Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ಆನೇಕಲ್ ಸಮೀಪ ಕರ್ನಾಟಕ ಗೃಹ ಮಂಡಳಿ ಮೂಲಕ ರೈತರ ಫಲವತ್ತಾದ ಜಮೀನು ಪಡೆದು ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಮಾಡುವುದು ಸರಿಯಲ್ಲ. ಗೃಹ ಮಂಡಳಿ ಮನೆಗಳನ್ನು ನಿರ್ಮಿಸಬೇಕೇ ಹೊರತು ಸ್ಟೇಡಿಯಂ ಹೇಗೆ ನಿರ್ಮಿಸುತ್ತದೆ ಎಂದು ವಿಧಾನ ಪರಿಷತ್ತಿನ ವಿರೋಧಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಾಮಾನ್ಯ ಜನರಿಗೆ ಮನೆ ನಿರ್ಮಿಸುವ ಕೆಲಸವನ್ನು ಗೃಹ ಮಂಡಳಿ ಮಾಡುತ್ತಿತ್ತು. ಇದೀಗ ಹೇಗೆ ಸ್ಟೇಡಿಯಂ ನಿರ್ಮಿಸುತ್ತದೆ. ಸ್ಟೇಡಿಯಂ ಅನ್ನು ಬೇಕಾದರೆ ಸರ್ಕಾರ ಮಾಡಲಿ ಎಂದು ಹೇಳಿದರು. ರೈತರಿಂದ ಬೆಲೆಬಾಳುವ ಜಮೀನನ್ನು ಗೃಹ ಮಂಡಳಿ ಮನೆ ನಿರ್ಮಿಸಲು ಪಡೆದಿದೆ. ಗಡಿ ಭಾಗದ ಆನೇಕಲ್‍ಗೆ ಈಗಲೇ ಹೋಗಿಬರುವುದು ಕಷ್ಟದ ಸ್ಥಿತಿಯಲ್ಲಿದೆ. ಯಾಕೆಂದರೆ ಅಷ್ಟರ ಮಟ್ಟಿಗೆ ಟ್ರಾಫಿಕ್ ಜಾಮ್ ಇದೆ. ಇನ್ನು ಸ್ಟೇಡಿಯಂ ಆದರೆ ಈ ಟ್ರಾಫಿಕ್ ತೊಂದರೆ ಊಹಿ¸ಲೂ ಸಾಧ್ಯವಿಲ್ಲ. ಆನೇಕಲ್ ಸಮೀಪ ಸ್ಟೇಡಿಯಂ ಬದಲು ತುಮಕೂರು ರಸ್ತೆಯಲ್ಲಿ ನಿರ್ಮಿಸಿದ್ದರೆ ಒಳ್ಳೆಯದಿತ್ತು ಎಂದು ಸಲಹೆ ನೀಡಿದರು.…

