Subscribe to Updates
Get the latest creative news from FooBar about art, design and business.
Author: kannadanewsnow09
ಇಂದೋರ್: ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ಕಲುಷಿತ ನೀರು ಸೇವಿಸಿ ಅತಿಸಾರ ಮತ್ತು ವಾಂತಿಯಿಂದ ಇದುವರೆಗೆ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಅದರ ಮೇಯರ್ ಪುಷ್ಯಮಿತ್ರ ಭಾರ್ಗವ ಬುಧವಾರ ದೃಢಪಡಿಸಿದರು. ಭಾಗೀರಥಪುರ ಪ್ರದೇಶದಲ್ಲಿ ಅತಿಸಾರದಿಂದ ಮೂರು ಸಾವುಗಳು ಸಂಭವಿಸಿವೆ ಎಂದು ಆರೋಗ್ಯ ಇಲಾಖೆ ವರದಿ ಮಾಡಿದೆ. ಆದರೆ ನನಗೆ ತಿಳಿದ ಮಟ್ಟಿಗೆ, ಈ ಕಾಯಿಲೆಯಿಂದ ಬಳಲುತ್ತಿರುವ ಇನ್ನೂ ನಾಲ್ಕು ಜನರನ್ನು ಆಸ್ಪತ್ರೆಗಳಿಗೆ ಕರೆತರಲಾಯಿತು ಮತ್ತು ಅವರು ಸಹ ಸಾವನ್ನಪ್ಪಿದರು ಎಂದು ಅವರು ವರದಿಗಾರರಿಗೆ ತಿಳಿಸಿದರು. ಪ್ರಾಥಮಿಕ ಅಂದಾಜಿನ ಪ್ರಕಾರ ಸೋರಿಕೆಯಿಂದಾಗಿ ಒಳಚರಂಡಿ ನೀರು ಕುಡಿಯುವ ನೀರಿನ ಪೈಪ್ಲೈನ್ಗೆ ಪ್ರವೇಶಿಸಿದೆ, ಇದು ಭಾಗೀರಥಪುರ ಪ್ರದೇಶದಲ್ಲಿ ಅತಿಸಾರ ಮತ್ತು ವಾಂತಿ ಹರಡಲು ಕಾರಣವಾಯಿತು ಎಂದು ಭಾರ್ಗವ ಹೇಳಿದರು. ಏತನ್ಮಧ್ಯೆ, ಕಲುಷಿತ ಕುಡಿಯುವ ನೀರಿನಿಂದ ಉಂಟಾದ ಅತಿಸಾರದಿಂದ ನಾಲ್ಕು ಸಾವುಗಳು ಸಂಭವಿಸಿವೆ ಎಂದು ವೈದ್ಯರು ದೃಢಪಡಿಸಿದ್ದಾರೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಶಿವಂ ವರ್ಮಾ ಹೇಳಿದರು. ಈ ಕಾಯಿಲೆಯಿಂದ ಬಳಲುತ್ತಿರುವ 149 ರೋಗಿಗಳನ್ನು ನಗರದಾದ್ಯಂತ 27 ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ…
