Subscribe to Updates
Get the latest creative news from FooBar about art, design and business.
Author: kannadanewsnow09
ಮಂಡ್ಯ: ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ ರಸ್ತೆ ಬದಿಯ ಮರಗಳ ಸಮೀಕ್ಷೆ ನಡೆಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತ ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರಿನಲ್ಲಿಂದು ಜಿಲ್ಲಾ ಅರಣ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮಂಡ್ಯದ 7 ವಲಯಗಳಲ್ಲಿರುವ ನರ್ಸರಿಗಳಲ್ಲಿ ತೇಗ, ಶ್ರೀಗಂಧ, ಹೊನ್ನೆ ಇತ್ಯಾದಿ ಗುಣಮಟ್ಟದ ಸಸಿಗಳನ್ನು ಬೆಳೆಸಿ ರೈತರಿಗೆ ವಿತರಿಸುವಂತೆ ಮತ್ತು ವಿತರಿಸಿದ ಸಸಿಗಳ ಪೈಕಿ ಎಷ್ಟು ಬದುಕುಳಿದಿವೆ ಎಂಬ ಬಗ್ಗೆ ಸಮೀಕ್ಷೆ ನಡೆಸುವಂತೆಯೂ ತಿಳಿಸಿದರು. ಜಿಲ್ಲೆಯ ಹಲವೆಡೆ ಚಿರತೆಗಳ ಸಮಸ್ಯೆಯ ಪರಿಹಾರಕ್ಕೆ ತತ್ ಕ್ಷಣವೇ ಕ್ರಮ ವಹಿಸುವಂತೆ ತಿಳಿಸಿದ ಅವರು, ಕಾಡಿನಂಚಿನ ಗ್ರಾಮದ ಜನರೊಂದಿಗೆ ಸೌಹಾರ್ದ ಸಂಬಂಧ ಬೆಳೆಸಿಕೊಂಡರೆ, ಕಾಡ್ಗಿಚ್ಚು, ಕಳ್ಳಬೇಟೆ, ಅಕ್ರಮ ಮರ ಕಡಿತಲೆಯಂತಹ ಅಪರಾಧಗಳ ಬಗ್ಗೆ ತಕ್ಷಣದ ಮಾಹಿತಿ ಲಭಿಸುತ್ತದೆ, ವನ ಮತ್ತು ವನ್ಯಜೀವಿ ಸಂರಕ್ಷಣೆಯನ್ನು ಪರಿಣಾಮಕಾರಿಯಾಗಿ ಮಾಡಲು ಸಾಧ್ಯವಾಗುತ್ತದೆ ಎಂದರು. ಜಿಯೋ ಟ್ಯಾಗ್…
ನವದೆಹಲಿ: ಸಂಪರ್ಕ ಸಚಿವಾಲಯದ ಅಂಚೆ ಇಲಾಖೆಯ ಅಡಿಯಲ್ಲಿ ಬರುವ ಶೇ.100 ರಷ್ಟು ಭಾರತ ಸರ್ಕಾರದ ಸ್ವಾಮ್ಯದ ಘಟಕವಾದ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (ಐಪಿಪಿಬಿ) ಇಂದು ಸ್ವಸಹಾಯ ಗುಂಪು (ಎಸ್ಎಚ್ಜಿ) ಉಳಿತಾಯ ಖಾತೆಯನ್ನು ಆರಂಭಿಸುವುದಾಗಿ ಘೋಷಿಸಿದೆ. ಇದು ಗ್ರಾಮೀಣ ಭಾರತದಾದ್ಯಂತ ಮಹಿಳೆಯರ ನೇತೃತ್ವದ ಸ್ವಸಹಾಯ ಗುಂಪುಗಳನ್ನು ಆರ್ಥಿಕ ಸೇರ್ಪಡೆ ಮತ್ತು ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿರುವ ನಿರ್ದಿಷ್ಟ ಕೊಡುಗೆಯಾಗಿದೆ. ಈ ಬಿಡುಗಡೆಯ ಕುರಿತು ಮಾತನಾಡಿದ ಐಪಿಪಿಬಿಯ ವ್ಯವಸ್ಥಾಪಕ ನಿರ್ದೇಶಕರು (ಎಂಡಿ) ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಶ್ರೀ ಆರ್ ವಿಶ್ವೇಶ್ವರನ್, ”ಐಪಿಪಿಬಿಯಲ್ಲಿ ಪ್ರತಿಯೊಬ್ಬ ಭಾರತೀಯರಿಗೂ ಬ್ಯಾಂಕಿಂಗ್ ಸೇವೆಗಳನ್ನು ಸರಳ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡುವುದು ಮತ್ತು ಎಲ್ಲರನ್ನೂ ಒಳಗೊಳ್ಳುವಂತೆ ಮಾಡುವುದು ನಮ್ಮ ಧ್ಯೇಯವಾಗಿದೆ. ಮಹಿಳೆಯರ ನೇತೃತ್ವದ ಸ್ವಸಹಾಯ ಗುಂಪುಗಳಿಗೆ ವಿಶ್ವಾಸಾರ್ಹ ಮತ್ತು ಕಡಿಮೆ ವೆಚ್ಚದಲ್ಲಿ ಬ್ಯಾಂಕಿಂಗ್ ಪರಿಹಾರವನ್ನು ಒದಗಿಸುವ ಮೂಲಕ ಎಸ್ಎಚ್ಜಿ ಉಳಿತಾಯ ಖಾತೆಯನ್ನು ಒದಗಿಸಲಾಗುವುದು. ಮನೆ ಬಾಗಿಲಿನ ಬ್ಯಾಂಕಿಂಗ್ ಮಾದರಿ ಮತ್ತು ಡಿಜಿಟಲ್ ಮೂಲಸೌಕರ್ಯವನ್ನು ಬಳಸಿಕೊಳ್ಳುವ ಮೂಲಕ, ಎಸ್ಎಚ್ಜಿಗಳು ಸಾಂಸ್ಥಿಕ ಹಣಕಾಸು…
ಮಂಡ್ಯ : ಮುಂದಿನ ವರ್ಷದಿಂದ ಮದ್ದೂರು ಉತ್ಸವವನ್ನು ಇನ್ನಷ್ಟು ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು. ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಮದ್ದೂರು ಉತ್ಸವದ ಅಂಗವಾಗಿ ಗುರುವಾರ ಸಂಜೆ ರಾಸುಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಪ್ರಪ್ರಥಮ ಬಾರಿಗೆ ಮದ್ದೂರಮ್ಮನ ಹಬ್ಬ ಹಾಗೂ ಶ್ರೀ ನರಸಿಂಹಸ್ವಾಮಿ ಬ್ರಹ್ಮೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ಮದ್ದೂರು ಉತ್ಸವಕ್ಕೆ ಸಿಕ್ಕ ಉತ್ತಮ ಪ್ರತಿಕ್ರಿಯೆಗೆ ಮನಸೋತಿದ್ದೇನೆ. ಹೀಗಾಗಿ ಮುಂದಿನ ವರ್ಷದಿಂದ ಟ್ರಸ್ಟ್ ವತಿಯಿಂದಲೇ ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದರು. ರೈತರು ತಮ್ಮ ರಾಸುಗಳಿಗೆ ಪೋಷಣೆ ಮಾಡುವುದು ಅಷ್ಟು ಸುಲಭದ ಮಾತಲ್ಲ. ಮನೆ ಮಕ್ಕಳಂತೆ ರಾಸುಗಳನ್ನು ಪೋಷಣೆ ಮಾಡುತ್ತಾರೆ ಹೀಗಾಗಿ ಅವರಿಗೆ ಗೌರವ ಸಮರ್ಪಣೆ ಮಾಡಬೇಕು ಹಾಗೂ ಜಾತ್ರೆಗೆ ಹೆಚ್ಚಿನ ಪ್ರಮಾಣದಲ್ಲಿ ರಾಸುಗಳು ಬರಬೇಕು ಎಂಬ ಉದ್ದೇಶದಿಂದ ಬಹುಮಾನ ನೀಡಿ ಪ್ರೋತ್ಸಾಹಿಸಲಾಗುತ್ತಿದೆ ಎಂದರು. ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿ, ಮದ್ದೂರಿನ…
ಮಂಡ್ಯ : ಮದ್ದೂರು – ಕೊಪ್ಪ ರಸ್ತೆಯನ್ನು ಮೇಲ್ದರ್ಜೆಗೆ ಏರಿಸುವ ಸಂಬಂಧ ಲೋಕೋಪಯೋಗಿ ಇಲಾಖೆ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಶುಕ್ರವಾರ ಹೇಳಿದರು. ಮದ್ದೂರು ತಾಲೂಕಿನ ಬೆಸಗರಹಳ್ಳಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಹೊಸಕೆರೆ, ನಿಲುವಾಗಿಲು, ಕೋಡಿಹಳ್ಳಿ, ಸೀನಪ್ಪನದೊಡ್ಡಿ, ಬೆಸಗರಹಳ್ಳಿ, ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಅಂದಾಜು 2 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಮದ್ದೂರು – ಕೊಪ್ಪ ರಸ್ತೆಯಲ್ಲಿ ದಿನ ದಿನಕ್ಕೂ ವಾಹನಗಳ ಸಂಖ್ಯೆ ಹೆಚ್ಚುತ್ತಿದ್ದು, ಈ ರಸ್ತೆಯು ನಾಗಮಂಗಲ ಮತ್ತು ಮದ್ದೂರು ವಿಧಾನಸಭಾ ಕ್ಷೇತ್ರಗಳಲ್ಲಿ ಹಾದು ಹೋಗಿರುವ ಹಿನ್ನೆಲೆಯಲ್ಲಿ ಸಚಿವರಾದ ಎನ್.ಚಲುವರಾಯಸ್ವಾಮಿ ಮತ್ತು ನಾನು ಇಬ್ಬರು ಕೂಡ ಮೇಲ್ದರ್ಜೆಗೆ ಏರಿಸುವ ವಿಚಾರವಾಗಿ ಈಗಾಗಲೇ ಚರ್ಚೆ ನಡೆಸಿದ್ದು, ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೊಳಿ ಅವರಿಗೆ ಶೀಘ್ರದಲ್ಲೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು. ಕ್ಷೇತ್ರದ ಕೆಲವು ಗ್ರಾಮಗಳಲ್ಲಿ ರಸ್ತೆ, ಚರಂಡಿ ಹಾಗೂ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದ್ದು, ಅವುಗಳನ್ನು ಪಟ್ಟಿ ಮಾಡಿ ಆದ್ಯತೆ ಮೇರೆಗೆ ಅಭಿವೃದ್ಧಿ…
