Author: kannadanewsnow09

ಲಂಡನ್: ಬ್ರಿಟನ್ನಿನ ದೈತ್ಯ ಕಂಪನಿಗಳಿಂದ ರಾಜ್ಯಕ್ಕೆ ಬಂಡವಾಳ ಆಕರ್ಷಿಸಿ, ಕೈಗಾರಿಕಾ ಬೆಳವಣಿಗೆಗೆ ಇಂಬು ನೀಡುವ ಉದ್ದೇಶದಿಂದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಕೈಗೊಂಡಿರುವ ಇಂಗ್ಲೆಂಡ್ ಪ್ರವಾಸ ಸೋಮವಾರದಿಂದ ಆರಂಭವಾಗಿದೆ. ಬುಧವಾರ ಕೊನೆಗೊಳ್ಳಲಿರುವ ಈ ಮೂರು ದಿನಗಳ ಪ್ರವಾಸದಲ್ಲಿ ಅವರು 20ಕ್ಕೂ ಹೆಚ್ಚು ಕಂಪನಿಗಳ ಪ್ರಮುಖರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಮೊದಲ ದಿನವಾದ ಸೋಮವಾರ ಅವರು ಅಗ್ರಗಣ್ಯ ಉದ್ಯಮ ಸಂಸ್ಥೆಗಳಾಗಿರುವ ಮಾರ್ಟಿನ್ ಬೇಕರ್, ಎಸ್.ಸಿ.ಐ ಸೆಮಿಕಂಡಕ್ಟರ್ಸ್, ಸ್ಯಾಮ್ಕೊ ಹೋಲ್ಡಿಂಗ್ಸ್, ಎ.ಆರ್.ಎಂ, ಲ್ಯಾಟೋಸ್ ಗ್ರೂಪ್, ವಿಯರ್ ಮತ್ತು ಎಡ್ವರ್ಡಿಯನ್ ಹೋಟೆಲ್ ಗ್ರೂಪ್ ಪ್ರಮುಖರನ್ನು ಭೇಟಿ ಮಾಡಿದರು. ಈ ಪ್ರವಾಸ ಕಾರ್ಯಕ್ರಮ ಮೂರು ತಿಂಗಳ ಹಿಂದೆಯೇ‌ ನಿಗದಿಯಾಗಿತ್ತು. ಈ ಸಂದರ್ಭದಲ್ಲಿ ರಾಜ್ಯದಲ್ಲಿರುವ ಕೈಗಾರಿಕಾ ಕಾರ್ಯ ಪರಿಸರ, ಮೂಲಸೌಕರ್ಯ, ಭೂಮಿಯ ಲಭ್ಯತೆ, ವಿಷನ್ ಗ್ರೂಪ್ ಚಿಂತನೆ, ಇನ್ವೆಸ್ಟ್ ಕರ್ನಾಟಕ ಫೋರಂನ ಉದ್ದೇಶ, ಪ್ರವರ್ಧಮಾನಕ್ಕೆ ಬರುತ್ತಿರುವ ಆಧುನಿಕ ಉದ್ದಿಮೆಗಳು, ರಫ್ತುಕೇಂದ್ರಿತ ಕೈಗಾರಿಕಾ ನೀತಿ, ಕೊಡಲಾಗುವ ರಿಯಾಯಿತಿ/ವಿನಾಯಿತಿ ಮತ್ತು ಪ್ರೋತ್ಸಾಹನಾ ಭತ್ಯೆಗಳನ್ನು ಕುರಿತು ಸಮಗ್ರ ಮಾಹಿತಿ…