Read More

ಕಲಬುರಗಿ: ಮೂರು ವರ್ಷಗಳಲ್ಲಿ ನಮ್ಮ ಸಾಧನೆ ಇಂಥದ್ದೆಂದು ಕಾಂಗ್ರೆಸ್ ಮುಖಂಡರು ಹೇಳಲಿ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಅವರು ಸವಾಲು ಹಾಕಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಹಗರಣಗಳೇ ನಿಮ್ಮ ಸಾಧನೆಯೇ? ವಾಲ್ಮೀಕಿ ನಿಗಮದ ಹಗರಣದಲ್ಲಿ 187 ಕೋಟಿ ರೂ. ಲೂಟಿ ಹೊಡೆದು ನಮ್ಮ ಒಬ್ಬ ಸಚಿವ ಜೈಲಿಗೆ ಹೋದ ಎಂಬುದು ಸಾಧನೆಯೇ ಎಂದು ಪ್ರಶ್ನಿಸಿದರು. ಎಸ್.ಇ.ಪಿ., ಟಿಎಸ್ಪಿ ಹಣ ದುರುಪಯೋಗ ಸಾಧನೆಯೇ ಎಂದು ಕೇಳಿದರು. ಸಾಧನೆಯ ಕಾರಣಕ್ಕಾಗಿ ಕೆಎಸ್ಆರ್ಟಿಸಿ ನೌಕರರು ಚಳವಳಿಗೆ ಕರೆ ಕೊಟ್ಟಿದ್ದಾರಾ ಎಂದು ಪ್ರಶ್ನೆಯನ್ನು ಮುಂದಿಟ್ಟರು. 3 ಗಂಟೆಯೂ ರೈತರ ಪಂಪ್ಸೆಟ್ಗಳಿಗೆ 3 ಫೇಸ್ ಕರೆಂಟ್ ಕೊಡುತ್ತಿಲ್ಲ. ಇದು ಸಾಧನೆಯೇ? 3 ವರ್ಷದಲ್ಲಿ ಕರ್ನಾಟಕದ ಜನರು ಹೆಮ್ಮೆ ಪಡುವಂತೆ, ತಲೆಯೆತ್ತಿ ನಿಲ್ಲುವಂತೆ, ಇಡೀ ದೇಶದಲ್ಲಿ ಹೇಳಿಕೊಂಡು ಓಡಾಡುವಂತೆ ಯಾವ ಕೆಲಸ ಮಾಡಿದ್ದೀರಿ ಎಂದು ಪ್ರಶ್ನಿಸಿದರು. ಶೇ 60 ಕಮಿಷನ್- ಅದು ಸಾಧನೆಯೇ? ಸರಕಾರಿ ನೌಕರರ ಆತ್ಮಹತ್ಯೆ- ಅದು ಸಾಧನೆಯೇ? ಎಂದ ಅವರು,…

Read More

ಮಡಿಕೇರಿ: ಕೊಡಗು ಜಿಲ್ಲೆಯ ಪ್ರಸಿದ್ಧ ದುಬಾರೆ ಆನೆ ಶಿಬಿರದಲ್ಲಿ (Dubare Elephant Camp) ಪ್ರವಾಸಿ ಮಹಿಳೆ ಹಾಗೂ ಸಾಕಾನೆ ಸಾವನ್ನಪ್ಪಿದ ದಾರುಣ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಅರಣ್ಯ ಅಧಿಕಾರಿಗಳ ವಿರುದ್ಧ ಉಪ ಲೋಕಾಯುಕ್ತರು ಸ್ವಯಂಪ್ರೇರಿತ (Suo Motu) ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸೋಮವಾರಪೇಟೆ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಗೋಪಾಲ್ ಎ. ಹಾಗೂ ಕುಶಾಲನಗರ ಪ್ರಾದೇಶಿಕ ವಲಯದ ಅರಣ್ಯಾಧಿಕಾರಿ (RFO) ರಕ್ಷಿತ್ ಅವರ ವಿರುದ್ಧ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಪ್ರಕರಣ ದಾಖಲಿಸಿ, ನೋಟಿಸ್ ಜಾರಿ ಮಾಡಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಕಳೆದ ಮೇ 18ರಂದು ದುಬಾರೆ ಸಾಕಾನೆ ಶಿಬಿರದಲ್ಲಿ ಎರಡು ಆನೆಗಳ ನಡುವೆ ಭೀಕರ ಕಾದಾಟ ನಡೆದಿತ್ತು. ಈ ವೇಳೆ ಪ್ರವಾಸಿಗರ ಮೇಲೆ ಆನೆಗಳು ನುಗ್ಗಿದ್ದರಿಂದ ತಮಿಳುನಾಡು ಮೂಲದ ಪ್ರವಾಸಿ ಮಹಿಳೆ ಜುನೇಷೆ ಎಸ್. (33) ಎಂಬುವವರು ಮೃತಪಟ್ಟಿದ್ದರು. ಇದೇ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ‘ಮಾರ್ತಾಡ’ ಎಂಬ ಸಾಕಾನೆ ಕೂಡ ಸಾವನ್ನಪ್ಪಿತ್ತು. ಈ ಇಡೀ ದುರಂತವು ಅರಣ್ಯ…

