Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಸರ್ಕಾರದ ಜನಪದ ಯೋಜನೆಗಳು ಬಡವರ ಬದುಕಿಗೆ ಹೇಗೆ ಆಸರೆಯಾಗಬಲ್ಲವು ಎಂಬುದಕ್ಕೆ ಮೈಸೂರಿನ ಇಲವಾಲದ ವಿದ್ಯಾರ್ಥಿನಿ ಮಾಧುರಿಯ ಸಾಧನೆಯೇ ಸಾಕ್ಷಿ. ಅನಾರೋಗ್ಯದ ನಡುವೆಯೂ ಗೃಹಲಕ್ಷ್ಮಿ ಯೋಜನೆಯ ನೆರವಿನಿಂದ ಮಗಳು ಓದಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿರುವುದು ಗ್ಯಾರಂಟಿ ಯೋಜನೆಗಳ ಸಾರ್ಥಕತೆಯನ್ನು ಸಾರುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘಿಸಿದ್ದಾರೆ. ಸಂಕಷ್ಟದಲ್ಲಿ ಸಾಥ್ ನೀಡಿದ ‘ಗೃಹಲಕ್ಷ್ಮಿ’ ಮೈಸೂರಿನ ಇಲವಾಲ ನಿವಾಸಿಯಾದ ಮಾಧುರಿಯ ತಾಯಿ ಅನಾರೋಗ್ಯದ ಕಾರಣ ಕೆಲಸ ಬಿಡಬೇಕಾದ ಅನಿವಾರ್ಯತೆ ಎದುರಾಗಿತ್ತು. ಇಂತಹ ಸಂಕಷ್ಟದ ಸಮಯದಲ್ಲಿ ರಾಜ್ಯ ಸರ್ಕಾರದ ‘ಗೃಹಲಕ್ಷ್ಮಿ’ ಯೋಜನೆಯಡಿ ಬರುತ್ತಿದ್ದ ಹಣವು ಕುಟುಂಬಕ್ಕೆ ಆಸರೆಯಾಯಿತು. ಮನೆಯ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದರೂ, ತಾಯಿ ತನ್ನ ಮಗಳ ವಿದ್ಯಾಭ್ಯಾಸಕ್ಕೆ ಈ ಹಣವನ್ನೇ ಆಧಾರವಾಗಿ ಬಳಸಿಕೊಂಡಿದ್ದರು. ಸಾಧನೆಯ ಶಿಖರಕ್ಕೇರಿದ ಮಗಳು ತಾಯಿಯ ಶ್ರಮ ಮತ್ತು ಸರ್ಕಾರದ ಆಸರೆಯನ್ನು ವ್ಯರ್ಥ ಮಾಡದ ಮಾಧುರಿ, ಎಸ್ಎಸ್ಎಲ್ಸಿ (SSLC) ಪರೀಕ್ಷೆಯಲ್ಲಿ 625 ಕ್ಕೆ 624 ಅಂಕಗಳನ್ನು ಪಡೆಯುವ ಮೂಲಕ ಇಡೀ ರಾಜ್ಯಕ್ಕೆ ದ್ವಿತೀಯ…
ಬೆಂಗಳೂರು: “ಯುವತಿಯ ಭವಿಷ್ಯವನ್ನೇ ನಾಶಪಡಿಸಿರುವ ನಿಮಗೆ ಸಂತ್ರಸ್ತೆಯ ಕಷ್ಟ ಅರ್ಥವಾಗುವುದಿಲ್ಲವೇ?” ಎಂದು ತರಾಟೆಗೆ ತೆಗೆದುಕೊಂಡಿರುವ ಕರ್ನಾಟಕ ಉಚ್ಚ ನ್ಯಾಯಾಲಯವು, ಅತ್ಯಾಚಾರ ಆರೋಪಿ ಕೃಷ್ಣ ರಾವ್ ಎಂಬಾತನಿಗೆ ತನ್ನ ಹತ್ತು ತಿಂಗಳ ಮಗು ಮತ್ತು ಸಂತ್ರಸ್ತೆಯ ನಿರ್ವಹಣೆಗಾಗಿ ಪ್ರತಿ ತಿಂಗಳು 75,000 ರೂಪಾಯಿ ಪಾವತಿಸುವಂತೆ ಆದೇಶಿಸಿದೆ. ಪ್ರಕರಣದ ಹಿನ್ನೆಲೆ: ಪುತ್ತೂರು ನಗರಸಭೆ ಸದಸ್ಯ ಹಾಗೂ ಬಿಜೆಪಿ ಮುಖಂಡ ಪಿ.