Author: kannadanewsnow09

ಬೆಂಗಳೂರು: ರಾಜಧಾನಿ ಬೆಂಗಳೂರು ಹೊರವಲಯದಲ್ಲಿ ಪತ್ತೆಯಾಗಿರುವ ಡ್ರಗ್ ಫ್ಯಾಕ್ಟರಿ ಇದೀಗ ದೇಶಾದ್ಯಂತ ಭಾರೀ ಸುದ್ದಿಗೆ ಗ್ರಾಸವಾಗಿದೆ. ಮಹಾರಾಷ್ಟ್ರದಲ್ಲಿನ ಡ್ರಗ್ ದಂಧೆ ಕರ್ನಾಟದತ್ತ ತನ್ನ ಕಬಂಧ ಬಾಹುವನ್ನು ಚಾಚಿರುವ ಬಗ್ಗೆ ಸುಳಿವರಿತ ಬೆಂಗಳೂರು ಪೊಲೀಸರೇ ಭಾರೀ ಕಾರ್ಯಾಚರಣೆಗೆ ತಯಾರಿ ನಡೆಸಿದ್ದರು. ಆ ಹೊತ್ತಿಗೆ ಮಹಾರಾಷ್ಟ್ರ ANTF ಮತ್ತು ಎನ್‌ಸಿಬಿ ಅಧಿಕಾರಿಗಳು ಬೆಂಗಳೂರು ಪೊಲೀಸರ ಜೊತೆ ಚರ್ಚಿಸಿದರು. ಅದಾಗಲೇ ತಾವು ದಾಳಿಗೆ ತಯಾರಿ ನಡೆಸಿದ್ದ ಬಗ್ಗೆ ಮಾಹಿತಿ ನೀಡಿದ ಬೆಂಗಳೂರು ಪೊಲೀಸರ ಜೊತೆ ಎನ್‌ಸಿಬಿ ಅಧಿಕಾರಿ ಸಾಥ್ ನೀಡಿದರು. ಈ ಮೂಲಕ ಬೆಂಗಳೂರು ಪೊಲೀಸರ ನೇತೃತ್ವದಲ್ಲೇ ನಡೆದ ಭರ್ಜರಿ ಕಾರ್ಯಾಚರಣೆಯಲ್ಲಿ ಬೃಹತ್ ಡ್ರಗ್ ಜಾಲ ಪತ್ತೆಯಾಗಿದೆ. ಕೇಂದ್ರ ಗುಪ್ತ ದಳದ ಮಾಹಿತಿ ಪ್ರಕಾರ, ಬಾಗಲೂರು ಮತ್ತು ಕೊತ್ತನೂರು ಠಾಣೆಗಳ ಗಡಿ ಭಾಗದಲ್ಲಿ ಡ್ರಗ್ ಹೊಂದಿಸಿಕೊಂಡು ಅದನ್ನು ವಿತರಿಸುವ ಸಂಚು ಈ ಮಾಫಿಯಾದಿಂದ ನಡೆಯುತ್ತಿತ್ತು. ಬೆಂಗಳೂರು ಪೊಲೀಸರ ಕಣ್ಣುತಪ್ಪಿಸಿ ಈ ದಂಧೆ ನಡೆಸುತ್ತಿದ್ದ ಮಾಫಿಯಾ ತಮ್ಮ ನೆಲೆಯನ್ನು ರಾಜ್ಯದಿಂದ ರಾಜ್ಯಕ್ಕೆ ಬದಲಾಯಿಸುತ್ತಿತ್ತು. ಇತ್ತೀಚೆಗಷ್ಟೇ ಬೆಂಗಳೂರು ಹೊರವಲಯದಲ್ಲಿ…

Read More

ಬೆಂಗಳೂರು: ಹೊಸ ವರ್ಷ-2026 ಆಚರಣೆ ಪ್ರಯುಕ್ತ ಆಸ್ಪತ್ರೆಗಳಲ್ಲಿ ಕೊಠಡಿ, ಆಂಬ್ಯುಲೆನ್ಸ್ ವಾಹನ ಸೌಲಭ್ಯ ಮತ್ತು ಸಾರ್ವಜನಿಕರಿಗೆ ವೈದ್ಯಕೀಯ ತುರ್ತು ಚಿಕಿತ್ಸೆ ಸೇವೆಗಳನ್ನು ಒದಗಿಸೋದಕ್ಕೆ ರಾಜ್ಯ ಸರ್ಕಾರ ಖಡಕ್ ಆದೇಶ ಮಾಡಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕರು ಆದೇಶ ಮಾಡಿದ್ದು, ದಿನಾಂಕ 31-12-2025 ರಿಂದ 01.01.2026 ರವರೆಗೆ ಹೊಸ ವರ್ಷ-2026 ಆಗಮನದ ಆಚರಣೆ ಸಮಯದಲ್ಲಿ, ಕರ್ನಾಟಕ ರಾಜ್ಯದ ವಿವಿಧ ಸ್ಥಳಗಳಲ್ಲಿ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಸಾರ್ವಜನಿಕರು ಅಸ್ವಸ್ಥಗೊಳ್ಳುವ ಮತ್ತು ವಿವಿಧ ರೀತಿಯ ಆರೋಗ್ಯ ಸಂಬಂಧಿತ ಸಮಸ್ಯೆಗಳಿಗೆ ಸಿಲುಕುವ ಸಾಧ್ಯತೆಗಳಿರುವುದರಿಂದ, ಉಲ್ಲೇಖಿತ ಪತ್ರದ ಪಕಾರ ತುರ್ತು ಕರ್ತವ್ಯಕ್ಕಾಗಿ, ಜಿಲ್ಲಾ ಮಟ್ಟದ ಎಲ್ಲಾ ಆಸ್ಪತ್ರೆಗಳಲ್ಲಿ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲು ತಿಳಿಸಿದ್ದಾರೆ. ಸದರಿ ಮಹಿಳೆಯರ ಪ್ರತ್ಯೇಕ ಕೊಠಡಿಗೆ ಮಹಿಳಾ ಸಿಬ್ಬಂದಿಯನ್ನು ಚಿಕಿತ್ಸೆಗೆ ನಿಯೋಜಿಸುವುದು ಹಾಗೂ ಆಂಬ್ಯುಲೆನ್ಸ್ ವಾಹನ ಸೌಲಭ್ಯ ಮತ್ತು ಅಗತ್ಯ ಔಷಧಗಳು ಲಭ್ಯವಿರುವಂತೆ ವ್ಯವಸ್ಥೆಗೊಳಿಸಿ ಸಾರ್ವಜನಿಕರಿಗೆ ವೈದ್ಯಕೀಯ ತುರ್ತು ಚಿಕಿತ್ಸೆ ಸೇವೆಗಳನ್ನು…

Read More

ಚಿಕ್ಕಮಗಳೂರು: ಹೊಸ ವರ್ಷದ ಪ್ರಯುಕ್ತ ಕಾಫಿನಾಡು ಚಿಕ್ಕಮಗಳೂರಿನ ಹಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ. ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುಳ್ಳಯ್ಯನಗಿರಿ, ಕೆಮ್ಮಣ್ಣುಗುಂಡಿ, ಎತ್ತಿನಭುಜ, ಸೇರಿದಂತೆ 22 ಪ್ರವಾಸಿ ತಾಣಗಳಿಗೆ ತಾತ್ಕಾಲಿಕವಾಗಿ ನಿರ್ಬಂಧ ಹೇರಿದೆ. ಡಿಸೆಂಬರ್.31ರ ಸಂಜೆ 6 ಗಂಟೆಯಿಂದ ಜನವರಿ 1ರ ಬೆಳಗ್ಗೆ 6 ಗಂಟೆಯವರೆಗೆ ಚಿಕ್ಕಮಗಳೂರಿನ 22 ಪ್ರವಾಸಿ ತಾಣಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆಯವರ ಮನವಿ ಮೇರೆಗೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಿ ಆದೇಶಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಹಿನ್ನಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಮಾಣಿಕ್ಯಧಾರಾ, ಝರಿ ಫಾಲ್ಸ್, ಹೊನ್ನಮ್ಮನಹಳ್ಳ, ಗಾಳಿಕೆರೆ, ಹಿರೇಕೊಳಲೆ ಕೆರೆ, ಡೈಮಂಡ್ ಫಾಲ್ಸ್, ಎತ್ತಿನಭುಜ, ದೇವರಮನೆ, ರಾಣಿಝರಿ, ಬಳ್ಳಾಲರಾಯನ ದುರ್ಗ, ಕೆಮ್ಮಣ್ಣುಗುಂಡಿ, ಕಲ್ಲತ್ತಿಗಿರಿ, ಬಂಡಾಜೆ ಫಾಲ್ಸ್, ಕೂಡಿಗೆ ಫಾಲ್ಸ್, ಕ್ಯಾತನಮಕ್ಕಿ, ರುದ್ರಪಾದ, ತೂಗು ಸೇತುವೆ, ಅಬ್ಬುಗುಡಿಗೆ ಫಾಲ್ಸ್,…