ಮಂಡ್ಯ: ಕಡು ಬೇಸಿಗೆಯ ರಣಬಿಸಿಲಿಗೆ ಮಂಡ್ಯದ ಹೆಮ್ಮೆ, ನಾಡಿನ ಜೀವನಾಡಿ KRS ಜಲಾಶಯ ಸೊರಗುತ್ತಿದೆ. ದಿನೇ ದಿನೇ ಕುಸಿಯುತ್ತಿರುವ ನೀರಿನ ಮಟ್ಟವು ಕೇವಲ ಅಂಕಿ-ಅಂಶಗಳ ಕುಸಿತವಲ್ಲ, ಬದಲಿಗೆ ಲಕ್ಷಾಂತರ ಜನರ ದಾಹ ತಣಿಸುವ ಆಧಾರಸ್ತಂಭ ಅಲುಗಾಡುತ್ತಿರುವ ಮುನ್ಸೂಚನೆಯಾಗಿದೆ. ಅತಂತ್ರ ಸ್ಥಿತಿಯಲ್ಲಿ ನೀರಿನ ಮಟ್ಟ ಜಲಾಶಯದ ಗರಿಷ್ಠ ಮಟ್ಟ 124.80 ಅಡಿಯಾಗಿದ್ದು, ಪ್ರಸ್ತುತ ಇದು 92.91 ಅಡಿಗೆ ಕುಸಿದಿದೆ. ಅಂದರೆ, ಜಲಾಶಯವು ತನ್ನ ಅರ್ಧಕ್ಕಿಂತ ಹೆಚ್ಚಿನ ಸಂಗ್ರಹ ಸಾಮರ್ಥ್ಯವನ್ನು ಕಳೆದುಕೊಂಡಿದೆ. ಜಲಾಶಯಕ್ಕೆ ಬರುತ್ತಿರುವ ಒಳಹರಿವು ಕೇವಲ 60 ಕ್ಯೂಸೆಕ್ ಆಗಿದ್ದರೆ, ಕುಡಿಯುವ ನೀರು ಹಾಗೂ ಅನಿವಾರ್ಯ ಕಾರಣಗಳಿಗಾಗಿ ಬಿಡಲಾಗುತ್ತಿರುವ ಹೊರಹರಿವು 4371 ಕ್ಯೂಸೆಕ್ ದಾಟಿದೆ. ಈ ಅಸಮತೋಲನವು ಜಲಾಶಯವನ್ನು ಶೀಘ್ರವಾಗಿ ಖಾಲಿ ಮಾಡುತ್ತಿದೆ. ಸಂಕಷ್ಟದಲ್ಲಿ ಪ್ರಮುಖ ನಗರಗಳು KRS ಜಲಾಶಯವು ಕೇವಲ ಮಂಡ್ಯ ಜಿಲ್ಲೆಯ ಸೊತ್ತಲ್ಲ; ಇದು ಬೆಂಗಳೂರು, ಮೈಸೂರು ಮತ್ತು ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳ ಕುಡಿಯುವ ನೀರಿನ ಪ್ರಮುಖ ಮೂಲವಾಗಿದೆ. ಬೆಂಗಳೂರಿನ ಬಾಯಾರಿಕೆ: ಕೋಟಿಗೂ ಅಧಿಕ ಜನಸಂಖ್ಯೆ ಹೊಂದಿರುವ ರಾಜಧಾನಿ…
ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು ₹2162ರಿಂದ ₹3153ಕ್ಕೆ ಏರಿಸಿರುವುದು, ಒಟ್ಟು ₹991ರ ಭಾರೀ ಏರಿಕೆ ಕೇಂದ್ರ ಸರ್ಕಾರದ ಜನವಿರೋಧಿ ನಿರ್ಧಾರವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತೀವ್ರವಾಗಿ ಖಂಡಿಸಿದ್ದಾರೆ. ಈ ಪ್ರಮಾಣದ ಬೆಲೆ ಏರಿಕೆ ಹಿಂದೆ ಎಂದೂ ಕಂಡಿಲ್ಲ. ಕೆಲವು ರಾಜ್ಯಗಳ ಚುನಾವಣೆ ಮುಗಿದ ತಕ್ಷಣ ಇಂತಹ ಜನವಿರೋಧಿ ನಿರ್ಧಾರ ತೆಗೆದುಕೊಂಡಿರುವುದು ಜನರಿಗೆ ನೀಡಿದ ಭರವಸೆಗಳನ್ನೇ ಮರೆತಂತಾಗಿದೆ. ಇದು ನೇರವಾಗಿ ಹೊಟೇಲ್ ಉದ್ಯಮದ ಮೇಲೆ ಹಾಗೂ ಸಾಮಾನ್ಯ ಜನರ ಬದುಕಿನ ಮೇಲೆ ಗದಾಪ್ರಹಾರವಾಗಿದೆ ಎಂದಿದ್ದಾರೆ. ಹೋಟೆಲ್ ಮಾಲೀಕರು ಈಗಾಗಲೇ ಬೆಲೆ ಏರಿಕೆಯ ಒತ್ತಡವನ್ನು ಎದುರಿಸುತ್ತಿದ್ದಾರೆ. ಈ ನಿರ್ಧಾರದಿಂದ ಆಹಾರ ಪದಾರ್ಥಗಳ ಬೆಲೆ ಮತ್ತಷ್ಟು ಏರಿಕೆಯಾಗಲಿದೆ. ಅದರ ಪರಿಣಾಮವಾಗಿ ದಿನನಿತ್ಯ ಜೀವನ ನಡೆಸುವ ಸಾಮಾನ್ಯ ಜನರು ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಹೇಳಿದ್ದಾರೆ. ಕೇಂದ್ರ ಸರ್ಕಾರ ಜನರ ಜೀವನೋಪಾಯವನ್ನು ಕಷ್ಟಕರಗೊಳಿಸುವ ಬದಲು, ಬೆಲೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಆದರೆ, ಚುನಾವಣೆಯ ಬಳಿಕ…
ಬೆಂಗಳೂರು: ಬೌದ್ಧ ಧರ್ಮದ ಪವಿತ್ರ ಗ್ರಂಥಗಳೆಂದು ಪರಿಗಣಿಸಲಾಗುವ ತಿಪಿಟಕ ಗ್ರಂಥಗಳನ್ನು ಪಾಲಿ ಭಾಷೆಯಿಂದ ಕನ್ನಡಕ್ಕೆ ಅನುವಾದ ಮಾಡಿಸಿ ಪ್ರಕಟಿಸುವ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರಿನ ಸದಾಶಿವನಗರದಲ್ಲಿರುವ ನಾಗಸೇನಾ ಬುದ್ಧ ವಿಹಾರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಭಗವಾನ್ ಬುದ್ಧ ಜಯಂತಿಯನ್ನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು . ಭಗವಾನ್ ಬುದ್ಧರ ಬೋಧನೆಗಳು ಹಿಂದೆoದಿಗಿಂತಲೂ ಈಗ ಹೆಚ್ಚು ಪ್ರಸ್ತುತವಾಗಿದೆ, ಮನುಷ್ಯ ಅತಿಯಾದ ಆಸೆಗಳಲ್ಲಿ ಹಾಗೂ ಹಿಂಸೆಯಲ್ಲಿ ಮುಳುಗಿರುವ ಈ ಸಂದರ್ಭದಲ್ಲಿ ಭಗವಾನ್ ಬುದ್ಧರು ಬೋಧಿಸಿದ ಶಾಂತಿಯ ತತ್ವ ಹಾಗೂ ಅವರ ಮನುಷ್ಯ ಕರುಣೆ ಅತ್ಯಂತ ಮುಖ್ಯವಾಗಿದೆ. ಆ ತತ್ವಗಳನ್ನು ಪುಸ್ತಕಗಳ ಮೂಲಕ ಇಂದಿನ ವಿದ್ಯಾರ್ಥಿಗಳಿಗೆ ಹಾಗೂ ಮುಂದಿನ ತಲೆಮಾರಿಗೆ ತಲುಪಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಹೇಳಿದರು. ಇದಲ್ಲದೆ ಬೌದ್ಧರ ಸ್ಮಾರಕಗಳ ರಕ್ಷಣೆ ಮತ್ತು ಪುನರ್…
ನವದೆಹಲಿ: ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ರಾಷ್ಟ್ರೀಯ ಆರೋಗ್ಯ ಅಭಿಯಾನದ (NHM) ಅವಧಿಯನ್ನು ಮಧ್ಯಂತರವಾಗಿ ವಿಸ್ತರಿಸಿ ಆದೇಶ ಹೊರಡಿಸಿದೆ. ಈ ನಿರ್ಧಾರವು ದೇಶದಾದ್ಯಂತ ಸಾರ್ವಜನಿಕ ಆರೋಗ್ಯ ಸೇವೆಗಳ ನಿರಂತರತೆಯನ್ನು ಖಚಿತಪಡಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ವಿಸ್ತರಣೆಯ ಪ್ರಮುಖ ಮುಖ್ಯಾಂಶಗಳು ಅವಧಿ: ರಾಷ್ಟ್ರೀಯ ಆರೋಗ್ಯ ಅಭಿಯಾನದ ಅವಧಿಯನ್ನು 31.03.2026 ರಿಂದ ಮುಂದಿನ ಆರು ತಿಂಗಳವರೆಗೆ ಅಥವಾ 16ನೇ ಹಣಕಾಸು ಆಯೋಗದ ಅಡಿಯಲ್ಲಿ ಮೌಲ್ಯಮಾಪನ ಪೂರ್ಣಗೊಳ್ಳುವವರೆಗೆ (ಯಾವುದು ಮೊದಲೋ ಅಲ್ಲಿಯವರೆಗೆ) ವಿಸ್ತರಿಸಲಾಗಿದೆ. ತಿಳುವಳಿಕಾ ಒಪ್ಪಂದ (MoU): ಕೇಂದ್ರ ಸರ್ಕಾರ ಮತ್ತು ರಾಜ್ಯ/ಕೇಂದ್ರಾಡಳಿತ ಪ್ರದೇಶಗಳ ನಡುವಿನ ಅಸ್ತಿತ್ವದಲ್ಲಿರುವ ತಿಳುವಳಿಕಾ ಒಪ್ಪಂದಗಳು 30.09.2026 ರವರೆಗೆ ಮುಂದುವರಿಯಲಿವೆ ಎಂದು ಪರಿಗಣಿಸಲಾಗುತ್ತದೆ. ಷರತ್ತುಗಳು: ಈ ವಿಸ್ತರಣೆಯು ಈ ಹಿಂದಿನ ಅನುಮೋದನೆಗಳು ಮತ್ತು ಮಾರ್ಗಸೂಚಿಗಳಲ್ಲಿ ನಿಗದಿಪಡಿಸಲಾದ ನಿಯಮ ಹಾಗೂ ಷರತ್ತುಗಳಿಗೆ ಒಳಪಟ್ಟಿರುತ್ತದೆ. ರಾಜ್ಯಗಳಿಗೆ ನೀಡಲಾದ ಸೂಚನೆಗಳು ಕೇಂದ್ರ ಸರ್ಕಾರವು ಎಲ್ಲಾ ರಾಜ್ಯಗಳ ಮಿಷನ್ ನಿರ್ದೇಶಕರಿಗೆ ಈ ಕೆಳಗಿನ ಸೂಚನೆಗಳನ್ನು ಪಾಲಿಸಲು ತಿಳಿಸಿದೆ: ಕಾರ್ಯಚಟುವಟಿಕೆಗಳ ಮುಂದುವರಿಕೆ: ಚಾಲ್ತಿಯಲ್ಲಿರುವ ಮಾರ್ಗಸೂಚಿಗಳ…
ನವದೆಹಲಿ: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯು (CBSE) ತನ್ನ ಪಠ್ಯಕ್ರಮದಲ್ಲಿ ಈ ವರ್ಷದಿಂದ ಮಹತ್ವದ ಬದಲಾವಣೆಗಳನ್ನು ಜಾರಿಗೆ ತಂದಿದೆ. ರಾಷ್ಟ್ರೀಯ ಶಿಕ್ಷಣ ನೀತಿ (NEP) 2020ರ ಶಿಫಾರಸಿನಂತೆ ವಿದ್ಯಾರ್ಥಿಗಳ ಕಲಿಕಾ ಕ್ರಮದಲ್ಲಿ ಹಲವು ಹೊಸ ನಿಯಮಗಳನ್ನು ಅಳವಡಿಸಲಾಗಿದ್ದು, ಈ ಕುರಿತು ಏಪ್ರಿಲ್ 9ರಂದು ಅಧಿಕೃತ ಸುತ್ತೋಲೆ ಹೊರಡಿಸಲಾಗಿದೆ. ತ್ರಿಭಾಷಾ ಸೂತ್ರದ ಕಡ್ಡಾಯ ಜಾರಿ ಇಲ್ಲಿಯವರೆಗೆ ದ್ವಿಭಾಷಾ ಸೂತ್ರವನ್ನು ಪಾಲಿಸುತ್ತಿದ್ದ ಸಿಬಿಎಸ್ಇ, ಇನ್ನುಮುಂದೆ ತ್ರಿಭಾಷಾ ಸೂತ್ರವನ್ನು ಕಡ್ಡಾಯಗೊಳಿಸುತ್ತಿದೆ. ಯಾರಿಗೆ ಅನ್ವಯ?: 2026–27ನೇ ಶೈಕ್ಷಣಿಕ ವರ್ಷದಿಂದ 6ನೇ ತರಗತಿಯ ವಿದ್ಯಾರ್ಥಿಗಳಿಗೆ ಮೂರನೇ ಭಾಷೆ ಕಲಿಕೆ ಕಡ್ಡಾಯವಾಗಲಿದೆ. ಬೋರ್ಡ್ ಪರೀಕ್ಷೆ: ಈ ಬದಲಾವಣೆಯನ್ವಯ, 2031ರಲ್ಲಿ 10ನೇ ತರಗತಿ ಬೋರ್ಡ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಒಟ್ಟು ಮೂರು ಭಾಷೆಗಳ ಪರೀಕ್ಷೆಯನ್ನು ಎದುರಿಸಬೇಕಾಗುತ್ತದೆ. ಭಾಷಾ ಆಯ್ಕೆ: ವಿದ್ಯಾರ್ಥಿಗಳು ಕನಿಷ್ಠ ಎರಡು ಭಾರತೀಯ ಭಾಷೆಗಳನ್ನು ಕಡ್ಡಾಯವಾಗಿ ಕಲಿಯಬೇಕು. ವಿಶೇಷವೆಂದರೆ, ಹೊಸ ನಿಯಮದಡಿ ಇಂಗ್ಲಿಷ್ ಅನ್ನು ವಿದೇಶಿ ಭಾಷೆ ಎಂದೇ ಪರಿಗಣಿಸಲಾಗಿದೆ. ಹೀಗಾಗಿ ಇಂಗ್ಲಿಷ್ ಕಲಿಯುವವರು ಫ್ರೆಂಚ್ ಅಥವಾ ಜರ್ಮನ್ನಂತಹ ಇತರ…
ಬೆಂಗಳೂರು: ಕರ್ನಾಟಕ ಸರ್ಕಾರವು ಮದ್ಯದ ವ್ಯವಹಾರ ಹಾಗೂ ಬಳಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ‘ಕರ್ನಾಟಕ ರಾಜ್ಯ ಅಬಕಾರಿ ಸುಧಾರಣೆಗಳು 2026’ ಎಂಬ ಕರಡು ನೀತಿಯನ್ನು ಸಾರ್ವಜನಿಕರ ಸಮಾಲೋಚನೆಗಾಗಿ ಬಿಡುಗಡೆ ಮಾಡಿದೆ. ಕೇವಲ ಆದಾಯ ಗಳಿಕೆಯಷ್ಟೇ ಅಲ್ಲದೆ, ಸಾಮಾಜಿಕ ಹೊಣೆಗಾರಿಕೆ ಮತ್ತು ಜನರ ಆರೋಗ್ಯಕ್ಕೆ ಆದ್ಯತೆ ನೀಡಿರುವ ಈ ಜನಕೇಂದ್ರಿತ ನೀತಿಯು ರಾಜ್ಯದಲ್ಲಿ ಹೊಸ ಬದಲಾವಣೆಯ ಮುನ್ಸೂಚನೆ ನೀಡಿದೆ. ಆರ್ಥಿಕತೆ ಮತ್ತು ಸಾಮಾಜಿಕ ಪರಿಣಾಮ: ಒಂದು ಅವಲೋಕನ ಪ್ರಸ್ತುತ ಮದ್ಯದ ಮಾರಾಟದಿಂದ ಸರ್ಕಾರಕ್ಕೆ ವಾರ್ಷಿಕವಾಗಿ ಸುಮಾರು ₹34,600 ಕೋಟಿ ಆದಾಯ ಉತ್ಪಾದನೆಯಾಗುತ್ತಿದೆ. ಆದರೆ, ಮದ್ಯಪಾನದಿಂದ ಉಂಟಾಗುವ ರಸ್ತೆ ಅಪಘಾತಗಳು, ಕೌಟುಂಬಿಕ ಹಿಂಸಾಚಾರ, ಯಕೃತ್ಗೆ ಸಂಬಂಧಿಸಿದ ರೋಗಗಳು, ಮದ್ಯ ಸೇವನೆಯಿಂದಾಗುವ ಇತರ ಕಾಯಿಲೆಗಳು ಮತ್ತು ಕುಟುಂಬದ ಆದಾಯ ನಷ್ಟ ಮುಂತಾದ ಸಾಮಾಜಿಕ ಹಾನಿಯ ಒಟ್ಟಾರೆ ವೆಚ್ಚವು ಸುಮಾರು ₹51,000 ಕೋಟಿ ಎಂದು ಅಂದಾಜಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಮದ್ಯದ ದರವನ್ನು ಕೇವಲ ಆದಾಯದ ಆಧಾರದ ಮೇಲೆ ನಿಗದಿಪಡಿಸದೆ, ಅದರಿಂದ ಉಂಟಾಗುವ ನೈಜ ಸಾಮಾಜಿಕ ಪರಿಣಾಮಗಳ ಮಾನದಂಡದ ಆಧಾರದ…














