Subscribe to Updates
Get the latest creative news from FooBar about art, design and business.
Author: kannadanewsnow09
ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಫಾಲ್ಟಾ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮಗಳು ನಡೆದ ಹಿನ್ನೆಲೆಯಲ್ಲಿ, ಕೇಂದ್ರ ಚುನಾವಣಾ ಆಯೋಗವು ಕ್ಷೇತ್ರದ ಎಲ್ಲಾ 285 ಮತಗಟ್ಟೆಗಳಲ್ಲಿ ಮೇ 21ರಂದು ಮರು ಮತದಾನ ನಡೆಸುವಂತೆ ಶನಿವಾರ ಆದೇಶಿಸಿದೆ. ಏನಿದು ಪ್ರಕರಣ? ಏಪ್ರಿಲ್ 29ರಂದು ನಡೆದ ಎರಡನೇ ಹಂತದ ಮತದಾನದ ವೇಳೆ ಗಂಭೀರ ಸ್ವರೂಪದ ಚುನಾವಣಾ ಅಪರಾಧಗಳು ಮತ್ತು ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಬುಡಮೇಲು ಮಾಡುವಂತಹ ಕೃತ್ಯಗಳು ನಡೆದಿರುವ ದೂರುಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಆಯೋಗವು ಅಂದಿನ ಮತದಾನವನ್ನು ‘ಅನೂರ್ಜಿತ’ ಎಂದು ಘೋಷಿಸಿದೆ. ಆಯೋಗದ ಪ್ರಮುಖ ನಿರ್ಧಾರಗಳು: ಮರು ಮತದಾನದ ಸಮಯ: ಮೇ 21ರಂದು ಬೆಳಿಗ್ಗೆ 7ರಿಂದ ಸಂಜೆ 6ರವರೆಗೆ ಎಲ್ಲಾ ಮತಗಟ್ಟೆಗಳಲ್ಲಿ ಹಾಗೂ ಸಹಾಯಕ ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. ವರದಿಗಳ ಆಧಾರ: ಮುಖ್ಯ ಚುನಾವಣಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ ಮತ್ತು ಚುನಾವಣಾ ವೀಕ್ಷಕರು ನೀಡಿದ ವರದಿಗಳನ್ನು ಪರಿಶೀಲಿಸಿದ ನಂತರ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಗಂಭೀರ ಆರೋಪ: ಮತದಾರರಿಗೆ ಬೆದರಿಕೆ ಹಾಕುವುದು, ಮತಗಟ್ಟೆಗಳೊಳಗೆ ಅನಧಿಕೃತ…
ಶಿವಮೊಗ್ಗ: ಸಾಗರ ಪೊಲೀಸ್ ಉಪವಿಭಾಗದಲ್ಲಿ ಸಂಚಾರ ನಿಯಮಗಳ ಜಾರಿಯನ್ನು ಹೆಚ್ಚಿಸಲು ಕಳೆದ 2 ತಿಂಗಳಿಂದ ಐಟಿಎಂಎಸ್ (ITMS) ತಂತ್ರಜ್ಞಾನದ ಪರಿಚಯಿಸಲಾಗಿದೆ. ಆದರೇ ನೋ ಪಾರ್ಕಿಂಗ್ ಪ್ರದೇಶದಲ್ಲಿದ್ದಂತ ಕಾರಿಗೆ ದಂಡ ವಿಧಿಸೋ ನಿಟ್ಟಿನಲ್ಲಿ ಮಾಡಿದಂತ ಎಡವಟ್ಟಿನಿಂದಾಗಿ ಕಾರಿನಲ್ಲಿ ತೆರಳೋರಿಗೆ ಹೆಲ್ಮೆಟ್ ದಂಡದ ವಿವಾದ ಸೃಷ್ಠಿಯಾಗಿದೆ ಎಂಬುದಾಗಿ ಎಎಸ್ಪಿ ಡಾ. ಬೆನಕ ಪ್ರಸಾದ್ ಅವರು ಮಹತ್ವದ ಸ್ಪಷ್ಟಪಡಿಸಿದ್ದಾರೆ. ಇಂದು ಅವರು ಸಾಗರ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಚಲನ್ ದೋಷದ ಘಟನೆಯ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಘಟನೆಯ ವಿವರ ದಿನಾಂಕ 01/05/2026 ರಂದು ಸಾಗರ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರಿನ (4 ಚಕ್ರದ ವಾಹನ) ಮಾಲೀಕರೊಬ್ಬರಿಗೆ ಹೆಲ್ಮೆಟ್ ಧರಿಸದಿದ್ದಕ್ಕಾಗಿ ದಂಡ ವಿಧಿಸಲಾಗಿತ್ತು. ವಾಸ್ತವವಾಗಿ ಇದು ನೋ-ಪಾರ್ಕಿಂಗ್ (ನಿಲುಗಡೆ ನಿಷೇಧಿತ) ವಲಯದಲ್ಲಿ ವಾಹನವನ್ನು ನಿಲ್ಲಿಸಿದ್ದ ಪ್ರಕರಣವಾಗಿತ್ತು. ಐಟಿಎಂಎಸ್ ತಂತ್ರಾಂಶದಲ್ಲಿ ವಾಹನ ಮಾಲೀಕರು ಮಾಡಿದ ಉಲ್ಲಂಘನೆಯ ಬಗೆಯನ್ನು ನಮೂದಿಸುವಾಗ ಸಿಬ್ಬಂದಿಯೊಬ್ಬರು ಮಾಡಿದ ಸಣ್ಣ ಕೈತಪ್ಪಿನಿಂದಾಗಿ ಈ ಪ್ರಮಾದ ಸಂಭವಿಸಿದೆ. ಚಲನ್…
ನವದೆಹಲಿ: ರಾಷ್ಟ್ರ ರಾಜಧಾನಿಯ ವಿವೇಕ್ ವಿಹಾರ್ ಪ್ರದೇಶದ ನಾಲ್ಕು ಅಂತಸ್ತಿನ ವಸತಿ ಸಂಕೀರ್ಣವೊಂದರಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಒಂದು ಮಗು ಸೇರಿದಂತೆ ಒಂಬತ್ತು ಜನರು ಸಜೀವ ದಹನವಾಗಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಎಸಿ (Air Conditioner) ಸ್ಫೋಟಗೊಂಡಿದ್ದೇ ಈ ಭೀಕರ ದುರಂತಕ್ಕೆ ಕಾರಣ ಎನ್ನಲಾಗಿದೆ. ಘಟನೆಯ ವಿವರ: ಭಾನುವಾರ ಮುಂಜಾನೆ ಸುಮಾರು 3:47 ರ ಹೊತ್ತಿಗೆ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಗಾಢ ನಿದ್ರೆಯಲ್ಲಿದ್ದ ನಿವಾಸಿಗಳು ಹೊರಬರಲಾಗದೆ ಕಟ್ಟಡದೊಳಗೆ ಸಿಲುಕಿಕೊಂಡಿದ್ದರು. ಘಟನಾ ಸ್ಥಳಕ್ಕೆ ತಕ್ಷಣವೇ 12 ಅಗ್ನಿಶಾಮಕ ವಾಹನಗಳು ಧಾವಿಸಿ ಸತತ ಕಾರ್ಯಾಚರಣೆ ನಡೆಸಿದವು. ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕಟ್ಟಡದಲ್ಲಿದ್ದ 10 ರಿಂದ 15 ಜನರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೃತಪಟ್ಟವರ ವಿವರ: ಬೆಂಕಿಯ ಕೆನ್ನಾಲಿಗೆಗೆ ಒಟ್ಟು ನಾಲ್ವರು ಪುರುಷರು, ನಾಲ್ವರು ಮಹಿಳೆಯರು ಹಾಗೂ ಒಂದು ವರ್ಷದ ಮಗು ಬಲಿಯಾಗಿದೆ. ಕಟ್ಟಡದ ವಿವಿಧ ಅಂತಸ್ತುಗಳಲ್ಲಿ ಮೃತದೇಹಗಳು ಪತ್ತೆಯಾಗಿವೆ: ಮೊದಲ ಅಂತಸ್ತು: ನವೀನ್ ಎಂಬುವವರ ಪತ್ನಿ ಶಿಖಾ ಜೈನ್…
ಹರಿಯಾಣ: ಇಲ್ಲಿನ ಗುರುಗ್ರಾಮದಲ್ಲಿ ಮನಕಲಕುವ ಘಟನೆಯೊಂದು ನಡೆದಿದ್ದು, ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ನಾಲ್ವರು ಮಕ್ಕಳನ್ನು ಬರ್ಬರವಾಗಿ ಕೊಲೆ ಮಾಡಿ, ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಯ ವಿವರ: ಗುರುಗ್ರಾಮದ ಉಪ್ಪಲ್ ಸೌತ್ ಎಂಡ್ (Uppal South End) ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಆರೋಪಿಯು ತನ್ನ ಪತ್ನಿ ಮತ್ತು ನಾಲ್ವರು ಮಕ್ಕಳನ್ನು ಹತ್ಯೆ ಮಾಡಿದ ನಂತರ ತಾನೂ ಪ್ರಾಣ ಕಳೆದುಕೊಳ್ಳಲು ಯತ್ನಿಸಿದ್ದಾನೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಪ್ರಮುಖ ಅಂಶಗಳು: ಬಲಿಪಶುಗಳು: ಆರೋಪಿಯ ಪತ್ನಿ ಹಾಗೂ ಆತನ ನಾಲ್ವರು ಮಕ್ಕಳು ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಆರೋಪಿಯ ಸ್ಥಿತಿ: ಕುಟುಂಬವನ್ನು ಹತ್ಯೆ ಮಾಡಿದ ಬಳಿಕ ಆರೋಪಿಯು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಪ್ರಸ್ತುತ ಆತನನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸ್ ತನಿಖೆ: ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ವಿಧಿವಿಜ್ಞಾನ ತಂಡ (Forensic Team) ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದೆ. ಕಾರಣ ಇನ್ನೂ ನಿಗೂಢ: ಇಷ್ಟು ದೊಡ್ಡ ಮಟ್ಟದ…