Read More

ದಾವಣಗೆರೆ: ಜಿಲ್ಲೆಯಲ್ಲಿನ ಡ್ರಗ್ಸ್ ಕೇಸ್ ನಲ್ಲಿ ಕಾಂಗ್ರೆಸ್ ಘಟಾನುಘಟಿಗಳ ಬಂಧನ ಮುಂದುವರೆದಿದೆ. ಇದೀಗ ಮತ್ತೊಬ್ಬ ಸಚಿವರ ಪರಮಾಪ್ತ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಹೌದು ದಾವಣಗೆರೆ ಡ್ರಗ್ಸ್ ಕೇಸಲ್ಲಿ ಕಾಂಗ್ರೆಸ್ ನ ಘಟಾನುಘಟಿಗಳ ಬಂಧನವಾಗಿದೆ. ಮತ್ತೊಬ್ಬ ಸಚಿವರ ಪರಮಾಪ್ತನನ್ನು ದಾವಣಗೆರೆಯಲ್ಲಿ ಪೊಲೀಸರು ಬಲೆಗೆ ಕೆಡವಿದ್ದಾರೆ. ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಅನ್ವರ್ ಬಾಷಾ ಬಂಧಿಸಲಾಗಿದೆ. ಸಿಂಥೆಟಿಕ್ ಡ್ರಗ್ಸ್ ಕೇಸ್ ನಲ್ಲಿ ಈವರೆಗೆ ಒಟ್ಟು 8 ಆರೋಪಿಗಳನ್ನು ಬಂಧಿಸಿದಂತೆ ಆಗಿದೆ. ಡಿಸೆಂಬರ್.23ರಂದು ಡ್ರಗ್ಸ್ ದಂಧೆ ನಡೆಸಿದ್ದ ಗ್ಯಾಂಗ್ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಕಾಂಗ್ರೆಸ್ ಮುಖಂಡ ವೇದಮೂರ್ತಿ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದರು. ಕಾಂಗ್ರೆಸ್ ಮುಖಂಡ, ದಾವಣಗೆರೆ ಉಸ್ತುವಾರಿ ಸಚಿವ ಮಲ್ಲಿಕಾರ್ಜನ್ ಆಪ್ತ. ಬಂಧಿತರಿಂದ 90 ಗ್ರಾಂ ಎಂಡಿಎಂಎ ಡ್ರಗ್ಸ್, ಸಿಂಥೆಟಿಕ್ ಡ್ರಗ್ಸ್ ಸೇರಿ ಲಕ್ಷಾಂತರ ಮೌಲ್ಯದ ಡ್ರಗ್ಸ್ ದಾವಣಗೆರೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. https://kannadanewsnow.com/kannada/karnatakas-pride-ksrtc-wins-motoring-world-green-mobility-award-2025/ https://kannadanewsnow.com/kannada/harihar-power-outage-in-these-areas-of-honnali-tomorrow/

Read More

ಬೆಂಗಳೂರು: ಕರ್ನಾಟಕದ ಸಾರಿಗೆ ಇಲಾಖೆಗೆ ಪ್ರಶಸ್ತಿಯ ಗರಿಮೆ ಮುಡಿಗೇರಿದೆ. ಪ್ರತಿಷ್ಠಿತ ಮೋಟಾರಿಂಗ್ ವರ್ಲ್ಡ್ ಗ್ರೀನ್ ಮೊಬಿಲಿಟಿ ಅವಾರ್ಡ್ಸ್-2025 ಪ್ರಶಸ್ತಿ ಲಭಿಸಿದೆ. ದಿನಾಂಕ: 16-12-2025 ರಂದು ನವದೆಹಲಿಯಲ್ಲಿ ಮೋಟಾರಿಂಗ್ ವರ್ಲ್ಡ್ ಗ್ರೀನ್ ಮೊಬಿಲಿಟಿ ಅವಾರ್ಡ್ಸ್-2025 ನ್ನು ಮೋಟಾರಿಂಗ್ ವರ್ಲ್ಡ್ ಮ್ಯಾಗಜಿನ್ ಆಫ್ ಡೆಲ್ಲಿ ಪ್ರೆಸ್ ಗ್ರೂಪ್ ರವರು ಆಯೋಜಿಸಿದ್ದು, ಸದರಿ ಪ್ರಶಸ್ತಿ ಸಮಾರಂಭದ ಮುಖ್ಯ ಅತಿಥಿಯಾಗಿ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಮಂತ್ರಾಲಯ, ನವದೆಹಲಿರವರು ಹಾಗೂ ಹಲವಾರು ಗಣ್ಯವ್ಯಕ್ತಿಗಳು ಭಾಗವಹಿಸಿಸಲಿದ್ದಾರೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟ ಹವಾಮಾನ ನೀತಿ ತಜ್ಞ ಪ್ರಶಸ್ತಿಗಳನ್ನು ಆಯ್ಕೆ ಮಾಡಿದ್ದು, ಪ್ರಶಸ್ತಿ ಸಮಾರಂಭದಲ್ಲಿ ಕರ್ನಾಟಕ ರಾಜ್ಯವು ಒಟ್ಟು ನಾಲ್ಕು (4) ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ. ಪ್ರಶಸ್ತಿಗಳ ವಿವರವು ಕೆಳಕಂಡಂತಿದೆ:- 1) BEST STATE FOR TWO WHEELER EV ADOPTION (SILVER) ಕರ್ನಾಟಕ ರಾಜ್ಯವು ದ್ವಿಚಕ್ರ ವಿದ್ಯುತ್ ಚಾಲಿತ ವಾಹನಗಳ ನೋಂದಣಿ ಹಾಗೂ ವಿದ್ಯುತ್ತೀಕರಣದಲ್ಲಿ ಮೇಲುಗೈ ಸಾಧಿಸಿದ ಕಾರಣ. ಕರ್ನಾಟಕ ಸರ್ಕಾರದ ಸಾರಿಗೆ ಇಲಾಖೆಗೆ…

Read More

ಬೆಂಗಳೂರು: ಬಾಣಸವಾಡಿ ಮತ್ತು ಎಸ್‌.ಎಂ.ವಿ.ಟಿ. ಬೆಂಗಳೂರು ನಿಲ್ದಾಣದಲ್ಲಿ ಕಾಮಗಾರಿಯ ನಿಮಿತ್ತ ರೈಲು ಸೇವೆಯಲ್ಲಿ ಈ ಕೆಳಗಿನ ಬದಲಾವಣೆಗಳು ಜಾರಿಗೆ ಬರಲಿವೆ: ರೈಲುಗಳ ರದ್ದತಿ: * ರೈಲು ಸಂಖ್ಯೆ 06527 ಬಂಗಾರಪೇಟೆ – ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮೆಮು ಸೇವೆಯನ್ನು ದಿನಾಂಕ 03.01.2026 ಮತ್ತು ದಿನಾಂಕ 04.01.2026 ರಂದು ರದ್ದುಗೊಳಿಸಲಾಗುತ್ತದೆ. * ರೈಲು ಸಂಖ್ಯೆ 06528 ಎಸ್‌.ಎಂ.ವಿ.ಟಿ. ಬೆಂಗಳೂರು – ಬಂಗಾರಪೇಟೆ ಮೆಮು ಸೇವೆಯನ್ನು ದಿನಾಂಕ 04.01.2026 ಮತ್ತು ದಿನಾಂಕ 05.01.2026 ರಂದು ರದ್ದುಗೊಳಿಸಲಾಗುತ್ತದೆ * ರೈಲು ಸಂಖ್ಯೆ 66576 ತುಮಕೂರು – ಬಾಣಸವಾಡಿ ಮೆಮು ಸೇವೆಯನ್ನು ದಿನಾಂಕ 02.01.2026 ಮತ್ತು ದಿನಾಂಕ 03.01.2026 ರಂದು ರದ್ದುಗೊಳಿಸಲಾಗುತ್ತದೆ * ರೈಲು ಸಂಖ್ಯೆ 66575 ಬಾಣಸವಾಡಿ – ತುಮಕೂರು ಮೆಮು ಸೇವೆಯನ್ನು ದಿನಾಂಕ 03.01.2026 ಮತ್ತು ದಿನಾಂಕ 05.01.2026 ರಂದು ರದ್ದುಗೊಳಿಸಲಾಗುತ್ತದೆ * ರೈಲು ಸಂಖ್ಯೆ 66563 ಯಶವಂತಪುರ – ಹೊಸೂರು ಮೆಮು, ರೈಲು ಸಂಖ್ಯೆ 66564 ಹೊಸೂರು- ಯಶವಂತಪುರ ಮೆಮು,…

