Author: kannadanewsnow09

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಉಪಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆಗಳು. ಶಿವಕುಮಾರ್ ಅವರ ಸಂಘಟನಾ ಚಾತುರ್ಯ, ಸೈದ್ಧಾಂತಿಕ ಬದ್ದತೆ ಮತ್ತು ಕಠಿಣ ಶ್ರಮ ನಮ್ಮ ಪಕ್ಷದ ಎಲ್ಲ ಯುವನಾಯಕರಿಗೆ ಮಾದರಿಯಾದುದು ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ವಿರೋಧ ಪಕ್ಷವಾದ ಬಿಜೆಪಿ ಸುಳ್ಳು ಕೇಸ್ ಗಳನ್ನು ಹಾಕಿ ಬಗೆಬಗೆಯ ಕಿರುಕಳ ನೀಡಿದರೂ ಶಿವಕುಮಾರ್ ಅವರು ಮಣಿಯದೆ ಪಕ್ಷಕ್ಕೆ ನಿಷ್ಠರಾಗಿ ಉಳಿದಿರುವುದು ಕಾಂಗ್ರೆಸ್ ಪಕ್ಷದ ಬಗ್ಗೆ ಅವರಲ್ಲಿರುವ ರಾಜಿಯಿಲ್ಲದ ನಿಷ್ಠೆಗೆ ಸಾಕ್ಷಿಯಾಗಿದೆ.. ಇದು ಕಾಂಗ್ರೆಸ್ ಪಕ್ಷದ ಲಕ್ಷಾಂತರ ಕಾರ್ಯಕರ್ತರಿಗೆ ಸ್ಪೂರ್ತಿದಾಯಕ ನಡವಳಿಕೆ ಆಗಿದೆ ಎಂದಿದ್ದಾರೆ. ಕೋಮುವಾದಿ ಶಕ್ತಿಗಳನ್ನು ಸೋಲಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಜೊತೆಯಲ್ಲಿ ಡಿ.ಕೆ. ಶಿವಕುಮಾರ್ ಹಗಲಿರುಳು ದುಡಿದಿದ್ದಾರೆ. ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿ ಮತ್ತೆ ಕಟ್ಟುವಲ್ಲಿ ಶಿವಕುಮಾರ್ ನನ್ನ ಹೆಗಲಿಗೆ ಹೆಗಲಾಗಿ ನಿಂತಿದ್ದಾರೆ ಅಂತ ತಿಳಿಸಿದ್ದಾರೆ. ನನಗಿಂತ ಕಿರಿಯರಾದ ಶಿವಕುಮಾರ್ ಅವರಿಗೆ…

Read More

ಬೆಂಗಳೂರು: ರಾಜ್ಯ ವಿಧಾನ ಪರಿಷತ್ತಿನ ಖಾಲಿ ಇರುವ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷವು (ಬಿಜೆಪಿ) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಮೂಲಕ ಮುಂಬರುವ ಚುನಾವಣಾ ಕಣಕ್ಕೆ ಭರ್ಜರಿ ಸಿದ್ಧತೆ ನಡೆಸುವುದರ ಜೊತೆಗೆ, ಸಂಭಾವ್ಯ ಅಭ್ಯರ್ಥಿಗಳ ನಡುವಿನ ಕುತೂಹಲಕ್ಕೆ ತೆರೆ ಎಳೆದಿದೆ. ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯು ಒಟ್ಟು ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಪ್ರಮುಖವಾಗಿ ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಮಾಜಿ ಸದಸ್ಯ ಸುಶೀಲ್ ನಮೋಶಿ ಅವರಿಗೆ ಮತ್ತೊಮ್ಮೆ ಟಿಕೆಟ್ ನೀಡಲಾಗಿದೆ. ಶಿಕ್ಷಣ ಕ್ಷೇತ್ರದಲ್ಲಿನ ಅವರ ಸುದೀರ್ಘ ಅನುಭವ ಮತ್ತು ಪ್ರಭಾವವನ್ನು ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇನ್ನುಳಿದಂತೆ, ಪೂರ್ವ ಪದವೀಧರ ಕ್ಷೇತ್ರಕ್ಕೆ ಹಿರಿಯ ನಾಯಕ ಎಸ್.ವಿ. ಸಂಕನೂರ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಸಂಕನೂರ್ ಅವರು ಈ ಹಿಂದೆಯೂ ಪದವೀಧರರ ಸಮಸ್ಯೆಗಳ ಪರವಾಗಿ ಧ್ವನಿ ಎತ್ತಿದ ಹಿನ್ನೆಲೆ ಅವರಿಗೆ ಮಣೆ ಹಾಕಲಾಗಿದೆ. ಹಾಗೆಯೇ, ಆಗ್ನೇಯ ಪದವೀಧರ ಕ್ಷೇತ್ರದ ಅಭ್ಯರ್ಥಿಯಾಗಿ ಕೆ.ಎಂ. ಸುರೇಶ್ ಅವರಿಗೆ ಟಿಕೆಟ್…

