Author: kannadanewsnow09

ಬೆಳಗಾವಿ : “ನಾನು ಯಾವುದೇ ಬಲ ಪ್ರದರ್ಶನ ಮಾಡುತ್ತಿಲ್ಲ, ಅದರ ಅವಶ್ಯಕತೆಯೂ ನನಗಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಬೆಳಗಾವಿಯ ಸರ್ಕಿಟ್ ಹೌಸ್ ಹಾಗೂ ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಡಿನ್ನರ್ ಮೀಟಿಂಗ್ ಮೂಲಕ ಬಲ ಪ್ರದರ್ಶನ ಮಾಡಲಾಗುತ್ತಿದೆಯೇ ಎಂದು ಕೇಳಿದಾಗ, “ಅದರ ಅಗತ್ಯ ನನಗಿಲ್ಲ. ನನ್ನ ಹಿಂದೆ ಯಾರೂ ಬರುವುದು ಬೇಡ, ನನ್ನ ಪರವಾಗಿ ಯಾರು ಮಾತನಾಡುವುದೂ ಬೇಡ. ನಾನು ಸಿಎಂ ಸೇರಿದಂತೆ 140 ಶಾಸಕರದೂ ಒಂದೇ ಗುಂಪು. ಅದು ಕಾಂಗ್ರೆಸ್ ಗುಂಪು. ಯಾವುದೇ ಗುಂಪುಗಾರಿಕೆಗೆ ಅವಕಾಶ ಮಾಡಿಕೊಡಬೇಡಿ” ಎಂದು ತಿಳಿಸಿದರು. ಪ್ರೀತಿಯಿಂದ ಊಟಕ್ಕೆ ಕರೆದರೆ ಬರಲ್ಲ ಅನ್ನಲು ಆಗುತ್ತದೆಯೇ ನಿನ್ನೆ ಡಿನ್ನರ್ ಸಭೆ ಮಾಡಿದ್ದೀರಿ ಎಂದು ಕೇಳಿದಾಗ, “ನಾನು ಯಾವುದೇ ಡಿನ್ನರ್ ಮೀಟಿಂಗ್ ಮಾಡಿಲ್ಲ. ದೊಡ್ಡಣ್ಣನವರ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ನ ಮಾಜಿ ಅಧ್ಯಕ್ಷರು. ನನ್ನ ಸ್ನೇಹಿತರೂ ಹೌದು. ಅವರದು ದೊಡ್ಡ ಕುಟುಂಬ. ಕಳೆದ 15 ವರ್ಷಗಳಿಂದ ನಮ್ಮ…

Read More

1)ಸಾಮಾನ್ಯವಾಗಿ ನಾವೆಲ್ಲರೂ ಕೂಡ ಯಾವುದೇ ಒಂದು ಒಳ್ಳೆಯ ಕೆಲಸ ಮಾಡಬೇಕು ಎಂದರೆ ನೀವು ದೇವರ ಮೊರೆ ಹೋಗುವುದು ಸತ್ಯ ಹೌದು ನಮ್ಮ ಹಿಂದೂ ಸಂಪ್ರದಾಯದಲ್ಲಿ ಪ್ರತಿಯೊಬ್ಬರು ಎಲ್ಲ ದೇವಾನುದೇವತೆ ಗಳನ್ನು ಅಷ್ಟೇ ಭಕ್ತಿಯಿಂದ ಆರಾಧನೆ ಮಾಡುತ್ತಾರೆ. 2)ಅವರು ಮಾಡುವ ಎಲ್ಲಾ ಕೆಲಸಗಳಲ್ಲಿಯೂ ಅಭಿವೃದ್ಧಿ ಯಶಸ್ಸು ಸಿಗುತ್ತದೆ ಎನ್ನುವ ನಂಬಿಕೆ ಅವರಲ್ಲಿ ಇದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ,…