ಬೆಂಗಳೂರು : ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ ‘ಟೇಲ್ಸ್ ಬೈ ಪರಿ’ ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ ಬೆಂಗಳೂರಿನ ಪುಟ್ಟ ಲೇಖಕಿ ಪರಿಣಿತಾ ಬಿ. ಪ್ರತಿಷ್ಠಿತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವಕ್ಕೆ ಪಾತ್ರಳಾಗಿದ್ದಾಳೆ. ಬಸವನಗುಡಿಯ ಎನ್ಇಟಿ ಪಬ್ಲಿಕ್ ಶಾಲೆಯಲ್ಲಿ 4ನೇ ತರಗತಿ ಓದುತ್ತಿರುವ ಪರಿಣಿತಾ ಬರೆದಿರುವ ಪುಸಕ್ತ ‘ಟೇಲ್ಸ್ ಬೈ ಪರಿ’. ಈಗ ಪ್ರತಿಷ್ಠಿತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ಸೇರ್ಪಡೆಗೊಂಡಿದ್ದು, “ಯುವ ಲೇಖಕಿ” ಎಂಬ ಮನ್ನಣೆಯನ್ನೂ ತಂದುಕೊಟ್ಟಿದೆ. ಪರಿಣಿತಾಳ ಮೊದಲ ಕಥಾ ಪುಸ್ತಕ ‘ಟೇಲ್ಸ್ ಬೈ ಪರಿ’ 2025ರ ಮಾರ್ಚ್ 8 ರಂದು ಲೋಕಾರ್ಪಣೆಗೊಂಡಿತ್ತು. ಸುಬ್ಬು ಪಬ್ಲಿಕೇಷನ್ಸ್ ಪ್ರಕಟಿಸಿದ್ದ ಪುಸ್ತಕವು ಪರಿಣಿತಾ ಅವರ ಪ್ರತಿಭೆ ಹಾಗೂ ಸಾಹಿತ್ಯ ಆಸಕ್ತಿಯನ್ನು ಗುರುತಿಸುವಂತೆ ಮಾಡಿತ್ತು, ಪರಿಣಿತಾ ಅವರನ್ನು ಶಿಕ್ಷಕರು ಹಾಗೂ ಅನೇಕ ಗಣ್ಯರು ಮೆಚ್ಚಿಕೊಂಡಿದ್ದಾರೆ. ಸಾಹಿತ್ಯ ಓದು, ಬರಹದಲ್ಲಿ ಬಾಲ್ಯದಿಂದಲೇ ಆಸಕ್ತಿ ಬೆಳೆಸಿಕೊಂಡಿರುವ ಪರಿಣಿತಾ, ಸ್ವಂತಿಕೆ, ಅಭಿವ್ಯಕ್ತಿ ಮತ್ತು ಕಥೆ ಹೆಣೆಯುವಿಕೆಯಲ್ಲಿ ತನ್ನದೇ ಶೈಲಿಯನ್ನು ರೂಪಿಸಿಕೊಂಡಿದ್ದಾಳೆ. ಕಥಾ…
ಸಾಗರ : ಹೊರರಾಜ್ಯಗಳಿಂದ ಬರುವ ಐಎಎಸ್ ಐಪಿಎಸ್ ಅಧಿಕಾರಿಗಳು ಕನ್ನಡ ಕಲಿತು ಚನ್ನಾಗಿ ಮಾತನಾಡುತ್ತಾರೆ. ಕನ್ನಡಿಗರೆ ಆಗಿರುವ ಅಧಿಕಾರಿಗಳು ಕನ್ನಡ ಮಾತನಾಡಲು ಹಿಂದೆಮುಂದೆ ನೋಡುತ್ತಾರೆ. ಕನ್ನಡಿಗರು ಕನ್ನಡವನ್ನು ಗರ್ವದಿಂದ ಬಳಸುವ ಜೊತೆಗೆ ಉಳಿಸಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಕರೆ ನೀಡಿದರು. ಮಂಗಳವಾರದಂದು ಶಿವಮೊಗ್ಗ ಜಿಲ್ಲೆಯ ಸಾಗರದ ಸರ್ಕಾರಿ ನೌಕರರ ಭವನದಲ್ಲಿ, ನೌಕರರ ಸಂಘದಿಂದ ಏರ್ಪಡಿಸಿದ್ದಂತ ಕನ್ನಡ ರಾಜ್ಯೋತ್ಸವ, ನೌಕರರ ಸಮಾವೇಶ, ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದಂತ ಅವರು, ಕನ್ನಡ ಸುಂದರ ಭಾಷೆ. ಕಚೇರಿಗಳಲ್ಲಿ ಕನ್ನಡ ಭಾಷೆ ಬಳಕೆ ಕಡ್ಡಾಯವಾದರೆ ರಾಜ್ಯದಲ್ಲಿ ಕನ್ನಡ ಭಾಷೆ ವಿಜೃಂಭಿಸುತ್ತಿದೆ. ಕನ್ನಡಿಗರು ಕನ್ನಡವನ್ನು ಗರ್ವದಿಂದ ಬಳಸುವ ಜೊತೆಗೆ ಉಳಿಸಬೇಕು. ಸರ್ಕಾರಿ ನೌಕರ ಸಂಘ ಈ ನಿಟ್ಟಿನಲ್ಲಿ ಪ್ರಯತ್ನ ನಡೆಸುವುದು ಕಾರ್ಯಾಂಗ ಮತ್ತು ಶಾಸಕಾಂಗ ಒಟ್ಟಾಗಿ ನಡೆದರೆ ಸರ್ಕಾರದ ಯೋಜನೆಗಳನ್ನು ತಳಮಟ್ಟದ ಜನರಿಗೆ ತಲುಪಿಸಲು ಸಾಧ್ಯ ಎಂದರು. ಸಾಗರ ತಾಲ್ಲೂಕಿನ ಅಧಿಕಾರಿ ನೌಕರರು ಜನರಿಗೆ ಉತ್ತಮ ಸೇವೆ ಕೊಡಿ. ಜನರ…
ರಾಜಸ್ಥಾನ: ರಾಜಸ್ಥಾನ ಪೊಲೀಸರು ಬುಧವಾರ ಟೋಂಕ್ ಜಿಲ್ಲೆಯ ಬರೋನಿಯಲ್ಲಿ 150 ಕೆಜಿ ಸ್ಫೋಟಕ ವಸ್ತುಗಳು, ಫ್ಯೂಸ್ ವೈರ್ಗಳು ಮತ್ತು ಕಾರ್ಟ್ರಿಡ್ಜ್ನೊಂದಿಗೆ ಕಾರನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸ್ಫೋಟಕ ವಸ್ತುವು ಅಮೋನಿಯಂ ನೈಟ್ರೇಟ್ ಎಂದು ನಂಬಲಾಗಿದೆ. ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಹೊಸ ವರ್ಷದ ಆಚರಣೆಗೆ ಮುಂಚಿತವಾಗಿ ಈ ವಶಪಡಿಸಿಕೊಳ್ಳುವಿಕೆಯು ದೊಡ್ಡ ಭೀತಿಯಾಗಿತ್ತು.
