Subscribe to Updates
Get the latest creative news from FooBar about art, design and business.
Author: kannadanewsnow09
ನಾವು ಕಷ್ಟಪಟ್ಟು ದುಡಿದ ಹಣವನ್ನು ಖರ್ಚು ಮಾಡಬೇಕು ಆದರೆ ಆ ಖರ್ಚುಗಳನ್ನು ಒಳ್ಳೆಯದಕ್ಕೆ ಖರ್ಚು ಮಾಡಬೇಕು ಮತ್ತು ವ್ಯರ್ಥ ಮಾಡಬಾರದು. ಕಟ್ಟುನಿಟ್ಟಾಗಿ ಹೇಳುವುದಾದರೆ, ವ್ಯರ್ಥವಾದರೆ ಒಬ್ಬರ ಜೀವನದಲ್ಲಿ ಪ್ರಗತಿಯಿಲ್ಲ. ಒಬ್ಬರ ಪ್ರಗತಿಯನ್ನು ಹಣದಿಂದ ನಿರ್ಧರಿಸಲಾಗುತ್ತದೆ. ಎಷ್ಟರಮಟ್ಟಿಗೆ ಹಣ ಉಳಿತಾಯ ಮತ್ತು ಮಂಗಳಕರವಾಗಿ ಖರ್ಚು ಮಾಡಿದರೆ ಅವರ ಜೀವನದಲ್ಲಿ ಪ್ರಗತಿಯುಂಟಾಗುತ್ತದೆ. ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ, ಅಂತಹ ವ್ಯರ್ಥಗಳನ್ನು ತಪ್ಪಿಸುವ ಮೂಲಕ ಉಳಿತಾಯವನ್ನು ಹೆಚ್ಚಿಸಲು ಮಾಡಬಹುದಾದ ಪರಿಹಾರವನ್ನು ನಾವು ನೋಡಲಿದ್ದೇವೆ . ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು…
ದಾವಣಗೆರೆ: ಮುಖ್ಯಮಂತ್ರಿಗಳೇ, ಒಳ್ಳೆಯ ಕಾರಣಕ್ಕೆ ನಿಮ್ಮ ಸರಕಾರ ಯಾವಾಗ ಸುದ್ದಿಯಾಗಿದೆ ಹೇಳಿ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಸರಕಾರದ ದುರಾಡಳಿತ ಸಂಬಂಧ ಆರೋಪ ಪಟ್ಟಿ ಬಿಡುಗಡೆ ಮಾಡಿ ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿದರು. ಕಳೆದ 3 ವರ್ಷಗಳಲ್ಲಿ ಈ ಸರಕಾರ ಒಳ್ಳೆಯ ಕಾರಣಕ್ಕೆ ಯಾವಾಗ ಹೆಸರಾಗಿತ್ತು ಎಂದು ಹೇಳಲೂ ಸಿಗುವುದಿಲ್ಲ. ಭ್ರಷ್ಟಾಚಾರ, ಬೆಲೆ ಏರಿಕೆ, ದರೋಡೆ ಪ್ರಕರಣಗಳು ಸುದ್ದಿಯಾದವು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸುಮಾರು 3 ವರ್ಷಗಳಾಗಿವೆ. ಈ ಅವಧಿಯ ಭ್ರಷ್ಟಾಚಾರ, ಬೆಲೆ ಏರಿಕೆ, ದುರಾಡಳಿತ ಕುರಿತ ಚಾರ್ಜ್ ಶೀಟನ್ನು ಇವತ್ತು ಬಿಡುಗಡೆ ಮಾಡಿದ್ದೇವೆ ಎಂದರು. ಡ್ರಗ್ಸ್ ವಿಚಾರದಲ್ಲಿ ರಾಜ್ಯ ಸುದ್ದಿಯಾಗಿದೆ. ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ ಇದೆ. ಸರಕಾರಿ ನೌಕರರು ಆತ್ಮಹತ್ಯೆ ಮಾಡಿಕೊಂಡರು. ಬಾಣಂತಿಯರು, ಹಸುಗೂಸುಗಳ ಸರಣಿ ಸಾವಿನ ಕಾರಣಕ್ಕೆ ಈ ಸರಕಾರ ಸುದ್ದಿಯಲ್ಲಿತ್ತು. ಸರಕಾರಿ ಆಸ್ಪತ್ರೆಯಲ್ಲಿ ಔಷಧಿ ಕೊರತೆಗೆ ಈ…