Read More

ಬೆಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) – ಎಐ ಮತ್ತು ಡೇಟಾ ಸೈನ್ಸ್ ಶಾಖೆಯ ಮೂವರು ವಿದ್ಯಾರ್ಥಿಗಳು ಧಾರವಾಡದ ಐಐಐಟಿ ಮತ್ತು ಐಐಟಿ ಸಂಯುಕ್ತವಾಗಿ ಆಯೋಜಿಸಿದ್ದ ಹ್ಯಾಕಥಾನ್‌ನಲ್ಲಿ ಟಾಪ್ 5 ತಂಡಗಳಲ್ಲಿ 5ನೇ ಸ್ಥಾನಗಳಿಸಿದ್ದಾರೆ. ಈ ಕಾರ್ಯಕ್ರಮವನ್ನು ಉತ್ತರ ಕರ್ನಾಟಕದ ಅತಿದೊಡ್ಡ ಕೋಡಿಂಗ್ ಸ್ಪರ್ಧೆ ಎಂದು ಗುರುತಿಸಲಾಗಿದ್ದು, ರಾಜ್ಯದ 80 ಕಾಲೇಜುಗಳಿಂದ 125ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು. ಈ ತೀವ್ರ ಸ್ಪರ್ಧೆಯಲ್ಲಿ ಪಿಯೂಷ್, ಅದ್ವಿಕಾ ಮತ್ತು ಪ್ರಜ್ವಲ್ ವಿದ್ಯಾರ್ಥಿಗಳ ತಂಡ ತಮ್ಮ ನೂತನ ಪರಿಹಾರಗಳು ಮತ್ತು ತಾಂತ್ರಿಕ ಪರಿಣತಿಯಿಂದ ಹೊರಹೊಮ್ಮಿದರು. ಅವರ ಸಾಧನೆ ಅವರಿಗೆ ಐಐಐಟಿ ಮತ್ತು ಐಐಟಿ ಧಾರವಾಡದಲ್ಲಿ ಇನ್ಕ್ಯೂಬೇಷನ್ ಅವಕಾಶಗಳನ್ನು ನೀಡಿದ್ದು, ಭವಿಷ್ಯದ ಉದ್ಯಮಶೀಲ ಪ್ರಯತ್ನಗಳಿಗೆ ದಾರಿ ತೆರೆದಿದೆ. ಜೊತೆಗೆ, ತಂಡಕ್ಕೆ ಅಲ್ಗೊರಿದಮ್ 365 ಪ್ರಾಯೋಜಿತ ₹1 ಲಕ್ಷ ಮೌಲ್ಯದ ಫುಲ್ ಸ್ಟಾಕ್ ಡೆವಲಪ್ಮೆಂಟ್ ಕೋರ್ಸ್ ದೊರೆತಿದೆ. ಇದು ಅವರ ಕೌಶಲ್ಯವನ್ನು ಮತ್ತಷ್ಟು ಬಲಪಡಿಸಲು ಸಹಾಯ ಮಾಡಲಿದೆ. ವಿದ್ಯಾರ್ಥಿಗಳ ಸಾಧನೆ ಕುರಿತು ಅಧ್ಯಾಪಕರು ಅಪಾರ ಹೆಮ್ಮೆ ವ್ಯಕ್ತಪಡಿಸಿದ್ದು, ಅವರ…

