Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಡಿ.ಕೆ. ಶಿವಕುಮಾರ್ ಅವರಿಗೆ ಹಾರ್ದಿಕ ಅಭಿನಂದನೆಗಳು ಹಾಗೂ ಅವರ ಅಧಿಕಾರಾವಧಿಗೆ ಶುಭಾಶಯಗಳು. ಅವರು ರಾಜ್ಯದ ಸಮಗ್ರ ಅಭಿವೃದ್ಧಿ ಮತ್ತು ಜನಸಾಮಾನ್ಯರ ಹಿತಕ್ಕಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಲಿ ಎಂದು ಆಶಿಸುತ್ತೇನೆ. ಆದರೆ, ಈ ನಾಯಕತ್ವ ಬದಲಾವಣೆಯಿಂದ ರಾಜ್ಯದ ಜನರಲ್ಲಿ ಯಾವುದೇ ಹೊಸ ಭರವಸೆ ಅಥವಾ ನಿರೀಕ್ಷೆ ಮೂಡಿಲ್ಲ ಎನ್ನುವುದೇ ಇಂದಿನ ಕಹಿ ಸತ್ಯವಾಗಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಲೇವಡಿ ಮಾಡಿದ್ದಾರೆ. ನೂತನ ಸರ್ಕಾರದ ಪ್ರಮಾಣವಚನ ಮುಗಿಯುತ್ತಿದ್ದಂತೆ ಪ್ರಕಟಣೆ ಹೊರಡಿಸಿರುವ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅವರ ಪ್ರಕಟಣೆಯ ಮುಖ್ಯಾಂಶಗಳು ಈ ಕೆಳಗಿನಂತಿವೆ: ಕೇವಲ ಮುಖ್ಯಸ್ಥರು ಬದಲಾಗಿದ್ದಾರೆ, ವ್ಯವಸ್ಥೆಯಲ್ಲ! “ಕಳೆದ ಮೂರು ವರ್ಷಗಳಲ್ಲಿ ಭ್ರಷ್ಟಾಚಾರ, ತಾರತಮ್ಯದ ವರ್ಗಾವಣೆ ದಂಧೆ, ಕಮಿಷನ್ ಸಂಸ್ಕೃತಿ ಮತ್ತು ಸಾಲು ಸಾಲು ಆಡಳಿತ ವೈಫಲ್ಯಗಳಿಂದ ಈ ಸರ್ಕಾರ ಇಡೀ ರಾಜ್ಯವನ್ನು ತೀವ್ರ ಸಂಕಷ್ಟಕ್ಕೆ ತಳ್ಳಿತ್ತು. ಇಂದು ನಡೆದಿರುವ ಪ್ರಕ್ರಿಯೆಯಲ್ಲಿ ಸರ್ಕಾರದ ಮುಖ್ಯಸ್ಥರು…
ಬೆಂಗಳೂರು: ನಾನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಸರ್ಕಾರದಲ್ಲಿ ಸಚಿವನಾಗುತ್ತಿರುವುದಕ್ಕೆ ಅತೀವ ಸಂತಸವಾಗುತ್ತಿದೆ ಎಂದು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬೈರತಿ ಸುರೇಶ್ ಹೇಳಿದ್ದಾರೆ. ಪ್ರಮಾಣವಚನ ಸ್ವೀಕರಿಸಿದ ನಂತರ ಪ್ರತಿಕ್ರಿಯೆ ನೀಡಿರುವ ಅವರು, ಎಐಸಿಸಿ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಣದೀಪ್ ಸುರ್ಜೇವಾಲ, ಕೆ.ಸಿ.ವೇಣುಗೋಪಾಲ್, ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲಾ ಇತರ ನಾಯಕರು ನನ್ನ ಮೇಲೆ ನಂಬಿಕೆ, ವಿಶ್ವಾಸವಿಟ್ಟು ಸಚಿವನನ್ನಾಗಿ ಆಯ್ಕೆ ಮಾಡಿರುವುದಕ್ಕೆ ಧನ್ಯವಾದಗಳನ್ನು ತಿಳಿಸುತ್ತಿದ್ದೇನೆ ಎಂದರು. ಈ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ಈ ಹೊಣೆಗಾರಿಕೆ ಮೂಲಕ ರಾಜ್ಯದ ಜನರ ಸೇವೆಯನ್ನು ಮಾಡುತ್ತೇನೆ. ವಿಶೇಷವಾಗಿ ನನ್ನನ್ನು