Read More

ಬೆಳಗಾವಿ ಸುವರ್ಣಸೌಧ: ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣ 2016 ಕಲಂ (6) ರಲ್ಲಿ ಹೊಸ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಅದರಂತೆ ಅಗತ್ಯಾನುಸಾರ ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಕ್ರಮ ವಹಿಸಲಾಗುತ್ತಿದೆ. ಸಣ್ಣ ಸಣ್ಣ ಗ್ರಾಮದ ಪಡಿತರ ಚೀಟಿದಾರರಿಗೆ ತೊಂದರೆಯಾಗದಂತೆ ನ್ಯಾಯಬೆಲೆ ಅಂಗಡಿ ವರ್ತಕರಿಗೆ ಗ್ರಾಮಗಳಲ್ಲಿ ಉಪ ಕೇಂದ್ರಗಳನ್ನು ತೆರೆದು ಆಹಾರ ಧಾನ್ಯ ಹಂಚಿಕೆ ಮಾಡಲು ಕ್ರಮ ವಹಿಸಲಾಗುವುದು. ಪಡಿತರ ಚೀಟಿಗಳ ಸಂಖ್ಯಾನುಸಾರ ಅಗತ್ಯವಿದ್ದಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಕ್ರಮ ವಹಿಸಲಾಗುವುದು ಎಂಬುದಾಗಿ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ತಿಳಿಸಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಶರಣಗೌಡ ಕಂದಕೂರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಆಹಾರ ಸಚಿವರಾದ ಕೆ.ಎಚ್‌.ಮುನಿಯಪ್ಪ ಅವರ ಉತ್ತರಿಸಿದರು. ಪರಿಶಿಷ್ಟ ಜಾತಿ ಆಥವಾ ಪರಿಶಿಷ್ಟ ಪಂಗಡ ಸಮುದಾಯಗಳ ಜನಸಂಖ್ಯೆಯು 40%ಕ್ಕಿಂತ ಹೆಚ್ಚಿರುವ ನ್ಯಾಯಬೆಲೆ ಅಂಗಡಿ ಪ್ರದೇಶದಲ್ಲಿ ಆದ್ಯತೆಯ ಮೇರೆಗೆ ಹೊಸ ನ್ಯಾಯಬೆಲೆ ಅಂಗಡಿಗಳು ಮತ್ತು ನವೀಕರಿಸಿದ ನ್ಯಾಯಬೆಲೆ ಅಂಗಡಿಗಳನ್ನು…

Read More

ಹುಬ್ಬಳ್ಳಿ: ಅರಸೀಕೆರೆ ಯಾರ್ಡ್ನಲ್ಲಿ ಡಿಸೆಂಬರ್ 15 ರಿಂದ 27, 2025 ರವರೆಗೆ (ಶುಕ್ರವಾರ ಹೊರತುಪಡಿಸಿ) ಕೈಗೊಳ್ಳುತ್ತಿರುವ ಪ್ಲಾಟ್ಫಾರ್ಮ್ ಶೆಲ್ಟರ್ ಕಾಮಗಾರಿಗಳಿಂದಾಗಿ, ಈ ಕೆಳಗಿನ ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗುತ್ತದೆ. 1. ಡಿಸೆಂಬರ್ 14 ರಿಂದ 26, ರವರೆಗೆ, ರೈಲು ಸಂಖ್ಯೆ 16214 ಎಸ್ಎಸ್ಎಸ್ ಹುಬ್ಬಳ್ಳಿ–ಅರಸೀಕೆರೆ ಎಕ್ಸ್ ಪ್ರೆಸ್ ರೈಲು ಬೀರೂರು ಮತ್ತು ಅರಸೀಕೆರೆ ನಡುವೆ ಭಾಗಶಃ ರದ್ದುಗೊಳ್ಳಲಿದ್ದು, ಬೀರೂರು ನಿಲ್ದಾಣದಲ್ಲಿ ತನ್ನ ಪ್ರಯಾಣವನ್ನು ಕೊನೆಗೊಳಿಸುತ್ತದೆ. 2. ಡಿಸೆಂಬರ್ 15 ರಿಂದ 27, 2025 ರವರೆಗೆ, ರೈಲು ಸಂಖ್ಯೆ 16213 ಅರಸೀಕೆರೆ–ಎಸ್ಎಸ್ಎಸ್ ಹುಬ್ಬಳ್ಳಿ ಎಕ್ಸ್ ಪ್ರೆಸ್ ರೈಲು ಅರಸೀಕೆರೆ ಮತ್ತು ಬೀರೂರು ನಡುವೆ ಭಾಗಶಃ ರದ್ದುಗೊಂಡು, ನಿಗದಿತ ಸಮಯಕ್ಕೆ ಬೀರೂರು ನಿಲ್ದಾಣದಿಂದ ತನ್ನ ಪ್ರಯಾಣವನ್ನು ಪ್ರಾರಂಭಿಸುತ್ತದೆ. 3. ಡಿಸೆಂಬರ್ 15 ರಿಂದ 27, 2025 ರವರೆಗೆ, ರೈಲು ಸಂಖ್ಯೆ 56267 ಅರಸೀಕೆರೆ–ಮೈಸೂರು ಪ್ಯಾಸೆಂಜರ್ ರೈಲು ಅರಸೀಕೆರೆ ಮತ್ತು ಹಾಸನ ನಡುವೆ ಭಾಗಶಃ ರದ್ದುಗೊಂಡು, ನಿಗದಿತ ಸಮಯಕ್ಕೆ ಹಾಸನ ನಿಲ್ದಾಣದಿಂದ ತನ್ನ ಪ್ರಯಾಣವನ್ನು ಪ್ರಾರಂಭಿಸುತ್ತದೆ. https://kannadanewsnow.com/kannada/human-skull-found-on-hospital-premises/ https://kannadanewsnow.com/kannada/people-with-this-blood-group-are-at-higher-risk-of-cancer/