Read More

ಬೆಂಗಳೂರು: ಸ್ಥಳೀಯ ಆರ್ಥಿಕ ವೇಗವರ್ಧಕ ಕಾರ್ಯಕ್ರಮ (ಲೀಪ್‌- LEAP – Local Economic Accelerator Program ) ಅಡಿಯಲ್ಲಿ ಕಲಬುರಗಿಯಲ್ಲಿ ಹೊಸ ಉದ್ಯಮಶೀಲತಾ ಕೇಂದ್ರ ಪ್ರಾರಂಭಿಸುವುದಾಗಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವರು, ಲೀಪ್ ₹ 1,000 ಕೋಟಿ ವೆಚ್ಚದ ಐದು ವರ್ಷಗಳ ಉಪಕ್ರಮವಾಗಿದೆ. ಪ್ರಾದೇಶಿಕ ಉದ್ಯಮಶೀಲತೆಗೆ ಚೇತರಿಕೆ ನೀಡಲು, ನಾವೀನ್ಯತೆ ವಿಕೇಂದ್ರೀಕರಿಸಲು ಮತ್ತು ರಾಜ್ಯದ ಪ್ರವರ್ಧಮಾನಕ್ಕೆ ಬರುತ್ತಿರುವ ತಂತ್ರಜ್ಞಾನ ಕ್ಲಸ್ಟರ್‌ಗಳಲ್ಲಿ ಆರ್ಥಿಕ ಬೆಳವಣಿಗೆ ತ್ವರಿತಗೊಳಿಸಲು ಇದು ನೆರವಾಗಲಿದೆ. ಕಲ್ಯಾಣ ಕರ್ನಾಟಕದಾದ್ಯಂತ ಕೃಷಿ-ತಂತ್ರಜ್ಞಾನ, ಗ್ರಾಮೀಣ ನಾವೀನ್ಯತೆ ಮತ್ತು ಯುವಜನರಲ್ಲಿ ಉದ್ಯಮಶೀಲತೆ ಉತ್ತೇಜಿಸಲು 15,000 ಚದರ ಅಡಿ ವಿಸ್ತೀರ್ಣದ ಹೊಸ ನವೋದ್ಯಮ ಕೇಂದ್ರ ಮತ್ತು ಪ್ರಾಥಮಿಕ ಮಾದರಿ ಪ್ರಯೋಗಾಲಯ ಸ್ಥಾಪನೆಯಾಗಲಿದ್ದು ಮುಂದಿನ ವರ್ಷದ ಜನವರಿಯಲ್ಲಿ ಕಾರ್ಯಾರಂಭ ಮಾಡಲಿದೆ ಎಂದು ಸಚಿವರು ಹೇಳಿದ್ದಾರೆ. ಕೃಷಿಕಲ್ಪ ಪ್ರತಿಷ್ಠಾನದ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುತ್ತಿರುವ ಉದ್ಯಮಶೀಲತಾ ಕೇಂದ್ರವು, ಕಲ್ಯಾಣ ಕರ್ನಾಟಕ…

Read More

ಶಿವಮೊಗ್ಗ : ನಾನು ಯಾವ ಗುಂಪಿನಲ್ಲಯೂ ಇಲ್ಲ. ನನ್ನದು ಕಾಂಗ್ರೇಸ್ ಗುಂಪು. ಪಕ್ಷದ ಹೈಕಮಾಂಡ್ ಏನನ್ನು ಸೂಚಿಸುತ್ತದೆಯೋ ಅದನ್ನು ಅನುಸರಿಸುತ್ತೇನೆ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಹೊಳೆಬಾಗಿಲಿನಲ್ಲಿ ಸೋಮವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, ನಾನೊಬ್ಬ ಕಾಂಗ್ರೆಸ್ಸಿಗ. ಯಾವ ಬಣದ ಜೊತೆಯೂ ಗುರುತಿಸಿಕೊಳ್ಳುವುದಿಲ್ಲ. ನನಗೆ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಸಚಿವರು ಕೆಲಸ ಮಾಡಿ ಕೊಡುತ್ತಾರೆ. ಇಂತಹ ಹೊತ್ತಿನಲ್ಲಿ ಬಣದ ಹಿಂದೆ ಹೋಗುವುದಿಲ್ಲ ಎಂದು ಸ್ಟಷ್ಟಪಡಿಸಿದರು. ರಾಜ್ಯದಲ್ಲಿ ಕಾಂಗ್ರೇಸ್‌ನಲ್ಲಿ ನಡೆಯುತ್ತಿರುವ ವಿದ್ಯಮಾನ ಬೇಸರ ತರಿಸಿದೆ. ಕೇಂದ್ರ ನಾಯಕರು ತಕ್ಷಣ ಗೊಂದಲಕ್ಕೆ ಪರಿಹಾರ ಸೂಚಿಸಬೇಕು. ಪಕ್ಷದ ಜೊತೆ ಇದ್ದರೇ, ಹೈಕಮಾಂಡ್ ಮಾತಿಗೆ ಬದ್ದವಿದ್ದರೇ ಸಚಿವ ಸ್ಥಾನ ಸಿಗುತ್ತದೆ ಎನ್ನುವ ವಿಶ್ವಾಸವಿದೆ. ಹಿಂದಿನಿಂದಲೂ ನಾನು ಹೈಕಮಾಂಡ್ ಮಾತಿಗೆ ಬದ್ದನಾಗಿದ್ದವನು ಎಂದು ಹೇಳಿದರು. ಕೆಲವರು ಸಚಿವ ಸ್ಥಾನಕ್ಕಾಗಿ ದೆಹಲಿಗೆ ಹೋಗಿ ಹೈಕಮಾಂಡ್ ಭೇಟಿ ಮಾಡುವುದು ತಪ್ಪಲ್ಲ. ಎಲ್ಲರಿಗೂ ಸಚಿವರಾಗಬೇಕು ಎನ್ನುವ…