Read More

ಬೆಂಗಳೂರು: ಜಾಗತಿಕ ಮಟ್ಟದ ಪ್ರಸಿದ್ಧ ಔಷಧ ತಯಾರಿಕಾ ಕಂಪನಿ ‘ಡಾ. ರೆಡ್ಡೀಸ್ ಲ್ಯಾಬೊರೇಟರೀಸ್ʼ ಭಾರತದಲ್ಲಿ ಟೈಪ್ 2 ಮಧುಮೇಹ ಹೊಂದಿರುವ ರೋಗಿಗಳ ಚಿಕಿತ್ಸೆಗಾಗಿ ‘ಓಬೆಡಾ’ ಎಂಬ ಹೊಸ ಮಾತ್ರೆಯನ್ನು ಬಿಡುಗಡೆ ಮಾಡಿದೆ. ಇದು ‘ಓರಲ್ ಸೆಮಾಗ್ಲುಟೈಡ್ ಬಯೋಸಿಮಿಲರ್’ ಔಷಧವಾಗಿದ್ದು, ಬಾಯಿಯ ಮೂಲಕ ಸೇವಿಸುವ ಮಾತ್ರೆಯಾಗಿದೆ. ಇತ್ತೀಚೆಗಷ್ಟೇ ಡಾ. ರೆಡ್ಡೀಸ್ ಕಂಪನಿಯು ಭಾರತ ಮತ್ತು ಕೆನಡಾದಲ್ಲಿ ಮಧುಮೇಹಕ್ಕಾಗಿ ‘ಸೆಮಾಗ್ಲುಟೈಡ್ ಇಂಜೆಕ್ಷನ್’ ಅನ್ನು ಬಿಡುಗಡೆ ಮಾಡಿತ್ತು. ಇದೀಗ ಅದೇ ಔಷಧಿಯನ್ನು ಮಾತ್ರೆಯ ರೂಪದಲ್ಲಿ ಪರಿಚಯಿಸುವ ಮೂಲಕ ರೋಗಿಗಳಿಗೆ ಚಿಕಿತ್ಸೆಯನ್ನು ಇನ್ನಷ್ಟು ಸುಲಭಗೊಳಿಸಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್‌) ನಡೆಸಿದ ‘ಇಂಡಿಯಾಬ್’ ಅಧ್ಯಯನದ ಪ್ರಕಾರ, ವಿಶ್ವದಲ್ಲೇ ಅತಿ ಹೆಚ್ಚು ಮಧುಮೇಹ ರೋಗಿಗಳನ್ನು ಹೊಂದಿರುವ ದೇಶಗಳಲ್ಲಿ ಭಾರತವೂ ಒಂದು. ಭಾರತದಲ್ಲಿ ಪ್ರಸ್ತುತ 10.1 ಕೋಟಿಗೂ ಹೆಚ್ಚು ವಯಸ್ಕರು ಮಧುಮೇಹದಿಂದ ಬಳಲುತ್ತಿದ್ದಾರೆ. ಇದಕ್ಕಿಂತ ಆತಂಕಕಾರಿ ವಿಚಾರವೆಂದರೆ, ಸುಮಾರು 13.6 ಕೋಟಿ ಜನರು ಮಧುಮೇಹದ ಅಂಚಿನಲ್ಲಿದ್ದಾರೆ ಅಂದರೆ ಪ್ರೀ-ಡಯಾಬಿಟಿಕ್ ಆಗಿದ್ದಾರೆ. ಜೊತೆಗೆ, ಶೇ. 40ರಷ್ಟು ವಯಸ್ಕರು ಹೊಟ್ಟೆಯ ಬೊಜ್ಜಿನ…

