ ಬಜಾರ್ ಔಷಧ ಮಳಿಗೆಗಳು, ಬದಲಿ ಔಷಧ ಕೊಟ್ಟು ಸಾವಿರಾರು ರೋಗಿಗಳ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿವೆ. ಸಹಕಾರ ಇಲಾಖೆಯ ಅಧೀನದ ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳ ನಿಯಮಿತ (ಕೆಎಸ್ಸಿಸಿಎಫ್) ದಿಂದ ಅನುಮತಿ ಪಡೆದು 40 ವರ್ಷದಿಂದ ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ ‘ಜನತಾ ಬಜಾರ್ ಔಷಧ ಮಳಿಗೆ’ ಕಾರ್ಯನಿರ್ವಹಿಸುತ್ತಿವೆ. ಜ್ವರದಿಂದ ಹಿಡಿದು ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ಬಡ ಮತ್ತು ಮಧ್ಯಮ ವರ್ಗದ ಸಾವಿರಾರು ರೋಗಿಗಳು ಪ್ರತಿನಿತ್ಯ ಮೇಲಿನ ಆಸ್ಪತ್ರೆಗೆ ಬರುತ್ತಾರೆ. ಇದರಲ್ಲಿ ಸಾಕಷ್ಟು ಅನಕ್ಷರಸ್ಥ ರೋಗಿಗಳು ಸಹ ಇರುತ್ತಾರೆ. ಚಿಕಿತ್ಸೆ ಪಡೆಯುವ ಸಲುವಾಗಿ…
ಮೈಸೂರು: ಕೆಂಗೇರಿ ಮತ್ತು ಹೆಜ್ಜಾಲ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಸಂಖ್ಯೆ 16ರಲ್ಲಿ ತಾತ್ಕಾಲಿಕ ಗರ್ಡರ್ ಅಳವಡಿಕೆ ಹಾಗೂ ತೆರವುಗೊಳಿಸುವ ಕಾಮಗಾರಿಗಾಗಿ ಲೈನ್ ಬ್ಲಾಕ್ ಮತ್ತು ಪವರ್ ಬ್ಲಾಕ್ ಇರುವುದರಿಂದ, ಈ ಕೆಳಗಿನ ರೈಲು ಸೇವೆಗಳನ್ನು ರದ್ದು ಮತ್ತು ಭಾಗಶಃ ರದ್ದುಗೊಳಿಸಲಾಗಿದೆ. ರದ್ದು: ಡಿಸೆಂಬರ್ 25, 2025 ಮತ್ತು ಜನವರಿ 8, 2026 ರಂದು ಅರಸೀಕೆರೆ–ಮೈಸೂರು ದೈನಂದಿನ ಪ್ಯಾಸೆಂಜರ್ (56265), ಮೈಸೂರು–ಎಸ್ಎಂವಿಟಿ ಬೆಂಗಳೂರು ಪ್ಯಾಸೆಂಜರ್ ಸ್ಪೆಷಲ್ (06269) ಹಾಗೂ ಎಸ್ಎಂವಿಟಿ ಬೆಂಗಳೂರು–ಮೈಸೂರು ಪ್ಯಾಸೆಂಜರ್ ಸ್ಪೆಷಲ್ (06270) ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗುತ್ತದೆ. ಡಿಸೆಂಬರ್ 26, 2025 ಮತ್ತು ಜನವರಿ 9, 2026 ರಂದು ಮೈಸೂರು–ಅರಸೀಕೆರೆ ಪ್ಯಾಸೆಂಜರ್ (56266) ಮತ್ತು ಕೆಎಸ್ಆರ್ ಬೆಂಗಳೂರು–ಚನ್ನಪಟ್ಟಣ ಮೆಮು (66535) ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗುತ್ತದೆ. ಭಾಗಶಃ ರದ್ದು: ಡಿಸೆಂಬರ್ 25, 2025 ಮತ್ತು ಜನವರಿ 8, 2026 ರಂದು ಹೊರಡುವ ಈ ಕೆಳಗಿನ ರೈಲುಗಳ ಪ್ರಯಾಣವನ್ನು ಭಾಗಶಃ ರದ್ದುಗೊಳಿಸಲಾಗುವುದು: ರೈಲು ಸಂಖ್ಯೆ 06526 ಅಶೋಕಪುರಂ-ಕೆಎಸ್ಆರ್ ಬೆಂಗಳೂರು ಮೆಮು ರೈಲು…