Read More

ಶಿವಮೊಗ್ಗ: ರಾಜ್ಯ ಸರ್ಕಾರವು ಮೀನುಗಾರರರ ಹಿತರಕ್ಷಣೆಗೆ ಬದ್ಧವಾಗಿದೆ. ಅವರಿಗಾಗಿ ಅಗತ್ಯ ಕ್ರಮ ಕೂಡ ಕೈಗೊಂಡಿದೆ. ಮೀನುಗಾರಿಕೆ ಉದ್ಯಮದ ಪುನಶ್ಚೇತನಕ್ಕೂ ಹೊಸ ಹೊಸ ಯೋಜನೆ ಜಾರಿಗೊಳಿಸುತ್ತಿರುವುದಾಗಿ ಸಾಗರ ಶಾಸಕ  ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಹೊಳೆಬಾಗಿಲಿನಲ್ಲಿ ಮೀನುಗಾರಿಕೆ ಇಲಾಖೆಯಿಂದ ಶರಾವತಿ ಹಿನ್ನೀರಿಗೆ ಬಲಿತ ಮೀನುಮರಿಯನ್ನು ಬಿತ್ತನೆ ಮಾಡಿ ಮಾತನಾಡಿದಂತ ಅವರು, ಶರಾವತಿ ಹಿನ್ನೀರು ಪ್ರದೇಶದಲ್ಲಿ ಸುಮಾರು 87 ಲಕ್ಷ ಬಲಿತ ಮೀನಿನ ಮರಿಯನ್ನು ಬಿಡಲಾಗುತ್ತಿದೆ. ಶರಾವತಿ ಹಿನ್ನೀರಿನಲ್ಲಿ 67 ಲಕ್ಷ, ತಲಕಳಲೆ ಡ್ಯಾಂಗೆ 12 ಲಕ್ಷ ಮತ್ತು ಶಿರೂರು ಕೆರೆಗೆ 2 ಲಕ್ಷ ಬಲಿತ ಮರಿಗಳನ್ನು ಬಿತ್ತನೆ ಮಾಡಲಾಗುತ್ತಿದೆ. ಮುಂದಿನ ಆರರಿಂದ ಒಂದು ವರ್ಷದಲ್ಲಿ ಮೀನು ದೊಡ್ಡದಾಗುತ್ತದೆ. ಇದರ ಜೊತೆಗೆ ನದಿ ತಟದಲ್ಲಿ ಮೀನುಗಾರರ ಸಂಘದ ಜೊತೆ ಇಲಾಖೆ ವತಿಯಿಂದ ಮೀನು ಬೆಳೆಸುವ ಕೆಲಸವನ್ನು ಮಾಡಲಾಗುತ್ತಿದೆ. ಮೀನುಗಾರರಿಗೆ ಸಾಧನಾ ಸಲಕರಣೆಗಳಾದ ಬೋಟು, ಬಲೆ, ಉಕ್ಕಡ ಇನ್ನಿತರೆ ಕೊಡಲಾಗುತ್ತದೆ ಎಂದರು. ಮೀನುಗಾರರಿಗೆ…