ನವದೆಹಲಿ: ಭಾರತೀಯ ರೈಲ್ವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಮಗ್ರ ಹಾಗೂ ಪ್ರಯಾಣಿಕ-ಕೇಂದ್ರಿತ ಡಿಜಿಟಲ್ ವೇದಿಕೆಯಾಗಿರುವ ರೈಲ್ಒನ್ ಮೊಬೈಲ್ ಆ್ಯಪ್ ಅನ್ನು ಆರಂಭಿಸಿದೆ. ಒಂದೇ ಇಂಟರ್ಫೇಸ್ನಡಿ ವಿವಿಧ ರೈಲ್ವೆ ಸೇವೆಗಳನ್ನು ಒಗ್ಗೂಡಿಸುವ ಈ ಆ್ಯಪ್, ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲತೆ, ಪಾರದರ್ಶಕತೆ ಹಾಗೂ ಕಾರ್ಯಕ್ಷಮತೆಯನ್ನು ಒದಗಿಸುವುದೇ ಇದರ ಉದ್ದೇಶವಾಗಿದೆ. ಪ್ರಯಾಣಿಕರು ಈ ಏಕೀಕೃತ ಸೇವೆಗಳ ಪ್ರಯೋಜನ ಪಡೆಯಲು ರೈಲ್ಒನ್ ಆ್ಯಪ್ ಅನ್ನು ಡೌನ್ಲೋಡ್ ಮಾಡಿ ಬಳಸುವಂತೆ ವಿನಂತಿಸಲಾಗಿದೆ. ರೈಲ್ಒನ್ ಆ್ಯಪ್ ಮೂಲಕ ಪ್ರಯಾಣಿಕರು ಕಾಯ್ದಿರಿಸಿದ ಹಾಗೂ ಕಾಯ್ದಿರಿಸದ ಟಿಕೆಟ್ಗಳು, ಜೊತೆಗೆ ಪ್ಲಾಟ್ಫಾರ್ಮ್ ಟಿಕೆಟ್ಗಳನ್ನು ಸುಲಭವಾಗಿ ಬುಕ್ ಮಾಡಬಹುದು. ಅಲ್ಲದೆ, ರೈಲುಗಳನ್ನು ಹುಡುಕಲು, ಪ್ರಯಾಣದ ಯೋಜನೆ, ಮತ್ತು ಪಿಎನ್ಆರ್ ಸ್ಥಿತಿಯ ನೇರ ಮಾಹಿತಿಯನ್ನು ಪಡೆಯುವ ಸೌಲಭ್ಯವೂ ಈ ಆ್ಯಪ್ನಲ್ಲಿ ಲಭ್ಯವಿದ್ದು, ಪ್ರಯಾಣವನ್ನು ಸುಗಮವಾಗಿ ನಿರ್ವಹಿಸಲು ಸಹಕಾರಿಯಾಗಿದೆ. ಸುಗಮ ಪ್ರಯಾಣದ ಅನುಭವಕ್ಕಾಗಿ ರೈಲ್ಒನ್ ಆ್ಯಪ್ನಲ್ಲಿ ರೈಲಿನ ಪ್ರಸ್ತುತ ಚಲನಾ ಸ್ಥಿತಿ, ಕೋಚ್ ಸ್ಥಾನದ ಮಾಹಿತಿ, ಹಾಗೂ ರೈಲು ಎಲ್ಲಿದೆ ಎಂಬುದನ್ನು ಪರಿಶೀಲಿಸುವ ಸೌಲಭ್ಯಗಳನ್ನು ಒದಗಿಸಲಾಗಿದೆ, ಇದರಿಂದ ಪ್ರಯಾಣಿಕರು ನಿಲ್ದಾಣಗಳಲ್ಲಿ…
ಜನವರಿ 1 ರಂದು ಬೆಳಿಗ್ಗೆ ಎದ್ದಾಗ ಈ ಮಾತನ್ನು 3 ಬಾರಿ ಹೇಳಿದರೆ, ಮುಂದಿನ ವರ್ಷ ನಿಮಗೆ ಯಾವುದೇ ತೊಂದರೆಯಾಗದಂತೆ ದೇವರು ಖಾತ್ರಿಪಡಿಸುತ್ತಾನೆ.ಕ ಷ್ಟಗಳನ್ನು ಪರಿಹರಿಸಲು ವಿಷ್ಣು ಸಹಸ್ರ ಮಂತ್ರವಾಗಿದೆ. 