Author: kannadanewsnow09

ಬೆಂಗಳೂರು: ನಗರದಲ್ಲಿ ಹದಗೆಟ್ಟ ರಸ್ತೆಗಳಿಗೆ ಮತ್ತೊಂದು ಬಲಿಯಾಗಿದೆ. ಬೈಕ್ ನಿಂದ ಬಿದ್ದ ಮಹಿಳೆಯ ಮೇಲೆ ಟಿಪ್ಪರ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಹುಳಿಮಾವಿನ ಸರಸ್ವತಿಪುರಂನಲ್ಲಿ ಹದಗೆಟ್ಟ ರಸ್ತೆಯಿಂದಾಗಿ ಬೈಕ್ ನಿಂದ ಬಿದ್ದು ಗೋಕಾಕ್ ನ ಶಾಂತಮ್ಮ(46) ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ತನ್ನ ಸ್ನೇಹಿತೆಯ ಜೊತೆಯಲ್ಲಿ ಬೈಕ್ ನಲ್ಲಿ ಶಾಂತಮ್ಮ ತೆರಳುತ್ತಿದ್ದರು. ಈ ವೇಳೆಯಲ್ಲಿ ಹದಗೆಟ್ಟ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಬೈಕ್ ನಿಂದ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಹಿಂದೆ ಬರುತ್ತಿದ್ದಂತ ಟಿಪ್ಪರ್ ಹರಿದು ಸಾವನ್ನಪ್ಪಿದ್ದಾರೆ. ಈ ಸಂಬಂಧ ಹುಳಿಮಾವು ಸಂಚಾರ ಠಾಣೆಯಲ್ಲಿ ಕೇಸ್ ದಾಖಲಾಗಿದೆ. https://kannadanewsnow.com/kannada/kea-has-announced-the-schedule-for-the-competitive-examination-for-the-recruitment-of-various-posts/ https://kannadanewsnow.com/kannada/breaking-ibps-clerk-prelims-result-released-download-scorecard-like-this/

Read More

ಶಿವಮೊಗ್ಗ: ರಾಜ್ಯ ಸರ್ಕಾರದಿಂದ ಪೊಲೀಸರ ಕ್ಯಾಪ್ ಬದಲಾವಣೆ ಮಾಡಲಾಗಿತ್ತು. ಈ ಬದಲಾದಂತ ಹೊಸ ಬ್ಲೂ ಕ್ಯಾಪ್ ಅನ್ನು ಶಿವಮೊಗ್ಗ ಜಿಲ್ಲೆಯ ಕೆ ಎಸ್ ಆರ್ ಪಿ ಪೊಲೀಸರಿಗೆ ಇಂದು ವಿತರಣೆ ಮಾಡಲಾಯಿತು. ಕರ್ನಾಟಕ ರಾಜ್ಯ ಸರ್ಕಾರದ ಆದೇಶದಂತೆ ದಿ: 20-11-2025 ರಂದು 8 ನೇ ಪಡೆ, ಕೆ.ಎಸ್.ಆರ್.ಪಿ, ಮಾಚೇನಹಳ್ಳಿ, ಶಿವಮೊಗ್ಗ ಘಟಕದ 500 ಆರ್‌ಹೆಚ್‌ಸಿ ಹಾಗೂ ಆರ್‌ಪಿಸಿ ರವರಿಗೆ ಕೆಎಸ್‌ಆರ್‌ಪಿ ಕಮಾಂಡೆಂಟ್ ಆದ ಎಸ್. ಯುವಕುಮಾರ್‌ರವರು ಹೊಸ ನೇವಿ ಬ್ಲೂ ಪೀಕ್ ಕ್ಯಾಪ್‌ನ್ನು ಎಲ್ಲಾ ಸಿಬ್ಬಂದಿಗಳಿಗೂ ವಿತರಿಸಿದರು. ಈ ಸಮಾರಂಭದಲ್ಲಿ ಡೆಪ್ಯೂಟಿ ಕಮಾಂಡೆಂಟ್ ಎಸ್. ಚಂದ್ರಶೇಖರ್ ಹಾಗೂ ಸಹಾಯಕ ಕಮಾಂಡೆಂಟ್ ರಾಚಪ್ಪ ಬಿ. ಕಾಜಗಾರ, ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು. https://kannadanewsnow.com/kannada/written-examination-for-recruitment-of-973-vacant-posts-in-various-departments-and-corporations-from-december-20-kea-information/