ನಾಯಕನಹಟ್ಟಿ: ಬಡ್ಡಿ ಹಾಗೂ ಜೀವನದ ಭದ್ರತೆಗೆ ಹಣವನ್ನು ಬ್ಯಾಂಕ್ನಲ್ಲಿ ಇರಿಸಿದಂತೆ ಎಐ ಯುಗದಲ್ಲಿ ಶಿಕ್ಷಣ ಮತ್ತು ಜ್ಞಾನವನ್ನು ಠೇವಣಿಯನ್ನಾಗಿಸಬೇಕಿದೆ ಎಂದು ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಮುಖ್ಯಕಾರ್ಯನಿರ್ವಹಣಾಧಿಕಾರಿ ಎಚ್.ಎಸ್.ರಾಘವೇಂದ್ರ ತಿಳಿಸಿದರು. ಪಟ್ಟಣದ ವಿದ್ಯಾವಿಕಾಸ ಪ್ರೌಢಶಾಲೆಯಲ್ಲಿ ಶನಿವಾರ ಏರ್ಪಡಿಸಿದ್ದ ಎಐ ಯುಗದಲ್ಲಿ ಎಸ್ಸೆಸ್ಸೆಲ್ಸಿ ನಂತರ ಮುಂದೇನು ? ಶೈಕ್ಷಣಿಕ ಮಾರ್ಗದರ್ಶಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣದಿಂದ ಬರುವ ಜ್ಞಾನ ಎಂಬ ಬಡ್ಡಿಯನ್ನು ಲೆಕ್ಕ ಹಾಕಲು ಸಾಧ್ಯವಿಲ್ಲ. ಹಣವಿದ್ದರೆ ಕಳೆಯುವ ಚಿಂತೆ ಇರುತ್ತದೆ. ಆದರೆ ಜ್ಞಾನವನ್ನು ಕದಿಯಲು, ಕಳೆಯಲು ಸಾಧ್ಯವಿಲ್ಲ ಎಂದರು. ಕೇವಲ ಬಿಎ, ಬಿಎಸ್ಸಿಗಳಿಂದ ಇದೀಗ ಜೀವನ ಸಾಧ್ಯವಿಲ್ಲ. ಉತ್ತಮ ಜೀವನಕ್ಕಾಗಿ ಕೌಶಲ್ಯ ಮತ್ತು ಜ್ಞಾನ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತವೆ. ಕೇಂದ್ರ ಸರಕಾರದ ಕೌಶಲ್ಯ ತರಬೇತಿ ಸಂಸ್ಥೆಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಜಿಟಿಟಿಸಿ ನಂತರ ಇಂಜಿನಿಯರಿಂಗ್ ಗೆ ಅವಕಾಶಗಳಿವೆ ಎಂದು ಹೇಳಿದರು. ಎಸ್ಎಸ್ಎಲ್ಸಿ ಪೂರ್ಣಗೊಂಡ ಈ ಕ್ಷಣ, ಮಕ್ಕಳಿಗಷ್ಟೇ ಅಲ್ಲ ತಂದೆ ತಾಯಿಗಳಿಗೆ ಕೂಡ ಮಹತ್ವದ ಹಂತ. ಇವರೆಗೂ ನೀವು ನಿಮ್ಮ…
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಅಕ್ರಮದ ಆರೋಪ ಕೇಳಿ ಬಂದಿತ್ತು. ಇದನ್ನು ಪ್ರಶ್ನಿಸಿ ಸಾವಿರಾರು ಶಿಕ್ಷಕರು ನ್ಯಾಯಾಲಯದ ಮೊರೆ ಹೋಗಿದ್ದರು. ಈ ವಾದವನ್ನು ಆಲಿಸಿದಂತ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ತಡೆಯಾಜ್ಞೆ ನೀಡಿದೆ. ಹಾಗೂ ಮೇ.1ರಂದು ತಾಲ್ಲೂಕು ಮಟ್ಟದ ಪದಾಧಿಕಾರಿಗಳ ಆಯ್ಕೆಗೆ ನಡೆದಂತ ಚುನಾವಣೆಯನ್ನು ಅಸಿಂಧುಗೊಳಿಸಿದೆ. ಅರ್ಜಿದಾರ ದಿನಕರ್ ಶೆಟ್ಟಿ ಹೇಳಿದ್ದೇನು? ಈ ಕುರಿತಂತೆ ಕನ್ನಡ ನ್ಯೂಸ್ ನೌ ಜೊತೆಗೆ ಮಾತನಾಡಿ ಮಾಹಿತಿ ಹಂಚಿಕೊಂಡ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಡುಪಿ ಜಿಲ್ಲಾಧ್ಯಕ್ಷರು ಹಾಗೂ ಅರ್ಜಿದಾರರಾಗಿರುವಂತ ಕೆ. ಅಂಪಾರು ದಿನಕರ ಶೆಟ್ಟಿ ಅವರು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಅಧಿಕೃತವಾಗಿ ಪೂರ್ಣ ಪ್ರಮಾಣದ ತಡೆಯಾಜ್ಞೆ ನೀಡಿದೆ. ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯ ಚುನಾವಣೆಗೂ ಸಂಪೂರ್ಣ ತಡೆ ನೀಡಿ ಆದೇಶಿಸಿದೆ. ಮುಂದಿನ ಹಂತದ ವಿಚಾರಣೆಯನ್ನು ಜೂನ್.29ರಂದು ನಡೆಯಲಿದೆ. ಅಲ್ಲಿಯವರೆಗೆ ಯಾವುದೇ…
ಶಿವಮೊಗ್ಗ: ಸಾಗರ ತಾಲೂಕಿನ ಆನಂದಪುರ ಸಮೀಪದ ಸುಳಗೋಡು ಗ್ರಾಮದಲ್ಲಿ ನಡೆದ ಹೃದಯವಿದ್ರಾವಕ ಘಟನೆಯೊಂದು ಇಡೀ ಪ್ರದೇಶವನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವಿನ ಕಡಿತಕ್ಕೊಳಗಾಗಿ ಆರು ತಿಂಗಳ ಗರ್ಭಿಣಿಯೊಬ್ಬರು ಸಾವನ್ನಪ್ಪಿರುವ ದುರಂತ ಘಟನೆ ಶನಿವಾರ (ಮೇ 2, 2026) ಮಧ್ಯಾಹ್ನ ನಡೆದಿದೆ. ಈ ಘಟನೆಯು ಗ್ರಾಮೀಣ ಭಾಗದಲ್ಲಿ ದುಡಿಯುವ ವರ್ಗದ ಸುರಕ್ಷತೆಯ ಬಗ್ಗೆ ಮತ್ತೆ ಆತಂಕ ಮೂಡಿಸಿದೆ. ಘಟನೆಯ ವಿವರ: ಕಣ್ಣು ಮುಚ್ಚಿದ ಬಸುರಿ ಸುಳಗೋಡು ಗ್ರಾಮದ ನಿವಾಸಿ ವೀರಭದ್ರ ಎಂಬುವವರ ಪತ್ನಿ ಸ್ವಾತಿ (26 ವರ್ಷ) ಮೃತ ದುರ್ದೈವಿ. ಸ್ವಾತಿ ಅವರು ಆರು ತಿಂಗಳ ಗರ್ಭಿಣಿಯಾಗಿದ್ದರು. ಮೇ 2ರ ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ಅವರು ತಮ್ಮ ಪತಿ ಮತ್ತು ಇತರ ಕೂಲಿ ಕಾರ್ಮಿಕರೊಂದಿಗೆ ಸುಳಗೋಡು ಗ್ರಾಮದಲ್ಲಿ ಶುಂಠಿ ಕೆಲಸಕ್ಕೆ ತೆರಳಿದ್ದರು. ಕೆಲಸದ ನಡುವೆ ಎಲ್ಲರೂ ಊಟ ಮುಗಿಸಿ ವಿಶ್ರಾಂತಿ ಪಡೆಯುತ್ತಿದ್ದ ಸಂದರ್ಭದಲ್ಲಿ, ಸ್ವಾತಿ ಅವರ ಬಲಗಾಲಿನ ಮೊಣಕಾಲಿಗೆ ವಿಷಪೂರಿತ ಹಾವು ಕಚ್ಚಿದೆ. ತಕ್ಷಣವೇ ಎಚ್ಚೆತ್ತ ಕುಟುಂಬಸ್ಥರು…