Read More

ವಿಧಾನಸಭೆ : ಮರ ಕಡಿತಲೆಯನ್ನು ಒಳಗೊಂಡ ಯಾವುದೇ ರಸ್ತೆ ಯೋಜನೆಯಲ್ಲಿ ಕಡಿಯುವ ಒಂದು ಮರದ ಬದಲಿಗೆ 10 ಪಟ್ಟು ಸಸಿ ನೆಡಲು ವಿಧಿಸುವ ಶುಲ್ಕದ ಮೊದ ಪ್ರತಿ ಸಸಿಗೆ 411.27 ಆಗಿದ್ದು, ಇದನ್ನು ಉಪಯೋಗಿ ಸಂಸ್ಥೆ ಪಾವತಿಸಬೇಕಾಗುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ವಿಧಾನಸಭೆಗಿಂದು ಸ್ಪಷ್ಟಪಡಿಸಿದ್ದಾರೆ. ಸದಸ್ಯ ತಮ್ಮಯ್ಯ ಎಚ್.ಡಿ. ಅವರು ರಾ.ಹೆ.373 ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಶುಲ್ಕ ವಿನಾಯಿತಿ ನೀಡುವ ಕುರಿತಂತೆ ಗಮನ ಸೆಳೆದ ಪ್ರಸ್ತಾಪಕ್ಕೆ, ಉತ್ತರಿಸಿದ ಸಚಿವರು, ಬೆಳೆದ ಮರಗಳನ್ನು ಕಡಿಯುವುದನ್ನು ಒಳಗೊಂಡ ರಸ್ತೆ ಯೋಜನೆಗಳ ವಿಚಾರದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್.ಎಚ್.ಎ.ಐ.)ಗೆ ಪ್ರತಿ ಕಿ.ಮೀ.ಗೆ 9.06 ಲಕ್ಷ ಶುಲ್ಕ ವಿಧಿಸಲಾಗಿರುತ್ತದೆ. ಆದರೆ ಎನ್.ಎಚ್.ಎ.ಐ.ನ ವಿಸ್ತೃತ ಯೋಜನಾ ವರದಿಯಲ್ಲಿ ಈ 9 ಲಕ್ಷ ಸೇರಿಸಿ, ಗುತ್ತಿಗೆದಾರರ ಕಡೆಯಿಂದಲೇ ಸಸಿ ನೆಡಿಸುವ ಕೆಲಸ ಮಾಡುತ್ತಿದ್ದು, ಇದಕ್ಕೆ ಮಾತ್ರ ವಿನಾಯಿತಿ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು. ಎನ್.ಎಚ್.ಎ.ಐ.ಗೆ ಈಗ ನೀಡಿರುವ ಈ ವಿನಾಯಿತಿಯ ಪರಾಮರ್ಶೆ ಮಾಡಲಾಗುತ್ತಿದ್ದು,…

Read More

ಬೆಂಗಳೂರು: ವಿಧಾನ ಪರಿಷತ್ ಖಾಲಿ ಸ್ಥಾನಗಳ ಚುನಾವಣೆಗೆ ಬಿಜೆಪಿಯಿಂದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಆ ಮೂಲಕ ಭರ್ಜರಿ ಸಿದ್ಧತೆಯನ್ನು ಬಿಜೆಪಿ ಮಾಡಿದೆ. ಇಂದು ಬಿಜೆಪಿಯಿಂದ ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಈಶಾನ್ಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸುಶೀಲ್ ನಮೋಶಿಗೆ ಟಿಕೆಟ್ ನೀಡಲಾಗಿದೆ. ಇನ್ನೂ ಪೂರ್ವ ಪದವೀಧರ ಕ್ಷೇತ್ರಕ್ಕೆ ಎಸ್.ವಿ ಸಂಕನೂರ್ ಅವರನ್ನು ಕಣಕ್ಕೆ ಇಳಿಸಿದ್ದರೇ, ಆಗ್ನೇಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕೆ.ಎಂ ಸುರೇಶ್ ಗೆ ಟಿಕೆಟ್ ಘೋಷಣೆಯನ್ನು ಬಿಜೆಪಿ ಮಾಡಿದೆ. https://kannadanewsnow.com/kannada/ias-training-absent-mlc-ramesh-babu-draws-governments-attention/ https://kannadanewsnow.com/kannada/there-is-no-exemption-from-the-fee-charged-for-planting-10-saplings-for-cutting-down-1-tree-minister-ishwar-khandre-clarifies/

Read More

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಸಂಬಂಧಿಸಿದಂತೆ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ನಂತರ ಇನ್ನೂ 783 ಸೀಟು ಉಳಿದಿದ್ದು, ಅವುಗಳ ಹಂಚಿಕೆಗೆ ಮಾ.11ರಂದು ಮತ್ತೊಂದು ಸುತ್ತಿನ ಕೌನ್ಸೆಲಿಂಗ್ ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ತಿಳಿಸಿದ್ದಾರೆ. ಇದುವರೆಗೂ ಯಾವುದೇ ಸುತ್ತಿನಲ್ಲಿ ಸೀಟು ಹಂಚಿಕೆಯಾಗದವರು ಇದರ ಉಪಯೋಗ ಪಡೆಯಬಹುದು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಯಾವ ಕಾಲೇಜಿನಲ್ಲಿ, ಯಾವ ಕೋರ್ಸ್ ನ ಸೀಟು ಉಳಿದಿವೆ ಹಾಗೂ ಅದರ ಶುಲ್ಕ ಎಷ್ಟು ಎನ್ನುವುದನ್ನು ಕೆಇಎ ವೆಬ್‌ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ತಮಗೆ ಯಾವ ಕೋರ್ಸ್ ಇಷ್ಟ ಇದೆಯೊ ಅದರ ಪೂರ್ಣ ಶುಲ್ಕದ ಡಿ.ಡಿ ಅಥವಾ ಚೆಕ್ ಸಮೇತ ಮಾರ್ಚ್ 11ರಂದು ಮಧ್ಯಾಹ್ನ 3 ಗಂಟೆಯೊಳಗೆ ಮಲ್ಲೇಶ್ವರದ ಕೆಇಎ ಕಚೇರಿಗೆ ಬಂದು ಸಲ್ಲಿಸಬೇಕು. ಡಿ.ಡಿ ಅಥವಾ ಚೆಕ್ ಅನ್ನು ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಮಲ್ಲೇಶ್ವರ, ಬೆಂಗಳೂರು- ಇವರ ಹೆಸರಿನಲ್ಲಿ ಪಡೆಯಬೇಕು ಎಂದು ಅವರು ಸಲಹೆ‌ ನೀಡಿದ್ದಾರೆ…