ಎರಡು ಬಾರಿ ವಿಧಾನಸಭೆಗೆ ಆಯ್ಕೆ ಮಾಡಿರುವ ಹೆಬ್ಬಾಳ ಕ್ಷೇತ್ರದ ಜನತೆಗೆ ಧನ್ಯವಾದಗಳನ್ನು ಅರ್ಪಿಸುತ್ತಿದ್ದೇನೆ ಎಂದು ಹೇಳಿದರು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಖುದ್ದು ದೂರವಾಣಿ ಕರೆ ಮಾಡಿ ಮಂತ್ರಿಯಾಗಿ ಆಯ್ಕೆ ಮಾಡಲಾಗಿದ್ದು, ಪ್ರಮಾಣ ವಚನ ಸ್ವೀಕರಿಸುವಂತೆ ತಿಳಿಸಿದರು. ನಾನು…
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಅಧಿಕೃತವಾಗಿ ಗದ್ದುಗೆಗೇರಿದ ಶ್ರೀ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಜನತೆಗೆ ವಿನಯಪೂರ್ವಕ ವಾಗ್ದಾನವೊಂದನ್ನು ನೀಡಿದ್ದಾರೆ. ಅಧಿಕಾರ ಸ್ವೀಕರಿಸಿದ ತಕ್ಷಣವೇ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದ ಮೂಲಕ ನಾಡಿನ ಜನತೆಯನ್ನುದ್ದೇಶಿಸಿ ಭಾವುಕ ನುಡಿಗಳನ್ನಾಡಿರುವ ಅವರು, ತಮಗೆ ಸಿಕ್ಕಿರುವ ಈ ಜವಾಬ್ದಾರಿಯನ್ನು ಅತ್ಯಂತ ವಿನೀತನಾಗಿ ಸ್ವೀಕರಿಸುವುದಾಗಿ ಹೇಳಿದ್ದಾರೆ. 7 ಕೋಟಿ ಜನತೆಯ ಸೇವೆ ನನ್ನ ಬದುಕಿನ ಭಾಗ್ಯ! ಮುಖ್ಯಮಂತ್ರಿಯಾಗಿ ಜವಾಬ್ದಾರಿ ವಹಿಸಿಕೊಂಡಿರುವ ಕುರಿತು ಹರ್ಷ ವ್ಯಕ್ತಪಡಿಸಿರುವ ಡಿ.ಕೆ. ಶಿವಕುಮಾರ್, “ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ನಾನು ಇಂದು ಪ್ರಮಾಣ ವಚನ ಸ್ವೀಕರಿಸಿದ್ದೇನೆ. ಮುಖ್ಯಮಂತ್ರಿಯಾಗಿ ರಾಜ್ಯದ ಏಳುಕೋಟಿ ಜನತೆಯ ಸೇವೆ ಮಾಡಲು ಒದಗಿ ಬಂದಿರುವ ಈ ಅವಕಾಶ ನನ್ನ ಬದುಕಿನ ಭಾಗ್ಯ ಎಂದು ವಿನೀತನಾಗಿ ಸ್ವೀಕರಿಸಿದ್ದೇನೆ” ಎಂದು ತಿಳಿಸಿದ್ದಾರೆ. ‘ಮನೆ ಮಗನಂತೆ ಕಾಯಾ ವಾಚಾ ಮನಸಾ ಅರ್ಪಿಸಿಕೊಳ್ಳುವೆ’ ತಮ್ಮನ್ನು ರಾಜಕೀಯವಾಗಿ ಈ ಮಟ್ಟಕ್ಕೆ ಬೆಳೆಸಿದ ಜನತೆಗೆ ಧನ್ಯವಾದ ಅರ್ಪಿಸಿರುವ ಅವರು, “ಮನೆ ಮಗನಂತೆ ಹರಸಿ, ಹಾರೈಸಿ ರಾಜಕೀಯ ಕ್ಷೇತ್ರದಲ್ಲಿ ಈ…
ಬೆಂಗಳೂರು: ಕರ್ನಾಟಕ ಕಂಡ ಸಜ್ಜನ ರಾಜಕಾರಣಿ, 2 ಅವಧಿಗೆ ಕೆಪಿಸಿಸಿ ಅಧ್ಯಕ್ಷರಾಗಿ, ಮೂರು ಬಾರಿ ರಾಜ್ಯದ ಗೃಹ ಸಚಿವರಾಗಿ ಮ, ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿ ಗ್ಯಾರಂಟಿ ಯೋಜನೆಗಳನ್ನು ಪರಿಚಯಿಸಿದ, ಕೊರಟಗೆರೆ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾ. ಜಿ.ಪರಮೇಶ್ವರ ಅವರು ಬೆಂಗಳೂರಿನ ಲೋಕಭವನದಲ್ಲಿ ಇಂದು ನಡೆದ ಸಮಾರಂಭದಲ್ಲಿ ರಾಜ್ಯದ ಉಪ ಮುಖ್ಯಮಂತ್ರಿಗಳಾಗಿ ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್.ಅಂಬೇಡ್ಕರ್ ಅವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಶಿಕ್ಷಣ ಭೀಷ್ಮ ಡಾ. ಎಚ್.ಎಂ.ಗಂಗಾಧರಯ್ಯ ಅವರ ಪುತ್ರರಾಗಿರುವ ಜಿ.ಪರಮೇಶ್ವರ ಅವರು ರಾಜಕೀಯ, ಶಿಕ್ಷಣ, ಕ್ರೀಡೆ, ರಾಜಕೀಯ ಹೀಗೆ ವಿವಿಧ ಕ್ಷೇತ್ರಗಳಲ್ಲಿ ರಾಷ್ಟ್ರಮಟ್ಟದಲ್ಲಿ ಹೆಸರುಗಳಿಸಿ ಜನಾನುರಾಗಿ ನಾಯಕರೆನಿಸಿದ್ದಾರೆ. ಸಂವಿಧಾನಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಸಮಾನತೆಯ ತತ್ವವನ್ನು ಜೀವನದುದ್ದಕ್ಕೂ ಪಾಲಿಸಿಕೊಂಡು ಬರುತ್ತಿರುವ ಜಿ.ಪರಮೇಶ್ವರ ಅವರು ಸಾರ್ವಜನಿಕ ಜೀವನದಲ್ಲಿ ಅಜಾತಶತ್ರುವೆಂದೇ ಗುರುತಿಸಲ್ಪಟ್ಟು ಅಭಿಮಾನಿಗಳಿಂದ ಸವ್ಯಸಾಚಿ ಎಂಬ ಬಿರುದಿಗೆ ಪಾತ್ರರಾಗಿದ್ದಾರೆ. ತುಮಕೂರು ಜಿಲ್ಲೆಯ ಗೊಲ್ಲಹಳ್ಳಿಯಲ್ಲಿ 1951ರ ಆಗಸ್ಟ್ 6ರಂದು ಡಾ. ಹೆಚ್.ಎಂ.ಗಂಗಾಧರಯ್ಯ ಮತ್ತು ಗಂಗಮಾಳಮ್ಮ ದಂಪತಿಯ ದ್ವಿತೀಯ ಪುತ್ರರಾಗಿ ಜನಿಸಿದರು. ತಂದೆ…
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಡಿ.ಕೆ. ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ರಾಜಕೀಯ ಜಿದ್ದಾಜಿದ್ದಿ ಹಾಗೂ ಹಳೇ ವೈಷಮ್ಯಗಳನ್ನು ಬದಿಗಿಟ್ಟು, ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವಿಟರ್) ಖಾತೆಯ ಮೂಲಕ ನೂತನ ಮುಖ್ಯಮಂತ್ರಿಗಳಿಗೆ ಶುಭ ಹಾರೈಸಿರುವ ಕುಮಾರಸ್ವಾಮಿ ಅವರು, ನಾಡಿನ ಪ್ರಗತಿಗಾಗಿ ಕೆಲಸ ಮಾಡುವಂತೆ ಮಹತ್ವದ ಸಲಹೆ ನೀಡಿದ್ದಾರೆ. ಹೆಚ್.ಡಿ. ಕುಮಾರಸ್ವಾಮಿ ಅವರ ಎಕ್ಸ್ ಪೋಸ್ಟ್ನಲ್ಲೇನಿದೆ? “ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿರುವ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ತಮಗೆ ದೊರೆತಿರುವ ಈ ಅವಕಾಶವನ್ನು ಜನಪರ ಕೆಲಸಗಳಿಗೆ ಹಾಗೂ ಕರ್ನಾಟಕದ ಅಭಿವೃದ್ಧಿಗೆ ಉಪಯೋಗ ಮಾಡಿಕೊಳ್ಳಿ ಎಂದು ಆಶಿಸುತ್ತೇನೆ.” ಎಂದು ಕೇಂದ್ರ ಸಚಿವರು ಬರೆದುಕೊಂಡಿದ್ದಾರೆ. https://twitter.com/hd_kumaraswamy/status/2062138804878922235 ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ ಸಂದೇಶ ಕನಕಪುರ ಹಾಗೂ ರಾಮನಗರ ಜಿಲ್ಲೆಯ ರಾಜಕಾರಣದಲ್ಲಿ ದಶಕಗಳಿಂದಲೂ ಹೆಚ್.ಡಿ. ಕುಮಾರಸ್ವಾಮಿ ಮತ್ತು ಡಿ.ಕೆ. ಶಿವಕುಮಾರ್ ಪರಸ್ಪರ ರಾಜಕೀಯ ವಿರೋಧಿಗಳಾಗಿಯೇ ಗುರುತಿಸಿಕೊಂಡವರು. ಆದರೆ, ಇಂದು ಡಿ.ಕೆ. ಶಿವಕುಮಾರ್…
ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಇಂದು ಅಧಿಕಾರ ಸ್ವೀಕರಿಸಿದ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಶೇಷವಾಗಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ನೂತನ ಮುಖ್ಯಮಂತ್ರಿಗಳಿಗೆ ಶುಭ ಹಾರೈಸುವುದರ ಜೊತೆಗೆ ರಾಜ್ಯದ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಬೆಂಬಲದ ಭರವಸೆಯನ್ನೂ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಎಕ್ಸ್ ಪೋಸ್ಟ್ನಲ್ಲೇನಿದೆ? “ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ಅವರ ಅಧಿಕಾರಾವಧಿಗೆ ಶುಭಾಶಯಗಳು. ಕೇಂದ್ರವು ಕರ್ನಾಟಕ ಸರ್ಕಾರದೊಂದಿಗೆ ಜನರ ಕಲ್ಯಾಣಕ್ಕಾಗಿ ನಿಕಟವಾಗಿ ಕಾರ್ಯನಿರ್ವಹಿಸಲಿದೆ.” ಎಂದು ಪ್ರಧಾನಿ ಮೋದಿ ಬರೆದುಕೊಂಡಿದ್ದಾರೆ. https://twitter.com/narendramodi/status/2062137482758787134 ರಾಜಕೀಯ ವಲಯದಲ್ಲಿ ಗಮನ ಸೆಳೆದ ಪ್ರಧಾನಿ ಸಂದೇಶ ರಾಜ್ಯದಲ್ಲಿ ನೂತನ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಪ್ರಧಾನಮಂತ್ರಿಯವರು ಮುಖ್ಯಮಂತ್ರಿಗಳಿಗೆ ಶುಭ ಕೋರಿರುವುದು ಮತ್ತು ರಾಜ್ಯದ ಜನರ ಕಲ್ಯಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡುವ…
ಬೆಂಗಳೂರು: ಜಾಗತಿಕವಾಗಿ ಎಬೋಲಾ ವೈರಸ್ ಕಾಯಿಲೆ (Ebola Virus Disease – EVD) ಹರಡುತ್ತಿರುವ ಹಿನ್ನೆಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆಯು (WHO) ಇದನ್ನು ‘ಅಂತರರಾಷ್ಟ್ರೀಯ ಕಳಕಳಿಯ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ’ (PHEIC) ಎಂದು ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಇಡೀ ರಾಜ್ಯಾದ್ಯಂತ ತೀವ್ರ ನಿಗಾ ವಹಿಸಲು ಮತ್ತು ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಅಧಿಕೃತ ಸುತ್ತೋಲೆ ಹೊರಡಿಸಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಸೂಚನೆಯ ಮೇರೆಗೆ ರಾಜ್ಯದ ಎಲ್ಲಾ ಖಾಸಗಿ ವೈದ್ಯಕೀಯ ಸಂಸ್ಥೆಗಳು (KPME), ವೈದ್ಯಕೀಯ ಕಾಲೇಜುಗಳು ಮತ್ತು ಸರ್ಕಾರಿ ಆಸ್ಪತ್ರೆಗಳು ಎಬೋಲಾ ರೋಗದ ಲಕ್ಷಣಗಳಿರುವ ರೋಗಿಗಳ ಮೇಲೆ ತೀವ್ರ ನಿಗಾ ಇಡುವಂತೆ ಆದೇಶಿಸಲಾಗಿದೆ. ಬೆಂಗಳೂರು ಮತ್ತು ಮಂಗಳೂರಿನಲ್ಲಿ ವಿಶೇಷ ಆಸ್ಪತ್ರೆಗಳು ಲಭ್ಯ ಎಬೋಲಾ ಶಂಕಿತ ರೋಗಿಗಳ ಪತ್ತೆ, ತಪಾಸಣೆ ಮತ್ತು ಚಿಕಿತ್ಸೆಗಾಗಿ ಆರೋಗ್ಯ ಇಲಾಖೆಯು ಬೆಂಗಳೂರು ಮತ್ತು ಮಂಗಳೂರಿನ ಪ್ರಮುಖ ಆಸ್ಪತ್ರೆಗಳನ್ನು ಗುರುತಿಸಿದೆ. ಬೆಂಗಳೂರು ಭಾಗ: ಕ್ವಾರಂಟೈನ್ ಸೌಲಭ್ಯ: ಸಾಂಕ್ರಾಮಿಕ ರೋಗಗಳ ಆಸ್ಪತ್ರೆ…
ಬೆಂಗಳೂರು: ಕರ್ನಾಟಕದಲ್ಲಿ ಡಿ.ಕೆ ಶಿವಕುಮಾರ್ ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರ ರಚನೆಯಾಗಿದೆ. 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದರೇ, ಆ ಬಳಿಕ 13 ಮಂದಿ ಶಾಸಕರು ಸಂಪುಟ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಹಾಗಾದ್ರೆ ಡಿ.ಕೆ ಶಿವಕುಮಾರ್ ನೂತನ ಸಂಪುಟ ಸೇರಿದಂತೆ ಶಾಸಕರು ಯಾರೆಲ್ಲ ಅಂತ ಮುಂದೆ ಓದಿ… ಸಂಪುಟ ದರ್ಜೆಯ ಸಚಿವರಾಗಿ ಡಾ.ಜಿ.ಪರಮೇಶ್ವರ್ ಅವರು ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರೇ, ಹಿರಿಯ ಕಾಂಗ್ರೆಸ್ ಶಾಸಕ ವಿ.ಮುನಿಯಪ್ಪ ಅವರು ದೇವರ ಹೆಸರಿನಲ್ಲಿ, ಕೆಜೆ ಜಾರ್ಜ್ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಇನ್ನೂ ಎಂ.ಬಿ ಪಾಟೀಲ್ ಅವರು ವಿಶ್ವಗುರು ಬಸವಣ್ಣ, ಬಸವಾದಿ ಶರಣರು, ಲಿಂಗೈಕ್ಯ ಸಿದ್ದೇಶ್ವರ ಮಹಾಸ್ವಾಮೀಜಿಯ ಹೆಸರಿನಲ್ಲಿ ಪ್ರಮಾಣವಚನವನ್ನು ಸ್ವೀಕರಿಸಿದರು. ಹಿರಿಯ ಶಾಸಕರಾದಂತ ರಾಮಲಿಂಗಾರೆಡ್ಡಿ ಅವರು ಕ್ಯಾಬಿನೆಟ್ ಸಚಿವರಾಗಿ ಯಾವುದೇ ದೇವರ ಹೆಸರು ಹೇಳದೇ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು. ಸತೀಶ್ ಜಾರಕಿಹೊಳಿ ಅವರು ಕ್ಯಾಬಿನೇಟ್ ಸಚಿವರಾಗಿ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರೇ, ಕೃಷ್ಣ ಭೈರೇಗೌಡ ಅವರು ಕ್ಯಾಬಿನೆಟ್ ಸಚಿವರಾಗಿ,…