Read More

ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚಿನ್ನಯ್ಯಗೇ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಈ ಕುರಿತಂತೆ ಆರೋಪಿ ಚಿನ್ನಯ್ಯ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಕೋರ್ಟ್ 1 ಲಕ್ಷ ಬಾಂಡ್, ಇಬ್ಬರ ಶೂರಿಟಿಯೊಂದಿಗೆ 12 ಷರತ್ತುಗಳನ್ನು ವಿಧಿಸಿ ಬುರುಡೆ ಕೇಸಲ್ಲಿ ಆರೋಪಿ ಚಿನ್ನಯ್ಯಗೆ ಜಾಮೀನು ಮಾಡಿದೆ. ಹೀಗಾಗಿ ನಾಳೆ ಶಿವಮೊಗ್ಗ ಜೈಲಿನಿಂದ ಆರೋಪಿ ಚಿನ್ನಯ್ಯ ಬಿಡುಗಡೆಯಾಗುವ ಸಾಧ್ಯತೆ ಇದೆ. https://kannadanewsnow.com/kannada/another-major-loot-in-the-state-after-the-bangalore-robbery/ https://kannadanewsnow.com/kannada/nutritionist-clarifies-whether-to-use-freshly-prepared-or-leftover-atta-dough-kept-in-refrigerator-wheat-is-not-the-villain/

Read More

ಚಿಕ್ಕಬಳ್ಳಾಪುರ: “ಶಾಸಕರ ಖರೀದಿ ಹಾಗೂ ಕುದುರೆ ವ್ಯಾಪಾರ ಬಿಜೆಪಿ ಸಂಸ್ಕೃತಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು. ಶಿಡ್ಲಘಟ್ಟದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ಶಾಸಕರನ್ನು ಕಾಂಗ್ರೆಸ್ ಪಕ್ಷದ ನಾಯಕರೇ ಖರೀದಿ ಮಾಡುವ ಪರಿಸ್ಥಿತಿ ಬಂದಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, “ಈ ಹಿಂದೆ ಬಿಜೆಪಿ ಸರ್ಕಾರ ರಚನೆಯಾದಾಗ ಅವರು ಎಷ್ಟು ಸಾವಿರ ಕೋಟಿ ಖರ್ಚು ಮಾಡಿದ್ದರು. ಮುಖ್ಯಮಂತ್ರಿ ಹುದ್ದೆಗೆ ಎಷ್ಟು ಹಣ ನೀಡಬೇಕಾಗಿತ್ತು, ಮಂತ್ರಿ ಹುದ್ದೆಗೆ ಎಷ್ಟು ಹಣ ನೀಡಲಾಗಿದೆ ಎಂದು ಅವರದೇ ಪಕ್ಷದ ನಾಯಕರು ಬಹಿರಂಗ ಹೇಳಿಕೆ ನೀಡಿದ್ದಾರೆ. ಅವರು ಎಷ್ಟು ಹಣ ಆಮೀಷ ಒಡ್ಡಿದ್ದರು ಎಂದು ವಿಧಾನಸಭೆಯಲ್ಲೂ ಪ್ರಸ್ತಾಪವಾಗಿದ್ದು, ದಾಖಲೆಗಳಲ್ಲಿ ಸೇರಿವೆ. ಈಗ ಬಿಜೆಪಿಯವರು ತಮ್ಮ ಪ್ರವೃತ್ತಿಯನ್ನು ನೆನೆಸಿಕೊಳ್ಳುತ್ತಿದ್ದಾರೆ” ಎಂದು ಹರಿಹಾಯ್ದರು. ಹೈಕಮಾಂಡ್ ಹೇಳಿದ್ದನ್ನು ನಾನು, ಶಿವಕುಮಾರ್ ಸೇರಿದಂತೆ ಎಲ್ಲರೂ ಒಪ್ಪಬೇಕು ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಹೇಳಿದ ಮೇಲೆ ಅದೇ ನಮಗೆ…