Read More

ಬೆಂಗಳೂರು: ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ವಿವಿಧ ಇಲಾಖೆ/ನಿಗಮಗಳಲ್ಲಿನ 973 ಖಾಲಿ ಹುದ್ದೆಗಳ ನೇಮಕಾತಿ ಸಂಬಂಧ ಲಿಖಿತ ಪರೀಕ್ಷೆಗಳನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಹೈದರಾಬಾದ್ ಕರ್ನಾಟಕ (ಹೆಚ್ ಕೆ) ಕೋಟಾ ಕ್ಲೇಮ್ ಮಾಡಿರುವ ಅಭ್ಯರ್ಥಿಗಳಿಗೆ ಡಿ.20, 21, ಜನವರಿ 24 ಮತ್ತು ಫೆಬ್ರುವರಿ 22ರಂದು ಪರೀಕ್ಷೆಗಳು ನಡೆಯಲಿವೆ. ಇದರಲ್ಲಿ 391 ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಯಲಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಹೈದರಾಬಾದ್ ಕರ್ನಾಟಕ ಕೋಟಾ ಕ್ಲೇಮ್ ಮಾಡದವರಿಗೆ (ನಾನ್ ಹೆಚ್ ಕೆ) ಜನವರಿ 10, 11, 12 ಮತ್ತು 25ರಂದು ವಿವಿಧ ಪರೀಕ್ಷೆಗಳು ನಡೆಯಲಿವೆ. ಇದರಲ್ಲಿ 582 ಹುದ್ದೆಗಳಿಗೆ ಪರೀಕ್ಷೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ. ಹೆಚ್ ಕೆ ಹಾಗೂ ನಾನ್- ಹೆಚ್ ಕೆ – ಎರಡೂ ಪರೀಕ್ಷೆಗಳಲ್ಲಿ ಋಣಾತ್ಮಕ ಮೌಲ್ಯಮಾಪನ ಇರುತ್ತದೆ. ಪ್ರತಿ ತಪ್ಪು ಉತ್ತರಕ್ಕೆ 1/4 ಅಂಕ ಕಡಿತ ಮಾಡಲಾಗುತ್ತದೆ ಎಂದು ಅವರು ವಿವರಿಸಿದ್ದಾರೆ.…

