Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಳಗಾವಿ: ಇಲ್ಲಿನ ಪ್ರಸಿದ್ಧ ಕೆಎಲ್ಇ (KLE) ಆಸ್ಪತ್ರೆಯಲ್ಲಿ ಕಳೆದ 40 ವರ್ಷಗಳಿಂದ ವೈದ್ಯಾಧಿಕಾರಿಯಾಗಿ ಸುದೀರ್ಘ ಸೇವೆ ಸಲ್ಲಿಸಿದ್ದ ಹಿರಿಯ ವೈದ್ಯ ಡಾ. ದಿನೇಶ್ ಭಟ್ಕಳ್ (60+) ಅವರು ಶ್ವಾಸಕೋಶ ಕ್ಯಾನ್ಸರ್ನ ತೀವ್ರ ನೋವು ತಡೆಯಲಾರದೆ ಮನೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ಟಿಳಕವಾಡಿಯ ಮಂಡೋಲಿ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ರಿವಾಲ್ವಾರ್ನಿಂದ ತಲೆಗೆ ಶೂಟ್ ಮಾಡಿಕೊಳ್ಳುವ ಮೂಲಕ ಅವರು ಜೀವನ ಕೊನೆಗಾಣಿಸಿದ್ದಾರೆ. ಕ್ಯಾನ್ಸರ್ ನೋವಿನಿಂದ ಬಳಲಿಕೆ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನವರಾದ ಡಾ. ದಿನೇಶ್ ಭಟ್ಕಳ್, ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಲ್ಲಿ ವೈದ್ಯರಾಗಿ ಪರಿಚಿತರಾಗಿದ್ದರು. ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಇವರಿಗೆ ಶ್ವಾಸಕೋಶದ ಕ್ಯಾನ್ಸರ್ (Lung Cancer) ಇರುವುದು ಪತ್ತೆಯಾಗಿತ್ತು. ಕ್ಯಾನ್ಸರ್ ಚಿಕಿತ್ಸೆ ಪಡೆಯುವ ಉದ್ದೇಶದಿಂದಲೇ ಅವರು ಬೆಳಗಾವಿಯ ಟಿಳಕವಾಡಿ ಬಳಿ ಬಾಡಿಗೆ ಮನೆ ಮಾಡಿಕೊಂಡು ಕುಟುಂಬದೊಂದಿಗೆ ವಾಸವಿದ್ದರು. ಆದರೆ, ಕಾಯಿಲೆಯ ತೀವ್ರತೆಯಿಂದಾಗಿ ಅವರು ಸಹಿಸಲಾಗದ ದೈಹಿಕ ನೋವನ್ನು ಅನುಭವಿಸುತ್ತಿದ್ದರು ಎನ್ನಲಾಗಿದೆ. ಗ್ಯಾಲರಿಯಲ್ಲಿ ತಲೆಗೆ ಶೂಟ್ ಇಂದು ಮುಂಜಾನೆ ಎದ್ದ…
ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಬೀದರ್ ಮತ್ತು ಕಲಬುರಗಿ ಜಿಲ್ಲಾ ಕೇಂದ್ರಗಳಿಗೆ ಕ್ರಮವಾಗಿ ಜೂನ್ 1 ಮತ್ತು ಜೂನ್ 10ರಿಂದ ಬೆಂಗಳೂರಿನಿಂದ ವಿಮಾನಯಾನ ಸೇವೆಯನ್ನು ಪುನಾರಂಭ ಮಾಡಲಾಗುತ್ತಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಶುಕ್ರವಾರ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಸ್ಟಾರ್ ಏರ್ ಲೈನ್ಸ್ (ಘೋಡಾವತ್ ಎಂಟರ್ಪ್ರೈಸಸ್ ಲಿಮಿಟೆಡ್) ಸಂಸ್ಥೆಯು ಬೆಂಗಳೂರು-ಬೀದರ್- ಬೆಂಗಳೂರು ಮತ್ತು ಬೆಂಗಳೂರು- ಕಲಬುರಗಿ- ಬೆಂಗಳೂರು ಮಾರ್ಗದಲ್ಲಿ ವಿಮಾನಯಾನ ಸೇವೆಯನ್ನು ಒದಗಿಸಲಿದೆ. ಇದಕ್ಕೆ ಬೆಂಬಲ ನೀಡಲು ಸರಕಾರವು 28.47 ಕೋಟಿ ರೂ.ಗಳನ್ನು ‘ವಯಬಲಿಟಿ ಗ್ಯಾಪ್ ಫಂಡಿಂಗ್’ ಆಗಿ ಕೊಡುತ್ತಿದೆ. ಎರಡೂ ಕಡೆಯ ವಿಮಾನ ಪ್ರಯಾಣಕ್ಕೆ ಈಗಾಗಲೇ ಮುಂಗಡ ಬುಕಿಂಗ್ ಕೂಡ ಆರಂಭವಾಗಿದೆ ಎಂದಿದ್ದಾರೆ. ಕಲಬುರಗಿಗೆ ಇದ್ದ ವಿಮಾನಸೇವೆಯು ನಷ್ಟದ ಕಾರಣ ಸ್ಥಗಿತಗೊಂಡಿತ್ತು. ಬೀದರ್ ಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ವಿಶೇಷ ನೆರವಿನಿಂದ ಒಂದು ವಿಮಾನ ಓಡಾಡುತ್ತಿತ್ತು. ಸರಕಾರವು ಕಲ್ಯಾಣ ಕರ್ನಾಟಕ ಭಾಗದ ಕೈಗಾರಿಕೆ, ಶಿಕ್ಷಣ, ಪ್ರವಾಸೋದ್ಯಮ, ಕೃಷಿ, ವಾಣಿಜ್ಯ ವಹಿವಾಟು ಇತ್ಯಾದಿಗಳ ಬೆಳವಣಿಗೆಯನ್ನು…
ನಮ್ಮ ಒಟ್ಟಾರೆ ಆರೋಗ್ಯದ ಎಂಜಿನ್ನಂತೆ ಕೆಲಸ ಮಾಡುವುದು ಹೃದಯ. ಆದರೆ ಇತ್ತೀಚಿನ ದಿನಗಳಲ್ಲಿ ಯುವಕರಿಂದ ಹಿಡಿದು ವೃದ್ಧರವರೆಗೆ ಹೃದಯಾಘಾತ (Heart Attack) ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. ಇದಕ್ಕೆ ಮುಖ್ಯ ಕಾರಣ ನಮ್ಮ ಬದಲಾದ ಜೀವನಶೈಲಿ ಮತ್ತು ದೈನಂದಿನ ಕೆಲವು ತಪ್ಪು ಅಭ್ಯಾಸಗಳು. ದಿನನಿತ್ಯ ನಾವು ಮಾಡುವ ಸಣ್ಣಪುಟ್ಟ ನಿರ್ಲಕ್ಷ್ಯಗಳು ಹೃದಯಕ್ಕೆ ಎಷ್ಟು ದೊಡ್ಡ ಹಾನಿ ಉಂಟುಮಾಡುತ್ತವೆ ಎಂಬುದನ್ನು ಪ್ರಮುಖ ಹೃದಯ ತಜ್ಞರು ಪಟ್ಟಿ ಮಾಡಿದ್ದಾರೆ. ಆ 10 ಅಪಾಯಕಾರಿ ಅಭ್ಯಾಸಗಳು ಇಲ್ಲಿವೆ: 1. ಅತಿಯಾದ ಉಪ್ಪಿನ ಬಳಕೆ (Too Much Salt) ಹೆಚ್ಚು ಉಪ್ಪನ್ನು ಸೇವಿಸುವುದರಿಂದ ಅದರಲ್ಲಿರುವ ಸೋಡಿಯಂ ರಕ್ತದಲ್ಲಿ ನೀರಿನ ಪ್ರಮಾಣವನ್ನು ಹೆಚ್ಚಿಸುತ್ತದೆ. ಇದರಿಂದ ರಕ್ತದೊತ್ತಡ (High BP) ತೀವ್ರವಾಗಿ ಹೆಚ್ಚಾಗುತ್ತದೆ. ದೀರ್ಘಕಾಲದ ಅಧಿಕ ರಕ್ತದೊತ್ತಡವು ಹೃದಯದ ರಕ್ತನಾಳಗಳ ಮೇಲೆ ಒತ್ತಡ ಹಾಕಿ, ಹೃದಯಾಘಾತ ಮತ್ತು ಪಾರ್ಶ್ವವಾಯು (Stroke) ಅಪಾಯವನ್ನು ದ್ವಿಗುಣಗೊಳಿಸುತ್ತದೆ. 2. ನಿದ್ದೆಯ ಕೊರತೆ (Lack of Sleep) ದೇಹದ ಇತರ ಅಂಗಗಳಂತೆ…
ಸಂಬಾರ ಪದಾರ್ಥಗಳ ರಾಣಿ ಎಂದೇ ಕರೆಯಲ್ಪಡುವ ಏಲಕ್ಕಿ (Elaichi) ಪ್ರತಿಯೊಬ್ಬರ ಅಡುಗೆ ಮನೆಯಲ್ಲೂ ಇರುತ್ತದೆ. ಕೇವಲ ಅಡುಗೆಯ ರುಚಿ ಮತ್ತು ಪರಿಮಳವನ್ನು ಹೆಚ್ಚಿಸುವುದಷ್ಟೇ ಅಲ್ಲದೆ, ಆಯುರ್ವೇದದಲ್ಲಿ ಇದಕ್ಕೆ ವಿಶೇಷ ಸ್ಥಾನವಿದೆ. ಅದರಲ್ಲೂ ವಿಶೇಷವಾಗಿ ರಾತ್ರಿ ಮಲಗುವ ಮುನ್ನ ಒಂದು ಏಲಕ್ಕಿಯನ್ನು ಬಾಯಿಯಲ್ಲಿ ಹಾಕಿ ಅಗಿದು ತಿನ್ನುವುದರಿಂದ ದೇಹಕ್ಕೆ ನಂಬಲಾಗದ ಹಲವು ಆರೋಗ್ಯ ಪ್ರಯೋಜನಗಳು ಸಿಗುತ್ತವೆ. ಆ ಪ್ರಯೋಜನಗಳು ಯಾವುವು ಎಂಬ ಮಾಹಿತಿ ಇಲ್ಲಿದೆ: ಉತ್ತಮ ಜೀರ್ಣಕ್ರಿಯೆ ಮತ್ತು ಗ್ಯಾಸ್ ಸಮಸ್ಯೆಗೆ ಮುಕ್ತಿ ರಾತ್ರಿ ವೇಳೆ ಭಾರವಾದ ಊಟ ಮಾಡಿದಾಗ ಅಥವಾ ತಡವಾಗಿ ಉಂಡಾಗ ಜೀರ್ಣಕ್ರಿಯೆ ಸರಿಯಾಗಿ ಆಗದೆ ಹೊಟ್ಟೆ ಉಬ್ಬರ, ಗ್ಯಾಸ್ಟ್ರಿಕ್ ಅಥವಾ ಎದೆಯುರಿ ಕಾಣಿಸಿಕೊಳ್ಳಬಹುದು. ರಾತ್ರಿ ಮಲಗುವ ಮುನ್ನ ಏಲಕ್ಕಿ ಅಗಿಯುವುದರಿಂದ ಅದು ಜೀರ್ಣಕಾರಿ ಕಿಣ್ವಗಳನ್ನು (Digestive enzymes) ಪ್ರಚೋದಿಸುತ್ತದೆ. ಇದು ರಾತ್ರಿಯಿಡೀ ಆಹಾರ ಸುಲಭವಾಗಿ ಜೀರ್ಣವಾಗಲು ಸಹಾಯ ಮಾಡುತ್ತದೆ ಮತ್ತು ಹೊಟ್ಟೆಯ ಸ್ನಾಯುಗಳನ್ನು ಸಡಿಲಗೊಳಿಸಿ ಹೊಟ್ಟೆ ನೋವನ್ನು ನಿವಾರಿಸುತ್ತದೆ. ನಿದ್ದೆಯಿಲ್ಲದ ಸಮಸ್ಯೆಗೆ (Insomnia) ರಾಮಬಾಣ ಇತ್ತೀಚಿನ ದಿನಗಳಲ್ಲಿ ತಡರಾತ್ರಿಯವರೆಗೆ…
ಶಿವಮೊಗ್ಗ: ಜಿಲ್ಲೆಯ ಸಾಗರದ 110/33/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ಮೇ 24ರ ಭಾನುವಾರದಂದು ಸಾಗರ ನಗರ ಹಾಗೂ ಗ್ರಾಮೀಣ ಭಾಗದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಮೆಸ್ಕಾಂ) ಪ್ರಕಟಣೆಯಲ್ಲಿ ತಿಳಿಸಿದೆ. ವಿದ್ಯುತ್ ಅಡಚಣೆಯ ಸಮಯ ಕಾಮಗಾರಿ ನಡೆಯುವ ಹಿನ್ನೆಲೆಯಲ್ಲಿ ಮೇ 24ರ ಭಾನುವಾರ ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 06:00 ಗಂಟೆಯವರೆಗೆ ವಿದ್ಯುತ್ ಸರಬರಾಜು ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ. ವಿದ್ಯುತ್ ವ್ಯತ್ಯಯವಾಗುವ ನಗರ ಪ್ರದೇಶಗಳು ಸಾಗರ ಟೌನ್ (ಎಫ್-1), ಮಂಗಳಬೀಸು ಇಂಡಸ್ಟ್ರಿಯಲ್ ಏರಿಯಾ (ಎಫ್-7), ಮಾರಿಕಾಂಬ (ಎಫ್-8), ರಾಮನಗರ ಇಂಡಸ್ಟ್ರಿಯಲ್ ಏರಿಯಾ (ಎಫ್-13), ಆರ್.ಎಂ.ಸಿ (ಎಫ್-15) ಹಾಗೂ ಎಸ್.ಎನ್.ನಗರ (ಎಫ್-17) ವ್ಯಾಪ್ತಿಯ ನಗರ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳ್ಳಲಿದೆ. ಬಾಧಿತವಾಗುವ ಗ್ರಾಮೀಣ ಪ್ರದೇಶಗಳು ಗ್ರಾಮೀಣ ಭಾಗದ ಎಫ್-2 ಮಾಳ್ಸೆ, ಎಫ್-3 ಹೆಗ್ಗೋಡು, ಎಫ್-4 ಅವಿನಹಳ್ಳಿ, ಎಫ್-5 ವರದಹಳ್ಳಿ, ಎಫ್-6 ಬೊಮ್ಮತ್ತಿ, ಎಫ್-9 ಮಾಸೂರು,…
ಬೆಂಗಳೂರು: 2026-27ನೇ ಹೊಸ ಶೈಕ್ಷಣಿಕ ಸಾಲು ಪ್ರಾರಂಭವಾಗುತ್ತಿರುವ ಬೆನ್ನಲ್ಲೇ, ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಅತ್ಯಂತ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ತಾತ್ಕಾಲಿಕವಾಗಿ ಒಟ್ಟು 51,000 ಅತಿಥಿ ಶಿಕ್ಷಕರನ್ನು (Guest Teachers) ನೇಮಕ ಮಾಡಿಕೊಳ್ಳಲು ಸರ್ಕಾರವು ಅಧಿಕೃತ ಮಂಜೂರಾತಿ ನೀಡಿದೆ. ಮೇ ತಿಂಗಳಿನಲ್ಲಿಯೇ ಶಾಲೆಗಳು ಮುಂಚಿತವಾಗಿ ಆರಂಭವಾಗುತ್ತಿರುವುದರಿಂದ , ಮೊದಲ ದಿನದಿಂದಲೇ ಶೈಕ್ಷಣಿಕ ಚಟುವಟಿಕೆಗಳು ಕುಂಠಿತಗೊಳ್ಳದಂತೆ ತಡೆಯಲು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಪ್ರಸ್ತಾವನೆಯನ್ನು ಪುರಸ್ಕರಿಸಿ ಈ ತುರ್ತು ಆದೇಶ ಹೊರಡಿಸಲಾಗಿದೆ. ನೇಮಕಾತಿಯ ಪ್ರಮುಖ ಷರತ್ತುಗಳು ಮತ್ತು ಹಿನ್ನೆಲೆ: ತಾತ್ಕಾಲಿಕ ನೇಮಕಾತಿ: ಈ ಅತಿಥಿ ಶಿಕ್ಷಕರ ನೇಮಕಾತಿಯು ಸಂಪೂರ್ಣವಾಗಿ ತಾತ್ಕಾಲಿಕವಾಗಿದ್ದು, ಖಾಯಂ ಶಿಕ್ಷಕರನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವವರೆಗೆ ಅಥವಾ ಪ್ರಸ್ತುತ ಶೈಕ್ಷಣಿಕ ವರ್ಷದ ಅಂತ್ಯದವರೆಗೆ (ಯಾವುದು ಮೊದಲೋ ಅಲ್ಲಿಯವರೆಗೆ) ಮಾತ್ರ ಅನ್ವಯಿಸುತ್ತದೆ. ಆರ್ಥಿಕ ಇಲಾಖೆಯ ಸಹಮತಿ: ದಿನಾಂಕ 20.05.2026 ರಂದು ಆರ್ಥಿಕ ಇಲಾಖೆಯು…
ಬೆಂಗಳೂರು: 2026ರ ಮುಂಗಾರು ಹಂಗಾಮಿನ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯಲ್ಲಿ ಮಳೆಯಾಗುತ್ತಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಬಿತ್ತನೆ ಬೀಜಗಳನ್ನು ಪಡೆಯುತ್ತಿದ್ದಾರೆ. ಈ ಹಿನ್ನೆಲೆ ಜಿಲ್ಲೆಯಲ್ಲಿ ಬಿತ್ತನೆ ಬೀಜಗಳ ಸಮರ್ಪಕ ಪೂರೈಕೆಗೆ ಕೃಷಿ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂಬುದಾಗಿ ಕೃಷಿ ಇಲಾಖೆ ಸ್ಪಷ್ಟ ಪಡಿಸಿದೆ. ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ವರ್ಷಕ್ಕೆ ಸೋಯಾಬೀನ್ಗೆ 8960 ಕ್ವಿಂಟಾಲ್ ಹಾಗೂ ಶೇಂಗಾ (ನೆಲಗಡಲೆ) ಬೀಜಕ್ಕೆ 1344 ಕ್ವಿಂಟಾಲ್ ಬೇಡಿಕೆ ಅಂದಾಜಿಸಲಾಗಿದ್ದು, ಅದರ ಅನುಸಾರ ಈಗಾಗಲೇ 2733 ಕ್ವಿಂಟಾಲ್ ಸೋಯಾಬೀನ್ ಹಾಗೂ 305 ಕ್ವಿಂಟಾಲ್ ಶೇಂಗಾ ಬೀಜವನ್ನು ದಾಸ್ತಾನು ಮಾಡಲಾಗಿದೆ. ಉಳಿದ ಬೇಡಿಕೆಯನ್ನು consignment ಆಧಾರದಲ್ಲಿ ಪೂರೈಸಲಾಗುವುದು ಎಂದು ಇಲಾಖೆ ತಿಳಿಸಿದೆ. ರಾಜ್ಯ ಮಟ್ಟದಲ್ಲಿಯೂ ಸೋಯಾಬೀನ್ ಬೀಜಕ್ಕೆ 1.80 ಲಕ್ಷ ಕ್ವಿಂಟಾಲ್ ಬೇಡಿಕೆ ಅಂದಾಜಿಸಲಾಗಿದ್ದು, 2.09 ಲಕ್ಷ ಕ್ವಿಂಟಾಲ್ ಬೀಜ ಲಭ್ಯವಿದೆ. ಅದೇ ರೀತಿ ನೆಲಗಡಲೆ ಬೀಜಕ್ಕೆ 0.70 ಲಕ್ಷ ಕ್ವಿಂಟಾಲ್ ಬೇಡಿಕೆ ಇದ್ದು, 0.74 ಲಕ್ಷ ಕ್ವಿಂಟಾಲ್ ದಾಸ್ತಾನು ಲಭ್ಯವಿದೆ. ಒಟ್ಟಾರೆ…