Read More

ಹುಬ್ಬಳ್ಳಿ; ನಗರದಲ್ಲಿ ಇಡಿ ಅಧಿಕಾರಿಗಳೆಂದು ಚಿನ್ನದ ವ್ಯಾಪಾರಿಯನ್ನು ಬೆದರಿಸಿ ಬರೋಬ್ಬರಿ 3 ಕೋಟಿ ಲೂಟಿ ಮಾಡಿರುವಂತ ಘಟನೆ ನಡೆದಿದೆ. ಈ ಮೂಲಕ ಬೆಂಗಳೂರಲ್ಲಿ ದರೋಡೆ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಮಹಾ ಲೂಟಿ ನಡೆದಿದೆ. ಹುಬ್ಬಳ್ಳಿಯ ನೀಲಿಜನ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. 3 ಕೋಟಿಗೂ ಹೆಚ್ಚು ಮೌಲ್ಯದ ಚಿನ್ನಾಭರಣ ಲೂಟಿ ಮಾಡಲಾಗಿದೆ. ಕೇರಳ ಮೂಲದ ಚಿನ್ನಾಭರಣ ವ್ಯಾಪಾರಿಗೆ ವಂಚನೆ ಮಾಡಲಾಗಿದೆ. ಕೇರಳದ ಚಿನ್ನಾಭರಣ ವ್ಯಾಪಾರಿ ಎಂ ಆರ್ ಸುದೀನ್ ಎಂಬುವರೇ ವಂಚನೆಗೆ ಒಳಗಾದಂತವರಾಗಿದ್ದಾರೆ. ಕಳೆದ ಗುರುವಾರ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿಚಾರಣೆ ನೆಪದಲ್ಲಿ 2 ಕೆಜಿ 942 ಗ್ರಾಂ ಚಿನ್ನಾಭರಣ, 2 ಲಕ್ಷ ನಗದು ದೋಚಿ ಖದೀಮರು ಎಸ್ಕೇಪ್ ಆಗಿದ್ದಾರೆ. ನವೆಂಬರ್.15ರಂದು ಕೆಲಸಗಾರ ವಿವೇಕ್ ಜೊತೆಗೆ ಸುದೀನ್ ಮಂಗಳೂರಿನಿಂದ ಹುಬ್ಬಳ್ಳಿಗೆ ಬಂದಾಗ ಈ ಘಟನೆ ನಡೆದಿದೆ. https://kannadanewsnow.com/kannada/nutritionist-clarifies-whether-to-use-freshly-prepared-or-leftover-atta-dough-kept-in-refrigerator-wheat-is-not-the-villain/ https://kannadanewsnow.com/kannada/the-power-to-drive-away-evil-lies-in-two-leaves/