ಬೆಂಗಳೂರು: ಕರ್ನಾಟಕದಲ್ಲಿ ಡಿ.ಕೆ ಶಿವಕುಮಾರ್ ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರ ರಚನೆಯಾಗಿದೆ. 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದರೇ, ಆ ಬಳಿಕ 13 ಮಂದಿ ಶಾಸಕರು ಸಂಪುಟ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಹಾಗಾದ್ರೆ ಡಿ.ಕೆ ಶಿವಕುಮಾರ್ ನೂತನ ಸಂಪುಟ ಸೇರಿದಂತೆ ಶಾಸಕರು ಯಾರೆಲ್ಲ ಅಂತ ಮುಂದೆ ಓದಿ… ಸಂಪುಟ ದರ್ಜೆಯ ಸಚಿವರಾಗಿ ಡಾ.ಜಿ.ಪರಮೇಶ್ವರ್ ಅವರು ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರೇ, ಹಿರಿಯ ಕಾಂಗ್ರೆಸ್ ಶಾಸಕ ವಿ.ಮುನಿಯಪ್ಪ ಅವರು ದೇವರ ಹೆಸರಿನಲ್ಲಿ, ಕೆಜೆ ಜಾರ್ಜ್ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಇನ್ನೂ ಎಂ.ಬಿ ಪಾಟೀಲ್ ಅವರು ವಿಶ್ವಗುರು ಬಸವಣ್ಣ, ಬಸವಾದಿ ಶರಣರು, ಲಿಂಗೈಕ್ಯ ಸಿದ್ದೇಶ್ವರ ಮಹಾಸ್ವಾಮೀಜಿಯ ಹೆಸರಿನಲ್ಲಿ ಪ್ರಮಾಣವಚನವನ್ನು ಸ್ವೀಕರಿಸಿದರು. ಹಿರಿಯ ಶಾಸಕರಾದಂತ ರಾಮಲಿಂಗಾರೆಡ್ಡಿ ಅವರು ಕ್ಯಾಬಿನೆಟ್ ಸಚಿವರಾಗಿ ಯಾವುದೇ ದೇವರ ಹೆಸರು ಹೇಳದೇ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು. ಸತೀಶ್ ಜಾರಕಿಹೊಳಿ ಅವರು ಕ್ಯಾಬಿನೇಟ್ ಸಚಿವರಾಗಿ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರೇ, ಕೃಷ್ಣ ಭೈರೇಗೌಡ ಅವರು ಕ್ಯಾಬಿನೆಟ್ ಸಚಿವರಾಗಿ,…
ಬೆಂಗಳೂರು: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ ಬಳಿಕ, ಡಾ.ಜಿ ಪರಮೇಶ್ವರ್ ಅವರು ಅಂಬೇಡ್ಕರ್ ಹೆಸರಿನಲ್ಲಿ, ವಿ.ಮುನಿಯಪ್ಪ ಅವರು ದೇವರ ಹೆಸರಿನಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಕರ್ನಾಟಕದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಲೋಕಭವನದಲ್ಲಿ ನಡೆದಂತ ಸರಳ ಸಮಾರಂಭದಲ್ಲಿ ಡಿ.ಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಡಿ.ಕೆ ಶಿವಕುಮಾರ್ ಅವರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದಂತ ಡಿ.ಕೆ ಶಿವಕುಮಾರ್ ಅವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆ ಮೂಲಕ ಇಂದಿನಿಂದ ಡಿ.ಕೆ ಶಿವಕುಮಾರ್ ದರ್ಬಾರ್ ಆರಂಭಗೊಂಡಂತೆ ಆಗಿದೆ. https://kannadanewsnow.com/kannada/d-k-shivakumar-takes-oath-as-the-25th-cm-of-karnataka/