Read More

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ‘ಜಲ ಜೀವನ್ ಮಿಷನ್’ (JJM) ಯೋಜನೆಯನ್ನು ಮರುಸಂಘಟಿಸಿ, ‘ಜಲ ಜೀವನ್ ಮಿಷನ್ 2.0’ ಅನುಷ್ಠಾನಕ್ಕೆ ಮಹತ್ವದ ಅನುಮೋದನೆ ನೀಡಿದೆ. ಈ ಯೋಜನೆಯು ಇನ್ನು ಮುಂದೆ ಕೇವಲ ಮೂಲಸೌಕರ್ಯ ನಿರ್ಮಾಣಕ್ಕೆ ಸೀಮಿತವಾಗದೆ, ಮನೆ ಮನೆಗೆ ನಿರಂತರ ಮತ್ತು ಸುಸ್ಥಿರ ನೀರು ಸರಬರಾಜು ಮಾಡುವ ‘ಸೇವಾ ವಿತರಣೆ’ಯ ಮೇಲೆ ಕೇಂದ್ರೀಕರಿಸಲಿದೆ. ಯೋಜನೆಯ ಪ್ರಮುಖ ಮುಖ್ಯಾಂಶಗಳು: ಬೃಹತ್ ಅನುದಾನ: ಯೋಜನೆಯ ಒಟ್ಟು ವೆಚ್ಚವನ್ನು ₹8.69 ಲಕ್ಷ ಕೋಟಿಗೆ ಏರಿಸಲಾಗಿದೆ. ಇದರಲ್ಲಿ ಕೇಂದ್ರ ಸರ್ಕಾರದ ಪಾಲು ₹3.59 ಲಕ್ಷ ಕೋಟಿ ಇರಲಿದ್ದು, ಈ ಹಿಂದೆ ಘೋಷಿಸಿದ್ದಕ್ಕಿಂತ ₹1.51 ಲಕ್ಷ ಕೋಟಿ ಹೆಚ್ಚುವರಿ ಧನಸಹಾಯವನ್ನು ಒದಗಿಸಲಾಗುತ್ತಿದೆ. ‘ಸುಜಲಂ ಭಾರತ್’ ಡಿಜಿಟಲ್ ಚೌಕಟ್ಟು: ರಾಷ್ಟ್ರಮಟ್ಟದಲ್ಲಿ ಏಕರೂಪದ ಡಿಜಿಟಲ್ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು. ಪ್ರತಿ ಹಳ್ಳಿಗೂ ‘ಸುಜಲ ಗಾಂವ್’ (Sujal Gaon) ಎಂಬ ವಿಶಿಷ್ಟ ಗುರುತಿನ ಸಂಖ್ಯೆ ನೀಡಲಾಗುವುದು. ಮೂಲದಿಂದ ಮನೆಬಾಗಿಲಿನವರೆಗೆ ನೀರಿನ ಸರಬರಾಜನ್ನು ಡಿಜಿಟಲ್…

