Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಗುವಾಹಟಿ: ತೀವ್ರ ರಾಜಕೀಯ ಚರ್ಚೆ ಹಾಗೂ ವಿರೋಧದ ನಡುವೆಯೂ ಅಸ್ಸಾಂ ವಿಧಾನಸಭೆಯು ಬುಧವಾರ (ಮೇ 27) ಮಹತ್ವದ ‘ಏಕರೂಪ ನಾಗರಿಕ ಸಂಹಿತೆ’ (UCC) ವಿಧೇಯಕವನ್ನು ಅಂಗೀಕರಿಸಿದೆ. ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (BJP) ಮತ್ತು ಅದರ ಮಿತ್ರಪಕ್ಷಗಳು ಮಸೂದೆಯನ್ನು ಬಲವಾಗಿ ಬೆಂಬಲಿಸಿದರೆ, ಮುಖ್ಯ ಪ್ರತಿಪಕ್ಷವಾದ ಕಾಂಗ್ರೆಸ್ ಸೇರಿದಂತೆ ಇತರ ವಿರೋಧ ಪಕ್ಷಗಳು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದವು. ಉತ್ತರಾಖಂಡ ಮತ್ತು ಗುಜರಾತ್ ಬಳಿಕ ದೇಶದಲ್ಲೇ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರುತ್ತಿರುವ ಮೂರನೇ ರಾಜ್ಯ ಎಂಬ ಹೆಗ್ಗಳಿಕೆಗೆ ಈಗ ಅಸ್ಸಾಂ ಪಾತ್ರವಾಗಿದೆ. ಮಸೂದೆಯ ಮುಖ್ಯ ಉದ್ದೇಶಗಳೇನು? ರಾಜ್ಯದಲ್ಲಿನ ಎಲ್ಲಾ ನಾಗರಿಕರಿಗೂ ಧರ್ಮ ಬೇಧವಿಲ್ಲದೆ ಒಂದೇ ರೀತಿಯ ನಾಗರಿಕ ಕಾನೂನನ್ನು ಅನ್ವಯಿಸುವುದು ಈ ಮಸೂದೆಯ ಪ್ರಮುಖ ಆಶಯವಾಗಿದೆ. ಮುಖ್ಯವಾಗಿ ಕೆಳಗಿನ ವಿಷಯಗಳನ್ನು ಇದು ನಿಯಂತ್ರಿಸುತ್ತದೆ ಮತ್ತು ನಿಯಮಬದ್ಧಗೊಳಿಸುತ್ತದೆ: ವಿವಾಹ ಮತ್ತು ವಿಚ್ಛೇದನ (ಬಾಲ್ಯ ವಿವಾಹ ಹಾಗೂ ಬಹುಪತ್ನಿತ್ವಕ್ಕೆ ನಿಷೇಧ) ಆಸ್ತಿ ಉತ್ತರಾಧಿಕಾರ ಮತ್ತು ಹಕ್ಕುಗಳು ಸಹಜೀವನ (ಲೈವ್-ಇನ್ ರಿಲೇಶನ್ಶಿಪ್) ಸಂಬಂಧಗಳ ಕಡ್ಡಾಯ ನೋಂದಣಿ…
ಬೆಂಗಳೂರು: ಪಕ್ಷದ ಶಿಸ್ತು ಮತ್ತು ಜವಾಬ್ದಾರಿಯ ವಿಷಯದಲ್ಲಿ ಕಠಿಣ ನಿಲುವು ತಳೆದಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಸಭೆಗೆ ಗೈರುಹಾಜರಾದ ಪದಾಧಿಕಾರಿಗಳಿಗೆ ತಕ್ಷಣವೇ ‘ಗೇಟ್ ಪಾಸ್’ ನೀಡುವ ಮೂಲಕ ಬೃಹತ್ ಶಾಕ್ ನೀಡಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಲಾ ಅವರ ಕಟ್ಟುನಿಟ್ಟಿನ ಸೂಚನೆಯ ಬೆನ್ನಲ್ಲೇ ಈ ನಾಯಕರನ್ನು ಪಕ್ಷದ ಹುದ್ದೆಗಳಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ ಕೈಬಿಡಲಾಗಿದೆ ಎಂದು ಅಧಿಕೃತ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಹುದ್ದೆ ಕಳೆದುಕೊಂಡ ಪ್ರಮುಖ ನಾಯಕರು ಯಾರು? ಪಕ್ಷ ಸಂಘಟನೆಯ ಅತ್ಯಂತ ಪ್ರಮುಖ ಸಭೆಯನ್ನು ಅಲಕ್ಷಿಸಿ ಗೈರಾದ ಹಿನ್ನೆಲೆಯಲ್ಲಿ ಮೂವರು ಕೆಪಿಸಿಸಿ ಉಪಾಧ್ಯಕ್ಷರು ಹಾಗೂ 29 ಪ್ರಧಾನ ಕಾರ್ಯದರ್ಶಿಗಳು ತಮ್ಮ ಹುದ್ದೆಗಳನ್ನು ಕಳೆದುಕೊಂಡಿದ್ದಾರೆ. ಇವರಲ್ಲಿ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಹಲವು ಪ್ರಮುಖ ಮುಖಗಳೂ ಸೇರಿವೆ: ನಿಕೇತ್ ರಾಜ್ ಮೌರ್ಯ (ಕೆಪಿಸಿಸಿ ವಕ್ತಾರ) ಭಾವನಾ ರಾಮಣ್ಣ (ಖ್ಯಾತ ನಟಿ ಹಾಗೂ ಕೆಪಿಸಿಸಿ ಪದಾಧಿಕಾರಿ) ಶಿವಮೂರ್ತಿ ನಾಯಕ್ ಎಂ.ಸಿ. ವೇಣುಗೋಪಾಲ್ ಷಣ್ಮುಖ…
ನವದೆಹಲಿ: ಕಳೆದ ಕೆಲವು ತಿಂಗಳುಗಳಿಂದ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಕೆ ಕಂಡು, ಜನಸಾಮಾನ್ಯರಿಗೆ ಕೇವಲ ‘ಕನಸಿನ ಲೋಹ’ವಾಗಿ ಮಾರ್ಪಟ್ಟಿದ್ದ ಬಂಗಾರದ ಬೆಲೆಯಲ್ಲಿ ಈಗ ಭಾರಿ ಕುಸಿತ ಕಂಡುಬಂದಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ಹಠಾತ್ ಆರ್ಥಿಕ ಸ್ಥಿತ್ಯಂತರಗಳು ಹಾಗೂ ಪಶ್ಚಿಮ ಏಷ್ಯಾ ವಲಯದಲ್ಲಿ ಅಮೆರಿಕ-ಇರಾನ್ ನಡುವೆ ಕದನ ವಿರಾಮ ಏರ್ಪಡುವ ಬಲವಾದ ಮುನ್ಸೂಚನೆಗಳ ಹಿನ್ನೆಲೆಯಲ್ಲಿ ಹಳದಿ ಲೋಹದ ಬೆಲೆ ತಲ್ಲಣಗೊಂಡಿದೆ. ಪ್ರತಿ 10 ಗ್ರಾಂ ಚಿನ್ನದ ದರದಲ್ಲಿ ಬರೋಬ್ಬರಿ 2,800 ರೂಪಾಯಿಗಳಷ್ಟು ದಾಖಲೆಯ ಇಳಿಕೆಯಾಗಿದ್ದು, ಸದ್ಯ ಮಾರುಕಟ್ಟೆಯಲ್ಲಿ ಹತ್ತು ಗ್ರಾಂ ಅಪರಂಜಿ ಚಿನ್ನದ ಬೆಲೆ 1,62,000 ರೂಪಾಯಿ (1.62 ಲಕ್ಷ ರೂ.) ಮಟ್ಟಕ್ಕೆ ಬಂದು ತಲುಪಿದೆ. ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡಗಳು ಕರಗುತ್ತಿರುವುದು ಮತ್ತು ಜಾಗತಿಕ ಹೂಡಿಕೆದಾರರು ಸುರಕ್ಷಿತ ಆಶ್ರಯತಾಣವಾಗಿದ್ದ ಚಿನ್ನದ ಮಾರುಕಟ್ಟೆಯಿಂದ ಹಣವನ್ನು ಹಿಂತೆಗೆದುಕೊಂಡು ಷೇರು ಮಾರುಕಟ್ಟೆಯತ್ತ ಮುಖ ಮಾಡುತ್ತಿರುವುದು ಈ ಭಾರಿ ದರ ಕುಸಿತಕ್ಕೆ ಪ್ರಮುಖ ಕಾರಣ ಎಂದು ಆರ್ಥಿಕ ತಜ್ಞರು ವಿಶ್ಲೇಷಿಸಿದ್ದಾರೆ. 1. ಶಾಂತಿ ಒಪ್ಪಂದದ ಮಾತುಕತೆ ಬಿರುಸು; ಚಿನ್ನದ ಮಾರುಕಟ್ಟೆ…