ಜಿ. ಜಗನ್ನಿವಾಸ ರಾವ್ ಅವರ ಪುತ್ರ ಕೃಷ್ಣ ರಾವ್ ಈ ಪ್ರಕರಣದ ಆರೋಪಿ. ಆರೋಪಿ ಮತ್ತು ಸಂತ್ರಸ್ತೆ ಶಾಲಾ ದಿನಗಳಿಂದಲೂ ಪ್ರೀತಿಸುತ್ತಿದ್ದರು. ಮದುವೆಯಾಗುವ ಭರವಸೆ ನೀಡಿ ಆರೋಪಿಯು ಸಂತ್ರಸ್ತೆಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಸಂತ್ರಸ್ತೆ ಗರ್ಭಿಣಿಯಾದಾಗ ಮದುವೆಯ ಭರವಸೆಯಿಂದ ಆತ ಹಿಂದೆ ಸರಿದಿದ್ದ. ಈ ಹಿನ್ನೆಲೆಯಲ್ಲಿ 2025ರ ಜುಲೈನಲ್ಲಿ ದೂರು ದಾಖಲಾದ ನಂತರ ಆತನನ್ನು ಬಂಧಿಸಲಾಗಿತ್ತು. ನ್ಯಾಯಾಲಯದ ಕಠಿಣ ನಿಲುವು: ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠವು ಆರೋಪಿಯ ನಡೆಯನ್ನು ತೀವ್ರವಾಗಿ ಖಂಡಿಸಿತು. ವಿಚಾರಣೆಯ ಸಂದರ್ಭದಲ್ಲಿ ಕಂಡುಬಂದ ಪ್ರಮುಖ…
ಬೆಂಗಳೂರು: ಹೊಸತನಕ್ಕೆ ಒಗ್ಗಿಕೊಂಡಾಗ ಮಾತ್ರ ಸಮಸ್ಯೆಗಳಿಗೆ ಪರಿಹಾರ ದೊರಕಲು ಸಾಧ್ಯ. ಅರಣ್ಯ ಅಧಿಕಾರಿಗಳು ಕೂಡ ಮಾನವ-ವನ್ಯಜೀವಿ ಸಂಘರ್ಷಕ್ಕೆ ವಿನೂತನ ಮಾರ್ಗೋಪಾಯ ಸಂಶೋಧಿಸಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಅರಣ್ಯ ಭವನದಲ್ಲಿ ನಡೆದ 2 ದಿನಗಳ ಕೆಡಿಪಿ ಮತ್ತು ಎಂ.ಎಂ.ಆರ್. ಸಭೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಇ-ಗಸ್ತು ಮತ್ತು ಅತ್ಯಾಧುನಿಕ ಉಪಕರಣಗಳ ಬಳಕೆಯಿಂದ ಮಾನವ ವನ್ಯಜೀವಿ ಸಂಘರ್ಷ ತಡೆಗಟ್ಟಬಹುದಾಗಿದ್ದು, ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲು ಮತ್ತು ಅಭಿವೃದ್ಧಿಪಡಿಸಲು ಸೂಚಿಸಿದರು. ಅರಣ್ಯ ಪ್ರದೇಶದಲ್ಲಿ ಅಕ್ರಮ ಮರ ಕಡಿತಲೆ, ವನ್ಯಜೀವಿಗಳ ಅಸಹಜ ಸಾವು, ಕಳ್ಳಬೇಟೆ, ಅರಣ್ಯ ಒತ್ತುವರಿ, ಮಾನವ-ವನ್ಯಜೀವಿ ಸಂಘರ್ಷ ಇದು ಮುಖ್ಯವಾಗಿ ನಮ್ಮ ಮುಂದಿರುವ ಸವಾಲಾಗಿದೆ. ಪ್ರತಿಯೊಂದು ಜೀವವೂ ಅಮೂಲ್ಯವಾಗಿದ್ದು, ವನ್ಯಜೀವಿಗಳಿಂದ ಯಾವುದೇ ಸಾವು ಸಂಭವಿಸದಂತೆ ಶಾಶ್ವತ ಪರಿಹಾರ ಒದಗಿಸಲು ಕಾಡಿನೊಂದಿಗೆ ಹೆಚ್ಚು ಒಡನಾಟ ಹೊಂದಿರುವ ನೀವೆಲ್ಲರೂ ಶ್ರಮಿಸಬೇಕು ಎಂದರು. ಯಾವ ಪ್ರದೇಶದಲ್ಲಿ ಹೆಚ್ಚಿನ ವನ್ಯಜೀವಿ ಸಂಘರ್ಷ ಇದೆ, ಈ ಸಂಘರ್ಷಕ್ಕೆ ಕಾರಣವೇನು, ಅದನ್ನು…