Read More

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲ್ಲೂಕು ವ್ಯಾಪ್ತಿಯಲ್ಲಿ ನಾಳೆ ತುರ್ತು ವಿದ್ಯುತ್ ನಿರ್ವಹಣಾ ಕಾರ್ಯವನ್ನು ಕೈಗೊಳ್ಳುತ್ತಿರುವುದರಿಂದ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಈ ಕುರಿತಂತೆ ಹೊನ್ನಾಳಿಯ ಬೆಸ್ಕಾಂ ಎಇಇ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 220 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರ ಹೊನ್ನಾಳಿಯಲ್ಲಿರುವ 66 ಕೆ.ವಿ. ಶಕ್ತಿ ಪರಿವರ್ತಕ, 66 ಕೆವಿ ಸಿಟಿ 66ಕೆ.ವಿ. ಬ್ರೇಕರ್, 11 ಕೆ.ವಿ. ಬ್ರೇಕರ್‌ಗಳ ಮತ್ತು ಇನ್ನಿತರ ಉಪಕರಣಗಳ ತೈ-ಮಾಸಿಕ ನಿರ್ವಹಣೆ ಕೆಲಸಗಳಿಗೆ, ಹಾಟ್‌ ಸ್ಪಾಟ್ ಗಳನ್ನು ಸರಿಪಡಿಸಲು ಮತ್ತು ಕೇಂದ್ರದ ಡಿಸಿ ಗೌಂಡಿಂಗ್ ಅನ್ನು ಸರಿಪಡಿಸಲು ದಿನಾಂಕ: 30/12/2025 ರಂದು – ಬೆಳಿಗ್ಗೆ 10:30 ರಿಂದ ಸಂಜೆ 05:30 ರವರೆಗೆ 220 ೦ಕೆ.ವಿ ವಿದ್ಯುತ್‌ ಸ್ವೀಕರಣಾ ಕೇಂದ್ರ ಹೊನ್ನಾಳಿಯಲ್ಲಿನ ಎಲ್ಲಾ ಮಾರ್ಗದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ತಿಳಿಸಿದೆ. ಸದರಿ ವಿದ್ಯುತ್‌ ಸ್ವೀಕರಣಾ ಕೇಂದ್ರದಲ್ಲಿ ಕೈ-ಮಾಸಿಕ ನಿರ್ವಹಣೆಗಾಗಿ ಮಾರ್ಗಮುಕ್ತತೆ ಪಡೆಯಲು ಬೆ.ವಿ. ಕಂಪನಿ ಅವರಿಂದ ಅನುಮೋದನೆ…