ನವದೆಹಲಿ: ಸಾಮಾನ್ಯವಾಗಿ ನಾವು ಅಂಗಡಿಗಳಲ್ಲಿ, ಆಟೋಗಳಲ್ಲಿ ಅಥವಾ ಇತರ ವಹಿವಾಟು ನಡೆಸುವಾಗ ₹10 ಮುಖಬೆಲೆಯ ನಾಣ್ಯಗಳನ್ನು ನೀಡಿದರೆ, ಜನರು ಅದನ್ನು ಸ್ವೀಕರಿಸಲು ಹಿಂದೇಟು ಹಾಕುವುದನ್ನು ನೋಡುತ್ತೇವೆ. ಕೆಲವರು ಈ ನಾಣ್ಯಗಳು ನಕಲಿ ಎಂದು ಭಾವಿಸಿದರೆ, ಮತ್ತೆ ಕೆಲವರು ನಾಣ್ಯದ ಮೇಲಿರುವ ವಿನ್ಯಾಸ ಮತ್ತು ಚಿಹ್ನೆಗಳ ಬಗ್ಗೆ ಗೊಂದಲಕ್ಕೊಳಗಾಗುತ್ತಾರೆ. ಈ ಎಲ್ಲಾ ಗೊಂದಲಗಳಿಗೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ತೆರೆ ಎಳೆದಿದ್ದು, ಎಲ್ಲಾ ₹10 ನಾಣ್ಯಗಳು ಕಾನೂನುಬದ್ಧವಾಗಿ ಮಾನ್ಯವಾಗಿವೆ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಗೊಂದಲಕ್ಕೆ ಕಾರಣವೇನು? ವಿವಿಧ ವಿನ್ಯಾಸಗಳು: ಆರ್ಬಿಐ ಕಾಲಕಾಲಕ್ಕೆ ವಿವಿಧ ಆವೃತ್ತಿಗಳಲ್ಲಿ ಮತ್ತು ವಿನ್ಯಾಸಗಳಲ್ಲಿ ₹10 ನಾಣ್ಯಗಳನ್ನು ಬಿಡುಗಡೆ ಮಾಡಿದೆ. ಕೆಲವು ನಾಣ್ಯಗಳ ಮೇಲೆ ರುಪಾಯಿ ಚಿಹ್ನೆ (₹) ಇದ್ದರೆ, ಕೆಲವು ಹಳೆಯ ನಾಣ್ಯಗಳಲ್ಲಿ ಆ ಚಿಹ್ನೆ ಇರುವುದಿಲ್ಲ. ಗಾತ್ರ ಮತ್ತು ಆಕಾರ: ನಾಣ್ಯದ ಅಂಚಿನಲ್ಲಿರುವ ಗೆರೆಗಳು ಅಥವಾ ಚಿತ್ರಗಳಲ್ಲಿನ ವ್ಯತ್ಯಾಸದಿಂದಾಗಿ ಜನರಲ್ಲಿ ಇದು ಅಸಲಿ ಅಥವಾ ನಕಲಿ ಎಂಬ ಅನುಮಾನ ಮೂಡುತ್ತದೆ. ಆರ್ಬಿಐ ನೀಡಿರುವ ಸ್ಪಷ್ಟನೆ ಭಾರತೀಯ ರಿಸರ್ವ್…
ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಫಾಲ್ಟಾ ವಿಧಾನಸಭಾ ಕ್ಷೇತ್ರದಲ್ಲಿ ಶನಿವಾರ (ಮೇ 2) ನಡೆದ ಮತದಾನದ ವೇಳೆ ತೀವ್ರ ಚುನಾವಣಾ ಅಕ್ರಮಗಳು ನಡೆದ ಹಿನ್ನೆಲೆಯಲ್ಲಿ, ಭಾರತೀಯ ಚುನಾವಣಾ ಆಯೋಗವು ಕ್ಷೇತ್ರದ ಎಲ್ಲಾ 285 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಆದೇಶಿಸಿದೆ. ಏನಿದು ಘಟನೆ?: ಏಪ್ರಿಲ್ 29 ರಂದು ನಡೆದ ಎರಡನೇ ಹಂತದ ಮತದಾನದ ವೇಳೆ ಫಾಲ್ಟಾ ಕ್ಷೇತ್ರದಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದವು. ಪ್ರಮುಖವಾಗಿ ಇವಿಎಂ (EVM) ಯಂತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಯ ಚಿಹ್ನೆ ಇರುವ ಗುಂಡಿಗೆ ಪ್ಲ್ಯಾಸ್ಟರ್ ಅಥವಾ ಟೇಪ್ ಹಚ್ಚಿ ಮತದಾರರು ಆ ಗುಂಡಿ ಒತ್ತದಂತೆ ತಡೆಯಲಾಗಿತ್ತು ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಹತ್ತಾರು ದೂರುಗಳು ದಾಖಲಾಗಿದ್ದವು. ಆಯೋಗದ ಕ್ರಮ: ವಿಶೇಷ ವೀಕ್ಷಕರಿಂದ ವರದಿ ಪಡೆದ ಬಳಿಕ, ಚುನಾವಣಾ ಪ್ರಕ್ರಿಯೆಯ ಪಾವಿತ್ರ್ಯತೆ ಮತ್ತು ಪ್ರಜಾಪ್ರಭುತ್ವದ ಆಶಯಗಳಿಗೆ ಧಕ್ಕೆಯಾಗಿದೆ ಎಂದು ಆಯೋಗ ತೀರ್ಮಾನಿಸಿದೆ. ಹೀಗಾಗಿ ಶನಿವಾರದಂದು ನಡೆದಿದ್ದ ಮತದಾನವನ್ನು ಅಮಾನ್ಯಗೊಳಿಸಿರುವ ಆಯೋಗ, ಇದೇ ಮೇ 21 ರಂದು ಕ್ಷೇತ್ರದ…
ಶಿವಮೊಗ್ಗ: ಜಿಲ್ಲೆಯ ತಾಲ್ಲೂಕು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ ನಿನ್ನೆ ಸಾಂಗವಾಗಿ ನೆರವೇರಿದ್ದು, ಈ ಚುನಾವಣೆಯಲ್ಲಿ ಪಾಲ್ಗೊಂಡು ಮತದಾನ ಮಾಡಿದ ಎಲ್ಲಾ ಶಿಕ್ಷಕ ಬಂಧುಗಳಿಗೆ ‘ಸ್ವಾಭಿಮಾನಿ ಶಿಕ್ಷಕರ ಬಳಗ’ದ ಮುಖಂಡರಾದ ದೇವೇಂದ್ರಪ್ಪ ಕೆ. ಅವರು ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಸೋಲು-ಗೆಲುವು ಸಹಜ ಚುನಾವಣಾ ಫಲಿತಾಂಶದ ಕುರಿತು ಮಾತನಾಡಿದ ದೇವೇಂದ್ರಪ್ಪ ಅವರು, “ಚುನಾವಣಾ ಕಣದಲ್ಲಿ ಸೋಲು ಮತ್ತು ಗೆಲುವು ಎಂಬುದು ಸಹಜ ಪ್ರಕ್ರಿಯೆ. ನಮ್ಮ ತಂಡದ ಮೇಲೆ ವಿಶ್ವಾಸವಿಟ್ಟು ಮತ ನೀಡಿದ ಮತ್ತು ಬೆಂಬಲಿಸಿದ ಪ್ರತಿಯೊಬ್ಬ ಶಿಕ್ಷಕರಿಗೂ ನಾವು ಅಭಿನಂದನೆ ಸಲ್ಲಿಸುತ್ತೇವೆ” ಎಂದು ತಿಳಿಸಿದರು. ತಂಡದ ಸ್ಪರ್ಧೆ ಈ ಬಾರಿಯ ಸಾಗರ ತಾಲ್ಲೂಕು ಶಿಕ್ಷಕರ ಸಂಘದ ಚುನಾವಣೆಗೆ ದೇವೇಂದ್ರಪ್ಪ ಕೆ. ಅವರ ನೇತೃತ್ವದ ತಂಡದಿಂದ ಒಟ್ಟು 12 ಮಂದಿ ಅಭ್ಯರ್ಥಿಗಳು ಕಣಕ್ಕಿಳಿದಿದ್ದರು. ನಿನ್ನೆ ನಡೆದ ತೀವ್ರ ಕುತೂಹಲಕಾರಿ ಚುನಾವಣೆಯಲ್ಲಿ ಈ ತಂಡದ ಅಭ್ಯರ್ಥಿಗಳು ಸೋಲನ್ನು ಅನುಭವಿಸಿದ್ದಾರೆ. ಕೃತಜ್ಞತೆ ಸಲ್ಲಿಕೆ ಫಲಿತಾಂಶ ತಮ್ಮ ಪರವಾಗಿ ಬರದಿದ್ದರೂ, ತತ್ವ ಮತ್ತು ಸಿದ್ಧಾಂತಗಳನ್ನು ನಂಬಿ…