Read More

ಬೆಂಗಳೂರು ; ಮಾಧ್ಯಮ‌ ಸಲಹೆಗಾರ ಹೊಣೆಗಾರಿಕೆ ಹೂವಿನ‌ ಹಾದಿ ಅಲ್ಲ, ಮುಳ್ಳಿನ ಹಾಸಿಗೆ ಇದ್ದ ಹಾಗೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ )ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಬಳಿಕ “ಮಾಧ್ಯಮ-ಸಂವಾದ”ದಲ್ಲಿ ಮಾತನಾಡಿದರು. ಮಾಧ್ಯಮ ಸಲಹೆಗಾರ ಹುದ್ದೆ ಪ್ರತೀ ದಿನ ಸವಾಲಿನದ್ದು. ಬೆಳಗ್ಗೆ ಎದ್ದು ಪತ್ರಿಕೆಗಳನ್ನು ತಿರುವಿ ಹಾಕುವವರೆಗೂ ನನಗೆ ದುಗುಡ ಇದ್ದೇ ಇರುತ್ತದೆ. ಈ ಸವಾಲುಗಳನ್ನು ಪ್ರತೀ ದಿನ ನಿರ್ವಹಿಸುತ್ತಿದ್ದೇನೆ ಎನ್ನುವ ಸಮಾಧಾನ ಕೂಡ ಇದೆ. ಆದರೆ, ನನಗೆ ಒದಗಿ ಬಂದಿರುವ ಹೊಣೆಗಾರಿಕೆ ಬಗ್ಗೆ ನನಗೆ ಯಾವತ್ತೂ ಭ್ರಮ ನಿರಸನ ಆಗಿಲ್ಲ ಎಂದರು. ಸಿಎಂ ಯಾವತ್ತೂ ಹೇಳಿಲ್ಲ ಇವತ್ತಿನವರೆಗೂ ಮುಖ್ಯಮಂತ್ರಿಗಳು ಒಂದು ದಿನ ಕೂಡ, ” ತಮ್ಮ ವಿರುದ್ಧ ಇಂಥಾ ಚಾನಲ್ ನಲ್ಲಿ ಸುದ್ದಿ ಬಂದಿದೆ. ನೋಡು” ಎನ್ನುವ ಒಂದು ಮಾತನ್ನೂ ಹೇಳಿಲ್ಲ. ಮಾಧ್ಯಮ ಸ್ವಾತಂತ್ರ್ಯಕ್ಕೆ ಮುಖ್ಯಮಂತ್ರಿಗಳು ಯಾವತ್ತೂ ಧಕ್ಕೆ…

Read More

ಕೋಲಾರ: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಸಾಲು ಸಾಲು ಅನಾಹುತಗಳು ಸಂಭವಿಸಿವೆ. ಕೋಲಾರ ಜಿಲ್ಲೆಯಲ್ಲಿ ಗಾಳಿಯ ರಭಸಕ್ಕೆ ಮನೆಯೊಂದರ ಮೇಲ್ಛಾವಣಿ ಹಾರಿಹೋಗಿ, ಸಿಮೆಂಟ್ ಇಟ್ಟಿಗೆ ತಲೆಯ ಮೇಲೆ ಬಿದ್ದ ಪರಿಣಾಮ ರೈತರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಹಾಸಂಡಹಳ್ಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದ್ದು, ನಾರಾಯಣಪ್ಪ ಮೃತಪಟ್ಟ ದುರ್ದೈವಿ ರೈತರಾಗಿದ್ದಾರೆ. ಮಳೆಯಿಂದ ರಕ್ಷಿಸಿಕೊಳ್ಳಲು ಹೋಗಿ ಕಳೆದುಕೊಂಡ ಜೀವ ಮೃತ ನಾರಾಯಣಪ್ಪ ಅವರು ಎಂದಿನಂತೆ ತೋಟದ ಕಡೆ ಕುರಿ ಮೇಯಿಸಲು ಹೋಗಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಭಾರಿ ಬಿರುಗಾಳಿ ಸಹಿತ ಮಳೆ ಆರಂಭವಾಗಿದೆ. ಮಳೆಯಿಂದ ರಕ್ಷಿಸಿಕೊಳ್ಳಲು ಅವರು ಸಮೀಪದಲ್ಲಿದ್ದ ಮನೆಯೊಂದರ ಬಳಿ ಆಶ್ರಯ ಪಡೆದು ನಿಂತಿದ್ದರು. ತಲೆಗೆ ಬಿದ್ದ ಸಿಮೆಂಟ್ ಇಟ್ಟಿಗೆ ಆದರೆ, ಗಾಳಿಯ ವೇಗ ಅತಿಯಾಗಿದ್ದರಿಂದ ಆಶ್ರಯ ಪಡೆದಿದ್ದ ಮನೆಯ ಮೇಲ್ಛಾವಣಿ (ಶೀಟ್) ರಭಸಕ್ಕೆ ಹಾರಿಹೋಗಿದೆ. ಈ ವೇಳೆ ಶೀಟ್ ಹಿಡಿದಿಟ್ಟುಕೊಳ್ಳಲು ಇಟ್ಟಿದ್ದ ಸಿಮೆಂಟ್…