ದಾವಣಗೆರೆ: ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ನಕಲಿ ಆ್ಯಪ್ ಸೃಷ್ಟಿಸಿ ಸಾರ್ವಜನಿಕರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದ ಅಂತರರಾಜ್ಯ ಸೈಬರ್ ವಂಚಕರ ಜಾಲದ ಪ್ರಮುಖ ಆರೋಪಿಯನ್ನು ದಾವಣಗೆರೆ ಸಿಇಎನ್ (ಸೈಬರ್ ಆರ್ಥಿಕ ಮತ್ತು ಮಾದಕದ್ರವ್ಯ ಅಪರಾಧಗಳು) ಠಾಣೆ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ತಮಿಳುನಾಡಿನ ಮಧುರೈ ನಿವಾಸಿಯಾದ ಚೆಲ್ಲಪಂಡಿ ಸುಬ್ರಹ್ಮಣಿ (42) ಬಂಧಿತ ಮುಖ್ಯ ಆರೋಪಿಯಾಗಿದ್ದಾನೆ. ಈ ವಂಚನೆ ಜಾಲದಲ್ಲಿ ಭಾಗಿಯಾಗಿರುವ ಹರಿಯಾಣ, ಮಹಾರಾಷ್ಟ್ರ ಸೇರಿದಂತೆ ದೇಶದ ವಿವಿಧೆಡೆ ತಲೆಮರೆಸಿಕೊಂಡಿರುವ ಇತರ ಆರೋಪಿಗಳ ಪತ್ತೆಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ವಂಚನೆಯ ಜಾಲ ಹೆಣೆದದ್ದು ಹೇಗೆ? ಆರೋಪಿಗಳು ‘ನಾವಾಬಿಟ್.ಇನ್’ (Navabit.in) ಹೆಸರಿನಲ್ಲಿ ನಕಲಿ ಜಾಲತಾಣ ಹಾಗೂ ಮೊಬೈಲ್ ಆ್ಯಪ್ ಒಂದನ್ನು ರೂಪಿಸಿದ್ದರು. ಇದರಲ್ಲಿ ಕನಿಷ್ಠ 10,000 ರೂಪಾಯಿ ಹೂಡಿಕೆ ಮಾಡಿದರೆ, ಅದನ್ನು ಕ್ರಿಪ್ಟೋ ಕರೆನ್ಸಿಯಾಗಿ ಪರಿವರ್ತಿಸಿ ದಿನಕ್ಕೆ 300 ರಿಂದ 400 ರೂಪಾಯಿಗಳವರೆಗೆ ಲಾಭಾಂಶ ನೀಡುವುದಾಗಿ ಸಾರ್ವಜನಿಕರನ್ನು ನಂಬಿಸಿದ್ದರು. ಆರಂಭದಲ್ಲಿ ಹೂಡಿಕೆದಾರರ ಬ್ಯಾಂಕ್ ಖಾತೆಗಳಿಗೆ ನಿಯಮಿತವಾಗಿ ಹಣ ಜಮೆ ಮಾಡುವ ಮೂಲಕ ಜನರ ವಿಶ್ವಾಸ ಗಳಿಸಿದ್ದರು.…
ಧಾರವಾಡ: ನಗರದ ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ತರಸಿನಕೊಪ್ಪ ಏರಿಯಾದಲ್ಲಿ (ಟ್ರಿಪಲ್ ಐಟಿ ಹತ್ತಿರ) ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಭೀಕರ ಸಂಘರ್ಷ ಏರ್ಪಟ್ಟಿದ್ದು, ಏಕಾಏಕಿ ಗುಂಡಿನ ದಾಳಿ ನಡೆಸಿರುವ ಗಂಭೀರ ಘಟನೆ ಸಂಭವಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಪೋಲೀಸ ಕಮೀಷನರ್ ಎನ್.ಶಶಿಕುಮಾರ ತಿಳಿಸಿದ್ದಾರೆ. ಘಟನೆಯ ವಿವರ: ಮೇ 26ರಂದು ಮಧ್ಯಾಹ್ನ ಸುಮಾರು 12:30ರ ವೇಳೆಗೆ ಈ ಘಟನೆ ನಡೆದಿದೆ. “ನಾವು ಜಮೀನು ಖರೀದಿ ಮಾಡಿದ್ದೇವೆ, ಇದನ್ನು ಅಭಿವೃದ್ಧಿಪಡಿಸುತ್ತೇವೆ” ಎಂದು ಹೇಳಿಕೊಂಡು ಒಂದು ಗುಂಪು ಸ್ಥಳಕ್ಕೆ ತೆರಳಿತ್ತು. ಈ ವೇಳೆ ಆ ಜಮೀನಿನ ಸ್ವಾಧೀನದಲ್ಲಿದ್ದ (పೊಸೆಷನ್) ಕುಟುಂಬಸ್ಥರು ಮತ್ತು ಅವರ ಸಂಬಂಧಿಕರು ಇದನ್ನು ತೀವ್ರವಾಗಿ ವಿರೋಧಿಸಿದ್ದಾರೆ. ಈ ಸಂದರ್ಭದಲ್ಲಿ ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ತಿರುಗಿದೆ. ಆ ವೇಳೆ ಸ್ಥಳಕ್ಕೆ ಬಂದಿದ್ದ ವ್ಯಕ್ತಿಗಳು ತಮಗಿದ್ದ ಪಿಸ್ತೂಲ್ ಮತ್ತು ರಿವಾಲ್ವರ್ ಬಳಸಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಯುವಕನಿಗೆ ಗಂಭೀರ…
ಬೆಂಗಳೂರು: ಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರೂ ಅವರ ಪಾತ್ರ ದೊಡ್ದದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಅವರು ಇಂದು ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಮಾಜಿ ಪ್ರಧಾನಮಂತ್ರಿ ಜವಾಹರಲಾಲ್ ನೆಹರು ಅವರ ಪುಣ್ಯ ಸ್ಮರಣೆ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡಿ ಮಾತನಾಡಿದರು. ದೇಶದಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಿದರು ನೆಹರೂ ಅವರು ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರದ ಮೊದಲ ಪ್ರಧಾನಮಂತ್ರಿಗಳಾಗಿ 17 ವರ್ಷಗಳ ಕಾಲ ಜನರ ಸೇವೆ ಮಾಡಿದ್ದಾರೆ. ಸಮಾಜವಾದಿ ಮತ್ತು ಮಿಶ್ರ ಆರ್ಥಿಕತೆಗೆ ಹೆಚ್ಚು ಒತ್ತು ನೀಡಿ ಬೃಹತ್ ಅಣೆಕಟ್ಟುಗಳ ನಿರ್ಮಾಣ, ಶಿಕ್ಷಣ, ಸಹಕಾರ ಕ್ಷೇತ್ರಗಳಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸಲು ನೆಹರೂ ಅವರು ಕಾರಣಕರ್ತರು ಎಂದರು. ನೆಹರೂ ಅವರ ಹಾದಿಯಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಪಂಚವಾರ್ಷಿಕ ಯೋಜನೆಗಳನ್ನು ರೂಪಿಸಿ ದೇಶದ ಪ್ರಗತಿಯನ್ನು ವೈಜ್ಞಾನಿಕವಾಗಿ ಸಾಧಿಸುವ ಪ್ರಯತ್ನ ಮಾಡಿದ್ದರು. ಅವರು ಅಗಲಿ 62 ವರ್ಷಗಳಾಗಿವೆ. ಈ ಸಂದರ್ಭದಲ್ಲಿ ಅವರನ್ನು ಸ್ಮರಿಸಿ ಅವರ ಹಾದಿಯಲ್ಲಿ ನಡೆಯುವ ಪ್ರಾಮಾಣಿಕ…
ಬೆಂಗಳೂರು: ರಾಷ್ಟ್ರ ನಿರ್ಮಾಣದಲ್ಲಿ ಹಗಲಿರುಳು ಶ್ರಮಿಸುತ್ತಿರುವ ಕಾರ್ಮಿಕ ವರ್ಗದ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಘೋಷಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರ್ಮಿಕರ ದೀರ್ಘಕಾಲದ ಬೇಡಿಕೆಗೆ ಮನ್ನಣೆ ನೀಡಿದ್ದಾರೆ. ರಾಜ್ಯದ ವಿವಿಧ ವಲಯಗಳಲ್ಲಿ ದುಡಿಯುತ್ತಿರುವ ಕಾರ್ಮಿಕರ ಕನಿಷ್ಠ ವೇತನವನ್ನು ಸರಾಸರಿ ಶೇಕಡಾ 60 ರಷ್ಟು ಭಾರಿ ಹೆಚ್ಚಳ ಮಾಡಿ ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ. ಸರ್ಕಾರದ ಈ ಮಹತ್ವದ ನಿರ್ಧಾರದಿಂದಾಗಿ ಇ-ಕಾಮರ್ಸ್, ಕೊರಿಯರ್ ಸಂಸ್ಥೆಗಳು, ಖಾಸಗಿ ಶಾಲೆ-ಕಾಲೇಜುಗಳ ಬೋಧಕೇತರ ಸಿಬ್ಬಂದಿ, ಆಸ್ಪತ್ರೆ, ಹೋಟೆಲ್, ಆಹಾರ ಸಂಸ್ಕರಣೆ, ಪೆಟ್ರೋಲ್ ಬಂಕ್, ಧಾರ್ಮಿಕ ಸಂಸ್ಥೆಗಳು ಹಾಗೂ ಖಾಸಗಿ ಫೈನಾನ್ಸ್ ಸೇರಿದಂತೆ ಒಟ್ಟು 83ಕ್ಕೂ ಅಧಿಕ ಅನುಸೂಚಿತ ಉದ್ಯೋಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಲಕ್ಷಾಂತರ ಕಾರ್ಮಿಕರಿಗೆ ನೇರ ಅನುಕೂಲವಾಗಲಿದೆ. ವೇತನ ನಿಗದಿಗೆ ಹೊಸ ವಲಯಗಳ ರಚನೆ ವೇತನ ನಿಗದಿ ಮತ್ತು ಪರಿಷ್ಕರಣೆಯನ್ನು ಸರಳಗೊಳಿಸಲು ಸರ್ಕಾರ ಈ ಹಿಂದೆ ಇದ್ದ 4 ವಲಯಗಳ ಪದ್ಧತಿಯನ್ನು ಕೈಬಿಟ್ಟು, ಹೊಸದಾಗಿ 3 ವಲಯಗಳನ್ನು ರಚಿಸಿದೆ. ವಲಯ-1: ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಪ್ರದೇಶಗಳು. ವಲಯ-2: ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳು.…