Read More

ಹಿಂದೂ ಧಾರ್ಮಿಕ ನಂಬಿಕೆಗಳ ಪ್ರಕಾರ ಏಕಾದಶಿ ದಿನದಂದು ಉಪವಾಸ ಮಾಡಿ ವಿಷ್ಣು ವನ್ನು ಆರಾಧಿಸಿದರೆ ಏಳೇಳು ಜನ್ಮಗಳ ಪಾಪ ಕಳೆದು, ಪಿತೃ ದೋಷ ನಿವಾರಣೆ ಆಗಿ ಮೋಕ್ಷ ಸಂಪಾದಿಸುವ ಪುಣ್ಯ ದಿನವೇ ವೈಕುಂಠ ಏಕಾದಶಿ. ಸೂರ್ಯನು ದಕ್ಷಿಣಾಯನದಿಂದ ಉತ್ತರಾಯಣಕ್ಕೆ ಪ್ರವೇಶಿಸುವ ಮೊದಲು ಪ್ರತಿ ವರ್ಷ ಬರುವ ಈ ಏಕಾದಶಿಯನ್ನು “ವೈಕುಂಠ ಏಕಾದಶಿ” ಎಂದು ಕರೆಯಲಾ ಗುತ್ತದೆ ತಾಯಿ. ಇದು ಭಗವಾನ್ ಮಹಾವಿಷ್ಣು ನಿದ್ರೆಯಿಂದ ಎಚ್ಚರಾಗಿ ಮುಕ್ಕೋಟಿ ದೇವತೆಗಳೊಂದಿಗೆ ಗರುಡ ವಾಹನನಾಗಿ ಭೂಲೋಕಕ್ಕೆ ಬಂದು ಭಕ್ತರಿಗೆ ದರ್ಶನ ಕೊಡುವ ಪುಣ್ಯ ದಿನ. ಆದ್ದರಿಂದ ಏಕಾದಶಿಯನ್ನು ‘ಮುಕ್ಕೋಟಿ ಏಕಾದಶಿ’ ಎಂದು ಕರೆಯುತ್ತಾರೆ. ಈ ಶುಭದಿನ ಸ್ವರ್ಗದ ಬಾಗಿಲು ತೆಗೆದಿರುತ್ತದೆ ಎಂಬ ನಂಬಿಕೆ ಇದೆ. ವಿಶೇಷವಾಗಿ ಈ ‘ಏಕಾದಶಿ’ ಯಂದು ವಿಷ್ಣುಗೆ ಸಂಬಂಧಪಟ್ಟ ದೇವಾಲಯಗಳಲ್ಲಿ ಉತ್ತರ ದ್ವಾರಕ್ಕೆ ಹೂವಿನ ಅಲಂಕಾರ ಮಾಡಿ ವಿಶೇಷ ಪೂಜೆ ಮಾಡುತ್ತಾರೆ. ಈ ಮೂಲಕ ಭಕ್ತರಿಗೆ ಉತ್ತರ ದ್ವಾರದ ಮೂಲಕ ಭಗವಂತನ ದರ್ಶನ ಕಲ್ಪಿಸಿರುತ್ತಾರೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ…