Read More

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಆಸ್ಪತ್ರೆ ಆವರಣದಲ್ಲಿಯೇ ಮಾನವನ ತಲೆ ಬುರುಡೆ ಪತ್ತೆಯಾಗಿದ್ದು, ಜನರನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಆಸ್ಪತ್ರೆಯ ಆವರಣದಲ್ಲೇ ಮಾನವನ ತಲೆ ಬುರುಡೆ ಪತ್ತೆಯಾಗಿದೆ. ಸಾರ್ವಜನಿಕರು ಓಡಾಡುವಂತ ಸ್ಥಳದಲ್ಲೇ ತಲೆ ಬುರುಡೆ ಪತ್ತೆಯಾಗಿರುವುದನ್ನು ಕಂಡಂತ ಜನರು ಬೆಚ್ಚಿ ಬಿದ್ದಿದ್ದಾರೆ. ನೆಲಮಂಗಲದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲೇ ಕಸ ಬಿಸಾಡುವ ಸ್ಥಳದಲ್ಲಿ ಮಾನವನ ತಲೆ ಬುರುಡೆ ನೋಡಿ ಜನರು ಶಾಕ್ ಆಗಿದ್ದಾರೆ. ಈ ಬಗ್ಗೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ, ತನಿಖೆ ಕೈಗೊಂಡಿದ್ದಾರೆ. https://kannadanewsnow.com/kannada/cognizant-unveils-ai-lab-and-cognizant-moment-studio/ https://kannadanewsnow.com/kannada/people-with-this-blood-group-are-at-higher-risk-of-cancer/

Read More

ಬೆಂಗಳೂರು: ಕಾಗ್ನಿಜೆಂಟ್ ಇಂದು ಬೆಂಗಳೂರಿನಲ್ಲಿ ಹೊಸ ಕಾಗ್ನಿಜೆಂಟ್ ಮೊಮೆಂಟ್ ™ ಸ್ಟುಡಿಯೋ ಜೊತೆಗೆ ತನ್ನ ಇಂಡಿಯಾ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಲ್ಯಾಬ್ ಅನ್ನು ತೆರೆಯುವುದಾಗಿ ಘೋಷಿಸಿದೆ. ಇದು ಕಂಪನಿಯ AI ಬಿಲ್ಡರ್ ತಂತ್ರವನ್ನು ಮುನ್ನಡೆಸುವ ನಾವೀನ್ಯತೆ ಹಬ್ ಅನ್ನು ರೂಪಿಸುತ್ತದೆ. ಲ್ಯಾಬ್ ಮತ್ತು ಸ್ಟುಡಿಯೋ ಎರಡೂ ಮುಂದಿನ ಮೂರು ವರ್ಷಗಳಲ್ಲಿ ಉತ್ಪಾದಕ AI ನಲ್ಲಿ $1 ಬಿಲಿಯನ್ ಹೂಡಿಕೆ ಮಾಡಲು ಕಾಗ್ನಿಜೆಂಟ್ 2023 ರಲ್ಲಿ ಘೋಷಿಸಿದ ಬದ್ಧತೆಯ ಭಾಗವಾಗಿದೆ. ಭಾರತ AI ಲ್ಯಾಬ್ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಕಾಗ್ನಿಜೆಂಟ್‌ನ AI ಲ್ಯಾಬ್ ಅನ್ನು ವಿಸ್ತರಿಸಿದೆ, ಇದಕ್ಕೆ ಇತ್ತೀಚೆಗೆ ತನ್ನ 61 ನೇ ಯುಎಸ್ ಪೇಟೆಂಟ್ ನೀಡಲಾಗಿದೆ. ಕಾಗ್ನಿಜೆಂಟ್ ಮೊಮೆಂಟ್ ™ ಸ್ಟುಡಿಯೋ ಕಂಪನಿಯ ಡಿಜಿಟಲ್ ಅನುಭವ ಅಭ್ಯಾಸದ ಭಾಗವಾಗಿದ್ದು, ಗ್ರಾಹಕರ ಅನುಭವವನ್ನು ಮರುಕಲ್ಪಿಸಲು ಮತ್ತು ಬೆಳವಣಿಗೆಯನ್ನು ಹೆಚ್ಚಿಸಲು ಗ್ರಾಹಕರು AI ಅನ್ನು ಬಳಸಿಕೊಳ್ಳಲು ಸಹಾಯ ಮಾಡುತ್ತದೆ. ಒಟ್ಟಾಗಿ, ಪ್ರಯೋಗಾಲಯ ಮತ್ತು ಸ್ಟುಡಿಯೋ ವ್ಯವಹಾರ-ಸಿದ್ಧ ಬಹು-ಏಜೆಂಟ್ ವ್ಯವಸ್ಥೆಗಳು, AI ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯಗಳು, ಜವಾಬ್ದಾರಿಯುತ…

Read More

ಕೇರಳ: 2017 ರ ನಟಿ ಗ್ಯಾಂಗ್ ರೇಪ್ ಪ್ರಕರಣದ ಪ್ರಮುಖ ಆರೋಪಿ ಪಲ್ಸರ್ ಸುನಿ ಮತ್ತು ಆತನೊಂದಿಗೆ ಅಪರಾಧಕ್ಕೆ ಶಿಕ್ಷೆಗೊಳಗಾದ ಇತರ ಐದು ಜನರಿಗೆ ಕೇರಳ ನ್ಯಾಯಾಲಯ ಶುಕ್ರವಾರ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಎರ್ನಾಕುಲಂ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಹನಿ ಎಂ ವರ್ಗೀಸ್ ಡಿಸೆಂಬರ್ 8 ರಂದು ಶಿಕ್ಷೆಯ ಪ್ರಶ್ನೆಯ ಕುರಿತು ಬಹುನಿರೀಕ್ಷಿತ ತೀರ್ಪನ್ನು ಪ್ರಕಟಿಸಿದರು. ಆರೋಪಿ ಮಲಯಾಳಂ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿದರು ಮತ್ತು ಇತರ ಆರು ಜನರನ್ನು ಅಪರಾಧಿಗಳು ಎಂದು ಘೋಷಿಸಿದರು. ಶಿಕ್ಷೆಗೊಳಗಾದ ಆರೋಪಿಗಳು ಸುನಿಲ್ ಎನ್ಎಸ್ ಅಕಾ ಪಲ್ಸರ್ ಸುನಿ, ಮಾರ್ಟಿನ್ ಆಂಟೋನಿ, ಮಣಿಕಂದನ್ ಬಿ, ವಿಜೀಶ್ ವಿಪಿ, ಸಲೀಂ ಎಚ್ ಅಕಾ ವಡಿವಲ್ ಸಲೀಂ ಮತ್ತು ಪ್ರದೀಪ್ ಆಗಿದ್ದಾರೆ. ನ್ಯಾಯಾಲಯವು ಇಂದು ಶಿಕ್ಷೆಯ ಪ್ರಶ್ನೆಯ ಕುರಿತು ಆರು ಅಪರಾಧಿಗಳ ವಿಚಾರಣೆ ನಡೆಸಿ, ಸಾಮೂಹಿಕ ಅತ್ಯಾಚಾರದ ಅಪರಾಧಕ್ಕಾಗಿ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು ಅನುಭವಿಸುವಂತೆ ಆದೇಶಿಸಿತು. ಮಹಿಳಾ ನಟಿ…