ಅಬುಧಾಬಿ: ಯುನೈಟೆಡ್ ಅರಬ್ ಎಮಿರೇಟ್ಸ್ನ (UAE) ಅಬುಧಾಬಿಯಲ್ಲಿ ಸಂಭವಿಸಿದ ಕ್ಷಿಪಣಿ ಪ್ರತಿಬಂಧಕ ದಾಳಿಯ ವೇಳೆ ಅದರ ಅವಶೇಷಗಳು ಬಿದ್ದ ಪರಿಣಾಮ ಐವರು ಭಾರತೀಯರು ಸೇರಿದಂತೆ ಒಟ್ಟು 12 ಮಂದಿ ಗಾಯಗೊಂಡಿದ್ದಾರೆ. ಘಟನೆಯ ವಿವರ: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ಅಬುಧಾಬಿಯತ್ತ ನುಗ್ಗಿ ಬಂದ ಅನಾಮಧೇಯ ಕ್ಷಿಪಣಿಯನ್ನು ಯುಎಇ ರಕ್ಷಣಾ ಪಡೆಗಳು ಆಕಾಶದಲ್ಲೇ ಯಶಸ್ವಿಯಾಗಿ ಪ್ರತಿಬಂಧಿಸಿ (Intercept) ಹೊಡೆದುರುಳಿಸಿವೆ. ಈ ಸಂದರ್ಭದಲ್ಲಿ ಕ್ಷಿಪಣಿಯ ಚೂರುಗಳು ಮತ್ತು ಅವಶೇಷಗಳು ಜನನಿಬಿಡ ಪ್ರದೇಶದ ಮೇಲೆ ಬಿದ್ದಿವೆ. ಮುಖ್ಯಾಂಶಗಳು: ಗಾಯಾಳುಗಳು: ಈ ಅವಶೇಷಗಳು ಬಿದ್ದ ವೇಗಕ್ಕೆ ರಸ್ತೆಯಲ್ಲಿದ್ದವರು ಮತ್ತು ಕಟ್ಟಡದ ಬಳಿ ಇದ್ದವರು ಗಾಯಗೊಂಡಿದ್ದಾರೆ. ಒಟ್ಟು 12 ಗಾಯಾಳುಗಳಲ್ಲಿ ಐವರು ಭಾರತೀಯ ಮೂಲದವರು ಎಂದು ಗುರುತಿಸಲಾಗಿದೆ. ಆರೋಗ್ಯ ಸ್ಥಿತಿ: ಗಾಯಗೊಂಡವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದರೆ, ಇನ್ನು ಕೆಲವರಿಗೆ ಚಿಕಿತ್ಸೆ ಮುಂದುವರಿದಿದೆ. ಭಾರತೀಯ ರಾಯಭಾರ ಕಚೇರಿ ಸ್ಪಂದನೆ: ಅಬುಧಾಬಿಯಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಗಾಯಗೊಂಡ ಭಾರತೀಯರ…
ಕಾರವಾರ: ಜೈಲಿನಲ್ಲಿದ್ದ ಕೈದಿಯೊಬ್ಬನಿಗೆ ಬರಬೇಕಿದ್ದ ಸರ್ಕಾರಿ ಹಣವನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಾರವಾರ ಜಿಲ್ಲಾ ಕಾರಾಗೃಹದ ಜೈಲರ್ ಶರಣಬಸಪ್ಪ ಹಿರೇಮಠ್ ಅವರು ಇಂದು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಘಟನೆಯ ವಿವರ: ಕಾರವಾರದ ಜಿಲ್ಲಾ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸಿ ಬಿಡುಗಡೆಯಾಗಿದ್ದ ವ್ಯಕ್ತಿಯೊಬ್ಬರಿಗೆ ಸರ್ಕಾರದಿಂದ ಬರಬೇಕಿದ್ದ ಭತ್ಯೆ ಅಥವಾ ಅವರ ವೈಯಕ್ತಿಕ ಹಣವನ್ನು ಹಿಂದಿರುಗಿಸಲು ಜೈಲರ್ ವಿಳಂಬ ಮಾಡುತ್ತಿದ್ದರು ಎನ್ನಲಾಗಿದೆ. ಈ ಹಣವನ್ನು ನೀಡಲು ಜೈಲರ್ ಲಂಚದ ಬೇಡಿಕೆ ಇಟ್ಟಿದ್ದರು. ಲೋಕಾಯುಕ್ತ ದಾಳಿ: ದೂರು: ಜೈಲರ್ ಲಂಚ ಕೇಳುತ್ತಿರುವ ಬಗ್ಗೆ ನೊಂದ ವ್ಯಕ್ತಿಯು ಕಾರವಾರ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಟ್ರ್ಯಾಪ್: ದೂರಿನ ಅನ್ವಯ ಇಂದು ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದರು. ಸಂತ್ರಸ್ತರಿಂದ ಲಂಚದ ಹಣವನ್ನು ಸ್ವೀಕರಿಸುತ್ತಿದ್ದಾಗ ಜೈಲರ್ ಶರಣಬಸಪ್ಪ ಅವರನ್ನು ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ವಶಕ್ಕೆ: ಲಂಚದ ಹಣವನ್ನು ವಶಪಡಿಸಿಕೊಂಡಿರುವ ಲೋಕಾಯುಕ್ತ ಪೊಲೀಸರು, ಜೈಲರ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಭ್ರಷ್ಟಾಚಾರದ ವಿರುದ್ಧ ತನಿಖೆ: ಜೈಲರ್…
ಉತ್ತರ ಕನ್ನಡ: ಜಿಲ್ಲೆಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಖಾಸಗಿ ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಿಂದಾಗಿ 40 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಕೊಳಗಿಬೀಸ್ ಬಳಿಯಲ್ಲಿ ಈ ಅಪಘಾತ ಸಂಭವಿಸಿದೆ. ಭಟ್ಕಳದಿಂದ ಬಾಗಲಕೋಟೆಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಶಿರಸಿಯಿಂದ ಕುಮಟಾ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ನಡುವೆ ಮುಖಾಮುಕಿ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಎರಡು ಬಸ್ಸುಗಳ ಮುಖಾಮುಖಿ ಡಿಕ್ಕಿಯಿಂದಾಗಿ ಬಸ್ ಮುಂಭಾಗವು ಸಂಪೂರ್ಣವಾಗಿ ಜಖಂ ಆಗಿದೆ. ಅಪಘಾತದಿಂದಾಗಿ 40 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಶಿರಸಿಯ ತಾಲ್ಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಶಿರಸಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ಇದಾಗಿದೆ. https://kannadanewsnow.com/kannada/karnataka-legislative-assembly-still-paperless-digital-house-officially-launched/ https://kannadanewsnow.com/kannada/mysore-district-magistrate-in-trouble-court-issues-arrest-warrant/
ಮೈಸೂರು: ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ ಆರೋಪದ ಮೇಲೆ ಮೈಸೂರು ಜಿಲ್ಲಾಧಿಕಾರಿ (DC) ವಿರುದ್ಧ ಹಿರಿಯ ಸಿವಿಲ್ ನ್ಯಾಯಾಲಯವು ಬಂಧನದ ವಾರೆಂಟ್ (Arrest Warrant) ಜಾರಿಗೊಳಿಸಿದೆ. ಭೂಸ್ವಾಧೀನಕ್ಕೆ ಸಂಬಂಧಿಸಿದ ಪರಿಹಾರ ಧನ ಪಾವತಿಸುವಲ್ಲಿ ವಿಫಲರಾದ ಹಿನ್ನೆಲೆಯಲ್ಲಿ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣದ ಹಿನ್ನೆಲೆ: ಕಳೆದ ಹಲವು ವರ್ಷಗಳ ಹಿಂದೆ ರಸ್ತೆ ಅಗಲೀಕರಣ ಅಥವಾ ಸಾರ್ವಜನಿಕ ಉದ್ದೇಶಕ್ಕಾಗಿ ರೈತರೊಬ್ಬರ ಜಮೀನನ್ನು ಭೂಸ್ವಾಧೀನ ಪಡಿಸಿಕೊಳ್ಳಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾಡಳಿತಕ್ಕೆ ಆದೇಶಿಸಿತ್ತು. ಆದರೆ, ಜಿಲ್ಲಾಧಿಕಾರಿಗಳ ಕಚೇರಿಯಿಂದ ಈವರೆಗೂ ಯಾವುದೇ ಪರಿಹಾರ ಹಣ ಬಿಡುಗಡೆಯಾಗಿರಲಿಲ್ಲ. ನ್ಯಾಯಾಲಯದ ಕೆಂಗಣ್ಣು: ಆದೇಶ ಉಲ್ಲಂಘನೆ: ಪರಿಹಾರ ನೀಡುವಂತೆ ನ್ಯಾಯಾಲಯವು ನೀಡಿದ್ದ ಹಲವು ಗಡುವುಗಳನ್ನು ಜಿಲ್ಲಾಡಳಿತ ನಿರ್ಲಕ್ಷಿಸಿತ್ತು. ಜಪ್ತಿ ಪ್ರಕ್ರಿಯೆ: ಈ ಹಿಂದೆ ಜಿಲ್ಲಾಧಿಕಾರಿ ಕಚೇರಿಯ ಪೀಠೋಪಕರಣಗಳನ್ನು ಜಪ್ತಿ ಮಾಡುವಂತೆ ಆದೇಶಿಸಲಾಗಿತ್ತು. ಆದರೂ ಪರಿಹಾರ ಮೊತ್ತ ಪಾವತಿಯಾಗದ ಕಾರಣ ನ್ಯಾಯಾಲಯ ಈಗ ನೇರವಾಗಿ ಬಂಧನದ ವಾರೆಂಟ್ ಹೊರಡಿಸಿದೆ. ಪೊಲೀಸ್ ಆಯುಕ್ತರಿಗೆ ಸೂಚನೆ: ಜಿಲ್ಲಾಧಿಕಾರಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ…
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಕಣ ರಂಗೇರಿದ್ದು, ಬಿಜೆಪಿ ತನ್ನ ಪಾಲಿನ 27 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಕೇಂದ್ರ ಸಚಿವರು ಮತ್ತು ಮಾಜಿ ರಾಜ್ಯಪಾಲರಿಗೆ ಸ್ಥಾನ ಸಿಕ್ಕಿದ್ದರೂ, ಪಕ್ಷದ ವರ್ಚಸ್ವಿ ನಾಯಕ ಕೆ. ಅಣ್ಣಾಮಲೈ ಅವರ ಹೆಸರು ಕಾಣೆಯಾಗಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ಪಟ್ಟಿಯ ಪ್ರಮುಖ ಮುಖ್ಯಾಂಶಗಳು: ಗಣ್ಯರಿಗೆ ಮಣೆ: ಕೇಂದ್ರ ಸಚಿವ ಎಲ್. ಮುರುಗನ್ ಅವರು ‘ಅವನಶಿ’ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದರೆ, ತೆಲಂಗಾಣದ ಮಾಜಿ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಅವರಿಗೆ ‘ಮೈಲಾಪುರ’ದಿಂದ ಟಿಕೆಟ್ ನೀಡಲಾಗಿದೆ. ಮಹಿಳಾ ಪ್ರಾತಿನಿಧ್ಯ: ಬಿಜೆಪಿ ಮಹಿಳಾ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷೆ ವನತಿ ಶ್ರೀನಿವಾಸನ್ ಕೊಯಮತ್ತೂರು (ಉತ್ತರ) ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಉಳಿದಂತೆ ಕೀರ್ತಿಕಾ ಶಿವಕುಮಾರ್ (ಮೊಡಕ್ಕುರಿಚಿ), ಎಸ್. ವಿಜಯಧರಣಿ (ವಿಲವಂಕೋಡ್) ಮತ್ತು ನಾಗೇಶ್ ಕುಮಾರ್ (ಥಲ್ಲಿ) ಅವರಿಗೆ ಟಿಕೆಟ್ ಘೋಷಿಸಲಾಗಿದೆ. ಅಣ್ಣಾಮಲೈಗೆ ಶಾಕ್: ರಾಜ್ಯದಲ್ಲಿ ಬಿಜೆಪಿಯನ್ನು ಆಕ್ರಮಣಕಾರಿಯಾಗಿ ಸಂಘಟಿಸಿದ್ದ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರಿಗೆ ಈ ಬಾರಿ ಟಿಕೆಟ್…
ಬೆಂಗಳೂರು: ರಾಜ್ಯದ ಮಾಜಿ ಲೋಕಾಯುಕ್ತ ಹಾಗೂ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗಡೆ ಅವರು ಶುಕ್ರವಾರ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ವೇಳೆ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ಸದ್ಯ ಅವರನ್ನು ಚಿಕಿತ್ಸೆಗಾಗಿ ನಗರದ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ವಿವರ: ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಇಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರು ಭಾಗವಹಿಸಿದ್ದರು. ಸಂಜೆ ಸುಮಾರು 4 ಗಂಟೆ 20 ನಿಮಿಷದ ಹೊತ್ತಿಗೆ ಅವರು ವೇದಿಕೆಯಲ್ಲಿದ್ದಾಗಲೇ ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದರು. ಇದನ್ನು ಕಂಡು ಸಭಾಂಗಣದಲ್ಲಿದ್ದವರು ಕ್ಷಣಕಾಲ ಆತಂಕಕ್ಕೊಳಗಾದರು. ಮಾನವೀಯತೆ ಮೆರೆದ ಸಭಾಧ್ಯಕ್ಷರು: ಘಟನೆಯ ವೇಳೆ ಸಭಾಂಗಣದಲ್ಲಿದ್ದ ವಿಧಾನಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ತಕ್ಷಣವೇ ಸ್ಪಂದಿಸಿದರು. ಆಂಬ್ಯುಲೆನ್ಸ್ ಬರುವವರೆಗೆ ಕಾಯದೆ, ತಮ್ಮದೇ ಕಾರಿನಲ್ಲಿ ಸಂತೋಷ್ ಹೆಗಡೆ ಅವರನ್ನು ಕೂರಿಸಿಕೊಂಡು ಆಸ್ಪತ್ರೆಗೆ ಧಾವಿಸಿದರು. ಖಾದರ್ ಅವರೇ ಸ್ವತಃ ಜೊತೆಯಲ್ಲಿದ್ದು, ಹೆಗಡೆ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ವ್ಯವಸ್ಥೆ ಮಾಡಿದರು. ಪ್ರಸ್ತುತ ಆರೋಗ್ಯ ಸ್ಥಿತಿ: ವಿಕ್ರಂ ಆಸ್ಪತ್ರೆಯ…
ಮಂಡ್ಯ: “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮಕ್ಕಳನ್ನು ರಾಜಕೀಯಕ್ಕೆ ತರುವ ಮೂಲಕ ತಾವೂ ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ದೇವೇಗೌಡರ ಕುಟುಂಬದ ಬಗ್ಗೆ ಮಾತನಾಡುವ ನೈತಿಕತೆ ಅವರಿಗಿಲ್ಲ,” ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹರಿಹಾಯ್ದಿದ್ದಾರೆ. ತಾಲ್ಲೂಕಿನ ಟಿ.