ಮಂಡ್ಯ : ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶದಲ್ಲಿ ಮದ್ದೂರು ತಾಲ್ಲೂಕಿಗೆ ಉತ್ತಮ ಫಲಿತಾಂಶ ಬಂದಿದ್ದು, ಸರ್ಕಾರಿ ಶಾಲೆಗಳೆ ಮೇಲುಗೈ ಸಾಧಿಸಿದ್ದು, ಶೇಕಡಾವಾರು ಗಣನೀಯ ಏರಿಕೆ ಕಂಡಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಧನಂಜಯ ತಿಳಿಸಿದರು. ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಕರೆಯಲಾಗಿದ್ದ ಪತ್ರಿಕಾ ಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ ಅವರು ಮಾತನಾಡಿದರು. ಕಳೆದ ಸಾಲಿನಲ್ಲಿ ತಾಲ್ಲೂಕಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 65.65 ಫಲಿತಾಂಶ ಪಡೆದು ಜಿಲ್ಲೆಯಲ್ಲಿ 6 ನೇ ಸ್ಥಾನದಲ್ಲಿತ್ತು ಆದರೆ ಈ ಬಾರಿ ಶೇಕಡಾ 97.30 ಫಲಿತಾಂಶ ಪಡೆದು ಜಿಲ್ಲೆಯಲ್ಲಿ 5 ನೇ ಸ್ಥಾನದಲ್ಲಿದೆ ಎಂದರು. ಮದ್ದೂರು ತಾಲ್ಲೂಕಿನ ವ್ಯಾಪ್ತಿಯಲ್ಲಿ ಈ ಬಾರಿ ಪರೀಕ್ಷೆ ಬರೆದಿದ್ದ ಒಟ್ಟು 3116 ವಿದ್ಯಾರ್ಥಿಗಳ ಪೈಕಿ 3032 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಅದರಲ್ಲಿ ಏ+ ಶ್ರೇಣಿಯಲ್ಲಿ 361, ಏ ಶ್ರೇಣಿಯಲ್ಲಿ 641, ಬಿ+ ಶ್ರೇಣಿಯಲ್ಲಿ 612, ಬಿ ಶ್ರೇಣಿಯಲ್ಲಿ 637 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ ಎಂದರು. ತಾಲ್ಲೂಕು ವ್ಯಾಪ್ತಿಯಲ್ಲಿರುವ…
ಶಿವಮೊಗ್ಗ : ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಶುಕ್ರವಾರ ಜೋಗಕ್ಕೆ ಭೇಟಿ ನೀಡಿ ಪ್ರವಾಸೋದ್ಯಮ ಇಲಾಖೆ ಹಾಗೂ ಜೋಗ ನಿರ್ವಹಣಾ ಪ್ರಾಧಿಕರದ ವತಿಯಿಂದ ಕೈಗೊಂಡಿರುವ ವಿವಿಧ ಅಭಿವೃದ್ದಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿ, ಸೂಕ್ತ ಸಲಹೆ ಸೂಚನೆಗಳನ್ನು ಸಂಬಂಧಿಸಿದ ಅಧಿಕಾರಿಗಿಗೆ ನೀಡಿದರು. ಜೋಗದಲ್ಲಿ ಕೈಗೊಂಡಿರುವ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು, ಮತ್ತು ನಿಗದಿತ ಅವಧಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರವಾಸಿಗರಿಗಾಗಿ ಕೈಗೊಂಡಿರುವ ವಿವಿಧ ಕಾಮಗಾರಿಗಳು, ಪ್ರವಾಸಿಗರಿಗೆ ಅಗತ್ಯವಿರುವ ಕುಡಿಯುವ ನೀರು, ಮೂಲಭೂತ ಸೌಲಭ್ಯಗಳು, ಪಾರ್ಕಿಂಗ್ ಇತರೆ ವ್ಯವಸ್ಥೆಗಳ ಕುರಿತಾದ ಕಾಮಗಾರಿಗಳನ್ನು ವ್ಯವಸ್ಥಿತವಾಗಿ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದ ಅವರು, ವೀಕ್ಷಣಾ ಗೋಪುರ, ಪ್ರವೇಶದ್ವಾರ ಮತ್ತು ಇತರೆ ಕಾಮಗಾರಿಗಳನ್ನು ವೀಕ್ಷಿಸಿ, ಪರಿಶೀಲನೆ ನಡೆಸಿದರು. ಪ್ರವಾಸೋದ್ಯಮ ಇಲಾಖೆ, ಕೆಪಿಟಿಸಿಎಲ್ ಅಧಿಕಾರಿಗಳು ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಈ ವೇಳೆ ಹಾಜರಿದ್ದರು. https://kannadanewsnow.com/kannada/a-nandanavan-that-resonates-in-the-memory-of-annavra-minister-k-j-george-dedicates-dr-raj-udyan-to-the-public/ https://kannadanewsnow.com/kannada/a-terrible-tragedy-in-the-state-a-9-year-old-girl-died-after-being-strangled-by-a-jockey/
ಬೆಂಗಳೂರು: ಕನ್ನಡದ ಕಣ್ಮಣಿ ಡಾ.ರಾಜ್ಕುಮಾರ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಹಸಿರಾಗಿ, ಜನರ ಉಸಿರಾಗಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಡಾ.ರಾಜ್ ಕುಮಾರ್ ಜನ್ಮದಿನದ ಪ್ರಯುಕ್ತ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಕಮ್ಮನಹಳ್ಳಿಯಲ್ಲಿ ನವೀಕರಣಗೊಂಡ ಡಾ.ರಾಜ್ಕುಮಾರ್ ಉದ್ಯಾನವನ್ನು ಉದ್ಘಾಟಿಸಿ, ನೂತನವಾಗಿ ನಿರ್ಮಿಸಿರುವ ಬಯಲು ರಂಗಮಂದಿರವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಸಚಿವರು ಮಾತನಾಡಿದರು. “ನಮ್ಮ ಕ್ಷೇತ್ರದಲ್ಲಿ ಡಾ.ರಾಜ್ಕುಮಾರ್ ಹೆಸರಿನಲ್ಲಿ ಉದ್ಯಾನ ನಿರ್ಮಿಸಿ, ಅಚ್ಚುಕಟ್ಟಾಗಿ ನಿರ್ವಹಿಸಲಾಗುತ್ತಿದೆ. ಈಗ ಹೊಸದಾಗಿ ನಿರ್ಮಿಸಿರುವ ಬಯಲು ರಂಗಮಂದಿರವು ಸಾಮುದಾಯದ ವಿವಿಧ ಕಾರ್ಯಕ್ರಮಗಳನ್ನು ನಡೆಸಲು ವೇದಿಕೆಯಾಗಲಿದೆ. ಕ್ಷೇತ್ರದ ಇತರ ಉದ್ಯಾನಗಳನ್ನೂ ನವೀಕರಿಸಿ ಮತ್ತಷ್ಟು ಸುಂದರಗೊಳಿಸಲಾಗುವುದು,” ಎಂದರು. ಉದ್ಯಾನದಲ್ಲಿ ಒಂದು ಸುತ್ತು ಹಾಕಿದ ಸಚಿವರು, ಶುಚಿತ್ವ, ಉದ್ಯಾನ ಬಳಕೆದಾರರಿಗೆ ಒದಗಿಸಿರುವ ಸೌಕರ್ಯಗಳನ್ನು ಪರಿಶೀಲಿಸದರಲ್ಲದೆ, ವಿಕಲಚೇತನರಿಗೆ ವ್ಹೀಲ್ಚೇರ್ ಹಾಗೂ ಕ್ರೀಡಾಪಟುಗಳಿಗೆ ಕ್ರೀಡಾಸಾಮಾಗ್ರಿಗಳನ್ನು ವಿತರಿಸಿದರು. ಹೆಣ್ಣೂರು ಜೀವವೈವಿದ್ಯ ಉದ್ಯಾನಕ್ಕೂ ಭೇಟಿ ನೀಡಿದ ಸಚಿವ ಕೆ.