ನವದೆಹಲಿ: ಆಲ್ರೌಂಡರ್ ಕೃಷ್ಣಪ್ಪ ಗೌತಮ್ ಸೋಮವಾರ ವೃತ್ತಿಪರ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದರು. ಕರ್ನಾಟಕದ ಆಟಗಾರ ಸಾಮಾಜಿಕ ಮಾಧ್ಯಮದ ಮೂಲಕ ತಮ್ಮ ಅಭಿಮಾನಿಗಳೊಂದಿಗೆ ತಮ್ಮ ನಿರ್ಧಾರವನ್ನು ಹಂಚಿಕೊಂಡರು. 37 ವರ್ಷದ ಗೌತಮ್ 14 ವರ್ಷಗಳ ಸುದೀರ್ಘ ಮತ್ತು ಯಶಸ್ವಿ ವೃತ್ತಿಜೀವನವನ್ನು ಕೊನೆಗೊಳಿಸಿದರು. ಅಂತರರಾಷ್ಟ್ರೀಯ ಕ್ರಿಕೆಟ್ ಪಯಣ ಗೌತಮ್ ಜುಲೈ 2021 ರಲ್ಲಿ ಶ್ರೀಲಂಕಾ ವಿರುದ್ಧ ಅಂತಾರಾಷ್ಟ್ರೀಯ ಏಕದಿನ ಪಂದ್ಯಕ್ಕೆ ಪಾದಾರ್ಪಣೆ ಮಾಡಿದರು. ಭಾರತೀಯ ತಂಡದಲ್ಲಿ ಅವರಿಗೆ ಹೆಚ್ಚಿನ ಅವಕಾಶಗಳು ಸಿಗದಿದ್ದರೂ, ಅವರು ನಿರಂತರವಾಗಿ ದೇಶೀಯ ಕ್ರಿಕೆಟ್ನಲ್ಲಿ ಪ್ರಾಬಲ್ಯ ಸಾಧಿಸಿದರು. ಬಹು ಐಪಿಎಲ್ ತಂಡಗಳನ್ನು ಪ್ರತಿನಿಧಿಸಿದ್ದರು ಗೌತಮ್ ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ ರಾಯಲ್ಸ್, ಪಂಜಾಬ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಪರ ಆಡಿದ್ದರು. 2018 ರಲ್ಲಿ ರಾಜಸ್ಥಾನ ರಾಯಲ್ಸ್ ಪರ ಕೆಲವು ಪ್ರಭಾವಶಾಲಿ ಇನ್ನಿಂಗ್ಸ್ ಗಳನ್ನು ಆಡಿದರು. ಆಲ್ರೌಂಡ್ ದಾಖಲೆ ಹೀಗಿದೆ ಕರ್ನಾಟಕ ಪ್ರೀಮಿಯರ್ ಲೀಗ್ನಲ್ಲಿ, ಗೌತಮ್ ಕ್ರಿಕೆಟ್ ಇತಿಹಾಸದಲ್ಲಿ ಅತ್ಯುತ್ತಮ ಆಲ್ರೌಂಡ್ ಪ್ರದರ್ಶನಗಳಲ್ಲಿ ಒಂದಾಗಿದ್ದು, ಒಂದೇ ಪಂದ್ಯದಲ್ಲಿ 134 ರನ್…
ಬೆಂಗಳೂರು : “ಹುಟ್ಟಿದ ಸೂರ್ಯ ಮುಳುಗಲೇ ಬೇಕು. ಮಹಾತ್ಮ ಗಾಂಧಿ ಅವರ ಹೆಸರನ್ನು ತೆಗೆಯುವುದರ ಮೂಲಕ ಕೇಂದ್ರ ಬಿಜೆಪಿ ಸರ್ಕಾರದ ಕೊನೆಯ ದಿನಗಳು ಪ್ರಾರಂಭವಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದರು. “ಆರ್ಟಿಕಲ್ 21 ರ ಮೂಲಕ ಸಾಂವಿಧಾನಿಕವಾಗಿ ಕಾಂಗ್ರೆಸ್ ಪಕ್ಷ ನೀಡಿದ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಕಾರ್ಯಕ್ರಮವನ್ನು ಬಿಜೆಪಿ ಮುಟ್ಟುವ ಧೈರ್ಯ ಮಾಡುತ್ತದೆ ಎಂದುಕೊಂಡಿರಲಿಲ್ಲ. ಆದರೆ ಈಗ ಮನರೇಗಾ ಹೆಸರನ್ನು ಬದಲಾವಣೆ ಮಾಡಲು ಹೊರಟಿರುವುದು ನೋಡಿದರೆ ಬಿಜೆಪಿಯ ಅಂತ್ಯ ಪ್ರಾರಂಭವಾಗಿದೆ ಎಂದು ನನಗೆ ಅನಿಸುತ್ತಿದೆ” ಎಂದರು. “ಬಡವರಿಗೆ ಕೊಟ್ಟ ಕಾರ್ಯಕ್ರಮದ ಕುತ್ತಿಗೆ ಹಿಸುಕುವ ಕೆಲಸ ಮಾಡಲಾಗುತ್ತಿದೆ. ದೇಶದ ಬಡಜನತೆಗೆ ಎಸಗುತ್ತಿರುವ ದ್ರೋಹವಿದು. ಇದಕ್ಕಿಂತ ದೊಡ್ಡ ಅವಮಾನವಿಲ್ಲ” ಎಂದು ಕಿಡಿಕಾರಿದರು. “ಮುಂಬರುವ 27 ರಂದು ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಮಾಡಲಾಗುತ್ತದೆ. ಹೆಸರು ಬದಲಾವಣೆ ಹಿಂಪಡೆಯುವ ತನಕ ಪಂಚಾಯಿತಿಯಿಂದ ಪಾರ್ಲಿಮೆಂಟ್ ತನಕ ಹೋರಾಟ ರೂಪಿಸಲಾಗುವುದು” ಎಂದರು.…
ನವದೆಹಲಿ: ಭಾರತದ ಮಾಜಿ ಆಲ್ರೌಂಡರ್ ಕೃಷ್ಣಪ್ಪ ಗೌತಮ್ ತಮ್ಮ ವೃತ್ತಿಪರ ಕ್ರಿಕೆಟ್ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದ್ದು, ಸೋಮವಾರ ಎಲ್ಲಾ ಸ್ವರೂಪಗಳಿಂದ ನಿವೃತ್ತಿ ಘೋಷಿಸಿದ್ದಾರೆ. 37 ವರ್ಷದ ಅವರು ಕೆಎಸ್ಸಿಎ ಮೀಡಿಯಾ ಲೌಂಜ್ನಲ್ಲಿ ನಡೆದ ವಿಶೇಷ ಪತ್ರಿಕಾಗೋಷ್ಠಿಯಲ್ಲಿ ಈ ಸುದ್ದಿಯನ್ನು ಹಂಚಿಕೊಂಡರು. ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ವೆಂಕಟೇಶ್ ಪ್ರಸಾದ್, ಉಪಾಧ್ಯಕ್ಷ ಸುಜಿತ್ ಸೋಮಸುಂದರ್ ಮತ್ತು ಕಾರ್ಯದರ್ಶಿ ಸಂತೋಷ್ ಮೆನನ್ ಹಾಜರಿದ್ದರು. ಗೌತಮ್ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕಾಗಿ ಒಮ್ಮೆ ಮಾತ್ರ ಕಾಣಿಸಿಕೊಂಡರು, ಜುಲೈ 23, 2021 ರಂದು ಶ್ರೀಲಂಕಾ ವಿರುದ್ಧದ ಏಕೈಕ ಏಕದಿನ ಪಂದ್ಯವನ್ನು ಆಡಿದರು. ಅವರ ಏಕೈಕ ಅಂತರರಾಷ್ಟ್ರೀಯ ವಿಕೆಟ್ ಆ ಪಂದ್ಯದಲ್ಲಿ ಬಂದಿತು, ಅವರು ವಿಕೆಟ್ ಕೀಪರ್ ಮಿನೋಡ್ ಭಾನುಕ ಅವರನ್ನು ಔಟ್ ಮಾಡಿದಾಗ. ಐಪಿಎಲ್ 2021 ರ ಹರಾಜಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 9.25 ಕೋಟಿ ರೂಪಾಯಿಗಳಿಗೆ ಖರೀದಿ ಮಾಡಿದ ನಂತರ, ಅವರು ಅತ್ಯಂತ ದುಬಾರಿ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದಾಗ ಅವರು ಇಂಡಿಯನ್…