Read More

ಶಿವಮೊಗ್ಗ : ಜಿಲ್ಲೆಯ ಸಾಗರ ತಾಲ್ಲೂಕಿನ‌ ಬೇಸೂರು ಗ್ರಾಮದಲ್ಲಿ ಅಣುಸ್ಥಾವರ ಆಗಲು ನಾವು ಬಿಡುವುದಿಲ್ಲ ಹಾಗೂ ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ಮಾಡಲಿ ಸರ್ವಾನುಮತದಿಂದ ನಿರ್ಣಯ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು. ಶುಕ್ರವಾರದಂದು ಜಿ.ಪಂ. ಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶಾಸಕರಾದ ಗೋಪಾಲಕೃಷ್ಣ ಬೇಳೂರು ಮಾತನಾಡಿ, ಮಲೆನಾಡು ಡ್ಯಾಂ ಸೂಕ್ಷ್ಮ ಪ್ರದೇಶದಲ್ಲಿ ಮುಳುಗಡೆಯಾಗಿ ಎರಡು ಬಾರಿ ಜನರುವನಿರಾಶ್ರಿತರಾಗಿ ಈಗಾಗಲೇ ಬೇಸತ್ತಿದ್ದು ಇದೀಗ ಬೇಸೂರು ಅಣುಸ್ಥಾವರ ಪ್ರಸ್ತಾಪದ ಬಗ್ಗೆ ರೈತರು ಬಹಳ ಭಯದಲ್ಲಿದ್ದಾರೆ. ಬೇಸೂರು ಅಣು ಸ್ಥಾವರ ಮಾಡಲು ಸಚಿವರು, ಶಾಸಕರು ಬಿಡುವುದಿಲ್ಲ ಎಂದರು. ಶಾಸಕರು ಮಾತನಾಡಿ, ಇಲ್ಲಿ 90 ಸಾವಿರ ಪ್ರಕರಣ ಬಾಕಿ ಇದ್ದು, ಶಿವಮೊಗ್ಗ ದಲ್ಲಿ ಪೀಠ ಸ್ಥಾಪನೆಯಿಂದ ಮಧ್ಯ ಕರ್ನಾಟಕ ಭಾಗಕ್ಕೆ ಅನುಕೂಲವಾಗಲಿದ್ದು ಸರ್ವಾನುಮತದಿಂದ…