Read More

ಚಿಕ್ಕಬಳ್ಳಾಪುರ: “ವಿರೋಧ ಪಕ್ಷಗಳು ಹಗಲುಗನಸು ಕಾಣುವುದನ್ನು ಬಿಡಬೇಕು. ಏಕೆಂದರೆ 2028 ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದು ಜನಸೇವೆ ಮುಂದುವರೆಸಲಿದೆ ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಲ್ಲಿ ಸೋಮವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಭಾಗವಹಿಸಿ ಮಾತನಾಡಿದರು. “ರಾಜ್ಯದಲ್ಲಿ ಅಭಿವೃದ್ಧಿಯ ಸಂಗಮವಾಗಿದೆ. 2 ಸಾವಿರ ಕೋಟಿ ರೂ. ಮೊತ್ತದ ಅಭಿವೃದ್ಧಿ ಕೆಲಸವನ್ನು ವಿರೋಧ ಪಕ್ಷದ ಶಾಸಕರ ಕ್ಷೇತ್ರಕ್ಕೆ ಕಾಂಗ್ರೆಸ್ ಸರ್ಕಾರ ನೀಡುತ್ತಿದೆ ಎಂದರೆ ನಮ್ಮ ಜನಪರ ಧೋರಣೆಯನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಈ ಕ್ಷೇತ್ರದ ಅಭಿವೃದ್ಧಿಗೆ ಇಡೀ ಸರ್ಕಾರವೇ ಬಂದಿದೆ ಎಂದರೆ ನಮಗೆ ಜನರ ಮೇಲಿನ ಪ್ರೀತಿಯೇ ಕಾರಣ” ಎಂದು ಹೇಳಿದರು. “ರಾಜ್ಯದ ಪ್ರತಿ ಮಹಿಳೆಯರು ಅವರ ಖಾತೆಗೆ ಹಣ ಬಂದಾಗಲೆಲ್ಲಾ ನಮ್ಮ ಸರ್ಕಾರವನ್ನು ನೆನಪಿಸಿಕೊಳ್ಳುತ್ತಾರೆ. ಯಾವುದೇ ಪುಣ್ಯ ಕ್ಷೇತ್ರಗಳಿಗೆ ಹೋದರೂ ನಮ್ಮ ಒಳಿತಿಗೆ ಪ್ರಾರ್ಥನೆ ಮಾಡುತ್ತಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ಬಂದಾಗ ಮಹಿಳೆಯರು ಗೌರವದಿಂದ ಅವರಿಗೆ ನಮಿಸಿದರು.…

Read More

ಬೆಂಗಳೂರು: ನಗರದಲ್ಲಿ ಪತ್ನಿ ಕಿರುಕುಳದಿಂದ ಪತಿ ಸಾವನ್ನಪ್ಪಿದ ಘಟನೆಗಳು ಅನೇಕವು ದಾಖಲಾಗಿದ್ದವು. ಈ ಬೆನ್ನಲ್ಲೇ ಪತಿಯ ಕಿರುಕುಳಕ್ಕೆ ಬೇಸತ್ತು ಪತ್ನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಗೋವಿಂದರಾಜನಗರದಲ್ಲಿ ಪತಿಯ ಕಿರುಕುಳ, ಹಿಂಸೆಗೆ ಬೇಸತ್ತು ರೇಖಾ ಮಾಯಪ್ಪ ನಂದಿ(25) ಎಂಬಾಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವರದಕ್ಷಿಣೆ ತರುವಂತೆ ಪತಿ ಮಾಯಪ್ಪ ದಿನವೂ ಕಿರುಕುಳ ನೀಡುತ್ತಿದ್ದರಂತೆ. ಅವರ ಕಿರುಕುಳ, ಹಿಂಸೆ ಸಹಿಸಲಾರದೇ ಇಬ್ಬರು ಮಕ್ಕಳನ್ನು ಬಿಟ್ಟು ರೇಖಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂದಹಾಗೇ ರೇಖಾ ಪತಿ ಮಾಯಪ್ಪ ಅವರು ಗ್ರೇಟರ್ ಬೆಂಗಳೂರು ಪ್ರಾಧಿಕಾರದಲ್ಲಿ ಮಾರ್ಷಲ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತಿ ಚಿತ್ರಹಿಂಸೆಯಿಂದ ರೇಖಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಬಳಿಕ ಮಾಯಪ್ಪ ನಾಪತ್ತೆಯಾಗಿದ್ದಾರೆ. ಅವರ ಪತ್ತೆಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. https://kannadanewsnow.com/kannada/nutritionist-clarifies-whether-to-use-freshly-prepared-or-leftover-atta-dough-kept-in-refrigerator-wheat-is-not-the-villain/ https://kannadanewsnow.com/kannada/there-will-be-no-electricity-in-these-areas-of-bengaluru-tomorrow-from-10-am-to-5-pm/

Read More