ಬೆಂಗಳೂರು: “ಬೆಂಗಳೂರಿನಲ್ಲಿ ಮೆಟ್ರೋ ಮಾರ್ಗ ಹೆಚ್ಚಳ ಮಾಡಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ನಮ್ಮ ಸರ್ಕಾರ ಮುಂದಾಗಿದೆ. 2027ರ ಡಿಸೆಂಬರ್ ವೇಳೆಗೆ ಬೆಂಗಳೂರು ನಗರದಲ್ಲಿ 175 ಕಿ.ಮೀ ಉದ್ದದಷ್ಟು ಮೆಟ್ರೋ ಮಾರ್ಗ ಕಾರ್ಯಾರಂಭವಾಗಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬಿಎಂಆರ್ ಸಿಎಲ್ ಕಚೇರಿಯಲ್ಲಿ ಮೆಟ್ರೋ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು. “ಪ್ರಸ್ತುತ 96 ಕಿ.ಮೀ ಉದ್ದದ ಮೆಟ್ರೋ ಮಾರ್ಗ ಕಾರ್ಯನಿರ್ವಹಿಸುತ್ತಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಳದಿ ಮಾರ್ಗ ಚಾಲನೆ ಮಾಡಲಾಗಿದ್ದು, 24 ಕಿ.ಮೀ ಉದ್ದದ ಮೆಟ್ರೋ ಸಂಚಾರ ಆರಂಭ ಮಾಡಲಾಗಿದೆ. 1 ಲಕ್ಷ ಜನ ಈ ಮಾರ್ಗದಲ್ಲಿ ಸಂಚಾರ ಮಾಡುತ್ತಿದ್ದು, ಈ ಮಾರ್ಗದಲ್ಲಿ 30% ದಟ್ಟಣೆ ಕಡಿಮೆಯಾಗಿದೆ ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ” ಎಂದು ತಿಳಿಸಿದರು. “ಮುಂದಿನ ವರ್ಷ (2026ರಲ್ಲಿ) 41 ಕಿ.ಮೀ ಉದ್ದದ ಮಾರ್ಗ ಕಾರ್ಯಾರಂಭ ಮಾಡಲಾಗುವುದು. 2027ರ ಡಿಸೆಂಬರ್ ವೇಳೆಗೆ…
ಚಿತ್ರದುರ್ಗ: ರಾಜ್ಯದಲ್ಲಿ ಗ್ರಾಮೀಣ ಭಾಗದ ಜನರಿಗೂ ಗುಣಮಟ್ಟದ ಚಿಕಿತ್ಸೆ ಸಿಗುವಂತ ಕೆಲಸವನ್ನು ಸರ್ಕಾರ ಮಾಡುತ್ತಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಇಂದು ಚಿತ್ರದುರ್ಗ ಜಿಲ್ಲೆಯ ಚಿಕ್ಕಜಾಜೂರಿನಲ್ಲಿ ಸಮುದಾಯ ಆರೋಗ್ಯ ಕೇಂದ್ರ ಮತ್ತು ಸಿಬ್ಬಂದಿ ವಸತಿ ಗೃಹ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಸುಸಜ್ಜಿತ ಕಟ್ಟಡ ನಿರ್ಮಿಸಿ 30 ಹಾಸಿಗೆ ಸಾಮರ್ಥ್ಯದ, ಅಧುನಿಕ ಸೌಲಭ್ಯ ಹೊಂದಿರುವ ಆಸ್ಪತ್ರೆ ಉದ್ಘಾಟನೆಗೊಂಡಿದೆ. ಈ ಭಾಗದ ಜನರು ಇದರ ಉಪಯೋಗ ಪಡೆದು ಕೊಳ್ಳಬೇಕು. ಗ್ರಾಮೀಣ ಪ್ರದೇಶದಲ್ಲಿ ಗುಣಮಟ್ಟದ ಅರೋಗ್ಯ ಸೌಲಭ್ಯಗಳು ಸರಿಯಾಗಿ ಸಿಗಬೇಕು. ಸರಿಯಾದ ರೀತಿಯಲ್ಲಿ ತಪಾಸಣೆ, ಅಗತ್ಯ ಇರುವವರಿಗೆ ಸರಿಯಾದ ಚಿಕಿತ್ಸೆ ನೀಡುವುದು ಇಂದಿನ ಅಗತ್ಯವಾಗಿದೆ. ಅದನ್ನೂ ಆರೋಗ್ಯ ಇಲಾಖೆ ವಿವಿಧ ಯೋಜನೆಗಳ ಮೂಲಕ ಮಾಡುತ್ತಿದೆ. ಸ್ವಾತಂತ್ರ್ಯ ಬಂದಾಗ ನಮ್ಮ ದೇಶದ ಜನರ ಸರಾಸರಿ ಆಯುಷ್ಯ 32-33 ವರ್ಷ ಇತ್ತು. ಈಗ ಅದು 70 ವರ್ಷಕ್ಕೆ ಏರಿಕೆಯಾಗಿದೆ. ಇದರಿಂದ ಆರೋಗ್ಯ ಕ್ಷೇತ್ರ ತನ್ನ ವ್ಯಾಪ್ತಿ,ಯೋಜನೆಗಳನ್ನು ವಿಸ್ತರಸಿಕೊಳ್ಳಬೇಕಾಗುತ್ತದೆ ಎಂದರು. ಸರ್ಕಾರಿ ಆಸ್ಪತ್ರೆಗಳಲ್ಲಿಯೂ…
ಶಿವಮೊಗ್ಗ: ಡಿ.25ರಿಂದ 27ರವರೆಗೆ ಅಯ್ಯಪ್ಪಸ್ವಾಮಿ ದೀಪೋತ್ಸವ ಕಾರ್ಯಕ್ರಮ ನಡೆಯಲಿದೆ. ಸಾಗರದ ಅಯ್ಯಪ್ಪಸ್ವಾಮಿ ದೀಪೋತ್ಸವ ಅಂಗವಾಗಿ ಮೊದಲ ಬಾರಿಗೆ ಡಿ. 25 ರಿಂದ ಲಕ್ಷ ದೀಪೋತ್ಸವ ಕಾರ್ಯಕ್ರಮ ನಡೆಯಲಿದೆ. ಅಯ್ಯಪ್ಪಸ್ವಾಮಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಆರ್. ಚಂದ್ರು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಡಿ. 25ರಂದು ಬೆಳಿಗ್ಗೆ 8 ಗಂಟೆಗೆ ಪಿ.ಆರ್.ರವೀಂದ್ರನ್ ಅವರು ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಲಿದ್ದಾರೆ ಎಂದರು. ಸoಜೆ 5.30ಕ್ಕೆ ಮಾಲೆಧರಿಸಿದ ಸ್ವಾಮಿಗಳಿಂದ ಅಯ್ಯಪ್ಪಸ್ವಾಮಿ ದೇವಸ್ಥಾನದಿಂದ ನಡೆಯುವ ರಾಜಬೀದಿ ಮೆರವಣಿಗೆಗೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಚಾಲನೆ ನೀಡಲಿದ್ದು, ರಾಜು ಗುರುಸ್ವಾಮಿ ನೇತೃತ್ವ ವಹಿಸಲಿದ್ದಾರೆ. ಸಂಜೆ 6ಕ್ಕೆ ಮುರುಘಾಮಠದ ಡಾ. ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಸ್ವಾಮಿಗಳು ಲಕ್ಷ ದೀಪೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಮಹಾಗಣಪತಿ ದೇವಸ್ಥಾನ ಸಮಿತಿ ಅಧ್ಯಕ್ಷ ಟಿ.ವಿ.ಪಾಂಡುರoಗ ಉಪಸ್ಥಿತರಿರುವರು ಎಂದು ಹೇಳಿದರು. ಡಿ.26ರಂದು ಸಂಜೆ ೫ಕ್ಕೆ ಅಯ್ಯಪ್ಪಸ್ವಾಮಿ ದೇವಾಲಯ ನವ ನಿರ್ಮಾಣ ಕಾರ್ಯಯೋಜನೆ ಉದ್ಘಾಟನೆ ನಡೆಯಲಿದ್ದು…