Read More

ಶಿವಮೊಗ್ಗ ; ಜಿಲ್ಲೆಯ ಹೊಳೆಹೊನ್ನೂರು ವ್ಯಾಪ್ತಿಯ ಮತ್ತು ಇತರೆ ಕೆಲವೆಡೆ ಇತ್ತೀಚೆಗೆ ಬಿರುಗಾಳಿ‌ ಮತ್ತು ಮಳೆಯಿಂದಾಗಿ ಅನೇಕ ರೈತರ ಅಡಿಕೆ ಮರಗಳು ಧರೆಗುರುಳಿ ಸಂಭವಿಸಿದ ಹಾನಿಗೆ ಸರ್ಕಾರ ವಿಶೇಷ ಪರಿಹಾರ ಪ್ಯಾಕೇಜ್ ಘೋಷಿಸಬೇಕೆಂದು ಒತ್ತಾಯಿಸಿ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು. ಶುಕ್ರವಾರದಂದು ಜಿ.ಪಂ. ಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಮಾತನಾಡಿ, ಮಳೆಗಾಳಿ ಹಾನಿಗೆ ಎಕರೆಗೆ ರೂ. 9000 ನಿಗದಿಯಿಂದ ರೈತರಿಗೆ ಏನೂ ಉಪಯೋಗವಿಲ್ಲ. ಅಡಿಕೆ ಮರಗಳನ್ನು ಕಳೆದುಕೊಂಡ ರೈತರು ಕಂಗಾಲಾಗಿದ್ದು, ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಒತ್ತಾಯಿಸಿದರು. ಶಾಸಕರಾದ ಶಾರದಾ ಪೂರ್ಯಾನಾಯ್ಕ, ಈ ಬೆಳೆ ನಷ್ಟಕ್ಕೆ ವಿಮೆ ಸೇರ್ಪಡೆಯಾಗುವುದಿಲ್ಲ. ಆದ್ದರಿಂದ ಸೇರ್ಪಡೆಗೊಳಿಸಲು ಸಹ ಕ್ರಮ ಕೈಗೊಳ್ಳಬೇಕೆಂದರು. ಅಪರ ಜಿಲ್ಲಾಧಿಕಾರಿ…

Read More

ಬೆಳಗಾವಿ: ಇಲ್ಲಿನ ಪ್ರಸಿದ್ಧ ಕೆಎಲ್‌ಇ (KLE) ಆಸ್ಪತ್ರೆಯಲ್ಲಿ ಕಳೆದ 40 ವರ್ಷಗಳಿಂದ ವೈದ್ಯಾಧಿಕಾರಿಯಾಗಿ ಸುದೀರ್ಘ ಸೇವೆ ಸಲ್ಲಿಸಿದ್ದ ಹಿರಿಯ ವೈದ್ಯ ಡಾ. ದಿನೇಶ್ ಭಟ್ಕಳ್ (60+) ಅವರು ಶ್ವಾಸಕೋಶ ಕ್ಯಾನ್ಸರ್‌ನ ತೀವ್ರ ನೋವು ತಡೆಯಲಾರದೆ ಮನೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ಟಿಳಕವಾಡಿಯ ಮಂಡೋಲಿ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ರಿವಾಲ್ವಾರ್‌ನಿಂದ ತಲೆಗೆ ಶೂಟ್ ಮಾಡಿಕೊಳ್ಳುವ ಮೂಲಕ ಅವರು ಜೀವನ ಕೊನೆಗಾಣಿಸಿದ್ದಾರೆ. ಕ್ಯಾನ್ಸರ್ ನೋವಿನಿಂದ ಬಳಲಿಕೆ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನವರಾದ ಡಾ. ದಿನೇಶ್ ಭಟ್ಕಳ್, ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯಲ್ಲಿ ವೈದ್ಯರಾಗಿ ಪರಿಚಿತರಾಗಿದ್ದರು. ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಇವರಿಗೆ ಶ್ವಾಸಕೋಶದ ಕ್ಯಾನ್ಸರ್ (Lung Cancer) ಇರುವುದು ಪತ್ತೆಯಾಗಿತ್ತು. ಕ್ಯಾನ್ಸರ್ ಚಿಕಿತ್ಸೆ ಪಡೆಯುವ ಉದ್ದೇಶದಿಂದಲೇ ಅವರು ಬೆಳಗಾವಿಯ ಟಿಳಕವಾಡಿ ಬಳಿ ಬಾಡಿಗೆ ಮನೆ ಮಾಡಿಕೊಂಡು ಕುಟುಂಬದೊಂದಿಗೆ ವಾಸವಿದ್ದರು. ಆದರೆ, ಕಾಯಿಲೆಯ ತೀವ್ರತೆಯಿಂದಾಗಿ ಅವರು ಸಹಿಸಲಾಗದ ದೈಹಿಕ ನೋವನ್ನು ಅನುಭವಿಸುತ್ತಿದ್ದರು ಎನ್ನಲಾಗಿದೆ. ಗ್ಯಾಲರಿಯಲ್ಲಿ ತಲೆಗೆ ಶೂಟ್ ಇಂದು ಮುಂಜಾನೆ ಎದ್ದ…