Read More

ಬೆಂಗಳೂರು : “ಸಿಎಂ ಸಿದ್ದರಾಮಯ್ಯ ಅವರು ಎಂದೂ ಕೊಟ್ಟ ಮಾತನ್ನು ತಪ್ಪುವವರಲ್ಲ. ಅವರು ಯಾರಿಗೆ ಮಾತು ಕೊಟ್ಟರೂ ತಪ್ಪುವುದಿಲ್ಲ” ಎಂದು ಬಮೂಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ ಅವರು ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಸುರೇಶ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ನೀವು ಸಿಎಂ ಅವರನ್ನು ಭೇಟಿ ಮಾಡಿದಾಗ ಅಧಿಕಾರ ಹಸ್ತಾಂತರ ವಿಚಾರ ಚರ್ಚೆ ಮಾಡಿದಿರಾ ಎಂದು ಕೇಳಿದಾಗ, “ಸಿಎಂ ಅವರ ಬಳಿ ಅಧಿಕಾರ ಹಸ್ತಾಂತರ ವಿಚಾರ ಚರ್ಚೆ ಮಾಡಿಲ್ಲ. ಅಷ್ಟು ದೊಡ್ಡವನೂ ನಾನಲ್ಲ. ಅವರು ಹಿರಿಯ ನಾಯಕರು. ಅವರಿಗೆ ತಮ್ಮದೇ ಆದ ಜವಾಬ್ದಾರಿ ಇದೆ. ಕರ್ನಾಟಕದ ಜನರಿಗೆ ಕೊಟ್ಟ ಎಲ್ಲಾ ಭರವಸೆ ಈಡೇರಿಸಿದ್ದಾರೆ. ಈ ಸರ್ಕಾರದಲ್ಲೂ ಅವರು ಯಾರಿಗೆ ಯಾವ ಮಾತು ಕೊಟ್ಟಿದ್ದಾರೋ ಅದರಂತೆ ನಡೆಯುತ್ತಿದ್ದಾರೆ” ಎಂದು ಹೇಳಿದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾಗಿರುವ ಬಗ್ಗೆ ಕೇಳಿದಾಗ, “ಕರ್ನಾಟಕದ ಜನರ ಆಶೀರ್ವಾದದಿಂದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಇಂದಿಗೆ ಎರಡೂವರೆ ವರ್ಷ ತುಂಬಿದೆ. ಕೊಟ್ಟ ಮಾತಿನಂತೆ ಮುಖ್ಯಮಂತ್ರಿಗಳು ಗ್ಯಾರಂಟಿ ಯೋಜನೆಗಳನ್ನು…

Read More

ಬೆಂಗಳೂರು: ಇಲ್ಲಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಗಂಡು ಚಿರತೆಯೊಂದು ಸಾವನ್ನಪ್ಪಿದೆ. ಬೆಂಗಳೂರಿನ ಬನ್ನೇರುಘಟ್ಟ ಉದ್ಯಾನವನದಲ್ಲಿದ್ದಂತ ಗಂಡು ಚಿರತೆಯೊಂದು ಅನಾರೋಗ್ಯಕ್ಕೆ ಒಳಗಾಗಿತ್ತು. ಇಂದು ಅನಾರೋಗ್ಯದಿಂದಾಗಿ ಗಂಡು ಚಿರತೆ ಸಾವನ್ನಪ್ಪಿದೆ. 2023ರಲ್ಲಿ ಬಿಆರ್ ಟಿ ಹುಲಿ ಸಂರಕ್ಷಿತ ಪ್ರದೇಶದಿಂದ ರಕ್ಷಣೆ 3 ತಿಂಗಳ ಮರಿ ಇದ್ದಾಗ ರಕ್ಷಣೆ ಮಾಡಿ ಕರೆತರಲಾಗಿತ್ತು. ಅ.30ರಿಂದ ಆಹಾರ ಸೇವನೆ ಕಡಿಮೆಯನ್ನು ಚಿರತೆ ಮಾಡಿತ್ತು. ತೀವ್ರ ಜ್ವರದಿಂದ ಬಳಲುತ್ತಿದ್ದ ಗಂಡು ಚಿರತೆ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. https://kannadanewsnow.com/kannada/suggest-solutions-to-bengalurus-problems-and-win-a-prize-of-rs-25-lakhs/ https://kannadanewsnow.com/kannada/alert-using-these-passwords-could-lead-to-your-data-leak-be-careful/