2025 ನೇ ವರ್ಷವು ಇಂದು ಕೊನೆಗೊಳ್ಳುತ್ತದೆ. ನಾಳೆ ಹೊಸ ವರ್ಷವನ್ನು ಸ್ವಾಗತಿಸಲು ನಾವೆಲ್ಲರೂ ಕಾಯುತ್ತಿದ್ದೇವೆ. ಈ ದಿನದಂದು ನಾವು ಮಾಡಬಹುದಾದ ಪೂಜೆಯು 2026 ರ ವರ್ಷವಿಡೀ ನಮಗೆ ಉತ್ತಮ ಫಲಿತಾಂಶಗಳನ್ನು ನೀಡುತ್ತದೆ ಮತ್ತು ಈ ವರ್ಷದ ಎಲ್ಲಾ ಕಷ್ಟಗಳು ಇಂದು ನಮ್ಮನ್ನು ಹಾದುಹೋಗಲಿ. ಹುಟ್ಟಲಿರುವ ಹೊಸ ವರ್ಷವು ಎಲ್ಲರಿಗೂ ಹೊಸ ವಸಂತವನ್ನು ತರಲಿ, ಮತ್ತು ದೇವರ ಆಶೀರ್ವಾದವು ಎಲ್ಲರಿಗೂ ನೆರವೇರಲಿ ಎಂಬ ಪ್ರಾರ್ಥನೆಯೊಂದಿಗೆ ಇಂದಿನ ಆಧ್ಯಾತ್ಮಿಕ ಪೋಸ್ಟ್ಗೆ ಪ್ರಯಾಣಿಸೋಣ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ.…
ಬೆಂಗಳೂರು: ಶ್ರೀಲಂಕಾ ಪತ್ರಕರ್ತರ ನಿಯೋಗವು ಕರ್ನಾಟಕ ಮಾಹಿತಿ ಹಕ್ಕು ಆಯೋಗಕ್ಕೆ ಭೇಟಿ ನೀಡಿ ಸಂವಾದ ನಡೆಸಿತು. ಕರ್ನಾಟಕ ಪ್ರವಾಸದಲ್ಲಿರುವ ನಿಯೋಗ, ಮಾಹಿತಿ ಹಕ್ಕು ಆಯೋಗಕ್ಕೆ ಸೌಹಾರ್ದಯುತವಾಗಿ ಭೇಟಿ ಹಲವು ವಿಷಯಗಳ ಮೇಲೆ ಚರ್ಚೆ ನಡೆಸಿತು. ಕರ್ನಾಟಕದಲ್ಲಿ ಮಾಹಿತಿ ಹಕ್ಕು ಆಯೋಗ ಕಳೆದ ಎರಡು ದಶಕಗಳಲ್ಲಿ ಹೇಗೆ ಕ್ರೀಯಾಶೀಲವಾಗಿ ಕೆಲಸ ಮಾಡುತ್ತಿದೆ ಎನ್ನುವುದನ್ನು ಆಯೋಗದ ಪ್ರಭಾರಿ ಮುಖ್ಯ ಆಯುಕ್ತರಾದ ಕೆ.ರಾಮನ್, ಆಯುಕ್ತರುಗಳಾದ ರಾಜಶೇಖರ್, ರುದ್ರಣ್ಣ ಹರ್ತಿಕೋಟೆ, ಮಮತಾ ಮತ್ತು ಬದ್ರುದ್ದೀನ್ ಅವರು ಮಾಹಿತಿ ನೀಡಿದರು. ಶ್ರೀಲಂಕಾದಲ್ಲಿ ಕಳೆದ 3 ವರ್ಷಗಳಿಂದ ಮಾಹಿತಿ ಹಕ್ಕು ಆಯೋಗ (ಆರ್ಟಿಐ)ಪ್ರಾರಂಭವಾಗಿದೆ ಎಂದು ಶ್ರೀಲಂಕಾ ಅಧ್ಯಕ್ಷರ ಮಾಧ್ಯಮ ಮಾಜಿ ಕಾರ್ಯದರ್ಶಿ ಮತ್ತು ನಿಶ್ಚಿನಾಂತು ಆಲ್ವೀಸ್ ಹಾಗೂ ಹಿರಿಯ ಪತ್ರಕರ್ತ ಪಾತುಮ್ ಪಾಸ್ಕೂಲ್ ಅವರು ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು, ಪತ್ರಕರ್ತರ ಸಂಘದ ಹೋರಾಟ ಕಾರಣದಿಂದ ಪತ್ರಕರ್ತರಿಗೆ ಬಸ್ ಪಾಸ್, ಮಾಸಾಶನ ಸೇರಿದಂತೆ ಹಲವು ಸೌಲಭ್ಯ ಕಲ್ಪಿಸಿದೆ ಎನ್ನುವ ಮಾಹಿತಿಯನ್ನು ನೀಡಿದರು. ಇದಕ್ಕೆ…