Read More

ವಿಧಾನಪರಿಷತ್ : ಆನೆ-ಮಾನವ ಸಂಘರ್ಷ ನಿಯಂತ್ರಿಸಲು 2025-26ನೇ ಸಾಲಿನಲ್ಲಿ ಮಡಿಕೇರಿ ವಿಭಾಗಕ್ಕೆ 7 ಕಿ.ಮೀ ಮತ್ತು ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲು ಹಳಿ ತಡೆಗೋಡೆ ಮಂಜೂರಾಗಿದ್ದು, ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ವಿಧಾನ ಪರಿಷತ್ತಿಗಿಂದು ತಿಳಿಸಿದ್ದಾರೆ. ಶೂನ್ಯವೇಳೆಯಲ್ಲಿ ಸುಜಾ ಕುಶಾಲಪ್ಪ ಅವರ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಫೆ.28ರಂದು ಕಾಡಿನಂಚಿನ ನಿವಾಸಿ 17 ವರ್ಷದ ಬಾಲಕಿ ಆನೆ ದಾಳಿಯಿಂದ ಮೃತಪಟ್ಟಿದ್ದರೆ, ಮಾ.9ರಂದು ಕಾಡಿನೊಳಗೇ ವಾಸಿಸುತ್ತಿದ್ದ 55 ವರ್ಷದ ಬುಡಕಟ್ಟು ಮಹಿಳೆ ಸಾವಿಗೀಡಾಗಿದ್ದಾರೆ ಇದು ಅತ್ಯಂತ ನೋವಿನ ಸಂಗತಿ ಎಂದರು. ಜೀವ ಅತ್ಯಂತ ಅಮೂಲ್ಯವಾದ್ದು, ಇದಕ್ಕೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ. ಅರಣ್ಯ ಇಲಾಖೆ ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆನೆ ನಿಗ್ರಹ ಕಂದಕ, ಸೌರ ವಿದ್ಯುತ್ ಬೇಲಿ ನಿರ್ವಹಣೆ ಮಾಡಲಾಗುತ್ತಿದೆ. 2 ಆನೆ ಕಾರ್ಯಪಡೆ ಕಾರ್ಯನಿರ್ವಹಿಸುತ್ತಿದೆ. ಈಗ 2 ಪುಂಡಾನೆಗಳ ಸೆರೆಗೆ ಮುಖ್ಯ ವನ್ಯಜೀವಿ ಪರಿಪಾಲಕರು ಆದೇಶ…

Read More

ಬೆಂಗಳೂರು: ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಎದುರಾಗಲಿರುವ ಕುಡಿಯುವ ನೀರಿನ ಅಭಾವವನ್ನು ಎದುರಿಸಲು ಮೊದಲ ಆದ್ಯತೆಯಾಗಿ ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಮುಖಾಂತರ ಪಡೆಯಲಾಗುವುದಲ್ಲದೆ, ಅಗತ್ಯವಿರುವ ಸ್ಥಳದಲ್ಲಿ ಟ್ಯಾಂಕರ್ ಮೂಲಕ ನೀರನ್ನು ಸರಬರಾಜು ಮಾಡಲು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ನೀರು ಬತ್ತಿ ಹೋಗಿರುವ ಕೊಳವೆ ಬಾವಿಗಳನ್ನು ಫ್ಲಶಿಂಗ್ ಮತ್ತು ಆಳಗೊಳಿಸುವುದರೊಂದಿಗೆ ನೀರಿನ ಮೂಲಗಳನ್ನು ಹೆಚ್ಚಿಸಲಾಗುವುದು, ಅನಿವಾರ್ಯ ಸಂದರ್ಭಗಳಲ್ಲಿ ಕೊಳವೆಬಾವಿಗಳನ್ನು ಕೊರೆಯುವುದು ಅತ್ಯಗತ್ಯವೆಂದು ಕಂಡು ಬಂದಲ್ಲಿ, ಸಂಬಂಧಪಟ್ಟ ಭೂವಿಜ್ಞಾನಿಗಳ ವರದಿಯನುಸಾರ ಸೂಕ್ತ ಕ್ರಮ ಕೈಗೊಂಡು ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಲು ಕಾಮಗಾರಿಗಳನ್ನು ಕೈಗೊಳ್ಳಲು ತಿಳಿಸಲಾಗಿದೆ ಎಂದೂ ಸಚಿವರು ಮಾಹಿತಿ ನೀಡಿದ್ದಾರೆ. ರಾಜ್ಯವು ಮೂಲತಃ ಶುಷ್ಕ ಪ್ರದೇಶವಾಗಿರುವುದರಿಂದ ಬೇಸಿಗೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಹಾಲಿ ಇರುವ ಬಹುತೇಕ ಜಲಮೂಲಗಳು ಬತ್ತಿಹೋಗಿ ಗ್ರಾಮದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಂಭವವಿರುತ್ತದೆ. ಸದರಿ…