ಶಿವಮೊಗ್ಗ: ಜಿಲ್ಲೆಯ ಅತ್ಯಂತ ಸೂಕ್ಷ್ಮ ಹಾಗೂ ದೀರ್ಘಕಾಲದ ಸಮಸ್ಯೆಯಾಗಿರುವ ಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿ ಮತ್ತು ಭೂಮಿ ಹಕ್ಕಿನ ವಿಚಾರವಾಗಿ ಶಿವಮೊಗ್ಗದ ತ್ರೈಮಾಸಿಕ ಕೆಡಿಪಿ (KDP) ಪ್ರಗತಿ ಪರಿಶೀಲನಾ ಸಭೆಯಲ್ಲಿ ಸುದೀರ್ಘ ಹಾಗೂ ಗಂಭೀರ ಚರ್ಚೆ ನಡೆದಿದೆ. ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ, ಸಂತ್ರಸ್ತರ ಆತಂಕವನ್ನು ದೂರ ಮಾಡಲು ಸಾಗರದ ಬೇಸೂರಿನಲ್ಲಿ ಅಣು ವಿದ್ಯುತ್ ಸ್ಥಾವರ ನಿರ್ಮಾಣವನ್ನು ವಿರೋಧಿಸುವಂತ ಮಹತ್ವದ ನಿರ್ಣಯ ಕೈಗೊಳ್ಳಲಾಯಿತು. ಆತಂಕ ವ್ಯಕ್ತಪಡಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು: ಸಭೆಯಲ್ಲಿ ಮಾತನಾಡಿದ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರು, “ಶರಾವತಿ ಮುಳುಗಡೆಯಾಗಿ ಈಗಾಗಲೇ ಒಂದಲ್ಲ, ಎರಡು ಬಾರಿ ನಿರಾಶ್ರಿತರಾಗಿರುವ ಜನರಿಗೆ ಇವತ್ತಿನವರೆಗೂ ಕಾಯಂ ಭೂಮಿ ಸಿಕ್ಕಿಲ್ಲ. ಈಗ ಸಾಗರದ ಬೇಸೂರಿನಲ್ಲಿ ಅಣು ಸ್ಥಾವರ ನಿರ್ಮಾಣದ ಸುದ್ದಿಯ ಬಳಿಕ ನಮ್ಮ ತಾಲೂಕಿನ ಸೂಕ್ಷ್ಮ ಪ್ರದೇಶದಲ್ಲಿರುವ ಜನರು ಇದರಿಂದಾಗಿ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಅರಣ್ಯ ಹಕ್ಕು ಅಥವಾ ಮತ್ತೊಂದು ಹೆಸರಿನಲ್ಲಿ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದು,…
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (BMTC) ನಗರದ ಹೊರವಲಯದ ಪ್ರಯಾಣಿಕರಿಗೆ ಮತ್ತೊಂದು ಮಹತ್ವದ ಕೊಡುಗೆಯನ್ನು ನೀಡಿದೆ. ಸಾರ್ವಜನಿಕರು, ಉದ್ಯೋಗಿಗಳು ಹಾಗೂ ವಿದ್ಯಾರ್ಥಿಗಳ ವೇಗವಾದ ಮತ್ತು ಸುಲಭ ಪ್ರಯಾಣದ ಹಿತದೃಷ್ಟಿಯಿಂದ ಎರಡು ನೂತನ ವೇಗದೂತ ಸೀಮಿತ ನಿಲುಗಡೆ (Express) ಸಾರಿಗೆ ಸೇವೆಗಳಿಗೆ ಸಾರಿಗೆ ಮತ್ತು ಮುಜರಾಯಿ ಸಚಿವರಾದಂತ ರಾಮಲಿಂಗಾರೆಡ್ಡಿ ಅವರು ಚಾಲನೆ ನೀಡಿದ್ದಾರೆ. ಐಟಿಐ ಫ್ಯಾಕ್ಟರಿಯಿಂದ ಹೆಚ್.