ಜೆ. ಜಾರ್ಜ್, ಸುಸ್ಥಿರ ಅಭಿವೃದ್ದಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ಹಸಿರು ಹೊದಿಕೆ ಹೆಚ್ಚಿಸಲು ಸೂಕ್ತ ಹನಿ ನೀರಾವರಿ ವ್ಯವಸ್ಥೆ…
ನವದೆಹಲಿ: ದೇಶದ ಪ್ರಮುಖ ಫಿನ್ಟೆಕ್ ಸಂಸ್ಥೆಯಾದ ಪೇಟಿಎಂಗೆ ದೊಡ್ಡ ಆಘಾತ ಎದುರಾಗಿದೆ. ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ನ (PPBL) ಬ್ಯಾಂಕಿಂಗ್ ಪರವಾನಗಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್ (RBI) ಏಪ್ರಿಲ್ 24, 2026 ರಿಂದ ಜಾರಿಗೆ ಬರುವಂತೆ ತಕ್ಷಣದಿಂದ ರದ್ದುಗೊಳಿಸಿದೆ. ಪ್ರಮುಖ ಮುಖ್ಯಾಂಶಗಳು: ತಕ್ಷಣದ ಜಾರಿ: ಆರ್ಬಿಐ ಆದೇಶದಂತೆ ಏಪ್ರಿಲ್ 24ರ ವ್ಯವಹಾರದ ಅಂತ್ಯದ ವೇಳೆಗೆ ಪೇಟಿಎಂ ಬ್ಯಾಂಕ್ ತನ್ನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಬೇಕಿದೆ. ಕಾನೂನು ಕ್ರಮ: ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ 1949ರ ಸೆಕ್ಷನ್ 22(4) ರ ಅಡಿಯಲ್ಲಿ ನೀಡಲಾಗಿದ್ದ ಪರವಾನಗಿಯನ್ನು ರದ್ದುಪಡಿಸಲಾಗಿದೆ. ಕಾರಣ: ಬ್ಯಾಂಕ್ ನಡೆಸುತ್ತಿರುವ ವ್ಯವಹಾರದ ಶೈಲಿಯು ಠೇವಣಿದಾರರ ಹಿತಾಸಕ್ತಿಗೆ ಮಾರಕವಾಗಿದೆ ಎಂಬ ಗಂಭೀರ ಕಾರಣವನ್ನು ಕೇಂದ್ರ ಬ್ಯಾಂಕ್ ನೀಡಿದೆ. ಷೇರು ಮಾರುಕಟ್ಟೆಯ ಮೇಲೆ ಪರಿಣಾಮ: ಆರ್ಬಿಐನ ಈ ಕಠಿಣ ಕ್ರಮದ ನಡುವೆಯೇ, ಪೇಟಿಎಂನ ಮಾತೃ ಸಂಸ್ಥೆಯಾದ ‘ಒನ್ 97 ಕಮ್ಯುನಿಕೇಷನ್ಸ್’ (One97 Communications) ಷೇರುಗಳು ರಾಷ್ಟ್ರೀಯ ಷೇರು ಮಾರುಕಟ್ಟೆಯಲ್ಲಿ (NSE) ಕುಸಿತ ಕಂಡಿವೆ. ಷೇರು ಮೌಲ್ಯ: ಶುಕ್ರವಾರದ ವಹಿವಾಟಿನ ಅಂತ್ಯಕ್ಕೆ…