Read More

ಕುಕ್ಕೆ ಚಂಪಾಷಷ್ಠಿ ಮಹೋತ್ಸವ 2025 ನವೆಂಬರ್ 16 ಕ್ಕೆ ಆರಂಭಗೊಂಡಿರುವ ಜಾತ್ರಾ ಮಹೋತ್ಸವ ಡಿಸೆಂಬರ್ 2ರಂದು ಕೊಪ್ಪರಿಗೆ ಇಳಿಯುವ ಮೂಲಕ ಸಂಪನ್ನಗೊಳ್ಳಲಿದೆ. ಜಾತ್ರಾ ಮಹೋತ್ಸವದ ಸಂಪೂರ್ಣ ವಿವರ ಇಲ್ಲಿದೆ. 16-11-2025 ಆದಿತ್ಯವಾರ ಕೊಪ್ಪರಿಗೆ ಎರುವುದು, ರಾತ್ರಿ ಶೇಷವಾಹನೆಯುಕ್ತ ಬಂಡಿ ಉತ್ಸವ 17-11-2025: ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ 18-11-2025: ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ 19-11-2025: ಲಕ್ಷದೀಪೋತ್ಸವ 20-11-2025 ರಾತ್ರಿ ಶೇಷವಾಹನೋತ್ಸವ 21-11-2025 ರಾತ್ರಿ ಅಶ್ವವಾಹನೋತ್ಸವ 22-11-2025 ರಾತ್ರಿ ಮಯೂರವಾಹನೋತ್ಸವ 23-11-2026 ರಾತ್ರಿ ಶೇಷವಾಹನೋತ್ಸವ 24-11-2025 ಸೋಮವಾರ ರಾತ್ರಿ ಹೂವಿನ ತೇರಿನ ಉತ್ಸವ 25-11-2025 ಮಂಗಳವಾರ ರಾತ್ರಿ ಪಂಚಮಿ ರಥೋತ್ಸವ. 26-11-2025 : ಪ್ರಾತ: ಕಾಲ ಚಂಪಾಷಷ್ಠಿ ಮಹಾರಥೋತ್ಸವ 27-11-2025: ಕುಮಾರಧಾರ ನದಿಯಲ್ಲಿ ಅವಬೃತೋತ್ಸವ ಮತ್ತು ನೌಕಾವಿಹಾರ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ…

Read More

ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದು ಶ್ರೀ ಕ್ಷೇತ್ರದ ಪವಿತ್ರ ಮಹಾಪ್ರಸಾದ ಮೂಲಮೃತ್ತಿಕೆ (ಹುತ್ತದ ಮಣ್ಣು)ನ್ನು ತೆಗೆಯಲಾಯಿತು. ಶ್ರೀ ದೇವಳದ ಗರ್ಭಗುಡಿಯಿಂದ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ವಿವಿಧ ವೈದಿಕ ವಿದಿವಿಧಾನಗಳೊಂದಿಗೆ ಮುಂಜಾನೆಯ ಶುಭ ಮುಹೂರ್ತದಲ್ಲಿ ಮೂಲಪ್ರಸಾದ ತೆಗೆದರು. ಕ್ಷೇತ್ರದ ಮೂಲಸ್ಥಾನವಾದ ಗರ್ಭಗುಡಿಯಿಂದ ಈ ಮೃತ್ತಿಕಾ ಪ್ರಸಾದವನ್ನು ದೇವಳದ ಪ್ರಧಾನ ಅರ್ಚಕರು ತೆಗೆದು ಭಕ್ತಾಧಿಗಳಿಗೆ ನೀಡುವರು. ಇದು ಮೂಲಸ್ಥಾನವಾದ ಕುಕ್ಕೆ ಸುಬ್ರಹ್ಮಣ್ಯ ದೇವಳದ ಗರ್ಭಗುಡಿಯಿಂದ ತೆಗೆಯುವ ಕ್ಷೇತ್ರದ ಅತ್ಯಂತ ಪವಿತ್ರ ಮಹಾಪ್ರಸಾದ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ…