ಎಸ್. ಛತ್ರ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಮತ್ತು ಕೇಂದ್ರ ರಾಜಕಾರಣದ ಹಲವು ವಿಚಾರಗಳ ಕುರಿತು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕುಟುಂಬ ರಾಜಕಾರಣದ ಬಗ್ಗೆ ಸಿದ್ದರಾಮಯ್ಯಗೆ ಟಾಂಗ್ ಸಿದ್ದರಾಮಯ್ಯ ಅವರ ಕುಟುಂಬ ರಾಜಕಾರಣದ ಟೀಕೆಗೆ ಉತ್ತರಿಸಿದ ಕುಮಾರಸ್ವಾಮಿ, “ಸಿದ್ದರಾಮಯ್ಯ ಅವರು ಮೊದಲು ತಮ್ಮ ಮೊದಲ ಮಗನನ್ನು ಬೆಳೆಸಲು ನೋಡಿದರು. ಅವರ ಅಕಾಲಿಕ ಮರಣದ ನಂತರ ಎರಡನೇ ಮಗನನ್ನು ರಾಜಕಾರಣಕ್ಕೆ ತಂದಿದ್ದಾರೆ. ವೈದ್ಯರಾಗಿದ್ದವರನ್ನು ರಾಜಕೀಯಕ್ಕೆ ಕರೆತಂದು ವಸೂಲಿಗಾಗಿ ಇಟ್ಟುಕೊಂಡಿದ್ದಾರೆ. ಡಿಸಿಎಂ ಕುಟುಂಬದಲ್ಲಿ ಎಷ್ಟು ಜನ ಅಧಿಕಾರದಲ್ಲಿದ್ದಾರೆ? ಕೇವಲ ನಮ್ಮ ಕುಟುಂಬ ಮಾತ್ರವಲ್ಲ, ಎರಡು-ಮೂರು ಜನ ಶಾಸಕರಿರುವ ಕುಟುಂಬಗಳು ಕಾಂಗ್ರೆಸ್ನಲ್ಲಿ ಸಾಕಷ್ಟಿವೆ,” ಎಂದು ಗುಡುಗಿದರು. “ದೇವೇಗೌಡರು ನಮ್ಮನ್ನು ವಸೂಲಿ ಮಾಡಲು…
ನವದೆಹಲಿ: ವೀರಶೈವ ಲಿಂಗಾಯತ ಜಂಗಮ ಸಮುದಾಯಕ್ಕೆ ಸೇರಿದವರು ‘ಬೇಡ ಜಂಗಮ’ ಅಥವಾ ‘ಬುಡ್ಗ ಜಂಗಮ’ ಎಂಬ ಪರಿಶಿಷ್ಟ ಜಾತಿ (SC) ಪ್ರಮಾಣಪತ್ರ ಪಡೆಯಲು ಅರ್ಹರಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಮೂಲಕ ಲಿಂಗಾಯತ ಜಂಗಮರು ಎಸ್ಸಿ ಮೀಸಲಾತಿ ಪಡೆಯುವ ಪ್ರಯತ್ನಕ್ಕೆ ಸುಪ್ರೀಂ ಕೋರ್ಟ್ನಲ್ಲಿ ದೊಡ್ಡ ಹಿನ್ನಡೆಯಾಗಿದೆ. ಸುದ್ದಿಯ ವಿವರ: ಬೀದರ್ ಮೂಲದ ರವೀಂದ್ರಸ್ವಾಮಿ ಎಂಬುವವರು ತಮಗೆ ನೀಡಲಾಗಿದ್ದ ‘ಬೇಡ ಜಂಗಮ’ ಜಾತಿ ಪ್ರಮಾಣಪತ್ರವನ್ನು ರದ್ದುಪಡಿಸಿದ್ದ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳಾದ ರಾಜೇಶ್ ಬಿಂದಾಲ್ ಮತ್ತು ಮನಮೋಹನ್ ಅವರನ್ನೊಳಗೊಂಡ ಪೀಠವು ಅರ್ಜಿಯನ್ನು ವಜಾಗೊಳಿಸಿದೆ. ನ್ಯಾಯಾಲಯದ ಪ್ರಮುಖ ಅವಲೋಕನಗಳು: ವ್ಯತ್ಯಾಸ ಸ್ಪಷ್ಟ: ವೀರಶೈವ ಲಿಂಗಾಯತ ಜಂಗಮರು ಪುರೋಹಿತ ವರ್ಗಕ್ಕೆ ಸೇರಿದವರಾಗಿದ್ದು, ಅವರ ಜೀವನಶೈಲಿ ಮತ್ತು ಸಂಪ್ರದಾಯಗಳು ಬೇಡ ಜಂಗಮರಿಗಿಂತ ಭಿನ್ನವಾಗಿವೆ. ಹೀಗಾಗಿ ಎರಡನ್ನೂ ಒಂದೇ ಎಂದು ಪರಿಗಣಿಸಲು ಸಾಧ್ಯವಿಲ್ಲ. ಹೈಕೋರ್ಟ್ ಆದೇಶ ಎತ್ತಿ ಹಿಡಿಯಲಾಗಿದೆ: ಈ…