Read More

ಮಂಡ್ಯ: ಜಿಲ್ಲೆಯಲ್ಲಿ ರಾಜ್ಯದಲ್ಲೇ ಬೆಚ್ಚಿ ಬೀಳಿಸೋ ಕೃತ್ಯ ಎನ್ನುವಂತೆ ಬಟ್ಟೆ ತೊಳೆಯೋದಕ್ಕೆ ತೆರಳಿದ್ದಂತ ಮಹಿಳೆಯನ್ನು ಕೊಲೆ ಮಾಡಿರುವಂತ ಘಟನೆ ನಡೆದಿದೆ. ಈ ಕೃತ್ಯದ ಹಿಂದೆ ಚಿನ್ನಕ್ಕಾಗಿ ಮಹಿಳೆ ಕೊಲೆ ಮಾಡಿರುವಂತ ಶಂಕೆ ವ್ಯಕ್ತವಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಪಾಲಹಳ್ಳಿಯ ಮಮತಾ (35) ಮೃತ ಮಹಿಳೆಯಾಗಿದ್ದಾರೆ. ಬಟ್ಟೆ ತೊಳೆಯಲು ವರುಣಾ ನಾಲೆಗೆ ಮಮತಾ ತೆರಳಿದ್ದರು. ಪಾಲಹಳ್ಳಿ ಬಳಿಯ ಕ್ಯೂಟ್ ರೆಸಾರ್ಟ್ ಬಳಿಯ ವರುಣ ನಾಲೆಗೆ ಮಮತಾ ಹೋಗಿದ್ದರು. ಇಂತಹ ಮಮತಾ ಕಾಲುವೆಯಲ್ಲಿ ಕೊಲೆಯಾಗಿ ಮೃತಪಟ್ಟಿರುವ ರೀತಿಯಲ್ಲಿ ಶವ ಪತ್ತೆಯಾಗಿದೆ. ಶವದ ಮೈಯಲ್ಲಿದ್ದ ಚಿನ್ನದ ಸರ, ತಾಳಿಸರ, ಕಿವಿಯಲ್ಲಿದ್ದ ಓಲೆ ಬಲವಂತವಾಗಿ ಕಿತ್ತುಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಬಟ್ಟೆ ತೊಳೆಯಲು ಹೋದವರು ಬರುವುದು ತಡವಾದ್ದರಿಂದ ಪತಿಯಿಂದ ಹುಡುಕಾಟದ ವೇಳೆಯಲ್ಲಿ ಮಮತಾ ಶವವಾಗಿ ಪತ್ತೆಯಾಗಿದ್ದಾರೆ. ಮೇಲ್ನೋಟಕ್ಕೆ ಯಾರೋ ದುಷ್ಕರ್ಮಿಗಳು ಚಿನ್ನಕ್ಕಾಗಿ ಮಹಿಳೆಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಶ್ರೀರಂಗಪಟ್ಟಣ ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ, ತನಿಖೆ ಕೈಗೊಂಡಿದ್ದಾರೆ. ಶ್ರೀರಂಗಪಟ್ಟಣ ಪೊಲೀಸ್…

Read More

ಬೆಂಗಳೂರು: ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕವು ಸ್ವಾವಲಂಬನೆ ಸಾಧಿಸುವತ್ತ ಹೆಜ್ಜೆ ಇಟ್ಟಿದ್ದು, ಶೂನ್ಯ ಅಡಚಣೆಯೊಂದಿಗೆ ಗ್ರಾಹಕರಿಗೆ ವಿದ್ಯುತ್ ಪೂರೈಸುವ ಮೂಲಕ ಉತ್ಪಾದನೆ ಮತ್ತು ಸರಬರಾಜಿನಲ್ಲಿ ಸಮನ್ವಯ ಸಾಧಿಸಬೇಕು ಎಂದು ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಅವರು ಇಂಧನ ಇಲಾಖೆ ಇಂಜಿನಿಯರುಗಳಿಗೆ ಕರೆ ನೀಡಿದ್ದಾರೆ. ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿ ಇಂಜಿನಿಯರುಗಳ ಸಂಘದ ವತಿಯಿಂದ ಸೋಮವಾರ ಸರ್ ಎಂ.ವಿ. ಸಭಾಂಗಣದಲ್ಲಿ ಆಯೋಜಿಸಿದ್ದ ಸಂಘದ ಸುವರ್ಣ ಮಹೋತ್ಸವ ಸಂಸ್ಮರಣಾ ಉಪನ್ಯಾಸ, 2026ರ ತಾಂತ್ರಿಕ ದಿನಚರಿ ಬಿಡುಗಡೆ ಹಾಗೂ ನಿವೃತ್ತ ಇಂಜಿನಿಯರುಗಳ ಸಂಘದ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. “ಕೋವಿಡ್ ಬಳಿಕ ವಿದ್ಯುತ್ ಬೇಡಿಕೆ ಸಾಕಷ್ಟು ಪ್ರಮಾಣದಲ್ಲಿ ಏರಿಕೆಯಾದಾಗ ಅಗತ್ಯ ವಿದ್ಯುತ್ ಪೂರೈಸಲು ನಮ್ಮಲ್ಲಿ ಯೋಜನೆಗಳಿರಲಿಲ್ಲ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಸಭೆ ನಡೆಸಿ ಹೆಚ್ಚುವರಿ ವಿದ್ಯುತ್ ಉತ್ಪಾದನೆಗೆ ತ್ವರಿತ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಅದರ ಪರಿಣಾಮ ರಾಜ್ಯದಲ್ಲಿ ವಿದ್ಯುತ್…

Read More