Read More

ಬೆಂಗಳೂರು: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕೊಳಗೇರಿ ನಿವಾಸಿಗಳಿಗೆ ಸರ್ಕಾರದ ವತಿಯಿಂದ ಕಡಿಮ ವೆಚ್ಚದಲ್ಲಿ ವಸತಿ ಸೌಕರ್ಯ ಕಲ್ಪಿಸುವ ಕುರಿತು ಪರಿಶೀಲಿಸಲು ಕ್ಷೇತ್ರದ ಶಾಸಕರೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ವಸತಿ ಸಚಿವ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರೊಂದಿಗೆ ಕ್ಷೇತ್ರ ಪರ್ಯಟನೆ ನಡೆಸಿದರು. ಸರ್ವಜ್ಞ ನಗರದ ವಸತಿ ಸಂಕೀರ್ಣ ಹಾಗೂ ಕೊಳಗೇರಿಗೆ ವಸತಿ ಸಚಿರೊಂದಿಗೆ ಗುರುವಾರ ಭೇಟಿ ನೀಡಿದ ಸಚಿವ ಕೆ.ಜೆ.ಜಾರ್ಜ್ ಅವರು ವಸ್ತುಸ್ಥಿತಿ ಪರಿಶೀಲಿಸದರಲ್ಲದೆ, ಕೊಳೇರಿ ನಿವಾಸಿಗಳಿಗೆ ತುರ್ತಾಗಿ ಆಗಬೇಕಿರುವ ವಸತಿ ಸೌಕರ್ಯಗಳು ಹಾಗೂ ಅದಕ್ಕೆ ಅಗತ್ಯವಿರುವ ಹಣಕಾಸಿನ ಕುರಿತು ಚರ್ಚೆ ನಡೆಸಿದರು. ಕರ್ನಾಟಕ ಗೃಹ ಮಂಡಳಿ (ಕೆಎಚ್‌ಬಿ) ಕಾಲೋನಿ ಜಾನಕಿರಾಮ ಬಡಾವಣೆಯಲ್ಲಿನ 684 ಮನೆಗಳಿರುವ ವಸತಿ ಸಂಕೀರ್ಣದ ಬಳಿ ಶುರುವಾದ ಪರಿಶೀಲನಾ ಕಾರ್ಯ, ಕಾಚರಕನಹಳ್ಳಿ ಕೆರೆಯ ಅಂಗಳದ ಕೊಳಗೇರಿ ಪ್ರದೇಶದ 457 ಗುಡಿಸಲುಗಳ ಪರಿಶೀಲನೆಯೊಂದಿಗೆ ಮುಕ್ತಾಯವಾಯಿತು. ಈ ವೇಳೆ ಮಾತನಾಡಿದ ಇಂಧನ ಸಚಿವ ಕೆ.ಜೆ.ಜಾರ್ಜ್, ವಸತಿ ಇಲಾಖೆಯು ಕರ್ನಾಟಕ ಗೃಹಮಂಡಳಿ ಮೂಲಕ ನಿರ್ಮಿಸಿದ ವಸತಿ ಸಂಕೀರ್ಣದಲ್ಲಿರುವ…

Read More

ಬೆಂಗಳೂರು: ನಗರದ ಬಸವನಗುಡಿಯ ಕಡಲೆಕಾಯಿ ಪರಿಷೆ’ ಈ ವರ್ಷ ಅಭೂತಪೂರ್ವ ಯಶಸ್ಸು ದಾಖಲಿಸಿದೆ. ಮೂರು ದಿನಗಳಲ್ಲಿಯೇ 6 ಲಕ್ಷ ಜನ ಭಾಗವಹಿಸಿದ್ದು, ಪರಿಷೆ ಮುಕ್ತಾಯವಾಗುವುದರೊಳಗೆ 12 ಲಕ್ಷಕ್ಕೂ ಮೀರಿ ಜನ ಭಾಗವಹಿಸುವ ನಿರೀಕ್ಷೆಯಿದೆ ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಅವರು, ಕಾರ್ತಿಕ ಮಾಸದ ಕೊನೆಯ ಸೋಮವಾರ ಆರಂಭವಾದ ಐತಿಹಾಸಿಕ ಬೆಂಗಳೂರು ಕಡಲೆಕಾಯಿ ಪರಿಷೆಯು ಈ ವರ್ಷ ಹಲವು ವಿಶೇಷತೆಗಳಿಗೆ ಕಾರಣವಾಗಿದೆ. ಬಸವನಗುಡಿಯ ಸುತ್ತಮುತ್ತಲಿನ ರಸ್ತೆಗಳು ಜನಜಾತ್ರೆಯಿಂದ ಸಂಭ್ರಮದಲ್ಲಿ ಮುಳುಗಿ ಹೋಗಿದೆ ಎಂದರೆ ತಪ್ಪಾಗಲಾರದು. ಮೂರು ದಿನಗಳಲ್ಲಿ ಅರು ಲಕ್ಷಕ್ಕೂ ಹೆಚ್ಚು ಜನ ಭೇಟಿ ನೀಡಿದ್ದಾರೆ ಎಂದು ಹೇಳಿದ್ದಾರೆ. ಮುಜರಾಯಿ ಇಲಾಖೆಯು ಈ ವರ್ಷ ಅಧಿಕೃತವಾಗಿಯೇ ಐದು ದಿನಗಳ ಕಾಲಕ್ಕೆ ಪರಿಷೆಯನ್ನು ವಿಸ್ತರಿಸಿ ಅಚ್ಚುಕಟ್ಟಾಗಿ ಆಯೋಜಿಸಿದೆ. ಸೋಮವಾರ ಪರಿಷೆ ಆರಂಭವಾಗಿದ್ದರೂ, ಶನಿವಾರದಿಂದಲೇ ಜಾತ್ರೆ ಸಡಗರ ಆರಂಭವಾಗಿತ್ತು. ಶುಕ್ರವಾರಕ್ಕೆ ಮುಗಿದರೂ ವಾರಾಂತ್ಯವಿರುವುದರಿಂದ ಭಾನುವಾರದವರೆಗೂ ಜನಸಂದಣಿ‌ ಇರಲಿದೆ ಎಂದು ಪೊಲೀಸ್ ಇಲಾಖೆ ಅಂದಾಜಿಸಿದೆ ಎಂದು ತಿಳಿಸಿದ್ದಾರೆ.…