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2 ಬರೆಯಲಿರುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (BMTC) ಮಹತ್ವದ ನಿರ್ಧಾರ ಕೈಗೊಂಡಿದೆ. ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಉಚಿತ ಪ್ರಯಾಣದ ಅವಧಿ ಮತ್ತು ನಿಯಮಗಳು 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ 30.04.2026 ರಿಂದ 13.05.2026 ರವರೆಗೆ ನಡೆಯಲಿದೆ. ಈ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಈ ಕೆಳಗಿನ ಸೌಲಭ್ಯಗಳು ಲಭ್ಯವಿರಲಿವೆ: ಪ್ರವೇಶ ಪತ್ರವೇ ಟಿಕೆಟ್: ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಹೋಗುವಾಗ ಮತ್ತು ಪರೀಕ್ಷೆ ಮುಗಿಸಿ ಹಿಂದಿರುಗುವಾಗ ಕಂಡಕ್ಟರ್ಗೆ ತಮ್ಮ ‘ಪರೀಕ್ಷಾ ಪ್ರವೇಶ ಪತ್ರ’ (Hall Ticket) ತೋರಿಸಿ ಉಚಿತವಾಗಿ ಪ್ರಯಾಣಿಸಬಹುದು. ಸಾಮಾನ್ಯ ಸೇವೆಗಳು: ಈ ಸೌಲಭ್ಯವು ಸಂಸ್ಥೆಯ ಎಲ್ಲಾ ಸಾಮಾನ್ಯ ಬಸ್ ಸೇವೆಗಳಲ್ಲಿ ಲಭ್ಯವಿರುತ್ತದೆ (ವೇಗದೂತ ಅಂದರೆ ಸುಪರ್ ಫಾಸ್ಟ್ ಸೇವೆಗಳನ್ನು ಹೊರತುಪಡಿಸಿ). ಕೋರಿಕೆ ನಿಲುಗಡೆ (Request Stop): ಪರೀಕ್ಷಾ ಕೇಂದ್ರಗಳ ಹತ್ತಿರ ವಿದ್ಯಾರ್ಥಿಗಳು ಅಥವಾ ಪೋಷಕರು ಬಸ್ ನಿಲ್ಲಿಸಲು ಕೋರಿದರೆ, ಅಲ್ಲಿ…
ಬೆಂಗಳೂರು: ಇಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC) ವತಿಯಿಂದ ಕತ್ರಿಗುಪ್ಪೆಯ ಶ್ರೀ ವೆಂಕಟಾದ್ರಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ‘ಕ್ರೀಡಾ-ಸಾಂಸ್ಕೃತಿಕ ಉತ್ಸವ-2026’ ಅತ್ಯಂತ ಯಶಸ್ವಿಯಾಗಿ ಜರುಗಿತು. ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿಜೇತರಿಗೆ ಪ್ರಶಸ್ತಿ ವಿತರಿಸುವ ಜೊತೆಗೆ ವಿವಿಧ ಕಲ್ಯಾಣ ಯೋಜನೆಗಳ ಸೌಲಭ್ಯಗಳನ್ನು ಹಂಚಿದರು. ಕಾರ್ಯಕ್ರಮದ ಮುಖ್ಯಾಂಶಗಳು ಸಚಿವರು ಈ ಸಂದರ್ಭದಲ್ಲಿ ನೌಕರರ ಹಿತರಕ್ಷಣೆಗಾಗಿ ಮೂರು ಪ್ರಮುಖ ವಿಭಾಗಗಳಲ್ಲಿ ನೆರವು ವಿತರಿಸಿದರು: ಪ್ರಶಸ್ತಿ ವಿತರಣೆ: ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ನೌಕರರಿಗೆ ಪ್ರಶಸ್ತಿ ಹಾಗೂ ಪಾರಿತೋಷಕಗಳನ್ನು