Read More

ಬೆಳಗಾವಿ ಸುವರ್ಣಸೌಧ : ರಾಜ್ಯದಲ್ಲಿರುವ 12 ಮಹಾನಗರ ಪಾಲಿಕೆಗಳಿಗೆ ತಲಾ 200 ಕೋಟಿ ರೂಪಾಯಿಯಂತೆ ಒಟ್ಟು 2400 ಕೋಟಿ ರೂಪಾಯಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಿಡುಗಡೆ ಮಾಡಿ ಐತಿಹಾಸಿಕ ನಿರ್ಧಾರವನ್ನು ಕೈಗೊಂಡಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಶುಕ್ರವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಸುರೇಶ್ ಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇಂತಹ ದಿಟ್ಟ ನಿರ್ಧಾರವನ್ನು ಕೈಗೊಂಡಿರುವುದು ರಾಜ್ಯದ ಇತಿಹಾಸದಲ್ಲಿ ಇದೇ ಪ್ರಥಮ ಎಂದು ಹೇಳಿದರು. ಈ ಹಿಂದೆ ಯಾವುದೇ ಸರ್ಕಾರವಾಗಲೀ, ಮುಖ್ಯಮಂತ್ರಿಗಳಾಗಲೀ ಮಹಾನಗರ ಪಾಲಿಕೆಗಳಿಗೆ ಇಷ್ಟೊಂದು ಪ್ರಮಾಣದ ಅನುದಾನವನ್ನು ನೀಡಿರಲಿಲ್ಲ. ಸರ್ಕಾರದ ಈ ವಿಶೇಷ ಅನುದಾನ ಪ್ರತಿಯೊಂದು ಪಾಲಿಕೆಗಳಿಗೂ ತಲುಪಲಿದ್ದು, ಸರ್ವಾಂಗೀಣ ಅಭಿವೃದ್ಧಿಗೆ ನೆರವಾಗಲಿದೆ ಎಂದರು. ಇದಕ್ಕೂ ಮುನ್ನ ಸದಸ್ಯ ದಿನಕರ್ ಕೇಶವ್ ಶೆಟ್ಟಿ ಅವರ ಪ್ರಶ್ನೆಗೆ ಪೌರಾಡಳಿತ ಸಚಿವ ರಹೀಂಖಾನ್ ಅವರ ಪರವಾಗಿ ಉತ್ತರ ನೀಡಿದ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು, ಉತ್ತರ ಕನ್ನಡ ಜಿಲ್ಲೆಯ…

Read More

ಬೆಳಗಾವಿ ವಿಧಾನಸಭೆ: ಹುಬ್ಬಳ್ಳಿ-ಧಾರವಾಡ ಮಹಾ ನಗರಪಾಲಿಕೆಯನ್ನು ವಿಭಜನೆ ಮಾಡುವ ರಾಜ್ಯ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವನ್ನು ರಾಜ್ಯಪಾಲರು ಅಂಕಿತ ಹಾಕಬೇಕಿದ್ದು, ಸಹಿ ಹಾಕಿದ ನಂತರ ವಿಭಜನೆ ಪ್ರಕ್ರಿಯೆಗಳನ್ನು ಕೈಗೊಳ್ಳಲಾಗುತ್ತದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಶುಕ್ರವಾರ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಅಬ್ಬಯ್ಯ ಪ್ರಸಾದ್ ಅವರು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಹೊಸದಾಗಿ ಧಾರವಾಡ ಮಹಾನಗರ ಪಾಲಿಕೆಯನ್ನು ರಚಿಸಲು ಮತ್ತು ಇನ್ನುಳಿದ ಪ್ರದೇಶವನ್ನು ಹುಬ್ಬಳ್ಳಿ ಮಹಾನಗರ ಪಾಲಿಕೆ ಎಂಬುದಾಗಿ ಮುಂದುವರೆಸಲು ದಿನಾಂಕ: 21-01-2025ರಂದು ಪ್ರಾಥಮಿಕ ಅಧಿಸೂಚನೆಯನ್ನು ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿರುತ್ತದೆ. ಆದರೆ ಈ ಬಗ್ಗೆ ಯಾವುದೇ ಕ್ರಮ ಆಗಿರುವುದಿಲ್ಲ ಎಂದು ಸದನದಲ್ಲಿ ಪ್ರಸ್ತಾಪಿಸಿದರು. ಇದಕ್ಕೆ ಉತ್ತರಿಸಿದ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು, ಹುಬ್ಬಳ್ಳಿ –ಧಾರವಾಡ ಮಹಾ ನಗರಪಾಲಿಕೆಯನ್ನು ವಿಭಜನೆ ಮಾಡುವ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡು ಏಳು ತಿಂಗಳುಗಳೇ ಕಳೆದಿವೆ. ಈ ಕಡತಕ್ಕೆ ಅಂಕಿತ ಹಾಕುವಂತೆ ರಾಜ್ಯಪಾಲರಿಗೆ ಕಳುಹಿಸಲಾಗಿದೆ ಎಂದು ತಿಳಿಸಿದರು. ಹೀಗಾಗಿ ಸರ್ಕಾರದ…