Read More

ನವದೆಹಲಿ: ನವೆಂಬರ್ 10 ರಂದು ದೆಹಲಿಯ ಕೆಂಪು ಕೋಟೆಯ ಹೊರಗೆ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಗುರುವಾರ ನಾಲ್ವರು ಪ್ರಮುಖ ಶಂಕಿತರನ್ನು ಬಂಧಿಸಿದ್ದು, ಪ್ರಕರಣದಲ್ಲಿ ಈವರೆಗೆ ಆರು ಮಂದಿಯನ್ನು ಬಂಧಿಸಿದಂತೆ ಆಗಿದೆ. ಪಟಿಯಾಲ ಹೌಸ್ ನ್ಯಾಯಾಲಯದ ಜಿಲ್ಲಾ ಸೆಷನ್ಸ್ ನ್ಯಾಯಾಧೀಶರ ಆದೇಶದ ಮೇರೆಗೆ ನಾಲ್ವರನ್ನು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ಎನ್‌ಐಎ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಬಂಧಿತ ವ್ಯಕ್ತಿಗಳನ್ನು ಪುಲ್ವಾಮಾ (ಜೆ & ಕೆ) ದ ಡಾ. ಮುಝಮ್ಮಿಲ್ ಶಕೀಲ್ ಗನೈ, ಅನಂತನಾಗ್ (ಜೆ & ಕೆ) ದ ಡಾ. ಅದೀಲ್ ಅಹ್ಮದ್ ರಾಥರ್, ಲಕ್ನೋ (ಯುಪಿ) ದ ಡಾ. ಶಾಹೀನ್ ಸಯೀದ್ ಮತ್ತು ಶೋಪಿಯಾನ್ (ಜೆ & ಕೆ) ದ ಮುಫ್ತಿ ಇರ್ಫಾನ್ ಅಹ್ಮದ್ ವಾಗೆ ಎಂದು ಗುರುತಿಸಲಾಗಿದೆ. ನಾಲ್ವರು ಆರೋಪಿಗಳು “ಹಲವಾರು ಅಮಾಯಕ ಜನರನ್ನು ಕೊಂದು ಇತರರನ್ನು ಗಾಯಗೊಳಿಸಿದ ಭಯೋತ್ಪಾದಕ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ” ಎಂದು ಫೆಡರಲ್ ಸಂಸ್ಥೆ…

Read More