ಮಂಡ್ಯ : ಶತಮಾನಗಳ ಸಿಟ್ಟನ್ನು ಸಿಡಿಮದ್ದಾಗಿಸಿಕೊಂಡು ಸಿದ್ದ ನಾಕಾ ನೇತೃತ್ವದಲ್ಲಿ ಯುದ್ಧ ಗೆದ್ದ ಭೀಮ ಕೋರೆಗಾಂವ್ ಯುದ್ಧವೀರರನ್ನು ನೆನೆಯಬೇಕಿದೆ. ಈ ಹಿನ್ನಲೆಯಲ್ಲಿ ಜ.1ರಂದು ಮದ್ದೂರು ತಾಲೂಕಿನ ಎಲ್ಲಾ ಶೋಷಿತ ಸಮುದಾಯದವರು 208 ನೇ ಭೀಮ ಕೋರೆಗಾಂವ್ ಕದನ ವಿಜಯೋತ್ಸವ ಆಚರಣೆಯಲ್ಲಿ ಭಾಗವಹಿಸಬೇಕೆಂದು ಜಿ.ಪಂ ಮಾಜಿ ಅಧ್ಯಕ್ಷ ಸುರೇಶ್ ಕಂಠಿ ಮಂಗಳವಾರ ಹೇಳಿದರು. ಜ.1 ಗುರುವಾರ ಬೆಳಿಗ್ಗೆ 9 ಗಂಟೆಗೆ ಮದ್ದೂರು ನಗರದ ನಗರಸಭೆ ಮುಂಭಾಗದ ಬಾಬಾ ಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಲಾಗುವುದು ಎಂದರು. ಭಾರತದಲ್ಲಿ ನಡೆದಿರುವ ಸಾವಿರಾರು ಯುದ್ಧಗಳ ಪೈಕಿ ಭೀಮಾ ಕೋರೆಗಾಂವ್ ಯುದ್ಧದ ವಿಜಯವು ಜಗತ್ತೇ ನಿಬ್ಬೆರಗಾಗುವಂತೆ ಮಾಡಿದ್ದಲ್ಲದೆ ಆ ಯುದ್ಧವು ಮುಂದಿನ ತಲೆಮಾರಿಗಳಿಗೆ ಸ್ವಾಭಿಮಾನದ ಪ್ರತೀಕವಾಗಿ ಶಾಶ್ವತವಾಗಿ ಉಳಿದು ಬಿಟ್ಟಿದೆ. ಕೇವಲ 500ಮಂದಿ ಮಹಾರ್ ಸೈನಿಕರು 28 ಸಾವಿರ ಜಾತಿವಾದಿ ಪೇಶ್ವೆ ಸೈನಿಕರನ್ನು ಸೆದೆಬಡಿದ ಭಾರತದ ಸ್ವಾಭಿಮಾನದ ಇತಿಹಾಸವನ್ನು ಸಾರಿ ಸಾರಿ ಹೇಳುವಂತಿದೆ. ಹೀಗಾಗಿ 1 ಜನವರಿ 1818…
ಬ್ರಾಹ್ಮಣ ಭೋಜನ ಪ್ರಿಯಃ”, ಬರೀ ಇದೊಂದೇ ಸಾಲು ಮಾತ್ರನಾ ಇರೋದು,? ಖಂಡಿತಾ ಇಲ್ಲ ಬ್ರಾಹ್ಮಣ ಭೋಜನ ಪ್ರಿಯ: ಬ್ರಾಹ್ಮಣರಿಗೆ ಭೋಜನ ಮಾಡಿಸಿದರೆ ಸಕಲ ದೇವತೆಗಳೂ ತೃಪ್ತರಾಗುತ್ತಾರೆ ತುಂಬಾ ಜನ ಇದನ್ನು ಕೊಂಕು ಮಾತಾಗಿ ಉಪಯೋಗಿಸುತ್ತೀರಾ..! ಸರಿಯಾಗಿ ಅರ್ಥ ತಿಳಿದುಕೊಂಡು ಮಾತನಾಡುವುದು ಒಳಿತು.. TODAY ಯಾರೋ ಒಬ್ಬರು ದೇವಾಲಯದಲ್ಲಿ ಮಾತಾಡುತ್ತಿದ್ದನ್ನು ಕೇಳಿಸಿಕೊಂಡಿದಕ್ಕಾಗಿ ಹಾಕುತ್ತಿದ್ದೇನೆ..