ಮಂಡ್ಯ : ಯಾರೇ ಜನಪ್ರತಿನಿಧಿಗಳು, ದೊಡ್ಡ ವ್ಯಕ್ತಿಗಳು, ನಮ್ಮ ಸಂಬಂಧಿಕರೇ ಸರ್ಕಾರಿ ಜಮೀನು, ಗೋಮಾಳ, ಸ್ಮಶಾನ ಜಾಗಗಳನ್ನು ಒತ್ತುವರಿ ಮಾಡಿದ್ದರೇ ಯಾವುದೇ ಮುಲಾಜಿಲ್ಲದೆ ತೆರವು ಕಾರ್ಯಾಚರಣೆ ಮಾಡಬೇಕು ಇಲ್ಲದಿದ್ದರೆ ಕರ್ತವ್ಯಲೋಪ ಎಸಗುವ ಅಧಿಕಾರಿಗಳ ವಿರುದ್ದ ತಲೆದಂಡವಾಗುವುದು ಶತಸಿದ್ಧ ಎಂದು ಶಾಸಕ ಕೆ.ಎಂ.ಉದಯ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಮದ್ದೂರು ತಾಲೂಕಿನ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿಗಳು, ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ತಾಲೂಕಿನ ಹಲವಾರು ಗ್ರಾಮಗಳಲ್ಲಿ ಸುಮಾರು ವರ್ಷಗಳಿಂದ ಸರ್ಕಾರಿ ಜಮೀನುಗಳು ಒತ್ತುವರಿಯಾಗಿದ್ದು, ಇದನ್ನು ತೆರವು ಮಾಡುವ ಬಗ್ಗೆ ಪಿಡಿಓ ಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಕಂದಾಯ, ಸರ್ವೆ, ಹಾಗೂ ಪೋಲೀಸ್ ಇಲಾಖೆ ಸಹಯೋಗದೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ಒತ್ತುವರಿ ತೆರವುಗೊಳಿಸಿ ತಮ್ಮ ಸುಪರ್ದಿಗೆ ತೆಗೆದುಕೊಳ್ಳಬೇಕೆಂದು ಸೂಚನೆ ನೀಡಿದರು. ಯಾವುದೇ ಗ್ರಾಮಗಳಲ್ಲಿಯೂ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಗಮನಹರಿಸಬೇಕು ಹಾಗೂ ಅಗತ್ಯ ಮುನ್ನೆಚ್ಚೆರಿಕೆ ಕ್ರಮ ಕೈಗೊಳ್ಳಬೇಕು. ಆಶ್ರಯ ಯೋಜನೆಯಡಿ ತಾಲೂಕು ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಸುಮಾರು…
ಮಂಡ್ಯ : ಜಲಮೂಲಗಳ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು, ಹೀಗಾಗಿ ಕ್ಷೇತ್ರದಲ್ಲಿ ವಿಶೇಷವಾಗಿ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ ಎಂದು ಶಾಸಕ ಕೆ.ಎಂ.ಉದಯ್ ಮಂಗಳವಾರ ಹೇಳಿದರು. ಮದ್ದೂರು ನಗರದ ಕೊಲ್ಲಿ ವೃತ್ತದ ಬಳಿ ಶಿಂಷಾ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆ ವತಿಯಿಂದ ಅಂದಾಜು 4.50 ಕೋಟಿ ರೂ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣಕ್ಕೆ ಚಾಲನೆ ನೀಡಿ ಮಾತನಾಡಿದರು. ಸಕಲ ಜೀವಿಗಳಿಗೆ ನೀರು ಅತ್ಯವಶ್ಯಕವಾಗಿದ್ದು, ನಮ್ಮ ಹಿರಿಯರು ಉಳಿಸಿರುವ ಜಲ ಮೂಲಗಳನ್ನು ಸಂರಕ್ಷಿಸಿ ಭವಿಷ್ಯದ ಪೀಳಿಗೆಗೂ ಉಳಿಸಬೇಕಾಗಿದೆ. ಶಿಂಷಾ ಬಲ ದಂಡೆ ನಾಲಾ ವ್ಯಾಪ್ತಿಯ ಕೆರೆಗಳಿಗೆ ತಗ್ಗಹಳ್ಳಿ ಅಣೆಯಿಂದ ನೀರನ್ನು ಪೂರೈಸಲಾಗುತ್ತಿದೆ. ಆದರೆ, ನಾಲೆಗಳ ದುಸ್ಥಿತಿಯಿಂದಾಗಿ ಕೊನೆ ಭಾಗದ ಕೆ.