Read More

ಮಂಡ್ಯ: ಜಿಲ್ಲೆಯಲ್ಲಿ ರೈತರ ಮಕ್ಕಳಿಗೆ ಹೆಣ್ಣು ಕೊಡಲು ಮುಂದಾಗದ ಪರಿಸ್ಥಿತಿ ಇದೆ. ಈ ಸಂದರ್ಭದಲ್ಲಿ ರೈತರ ಮಕ್ಕಳಿಗೆ ಹೆಣ್ಣು ಕೊಡೋದಕ್ಕೆ ಪ್ರೋತ್ಸಾಹಿಸೋದಕ್ಕೆ ಸರ್ಕಾರದ ಮುಂದೆ ಈ ಬೇಡಿಕೆಯನ್ನು ಇರಿಸಿ, ಬಿಜೆಪಿ, ರೈತ ಸಂಘಟನೆಗಳು ವಿನೂತನ ಪ್ರತಿಭಟನೆಯನ್ನು ಮಾಡಿದರು. ಅಲ್ಲದೇ ಡಿಸಿ ಮೂಲಕ ತಮ್ಮ ಬೇಡಿಕೆ ಈಡೇರಿಕೆಗಾಗಿ ಮನವಿಯನ್ನು ಸರ್ಕಾರಕ್ಕೆ ಸಲ್ಲಿಸಲಾಯಿತು. ಮಂಡ್ಯ ಬಿಜೆಪಿಯಿಂದ ವಿನೂತನ ಹೋರಾಟವನ್ನು ನಡೆಸಲಾಯಿತು. ಅವಿವಾಹಿತ ರೈತ ಯುವಕರ ಪರ ಮಂಡ್ಯ ಬಿಜೆಪಿ ಟೀಂ ನಿಂತಿತು. ಮಂಡ್ಯ ಡಿಸಿ ಕಚೇರಿ ಬಳಿ ಬಿಜೆಪಿ ಕಾರ್ಯಕರ್ತರಿಂದ ವಿಭಿನ್ನ ಪ್ರತಿಭಟನೆ ನಡೆಸಲಾಯಿತು. ಹೆಣ್ಣು ಸಿಗದ ಯುವಕರಿಂದ ಮಠಕ್ಕೆ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವ್ಯಂಗ್ಯ ಮಾಡಿತು. ರೈತ ಮಕ್ಕಳ ಪರ ಬಿಜೆಪಿಯಿಂದ ರಾಜ್ಯ ಸರ್ಕಾರಕ್ಕೆ ವಿಶೇಷ ಮನವಿ ಮಾಡಲಾಯಿತು. ಕೈಯಲ್ಲಿ ತಾಂಬೂಲ ಹಿಡಿದು, ವಧುವಿನಂತೆ ಬಟ್ಟೆ ತೊಟ್ಟು, ಹಣೆಗೆ ಬಾಸಿಂಗ ಕಟ್ಟಿ ಡಿಸಿ ಕಚೇರಿಗೆ ಬಂದು ಅಣಕು ಪ್ರದರ್ಶನ ನೀಡಲಾಯಿತು. ಮಂಡ್ಯದ ಡಿಸಿ ಕಚೇರಿ ಬಳಿ ಬಿಜೆಪಿ…

Read More