Read More

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಬೀದರ್ ಮತ್ತು ಕಲಬುರಗಿ ಜಿಲ್ಲಾ ಕೇಂದ್ರಗಳಿಗೆ ಕ್ರಮವಾಗಿ ಜೂನ್ 1 ಮತ್ತು ಜೂನ್ 10ರಿಂದ ಬೆಂಗಳೂರಿನಿಂದ ವಿಮಾನಯಾನ ಸೇವೆಯನ್ನು ಪುನಾರಂಭ ಮಾಡಲಾಗುತ್ತಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಶುಕ್ರವಾರ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಸ್ಟಾರ್ ಏರ್ ಲೈನ್ಸ್ (ಘೋಡಾವತ್ ಎಂಟರ್ಪ್ರೈಸಸ್ ಲಿಮಿಟೆಡ್) ಸಂಸ್ಥೆಯು ಬೆಂಗಳೂರು-ಬೀದರ್- ಬೆಂಗಳೂರು ಮತ್ತು ಬೆಂಗಳೂರು- ಕಲಬುರಗಿ- ಬೆಂಗಳೂರು ಮಾರ್ಗದಲ್ಲಿ ವಿಮಾನಯಾನ ಸೇವೆಯನ್ನು ಒದಗಿಸಲಿದೆ. ಇದಕ್ಕೆ ಬೆಂಬಲ ನೀಡಲು ಸರಕಾರವು 28.47 ಕೋಟಿ ರೂ.ಗಳನ್ನು ‘ವಯಬಲಿಟಿ ಗ್ಯಾಪ್ ಫಂಡಿಂಗ್’ ಆಗಿ ಕೊಡುತ್ತಿದೆ. ಎರಡೂ ಕಡೆಯ ವಿಮಾನ ಪ್ರಯಾಣಕ್ಕೆ ಈಗಾಗಲೇ ಮುಂಗಡ ಬುಕಿಂಗ್ ಕೂಡ ಆರಂಭವಾಗಿದೆ ಎಂದಿದ್ದಾರೆ. ಕಲಬುರಗಿಗೆ ಇದ್ದ ವಿಮಾನಸೇವೆಯು ನಷ್ಟದ ಕಾರಣ ಸ್ಥಗಿತಗೊಂಡಿತ್ತು. ಬೀದರ್ ಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ವಿಶೇಷ ನೆರವಿನಿಂದ ಒಂದು ವಿಮಾನ ಓಡಾಡುತ್ತಿತ್ತು. ಸರಕಾರವು ಕಲ್ಯಾಣ ಕರ್ನಾಟಕ ಭಾಗದ ಕೈಗಾರಿಕೆ, ಶಿಕ್ಷಣ, ಪ್ರವಾಸೋದ್ಯಮ, ಕೃಷಿ, ವಾಣಿಜ್ಯ ವಹಿವಾಟು ಇತ್ಯಾದಿಗಳ ಬೆಳವಣಿಗೆಯನ್ನು…

Read More