ಹಾಗಲಹಳ್ಳಿ ಕೆರೆಗೆ ನೀರು ತುಂಬಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಕೆ.ಕೋಡಿಹಳ್ಳಿ ಏತ ನೀರಾವರಿ ಯೋಜನೆ ಬಳಿ ಚೆಕ್ ಡ್ಯಾಂ ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು, ಇದರಿಂದ ಸೋಮನಹಳ್ಳಿ, ರುದ್ರಾಕ್ಷಿಪುರ, ತೈಲೂರು ಕೆರೆಗಳು ಭರ್ತಿಯಾಗಿ ಬಳಿಕ ಆಲೂರು, ನೀಲಕಂನಹಳ್ಳಿ, ಕೆ.ಹಾಗಲಹಳ್ಳಿ ಕೆರೆಗಳು ಭರ್ತಿಯಾಗಲಿದ್ದು, ಇದರ…
ಮಂಡ್ಯ: ಹೆಂಡತಿಯ ಮುಂದೆ ತಾನು ದೊಡ್ಡ ಶ್ರೀಮಂತ ಎಂದು ಬಿಲ್ಡಪ್ ಕೊಟ್ಟು ‘ಸ್ಟೇಟಸ್’ ಕಾಯ್ದುಕೊಳ್ಳಲು ಹೋಗಿ, ಕೊನೆಗೆ ಪೊಲೀಸರ ಅತಿಥಿಯಾದ ಖತರ್ನಾಕ್ ಕಳ್ಳನೊಬ್ಬನ ರೋಚಕ ಕಥೆಯಿದು! ಮಂಡ್ಯ ಜಿಲ್ಲೆಯ ಕಿರುಗಾವಲು ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ನಾಲ್ವರು ನಟೋರಿಯಸ್ ಸರಗಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಳವಳ್ಳಿ ತಾಲ್ಲೂಕಿನ ತಳಗವಾದಿ ಗ್ರಾಮದ ಗುರುಪ್ರಸಾದ್ ಅಲಿಯಾಸ್ ಗುರು (36), ರೋಹಿತ್ ಅಲಿಯಾಸ್ ಗೆದ್ವಾ (20), ನಂಜೇಗೌಡ ಅಲಿಯಾಸ್ ಕಾಶಿ (19) ಹಾಗೂ ಮಣಿಗೆರೆ ಗ್ರಾಮದ ಮಾದೇಶ ಅಲಿಯಾಸ್ ಮಾದ (20) ಬಂಧಿತ ಆರೋಪಿಗಳು. ಹೆಂಡತಿ ಎದುರು ಬಿಲ್ಡಪ್ಗಾಗಿ ಕಳ್ಳತನ! ಬಂಧಿತರ ಪೈಕಿ ಪ್ರಮುಖ ಆರೋಪಿಯಾದ ಗುರುಪ್ರಸಾದ್, ತನ್ನ ಹೆಂಡತಿಯ ಮುಂದೆ ತಾನು ಅತ್ಯಂತ ಶ್ರೀಮಂತ ಎನ್ನುವುದನ್ನು ತೋರಿಸಿಕೊಳ್ಳುವ ಹಪಾಹಪಿಗೆ ಬಿದ್ದು ಈ ದಾರಿಗೆ ಇಳಿದಿದ್ದ. ಸುಲಭವಾಗಿ ಹಣ ಸಂಪಾದಿಸಿ ಐಷಾರಾಮಿ ಜೀವನ ನಡೆಸಲು ಉಳಿದ ಯುವಕರೊಂದಿಗೆ ಗ್ಯಾಂಗ್ ಕಟ್ಟಿಕೊಂಡು ಸರಗಳ್ಳತನ ಮಾಡಲು ಶುರು ಮಾಡಿದ್ದ ಎನ್ನಲಾಗಿದೆ. ಒಂಟಿ ಮಹಿಳೆಯರೇ ಇವರ ಟಾರ್ಗೆಟ್: ಈ ಖತರ್ನಾಕ್…