( ಬರೆದವರ ಹೆಸರು ಗೊತ್ತಿಲ್ಲ. ಅವರಿಗೆ ಧನ್ಯವಾದಗಳು) ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ…
ಬೆಂಗಳೂರು: ಪ್ರಸ್ತುತ 108 – ಆರೋಗ್ಯ ಕವಚ ಆಂಬುಲೆನ್ಸ್ ಸೇವೆಯನ್ನು ಒಡಂಬಡಿಕೆ ಮಾದರಿಯಲ್ಲಿ ನಿರ್ವಹಣೆ ಮಾಡುತ್ತಿದ್ದು, ಸೇವೆಯ ಕುರಿತು ಸಾರ್ವಜನಿಕರಿಂದ ಹಲವಾರು ಆಕ್ಷೇಪಣೆಗಳು, ಸಮಸ್ಯೆಗಳು ದಾಖಲಾಗಿದ್ದರಿಂದ, ಸನ್ಮಾನ್ಯ ಮುಖ್ಯಮಂತ್ರಿಗಳು 2025-26 ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಸರ್ಕಾರದ ವತಿಯಿಂದಲೇ ಆರೋಗ್ಯ ಕವಚ-108 ನಿರ್ವಹಣೆ ಮಾಡಲು ಆರೋಗ್ಯ ಇಲಾಖೆ ಸಕಲ ಸಿದ್ಧತೆ ನಡೆಸುತ್ತಿದೆ. ಅವಶ್ಯಕವಾದ ತಂತ್ರಜ್ಞಾನ, ಕಮಾಂಡ್ ಕಂಟ್ರೋಲ್ ಸೆಂಟರ್, ಅದಕ್ಕೆ ಬೇಕಾದ ಮಾನವ ಸಂಪನ್ಮೂಲ ಸೇರಿದಂತೆ ಎಲ್ಲಾ ಸಿದ್ಧತೆಗಳು ಅಂತಿಮ ಹಂತ ತಲುಪಿದೆ. ಸದ್ಯದಲ್ಲಿಯೇ ಸರ್ಕಾರದ ವತಿಯಿಂದ ರಾಜ್ಯದಾದ್ಯಂತ ಆಂಬ್ಯುಲೆನ್ಸ್ ಸೇವೆ ಪ್ರಾರಂಭಗೊಳ್ಳಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳಡಿಯಲ್ಲಿ ಒಟ್ಟಾರೆ 1841 ಆಂಬ್ಯುಲೆನ್ಸ್ ಲಭ್ಯವಿದ್ದು, ಇದರಲ್ಲಿ 108-ಆರೋಗ್ಯ ಕವಚ ಕಾರ್ಯಕ್ರಮದಡಿಯಲ್ಲಿ ಒಟ್ಟು 715 ಆಂಬ್ಯುಲೆನ್ಸ್ಗಳು ಹಾಗೂ ರಾಜ್ಯ ವಲಯದ 1126 ಆಂಬ್ಯುಲೆನ್ಸ್ಗಳು ಲಭ್ಯವಿದೆ. ಮಾನದಂಡಗಳನ್ವಯ ಹಾಲಿ ಜನಸಂಖ್ಯೆಗೆ 813 ಆಂಬ್ಯುಲೆನ್ಸ್ಗಳು ಅಗತ್ಯವಿದ್ದು, ಇತರೆ ಇಲಾಖೆಯ ಆಂಬ್ಯುಲೆನ್ಸ್ಗಳನ್ನು ಹೊರತುಪಡಿಸಿ ಆರೋಗ್ಯ…