ನೀಡಿ ಗೌರವಿಸಲಾಯಿತು. ವಿಮಾ ಪರಿಹಾರ: ಸೇವೆಯಲ್ಲಿದ್ದಾಗ ನಿಧನರಾದ ನೌಕರರ ಕುಟುಂಬದವರಿಗೆ (ಅವಲಂಬಿತರಿಗೆ) ಆಸರೆಯಾಗಲು ವಿಮಾ ಪರಿಹಾರದ ಮೊತ್ತವನ್ನು ವಿತರಿಸಿದರು. ವಿದ್ಯಾ ಸಹಾಯ ನಿಧಿ: ಸಂಸ್ಥೆಯ ನೌಕರರ ಮಕ್ಕಳು ವಿದ್ಯಾಭ್ಯಾಸದಲ್ಲಿ ತೋರಿದ ಸಾಧನೆಯನ್ನು ಗುರುತಿಸಿ, ಅತಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ಮಕ್ಕಳಿಗೆ ವಿದ್ಯಾ ಸಹಾಯ ನಿಧಿಯನ್ನು ನೀಡಲಾಯಿತು. ಸಚಿವರು ಹೇಳಿದ್ದೇನು? ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ ಅವರು,…
ಶಿವಮೊಗ್ಗ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ‘ಯುವನಿಧಿ’ಯ ಲಾಭವನ್ನು ಪ್ರತಿಯೊಬ್ಬ ಅರ್ಹ ಅಭ್ಯರ್ಥಿಯೂ ಪಡೆಯುವಂತಾಗಬೇಕು ಎಂಬ ನಿಟ್ಟಿನಲ್ಲಿ, ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏಪ್ರಿಲ್ 24ರಂದು ವ್ಯಾಪಕ ನೋಂದಣಿ ಪ್ರಚಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಗ್ಯಾರಂಟಿ ಸಮಿತಿ ಪದಾಧಿಕಾರಿಗಳಿಂದ ಜಾಗೃತಿ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸಾಗರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಬಿ.ಆರ್. ಜಯಂತ್ ಅವರು ಮಾತನಾಡಿ, ನಿರುದ್ಯೋಗಿ ಪದವೀಧರರಿಗೆ ಆರ್ಥಿಕ ನೆರವು ನೀಡುವ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ತಾಲ್ಲೂಕು ಪಂಚಾಯತ್ ಯೋಜನಾಧಿಕಾರಿಗಳಾದ ದಿವ್ಯ ಯು.ಬಿ. ಹಾಗೂ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಮಂಜುನಾಥ ಕೆ.ಡಿ. ಅವರು ನೋಂದಣಿ ಸಂದರ್ಭದಲ್ಲಿ ಗಮನಿಸಬೇಕಾದ ತಾಂತ್ರಿಕ ಅಂಶಗಳು ಮತ್ತು ಉದ್ಯೋಗಾವಕಾಶಗಳ ಬಗ್ಗೆ ಮಾರ್ಗದರ್ಶನ ನೀಡಿದರು. ಗಣ್ಯರ ಉಪಸ್ಥಿತಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಣ್ಣ ಹನುಮಂತಪ್ಪ ಜಿ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಗ್ಯಾರಂಟಿ ಸಮಿತಿ ಸದಸ್ಯರಾದ…