ಕ್ರಾಸ್ಗೆ ಹಾಗೂ ಹೊಸಕೋಟೆಯಿಂದ ನೆಲಮಂಗಲಕ್ಕೆ ಈ ನೂತನ ಬಸ್ ಸೇವೆಗಳನ್ನು ಆರಂಭಿಸಲಾಗಿದೆ. ನೂತನ ವೇಗದೂತ ಸಾರಿಗೆ ಸೇವೆಗಳ ಸಂಪೂರ್ಣ ಮಾಹಿತಿ: ೧. ಐಟಿಐ ಫ್ಯಾಕ್ಟರಿ – ಹೆಚ್.ಕ್ರಾಸ್ ಸೇವೆ: ಪ್ರಾರಂಭದ ದಿನಾಂಕ: ಈ ಹೊಸ ಸೇವೆಯನ್ನು ಮೇ 22, 2026 ರಿಂದ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲಾಗಿದೆ. ಸುತ್ತುವಳಿಗಳು: 30 ನಿಮಿಷಗಳ ಕಾಲಾವಧಿಯ ಅಂತರದಲ್ಲಿ ಒಟ್ಟು 7 ಅನುಸೂಚಿಗಳ ಮೂಲಕ ಪ್ರತಿದಿನ 60 ಸುತ್ತುವಳಿಗಳು ಕಾರ್ಯಾಚರಣೆ ನಡೆಸಲಿವೆ. ಪ್ರಯಾಣ ದರ: ಈ ಮಾರ್ಗದ ಪ್ರಯಾಣಿಕರಿಗೆ ರೂ. 60/- ಗಳ ಪ್ರಯಾಣ ದರವನ್ನು ನಿಗದಿಪಡಿಸಲಾಗಿದೆ. ೨. ಹೊಸಕೋಟೆ…
ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಗಿಡ-ಮರಗಳನ್ನು ಬೆಳೆಸುವುದು ಕೇವಲ ಅಲಂಕಾರಕ್ಕಾಗಿ ಮಾತ್ರವಲ್ಲ, ಅವು ಮನೆಯ ವಾತಾವರಣ ಮತ್ತು ಅಲ್ಲಿ ವಾಸಿಸುವವರ ಭಾಗ್ಯದ ಮೇಲೂ ಪ್ರಭಾವ ಬೀರುತ್ತವೆ. ಇವುಗಳಲ್ಲಿ ಅತ್ಯಂತ ಜನಪ್ರಿಯ ಮತ್ತು ಬಹುತೇಕ ಎಲ್ಲರ ಮನೆಯಲ್ಲೂ ಕಂಡುಬರುವ ಸಸ್ಯವೆಂದರೆ ಮನಿ ಪ್ಲಾಂಟ್ (Money Plant). ಮನೆಯಲ್ಲಿ ಮನಿ ಪ್ಲಾಂಟ್ ಬೆಳೆಸುವುದರಿಂದ ಸುಖ, ಶಾಂತಿ ಮತ್ತು ಧನಾತ್ಮಕ ಶಕ್ತಿ (Positive Energy) ಹೆಚ್ಚುತ್ತದೆ ಎಂಬ ನಂಬಿಕೆಯಿದೆ. ಆದರೆ, ಈ ಮನಿ ಪ್ಲಾಂಟ್ಗೆ ಸಂಬಂಧಿಸಿದಂತೆ ಸಮಾಜದಲ್ಲಿ ಒಂದು ವಿಚಿತ್ರವಾದ ಹಾಗೂ ಸುದೀರ್ಘವಾದ ನಂಬಿಕೆ ಚಾಲ್ತಿಯಲ್ಲಿದೆ. ಅದೇನೆಂದರೆ, ಬೇರೆಯವರ ಅಥವಾ ಪರಿಚಯಸ್ಥರ ಮನೆಯಿಂದ ಮನಿ ಪ್ಲಾಂಟ್ ಅನ್ನು ಕದ್ದು ತಂದು ನೆಟ್ಟರೆ, ಅದು ಮನೆಯಲ್ಲಿ ಅತಿ ಬೇಗನೆ ಆರ್ಥಿಕ ಸಮೃದ್ಧಿಯನ್ನು ತರುತ್ತದೆ ಎಂದು ಅನೇಕರು ಭಾವಿಸುತ್ತಾರೆ. ಆದರೆ ವಾಸ್ತು ಶಾಸ್ತ್ರವು ಈ ಬಗ್ಗೆ ಏನು ಹೇಳುತ್ತದೆ? ಕಳ್ಳತನದ ಹಾದಿ ನಿಜಕ್ಕೂ ಅದೃಷ್ಟ ತರುತ್ತದೆಯೇ? ಇದರ ಹಿಂದಿರುವ ಸತ್ಯಾಸತ್ಯತೆ ಮತ್ತು ಮನಿ ಪ್ಲಾಂಟ್ ಬೆಳೆಸುವ ಸರಿಯಾದ ವಾಸ್ತು…