Read More

ನವದೆಹಲಿ: ಅಂತರರಾಷ್ಟ್ರೀಯ ಪಂದ್ಯದ ಸಮಯದಲ್ಲಿ ಅನುಚಿತ ಮತ್ತು/ಅಥವಾ ಅಪಾಯಕಾರಿ ರೀತಿಯಲ್ಲಿ ಆಟಗಾರನ ಮೇಲೆ ಅಥವಾ ಹತ್ತಿರ ಚೆಂಡನ್ನು (ಅಥವಾ ಕ್ರಿಕೆಟ್ ಉಪಕರಣಗಳ ಯಾವುದೇ ವಸ್ತುವನ್ನು) ಎಸೆಯುವುದಕ್ಕೆ ಸಂಬಂಧಿಸಿದ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ನೀತಿ ಸಂಹಿತೆಯ ಆರ್ಟಿಕಲ್ 2.9 ಅನ್ನು ಅರ್ಷ್‌ದೀಪ್ ಉಲ್ಲಂಘಿಸಿದ್ದಾರೆ ಎಂದು ಕಂಡುಬಂದಿದೆ ಎಂದು ಐಸಿಸಿ ಮಾಧ್ಯಮ ಪ್ರಕಟಣೆ ಮಂಗಳವಾರ ತಿಳಿಸಿದೆ. https://twitter.com/ICC/status/2031314874203267562 ನ್ಯೂಜಿಲೆಂಡ್ ಇನ್ನಿಂಗ್ಸ್‌ನ 11 ನೇ ಓವರ್‌ನಲ್ಲಿ ಅರ್ಶ್‌ದೀಪ್ ತನ್ನ ಫಾಲೋ-ಥ್ರೂನಲ್ಲಿ ಚೆಂಡನ್ನು ಫೀಲ್ಡಿಂಗ್ ಮಾಡಿ ಆಕ್ರಮಣಕಾರಿಯಾಗಿ ಮತ್ತು ಅನುಚಿತವಾಗಿ ಎಸೆದು ಬ್ಯಾಟರ್ ಡ್ಯಾರಿಲ್ ಮಿಚೆಲ್ ಅವರ ಪ್ಯಾಡ್‌ಗಳಿಗೆ ಹೊಡೆದರು. ಎಮಿರೇಟ್ಸ್ ಐಸಿಸಿ ಎಲೈಟ್ ಪ್ಯಾನಲ್ ಆಫ್ ಮ್ಯಾಚ್ ರೆಫರಿಗಳ ಆಂಡಿ ಪೈಕ್ರಾಫ್ಟ್ ಪ್ರಸ್ತಾಪಿಸಿದ ಶಿಕ್ಷೆಯನ್ನು ಅರ್ಶ್‌ದೀಪ್ ಒಪ್ಪಿಕೊಂಡರು, ಆದ್ದರಿಂದ ಔಪಚಾರಿಕ ವಿಚಾರಣೆಯ ಅಗತ್ಯವಿರಲಿಲ್ಲ. ಆನ್-ಫೀಲ್ಡ್ ಅಂಪೈರ್‌ಗಳಾದ ರಿಚರ್ಡ್ ಇಲಿಂಗ್‌ವರ್ತ್ ಮತ್ತು ಅಲೆಕ್ಸ್ ವಾರ್ಫ್, ಮೂರನೇ ಅಂಪೈರ್ ಅಲ್ಲಾಹುದ್ದೀನ್ ಪಾಲೇಕರ್ ಮತ್ತು ನಾಲ್ಕನೇ ಅಂಪೈರ್ ಆಡ್ರಿಯನ್ ಹೋಲ್ಡ್‌ಸ್ಟಾಕ್ ಆರೋಪವನ್ನು ಹೊರಿಸಿದರು. ಲೆವೆಲ್ 1 ಉಲ್ಲಂಘನೆಗೆ ಕನಿಷ್ಠ…

Read More

ಬೆಂಗಳೂರು: ಇಸ್ರೇಲ್, ಇರಾನ್ ಮತ್ತು ಅಮೆರಿಕ ನಡುವಿನ ಜಾಗತಿಕ ಯುದ್ಧದ ಭೀತಿ ಇದೀಗ ನೇರವಾಗಿ ಕನ್ನಡಿಗರ ಅಡುಗೆ ಮನೆಯ ಮೇಲೆ ಪರಿಣಾಮ ಬೀರಿದೆ. ಪೆಟ್ರೋಲಿಯಂ ಉತ್ಪನ್ನಗಳ ಸರಬರಾಜಿನಲ್ಲಿ ಉಂಟಾಗಿರುವ ವ್ಯತ್ಯಯದಿಂದಾಗಿ ರಾಜ್ಯಾದ್ಯಂತ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ (Commercial LPG) ಕೊರತೆ ತೀವ್ರಗೊಂಡಿದ್ದು, ಹೋಟೆಲ್ ಉದ್ಯಮ ಅಕ್ಷರಶಃ ಬೀದಿಗೆ ಬೀಳುವ ಆತಂಕ ಎದುರಿಸುತ್ತಿದೆ. ಜಿಲ್ಲಾವಾರು ಪರಿಸ್ಥಿತಿ: ಎಲ್ಲೆಲ್ಲಿ ಏನಾಗುತ್ತಿದೆ? ಕಲಬುರಗಿ: ಕಳೆದ ಎರಡು ದಿನಗಳಿಂದ ವಾಣಿಜ್ಯ ಸಿಲಿಂಡರ್ ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿದೆ. ನಗರದ 300ಕ್ಕೂ ಹೆಚ್ಚು ಹೋಟೆಲ್‌ಗಳು ಮುಚ್ಚುವ ಹಂತಕ್ಕೆ ತಲುಪಿವೆ. ಪರ್ಯಾಯ ವ್ಯವಸ್ಥೆ ಇಲ್ಲದೆ ಮಾಲೀಕರು ಕಂಗಾಲಾಗಿದ್ದಾರೆ. ರಾಯಚೂರು: ನಾಲ್ಕು ಸಿಲಿಂಡರ್ ಕೇಳಿದರೆ ಕೇವಲ ಎರಡು ಮಾತ್ರ ಸಿಗುತ್ತಿವೆ. ಸಿಲಿಂಡರ್ ಕೊರತೆಯಿಂದಾಗಿ ಮಸಾಲಾ ದೋಸೆ, ಸೆಟ್ ದೋಸೆಯಂತಹ ಪ್ರಮುಖ ತಿಂಡಿಗಳ ತಯಾರಿಕೆಯನ್ನು ಹೋಟೆಲ್ ಮಾಲೀಕರು ತಾತ್ಕಾಲಿಕವಾಗಿ ನಿಲ್ಲಿಸಿದ್ದಾರೆ. ಬಳ್ಳಾರಿ: ದೊಡ್ಡ ಸಿಲಿಂಡರ್‌ಗಳ ಲಭ್ಯತೆ ಇಲ್ಲದ ಕಾರಣ, ಅನಿವಾರ್ಯವಾಗಿ 5 ಕೆಜಿಯ ಸಣ್ಣ ಸಿಲಿಂಡರ್‌ಗಳನ್ನು ಬಳಸಲಾಗುತ್ತಿದೆ. ಇದರಿಂದ ಸಾಗಾಟದ ವೆಚ್ಚ ಮತ್ತು…

Read More